Author: admin

ಬೈಂದೂರು ಬಂಟರ ಯಾನೆ ನಾಡವರ ಸಂಘದ ಸಭಾ ಭವನದಲ್ಲಿ ನೂತನ ಪದಾಧಿಕಾರಿಗಳ ಪದ ಪ್ರದಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ, ನಿವೃತ್ತ ಶಿಕ್ಷಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಉದ್ಘಾಟಿಸಿದರು. ಬಳಿಕ ಮಾತನಾಡಿ, ಬಂಟ ಸಮಾಜ ಇವತ್ತು ಜಾಗತಿಕ ಮಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದೆ. ಶೈಕ್ಷಣಿಕವಾಗಿ ಸಮಾಜ ಜಾಗೃತವಾದಾಗ ಮಾತ್ರ ಬೆಳವಣಿಗೆ ಮತ್ತು ಬದಲಾವಣೆ ಸಾಧ್ಯವಿದೆ. ಹಾಗೆ ಸಮುದಾಯವನ್ನು ಒಟ್ಟುಗೂಡಿಸುವ ದೃಷ್ಟಿಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತ್ಯಂತ ಔಚಿತ್ಯ ಪೂರ್ಣವಾಗಿದೆ ಎಂದರು. ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನ, ದಾರಿ, ಕನಸುಗಳನ್ನು ನನಸು ಮಾಡಿಕೊಳ್ಳಲು ಸರಿಯಾದ ಮಾರ್ಗದರ್ಶನದ ಅಗತ್ಯತೆ ಇದೆ. ವಿದ್ಯಾರ್ಥಿ ವೇತನಕ್ಕಿಂತ ಮಾಹಿತಿ ತರಬೇತಿ ಶಿಬಿರಗಳಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಲಾಭ ದೊರೆಯುತ್ತದೆ. ಜ್ಞಾನವನ್ನು ವಿಸ್ತರಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಅವಶ್ಯವಿರುವ ಮಾಹಿತಿ ಹಾಗೂ ತರಬೇತಿಗಳನ್ನು ಪಡೆದುಕೊಳ್ಳಬೇಕು. ಉತ್ತಮ ಜನರ ಸಹವಾಸ ಗೆಳೆತನ ಬೆಳೆಸಿಕೊಂಡರೆ ಮಾತ್ರ ನಮ್ಮ ಜೀವನ…

Read More

ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ ಇದರ ಸಹಯೋಗದಲ್ಲಿ ಜುಲೈ 28 ರಂದು ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ “ಆಟಿದ ಪೊರ್ಲು ಮತ್ತು ಅಭಿನಂದನಾ ಸಮಾರಂಭ” ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಛೇರ್ಮನ್ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷ ಎಮ್ ದೇವಾನಂದ ಶೆಟ್ಟಿ, ಅಭಿಮತ ಟಿವಿಯ ಆಡಳಿತ ನಿರ್ದೇಶಕಿ ಡಾ| ಮಮತಾ ಪಿ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಸಚ್ಚಿದಾನಂದ ರೈ, ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ. ಮಹಿಳಾ ವೇದಿಕೆಯ ಅಧ್ಯಕ್ಷೆ ಭವ್ಯ ಎ ಶೆಟ್ಟಿ ಉಪಸ್ಥಿತರಿರುವರು. ಸಮಾರಂಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ…

Read More

‘ಕಲೆ, ಸಂಸ್ಕೃತಿ, ಸಾಹಿತ್ಯ, ಶಿಕ್ಷಣ ಇತ್ಯಾದಿ ಕ್ಷೇತ್ರಗಳ ಬೆಳವಣಿಗೆಗೆ ಸಾಮಾಜಿಕ ಮತ್ತು ಧಾರ್ಮಿಕ ರಂಗದಲ್ಲಿ ದುಡಿಯುವವರ ಕೊಡುಗೆ ಅಪಾರ. ತಮ್ಮ ನೆಲದ ಸಂಸ್ಕೃತಿಯ ಮೇಲಿನ ಪ್ರೀತಿಯೇ ಅಂಥವರ ಸಾಧನೆಗೆ ಸೋಪಾನವಾಗಿದೆ’ ಎಂದು ಹಿರಿಯ ವಿದ್ವಾಂಸ ಮತ್ತು ಸಂಸ್ಕೃತಿ ಚಿಂತಕ ಡಾ.ಎಂ.ಪ್ರಭಾಕರ ಜೋಶಿ ಹೇಳಿದರು. ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಇತ್ತೀಚೆಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತರಾದ ಸಮಿತಿಯ ಮೂವರು ಸಾಧಕರಿಗೆ ನಗರದ ಬಲ್ಮಠ ಕುಡ್ಲ ಪೆವಿಲಿಯನ್ ಸಭಾಂಗಣದಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಮತ್ತು ಹಿರಿಯ ಉದ್ಯಮಿ ಡಾ. ಎ. ಸದಾನಂದ ಶೆಟ್ಟಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಶುಭ ಹಾರೈಸಿದರು. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ 2024 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪಡೆದ ಯಕ್ಷಾಂಗಣದ ಗೌರವ ಉಪಾಧ್ಯಕ್ಷ, ಉದ್ಯಮಿ ಕೆ ಕೆ ಶೆಟ್ಟಿ ಅಹ್ಮದ್ ನಗರ, ಸಂಚಾಲಕ ರವೀಂದ್ರ…

Read More

ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಪುಣೆಯ ಖ್ಯಾತ ಮಕ್ಕಳ ತಜ್ಞ, ದ.ಕ.ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಹಾಗೂ ಹೊರನಾಡ ಕನ್ನಡ ರತ್ನ ಪ್ರಶಸ್ತಿ ಪುರಸ್ಕೃತ ಡಾ‌. ಸುಧಾಕರ ಶೆಟ್ಟಿ ಅವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರವು ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷಯ ಧಾಮದಲ್ಲಿ ಜುಲೈ 14 ರಂದು ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಸಹಕಾರದಿಂದ ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ12 ರ ವರೆಗೆ ನಡೆದ ಈ ಶಿಬಿರದ ಪ್ರಯೋಜನವನ್ನು ಕಲ್ಲಬೆಟ್ಟು ಮತ್ತು ಆಸುಪಾಸಿನ ಗ್ರಾಮಗಳ ಮಕ್ಕಳು ಪಡೆದುಕೊಂಡರೆಂದು ಸಂಘದ ಅಧ್ಯಕ್ಷ ಸುರೇಶ್ ಕೋಟ್ಯಾನ್, ಉಪಾಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿತಾ ಆರ್ ಶೆಟ್ಟಿ ಅವರು ತಿಳಿಸಿದ್ದಾರೆ.

Read More

ಮೂಡುಬಿದಿರೆ: ಸಾಹಿತ್ಯ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಸ್ಫೂರ್ತಿಗೊಳಗಾಗುವಂತೆ, ಸಂಶೋಧನಾ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಪ್ರೇರಣೆಗೊಳಗಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿಪ್ರಾಯ ಪಟ್ಟರು. ಅವರು ಆಳ್ವಾಸ್ ಕನ್ನಡ ವಿಭಾಗದ ಉಪನ್ಯಾಸಕ ಹರೀಶ್ ಟಿ.ಜಿ.ಯವರ ‘ಉದ್ದ ಲಂಗದ ಕಾಲೇಜು ದಿನಗಳು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾವು ಅನೇಕ ಸಂಕ್ರಮಣ ಕಾಲಘಟ್ಟವನ್ನು ದಾಟಿ ಬಂದಿದ್ದೆವೆ. ಪ್ರಸ್ತುತ ಸಮಾಜ ‘ನಿರ್ಧರಿತ ಆರ್ಥಿಕತೆ’ ಯಿಂದ ಬದಲಾಗಿ ‘ಆರ್ಥಿಕತೆ ನಿರ್ಧರಿತ ಸಮಾಜ’ವಾಗಿ ಬದಲಾಗುತ್ತಿದೆ. ಇದರಿಂದಾಗಿ, ಪ್ರತಿಯೊಂದು ವಿಷಯವು ಹಣಕಾಸಿನ ಆಧಾರದ ಮೇಲೆ ನಿರ್ಧರಿತವಾಗುತ್ತಿದೆ. ಹಿಂದಿನ ತಲೆಮಾರಿನವರು ಒತ್ತಡ ರಹಿತ ನಿರಾಳತೆಯ ಜೀವನ ನಡೆಸಿದ್ದು, ಪ್ರಸ್ತುತ ಯುವಜನತೆ ಸ್ಪಷ್ಟತೆಯನ್ನು ಹೊಂದಿದ್ದರೂ, ಒತ್ತಡದ ಜೀವನ ನಿರ್ವಹಿಸುವಂತಾಗಿದೆ. ಹಿಂದಿನ ತಲೆಮಾರಿನವರಲ್ಲಿ ‘ಬಳಸಿ ಬಿಸಾಡುವ’ ವ್ಯವಸ್ಥೆ ಇರಲಿಲ್ಲ. ಇದರಿಂದಾಗಿ ಪರಿಸರ ಸಂರಕ್ಷಣೆ ಸಮಸ್ಯೆಯಾಗಿ ಕಾಣಿಸಿಕೊಂಡಿರಲಿಲ್ಲ ಎಂದರು. ವಿದ್ಯಾರ್ಥಿಗಳು ಜೀವಪರ ಕಾಳಜಿಹೊಂದಿ ಸಂವೇದನಾಶೀಲ ನಡೆಯನ್ನು ಅನುಭವಿಸಲು ಸಾಹಿತ್ಯವನ್ನು ಓದಬೇಕು ಎಂದರು. ಬಿಸಿನೆಸ್ ಮ್ಯಾನೆಜ್‌ಮೆಂಟ್ ವಿಭಾಗದ ಉಪನ್ಯಾಸಕ ಮನು ಅವರು ಕೃತಿ ಪರಿಚಯಿಸಿದರು. ಲೇಖಕ ಹರೀಶ್…

Read More

ನಮ್ಮ ದೇವಾಲಯದ ವತಿಯಿಂದ ಕಳೆದ 21 ವರ್ಷಗಳಿಂದ ಉಚಿತವಾಗಿ ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ನಡೆಸುತ್ತಿದ್ದು, ಪ್ರತಿ ವರ್ಷ ಉಚಿತ ಪುಸ್ತಕ ಹಾಗೂ ಇತರ ಶಾಲಾ ಪರಿಕರ, ಪ್ರತಿಭಾ ಪುರಸ್ಕಾರವನ್ನು ನೀಡುತ್ತಾ ಬಂದಿದ್ದೇವೆ. ಇಂದಿನ ಮಕ್ಕಳೇ ಮುಂದಿನ ಭವಿಷ್ಯ. ಆದ್ದರಿಂದ ವಿದ್ಯೆಗೆ ಸದಾ ಪ್ರೋತ್ಸಾಹ ನೀಡುತ್ತಿದ್ದೇನೆ. ಮನುಷ್ಯನಲ್ಲಿರುವ ಹಣ, ಸಂಪತ್ತು ಕಳವಾಗಬಹುದು. ಆದರೆ ವಿದ್ಯೆ ಎಂದಿಗೂ ಕಳವು ಮಾಡಲಾಗದ ಸಂಪತ್ತು. ಕುಸುಮೋದರ ಶೆಟ್ಟಿ ಅವರು ಭವಾನಿ ಫೌಂಡೇಶನ್ ಮುಖಾಂತರ 4-5 ಶಾಲೆಗಳನ್ನು ದತ್ತು ಪಡೆದು ಮುನ್ನಡೆಸುವಂತಹ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆ. ಮಕ್ಕಳು ಕಲಿತು ದೊಡ್ಡವರಾದ ಬಳಿಕ ನಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿ, ವಿದ್ಯೆ ಕಲಿಸಿದ ಗುರು ಹಾಗೂ ನಮಗೆ ಸಹಕರಿಸಿದ ಸಮಾಜದ ಋಣವನ್ನು ಎಂದಿಗೂ ಮರೆಯಬಾರದು ಎಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ ಶೆಟ್ಟಿ ಅವರು ನುಡಿದರು. ಫನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಸಭಾಂಗಣದಲ್ಲಿ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಳದ ವತಿಯಿಂದ ಆಯೋಜಿಸಲಾಗಿದ್ದ 21 ನೇ…

Read More

ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು (ರಿ) ಇದರ ಆಶ್ರಯದಲ್ಲಿ ಮಹಿಳಾ ಬಂಟರ ವಿಭಾಗ, ಯುವ ಬಂಟರ ವಿಭಾಗ, ವಿದ್ಯಾರ್ಥಿ ಬಂಟರ ವಿಭಾಗ ಇದರ ಸಹಕಾರದೊಂದಿಗೆ ಆಟಿಡೊಂಜಿ ಬಂಟೆರೆ ಸೇರಿಗೆ ಸಾಧಕರಿಗೆ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರವು ದಿನಾಂಕ 10-08-2024 ರ ಶನಿವಾರ ಎಂ ಸುಂದರ್ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಂಟರ ಸಂಘದ ಮಾರ್ಗದರ್ಶಕರಾದ ಸವಣೂರು ಸೀತಾರಾಮ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಬಂಟರ ಸಂಘದ ನೂತನ ಅಧ್ಯಕ್ಷ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಒಟ್ಟು ತಾಲೂಕಿನ ಬಂಟ ಬಂಧುಗಳನ್ನು ಒಂದು ಕಡೆ ಸೇರಿಸುವ ಕಾರ್ಯಕ್ರಮ ಇದಾಗಿದೆ. ತಾಲೂಕಿನಲ್ಲಿ ಅದೆಷ್ಟೋ ಸಾಧಕರಿದ್ದಾರೆ.…

Read More

ತುಳು ಭಾಷೆಯ ಬಗ್ಗೆ ಕೀಳರಿಮೆ ಬೇಡ. ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಒಂದಾಗಿದ್ದು, ನಾವೆಲ್ಲರೂ ತುಳು ಭಾಷೆ ಉಳಿವಿಗಾಗಿ ಪ್ರಯತ್ನಿಸೋಣ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ತುಳು ಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 30 ನೇ ವರ್ಷದ ಸಂಭ್ರಮ, ಅಮೃತ ಸೋಮೇಶ್ವರ ನೂತನ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಳು ಭಾಷೆಗೆ ಅಮೃತ ಸೋಮೇಶ್ವರ ಅವರ ಸೇವೆ, ಕೊಡುಗೆ ಅಪಾರ. ಅವರ ಹೆಸರಿನಲ್ಲಿ ಸಭಾಂಗಣ ನಿರ್ಮಿಸಿ ಅವರಿಗೆ ಗೌರವ ನೀಡುವ ಕೆಲಸ ಅಕಾಡೆಮಿಯಿಂದ ನಡೆದಿದೆ ಎಂದರು. ತುಳು ಭಾಷೆಗೆ ರಾಜ್ಯದ ಸ್ಥಾನಮಾನ ಮತ್ತು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಬೇಕು ಎಂದು ದೊಡ್ಡ ಮಟ್ಟಿನ ಪ್ರಯತ್ನ ಈಗಾಗಲೇ ನಡೆದಿದೆ. ಆದರೆ ಅದಕ್ಕೆ ಸರಿಯಾದ ಪ್ರತಿಫಲ ಸಿಕ್ಕಿಲ್ಲ. ವೀರಪ್ಪ ಮೊಯಿಲಿ ಅವರು ತುಳು ಭಾಷೆಯ ಮುಖ್ಯಮಂತ್ರಿ. ತುಳು ಸಾಹಿತ್ಯದ ಜತೆ ಜತೆಗೇ ಬೆಳೆದಿದ್ದಾರೆ. ಅವರು ಕೂಡಾ ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಕೆಲವಾರು ಕಾರಣಗಳಿಂದ ಇದರ ಅನುಷ್ಠಾನ ಸಾಧ್ಯವಾಗಿಲ್ಲ…

Read More

ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ನ 3ನೇ ವಾರ್ಷಿಕ ಮಹಾಸಭೆ ಸುರತ್ಕಲ್ ಸುಭಾಷಿತನಗರದ ಹೊಟೇಲ್ ಸೂರಜ್ ನ ಸಭಾಂಗಣದಲ್ಲಿ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಸೋಸಿಯೇಶನ್ ನ ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು ಪ್ರಸ್ತಾವಿಕವಾಗಿ ಮಾತನಾಡಿದರು.‌ ಸುಭಾಷಿತ ನಗರದಲ್ಲಿ ಕಳೆದ ಮೂರು ವರ್ಷಗಳಿಂದ ಬಹಳಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಶಾಸಕ ಡಾ. ವೈ ಭರತ್ ಶೆಟ್ಟಿಯವರ ಮೂಲಕ ರಾಜ್ಯ ಸರಕಾರದ 3 ಕೋಟಿ ರೂಪಾಯಿಯ ಅನುದಾನದಿಂದ ಗುತ್ತಿಗೆದಾರ ಸುಧಾಕರ ಪೂಂಜ ಅವರು ಸುಭಾಷಿತನಗರದ ಸಮಗ್ರ ಅಭಿವೃದ್ಧಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ ಎಂದು ಪುಷ್ಪರಾಜ ಶೆಟ್ಟಿಯವರು ತಿಳಿಸಿದರು. ವಾರ್ಷಿಕ ವರದಿಯನ್ನು ಚಂದ್ರಶೇಖರ ಶೆಟ್ಟಿ ಮಂಡಿಸಿದರು. ವಾರ್ಷಿಕ ಲೆಕ್ಕ ಪತ್ರವನ್ನು ಕೋಶಾಧಿಕಾರಿ ನರಸಿಂಹ ಸುವರ್ಣ ಮಂಡಿಸಿದರು. ಅಧ್ಯಕ್ಷ ರಮೇಶ್ ಶೆಟ್ಟಿ ಮಾತನಾಡಿ ಅಸೋಸಿಯೇಶನ್ ಗೆ ಕಚೇರಿಯ ಅವಶ್ಯಕತೆ ಇದ್ದು, ಇದೇ ಬರುವ ಡಿಸೆಂಬರ್ ತಿಂಗಳಿನಲ್ಲಿ ಮುಕ್ತಾಯ ಹಂತದಲ್ಲಿರುವ ಸುಭಾಷಿತ ಪ್ರೈಡ್ ಕಟ್ಟಡದಲ್ಲಿ ದೊರಕಲಿದೆ.…

Read More

ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಲ್‌ ಬೈಲ್ ನ 2024 -2025 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು. ಒಂದನೇ ರಾಜ್ಯಪಾಲರು ಮತ್ತು ಪದಗ್ರಹಣ ಅಧಿಕಾರಿ ಲಯನ್ ಅರವಿಂದ ಶೆಣೈ pmjf ಇವರು ನೂತನ ಅಧ್ಯಕ್ಷ ಸೂರಜ್ ಆಚಾರ್ಯ ಕದ್ರಿ, ಕಾರ್ಯದರ್ಶಿ ಕಿಶೋರ್ ಡಿ ಶೆಟ್ಟಿ, ಕೋಶಾಧಿಕಾರಿ ಸತ್ಯೇಂದ್ರ ಭಟ್ ಹಾಗೂ ಲಿಯೋ ನೂತನ ಅಧ್ಯಕ್ಷೆ ಜ್ಞಾಹ್ನವಿ, ಕಾರ್ಯದರ್ಶಿ ಸುಮಂತ್, ಕೋಶಾಧಿಕಾರಿ ಅಪೇಕ್ಷ ಕದ್ರಿ ಇವರುಗಳಿಗೆ ಪದಗ್ರಹಣ ಮಾಡಿದರು. ನೂತನ ಅಧ್ಯಕ್ಷ ಸೂರಜ್ ಆಚಾರ್ಯ, ಪತ್ನಿ ನಿಶಾ ಮತ್ತು ತಾಯಿ ಶಾಲಿನಿ ವಿ. ಆಚಾರ್ಯ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸದಸ್ಯರಾಗಿ ಆಯ್ಕೆಯಾದ ಕ್ಲಬ್ಬಿನ ಸದಸ್ಯ ಮೋಹನ್ ಕೊಪ್ಪಲ್ ಕದ್ರಿ, ಜೀ ಕನ್ನಡದ ಡ್ರಾಮಾ ಜೂನಿಯರ್ ಸೀಸನ್ 5ರ ಚಾಂಪಿಯನ್ ರಿಷಿಕಾ ಕುಂದೇಶ್ವರ ಕದ್ರಿ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ 98.08 ಅಂಕ ಗಳಿಸಿ ಸೈಂಟ್ ಅಲೋಶಿಯಸ್ ಶಾಲೆಗೆ 3ನೇ ಟಾಪರ್…

Read More