Author: admin
ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವತಿಯಿಂದ ಪ್ರೊವಿನಿಯೋ ೨.೦ ರಾಷ್ಟ್ರೀಯ ವಿಚಾರ ಸಂಕಿರಣ ಸೆಪ್ಟೆಂಬರ್ ೧೯ ಮತ್ತು ೨೦ರಂದು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದೆಹಲಿಯ ಕೇಂದ್ರೀಯ ಹೋಮಿಯೋಪತಿ ಸಂಶೋಧನಾ ಪರಿಷತ್ನ ವೈಜ್ಞಾನಿಕ ಸಲಹಾ ಮಂಡಳಿ ಅಧ್ಯಕ್ಷ ಡಾ.ಎ.ಎಸ್.ಕುಮಾರ್ ಮಿತ್ರಚಂದ್ರ ಧಾವಲೆ, ಗೌರವ ಅತಿಥಿಯಾಗಿ ದಕ್ಷಿಣ ಕನ್ನಡದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್ ಕೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾಎಂಮೋಹನ ಆಳ್ವ ಅಧ್ಯಕ್ಷತೆವಹಿಸುವರು. ಎರಡು ದಿನ ನಡೆಯಲಿರುವ ಈ ವಿಚಾರ ಸಂಕಿರಣದಲ್ಲಿ ಹೋಮಿಯೋಪಥಿ ಕ್ಷೇತ್ರದ ದೇಶದ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕರ್ಯಕ್ರಮ ನಡೆಯಲಿದೆ.
‘ನಮ್ಮ ಹಬ್ಬಗಳಲ್ಲೆಲ್ಲಾ ಐಕ್ಯತೆಯ ಸಂದೇಶವಿದೆ. ಅಷ್ಟಮಿಯ ಆಚರಣೆಯಲ್ಲಿ ಅದು ಬಹಳ ಸ್ಪಷ್ಟವಾಗಿ ಕಂಡುಬರುತ್ತದೆ. ಶ್ರೀ ಕೃಷ್ಣನಂತಹ ಪುರಾಣ ಪುರುಷರ ಉಪದೇಶಗಳಿಂದ ಸಮಾಜದಲ್ಲಿ ಜಾಗೃತಿ ಮೂಡುವ ಜೊತೆಗೆ ವಿವಿಧ ಉದ್ಯಮ ರಂಗಗಳಲ್ಲಿ ವ್ಯಾಪಾರ ವಹಿವಾಟುಗಳ ಮೂಲಕ ಸಾಮಾಜಿಕ ಪ್ರಗತಿಯೂ ಸಾಧ್ಯವಾಗಿದೆ’ ಎಂದು ಮಾಜಿ ಅಕಾಡೆಮಿ ಸದಸ್ಯ, ಲೇಖಕ ಹಾಗೂ ಧಾರ್ಮಿಕ ಚಿಂತಕ ಪ್ರೊ|ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಹಿಂದೂ ಸುರಕ್ಷಾ ಸಮಿತಿ ಅಡ್ಯಾರ್ ಆಶ್ರಯದಲ್ಲಿ ಅಡ್ಯಾರು ಸೋಮನಾಥ ಕಟ್ಟೆ ಬಳಿ ಛತ್ರಪತಿ ಶಿವಾಜಿ ಮೈದಾನದ ಶ್ರೀ ಕೃಷ್ಣ ಕಲಾಮಂಟಪದ ಗೀತೋಪದೇಶ ಕಲಾವೇದಿಕೆಯಲ್ಲಿ ಜರಗಿದ 43ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ‘ಭಾರತೀಯ ಕಾವ್ಯಗಳಲ್ಲಿ ಪ್ರಸ್ಥಾನ ತ್ರಯಗಳೆಂದು ಕರೆಯಲ್ಪಡುವ ರಾಮಾಯಣ, ಮಹಾಭಾರತ ಮತ್ತು ಭಗವದ್ಗೀತೆಗಳಲ್ಲಿ ಮಾನವರ ಬದುಕನ್ನು ಸುಭಗಗೊಳಿಸುವ ಜೀವನ ಮೌಲ್ಯಗಳ ಪಾಠವಿದೆ. ಅದರಲ್ಲೂ ಶ್ರೀ ಕೃಷ್ಣ ಅರ್ಜುನನಿಗೆ ಉಪದೇಶಿಸಿದ ಭಗವದ್ಗೀತೆಯನ್ನು ಹಿಂದೂಗಳ ಪವಿತ್ರ ಧರ್ಮ ಗ್ರಂಥವೆಂದೆ ಭಾವಿಸಲಾಗಿದೆ’ ಎಂದವರು ನುಡಿದರು. ಶ್ರೀ…
ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ, ಕಾರ್ಕಳ : 4 ನೇ ವಾರ್ಷಿಕ ಮಹಾಸಭೆ, 58.47 ಲಕ್ಷ ನಿವ್ವಳ ಲಾಭ ಮತ್ತು ಶೇ 13.50 ಡಿವಿಡೆಂಟ್ ಘೋಷಣೆ
ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ, ಕಾರ್ಕಳ ಇದರ 4 ನೇ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆಪ್ಟೆಂಬರ್ 13ರಂದು ಕಾರ್ಕಳದ ಹೋಟೆಲ್ ಸ್ವಾಗತ್ ನಲ್ಲಿ ಜರಗಿತು. ಸೊಸೈಟಿಯ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 31-03-2025ರ ಅಂತ್ಯಕ್ಕೆ ಸೊಸೈಟಿಯು 18.77 ಕೋಟಿ ಠೇವಣಿ ಸಂಗ್ರಹಿಸಿ, 17.95 ಕೋಟಿ ಸಾಲ ನೀಡಿ 36.72 ಕೋಟಿ ವ್ಯವಹಾರವನ್ನು ನಡೆಸಿ 107 ಕೋಟಿ ವಹಿವಾಟನ್ನು ಮಾಡಿ, 58.47 ಲಕ್ಷ ಲಾಭವನ್ನು ಗಳಿಸಿ, 3 ವರ್ಷದಲ್ಲಿಯೇ ಶೇ 13.50 ಡಿವಿಡೆಂಟ್ ನೀಡಿರುವುದು ನಮ್ಮ ಸೊಸೈಟಿಯ ಹೆಮ್ಮೆ ಎಂದು ತಿಳಿಸಿದರು. ಈ ಅಭಿವೃದ್ಧಿಯಲ್ಲಿ ನಮ್ಮ ಸಂಘದ ಸದಸ್ಯರು, ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರ ಸಹಕಾರದಿಂದ ಸೊಸೈಟಿಯು ಅಲ್ಪಾವಧಿಯಲ್ಲಿ ಹೆಚ್ಚಿನ ಅಭಿವೃದ್ಧಿ ಹೊಂದಲು ಸಾಧ್ಯವಾಯಿತು ಎಂದು ತಿಳಿಸಿದರು. ಸೊಸೈಟಿಯ ಉಪಾಧ್ಯಕ್ಷ ಕೆ ಮಂಜುನಾಥ ಶೆಟ್ಟಿ ಸ್ವಾಗತಿಸಿದರು. ನಿರ್ದೇಶಕಿ ವಿನಯ ಅರುಣ್ ಶೆಟ್ಟಿ ಮಹಾಸಭೆಯ ನೋಟಿಸನ್ನು ವಾಚಿಸಿದರು. ನಿರ್ದೇಶಕ ಪ್ರಶಾಂತ್…
ಶ್ರೀ ಪೊನ್ನಗಿರಿ ಭಜನಾ ಸಪ್ತಾಹ ಅಮೃತ ಮಹೋತ್ಸವ ಸಮಿತಿ : ನವೆಂಬರ್ 09 ರಂದು ಅಂತರ್ ಜಿಲ್ಲಾ ಕುಣಿತ ಭಜನಾ ಸ್ಪರ್ಧೆ
ಶ್ರೀ ಪೊನ್ನಗಿರಿ ಭಜನಾ ಸಪ್ತಾಹ ಅಮೃತ ಮಹೋತ್ಸವ ಸಮಿತಿ ಕುತ್ತೆತ್ತೂರು ಸೂರಿಂಜೆ ಇದರ ಆಶ್ರಯದಲ್ಲಿ 75ನೇ ಭಜನಾ ಮಂಗಲೋತ್ಸವದ ಪ್ರಯುಕ್ತ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಆಹ್ವಾನಿತ ಭಜನಾ ತಂಡಗಳಿಂದ ಅಂತರ್ ಜಿಲ್ಲಾ ಕುಣಿತ ಭಜನಾ ಸ್ಪರ್ಧೆ ನವೆಂಬರ್ 9 ರಂದು ಭಾನುವಾರ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಬೆಳಿಗ್ಗೆ 8.30 ರಿಂದ ನಡೆಯಲಿದೆ. ವಿಭಾಗ I ಬಾಲಕ ಬಾಲಕಿಯರಿಗೆ 15 ವರ್ಷದ ಒಳಗಿನ, ವಿಭಾಗ II ಮಹಿಳೆಯರಿಗೆ ಮುಕ್ತ ವಿಭಾಗ ಇದೆ. ಸ್ಪರ್ಧಾ ನಿಬಂಧನೆಗಳು : ದಾಸರ ಕೀರ್ತನೆಗಳನ್ನು ಮಾತ್ರ ಹಾಡುವುದು ಮತ್ತು ಅಂಕಿತನಾಮ ಕಡ್ಡಾಯ ಆಗಿದೆ. ಪ್ರತಿ ವಿಭಾಗದಲ್ಲಿ 12 ತಂಡಗಳಿಗೆ ಮಾತ್ರ ಅವಕಾಶ ಇದೆ. ಒಬ್ಬ ಸದಸ್ಯ ಒಂದು ತಂಡದಲ್ಲಿ ಮಾತ್ರ ಭಾಗವಹಿಸುವುದು (ಹಿಮ್ಮೇಳ ಸೇರಿ), ಒಬ್ಬ ಭಜಕರು ಒಂದೇ ಹಾಡು ಹಾಡಬೇಕು. ತಂಡದಲ್ಲಿ ಸದಸ್ಯರ ಮಿತಿ ಹಿಮ್ಮೇಳ ಸೇರಿ ಕನಿಷ್ಠ 10 ಹಾಗೂ ಗರಿಷ್ಠ 16 ಇರಬೇಕು. ಹಿಮ್ಮೇಳದಲ್ಲಿ ತಬಲ,…
“ಅಡ್” ಪಂಡ ಅಟ್ಟಿಲ್ ಮಲ್ಪುನು, ಕನ್ನಡೊಡು “ಆಡುಗೆ ಮಾಡು” (the act and process of cooking food). ಕೋರಿ ಅಡ್ಪಿನಿ ಪಂಡ ಕೋರಿದ ಕಜಿಪು ಮಲ್ಪುನು. ನನ “ಕಂಡ್ಯಾನೆ ಅಡ್ಪಿನಿ” ಪಂಡ ಕಂಡ್ಯಾನನ್ ಕಯಿಪು ಮಲ್ತ್ ತಿನ್ಪಿನಿ ಪಂದ್ ಅರ್ತ ಅತ್ತ್, ಅತ್ತ್ ಡ ಕಂಡ್ಯಾನೆ ಅಟ್ಟಿಲ್ ಮಲ್ಪುನು ಪಂದ್ ಲಾ ಅತ್ತ್. ಮುಲ್ಪ “ಅಡ್ಪಿನಿ” ಪಂಡ ಪೊನ್ನು ಪೊಂಜೋವು ಆನ್ ಅಂಜೋವೆನ್ “ಕಂಡ್ಯಾನೆ” ಆದ್ ಒತ್ತೊಂಬಿನಿ (ಸ್ವೀಕಾರ ಮಲ್ಪುನು). ಬೋಡಾಂಡ ಒಪ್ಪಂದ (agreement) ಪಂದ್ ಲಾ ಅರ್ತ ಮಲ್ತೊನೊಲಿ. ನರಮಾನಿನ ಅತ್ತ್ ಡ ಕಂಜಿ ಕೈಕಂಜಿಲೆನ ಉಡಲ್ ಗ್ ಕೊರ್ಪಿನ ಮರ್ದ್ ನ್ ಪಂಡಿತೆರ್ ನಗುಲು “ತಯಾರ್” ಮಲ್ಪುನು. ಮರ್ದ್ “ಅರೆಪುನು”ಲಾ ಉಂಡು. ಅಪಗ ಉಂದು ಒವ್ವು ಅಡ್ಪಿನ ಮರ್ದ್? ಉಂದು ಪೆದ್ಮೆದಿಯಲ್ಲೆಗ್ ಕೊರ್ಪಿನ ಮರ್ದ್. ಒಂಜಿ ಅರ್ತೊಡು ಉಂದು ಪೆದ್ಮೆದಿಯಲ್ಲೆಗ್ ಮಲ್ಪುನ ಅನುಪಾನ ಅತ್ತ್ ಡ ಪತ್ಯ (ಪಥ್ಯ). ಅಂದ್, ಮರ್ದ್ ಗೆತೊನ್ನಗ ಡಾಕ್ಟ್ರು ಪತ್ಯ ಮಲ್ಪುಲೆ,…
ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಪೂರ್ಣಶ್ರೀ ವಿ.ಎಸ್. ಶ್ರೇಯಾ ಹೆಮರಡ್ಡಿ ಸಿ ಮತ್ತು ಗ್ರೀಷ್ಮಾ ಎಸ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಮಹಿಳೆಯರಲ್ಲಿ ಅಂಡಾಶಯದ ನೀರುಗುಳ್ಳೆ ( ಓವರಿಯನ್ ಸಿಸ್ಟ್ /PCOD) – ಕಾರಣಗಳು, ಲಕ್ಷಣಗಳು ಮತ್ತು ಚಿಕಿತ್ಸಾ ಮಾರ್ಗಗಳು ಪರಿಚಯ
ಮಾಸಿಕ ಚಕ್ರವು ಮಹಿಳೆಯ ಜೀವನದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಮೊದಲ ಋತು ಚಕ್ರ ದಿಂದ ಶುರುವಾಗಿ ಋತು ಬಂಧದವರೆಗೆ ಇದು ಜೀವನದ ಅವಿಭಾಜ್ಯ ಅಂಗ. ಆದರೆ ಮಾಸಿಕ ಚಕ್ರ ಅಸಮಂಜಸವಾಗಿ, ವಿಳಂಬವಾಗಿ, ಅತಿಯಾದ ಪ್ರಮಾಣದಲ್ಲಿ ಅಥವಾ ಸಂಪೂರ್ಣ ನಿಂತಾಗ , ಅದು ಮಹಿಳೆಗೆ ಶಾರೀರಿಕವಾಗಿಯೂ ಮಾನಸಿಕವಾಗಿಯೂ ಬಹಳ ಕಿರಿಕಿರಿ ಯನ್ನು ಉಂಟುಮಾಡುತ್ತದೆ. ಅಂತಹ ಒಂದು ಸಾಮಾನ್ಯ ಸಮಸ್ಯೆ ಎಂದರೆ PCOD – ಪಾಲಿ ಸಿಸ್ಟಿಕ್ ಓವರಿಯನ್ ಡಿಸೀಸ್. ಇಲ್ಲಿ ಅಂಡಾಶಯದ ಹಲವು ಸಿಸ್ಟ್ಗಳು (ದ್ರವ ತುಂಬಿದ ಗುಳ್ಳೆಗಳು ) ಕಂಡುಬರುತ್ತವೆ. ಹಾರ್ಮೋನ್ಗಳ ಅಸಮತೋಲನದಿಂದ ಇದು ಉಂಟಾಗುತ್ತದೆ. ಇದರ ಪ್ರಮುಖ ಲಕ್ಷಣಗಳು – ಮಾಸಿಕ ನಿಲ್ಲುವುದು (ಅಮೆನೋರಿಯಾ), ದೇಹದ ಮೇಲೆ ಹೆಚ್ಚುವರಿ ಕೂದಲು ಬೆಳವಣಿಗೆ (ಹಿರ್ಸುಟಿಸಮ್), ದೇಹದ ತೂಕ ಹೆಚ್ಚಾಗುವುದು ಮತ್ತು ಅಂಡಾಶಯ ದೊಡ್ಡದಾಗಿರುವುದು. ಹಾರ್ಮೋನ್ಗಳು ಯಾವುವು? PCOD ಯಲ್ಲಿ ಏನಾಗುತ್ತದೆ? PCOD ಯಲ್ಲಿ ಆಂಡ್ರೋಜನ್ (ಪುರುಷ ಹಾರ್ಮೋನ್) ಅಧಿಕ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತದೆ. ಇದರಿಂದ ಅಂಡಾಣು ಬಿಡುಗಡೆ ಪ್ರಕ್ರಿಯೆ ಯಲ್ಲಿ ಏರುಪೇರಾಗಿ…
ಸರ್ ಎಂ ವಿಶ್ವೇಶ್ವರಯ್ಯರವರ ಜನ್ಮದಿನಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಿಸುತ್ತಿರುವ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 15 ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರದ ಪುರಸಭೆಯ ಇಂಜಿನಿಯರ್ (ಪರಿಸರ) ಗುರುಪ್ರಸಾದ್ ಶೆಟ್ಟಿ ಶಿರೂರು ಅವರನ್ನು ಯುವ ಬಂಟರ ಸಂಘದ ಪೋಷಕ ಸದಸ್ಯರು, ಹೈದರಾಬಾದ್ ನ ಹಿರಿಯ ಉದ್ಯಮಿ ನೆಲಗೊಂಡ ಸುಧಾಕರ ಶೆಟ್ಟಿ ಜನ್ಸಾಲೆ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಯುವ ಬಂಟರ ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ವಹಿಸಿದ್ದರು. ಯುವ ಬಂಟರ ಸಂಘದ ದತ್ತಿನಿಧಿ ಪೋಷಕರಾದ ಕಂದಾವರ ಸತೀಶ್ ಶೆಟ್ಟಿ, ಅಶೋಕ್ ಶೆಟ್ಟಿ ಸಂಸಾಡಿ, ಬಿ. ಜಯರಾಮ ಶೆಟ್ಟಿ ಹಳ್ನಾಡು, ಬೈಂದೂರು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಶಶಿಧರ ಶೆಟ್ಟಿ ಸಾಲ್ಗದ್ದೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮುರಳಿಧರ ಶೆಟ್ಟಿ ಹುಯ್ಯಾರು, ಕೋಶಾಧಿಕಾರಿ…
ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಿಸುತ್ತಿರುವ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನವರು ಸೆಪ್ಟೆಂಬರ್ 15 ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರದ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ ಅವರನ್ನು ಲಯನ್ಸ್ ಕ್ಲಬ್ ನ ಹಿರಿಯ ಸದಸ್ಯರು, ನಿವೃತ್ತ ಬ್ಯಾಂಕ್ ಉದ್ಯೋಗಿ ಹಳ್ನಾಡು ಬಿ. ಜಯರಾಮ ಶೆಟ್ಟಿ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಲಯಾಧ್ಯಕ್ಷರಾದ ಲ. ವಸಂತರಾಜ ಶೆಟ್ಟಿ, ಸ್ಥಾಪಕ ಅಧ್ಯಕ್ಷ ಅಶೋಕ ಶೆಟ್ಟಿ ಸಂಸಾಡಿ, ಹೈದರಾಬಾದ್ ಹೋಟೆಲ್ ಉದ್ಯಮಿ ನೆಲಗೊಂಡ ಸುಧಾಕರ ಶೆಟ್ಟಿ ಜನ್ಸಾಲೆ, ಬೈಂದೂರು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಶಶಿಧರ ಶೆಟ್ಟಿ ಸಾಲ್ಗದ್ದೆ, ಪಶು ವೈದ್ಯ ಡಾ. ಪ್ರಶಾಂತ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದರು. ನಿಕಟ ಪೂರ್ವ ಅಧ್ಯಕ್ಷ ಲ| ಉದಯ್ ಶೆಟ್ಟಿ ಮಚ್ಚಟ್ಟು, ಲ| ಪ್ರಕಾಶ ಶೆಟ್ಟಿ…
ಮೂಡುಬಿದಿರೆ: ಬ್ರಹ್ಮಾವರದ ಎಸ್ಎಮ್ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್ಕಂಟ್ರಿ ಚಾಂಪಿಯನ್ಶಿಫ್ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಮೋಹಿತ್ (ಪ್ರಥಮ), ಆದೇಶ್ ಕುಮಾರ್ (ದ್ವಿತೀಯ), ಶುಭಂ(ತೃತೀಯ), ರೋಹಿತ್(4ನೇ ಸ್ಥಾನ), ಹರೇಂದ್ರ(5ನೇ ಸ್ಥಾನ) ಪಡೆದು ಸತತ 21ನೇ ವರ್ಷ ಕುರುಂಜಿ ವಿಶ್ವನಾಥ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿ ಮೊದಲ 6 ಸ್ಥಾನಗಳನ್ನು ಆಳ್ವಾಸ್ ಕಾಲೇಜು ಓಟಗಾರರು ಪಡೆದುಕೊಂಡರು. ಆಳ್ವಾಸ್ನ ತಮಿಶಿ (ಪ್ರಥಮ), ನಿರ್ಮಲಾ(ದ್ವಿತೀಯ), ಭಾಗೀರಥಿ(ತೃತೀಯ), ಯಶಿ(4ನೇ ಸ್ಥಾನ), ಜ್ಯೋತಿ (5ನೇ ಸ್ಥಾನ), ಮನೀಷಾ(6ನೇ ಸ್ಥಾನ) ಪಡೆದು ಸತತ 21ನೇ ವರ್ಷ ಕೈಕುರೆ ಶ್ರೀ ರಾಮಣ್ಣ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಶ್ಲಾಘಿಸಿದ್ದಾರೆ.