Author: admin

ಫರಂಗಿಪೇಟೆ ವಲಯ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಕೊಟ್ಟಿಂಜ ಗುತ್ತು ಇವರು ನಿಯುಕ್ತಿಗೊಂಡಿದ್ದಾರೆ. ಉದ್ಯಮಿಯಾಗಿರುವ ವಿಶ್ವನಾಥ ಶೆಟ್ಟಿಯವರು ಕ್ರಿಯಾಶೀಲತೆಯ ಬಹುಮುಖ ವ್ಯಕ್ತಿತ್ವದ ನಾಯಕತ್ವ ಗುಣಗಳನ್ನು ಹೊಂದಿರುವ ಸಂಘಟನಾ ಚತುರ. ಧಾರ್ಮಿಕ ಮುಖಂಡರಾಗಿಯೂ, ಸಮಾಜಸೇವಕರಾಗಿಯೂ ಪ್ರಸಿದ್ದಿ ಪಡೆದಿರುವ ಇವರು ಪ್ರತಿಷ್ಟಿತ ಬಂಟ್ವಾಳ ತಾಲೂಕಿನ ಕೊಟ್ಟಿಂಜ ಗುತ್ತು ಮನೆತನದವರು.

Read More

ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ (ಐಆರ್‌ಸಿಎಸ್) ದ.ಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡದ ಉದ್ಘಾಟನಾ ಸಮಾರಂಭ ಜುಲೈ 26ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ. ಕರ್ನಾಟಕದ ರಾಜ್ಯಪಾಲ ಹಾಗೂ ಐಆರ್‌ಸಿಎಸ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ನಿಟ್ಟೆ ಪರಿಗಣಿತ ವಿ.ವಿ.ಯ ಕುಲಾಧಿಪತಿ ಎನ್. ವಿನಯ ಹೆಗ್ಡೆ, ಐಆರ್‌ಸಿಎಸ್ ರಾಜ್ಯ ಘಟಕದ ಚೇರ್ಮನ್ ಬಸ್ರೂರು ರಾಜೀವ ಶೆಟ್ಟಿ, ಉಪಾಧ್ಯಕ್ಷ ಭಾಸ್ಕರ ರಾವ್ ಐಪಿಎಸ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಐಆರ್‌ಸಿಎಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುಮಾರು 20 ಸಾವಿರ ಚದರ…

Read More

ಜುಲೈ 20 ರಂದು ಬೈಂದೂರು ಬಂಟರ ಸಂಘದ ಮೂವತ್ತರ ಸಂಭ್ರಮದ ಪೂರ್ವಸಿದ್ಧತೆಯ ಸಭೆ ಜಯಶ್ರೀ ಸಭಾಭವನ ಹೆಮ್ಮಾಡಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆಯವರು ಸಭೆಯನ್ನುದ್ದೇಶಿಸಿ ಮಾತನಾಡಿ, ಸ್ವಾಗತಿಸಿ ಕಾರ್ಯಕ್ರಮದ ಪಕ್ಷಿ ನೋಟವನ್ನು ನೀಡಿದರು. 30ರ ಸಂಭ್ರಮದ ಎಲ್ಲಾ ಸಂಚಾಲಕರು ಭಾಗವಹಿಸಿ ತಮ್ಮ ಸಿದ್ಧತೆಯ ಪೂರ್ವ ತಯಾರಿಯನ್ನು ಸಭೆಗೆ ತಿಳಿಸಿದರು. ವಿಶೇಷವಾಗಿ ಆರ್ಥಿಕ ಕ್ರೋಡೀಕರಣ ವಿವಿಧ ಕೌಂಟರ್‌ಗಳ ಸಿದ್ಧತೆ, ವಸತಿ ಆಹಾರದ ವ್ಯವಸ್ಥೆ, ಕಚೇರಿ ನಿರ್ವಹಣೆ, ಸ್ವಯಂಸೇವಕ ವ್ಯವಸ್ಥೆ, ವೇದಿಕೆ ವ್ಯವಸ್ಥೆ, ಉಟೋಪಚಾರ ಕುರಿತು ಸಮಗ್ರ ಚರ್ಚೆ ನಡೆಯಿತು.

Read More

ಶಿಕ್ಷಕ, ಸಂಘಟಕ ಹಾಗೂ ಪ್ರಗತಿಪರ ಕೃಷಿಕ ಕೆ. ರವೀಂದ್ರ ರೈ ಕಲ್ಲಿಮಾರ್‌ ಅವರು ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ೩೪ ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಅವರು ಹರೇಕಳ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದವರು. ಕೊಳ್ನಾಡು ಗ್ರಾಮದ ಸಾಲೆತ್ತೂರು ಕುಳಾಲು ದಿ. ವಿಠಲ್‌ ರೈ ಮತ್ತು ದಿ. ಸುಂದರಿ ರೈ ದಂಪತಿಯ ಹಿರಿಯ ಪುತ್ರನಾಗಿರುವ ರವೀಂದ್ರ ರೈ ಕನ್ಯಾನ ಹೈಸ್ಕೂಲ್‌ ನಲ್ಲಿ ಪ್ರೌಢ ಶಿಕ್ಷಣ, ಮಂಗಳೂರು ಕೆನರಾ ಕಾಲೇಜಿನಲ್ಲಿ ಪಿಯುಸಿ ಮತ್ತು ಡಿಗ್ರಿ ಪೂರೈಸಿ, ಸರಕಾರಿ ಕಾಲೇಜಿನಲ್ಲಿ ಬಿ.ಎಡ್‌. ಪದವಿ ಪಡೆದರು. ಬಳಿಕ ಮೈಸೂರು ವಿ.ವಿ.ಯಲ್ಲಿ ಎಂ.ಎ. ಸ್ನಾತಕೋತ್ತರ ಪದವಿಯನ್ನೂ ಪೂರೈಸಿದರು. ತನ್ನ ಅಜ್ಜ ವಿದ್ವಾನ್‌ ಕೆ. ಕಾಂತ ರೈ ಅವರು ಅಧ್ಯಾಪಕರಾಗಿದ್ದ ಮೂಡಬಿದ್ರೆ ಜೈನ್‌ ಹೈಸ್ಕೂಲಿನಲ್ಲಿ ಒಂದು ವರ್ಷ ಉಚಿತ ಸೇವೆ ಸಲ್ಲಿಸಿದರು. ಅಜ್ಜನ ಮಾರ್ಗದರ್ಶನದಲ್ಲಿ ಶಿಕ್ಷಕ ವೃತ್ತಿ ಪ್ರವೇಶಿಸಿ ೧೯೮೩ ರಲ್ಲಿ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಗೆ ಸೇರಿದರು. ಸಂಪನ್ಮೂಲ…

Read More

ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಆಗೋಸ್ಟ್ 3 ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮುಂಬೈ ವಿ.ಕೆ ಗ್ರೂಪ್ಸ್ ನ ಆಡಳಿತ ನಿರ್ದೇಶಕ, ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಛೇರ್ಮನ್ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಮೊಂಟೆಪದವು ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಡಾ| ಮಂಜುಳಾ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ದ.ಕ ಜಿಲ್ಲಾ ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಹೆಜಮಾಡಿ ಶಾರದಾ ಡೆವಲಪರ್ಸ್ ನ ಮಾಲಕ ಪ್ರೇಮನಾಥ್ ಎಂ ಶೆಟ್ಟಿ, ಮಲ್ಲಿಕಾ ಯಶವಂತ ಶೆಟ್ಟಿ ಬಳ್ಕುಂಜೆಗುತ್ತು ಬಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಳ ಜಗನ್ನಾಥ…

Read More

ಬಂಟ ಸಮುದಾಯದ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವ ಮಹಾರಾಷ್ಟ್ರ ಶಾಸಕ ಸಂಜಯ್ ಗಾಯಕ್ವಾಡ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಜುಲೈ 14ರ ಸೋಮವಾರದಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಸುಮಾರು 60 ಬಂಟರ ಸಂಘಗಳ ಪ್ರತಿನಿಧಿಗಳು ಮತ್ತು ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತಿತರ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ತಮ್ಮ ಬೇಡಿಕೆಯ ಮನವಿಯನ್ನು ರವಾನಿಸಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಆಗಮಿಸಿ ಬಂಟ ಸಮಾಜವನ್ನು ಮತ್ತು ಬಂಟ ಸಮಾಜದ ಬಂಧುಗಳು ನಡೆಸುತ್ತಿರುವ ಹೋಟೆಲುಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದವರು. ಇದೀಗ ಅವರ ಪಕ್ಷದ ಶಾಸಕರಿಂದಲೇ ಬಂಟ ಸಮಾಜದ ಮೇಲೆ ನಡೆದಿರುವ ಅವಮಾನದ ಹೇಳಿಕೆಗಳು ಸಮಾಜಕ್ಕೆ ನೋವನ್ನು ತಂದಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಕೋಟ್ಯಾಂತರ ರೂಪಾಯಿಯಲ್ಲಿ ಬಂಟ ಸಮಾಜದ ಉದ್ಯಮದ…

Read More

ಶಿಯಾನ ಪ್ರೊಡಕ್ಷನ್ ಬ್ಯಾನರ್ ನಡಿಯಲ್ಲಿ ತಯಾರಾದ ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ನಿರ್ದೇಶನದ ವಿಭಿನ್ನ ತಂತ್ರಜ್ಞಾನದಿಂದ ಕೂಡಿದ “ಪಿಲಿ ಪಂಜ” ತುಳು ಸಿನಿಮಾ ನವೆಂಬರ್ 7 ರ ಬದಲು ಡಿಸೆಂಬರ್ 12ಕ್ಕೆ ಬಿಡುಗಡೆಯಾಗಲಿದೆ. ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ನವೆಂಬರ್ 14ಕ್ಕೆ ಬಿಡುಗಡೆಯಾಗುವುದರಿಂದ ತುಳು ಸಿನಿಮಾದಲ್ಲಿ ಪೈಪೋಟಿ ಸಲ್ಲದು ಎಂದು ಮನಗಂಡು ಪಿಲಿ ಪಂಜ ಸಿನಿಮಾ ಬಿಡುಗಡೆಯ ದಿನಾಂಕವನ್ನು ಡಿಸೆಂಬರ್ 12ಕ್ಕೆ ಮುಂದೂಡಿತು. ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರು ಬಿಡುಗಡೆ ದಿನಾಂಕವನ್ನು ಬದಲಾವಣೆ ಮಾಡುವುದರ ಮುಖೇನ ಇದೊಂದು ಉತ್ತಮ ಬೆಳವಣಿಗೆ. ಪಿಲಿ ಪಂಜ ತಂಡದ ಉತ್ತಮ ನಿರ್ಧಾರವನ್ನು ಸ್ವಾಗತಿಸುತ್ತಾ ನಮ್ಮ ಜೈ ಚಿತ್ರ ತಂಡ ಪಿಲಿ ಪಂಜ ಚಿತ್ರತಂಡಕ್ಕೆ ಬೆಂಬಲ ಕೊಡುತ್ತೇವೆ. ಎಲ್ಲಾ ಸಿನಿಮಾ ಪ್ರೇಕ್ಷಕರು ಪಿಲಿ ಪಂಜ ಚಿತ್ರ ತಂಡವನ್ನು ಬೆಂಬಲಿಸಿ ಸಿನಿಮಾವನ್ನು ಗೆಲ್ಲಿಸಬೇಕು ಎಂದು ಹೇಳುತ್ತಾ ಚಿತ್ರ ತಂಡಕ್ಕೆ ಶುಭ ಕೋರಿದರು. ಈ ಸಂಧರ್ಭ ನಿರ್ಮಾಪಕ ಪ್ರತೀಕ್ ಯು…

Read More

ಜೀವನದ ಕರ್ಮಯೋಗದ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಭಗವದ್ಗೀತೆಯ ಸಾರ ಮಹತ್ತರ ಪಾತ್ರವನ್ನು ವಹಿಸುತ್ತದೆ. ಭಗವದ್ಗೀತೆ ಸಾಮಾನ್ಯ ಮನುಷ್ಯನಿಗೆ ಜೀವನದ ಸೂತ್ರ, ಮಾರ್ಗದರ್ಶನ ಹಾಗೂ ನೀತಿ ಭೋಧನೆಯನ್ನು ಸಾರುತ್ತಿದೆ ಎಂದು ವಿಧ್ವಾನ್ ರಾಧಾಕೃಷ್ಣ ಭಟ್ ರವರು ವ್ಯಾಖ್ಯಾನಿಸಿದರು. ಅವರು ವೀರಕೇಸರಿ ಸಂಘದವರು ದ್ವಿತೀಯ ವರ್ಷದಲ್ಲಿ ಭಯಂದರ್ ಸೈಂಟ್ ಅಗ್ನೇಸಿಯಸ್ ಸ್ಕೂಲ್ ಸಭಾಗೃಹದಲ್ಲಿ ಜುಲೈ 20 ರಂದು ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಆಯೋಜಿಸಿದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆಗೆ ಚಾಲನೆ ನೀಡಿ ನುಡಿದರು. ಹಲವಾರು ಅವತಾರವೆತ್ತ ಶ್ರೀಕೃಷ್ಣ, ಮಹಾಭಾರತದಲ್ಲಿ ಅರ್ಜುನನಿಗೆ ಭೋಧಿಸಿದ ಹಾಗೂ ಮಾನವನ ಜೀವನಕ್ಕೆ ಪವಿತ್ರ ಗ್ರಂಥವಾಗಿರುವ ಭಗವದ್ಗೀತೆಯ ಅನುಕರಣೆಯಿಂದ ಜೀವನ ಸಾರ್ಥಕವಾಗಬಹುದು. ಮಹಾತ್ಮ ಗಾಂಧಿ, ಬಾಲಗಂಗಾಧರ ತಿಲಕ, ಸುಭಾಸ್ ಚಂದ್ರಭೋಸ್ ರಂತಹ ಮಹಾನ್ ಮತ್ತು ಆದ್ಯಾತ್ಮಿಕ ಗುರುಗಳು ಭಗವದ್ಗೀತೆಯ ಸಾರವನ್ನು ಪಠಿಸಿದ್ದಾರೆ. ಇದು ಹಿಂದೂ ಧರ್ಮದರಿಗೆ ಮಾತ್ರ ಸೀಮಿತವಲ್ಲ. ಜಗತ್ತಿನ ಎಲ್ಲಾ ಧರ್ಮದವರಿಗೂ ಅನ್ವಯವಾಗಬಹುದು ಎಂದು ಅವರು ತಿಳಿಸಿದರು. ಸಮಾರಂಭಕ್ಕೆ ಅತಿಥಿಯಾಗಿ ಅಗಮಿಸಿದ ಬಂಟರ ಸಂಘ ಮುಂಬಯಿ ಇದರ ಮೀರಾ ಭಯಂದರ್ ಪ್ರಾದೇಶಿಕ…

Read More

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಅಂಗನವಾಡಿ ಕೇಂದ್ರ ಕೋಟೆ ಸೂರಿಂಜೆ, ಲಯನ್ಸ್ ಕ್ಲಬ್ ಸುರತ್ಕಲ್, ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಮತ್ತು ನಾಯರ್ ಕೋಡಿ ಫ್ರೆಂಡ್ಸ್ ಸರ್ಕಲ್ ಸಹಯೋಗದೊಂದಿಗೆ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಕೋಟೆ ಸೂರಿಂಜೆ ಅಂಗನವಾಡಿಯಲ್ಲಿ ಜರುಗಿತು. ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಸೂರಿಂಜೆ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಜಾಕ್, ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಉಪಾಧ್ಯಕ್ಷ ನಾಗರಾಜ್ ಕಡಂಬೋಡಿ, ಪ್ರಧಾನ ಕಾರ್ಯದರ್ಶಿ ಕಿರಣ್ ಅಚಾರ್ಯ, ಸದಸ್ಯರಾದ ಕುಶಾಲ್ ಎಂ, ಸಂತೋಷ್ ಬೇಕಲ್, ರಾಜೇಶ್, ಗಿರೀಶ್ ಕೋಟೆ, ಪುಷ್ಪರಾಜ್ ಶೆಟ್ಟಿ ಮಧ್ಯ, ಲಯನ್ ಮೊಯಿದಿನ್ ಕುಂಙ, ಲಯನ್ ಅಲ್ವಿನ್ ನೊರೊನಾ, ಲಯನ್ ರಾಜಯ್ಯ, ಕಾಟಿಪಳ್ಳ ಅರೋಗ್ಯ ಇಲಾಖೆ ಹಿರಿಯ ಸಹಾಯಕಿ ನಾಗರತ್ನ , ಅಂಗನವಾಡಿ…

Read More

ಕಳೆದ ಐದು ದಶಕಗಳಿಂದ ಮುಂಬೈಯಲ್ಲಿ ಊರು ಪರವೂರಿನ ಬೇರೆ ಬೇರೆ ಮೇಳಗಳ, ತಂಡಗಳ ಸಾವಿರಾರು ತೆಂಕು ಬಡಗು ಯಕ್ಷಗಾನ ಬಯಲಾಟ, ತಾಳಮದ್ದಳೆ, ನಾಟಕಗಳನ್ನು ವೀಕ್ಷಣೆ ಮಾಡಿರುವ ಅಪೂರ್ವ ಕಲಾಭಿಮಾನಿ, ಕಲಾ ವಿಮರ್ಶಕ ಭಾಸ್ಕರ ಶೆಟ್ಟಿ ಕಾಜುಪಾಡ ಅವರನ್ನು ಕುರ್ಲಾ ಜೆರಿಮೆರಿ ಕನ್ನಡ ಸಂಘದಲ್ಲಿ ನಡೆದ “ಶನೀಶ್ವರ ಮಹಾತ್ಮೆ” ಯಕ್ಷಗಾನ ಕಾರ್ಯಕ್ರಮದಲ್ಲಿ “ಕಲಾವಲ್ಲಭ” ಬಿರುದು ನೀಡಿ ಅಭಿನಂದಿಸಲಾಯಿತು. ಉದ್ಯಮಿ ರವೀಂದ್ರನಾಥ ಭಂಡಾರಿ ಅವರು ಅಧ್ಯಕ್ಷತೆ ವಹಿಸಿದ್ದರು. ಮುಂಬೈಯ ಕಳೆದ ಐದು ದಶಕಗಳ ಸಾಂಸ್ಕೃತಿಕ, ಸಾಮಾಜಿಕ ಸ್ಥಿತಿ ಗತಿಗಳ ಅಪೂರ್ವ ಅನುಭವ ಸಂಪನ್ನ ಭಾಸ್ಕರ ಶೆಟ್ಟಿ ಅವರು ಪಕ್ಷಿಕೆರೆ ಶನೀಶ್ವರ ಮಂಡಳಿಯ ಮುಂಬೈಯ ಆರು ಯಕ್ಷಯಾನ ವೀಕ್ಷಣೆ ಮಾಡಿ ಪ್ರೋತ್ಸಾಹ ನೀಡಿದವರು. ಖಳ ಪಾತ್ರಗಳನ್ನು ನಿರ್ವಹಿಸುತ್ತಿರುವ ಕಲಾವಿದರ ಮಹಾ ಅಭಿಮಾನಿ ಆಗಿರುವುದು ಇವರ ವಿಶೇಷತೆ ಎಂದು ಕದ್ರಿ ನವನೀತ ಶೆಟ್ಟಿ ಅಭಿನಂದಿಸಿದರು. ಶ್ಯಾಮ್ ಸಾಲಿಯಾನ್, ಹಿರಿಯ ರಂಗ ನಟ ಉಮೇಶ್ ಶೆಟ್ಟಿ, ನಾಗೇಶ್ ಪೂಜಾರಿ, ನಿತ್ಯಾನಂದ ಗುರು ಸ್ವಾಮಿ, ಹೇಮಂತ ಶೆಟ್ಟಿ ಕಾವೂರು ಗುತ್ತು,…

Read More