Author: admin

ಕುಂದಾಪುರ ತಾಲೂಕು ಯುವ ಬಂಟರ ಸಂಘದಿಂದ 90 ರ ಸಂಭ್ರಮದಲ್ಲಿರುವ ನಾಡಿನ ಗಣ್ಯಮಾನ್ಯರಾದ ಬಸ್ರೂರು ಅಪ್ಪಣ್ಣ ಹೆಗ್ಡೆಯವರನ್ನು ಅವರ ಸ್ವಗ್ರಹದಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲ ದಯಾನಂದ ಶೆಟ್ಟಿ, ಸಂಘದ ಪೋಷಕರಾದ ವಿಜಯ ಶೆಟ್ಟಿ ಸಟ್ಟಾಡಿ ಮತ್ತು ಸಂಘದ ಸ್ಥಾಪಕಾಧ್ಯಕ್ಷರು ಮತ್ತು ದಶಮ ಸಂಭ್ರಮದ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರು ಸನ್ಮಾನಿಸಿ ಗೌರವಿಸಿದರು. ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸುಕೇಶ ಶೆಟ್ಟಿ ಹೊಸ್ಮಠ, ಸುನಿಲ್ ಶೆಟ್ಟಿ ಹೇರಿಕುದ್ರು, ಕೋಶಾಧಿಕಾರಿ ಭರತ್ ಶೆಟ್ಟಿ ಜಾಂಬೂರು, ಉಪಾಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸುರೇಶ ಶೆಟ್ಟಿ ಕಾರಿಬೈಲ್ ಜೆಡ್ಡು, ಸುಕುಮಾರ ಶೆಟ್ಟಿ ಹೇರಿಕುದ್ರು, ದಿನಕರ ಶೆಟ್ಟಿ ಹರ್ಕಾಡಿ, ಸುರೇಂದ್ರ ಶೆಟ್ಟಿ ಗುಳ್ವಾಡಿ, ರೋಷನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷರಾದ ಡಾ| ಚೇತನ ಕುಮಾರ್ ಶೆಟ್ಟಿ ಕೊವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದಶಮ ಸಂಭ್ರಮದ ಕೋಶಾಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ…

Read More

ವಿದ್ಯಾಗಿರಿ: ಪ್ರಾಚೀನ ಮತ್ತು ಆಧುನಿಕ ವೈದ್ಯಕೀಯ ಪದ್ಧತಿಗಳಲ್ಲಿ ಹೃದಯಕ್ಕೆ ಕೇಂದ್ರ ಸ್ಥಾನವನ್ನು ನೀಡಲಾಗಿದೆ ಎಂದು ಆಳ್ವಾಸ್ ಫಾರ್ಮಾಸಿ ಕಾಲೇಜಿನ ಪ್ರಾಂಶುಪಾಲ ಡಾ. ಎಮ್. ಮಂಜುನಾಥ್ ಶೆಟ್ಟಿ ಹೇಳಿದರು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ವತಿಯಿಂದ ಶನಿವಾರ ನಡೆದ ‘ಜ್ಞಾನಚಕ್ಷು-2024′- ‘ಈಸಿಜಿಯ ಮೂಲಭೂತ ಅಂಶಗಳು ಹಾಗೂ ಅದರ ವ್ಯಾಖ್ಯಾನಗಳು’ ವಿಷಯದ ರಾಷ್ಟ್ರ ಮಟ್ಟದ ಕಾರ್ಯಗಾರದಲ್ಲಿ ಮಾತನಾಡಿದರು. ಆಯುರ್ವೇದದಲ್ಲಿ ಹೃದಯವನ್ನು ಪ್ರಜ್ಞೆ ಮತ್ತು ಜೀವಿಯ ಪ್ರಮುಖ ಅಂಗವೆಂದು ಪರಿಗಣಿಸಲಾಗಿದೆ. ಆಯುರ್ವೇದ ತಜ್ಞರಿಗೆ ಹೃದಯದ ಬಗ್ಗೆ ಹೆಚ್ಚಿನ ಜ್ಞಾನಗಳಿಸಲು ಎಲೆಕ್ಟ್ರೋಕಾರ್ಡಿಯೋಗ್ರಫಿ ಅಥವಾ ಇಸಿಜಿ ಉಪಯುಕ್ತವಾಗಿದೆ. 1901ರಲ್ಲಿ ಡಚ್‌ನ ವಿಲ್ಲೆಮ್ ಐಂಥೋವನ್ ಇಸಿಜಿಯನ್ನು ಕಂಡು ಹಿಡಿದರು. ಅವರ ಈ ಆವಿಷ್ಕಾರಕ್ಕಾಗಿ 1924ರಲ್ಲಿ  ನೊಬೆಲ್ ಪ್ರಶಸ್ತಿಯು ಲಭಿಸಿತು. ಈ ಕಾರ್ಯಾಗಾರವು ಇಸಿಜಿಯ ತಾಂತ್ರಿಕ ಅಂಶಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಆಯುರ್ವೇದ ವೈದ್ಯರಿಗೆ ತಮ್ಮ ವೃತ್ತಿಯಲ್ಲಿ ನಾವೀನ್ಯತೆಯನ್ನು ಪಡೆಯಲು ಸಹಕಾರಿಯಾಗಿದೆ ಎಂದರು.  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ ವಿನಯ್ ಆಳ್ವ ಮಾತನಾಡಿ, ನಮ್ಮ ದೃಷ್ಟಿಕೋನ ಬದಲಾಯಿಸಿಕೊಂಡರೆ ಎಲ್ಲವೂ ವಿಶೇಷವಾಗಿ ಕಾಣಿಸುತ್ತದೆ.…

Read More

ಮೂಡುಬಿದಿರೆ: ಚೊಚ್ಚಲ ವಿಶ್ವ ಧ್ಯಾನ ದಿನದ ಪ್ರಯುಕ್ತ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನವತಿಯಿಂದ ಧ್ಯಾನ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ಬಿ ತಲ್ಲಿಕೇರಿ ಹಾಗೂ ಗೌರವ ಅತಿಥಿಯಾಗಿ ಖ್ಯಾತ  ಯೋಗ ಮತ್ತು ಜಲಚಿಕಿತ್ಸಕ  ಡಾ ಗುಲಾಬ್ ರೈ ತೆವಾನಿ ಮತ್ತು  ರಿಸರ್ಚ್ ಆಫೀಸರ್  ಡಾ ನಿತೇಶ್ ಆಗಮಿಸಿದ್ದರು. ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ ವನಿತಾ ಎಸ್ ಶೆಟ್ಟಿ ಹಾಗೂ ಕಾಲೇಜಿನ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ೨೦೦ ಕ್ಕೂ ಅಧಿಕ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಳ್ವಾಸ್ ಆರೋಗ್ಯಧಾಮದ ಸಾಧಕರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಭಟ್ಕರ್ ಸಾಕ್ಷಿ ಸಂಜು ನಿರೂಪಿಸಿದರು.

Read More

ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ತೊಂಬತ್ತು ವರ್ಷಗಳ ಅರ್ಥಪೂರ್ಣ ಹಾಗೂ ದಣಿವರಿಯದ ಜೀವನ ಪಯಣದ ಯಶೋಗಾಥೆಯನ್ನು ಸಂಭ್ರಮಿಸುವ ಸಲುವಾಗಿ ಅವರ ತೊಂಬತ್ತನೇ ಜನ್ಮ ದಿನಾಚರಣೆಯನ್ನು ಅವರ ಆಪ್ತರು, ಅಭಿಮಾನಿಗಳು ಸಾರ್ವಜನಿಕ ರೀತಿಯಲ್ಲಿ ಆಚರಿಸುವ ಉದ್ಧೇಶದಿಂದ ಇದೇ ಬರುವ ಡಿಸೆಂಬರ್ 24 ಮಂಗಳವಾರ ಸಂಜೆ 5 ಗಂಟೆಗೆ ಗುರುಕುಲ ಶಿಕ್ಷಣ ಸಮುಚ್ಚಯ ವಕ್ವಾಡಿ ಇಲ್ಲಿ ಬಿ.ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ವತಿಯಿಂದ ಆಯೋಜಿಸಲಾಗಿದೆ. ಆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಡಾ| ವಿರೇಂದ್ರ ಹೆಗ್ಡೆಯವರು ಕಾರ್ಯಕ್ರಮ ಉದ್ಘಾಟಿಸಿ, ಬಸ್ರೂರು ಅಪ್ಪಣ್ಣ ಹೆಗ್ಡೆ ಕುರಿತಂತೆ ಅಭಿನಂದನೆಯ ನುಡಿಗಳನ್ನಾಡಲಿದ್ದಾರೆ. ರಸೋಲ್ಲಾಸ ಕಾರ್ಯಕ್ರಮದಲ್ಲಿ ಅಪ್ಪಣ್ಣ ಹೆಗ್ಡೆ ಜತೆಗಿನ ಸಂವಾದ, ಅವರ ಜೀವನ ಯಾತ್ರೆಯ ರಸ ನಿಮಿಷಗಳ ಕುರಿತಂತೆ ಅವರ ಅಭಿಮಾನಿಗಳು ಅಪ್ಪಣ್ಣ ಹೆಗ್ಡೆ ಅವರನ್ನು ಮಾತನಾಡಿಸಲಿದ್ದಾರೆ. ಡಾ. ಎಂ ಮೋಹನ ಆಳ್ವರವರು ಅಧ್ಯಕ್ಷ ಸ್ಥಾನದಲ್ಲಿ ಉಪಸ್ಥಿತರಿರುವ ಕಾರ್ಯಕ್ರಮದಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆ ಅವರಿಂದ ಬಸ್ರೂರು ಅಪ್ಪಣ್ಣ ಹೆಗ್ಡೆ ಶಿಕ್ಷಣ ಪ್ರಶಸ್ತಿಯನ್ನು ಡಾ|ಬಿ.ಎ. ವಿವೇಕ ರೈಯವರು ಸ್ವೀಕರಿಸಲಿದ್ದಾರೆ. ಅಪ್ಪಣ್ಣ ಹೆಗ್ಡೆ…

Read More

ಡಿಸೆಂಬರ್ 21 ರಂದು ಪುತ್ತೂರಿಗೆ ಸರಕಾರಿ ಕಾರ್ಯಕ್ರಮದ ಪ್ರಯುಕ್ತ ಆಗಮಿಸಿದ ಕರ್ನಾಟಕ ಸರಕಾರದ ಆರೋಗ್ಯ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಧ್ಯಾಹ್ನದ ಭೋಜನಕ್ಕಾಗಿ ಪ್ರವಾಸಿ ಬಂಗಲೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಚಾಲಕ ಕಾವು ಹೇಮನಾಥ್ ಶೆಟ್ಟಿಯವರಿಗೆ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಪೇಟ ತೊಡಿಸಿ, ಹೂಗುಚ್ಚ ನೀಡಿ 60 ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ಕೋರಿದರು. ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಇಸಾಕ್ ಸಾಲ್ಮರ, ರಂಜಿತ್ ಬಂಗೇರ ಮತ್ತಿತರರು ಜೊತೆಗಿದ್ದರು.

Read More

ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಅವರ 35 ವರುಷಗಳ ಯಕ್ಷಯಾನದ ಸಂಭ್ರಮಾಚರಣೆ “ಯಕ್ಷದ್ಯುತಿ”ಯ ಆಮಂತ್ರಣ ಪತ್ರಿಕೆಯನ್ನು‌ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸುರತ್ಕಲ್ ನಲ್ಲಿ ಶಕುಂತಲಾ ರಮಾನಂದ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಾರಿಂಜೇಶ್ವರ ದೇವಸ್ಥಾನ ಕಾರಿಂಜದ ಅರ್ಚಕರಾದ ಮಿಥುನ್ ರಾಜ್ ನಾವಡ, ಯಕ್ಷಪೂರ್ಣಿಮಾ ಬಿರುದಾಂಕಿತೆ ಪೂರ್ಣಿಮಾ ಯತೀಶ್ ರೈ, ಯಕ್ಷದ್ಯುತಿ ಅಭಿನಂದನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಭಟ್, ಉಪಾಧ್ಯಕ್ಷರುಗಳಾದ ಲೀಲಾಧರ್ ಶೆಟ್ಟಿ ಕಟ್ಲ, ಗಂಗಾಧರ ಪೂಜಾರಿ ಚೇಳ್ಯಾರು, ಸಂಚಾಲಕರಾದ ಸಾಯಿಸುಮಾ ನಾವಡ, ಕಾರ್ಯದರ್ಶಿ ಅನಂತಮೂರ್ತಿ, ಕೋಶಾಧಿಕಾರಿ ಪೂರ್ಣಿಮಾ ಶಾಸ್ತ್ರಿ, ಜೊತೆ ಕಾರ್ಯದರ್ಶಿಗಳಾದ ಸಹನಾ ರಾಜೇಶ್ ರೈ, ರೇವತಿ ನವೀನ್ ಮೊದಲಾದವರು ಉಪಸ್ಥಿತರಿದ್ದರು.

Read More

ಕರಾವಳಿಗರಿಗೆ ತಮ್ಮ ಜೀವನ ಶೈಲಿಯನ್ನು ಪ್ರಪಂಚದ ಎಲ್ಲಾ ಭಾಗಕ್ಕೂ ಕೊಂಡೊಯ್ಯುವ ಶಕ್ತಿ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಅಭಿಪ್ರಾಯಪಟ್ಟರು. ನಯನ ಸಭಾಂಗಣದಲ್ಲಿ ದಕ್ಷಿಣ ಕನ್ನಡಿಗರ ಸಂಘದಿಂದ ಭಾನುವಾರ ನಡೆದ ‘ಕರಾವಳಿ ರತ್ನ’ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರಾವಳಿಗರು ವಿವಿಧ ಉದ್ಯಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಲ್ಲದೇ, ಪ್ರತೀ ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸುತ್ತಾರೆ. ಸಮಾಜದ ಸಾಮರಸ್ಯಕ್ಕೆ ಹಾಗೂ ಒಗ್ಗಟ್ಟಿಗೆ ಸದಾ ಬೆಂಬಲವಾಗಿ ನಿಂತು, ವಿವಿಧ ಸಂಘ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜಕ್ಕೆ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ. ಈ ಮೂಲಕ ಕರಾವಳಿಯು ಕೇವಲ ಸಮೃದ್ಧವಾದ ಪ್ರದೇಶ ಮಾತ್ರವಲ್ಲದೇ, ಅಲ್ಲಿನವರ ಮನಸ್ಸು ಪರಿಶುದ್ಧವಾಗಿದೆ ಎಂದು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು. ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಮಾತನಾಡಿ, ಸಮಾಜ ಮುಖಿ ಕಾರ್ಯಗಳನ್ನು ಅಭಿನಂದಿಸುವ ಜವಾಬ್ದಾರಿ ಸಮಾಜದ್ದು. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡಿಗರ ಸಂಘವು ಕಾರ್ಯೋನ್ಮುಖವಾಗಿದೆ. ಸಮಾಜದಲ್ಲಿನ ಉತ್ತಮ ಕಾರ್ಯವನ್ನು ಅಭಿನಂದಿಸುವ ಮನಸ್ಥಿತಿ ರೂಢಿಸಿಕೊಳ್ಳಬೇಕು…

Read More

ಮೂರನೇ ಆವೃತ್ತಿಯ ಮಂಗಳೂರು ಬೀಚ್ ಫೆಸ್ಟಿವಲ್, ಮಂಗಳೂರು ಟ್ರಯಾಥ್ಲನ್ -2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ಓಶಿಯನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, “ದಕ್ಷಿಣ ಕನ್ನಡ ಎಲ್ಲಾ ರೀತಿಯಲ್ಲಿ ಮುಂದೆ ಇರುವ ಜಿಲ್ಲೆ. ಇಲ್ಲಿ ಎಲ್ಲ ಜಾತಿ ಭಾಷೆ ಮತದ ಜನರು ಒಗ್ಗಟ್ಟಾಗಿ ಬದುಕುತ್ತಿದ್ದಾರೆ. ಇಲ್ಲಿ ಸಂಸ್ಕೃತಿ ಮತ್ತು ಕ್ರೀಡೆಯ ಬಗ್ಗೆ ಮಹತ್ವವನ್ನು ಸಾರುವ ಇಂತಹ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದು ಸಂತಸದ ವಿಚಾರ. ಒಂದು ಒಳ್ಳೆಯ ಕಾರ್ಯಕ್ಕಾಗಿ ಇಂತಹ ಕಾರ್ಯ ಮಾಡುತ್ತಿರುವ ತಪಸ್ಯ ಫೌಂಡೇಶನ್ ಶ್ರಮ ಶ್ಲಾಘನೀಯವಾದುದು. ಕಾರ್ಯಕ್ರಮ ಯಶಸ್ವಿಗೊಳಿಸಲು ನಾವೆಲ್ಲರೂ ಒಂದಾಗಿ ದುಡಿಯಬೇಕು. ಜಿಲ್ಲಾಡಳಿತ ಇಂತಹ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಹಕಾರ ನೀಡಲಿದೆ” ಎಂದರು. ಬಳಿಕ ಮಾತಾಡಿದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಅವರು, “ಸಾಮಾಜಿಕ ಕಳಕಳಿಯ ಉದ್ದೇಶದಿಂದ ನಡೆಸುತ್ತಿರುವ ಇಂತಹ ಕಾರ್ಯಕ್ರಮ ಯಶಸ್ವಿಯಾಗಲಿ. ಇಂತಹ…

Read More

ಮೂಡುಬಿದಿರೆ: ಬೆಂಗಳೂರಿನ ಕ್ರೈಸ್ಟ್  ವಿವಿಯಲ್ಲಿ ನಡೆದ 38ನೇ  ಅಂತರ್ ವಿವಿ  ಆಗ್ನೇಯ ವಲಯದ ಸಾಂಸ್ಕೃತಿಕ ಯುವಜನೋತ್ಸವ – ‘ಕ್ರೆಸೆಂಡೋ’ದಲ್ಲಿ ಮಂಗಳೂರು ವಿವಿ ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಸಂಗೀತ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳಿಸಿ, ಸಮಗ್ರ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. ಜಾನಪದ ವಾದ್ಯ ಮೇಳ ಪ್ರಥಮ, ಭಾರತೀಯ ಶಾಸ್ತ್ರೀಯ ಸ್ವರ ವಾದ್ಯ(ಬಾನ್ಸೂರಿ)ದಲ್ಲಿ ಪ್ರಥಮ,  ಸಮೂಹ ಗೀತೆಯಲ್ಲಿ ದ್ವಿತೀಯ, ಜಾನಪದ ನೃತ್ಯ (ಗುಂಪು) ದ್ವಿತೀಯ, ಶಾಸ್ತ್ರೀಯ ಗಾಯನ ವೈಯಕ್ತಿಕದಲ್ಲಿ ದ್ವಿತೀಯ, ಶಾಸ್ತ್ರೀಯ ನೃತ್ಯದಲ್ಲಿ ತೃತೀಯ, ಭಾರತೀಯ ಲಘು ಶಾಸ್ತ್ರೀಯ ಸಂಗೀತದಲ್ಲಿ ತೃತೀಯ, ಪಾಶ್ಚಾತ್ಯ ವಾದ್ಯ ವೈಯಕ್ತಿಕ- ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ವೈಯಕ್ತಿಕ ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ಸಮೂಹ ಐದನೇ ಸ್ಥಾನ, ಏಕಾಂಕ ನಾಟಕದಲ್ಲಿ ಐದನೇ ಸ್ಥಾನ ಪಡೆದು ರನ್ರ‍್ಸ್ ಅಪ್ ಪಟ್ಟ ತನ್ನದಾಗಿಸಿಕೊಂಡಿತು. ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಆಳ್ವಾಸ್ ವಿದ್ಯಾರ್ಥಿಗಳು ಭಾರತೀಯ ಶಾಸ್ತ್ರೀಯ ಸ್ವರ ವಾದ್ಯ(ಬಾನ್ಸೂರಿ)ದಲ್ಲಿ ಸ್ವಯಂ ಪ್ರಕಾಶ ಪ್ರಭು ಪ್ರಥಮ, ಶಾಸ್ತ್ರೀಯ ಗಾಯನ ವೈಯಕ್ತಿಕದಲ್ಲಿ ಅಶ್ವಿಜ ಉಡುಪ…

Read More

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯು ದಿನಾಂಕ 21 12.2024  ಶನಿವಾರದಂದು ಜರುಗಿತು. ಸಭೆಯನ್ನು ಉದ್ದೇಶಿಸಿ ಸಹ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ವೈಯಕ್ತಿಕ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಧನೆ, ತರಗತಿಗಳಲ್ಲಿ ಶಿಸ್ತು ಮತ್ತು ಅವರ ಹಾಜರಾತಿ ಶೇಖಡಾವಾರು ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಸಕಾರಾತ್ಮಕ ಚಿಂತನೆ, ಪ್ರೇರಣೆ, ನಿರ್ದಿಷ್ಟ ಗುರಿ ಇತ್ಯಾದಿ ವಾಸ್ತವಾಂಶಗಳನ್ನು ಮನದಟ್ಟು ಮಾಡುವುದು ಅಗತ್ಯ ಎಂದರು. ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ ಗಣನಾಥ ಶೆಟ್ಟಿ ಯವರು ನಿತ್ಯ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವ ಕೌಶಲ ಸಹಿತ ಶಿಕ್ಷಣವೇ ನಮ್ಮ ಗುರಿ ಎಂದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣದ ಜೊತೆಗೆ ಸಿ. ಎ, ಸಿ. ಎಸ್, ಕಂಪ್ಯೂಟರ್ ಸಂಬಂಧಿತ ವಿವಿಧ ಕಲಿಕೆಗಳ ಜೊತೆಗೆ ಎನ್ ಎಸ್ ಎಸ್, ಕೆಸಡೊರ್ಂಜಿ ದಿನ, ಕೈಗಾರಿಕಾ ಪ್ರದೇಶಗಳ ಭೇಟಿಯ ಜೊತೆಗೆ ಹಲವಾರು ಕಾರ್ಯಕ್ರಮಗಳ ಆಯೋಜನೆಯ ಮೂಲಕ ನೈತಿಕ ಮತ್ತು ವ್ಯಾವಹಾರಿಕ ಜ್ಞಾನವನ್ನು ನೀಡುತ್ತಿರುವ…

Read More