Author: admin

ಉಡುಪಿ ಕಲ್ಯಾಣಪುರದಲ್ಲಿ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಚರಿಸುತ್ತಿರುವ ತ್ರಿಶಾ ಪ. ಪೂ. ಕಾಲೇಜ್ ದ್ವಿತೀಯ ವರ್ಷದಲ್ಲೂ ಶೇಕಡ 100 ಫಲಿತಾಂಶದ ದಾಖಲಿಸಿದೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಮೃತ ಬಸವರಾಜ್ ಬಣಕರ್ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ ಪಡೆದು ಸಂಸ್ಥೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾರೆ. ಶ್ರೀರಕ್ಷಾ 589 ಅಂಕ, ಸುಶ್ಮಿತಾ 588 ಅಂಕ, ಆಕಾಶ್ ಶೇಥಿಯಾ 586 ಅಂಕ, ಶಶಾಂಕ್ ಎಸ್‌ ಭಟ್‌ 585 ಅಂಕಗಳನ್ನು ಗಳಿಸಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆಗೆ ಹಾಜರಾದ 162 ವಿದ್ಯಾರ್ಥಿಗಳಲ್ಲಿ 108 ಅತ್ಯುನ್ನತ ದರ್ಜೆ ಹಾಗೂ 54 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಪಡೆದಿದ್ದಾರೆ. ತ್ರಿಷಾ ವಿದ್ಯಾ ಸಂಸ್ಥೆಯು ತನ್ನ ಪ್ರಾರಂಭದ ವರ್ಷದಿಂದಲೂ ಶೇ 100ರ ಫಲಿತಾಂಶದ ದಾಖಲಿಸಿದ್ದು, ಅತ್ಯುತ್ತಮ ಬೋಧಕ ಮತ್ತು ಬೋಧಕೇತರ ವೃಂದದವರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆಯಾಗಿ ಬೆಳೆಯುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಶ್ರೇಣಿಯ ಫಲಿತಾಂಶ ದಾಖಲಿಸಿರುವ ಸಂಸ್ಥೆ ಉಡುಪಿ ಜಿಲ್ಲೆಯಲ್ಲಿ ಪ್ರಸಿದ್ಧವಾಗಿದೆ. ನೀಟ್, ಜೆ.ಇ.ಇ,…

Read More

2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ 4ನೇ ವರ್ಷವೂ ಶೇಖಡಾ 100 ಫಲಿತಾಂಶದೊಂದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ. ಪರೀಕ್ಷೆ ಬರೆದ ಎಲ್ಲಾ 692 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಮೇಘನಾ ಯು. ವೈ 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಅಮೃತ ಬಸವರಾಜ್ ಬಣಕಾರ್ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ, ಶ್ರೀನಿಧಿ ಡಿ 591 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ, ಪ್ರಜ್ವಲ್ ಎಸ್. ಎನ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ, ತೇಜಸ್ ವಿ. ನಾಯಕ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ ಗಳಿಸಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ 592 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು 97% ಕ್ಕಿಂತ ಅಧಿಕ, 168 ವಿದ್ಯಾರ್ಥಿಗಳು 95%ಕ್ಕಿಂತ ಅಧಿಕ, 379 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ, ಹಾಗೂ 557 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ…

Read More

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ವತಿಯಿಂದ ಕುಂದಾಪುರ ತಾಲ್ಲೂಕಿನ 74ನೇ ಉಳ್ಳೂರು ಗ್ರಾಮದಲ್ಲಿ 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೊರಗರ ಕಾಲೋನಿಯಲ್ಲಿ ನಿರ್ಮಾಣವಾಗಲಿರುವ 14 ಮನೆಗಳ ನಿರ್ಮಾಣ ಕಾಮಗಾರಿಗೆ ಪೇಜಾವರ ಮಠದ ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರ ಅಮೃತಹಸ್ತದಿಂದ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಶ್ರೀ ಕಿರಣ್‌ ಕುಮಾರ್‌ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ| ಹೆಚ್.‌ ಎಸ್. ಶೆಟ್ಟಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Read More

ಅಜೆಕಾರು ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿಯವರು ಜ್ಞಾನ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯ ಸ್ಪೂರ್ತಿದಾಯಕವಾದದ್ದು. ಭಯದಿಂದ ಕಾಣುವ ನಾಗದೇವರ ಪ್ರತಿಷ್ಠೆ ಮತ್ತು ನಾಗಬ್ರಹ್ಮಮಂಡಲೋತ್ಸವ ಮಾಡುವ ಮೂಲಕ ನಾಗದೇವರನ್ನು ಒಲಿಸಿಕೊಂಡಿರುವ ಅವರ ಕಾರ್ಯ ನಿತ್ಯನೂತನವಾಗಿರಲಿ ಎಂದು ಉಡುಪಿ ಕೃಷ್ಣಾಪುರ ಮಠದ ಪರಮಪೂಜ್ಯ ಸ್ವಾಮೀಜಿ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ಅವರು ಕಡಿಯಾಳಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಏಪ್ರಿಲ್ 6ರಂದು ಜರುಗಿದ ನಾಗಬ್ರಹ್ಮ, ರಕ್ತೇಶ್ವರಿ ಕ್ಷೇತ್ರದ ಪುನರ್ ಪ್ರತಿಷ್ಠೆ ಮತ್ತು ನಾಗಬ್ರಹ್ಮಮಂಡಲೋತ್ಸವ ಸಂದರ್ಭ ನಡೆದ ಸಮಾಜ ಸೇವಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿ, ಪರಮಪೂಜ್ಯ ಸ್ವಾಮೀಜಿಗಳಿಂದ ಪಡೆದ ಈ ಪುಣ್ಯ ಭೂಮಿಯಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ರೀಗಳ ಆಶೀರ್ವಾದವೆಂದು ಭಾವಿಸುತ್ತೇನೆ. ನಾಗಮಂಡಲದಿಂದ ನಾಡಿಗೆ ಮಂಗಳವಾಗಲಿ ಮತ್ತು ನಾಗ ಪ್ರತಿಷ್ಠೆಯಿಂದ ನಾಡಿನ ಪ್ರತಿಷ್ಠೆಯಾಗಲಿ ಎಂದು…

Read More

ಕೆಂಜಾರು ಗಂಡೊಟ್ಟು ಮನೆತನದ ನೂತನ ಧರ್ಮಚಾವಡಿಯ ಪ್ರವೇಶ, ಆರಾಧ್ಯ ದೈವ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ಪುನರ್ ಪ್ರತಿಷ್ಠೆ, ಕಲಶಾಭಿಷೇಕವು ಏಪ್ರಿಲ್ 8 ರಿಂದ 10 ತನಕ ಶ್ರೀ ಪ್ರಕಾಶ್ ಅಮ್ಮಣ್ಣಾಯ ಜೋತಿರ್ವಿಜ್ಞಾನಂ ಕಾಪು ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಏಪ್ರಿಲ್ 10 ರಂದು ಧೂಮಾವತಿ ಪರಿವಾರ ದೈವಗಳ ಧರ್ಮನೇಮ ದೈವದಾಣತಿಯಂತೆ ಕುಟುಂಬದ ಗುರುಹಿರಿಯರು ನಿಶ್ಚಯಿಸಿದಂತೆ ನಡೆಯಲಿದ್ದು, ಆ ಪ್ರಕಾರ ಅಂದು ಬೆಳಿಗ್ಗೆ 9 ಘಂಟೆಗೆ ತಾರಿಬರಿ ಜುಮಾದಿ ಬಂಟ ದೈವಗಳ ಭಂಡಾರ ಬಂದು, ಮಧ್ಯಾಹ್ನ 12.30 ಕ್ಕೆ ಪಲ್ಲ ಪೂಜೆ ಜರಗಲಿದೆ. ಮಧ್ಯಾಹ್ನ 12.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದ್ದು, ರಾತ್ರಿ 8.30 ಕ್ಕೆ ಧೂಮಾವತಿ ಪರಿವಾರ ದೈವಗಳಿಗೆ ಧರ್ಮ ನೇಮ ಜರಗಲಿದೆ. ಆಸ್ತಿಕ ಬಾಂಧವರು, ದೈವಾರಾಧಕ ಅಭಿಮಾನಿ ಬಂಧುಗಳು, ಕುಟುಂಬಿಕರು ಸಕಾಲದಲ್ಲಿ ಉಪಸ್ಥಿತರಿದ್ದು ಗಂಧಪ್ರಸಾದ ಸ್ವೀಕರಿಸಿ ದೈವಗಳ ಕೃಪಾ ಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಶ್ರೀಮತಿ ಮತ್ತು ಶ್ರೀ ರಾಮಣ್ಣ ಶೆಟ್ಟಿ, ಮೂಡಬಿದ್ರಿಯ ರುದ್ರಾಂಶ್ ಕನ್ಸ್ಟ್ರಕ್ಷನ್ ಮಾಲಕರಾದ ಅಜಯ್ ಶೆಟ್ಟಿ, ರಾಘವೇಂದ್ರ…

Read More

ಕಲಾ ಸಂಘವನ್ನು ಹುಟ್ಟು ಹಾಕುವುದರ ಮುಖೇನ ಸಾಂಸ್ಕೃತಿಕ, ಕ್ರೀಡೆ, ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಜತೆಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘದ ಧ್ಯೇಯೋದ್ದೇಶ ಶ್ಲಾಘನೀಯವಾದದ್ದು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಕಟ್ಟಿನಮಕ್ಕಿ ಶ್ರೀ ಮಹಾಲಿಂಗೇಶ್ವರ ಕಲಾ ಸಂಘದ ಏಳನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ್ ಎನ್. ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು, ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೋಕ್ತೇಸರ ಚಂದ್ರಯ್ಯ ಆಚಾರ್ಯ ಕಳಿ, ಆಲೂರು ಪಂಚಾಯಿತಿ ಸದಸ್ಯರಾದ ಪ್ರಮೋದ ಕುಶಲ ಶೆಟ್ಟಿ, ರಾಜೇಂದ್ರ ದೇವಾಡಿಗ ಉಪಸ್ಥಿತರಿದ್ದರು. ಕಲಾ ಸಂಘದ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಪಾ ದೇವಾಡಿಗ ಸ್ವಾಗತಿಸಿದರು. ವಿಜೇಂದ್ರ ಆಚಾರ್ಯ ನಿರೂಪಿಸಿದರು. ಸವಿತಾ ವಂದಿಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಗಿಚ್ಚಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಅವರನ್ನು ಸನ್ಮಾನಿಸಲಾಯಿತು. ಕಲಾ ಸಂಘದ ಸದಸ್ಯರಿಂದ ಯಕ್ಷಗಾನ ಜರುಗಿತು.

Read More

ಮೂಡುಬಿದಿರೆ: ಮಂಗಳೂರು ವಿವಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು 20ನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಉಡುಪಿ ವಲಯ ಮಟ್ಟದಲ್ಲಿ ಅಜ್ಜರಕಾಡು ಪ್ರಥಮ ದರ್ಜೆ ಕಾಲೇಜಿನ  ವಿರುದ್ಧ  ನೇರ ಸೆಟ್‌ಗಳಿಂದ ಗೆದ್ದು ಅಂತರ ವಲಯ ಮಟ್ಟಕ್ಕೆ ಆಯ್ಕೆಯಾಗಿತ್ತು. ಐಕಳದ ಪೋಂಪೈ ಕಾಲೇಜಿನಲ್ಲಿ ನಡೆದ ಅಂತಿಮ ಹಂತದ ಹಣಾಹಣಿಯಲ್ಲಿ ಮಂಗಳೂರಿನ ಸಂತ ಅಲೋಷಿಯಸ್ ಡೀಮ್ಡ್ ಟುಬಿ ವಿವಿ ವಿರುದ್ಧ 25-13, 25-19 ಸೆಟ್‌ಗಳ ಅಂತರದಲ್ಲಿ   ಸೋಲಿಸಿ  ವಿಜೇತ ತಂಡವಾಗಿ ಹೊರಹೊಮ್ಮಿತು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಚೈತನ್ಯವನ್ನು ಮೂಡಿಸುವ ಹೊಸ ಆಲೋಚನೆಗಳನ್ನು ಬೆಳೆಸುವ ಅವಿಭಾಜ್ಯ ಅಂಗ ಕ್ರೀಡೆ ಎಂದು ಇಡ್ಯಾ ಸುರತ್ಕಲ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಐ ರಮಾನಂದ್ ಭಟ್ ನುಡಿದರು. ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಸುರತ್ಕಲ್ ಆಶ್ರಯದಲ್ಲಿ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್ -4 ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಂಗಳೂರು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಎಸ್ ಗಣೇಶ್ ರಾವ್ ಮಾತನಾಡಿ, ಜಾತಿ ಮತ ಪಕ್ಷ ಮರೆತು ಈ ಕ್ರೀಡೆಯಲ್ಲಿ ಹಿರಿಯರೆಲ್ಲರೂ ಭಾಗವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಕ್ರೀಡೆಯ ಜೊತೆಗೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದೆಯೂ ಇಂತಹ ಕಾರ್ಯ ನಿರಂತರ ನಡೆಯಲಿ ಎಂದರು.ವೇದಿಕೆಯಲ್ಲಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮಾಜಿ ಶಾಸಕ ಬಿ.ಎ ಮೊಯಿದಿನ್ ಬಾವ, ಜ್ಯೋತಿಷ್ಯರಾದ ನಾಗೇಂದ್ರ ಭಾರದ್ವಾಜ್, ಮಂಗಳೂರು…

Read More

ಸಾಧಕರ ಬದುಕಿನಲ್ಲಿ ಏಳು ಬೀಳುಗಳು ಸಹಜ. ಅವರ ಸಾಧನೆಯನ್ನು ಕೃತಿ ರೂಪದಲ್ಲಿ ದಾಖಲಿಸಿದರೆ ಅದು ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ. ಹಾಗೆಯೇ ಅಂಥವರ ಬದುಕು ಬವಣೆಗಳಿಂದ ನಾಳಿನ ಜನಾಂಗ ಸಾಕಷ್ಟು ಪಾಠವನ್ನೂ ಕಲಿತಂತಾಗುವುದು ಎಂದು ಮಾಜಿ ಸಚಿವ ಕೃಷ್ಣ.ಜೆ ಪಾಲೆಮಾರ್ ಹೇಳಿದರು. ಹರಿಕಥಾ ಪರಿಷತ್ ಮಂಗಳೂರು ಮತ್ತು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಎಪ್ರಿಲ್ 4 ರಂದು ಶುಕ್ರವಾರ ನಡೆದ ಸಮಾರಂಭದಲ್ಲಿ ಹರಿದಾಸ ‘ದೇವಕಿ ತನಯ’ ಮಹಾಬಲ ಶೆಟ್ಟಿ ಕೂಡ್ಲು ಅವರ ‘ಮಹಾಪರ್ವ’ ಅಭಿನಂದನಾ ಸಂಪುಟವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಹರಿಕಥಾ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಮಹಾಬಲ ಶೆಟ್ಟಿ ಅವರ ಸಾಧನೆಗಳು ‘ಮಹಾಪರ್ವ’ದಲ್ಲಿ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಮನೆ ಮನ ತಲುಪಲು ಸಾಧ್ಯವಾಗಲಿದೆ. ಭವಿಷ್ಯದ ಜನಾಂಗದ ಸಾಧನೆಗೆ ಅದುವೇ ಸ್ಫೂರ್ತಿಯಾಗುವುದು ಎಂದು ಅವರು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ| ಹರಿಕೃಷ್ಣ ಪುನರೂರು ಮಾತನಾಡಿ ‘ಮಕ್ಕಳಿಗೂ ಹರಿಕಥೆ ಕಲಿಸಿ ಅವರನ್ನು ಹರಿದಾಸರನ್ನಾಗಿ…

Read More

ಶ್ರೀ ಬೊಬ್ಬರ್ಯ ಕ್ಷೇತ್ರ, ಬೊಲ್ಯಾಲ (ಬೆಳ್ಕೆಳೆ) ತೆಂಕನಿಡಿಯೂರು ಉಡುಪಿ ಇಲ್ಲಿನ ನವೀಕೃತ ದೈವಸ್ಥಾನ ಸಮರ್ಪಣೆ, ಬ್ರಹ್ಮ ಕುಂಭಾಭಿಷೇಕದ ಕಾರ್ಯಕ್ರಮಕ್ಕೆ ಆಗಮಿಸಿದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಹುಬ್ಬಳ್ಳಿ ಧಾರವಾಡ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಮಾಜಿ ಅಧ್ಯಕ್ಷ ಮಹೇಶ್ ಶೆಟ್ಟಿ ಮತ್ತು ಭೋಜರಾಜ ಶೆಟ್ಟಿ ಕೋಟೇಶ್ವರರವರು ತಂತ್ರಿಗಳ ಮೂಲಕ ದೈವಸ್ಥಾನದ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಗೌರವಿಸಿದರು. ಡಾ. ಎ.ವಿ ಬಾಳಿಗಾ ಆಸ್ಪತ್ರೆಯ ಶ್ರೀಮತಿ ಸೌಜನ್ಯ ಶೆಟ್ಟಿ ದಂಪತಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More