Author: admin

ವಿದ್ಯಾಗಿರಿ: ಪ್ರಸಕ್ತ ವರ್ಷದಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ ಎಂದು ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಶೇಕಡಾ ೧೪.೯೬% ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ ಶೇಕಡ ೬೮.೦೩ ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ ೧೪೭ ವಿದ್ಯಾರ್ಥಿಗಳಲ್ಲಿ ೧೦೦ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವರ್ಷದಲ್ಲಿ ಆಳ್ವಾಸ್‌ನ ೪೨ ವಿದ್ಯಾರ್ಥಿಗಳು ಸಿಎ ಫೈನಲ್‌ನಲ್ಲಿ, ೩೦ ವಿದ್ಯಾರ್ಥಿಗಳು ಸಿಎ ಇಂಟರ್ ಮಿಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಿಎಯ ಪ್ರತಿ ಹಂತದಲ್ಲೂ ಉತ್ತಮ ಫಲಿತಾಂಶ ಪ್ರಕಟವಾಗಿದೆ. ಸುಮೀತ್ ವರ್ಧಮಾನ್ ರೂಗೆ(೩೦೪), ಶಿವಪ್ರಸಾದ್ (೨೯೫), ರ‍್ಯನ್ ಕಾರ್ಯಪ್ಪ ಎ(೨೮೭), ಶಿವಶೇಷ್ ಕೆ ಆರ್(೨೮೩), ಹರೀಶ್ ಕುಲಕರ್ಣಿ(೨೮೩), ಕನ್ಯಾ ಪ್ರಭು(೨೮೧), ಗಿರೀಶ್ ಚಂದ್ರಪ್ಪ (೨೭೭), ಆಕಾಶ್ ಜೆ ಭಟ್ (೨೭೬), ಹಿತೇಶ್ ಎಂ ಎಸ್(೨೭೩), ದಿನೇಶ್ ಎನ್(೨೬೮), ಸಾಹುನ್ ಪಿಂಟೋ(೨೬೭), ವೈಷ್ಣವಿ ಯು.ಕೆ(೨೬೧), ನಿಧಿ ಆರ್.ಕೆ (೨೬೦), ಯಶಸ್ವಿನಿ ಸತ್ಯ ನಾಯ್ಕ(೨೬೦),…

Read More

ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಸಿಎ ಅಶೋಕ್ ಶೆಟ್ಟಿಯವರು ಶಂಕರ್ ಶೆಟ್ಟಿ ವಿರುದ್ಧ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಪ್ತಿ ಸಂತೋಷ್ ಶೆಟ್ಟಿ ಶೆಟ್ಟಿ ಮತ್ತು ಮಹಿಳಾ ಉಪಾಧ್ಯಕ್ಷೆಯಾಗಿ ಕಾಂತಿ ಶೆಟ್ಟಿ ಆಯ್ಕೆ ಆಗಿದ್ದಾರೆ. ಗೌರವ ಕಾರ್ಯದರ್ಶಿಯಾಗಿ ವಿಜಯ್ ಶೆಟ್ಟಿ ಹಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಜಯಶ್ರೀ ಸಿ ರೈ, ಖಜಾಂಚಿಯಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಉಮೇಶ್ ಕುಮಾರ್ ಶೆಟ್ಟಿ, ರಮೇಶ್ ಜಿ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ಅಜಿತ್ ಕುಮಾರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ನಿರಂಜನ್ ಶೆಟ್ಟಿ, ಸುರೇಂದ್ರ ಶೆಟ್ಟಿ, ಅಜಿತ್ ವಿ ಶೆಟ್ಟಿ, ರವೀಂದ್ರ ಶೆಟ್ಟಿ, ಯೋಗ್ಯ ಎಲ್ ರೈ, ಶಕುಂತಲಾ ಶೆಟ್ಟಿ, ಶೋಭಾ ಶೇಖ, ಸುನೀಲ್ ಕುಮಾರ್ ಶೆಟ್ಟಿ, ಪ್ರತಾಪ್ ಶೆಟ್ಟಿ, ಗೀತಾ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಆಶ್ಚರ್ಯ ಮೂಡಿಸಿದ ಕಾಂತಿ ಶೆಟ್ಟಿ ಗೆಲುವು : ಈ ಸಲದ ಚುನಾವಣೆಯಲ್ಲಿ ಮಹಿಳಾ ಉಪಾಧ್ಯಕ್ಷೆ ಸ್ಥಾನಕ್ಕೆ ಪ್ರಬಲ ಸ್ಪರ್ಧೆ ಏರ್ಪಟ್ಟಿತ್ತು. ಸಿಎ ಅಶೋಕ್ ಶೆಟ್ಟಿ ಬಣದಿಂದ…

Read More

ಆಟಿ ತಿಂಗಳ ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿದೆ. ಆಟಿ ತಿಂಗಳ ನೆನಪು, ಅಂದಿನ ಆಚರಣೆಗಳನ್ನು ನೆನಪು ಮಾಡುವ ಕೆಲಸ ಅಗತ್ಯವಾಗಿ ನಡೆಯಬೇಕು ಎಂದು ಕದ್ರಿ ನವನೀತ ಶೆಟ್ಟಿ ಹೇಳಿದರು. ಅವರು ಬಂಟರ ಸಂಘ ಮೂಲ್ಕಿ ಇಲ್ಲಿನ ಮಹಿಳಾ ವಿಭಾಗದ ವತಿಯಿಂದ ನಡೆದ ಆಟಿದ ತಮ್ಮನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ ಆಟಿದ ತಮ್ಮನ ಕಾರ್ಯಕ್ರಮ ಉದ್ಘಾಟಿಸಿದರು. ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಮೂಲ್ಕಿ ಬಂಟರ ಸಂಘ ಆಟಿ ಆಚರಣೆ ಮೂಲಕ ಹಿಂದಿನ ಆಟಿ ದಿನ ನೆನಪು ಮಾಡುತ್ತಿರುವುದು ಅಭಿನಂದನೀಯ. ಗ್ರಾಮೀಣ ಪ್ರದೇಶದ ಹಿಂದಿನ ಬದುಕು ಯುವ ಸಮಾಜಕ್ಕೆ ತೋರ್ಪಡಿಸುವ ಕಾರ್ಯ ನಿರಂತರ ನಡೆಯಬೇಕು ಎಂದರು. ಕದ್ರಿ ನವನೀತ ಶೆಟ್ಟಿ ಮತ್ತು ಲೋಲಾಕ್ಷಿ ನಾರಾಯಣ ಶೆಟ್ಟಿ ಅವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಪ್ಪನಾಡು ದೇವಳದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಲೋಲಾಕ್ಷಿ ಶೆಟ್ಟಿ,…

Read More

ಲಯನ್ಸ್ ಕ್ಲಬ್ ಬನ್ನಾಡಿ – ವಡ್ಡರ್ಸೆ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಜುಲೈ 27 ರಂದು ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾಭವನದಲ್ಲಿ ಜರಗಿತು. ಮಾಜಿ ಜಿಲ್ಲಾ ಗವರ್ನರ್ ವಿ.ಜಿ.ಶೆಟ್ಟಿ ಪದಪ್ರಧಾನ ನೆರವೇರಿಸಿ ಮಾತನಾಡಿ, ಜಿಲ್ಲೆಯ ಅತ್ಯುತ್ತಮ ಕ್ಲಬ್ ಗಳಲ್ಲಿ ಬನ್ನಾಡಿ ವಡ್ಡರ್ಸೆ ಕೂಡಾ ಒಂದು ಲಯನ್ಸ್ ನ ನೀತಿ ನಿಯಮಗಳನ್ನು ಪಾಲಿಸಿಕೊಂಡು ಶಿಸ್ತು, ಶ್ರೇಷ್ಠತೆಯನ್ನು ಕಾಪಾಡಿಕೊಂಡು ಬಂದಿದೆ ಎಂದರು. ಕ್ಲಬ್ ನ ನೂತನ ಅಧ್ಯಕ್ಷರಾಗಿ ಬಿ. ಪ್ರವೀಣ್ ಹೆಗ್ಡೆ, ಕಾರ್ಯದರ್ಶಿಯಾಗಿ ಬನ್ನಾಡಿ ಆಶಿತ್ ಕುಮಾರ್ ಶೆಟ್ಟಿ, ಖಜಾಂಚಿಯಾಗಿ ಬನ್ನಾಡಿ ಸೂರ್ಯಕಾಂತ್ ಶೆಟ್ಟಿ ಅಈಜಿಕಾರ ಸ್ವೀಕರಿಸಿದರು. ಈ ಸಂದರ್ಭ 2023-2024 ನೇ ಸಾಲಿನಲ್ಲಿ ಎಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಡ್ಡರ್ಸೆ ಪ್ರೌಢಶಾಲೆಯ ಶ್ರಾವ್ಯ, ಅನುಪ್ರಿಯಾ ಹಾಗೂ ಕಾವಡಿ ಶಾಲೆಯ ಸ್ವಸ್ತಿಕ್ ಜೋಗಿ ಅವರನ್ನು ಸನ್ಮಾನಿಸಲಾಯಿತು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ವೈದ್ಯಕೀಯ ನೆರವು ನೀಡಲಾಯಿತು. ಹಿರಿಯರಾದ ಸೀತಾರಾಮ ಶೆಟ್ಟಿ ಕಲ್ಕಟ್ಟೆ, ಶೀನಪ್ಪ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಕಾವಡಿ, ಶಿವರಾಮ ಶೆಟ್ಟಿ…

Read More

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಹಾಗೂ ರೋವರ್ ರೇಂಜರ್ಸ್ ಘಟಕದ ಘಟಕದ ವತಿಯಿಂದ ಕಾರ್ಕಳದ ಮಿಯ್ಯಾರು ಗ್ರಾಮದಲ್ಲಿ ‘ಕೆಸರಾಟ ಪಾಠ’ ಕರ‍್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಿಯ್ಯಾರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಮಾಧವ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಿಯ್ಯಾರು ಗ್ರಾಮಕ್ಕೂ ಎನ್‌ಎಸ್‌ಎಸ್ ಚಟುವಟಿಕೆಗಳಿಗೂ ಅವಿನಾಭಾವ ನಂಟಿದೆ. ಈ ಗ್ರಾಮದಲ್ಲಿ ಹೆಚ್ಚಿನ ಎನ್‌ಎಸ್‌ಎಸ್ ಕ್ಯಾಂಪ್‌ಗಳು ನಡೆಯುತ್ತವೆ. ಈ ಕರ‍್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಜೀವನ ಪಾಠ ಲಭಿಸಲಿ ಎಂದು ಹಾರೈಸಿದರು. ಆಳ್ವಾಸ್ ವಿದ್ಯಾ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕೆಸರಾಟದ ಮಹತ್ವ ಹಾಗೂ ಕೃಷಿಯ ಮಹತ್ವವನ್ನು ತಿಳಿಸಿದರು. ವಿವಿಧ ಆಟಗಳಲ್ಲಿ ತಾವೂ ಭಾಗವಹಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಕೆಸರಾಟ ಪಾಠದ ಅಂಗವಾಗಿ ಹಗ್ಗ ಜಗ್ಗಾಟ, ವಾಲಿಬಾಲ್, ತ್ರೋಬಾಲ್, ೧೦೦ ಮೀಟರ್ ಓಟ, ೪೦೦ಮೀಟರ್ ರಿಲೇ, ಪಿರಮಿಡ್ ರಚಿಸುವುದು, ನಿಧಿ ಹುಡುಕುವುದು, ಮಡಕೆ ಒಡೆಯುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಗದ್ದೆಯನ್ನು ಒದಗಿಸಿದಂತಹ ರಾಜೇಶ್ ಹಾಗೂ ಸಹಕಾರವನ್ನು…

Read More

ಮೂಡುಬಿದಿರೆ: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ‍್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಆದರೆ ಪತ್ರಿಕೆಗಳ ಮೂಲಕ ದೊರೆಯುವ ಸಕಾರಾತ್ಮಕ ಮತ್ತು ಮಹತ್ವಪೂರ್ಣ ದಾಖಲೆಗಳು ಜ್ಞಾನದ ಜೊತೆ ಓದಿನ ಸುಖವನ್ನು ನೀಡುತ್ತವೆ ಎಂದರು. ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಪ್ರಕಟವಾಗುವ ಸಂಪಾದಕೀಯ ಪುಟ, ಸ್ಥಳೀಯ, ರಾಜ್ಯ, ರಾಷ್ಟ್ರ ಮಟ್ಟದ ಸುದ್ದಿಗಳ ಜೊತೆಗೆ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟ ಆಸಕ್ತಿದಾಯಕ ಸಂಗತಿಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು. ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ ಮತ್ತು…

Read More

ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ “ಆಟಿದ ಪೊರ್ಲು ಮತ್ತು ಅಭಿನಂದನಾ ಸಮಾರಂಭ” ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಛೇರ್ಮನ್, ವಿಕೆ ಸಮೂಹ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ಕರುಣಾಕರ ಎಂ.ಶೆಟ್ಟಿ ಮಧ್ಯಗುತ್ತು ಅವರು ಬಿತ್ತನೆಯಾದ ಗದ್ದೆಯ ಭತ್ತದ ಪೈರುಗಳಿಗೆ ಯಾರ ದೃಷ್ಟಿಯೂ ಬೀಳದಿರಲಿ. ಕಳೆರೋಗ ಬಾರದಿರಲಿ ಎಂದು ಗದ್ದೆಗೆ ಕಾಪು ಇಟ್ಟು ಪಾಡ್ದನದ ಜೊತೆಗೆ ನೇಜಿಯನ್ನು ಹಾರಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಅವರು, “ನಾವು ಸಣ್ಣವರಿದ್ದಾಗ ಆಟಿ ತಿಂಗಳಲ್ಲಿ ಹಲಸಿನ ಬೀಜ, ನೈಸರ್ಗಿಕವಾಗಿ ಸಿಗುವ ಸೊಪ್ಪು ತರಕಾರಿ ತಿಂದು ಜೀವನ ಸಾಗಿಸುತ್ತಿದ್ದೆವು. ಆಗ ಜೀವನ ನಿರ್ವಹಣೆ ಕಷ್ಟಕರವಾಗಿತ್ತು. ನಾವು ಇದನ್ನು ಮರೆಯಬಾರದು. ಆಟಿ ದಿನದ ಪರಿಕಲ್ಪನೆ ಜೀವನ ಪದ್ಧತಿ ಅಂದಿನ ದಿನಕ್ಕೆ ವಾತಾವರಣಕ್ಕೆ ಅನುಗುಣವಾಗಿ ಅಳವಡಿಸಿಕೊಂಡಿದ್ದರು. ಅರೋಗ್ಯಪೂರ್ಣ ಜೀವನಕ್ಕೆ ಮಳೆಗಾಲದ ಆಟಿ ಜೀವನ ಪೂರಕವಾಗಿತ್ತು. ನಮ್ಮ ಮುಂದಿನ ಪೀಳಿಗೆಗೆ ತುಳುವರ ಸಂಸ್ಕೃತಿ…

Read More

ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ವತಿಯಿಂದ ಗುರು ಪೂರ್ಣಿಮೆಯ ಆಚರಣೆಯು ಒಡಿಯೂರು ಸಂಸ್ಥಾನದ ಗುರುದೇವಾನಂದ ಸ್ವಾಮೀಜಿಯವರ ಶುಭ ಆಶೀರ್ವಾದದೊಂದಿಗೆ ಜುಲೈ 21 ರ ಆದಿತ್ಯವಾರದಂದು ಪುಣೆ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ – ವೀಣಾ ಪಿ. ಶೆಟ್ಟಿ ದಂಪತಿ ಪ್ರಾಯೋಜಕತ್ವದಲ್ಲಿ ಪುಣೆಯ ಔಂದ್ ನಲ್ಲಿಯ ರೋಹನ್ ನಿಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಗುರು ಪೂರ್ಣಿಮೆಯ ಅಂಗವಾಗಿ ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯೆಯರು ಹಾಗೂ ಬಳಗದ ಸದಸ್ಯರ, ಭಜನಾ ಮಂಡಳಿಯಿಂದ ಭಜನೆ ನಡೆಯಿತು. ನಂತರ ಗುರುಪೂಜೆ ಮಹಾಮಂಗಳಾರತಿ ನೆರವೇರಿತು. ಪ್ರಭಾಕರ್ ಶೆಟ್ಟಿ ದಂಪತಿ, ಪೃಥ್ವೀಶ್ ಶೆಟ್ಟಿ, ಸ್ನೇಹಲ್ ಶೆಟ್ಟಿ ದಂಪತಿ, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಜಯಲಕ್ಷ್ಮೀ ಪಿ. ಶೆಟ್ಟಿ ದಂಪತಿ, ಬಳಗದ ಸದಸ್ಯರು, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯರು ಆರತಿ ಬೆಳಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಪುಣೆ…

Read More

ಶ್ರದ್ಧೆಯಿಂದ ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ದುಡಿದಾಗ ಜನರ ಗೌರವ ಸಿಗುವುದಲ್ಲದೇ ನೆಮ್ಮದಿಯ ಜೀವನ ನಮ್ಮದಾಗುತ್ತದೆ ಎಂದು ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ ಹೊಸಬೆಟ್ಟು ನುಡಿದರು. ಅವರು ಜೆಸಿಐ ಸುರತ್ಕಲ್ ವತಿಯಿಂದ ಗೋವಿಂದದಾಸ ಕಾಲೇಜು ಸುರತ್ಕಲ್ ಇಲ್ಲಿ ನಡೆದ ಜೆಸಿಐ ಸ್ಥಾಪನಾ ದಿನಾಚರಣೆ ಮತ್ತು ವಿದ್ಯಾರ್ಥಿ ವೇತನ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಾಯಕತ್ವದ ತರಬೇತಿಯನ್ನು ಪ್ರಸ್ತುತ ಕಾಲಘಟ್ಟದಲ್ಲಿ ಜನತೆಗೆ ತಿಳಿಸುವ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಜೆಸಿಐ ಸುರತ್ಕಲ್ ಮಹತ್ವದ ಹೆಜ್ಜೆ ಇರಿಸಿದೆ ಎಂದರು. ವೇದಿಕೆಯಲ್ಲಿ ಜೆಸಿಐ ಭಾರತದ ವಲಯಾಧ್ಯಕ್ಷ ಗಿರೀಶ್ ಎಸ್ ಪಿ, ಜೆಸಿಐ ಭಾರತದ 1983 ರ ರಾಜ್ಯ ಉಪಾಧ್ಯಕ್ಷ ದಿನಕರ ಗೌಡ, ಜೆಸಿ ಅಲ್ಯೂಮಿನಿಯಂ ಕ್ಲಬ್ ಅಧ್ಯಕ್ಷ ಲೋಕೇಶ್ ರೈ, ವಲಯ ಉಪಾಧ್ಯಕ್ಷ ರಾಕೇಶ್ ಹೊಸಬೆಟ್ಟು, ನಿಕಟಪೂರ್ವ ಅಧ್ಯಕ್ಷ ಜಯರಾಜ್ ಆಚಾರ್ಯ, ಕಾರ್ಯದರ್ಶಿ ಸವಿತಾ ಶೆಟ್ಟಿ, ಸೌಮ್ಯ ಅರ್ ಶೆಟ್ಟಿ, ದಯೇಶ್ ಬಿ ಶೆಟ್ಟಿ, ರಾಹುಲ್…

Read More

ತಾಲೂಕು ಯುವ ಬಂಟರ ಸಂಘದ ವತಿಯಿಂದ ಬಂಟ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಮತ್ತು ಅವಕಾಶಗಳಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳಡಿ ಪ್ರೋತ್ಸಾಹಧನ ವಿತರಣೆ ಸಮಾರಂಭ ಆಗಸ್ಟ್ 18 ರಂದು ಕೋಟೇಶ್ವರದ ಯುವ ಮೆರಿಡಿಯನ್ ಸಭಾಭವನದಲ್ಲಿ ನಡೆಯಲಿದೆ. 2024 ರ ಮಾರ್ಚ್ ತಿಂಗಳಲ್ಲಿ ನಡೆದ ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 95 ಕ್ಕಿಂತ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆಸರೆ ಯೋಜನೆಯಡಿ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಹಾಗೂ ನವಚೇತನ ಯೋಜನೆಯಡಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ನಡೆಯಲಿದೆ. ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಒಟ್ಟು 25 ಲಕ್ಷ ರೂ. ಮೊತ್ತದ ಪ್ರೋತ್ಸಾಹಧನ ವಿತರಣೆ ನಡೆಯಲಿದ್ದು ಮಣಿಪಾಲ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಚ್.ಎಸ್ ಬಲ್ಲಾಳ್ ಉದ್ಘಾಟಿಸಲಿದ್ದಾರೆ. 2024 -26 ನೇ ಅವಧಿಗೆ ಆಯ್ಕೆಗೊಂಡ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಸಂಸ್ಮರಣ ಪ್ರಶಸ್ತಿಗಳ ಪ್ರದಾನ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಬಿ.ಉದಯ್ ಕುಮಾರ್…

Read More