Author: admin
ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರ ನೂತನ ಅಧ್ಯಕ್ಷರಾಗಿ ತಾಲೂಕು ಯುವ ಬಂಟರ ಸಂಘದ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಉದಯ ಕುಮಾರ ಶೆಟ್ಟಿ ಮಚ್ಚಟ್ಟು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಉಪನ್ಯಾಸಕ ವೆಂಕಟರಮಣ ನಾಯಕ್ ಬೈಂದೂರು, ಕೋಶಾಧಿಕಾರಿಯಾಗಿ ಅಂಪಾರು ಸಂಜಯ ಗಾಂಧಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಉದಯಕುಮಾರ್ ಆಯ್ಕೆಯಾಗಿದ್ದಾರೆ ಎಂದು ಕ್ಲಬ್ ನ ಪ್ರಕಟಣೆ ತಿಳಿಸಿದೆ.
ನಿವೃತ್ತ ಪ್ರಾಧ್ಯಾಪಕ, ಸಾಹಿತಿ, ಅರ್ಥಧಾರಿ ಮತ್ತು ಮಾಧ್ಯಮ ತಜ್ಞ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಮೇ 24 ರಂದು ಪುತ್ತೂರು ತಾಲೂಕು ಬೆಟ್ಟಂಪಾಡಿಯಲ್ಲಿ ‘ಹುಟ್ಟೂರ ಸಮ್ಮಾನ’ ಜರಗಲಿದೆ. ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪತ್ತನಾಜೆ ಉತ್ಸವ ಸಂದರ್ಭ ಜರಗುವ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವ ಸಲುವಾಗಿ ಕ್ಷೇತ್ರದ ‘ಬಿಳ್ವ ಶ್ರೀ’ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಬಹುಮುಖೀ ಸಾಧಕ ಭಾಸ್ಕರ ರೈ ಕುಕ್ಕುವಳ್ಳಿ: ಯಕ್ಷಗಾನ, ಸಾಹಿತ್ಯ, ಶಿಕ್ಷಣ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರು ವಿರಳ ಪಂಕ್ತಿಗೆ ಸೇರಿದ ಓರ್ವ ಬಹುಶ್ರುತ ವಿದ್ವಾಂಸರು. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪ್ರತಿಷ್ಠಿತ ಬಾಲ್ಯೊಟ್ಟು ಗುತ್ತು ಇರ್ದೆ ಬೆಟ್ಟಂಪಾಡಿಯಲ್ಲಿ ದಿ. ಕಲ್ಲಡ್ಕ ಕರಿಯಪ್ಪ ರೈ ಮತ್ತು ಗಿರಿಜಾ ರೈ ಕುಕ್ಕುವಳ್ಳಿ ದಂಪತಿಯ ಸುಪುತ್ರರು. ದರ್ಬೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪ್ರಾರಂಭಿಸಿ, ಪ್ರೌಢ ಶಿಕ್ಷಣವನ್ನು ಬೆಟ್ಟಂಪಾಡಿಯ ನವೋದಯ ಪ್ರೌಢಶಾಲೆ ಮತ್ತು ಕಾಲೇಜು…
ಮೂಡುಬಿದಿರೆ: ಸಂಚಾರ ನಿಯಮ ಪಾಲಿಸಿಕೊಂಡು ವಾಹನ ಚಲಾಯಿಸಿದರೆ, ಅಪಘಾತ ತಡೆಗಟ್ಟಲು ಸಾಧ್ಯ ಎಂದು ಎಚ್ಎಸ್ಇ ಆ್ಯಂಡ್ ಟಿ ಏಷಿಯಾ ಫೆಸಿಫಿಕ್ ವ್ಯವಸ್ಥಾಪಕ ಸಂಜಯ್ ಕರಾಜಗಿಕರ್ ಹೇಳಿದರು ಆಳ್ವಾಸ್ ಎಂಜಿನಿಯರಿಂಗ್ ಹಾಗೂ ತಂತ್ರಜ್ಞಾನ ಕಾಲೇಜಿನ ಶೋಭಾವನ ಸಭಾಂಗಣದಲ್ಲಿ ಬುಧವಾರ ಒಶಾಯಿ ಫೌಂಡೇಷನ್ ಹಾಗೂ ಬಿಎಸಿಸಿಇ ಫೌಂಡೇಷನ್ ಸಹಯೋಗದಲ್ಲಿ ನಡೆದ ಸೇಫ್ಟಿ ಹ್ಯಾಕಥಾನ್- ‘ಜಾಗೃತಿ -2024’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಾಹನದಲ್ಲಿ ಪ್ರಯಾಣಿಸುವಾಗ ಪ್ರತಿಯೊಬ್ಬರೂ ಸೀಟ್ ಬೆಲ್ಟ್ ಧರಿಸಬೇಕು. ಇದರಿಂದ ಅವಘಡದ ಪರಿಣಾಮವನ್ನು ಶೇ50 ರಷ್ಟು ತಡೆಗಟ್ಟಬಹುದು ಎಂದರು. ಪ್ರತಿದಿನವೂ ನಾವು ಸ್ವ ಸುರಕ್ಷತೆಯನ್ನು ಮಾಡಿಕೊಳ್ಳಬೇಕು. ನಮ್ಮ ಸುತ್ತಮುತ್ತಲು ಸುರಕ್ಷತೆಯ ಅನುಸರಿಸುವಂತೆ ಜಾಗೃತಿ ಮೂಡಿಸಬೇಕು ಎಂದರು. ಬದುಕಿನಲ್ಲಿ ನೀತಿ ನಿಯಮವನ್ನು ಪಾಲಿಸುವುದರಿಂದ, ಉನ್ನತ ಸ್ಥಾನಕ್ಕೆ ತಲುಪಬಹುದು. ಸುರಕ್ಷತಾ ಭಾವನೆಯನ್ನು ಮೂಡಿಸಬಹುದು ಎಂದರು. ಎಸ್ಎಫ್ಇಜಿಒ ಮತ್ತು ಒಶಾಯಿ ಫೌಂಡೇಷನ್ ನಿರ್ದೇಶಕ ಅವ್ದೇಶ್ ಮಲಯ್ಯಾ ಮಾತನಾಡಿ, ಮನುಷ್ಯ ಸಂಪನ್ಮೂಲವಾಗಿದ್ದು, ಅವನ ಜೀವವನ್ನು ಉಳಿಸುವುದರಿಂದ ಸಮಾಜ ಮತ್ತು ದೇಶ ಅಭಿವೃದ್ಧಿ ಸಾಧ್ಯ ಹಾಗೂ ಮನುಷ್ಯ ಸತ್ತಾಗ ಮಾತ್ರ ಅವನ…
ಬ್ರಹ್ಮಾವರ ಮೇ 23: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಸಂಸ್ಥೆಯ ಶಿಕ್ಷಕರಿಗೆ ನೂತನ ಪಠ್ಯಕ್ರಮ ‘ಓರಿಯೆಂಟ್ ಬ್ಲ್ಯಾಕ್ಸ್ವಾನ್’ ಕುರಿತು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಅಂತರಾಷ್ಟ್ರೀಯ ಮಟ್ಟದ ತರಬೇತುದಾರ ಜಾನ್ ನೌಗ್ಸಾರಿಯಾ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಅವರು ನೂತನ ಪಠ್ಯಕ್ರಮದ ಗುರಿ, ಉದ್ದೇಶ, ಬೋಧನೆ, ಕಲಿಕಾ ಉಪಕರಣಗಳು ಮತ್ತು ಮೌಲ್ಯಮಾಪನದ ಕುರಿತು ತರಬೇತಿ ನೀಡಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಇಂದು ಶಾಲೆಗಳಲ್ಲಿವಿವಿಧ ಪ್ರಕಾಶನ ಪುಸ್ತಕಗಳನ್ನು ಪಠ್ಯಕ್ರಮದಲ್ಲಿ ಬಳಸುತ್ತಿದ್ದು ಶಿಕ್ಷಕರಿಗೆ ಅವುಗಳ ಬೋಧನೆಯ ಅರಿವಿದ್ದರೆ ಮಾತ್ರ ಮಕ್ಕಳಲ್ಲಿ ಪರಿಪೂರ್ಣ ಕಲಿಕೆ ಸಾಧ್ಯ, ಜಿ ಎಮ್ ಅತ್ಯಾಧುನಿಕ ಪಠ್ಯಕ್ರಮದ ಜೊತೆಗೆ ಶಿಕ್ಷಕರಿಗೆ ಪರಿಣಾಮಕಾರಿ ಬೋಧನೆಯ ತರಬೇತಿಯನ್ನು ನೀಡುತ್ತಿದೆ ಎಂದರು. ಕಾರ್ಯಾಗಾರದಲ್ಲಿ ‘ಓರಿಯೆಂಟ್ ಬ್ಲ್ಯಾಕ್ಸ್ವಾನ್’ ನ ಚೇತನ್, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
2023-2024 ನೇ ಶೈಕ್ಷಣಿಕ ಸಾಲಿನ 12 ನೇಯ ತರಗತಿಯ ಪರೀಕ್ಷಾ ಫಲಿತಾಂಶದಲ್ಲಿ ವಸಾಯಿ ವರ್ತಕ್ ಕಾಲೇಜಿನ ವಿದ್ಯಾರ್ಥಿ ಲಕ್ಷ ಎಸ್ ಶೆಟ್ಟಿಗೆ ಶೇ 85.17 ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ. ಈತ ಸಾಣೂರು ಹೊಸಮನೆ ಸುರೇಶ್ ಎಂ ಶೆಟ್ಟಿ ಹಾಗೂ ಕರ್ನಿರೆ ಹೊಸಮನೆ ಲೋಲಾಕ್ಷಿ ಎಸ್ ಶೆಟ್ಟಿ ದಂಪತಿಯ ಸುಪುತ್ರ.
ವಿಶ್ವ ಬಂಟರ ಐಕ್ಯತೆಯಲ್ಲಿ ಮೌನ ಕ್ರಾಂತಿ ಮಾಡಿದ ಮಾಧ್ಯಮ ಸಂಸ್ಥೆ ಬಂಟ್ಸ್ ನೌ – ಪ್ರವೀಣ್ ಭೋಜ ಶೆಟ್ಟಿ ಶ್ಲಾಘನೆ
ಇತ್ತೀಚೆಗೆ ಮಂಗಳೂರು ನಗರದ ಪುರಭವನದಲ್ಲಿ ನಡೆದ ಅದ್ದೂರಿಯ ಕಾರ್ಯಕ್ರಮ ಅಂತರ್ಜಾಲ ಮಾಧ್ಯಮ ಸಂಸ್ಥೆ ಬಂಟ್ಸ್ ನೌ ತಾನು ಒಂದೂವರೆ ದಶಕ ಪೂರೈಸಿದ ಸಂಭ್ರಮವನ್ನು ತ್ರಿಪಂಚಕ ಅನುಬಂಧ ಎಂಬ ವಿಶೇಷ ಶೀರ್ಷಿಕೆಯಡಿ ದೇಶ ವಿದೇಶಗಳ ಪ್ರತಿಷ್ಠಿತ ಘಟಾನುಘಟಿ ಬಂಟ ನಾಯಕರ ಉಪಸ್ಥಿತಿಯಲ್ಲಿ ವಿಜೃಭಣೆಯಿಂದ ಆಚರಿಸಿ ಜಾಗತಿಕ ಮಟ್ಟದ ಬಂಟ ವಲಯದಲ್ಲಿ ಹೊಸ ಸಂಚಲನ ಉಂಟು ಮಾಡಿದೆ. ಅಂದು ವಿವಿಧ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆಗೈದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ಬಂಟ ನಾಯಕ ಮಣಿಗಳನ್ನು ಬಂಟರತ್ನ, ಬಂಟ ವಿಭೂಷಣ ಹಾಗೂ ಯುವ ಬಂಟ ರತ್ನ ಪ್ರಶಸ್ತಿಗಳನ್ನು ನೀಡಿ ಗೌರವಿಸುವ ಜೊತೆಗೆ ಕೆಲವು ವಿಶಿಷ್ಟ ಕ್ಷೇತ್ರಗಳಲ್ಲಿ ಸಾಧನೆ ತೋರಿ ಗಮನ ಸೆಳೆಯುತ್ತಿರುವ ವ್ಯಕ್ತಿಗಳನ್ನು ಗಣ್ಯಾತಿಗಣ್ಯರ ಸಮಕ್ಷಮದಲ್ಲಿ ಸತ್ಕರಿಸಿ ಸ್ಮರಣಿಕೆ ನೀಡಲಾಯಿತು. ರಂಜಿತ್ ಶೆಟ್ಟಿ ಸ್ಥಾಪಿಸಿ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿರುವ ಬಂಟ್ಸ್ ನೌ ಅಂತರ್ಜಾಲ ಮಾಧ್ಯಮ ಬಂಟ ಬಾಂಧವರ ಚಟುವಟಿಕೆಗಳನ್ನು ಎಚ್ಚರಿಕೆ ಕಣ್ಣುಗಳಿಂದ ಗಮನಿಸುತ್ತಾ ವರದಿ ಮಾಡುವುದರ ಜೊತೆಗೆ ವಿಶೇಷ ಸುದ್ಧಿಗಳು, ವೈಚಾರಿಕ ಸಾಂದರ್ಭಿಕ ಲೇಖನಗಳು, ಅಂಕಣ…
ತುಳುನಾಡ ನುಡಿ ಸಂಸ್ಕೃತಿ ಸಂಸ್ಕಾರ ಬದ್ಕ್ ನ್ ಮುಡೆದ್ ಕೊರಿನ “ಧರ್ಮದೈವ” ಸಿನಿಮಾದ ಅಧಿಕೃತ ಆಫಿಶಿಯಲ್ ಪೋಸ್ಟರ್ ನೆನ್ನ್, ಶಿಕ್ಷಣ, ಕಲೆ, ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಇಂಚನೇ ಅವೇತೋ ಸಾಧನೆಲೆಗ್ ಕಾರಣವಾದ್ ಇನಿ ಲೋಕೊರ್ಮೆ ಪುದಾರ್ ಪಡೆಯಿನ ಮೂಡುಬಿದಿರೆ ಆಳ್ವಾಸ್ ಕಾಲೇಜಿದ ಸಂಸ್ಥಾಪಕ ಮುಖ್ಯೆಸ್ಥೆರ್ ಶ್ರೀ ಡಾ. ಎಂ. ಮೋಹನ್ ಆಳ್ವ ಮೂಡಬಿದಿರೆ, ಲೋಕಾರ್ಪಣೆ ಮಲ್ತ್ ದ್ “ಚಿತ್ರ ಲೋಕೊರ್ಮೆ ಬೆಳಗಡ್ಂದ್ ಎಡ್ಡೆಪ್ಪುದ ಮದಿಪು ಕೊರ್ಯೆರ್. ಮಾಂತಾ ಯುವಕೆರೇ ಕೂಡ್ದು ಮಲ್ತಿನ “ಧರ್ಮದೈವ” ಸಿನಿಮಾದ ನಿರ್ಮಾಪಕೆರ್ ಶ್ರೀ ಬಿಳಿಯೂರು ರಾಕೇಶ್ ಭೋಜರಾಜ ಶೆಟ್ಟಿ, ಕಥೆ ಬರೆದ್ ನಿರ್ದೇಶನ ಮಲ್ತಿನಾರ್ ಪ್ರಶಸ್ತಿ ಪುರಸ್ಕೃತ ಯುವ ನಿರ್ದೇಶಕೆ ಶ್ರೀ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು, ಖ್ಯಾತ ರಂಗನಟೆ ವಿಕ್ರಾಂತ ಸೇರ್ದ್ ತುಳು-ಕನ್ನಡ ಇಂಚ ಸುಮಾರ್ 60-69 ಸಿನಿಮೊಲೆಡ್ ನಟನೆ ಮಲ್ತಿನ ಶ್ರೀ ರಮೇಶ್ ರೈ ಕುಕ್ಕುವಳ್ಳಿ ಸೇರಿನಂಚ, ಹಿರಿಯ ಯುವ ಕಲಾವಿದೆರ್ ನಟನೆ ಮಲ್ತಿನ ಎಡ್ಡೆ ಸಂಗೀತೊ ಪದೊ ತಂತ್ರಜ್ಞಾನ ಕೌಶಲ್ಯ ಪಡೆಯಿನ…
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ “ಪಟ್ಲ ಸಂಭ್ರಮ” ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್ ನ ಎಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಸಕ್ರೀಯವಾಗಿ ಭಾಗವಹಿಸುವಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಪಟ್ಲ ಸಂಭ್ರಮ ಕಾರ್ಯಕ್ರಮದ ಕುರಿತು ಪತ್ತುಮುಡಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಪಟ್ಲ ಸಂಭ್ರಮ” ಕಲಾವಿದರಿಗೆ ಕಲಾಪೋಷಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಎಲ್ಲರೂ ದುಡಿಯಬೇಕು. ಹೀಗಾಗಲೇ ಎಲ್ಲಾ ಘಟಕಗಳು ಆಮಂತ್ರಣ ಪತ್ರವನ್ನು ವಿತರಿಸುವ ಕೆಲಸ ಮಾಡಿದೆ. 2024 ರ ಸಾಲಿನ ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು ಬಡಗುತಿಟ್ಟಿನ ಕಲಾವಿದ ರಾಮಚಂದ್ರ ಹೆಗಡೆ ಕೊಂಡದಕುಳಿ ಪಡೆಯಲಿದ್ದಾರೆ. ಸಮಾರಂಭದಲ್ಲಿ ಚಲನಚಿತ್ರ ನಟ ಕಿಚ್ಚ ಸುದೀಪ್ ಭಾಗವಹಿಸುವುದು ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಲಿದೆ ಎಂದರು. ಸಮಾರಂಭದಲ್ಲಿ ಹಿರಿಯ ಅರ್ಥದಾರಿ ಪ್ರಭಾಕರ ಜೋಷಿ ಭಾಗವಹಿಸಿ ಸಲಹೆ ಸೂಚನೆ ನೀಡಿದರು. ಭುಜಬಲಿ ಧರ್ಮಸ್ಥಳ, ಸರಪಾಡಿ ಅಶೋಕ್ ಶೆಟ್ಟಿ, ಚಂದ್ರಹಾಸ…
ಮೂಡುಬಿದಿರೆ: ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಫ್ನಲ್ಲಿ ಆಳ್ವಾಸ್ ಕಾಲೇಜು ಪ್ರಶಸ್ತಿ ಜಯಭೇರಿಯಾಗಿದೆ. ಸತತ 18ನೇ ಬಾರಿ ದಿ. ಫ್ಯಾಬಿಯನ್ ಕುಲಾಸೊ ಸ್ಮಾರಕ ಪರ್ಯಾಯ ಫಲಕವನ್ನು ಮುಡಿಗೇರಿಸಿಕೊಂಡಿದೆ. ಫೈನಲ್ನಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ತಂಡವನ್ನು 35-05, 35-11 ನೇರ ಸೆಟ್ಗಳಿಂದ ಸೋಲಿಸಿದ ಆಳ್ವಾಸ್ ಕಾಲೇಜು ತಂಡವು ಚಾಂಪಿಯನ್ ಆಯಿತು. ಸೆಮಿಫೈನಲ್ನಲ್ಲಿ ಕಾರ್ಕಳದ ಎಸ್ವಿಟಿ ಕಾಲೇಜು ತಂಡವನ್ನು 35-7, 35-11 ನೇರ ಸೆಟ್ಗಳಿಂದ ಸೋಲಿಸಿತ್ತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಮೇ 21, 22 ರಂದು ಸಂಸ್ಥೆಯ ಶಿಕ್ಷಕ ವೃಂದದವರಿಗೆ ತರಗತಿ ನಿರ್ವಹಣೆ ಕೌಶಲ್ಯಗಳ ಕುರಿತು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಡುಪಿಯ ಪೆÇೀದಾರ್ ಇಂಟರ್ನ್ಯಾಷನಲ್ ಸ್ಕೂಲ್ನ ಪ್ರಾಂಶುಪಾಲರಾದ ಉದಯ್ ಕುಮಾರ್ ಎ.ಎನ್, ನಿಟ್ಟೆಯ ಎನ್.ಎಸ್.ಎ.ಎಮ್ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ರಾಧಾ ಪ್ರಭು ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಜಿ ಎಮ್ನ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಮಕ್ಕಳು ಇಂದು ಚತುರರಾಗಿದ್ದಾರೆ. ಆಧುನಿಕತೆಗೆ ತಕ್ಕಂತೆ ನಮ್ಮ ಜ್ಞಾನ ನವೀಕರಣಗೊಂಡಾಗ ಮಾತ್ರ ಮಕ್ಕಳ ಮನಸ್ಸನ್ನು ಗೆಲ್ಲಲು ಸಾಧ್ಯವೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಜಿ ಎಮ್ನ ಧ್ಯೇಯ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಾಗಿದೆ. ಇದಕ್ಕೆ ಸಾಕಷ್ಟು ಪೂರ್ವಸಿದ್ಧತೆ, ಯೋಜನೆಗಳು ಮುಖ್ಯ. ಈ ನಿಟ್ಟಿನಲ್ಲಿ ಶಾಲಾ ಪ್ರಾರಂಭದ ಮೊದಲೇ ಶಿಕ್ಷಕರಿಗೆ ಮತ್ತು ಪೋಷಕರಿಗೆ ಹಲವಾರು ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ. ಇದನ್ನು ಎಲ್ಲಾ ಶಿಕ್ಷಕರು ಹಾಗೂ ಪೋಷಕರ ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಎರಡು ದಿನಗಳ ಕಾರ್ಯಾಗಾರದಲ್ಲಿ ಪರಿಣಾಮಕಾರಿ ತರಗತಿ…