Author: admin
ಅಗತ್ಯ ಇದ್ದವರಿಗೆ ಸೇವೆ ಮಾಡುವುದರಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆ ಹಾಗೂ ನಾವು ಈ ಸಮಾಜಕ್ಕೆ ಏನನ್ನಾದರೂ ನೀಡಿದ್ದೇವೆ ಎನ್ನುವ ಆತ್ಮ ತೃಪ್ತಿ ಇರುತ್ತದೆ ಎಂದು ಜಿಲ್ಲೆ-317ಸಿ, ಪ್ರಾಂತ್ಯ 5 ರ ಪ್ರಥಮ ಮಹಿಳೆ ಅಂಪಾರು ಅರುಣಾ ಸೋಮನಾಥ ಹೆಗ್ಡೆ ಹೇಳಿದರು. ಅವರು ಲಯನ್ಸ್ ಇಂಟರ್ನ್ಯಾಷನಲ್, ಜಿಲ್ಲೆ-317ಸಿ, ಪ್ರಾಂತ್ಯ 5ರ ಲಯನ್ಸ್ ರಿಜನ್ ಮೀಟ್ ‘ಅದ್ವಿತಾ-2025’ ವನ್ನು ಉಪ್ಲಾಡಿ ಹೊರ್ ಮಕ್ಲು ಜಡ್ಡಿನ ಮೈದಾನದಲ್ಲಿ ಅದ್ವಿತಾ ಜತೆಗೂಡಿ ಉದ್ಘಾಟಿಸಿ ಮಾತನಾಡಿದರು. ಪ್ರಾಂತ್ಯಾಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಹೊಸನಗರ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ಕೆ. ಶ್ರೀಪತಿ ಹಳಗುಂದ, ಲಯನ್ಸ್ ಪ್ರಥಮ ಉಪ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್, ದ್ವಿತೀಯ ಉಪ ಜಿಲ್ಲಾ ಗವರ್ನರ್ ರಾಜೀವ್ ಕೋಟ್ಯಾನ್, ಪಿ.ಡಿ.ಜಿ ಜಯಕರ್ ಶೆಟ್ಟಿ ಕುಂದಾಪುರ, ಎಲ್.ಸಿ.ಐ.ಎಫ್. ಕೋ- ಆರ್ಡಿನೇಟರ್ ಹರಿಪ್ರಸಾದ್ ರೈ, ರೀಜನ್ ಸೆಕ್ರೆಟರಿ ಕಬೈಲ್ ಆನಂದ ಶೆಟ್ಟಿ, ಹೋಸ್ಟ್ ಕ್ಲಬ್ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಅಧ್ಯಕ್ಷ…
ಸರ್ ಎಂ. ವಿಶ್ವೇಶ್ವರಯ್ಯನವರಿಗೆ ಶಿಕ್ಷಣದ ಮಹತ್ವ ಚೆನ್ನಾಗಿ ತಿಳಿದಿತ್ತು. ಅವರು ಬಹಳ ಕಷ್ಟಪಟ್ಟು ಓದಿ ಮುಂದೆ ಬಂದಿದ್ದವರು. ಹಾಗಾಗಿ ಅವರು ಓದುವ ಮಕ್ಕಳಿಗೆ ಬಹಳವಾಗಿ ಪ್ರೋತ್ಸಾಹ ನೀಡುತ್ತಿದ್ದರು. ತಮ್ಮ ಹತ್ತಿರದ ಬಂಧು- ಬಳಗದವರಲ್ಲಿ, ಸ್ನೇಹಿತರಲ್ಲಿ ಯಾರಿಗಾದರೂ ಓದಿಗೆ ತೊಂದರೆಯಾಗಿದ್ದರೆ, ಅದನ್ನು ತಕ್ಷಣವೇ ಪರಿಹರಿಸುತಿದ್ದರು. ಚೆನ್ನಾಗಿ ಓದುವ ಹುಡುಗರಿಗೆ, ಓದಿನ ಬಗೆ ಇನ್ನೂ ಹೆಚ್ಚಿನ ಆಸಕ್ತಿ ಮೂಡಿಸಲು ಬಹುಮಾನಗಳನ್ನು ಕೊಟ್ಟು ಪ್ರೋತ್ಸಾಹಿಸುತ್ತಿದ್ದರು. ಯಾರಾದರೂ ಆಗಿನ ಕಾಲದ ಮೆಟ್ರಿಕ್ಯುಲೇಶನ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ತಾವು ನೂರು ರೂಪಾಯಿಗಳ ಬಹುಮಾನ ಕೊಡುವುದಾಗಿ ಪ್ರಕಟಪಡಿಸಿದ್ದರು. ಆಗಿನ ಕಾಲದಲ್ಲಿ ನೂರು ರೂಪಾಯಿಗಳು ಬಹಳ ದೊಡ್ಡ ಮೊತ್ತವೇ ಆಗಿತ್ತು. ಪ್ರತಿ ವರ್ಷ ಕೊಟ್ಟ ಮಾತಿನಂತೆ ಈ ಬಹುಮಾನವನ್ನು ನೀಡುತ್ತಾ ಬಂದಿದ್ದರು. ಒಂದು ವರ್ಷ ಅವರ ಸಂಬಂಧಿಗಳ ಮಗನೊಬ್ಬ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದ. ಹೀಗಾಗಿ ಆತ ಬಹುಮಾನಕ್ಕೆ ಅರ್ಹನಾಗಿದ್ದ. ಬಹುಮಾನ ಪಡೆಯುವ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿ, ವಿಶ್ವೇಶ್ವರಯ್ಯನವರ ಮನೆಗೆ ರಾತ್ರಿ ಏಳು ಮುಕ್ಕಾಲಿನ ಸಮಯಕ್ಕೆ ಹೋಗಬೇಕಾಗಿತ್ತು. ಸರಿಯಾಗಿ ವಿಶ್ವೇಶ್ವರಯ್ಯನವರೊಂದಿಗೆ…
ಮಣಿಪಾಲ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಇವರು ಕಳೆದ 12 ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವಿ. ಖ್ಯಾತ ವಾಗ್ಮಿಯಾಗಿರುವ ಶ್ರೀಯುತರು 2ಸಾವಿರಕ್ಕೂ ಅಧಿಕ ಅನೇಕ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಭಾಷಣಕಾರರಾಗಿ, ರಾಜ್ಯಮಟ್ಟದಲ್ಲಿ ನಡೆದ ಎನ್.ಎಸ್.ಎಸ್ ಶಿಬಿರದಲ್ಲಿ ಮೂರು ಬಾರಿ ಸಂಪನ್ಮೂಲ ವ್ಯಕಿಯಾಗಿ ಹಾಗೂ 300ಕ್ಕೂ ಅಧಿಕ ಎನ್.ಎಸ್.ಎಸ್ ಶಿಬಿರದಲ್ಲಿ ಉಪನ್ಯಾಸಕರಾಗಿಯೂ ಜನಪ್ರಿಯರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿಯೇ ಮೂಡಬಿದ್ರಿಯ ದವಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ, ತದನಂತರ ವೃತ್ತಿ ಬದುಕಿನಲ್ಲಿ ಕಾರ್ಕಳ-ನಾರಾವಿ ದೇವಾಡಿಗ ಸಂಘದ ಕಾರ್ಯದರ್ಶಿಯಾಗಿ, ಕಾರ್ಕಳದ ಜೆ.ಸಿ.ಐನ ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿಯೂ ಸೇವೆಸಲ್ಲಿಸಿದ ಹೆಗ್ಗಳಿಕೆ ಇವರದ್ದು. ವೃತ್ತಿಯಲ್ಲಿ ಉಪನ್ಯಾಸಕನಾಗಿದ್ದರೂ, ಪ್ರವೃತ್ತಿಯಲ್ಲಿ ರಂಗಭೂಮಿ ಕ್ಷೇತ್ರದಲ್ಲಿ 300ಕ್ಕೂ ಅಧಿಕ ನಾಟಕಗಳಲ್ಲಿ ಕಲಾವಿದರಾಗಿಯೂ ಜೊತೆಗೆ 8 ತುಳು ನಾಟಕಗಳನ್ನು ಬರೆದು ಕಲಾರಸಿಕರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ. ವಿದ್ಯಾನಗರದ ಮಣಿಪಾಲ್ ಪದವಿ…
ಸಾವಿರದ ಸನಿಹ ರಂಗ ಪ್ರದರ್ಶನದೊಂದಿಗೆ ಖ್ಯಾತಿಗಳಿಸಿದ ‘ಶಿವದೂತೆ ಗುಳಿಗೆ’ ಯಶಸ್ಸಿನ ಪಥದಲ್ಲಿ ಮಿಂಚುತ್ತಿರುವಾಗಲೇ ಸ್ಟಾರ್ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಅವರ ವಿನೂತನ ಪರಿಕಲ್ಪನೆಯ ತುಳು ಚಾರಿತ್ರಿಕ ನಾಟಕ ‘ಛತ್ರಪತಿ ಶಿವಾಜಿ’ ಅದ್ಭುತ ರಂಗವಿನ್ಯಾಸ- ವಸ್ತ್ರ ವಿನ್ಯಾಸದೊಂದಿಗೆ ಮಾರ್ಚ್ 6ರಂದು ರಾತ್ರಿ 7 ಗಂಟೆಗೆ ಕಲಾಮಾತೆ ಕಟೀಲು ಭ್ರಮರಾಂಬಿಕೆಯ ದಿವ್ಯ ಅಂಗಣದಲ್ಲಿ ರಂಗ ಪ್ರವೇಶ ಮಾಡಲಿದೆ. ಶಶಿರಾಜ್ ಕಾವೂರು ಅವರ ಅಧ್ಯಯನಾತ್ಮಕ ಕಥೆ ಆಧರಿಸಿ ಮರಾಠಿ ವಾತಾವರಣದ ಕಥೆಯನ್ನು ತುಳು ಭಾಷೆಯಲ್ಲಿ ಸಿನಿಮಾ ಶೈಲಿಯ ಡಬ್ಬಿಂಗ್ ಸಿನಿಮಾ ಗ್ರಾಫಿ, ರಂಗ ವಿನ್ಯಾಸ ಬಳಸಿ ಚಾರಿತ್ರಿಕ ನಾಟಕ ರೂಪುಗೊಳಿಸುವಲ್ಲಿ ಕೊಡಿಯಾಲ್ ಬೈಲ್ ರ ಜಾಣ್ಮೆ ಪರಿಶ್ರಮ ರಂಗದ ಮೇಲೆ ಗೋಚರವಾಗಲಿದೆ. ಎರಡೂ ಕಾಲು ಗಂಟೆಯ ನಾಟಕ 11 ದೃಶ್ಯಗಳಲ್ಲಿ ಸಂಯೋಜನೆಗೊಂಡಿದ್ದು, 15 ಪ್ರಬುದ್ಧ ಕಲಾವಿದರು ಕಥೆಗೆ ಜೀವ ತುಂಬಿದ್ದಾರೆ. ಪ್ರಮೋದ್ ಮರವಂತೆ ಹಾಡುಗಳು, ಎ.ಕೆ. ವಿಜಯ್ ಕೋಕಿಲ ಮತ್ತು ಮಣಿಕಾಂತ್ ಕದ್ರಿ ಅವರ ಸಂಗೀತ ನಿರ್ದೇಶನದಲ್ಲಿ ವಿಶೇಷ ಆಕರ್ಷಣೆಯಾಗಿ ಬಾಲಿವುಡ್ ಗಾಯಕ ಕೈಲಾಸ್…
ಚೀನಾದಲ್ಲಿ ಒಬ್ಬ ತರುಣ ರಾಜನಾದ. ಅವನು ಆಡಳಿತಕ್ಕೆ ಬೇಕಾದ ಜ್ಞಾನವನ್ನು ಪಡೆಯುತ್ತಿದ್ದ. ಬೇಟೆಯಲ್ಲೂ ತಾನೂ ನಿಷ್ಣಾತನಾಗಬೇಕೆಂಬುದು ಅವನ ಆಸೆ. ಅದಕ್ಕೆಂದೇ ಪರಿಣತನಾದ ಬೇಟೆಗಾರನಿಂದ ತರಬೇತಿ ಪಡೆದ. ತಿಂಗಳುಗಳ ತರಬೇತಿಯ ನಂತರ ಬೇಟೆಗೆಂದು ಪರಿವಾರದೊಡನೆ ಕಾಡಿಗೆ ನಡೆದ. ಅವನಿಗೋಸ್ಕರ ಒಂದು ಪುಟ್ಟ ಬಯಲಿನಲ್ಲಿ ಮರದ ಅಟ್ಟಣಿಗೆ ಕಟ್ಟಿದ್ದರು. ಆತ ಅದರ ಮೇಲೆ ತನ್ನ ಬಿಲ್ಲು ಬಾಣಗಳೊಂದಿಗೆ ಸಜ್ಜಾಗಿ ನಿಂತ. ಇವನ ಪರಿವಾರದವರು ಸುತ್ತಲಿನ ಕಾಡಿನಲ್ಲಿ ಹರಡಿ ಗದ್ದಲವನ್ನೆಬ್ಬಿಸಿದರು. ಆಗ ಗಾಬರಿಯಾಗಿ ಬಯಲಿಗೆ ನುಗ್ಗಿದ ಪ್ರಾಣಿಗಳನ್ನು ರಾಜ ಹೊಡೆಯಲಿ ಎಂಬುದು ಯೋಜನೆ. ಇದರಂತೆ ಕೆಲವು ಕ್ಷಣಗಳ ನಂತರ ತಮಟೆ, ಕಹಳೆಗಳ ಶಬ್ದ ಮತ್ತು ಜನರ ಕೂಗುವಿಕೆ ಕೇಳಿಸಿತು. ಮರುಕ್ಷಣವೇ ಒಂದು ಪುಟ್ಟ ಮೊಲ ಕುಪ್ಪಳಿಸುತ್ತ ಈತನ ಮುಂದೆಯೇ ನಿಂತಿತು. ಈತನನ್ನು ಕಂಡು ಗಾಬರಿಯಾದ ಮೊಲ ಮರಗಟ್ಟಿ ನಿಂತೇ ಬಿಟ್ಟಿತು. ರಾಜ ಬಿಲ್ಲಿಗೆ ಬಾಣ ಹೂಡಿದ. ಹೀಗೆ ಎದುರಿಗೇ ನಿಂತ ಮೊಲವನ್ನು ಹೊಡೆಯುವುದು ಯಾರಿಗಾದರೂ ಸುಲಭ. ಇನ್ನೇನು ಬಾಣ ಬಿಡಬೇಕೆನ್ನುವಷ್ಟರಲ್ಲಿ ಒಂದು ತೋಳ ಅಲ್ಲಿಗೆ ಓಡಿ…
ಕೊಡಗಿನ ಚಿತ್ರಶಿಲ್ಪ ಕಲಾವಿದ ಶ್ರೀ ಬಿ. ಕೆ. ಗಣೇಶ್ ರೈಯವರ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಮಂಗಳೂರಿನಲ್ಲಿ ಬಿಡುಗಡೆ
ಮಂಗಳೂರು ಡಾ. ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ 42ನೇ ಯ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಮತ್ತು ಲೇಖಕ ದುಬಾಯಿಯ ಬಗ್ಗೆ ಪ್ರಕಟಿತ ಲೇಖನಗಳ ಸಂಕಲನ “ಕಡಲಾಚೆಯ ರಮ್ಯ ನೋಟ ದುಬಾಯಿ” ಕೃತಿ ಮಂಗಳೂರು ಪತ್ರಿಕಾ ಭವನದಲ್ಲಿ 2025ನೇ ಮಾರ್ಚ್ 4ನೇ ತಾರೀಕು ಮಂಗಳವಾರ 11.00 ಗಂಟೆಗೆ ನಡೆದ ಬಿಡುಗಡೆ ಬಿಡುಗಡೆಯಾಯಿತು. ಪ್ರಾರಂಭದಲ್ಲಿ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸರ್ವರನ್ನು ಸ್ವಾಗತಿಸಿ, ಪ್ರಸ್ತಾವಿಕ ಭಾಷಣದಲ್ಲಿ ಕೃತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಯು.ಎ.ಇ. ಬಂಟ್ಸ್ ಅಧ್ಯಕ್ಷರಾದ ಶ್ರೀ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಲೋಕಾರ್ಪಣೆ ಮಾಡಿದರು. ದುಬಾಯಿಯಲ್ಲಿ ಕನ್ನಡ ಪುಸ್ತಕವನ್ನು ತನ್ನದೇ ಆದ ಶೈಲಿಯಲ್ಲಿ ರಚಿಸಿ ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಾಗೂ ಅತ್ಯಂತ ಸುಂದರವಾದ ವರ್ಣ ಚಿತ್ರದೊಂದಿಗೆ ಓದುಗರಿಗೆ ಮುಟ್ಟಿಸುವಲ್ಲಿ ಕೃತಿ ಯಶಸ್ವಿಯಾಗಿದೆ. ಎಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಚಿತ್ರ ಶಿಲ್ಪ…
ಬಲ್ಲಂಗುಡೆಲು ಶ್ರೀ ಪಾಡಂಗರೇ ಭಗವತೀ ಕ್ಷೇತ್ರದ ವಾರ್ಷಿಕ ಕಳಿಯಾಟ ಮಹೋತ್ಸವ ಸಂದರ್ಭದಲ್ಲಿ ಸತತ ಕಳೆದ ಐವತ್ತು ವರ್ಷಗಳಿಂದ ಯಕ್ಷಗಾನ ಸೇವೆಯನ್ನು ಮಾಡುತ್ತಿರುವ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯರಾದ ನ್ಯಾ.ಎಂ ದಾಮೋದರ ಶೆಟ್ಟಿ ಮಜಿಬೈಲ್ ರವರಿಗೆ ಗೆಳೆಯರ ಬಳಗ (ರಿ) ಬಲ್ಲಂಗುಡೆಲು ವತಿಯಿಂದ ಸನ್ಮಾನಿಸಲಾಯಿತು. ಗೆಳೆಯರ ಬಳಗ (ರಿ) ಬಲ್ಲಂಗುಡೆಲು ಇವರ 33 ನೇ ವರ್ಷದ ವಾರ್ಷಿಕೋತ್ಸವದ ಸಭಾ ವೇದಿಕೆಯಲ್ಲಿ ನ್ಯಾಯವಾದಿ ಎಂ.ದಾಮೋದರ ಶೆಟ್ಟಿಯವರ ಸೇವೆಯನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲಾಯಿತು. ಸಭಾ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಪ್ರಸಂಗಕರ್ತರಾದ ಯೋಗಿಶ್ ರಾವ್ ಚಿಗುರುಪಾದೆ, ಕ್ಷೇತ್ರದ ಪ್ರದಾನ ಮನೆತನದವರಾದ ರಾಮ್ ಪ್ರಕಾಶ್ ಆಳ್ವ ಪಟ್ಟತ್ತಮೊಗರು, ಕ್ಷೇತ್ರದ ಸೇವಾ ಸಮಿತಿಯ ಮಾಜಿ ಅಧ್ಯಕ್ಷರಾದ ಶೇಖರ ಎಂ ಸೊಯಿಪಕಲ್ಲು, ಕ್ಷೇತ್ರದ ಸೇವಾ ಸಮಿತಿಯ ಅಧ್ಯಕ್ಷರಾದ ಜಯರಾಮ ಬಲ್ಲಂಗುಡೆಲು, ಗೆಳೆಯರ ಬಳಗದ ಅಧ್ಯಕ್ಷರಾದ ಮಾದವ ಉಳಿಯ, ರಮೇಶ್ ಸುವರ್ಣ, ಗೆಳೆಯರ ಬಳಗದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಅರವೀಂದಾಕ್ಷ ಭಂಡಾರಿ…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ‘ವಿಕಸಿತ ಭಾರತದ ನಿರ್ಮಾಣಕ್ಕಾಗಿ ಭಾರತೀಯ ಯುವ ಜನತೆಯನ್ನು ವಿಜ್ಞಾನ ಹಾಗೂ ನಾವೀನ್ಯತೆಯ ಕ್ಷೇತ್ರದಲ್ಲಿ ಜಾಗತಿಕ ನಾಯಕತ್ವ ನಿರ್ಮಾಣ’ ಎಂಬ ಘೋಷ ವಾಕ್ಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉಜಿರೆಯ ಎಸ್ ಡಿಎಂ ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ದಿನೇಶ್ ಚೌಟ, ಯುವಜನರು ವಿಮರ್ಶಾತ್ಮಕ, ಸೃಜನಶೀಲ ಚಿಂತನೆ, ಸಂವಹನ, ಸಹಯೋಗ ಮತ್ತು ಸಮಯ ನಿರ್ವಹಣೆಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ವಿಜ್ಞಾನ ವಿಷಯದಲ್ಲಿ ಶೈಕ್ಷಣಿಕ ಬೆಳವಣಿಗೆ ಸಾಧ್ಯ. ವಿಜ್ಞಾನದಲ್ಲಿ ನಾವೀನ್ಯತೆ ಕಂಡುಕೊಂಡು ಜಾಗತಿಕ ಬೆಳವಣಿಗೆಯಾಗಬೇಕಾದರೆ ಪರಿಣಾಮಕಾರಿ ಆಲಿಸುವಿಕೆ ಹಾಗೂ ನಿರಂತರ ಕಲಿಯುವಿಕೆ ಅಗತ್ಯ ಎಂದರು. ಭಾರತವು ಸೇರಿದಂತೆ ಜಗತ್ತಿನಾದ್ಯಂತ ವಿಜ್ಞಾನ ವಿಷಯದಲ್ಲಿ ನೊಬೆಲ್ ಪ್ರಶಸ್ತಿ ವಿಜೇತರ ಕೊಡುಗೆಯನ್ನು ವಿವರಿಸಿದರು. ಬದುಕಿನಲ್ಲಿ ಯಶಸ್ವಿಯಾಗಲು ಮೂರು ‘ಎಲ್’ ಗಳಾದ ಲುಕಿಂಗ್, ಲರ್ನಿಂಗ್ ಹಾಗೂ ಲಿಸ್ನಿಂಗ್ನ ಅಗತ್ಯತೆಯನ್ನು ವಿವರಿಸಿದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಿವಿರಾಮನ್ ತಂಡ…
ಮೂಡುಬಿದಿರೆ: ಡಿಸೆಂಬರ್ 2024ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಅಮನ್ರಾಜ್ (414), ಕಾರ್ತಿಕ್ ಇಂದ್ರ (412), ಸೌಖ್ಯ (389), ಆಕಾಶ್ ಎ ಕಾಮತ್ (385), ವೈಷ್ಣವಿ ಬಿ.ವಿ. (384), ಕೆ ದಿಶಾ ರಾವ್ (382), ರಾನ್ಸನ್ ಫೆರ್ನಾಂಡಿಸ್ (379), ರಾಮ್ನಾಥ್ ಎಸ್ ಪ್ರಭು (372), ರ್ಯ ಎಂ (370), ಸುಮಂತ್ ದೇಸಾಯಿ (360), ಸುಶಾಂತ್ ಎಸ್ (354), ಕೃತಿಕಾ (354), ಖುಷಿ ಯು ಸಾಲಿಯಾನ್ (352), ಮೆಲನಿ (339), ಶಿವಾನಿ (335), ಸ್ಫೂರ್ತಿ (333), ಖುಷಿ ಹರೀಶ್ (331), ಭಾವನಾ (330), ಹರೀಶ್ (328), ಕೃತಿ (325), ಶ್ರೇಯಾ ಪೂಜಾರಿ (325), ಚಿನ್ಮಯ್ (315), ಶಿವಾನಿ ಕೋಟ್ಯಾನ್ (311), ಆಯುಷ್ ಎ ಕಾಮತ್ (307), ಪ್ರಕೃತಿ (307), ಕೌಶಲ್ (301), ಕವನ (300) ಹಾಗೂ ಐಶ್ವರ್ಯ (300) ಇವರು ಗ್ರೂಪ್ -01 ಮತ್ತು ಗ್ರೂಪ್ -02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ…
ಮೂಲ್ಕಿ ಬಂಟರ ಸಂಘದ ನವೀಕರಣಗೊಳ್ಳಲಿರುವ ನೂತನ ಭೋಜನ ಶಾಲೆಗೆ ಭಾನುವಾರ ಬೆಳಿಗ್ಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ದೆಪ್ಪುಣಿ ಗುತ್ತು ಗುತ್ತಿನಾರ್ ಸುಧಾಕರ ಶೆಟ್ಟಿ ಪ್ರಾರ್ಥನೆ ಸಲ್ಲಿಸಿದರು. ಕಾರ್ನಾಡು ಹರಿಹರ ದೇವಸ್ಥಾನದ ಆಡಳಿತ ಮೊಕ್ತೇಸರ ಎಮ್. ಎಚ್ ಅರವಿಂದ ಪೂಂಜ ನೂತನ ಭೋಜನ ಶಾಲೆಗೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಸಂಘದ ಗೌರವಾಧ್ಯಕ್ಷರುಗಳಾದ ಐಕಳ ಹರೀಶ್ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಉಪಾಧ್ಯಕ್ಷ ಜೀವನ್ ಶೆಟ್ಟಿ ಕಾರ್ನಾಡ್, ಕೋಶಾಧಿಕಾರಿ ಸ್ವರಾಜ್ ಶೆಟ್ಟಿ, ಜೊತೆ ಕೋಶಾಧಿಕಾರಿ ಶರತ್ ಶೆಟ್ಟಿ, ಮಹಿಳಾ ಅಧ್ಯಕ್ಷೆ ರೋಹಿಣಿ ಶೆಟ್ಟಿ, ಮಾಜಿ ಅಧ್ಯಕ್ಷೆ ಚಂದ್ರಕಲಾ ಶೆಟ್ಟಿ, ಹಿರಿಯರಾದ ಮುರಳಿಧರ ಭಂಡಾರಿ, ಸಂಘದ ಪದಾಧಿಕಾರಿಗಳಾದ ಗಂಗಾಧರ ಶೆಟ್ಟಿ ಬರ್ಕೆ ತೋಟ, ಮಹಿಮ್ ಹೆಗ್ಡೆ, ಕಿಶೋರ್ ಶೆಟ್ಟಿ ಬಪ್ಪನಾಡು, ರಾಜೇಶ್ ಶೆಟ್ಟಿ ಮಾನಂಪಾಡಿ, ಭಾನುಮತಿ ಶೆಟ್ಟಿ ಕಕ್ವಗುತ್ತು, ರಂಗನಾಥ ಶೆಟ್ಟಿ, ಶ್ರೀಶ ಐಕಳ, ದೇವಿ ಪ್ರಸಾದ್ ಶೆಟ್ಟಿ ಐಕಳ, ಸತೀಶ್ಚಂದ್ರ ಹೆಗ್ಡೆ, ಕೃಷ್ಣ…