Author: admin
ಬಂಟರ ಸಂಘ ಅಶೋಕನಗರ ಉರ್ವಾ ಇದರ ಆಶ್ರಯದಲ್ಲಿ ಮರಿಯಾಲಡೊಂಜಿ ಐತಾರ, ಆಟಿದ ಕೂಟ ಕಾರ್ಯಕ್ರಮ ಉರ್ವಾಸ್ಟೋರ್ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಇತ್ತೀಚಿಗೆ ಜರಗಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸಾಗರ ಬಂಟರ ಸಂಘದ ಅಧ್ಯಕ್ಷ ಸುಧೀರ್ ಶೆಟ್ಟಿ ಹಕ್ಲಾಡಿ ಅವರು ಮಾತನಾಡಿ, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಅನುಕರಣೆಯ ಎಂದರು. ಮುಖ್ಯ ಅತಿಥಿಯಾಗಿದ್ದ ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಆಟಿ ಕೂಟದಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನ ಶ್ಲಾಘನೀಯ ಎಂದರು. ಮುಖ್ಯ ಅತಿಥಿಗಳಾಗಿ ಕೆಎಂಸಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಆಶ್ನಾ ಶೆಟ್ಟಿ, ಉದ್ಯಮಿಗಳಾದ ನಿತ್ಯಾನಂದ ಶೆಟ್ಟಿ, ವಿಜಯಲಕ್ಷ್ಮಿ ಮಲ್ಲಿ, ಶೇಖರ ಶೆಟ್ಟಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಟ್ರಸ್ಟಿ ದೇವದಾಸ್ ಹೆಗ್ಡೆ, ನಿಕಟಪೂರ್ವ ಕಾರ್ಪೊರೇಟರ್ ಜಯಲಕ್ಷ್ಮಿ ಶೆಟ್ಟಿ, ಬಂಟರ ಸಂಘದ ಗೌರವ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ…
ರಾಮಾಯಣದ ಅಡಿ ಚೆಂದ, ಭಾಗವತದ ಮುಡಿ ಚೆಂದ, ಮಹಾಭಾರತದ ನಡು ಚೆಂದ. ಯಕ್ಷಗಾನ ಪ್ರಸಂಗವಾಗಿ ಆಡಿ ತೋರಿಸುವ ಕೃಷ್ಣಸಂಧಾನವು ದೇಶ ವಿದೇಶಗಳಲ್ಲೂ ಮತ್ತು ಎಲ್ಲ ಕಾಲಕ್ಕೂ ಪ್ರಸ್ತುತ. ಅದು ಎಲ್ಲಾ ಸಮುದಾಯಗಳೂ ಆನಂದಿಸಬಹುದಾದ ಒಂದು ಪ್ರಸಂಗ. ಅದರಲ್ಲಿ ರಾಜಕೀಯ, ಆರ್ಥಿಕ ಹಾಗೂ ಸಾಂಸಾರಿಕ ಆಯಾಮಗಳಿವೆ. ಅಲ್ಲದೇ ಜಗಳವನ್ನು ಶಮನಗೊಳಿಸಬೇಕೆಂಬ ಸಾರ್ವತ್ರಿಕ ಸಂದೇಶವಿದೆ. ಮೂಲ ಭಾರತದಲ್ಲಿ ಸಂಧಾನ ಆಗಬೇಕೆಂದು ಕೃಷ್ಣನು ಹಾರ್ಧಿಕವಾಗಿ ಬಯಸಿದ್ದಾನೆ. ಅವನು ನರರಿಗೆ ಸಾರಥಿಯಾಗ ಬಯಸುವನು. ವ್ಯಾಸರ ಕೃಷ್ಣ ಸಂಧಿಪ್ರಿಯನಾದರೆ ಪ್ರಸಂಗದ ಕೃಷ್ಣ ಯುದ್ಧಪ್ರಿಯ. ದುರ್ಯೋಧನ ಛಲದೊಳ್ ಅಲ್ಲ; ಹಠದೊಳ್ ಕೌರವ. ಕೃಷ್ಣ ಸಂಧಾನ ಪ್ರಸಂಗವು ಬಹಳ ಆಸಕ್ತಿಕರವಾದುದು. ಹಾಗಾಗಿ ಶಾಶ್ವತವಾಗಿ ಉಳಿದಿದೆ ಎಂದು ವಿಶ್ರಾಂತ ಪ್ರಾಚಾರ್ಯ, ಹಿರಿಯ ಯಕ್ಷಗಾನ ಅರ್ಥಧಾರಿ, ಸಂಶೋಧಕ ಮತ್ತು ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ನುಡಿದರು. ಆಗಸ್ಟ್ 12ರಂದು ಮಂಗಳವಾರ ಕಲೀನಾ ಕ್ಯಾಂಪಸ್ ನ ಜೆ. ಪಿ. ನಾಯಕ್ ಭವನದಲ್ಲಿ ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಆಯೋಜಿಸಿದ್ದ ಸದಾನಂದ ಸುವರ್ಣ ಪ್ರಾಯೋಜಿತ ದತ್ತಿ…
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕ ಧಾರೆ – 2025 ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ರವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಪುಸ್ತಕವೆಂದರೆ ಕೇವಲ ಅಕ್ಷರಗಳ ಸಂಗ್ರಹವಲ್ಲ. ಅದು ಕಾಲ, ಸಮಾಜ ಮತ್ತು ಮಾನವನ ಭಾವನೆಗಳ ಪ್ರತಿಬಿಂಬ. ಇಂತಹ ಕಾರ್ಯಕ್ರಮಗಳು ಓದುವ ಅಭ್ಯಾಸವನ್ನು ಪುನರುಜ್ಜೀವನಗೊಳಿಸುತ್ತವೆ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ಸಾಹಿತಿಗಳು ಹಾಗೂ ಚಿತ್ರ ನಿರ್ದೇಶಕರಾದ ಡಾ. ನಾಗತಿಹಳ್ಳಿ ಚಂದ್ರಶೇಖರ್ ರವರು ಪುಸ್ತಕವೆಂದರೆ ಕೇವಲ ಹಾಳೆಗಳ ಗುಚ್ಛವಲ್ಲ. ಅದು ಕಾಲದ ಸ್ಮರಣೆ, ಸಮಾಜದ ಕನ್ನಡಿ ಮತ್ತು ಮನಸ್ಸಿನ ಆಳದಿಂದ ಹೊರ ಹೊಮ್ಮುವ ಭಾವಧಾರೆ ಮತ್ತು ಮಾನವನ ಮನಸ್ಸಿನ ನಕ್ಷೆಯೇ ಆಗಿದೆ ಎಂದರು. ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ರವರು ಸ್ವಾಗತಗೈಯುತ್ತಾ ತಮ್ಮ ಪ್ರಾಸ್ತಾವಿಕ…
ಏನಿದು ಹೊಸ ಪದ್ಯ ಎಂದು ಆಶ್ಚರ್ಯವಾಗುತ್ತಿದೆಯೇ? ಅದನ್ನು ತಣಿಸಲು ನೀವು ಮುಂದೆ ಓದಬೇಕಾಗುತ್ತದೆ. ಅದೃಷ್ಟ ಹೇಗೆ ಒಲಿಯುತ್ತದೆ ಎಂಬುದನ್ನು ಯಾರೂ ಊಹಿಸಲಾಗದು. ಜತೆಗೆ ದೂರಗಾಮಿ ಚಿಂತನೆ, ಹೊಸತನ ಮತ್ತು ಪ್ರತಿಭೆಗಳು ಕೂಡ ಸೇರಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ಉದಾಹರಣೆಯಾಗಿ ನಮ್ಮೆದುರು ನಿಲ್ಲುವವರು ಉದ್ಯಮಿ ಬರೋಡ ಶಶಿಧರ ಶೆಟ್ಟಿ. ಇಂಡಸ್ಟ್ರೀಯಲ್ ಕ್ಯಾಟರಿಂಗ್, ಡಿಜಿಟಲ್ ಮಾರ್ಕೆಟಿಂಗ್, ಗುತ್ತಿಗೆ ಸಹಿತ ವಿವಿಧ ರೀತಿಯ ಉದ್ಯಮ ರಂಗದಲ್ಲಿ ಯಶಸ್ಸು ಸಾಧಿಸಿರುವ ಬರೋಡ ಶಶಿಧರ ಶೆಟ್ಟಿ ಅವರು ಈಗ ತನ್ನ ಚೊಚ್ಚಲ ಸಿನಿಮಾದಲ್ಲಿ ಭರ್ಜರಿ ಖ್ಯಾತಿ ಗಳಿಸಿದ್ದಾರೆ. ಈ ಮೂಲಕ ಇವರು ಮುಟ್ಟಿದೆಲ್ಲವೂ ಚಿನ್ನ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಅದಕ್ಕೆ ಕಾರಣವೇ ಕರಾವಳಿ ಪ್ರತಿಭೆಗಳ ‘ಸು ಫ್ರಂ ಸೋ’ ಸಿನಿಮಾ. ಇದೇ ಮೊದಲ ಬಾರಿಗೆ ಬರೋಡ ಶಶಿಧರ ಶೆಟ್ಟಿ ಅವರು ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ‘ಸು ಫ್ರಂ ಸೋ’ ಸಿನಿಮಾದ ಓರ್ವ ನಿರ್ಮಾಪಕರಾಗಿರುವ ಇವರು ಅದೃಷ್ಟವಂತ ಹಾಗೂ ಯಶಸ್ವಿ ಸಾಧಕ ಎಂಬುದು ಈಗಾಗಲೇ ಸಾಬೀತಾದ ಸತ್ಯ.…
ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು, ಕಾರ್ಕಳ ಹೆಬ್ರಿ ತಾಲೂಕು ಸಮಿತಿ, ಕಾರ್ಕಳ ತಾಲೂಕು ಮಹಿಳಾ ಬಂಟರ ಸಂಘ ಕಾರ್ಕಳ ಹಾಗೂ ಕಾರ್ಕಳ ತಾಲೂಕು ಯುವ ಬಂಟರ ಸಂಘ ಇವರ ಸಹಭಾಗಿತ್ವದಲ್ಲಿ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಆಟಿಡೊಂಜಿ ಕೆಸರ್ದ ಕೂಟ ಕಾರ್ಯಕ್ರಮವು ಆಗಸ್ಟ್ 10 ಭಾನುವಾರದಂದು ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿ.ಎ ಅಶೋಕ್ ಕುಮಾರ್ ಶೆಟ್ಟಿ ಎಂ ಸಮಾರಂಭದ ಉದ್ಘಾಟನೆಯನ್ನು ಮಾಡಿದರು. ಮುಖ್ಯ ಅತಿಥಿಯಾಗಿ ಬೆಂಗಳೂರು ಬಂಟರ ಸಂಘದ ವಿದ್ಯಾರ್ಥಿ ವೇತನ ಹಾಗೂ ಪ್ರಶಸ್ತಿ ಸಮಿತಿಯ ಛೇರ್ಮನ್ ಉಮೇಶ್ ಕುಮಾರ್ ಶೆಟ್ಟಿ, ಕಾರ್ಕಳ ಪುರಸಭೆಯ ವಿಶ್ರಾಂತ ಮುಖ್ಯ ಅಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಪೆರ್ವಾಜೆ, ಕಾರ್ಕಳ ಹೆಬ್ರಿ ತಾಲೂಕು ಬಂಟರ ಸಂಘದ ನಿಕಟ ಪೂರ್ವ ಸಂಚಾಲಕ ಮಣಿರಾಜ್…
ಪುಣೆ ತುಳು ಕೂಟದ 26ನೇ ವಾರ್ಷಿಕೋತ್ಸವ ಸಮಾರಂಭವು ಆಗಸ್ಟ್ 15 ರಂದು ಮದ್ಯಾಹ್ನ 2 ಗಂಟೆಯಿಂದ ಪುಣೆಯ ಬಾಣೇರ್ ನಲ್ಲಿಯ ಬಂಟರ ಭವನದ ಓಣಿ ಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದಲ್ಲಿ ವೈವಿದ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ, ತುಳುನಾಡ ಸಂಸ್ಕೃತಿ ರೂಪಕ ಮತ್ತು ಸಭಾ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ತುಳು ಕೂಟ ಪುಣೆ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಕಳತ್ತೂರು ಅಶ್ವಥಗುತ್ತುರವರ ಅಧ್ಯಕ್ಷತೆಯಲ್ಲಿ ಜರಗಲಿರುವ 26ನೇ ವಾರ್ಷಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಖಿಲ ಭಾರತ ತುಳು ಒಕ್ಕೂಟದ ಮಾಜಿ ಅಧ್ಯಕ್ಷ, ವಿಶ್ವ ದೇವಾಡಿಗ ಮಹಾ ಮಂಡಲದ ಅಧ್ಯಕ್ಷ, ಮುಂಬಯಿ ದೇವಾಡಿಗ ಸಂಘದ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಧರ್ಮಪಾಲ್ ದೇವಾಡಿಗ, ಗೌರವ ಅತಿಥಿಗಳಾಗಿ ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರು ಗುತ್ತು, ಭದ್ರಾವತಿಯ ಪ್ರತಿಷ್ಟಿತ ಉದ್ಯಮಿ, ಭದ್ರಾವತಿ ಬಂಟರ ಸಂಘದ ಅಧ್ಯಕ್ಷ, ಲಯನ್ಸ್ ಕ್ಲಬ್ ಮಾಜಿ ಗವರ್ನರ್ ಲ| ದಿವಾಕರ್ ಶೆಟ್ಟಿ, ಸಾಹಿತಿ ಮುದ್ದು ಮೂಡುಬೆಳ್ಳೆ ಆಗಮಿಸಲಿದ್ದಾರೆ. ತುಳು ಕೂಟದ ರಜತ ಮಹೋತ್ಸವ…
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು "ಕ್ರಿಯೇಟಿವ್ ಪುಸ್ತಕ ಧಾರೆ – 2025" ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರು ಆಗಮಿಸಲಿದ್ದಾರೆ. ಜೊತೆಗೆ ಶ್ರೀ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಸಾಹಿತಿಗಳು ಮತ್ತು ಅಧ್ಯಕ್ಷರು, ಕ.ಸಾ.ಪ ಕಾರ್ಕಳ ತಾಲೂಕು, ಡಾ. ಪ್ರದೀಪಕುಮಾರ ಹೆಬ್ರಿ, ಮಹಾಕಾವ್ಯಗಳ ಲೇಖಕರು, ಮಂಡ್ಯ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಘನ ಉಪಸ್ಥಿತಿ ವಹಿಸಲಿದ್ದಾರೆ. ಅನಾವರಣಗೊಳ್ಳಲಿರುವ ಕೃತಿಗಳು ಯಾತ್ರೆ – ಚಂದ್ರಕಾಂತ ಪೋಕಳೆ ವಿಜ್ಞಾನ ಕೌತುಕಗಳ ಮಹಾಯಾನ – ಎಲ್.ಪಿ ಕುಲಕರ್ಣಿ ಹರ್ಷ ರಾಗ – ಪೌಝಿಯಾ ಸಲೀಂ ಹಿತಶತ್ರು – ಪದ್ಮಲತಾ ಮೋಹನ್ ಪುಟ್ಟ ದೇವರ ಕಣ್ಣೀರು – ಸದಾಶಿವ ಸೊರಟೂರು ಬದುಕು…
ಗ್ರಾಹಕರ ವಿಶ್ವಾಸ ಗಳಿಸಲು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪಾರದರ್ಶಕ ಆಡಳಿತ ಅತಿ ಮುಖ್ಯ. ಸಾಲ ಪಡೆದ ಗ್ರಾಹಕರೂ ಸಹ ಸಕಾಲಕ್ಕೆ ಸಾಲ ಮರುಪಾವತಿ ಮಾಡಿದರೆ ಬ್ಯಾಂಕ್ ಪ್ರಗತಿ ಹೊಂದುವುದಲ್ಲದೇ ಇನ್ನೂ ಹೆಚ್ಚಿನ ಗ್ರಾಹಕರಿಗೆ ಸಾಲ ಸೌಲಭ್ಯ ನೀಡಲು ಸಾಧ್ಯವಾಗುತ್ತದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆಯ ಡಾ. ಶಾಮ ಸುಂದರ ಶೆಟ್ಟಿ ಬಂಟರ ಭವನದಲ್ಲಿ ಆಯೋಜಿಸಿದ್ದ ಕರಾವಳಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ರಜತ ಮಹೋತ್ಸವ ಹಾಗೂ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರಿ ಸಂಘ ಅಥವಾ ಬ್ಯಾಂಕ್ 25 ವರ್ಷಗಳ ಸುದೀರ್ಘ ಕಾಲ ನಡೆದುಕೊಂಡು ಬಂದಿರುವುದು ಸಾಮಾನ್ಯದ ಮಾತಲ್ಲ. ಇನ್ನೂ ಅಧಿಕ ಲಾಭ ಗಳಿಕೆಯತ್ತ ಹೆಜ್ಜೆಯನ್ನಿಡಲಿ ಎಂದು ಅವರು ಶುಭ ಹಾರೈಸಿದರು. ಬ್ಯಾಂಕು, ಸಹಕಾರ ಸಂಘಗಳಿಗೆ ಸಾಲಗಾರರೇ ನಿಜವಾದ ಬಂಡವಾಳ. ಉನ್ನತ ಶಿಕ್ಷಣ ವ್ಯಾಸಂಗ ಮಾಡಲಿಚ್ಚಿಸುವ, ಸ್ವಯಂ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಮಹಿಳೆಯರಿಗೆ ಸಾಲ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಪ್ರಯತ್ನಿಸಬೇಕು. ಪ್ರತಿಯೊಬ್ಬರಿಗೂ…
ಕರಾವಳಿಯಲ್ಲಿ ಪ್ರತಿವರ್ಷ ಏನಾದರೂ ಒಂದು ಹೊಸತು ಇದ್ದೇ ಇರುತ್ತದೆ. ಸ್ಥಳೀಯತೆಯನ್ನು ಉಳಿಸಿಕೊಳ್ಳಬೇಕೆನ್ನುವ ಉದ್ದೇಶದಿಂದ ಒಂದು ವರ್ಷ ಮೊಸರು ಕುಡಿಕೆ, ಮತ್ತೊಂದು ವರ್ಷ ಪಿಲಿ ನಲಿಕೆ, ಆನಂತರದ ವರ್ಷ ದೇಸೀ ಕಬಡ್ಡಿ, ಮಗದೊಂದು ವರ್ಷ ಹಗ್ಗ ಜಗ್ಗಾಟ… ಹೀಗೆ ಏನಾದರೂ ಒಂದು ಇಲ್ಲಿ ವಿಜೃಂಭಿಸುತ್ತದೆ. ಕಂಬಳಕ್ಕಂತು ಲೆಕ್ಕವಿಲ್ಲ. ಪಕ್ಷಕ್ಕೊಂದು ರಾಜಕಾರಣಿಗೊಂದು ಇಲ್ಲಿ ಕಂಬಳಗಳಿವೆ. ಹೀಗೆ ನಮ್ಮೂರ ಯುವಕರು ಏನಾದರೊಂದು ಕೂಡುಕೂಟದಲ್ಲಿ ಸಂಭ್ರಮಿಸುತ್ತಲೇ ಇರುತ್ತಾರೆ. ಇಲ್ಲಿಯ ಮಂತ್ರಿಗಳು ಎಮ್ಮೆಲ್ಲೆಗಳು ರಾಜಕಾರಣಿಗಳು ಉದ್ಯಮಿಗಳು ಈ ದೇಸಿ ಸಂಭ್ರಮದಲ್ಲಿ ಪಾಲ್ಗೊಳ್ಳುವುದು, ಆಯೋಜಿಸುವುದು ಎಲ್ಲಾ ಇದ್ದೇ ಇದೆ. ಅವುಗಳ ಲಾಭ ನಷ್ಟ ಧರ್ಮ ಜಾತಿ ವೋಟು ಗೀಟು ಪ್ರಯೋಜನಗಳ ಬಗ್ಗೆ ಪಿಎಚ್ಡಿ ಮಾಡಬಹುದಾದ ವಿಷಯ. ಅದು ಏನೇ ಇರಲಿ, ಈ ಸರಣಿಗೆ ಈ ವರ್ಷ ದೊಡ್ಡಮಟ್ಟದಲ್ಲಿ ಸೇರಿಕೊಂಡದ್ದು ಕೆಸರಿನಲ್ಲಿ ಒಂದು ದಿನ- ಕೆಸರಡೊಂಜಿ ದಿನ! ಕರಾವಳಿಯ ಉದ್ದಕ್ಕೂ ಬೇಸಾಯವಿರುವ, ಇಲ್ಲದ ಗದ್ದೆಗಳನ್ನೆಲ್ಲಾ ಹುಡುಕಿ ಹುಡುಕಿ ಉಳುಮೆ ಮಾಡಿ ಹದಗೊಳಿಸಿ, ಕಟ್ಟಪುಣಿಯಲ್ಲಿ ಚಪ್ಪರ ಎಬ್ಬಿಸಿ ಬಣ್ಣ ಬಣ್ಣದ ಪತ್ರಪತಾಕೆ ಹಾರಿಸಿ…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಬೆಳಕು-ಆಪ್ತ ಸಮಾಲೋಚನಾ ಕೇಂದ್ರ’ವನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಉದ್ಘಾಟಿಸಲಾಯಿತು. ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಭೂಮಿಯಲ್ಲಿರುವ ಎಲ್ಲಾ ಜೀವಿಗಳ ಪೈಕಿ ಮನುಷ್ಯ ಅತ್ಯಂತ ವಿಶೇಷ. ತನ್ನ ಬುದ್ಧಿಶಕ್ತಿ, ಕಲ್ಪನೆ, ನೈತಿಕ ಮೌಲ್ಯಗಳು ಹಾಗೂ ಸಮಾಜವನ್ನು ರೂಪಿಸುವ ಸಾಮರ್ಥ್ಯವು ಮನುಷ್ಯನನ್ನು ಇತರ ಜೀವರಾಶಿಗಳಿಗಿಂತ ಭಿನ್ನಗೊಳಿಸಿದೆ. ಆದರೆ, ಈ ಅಸಾಧಾರಣ ಸಾಮರ್ಥ್ಯಗಳ ಜೊತೆಗೆ ಮನುಷ್ಯ ತನ್ನ ಭಾವನಾತ್ಮಕ ಅಸ್ಥಿರತೆಯ ಬಲೆಗೆ ಸುಲಭವಾಗಿ ಸಿಲುಕ ಬಲ್ಲ ಎಂದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯತ್ನ ಮಾಡುವ ಸಂದರ್ಭಗಳಲ್ಲಿ, ಸ್ಪರ್ಧೆ, ಅತಿಯಾದ ಆಕಾಂಕ್ಷೆ ಹಾಗೂ ಪೋಷಕರ ಒತ್ತಡದಿಂದಾಗಿ ನಿರೀಕ್ಷಿತ ಫಲಿತಾಂಶವನ್ನು ಸಾಧಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭಗಳು ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಈ ಸಮಯದಲ್ಲಿ ಆಪ್ತ ಸಮಾಲೋಚನೆಯ ಅಗತ್ಯತೆಯಿದೆ’ ಎಂದರು. ಸಮಸ್ಯೆಯಿಂದ ಬಳಲುವ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲಕರು ಕೂಡಲೇ…