Author: admin
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ಕಂಪ್ಯೂಟರ್ ತರಬೇತಿ ,ಅಕೌಂಟೆನ್ಸಿ ಇತ್ಯಾದಿ ವಿವಿಧ ಹಂತಗಳಲ್ಲಿ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಪುಣಚ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಾರಪ್ಪ ಶೆಟ್ಟಿ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸಿ ನೆರವೇರಿಸಿದರು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕರಾವಳಿ ಭಾಗದಲ್ಲಿ ವಿಶಿಷ್ಟ ತರಬೇತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಉದ್ಯೋಗ ಕೌಶಲ್ಯತೆ ಗಳನ್ನು ಹೆಚ್ಚಿಸುವ ವಿವಿಧ ಯೋಜನೆಗಳ ಮೂಲಕ ವಿದ್ಯಾಮಾತಾ ಅಕಾಡೆಮಿಯು ಫಲಿತಾಂಶವನ್ನು ಪಡೆಯುತ್ತಿರುವುದಲ್ಲದೆ ಸಾವಿರಾರು ವಿದ್ಯಾರ್ಥಿಗಳಿಗೆ ಖಾಸಗಿ ಮತ್ತು ಸರಕಾರಿ ಕ್ಷೇತ್ರಗಳಲ್ಲಿ ಉದ್ಯೋಗವನ್ನು ಪಡೆಯಲು ದಾರಿದೀಪವಾಗಿರುವುದನ್ನು ಮುಕ್ತವಾಗಿ ಶ್ಲಾಘಿಸಿ ಸಂಸ್ಥೆಗೆ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಅವರು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿ, ಅತಿಥಿಯಾಗಿ ಆಗಮಿಸಿದ್ದ ಶ್ರೀ ಮಾರಪ್ಪ ಶೆಟ್ಟಿಯವರನ್ನು ಸಂಸ್ಥೆಯ…
ಬೆಂಗಳೂರಿನ ಪ್ರಖ್ಯಾತ ಉದ್ಯಮಿ, ಸ್ಮಾರ್ಟ್ ಲೈನರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕ, ಬೆಂಗಳೂರು ಬಂಟರ ಸಂಘದ ಮಾಜಿ ಖಜಾಂಚಿ ಅಮರನಾಥ್ ಶೆಟ್ಟಿ ಹೆಗ್ಗುಂಜೆ ಅವರು ಸಾಗರ ಬಂಟರ ಭವನ ಕಟ್ಟಡ ನಿರ್ಮಾಣಕ್ಕೆ 5 ಲಕ್ಷ ದೇಣಿಗೆಯನ್ನು ನೀಡಿದ್ದಾರೆ. ವೈಯಕ್ತಿಕ ಕಾರ್ಯಕ್ರಮ ನಿಮಿತ್ತ ಸಾಗರಕ್ಕೆ ಭೇಟಿ ನೀಡಿದ್ದ ಅಮರನಾಥ್ ಶೆಟ್ಟಿ ಅವರನ್ನು ಸಾಗರ ಬಂಟರ ಸಂಘದ ಮುಖಂಡರು ಸಾಗರ ಬಂಟರ ಸಂಘದ ಕಟ್ಟಡಕ್ಕೆ ಭೇಟಿ ನೀಡಲು ಆಹ್ವಾನ ನೀಡಿದ ಸಂದರ್ಭದಲ್ಲಿ ಕಟ್ಟಡದ ಪ್ರಗತಿಯನ್ನು ಕಂಡು ನಾನು ನಿಮ್ಮ ಕಷ್ಟಗಳಿಗೆ ಜೊತೆಯಾಗುತ್ತೇನೆ ಎಂದರು. ಆ ಕೂಡಲೇ ರೂ 5 ಲಕ್ಷ ದೇಣಿಗೆಯನ್ನು ನೀಡಿ ಮಾತನಾಡಿ, ನಾನು ಸತತವಾಗಿ 15 ವರ್ಷಗಳಿಂದ ಬೆಂಗಳೂರು ಬಂಟರ ಸಂಘ ಹಾಗೂ ಹಲವಾರು ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಸಮುದಾಯದ ಕೆಲಸ ದೇವರ ಕೆಲಸ ಎಂದು ಪರಿಗಣಿಸಿದ್ದೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಾಗರ ಬಂಟರ ಸಂಘದ ಅಧ್ಯಕ್ಷ ಸುಧೀರ್ ಶೆಟ್ಟಿ ಹಕ್ಲಾಡಿ ಅವರು ಅಮರನಾಥ್ ಶೆಟ್ಟಿ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ಬರೋಡ ಶಶಿಧರ ಶೆಟ್ಟಿಯವರ ಮಿತ್ರ ಶಿವಚಂದ್ರ ಶೆಟ್ಟಿಯವರು ಪಟ್ಲ ದಶಮ ಸಂಭ್ರಮಕ್ಕೆ 25 ಲಕ್ಷ ರೂ. ದೇಣಿಗೆಯನ್ನು ಘೋಷಿಸಿದ್ದಾರೆ. ಯಕ್ಷಗಾನದ ಬಗ್ಗೆ ತುಂಬಾ ಅಭಿರುಚಿ ಹೊಂದಿರುವ ಶಿವಚಂದ್ರ ಶೆಟ್ಟಿಯವರು ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಯ ವೈಖರಿಯನ್ನು ಮೆಚ್ಚಿ ಬರೋಡ ಶಶಿಧರ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ದೇಣಿಗೆ ನೀಡಿದ್ದಾರೆ. ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಉದ್ಯಮವನ್ನು ಹೊಂದಿದ್ದು, ಕೊಡುಗೈ ದಾನಿಯಾಗಿರುವ ‘ಉಡುಪಿ ಟು ಮುಂಬೈ’ ಹೋಟೆಲ್ ಸಿ.ಎಂ.ಡಿ ಶಿವಚಂದ್ರ ಶೆಟ್ಟಿಯವರಿಗೆ ಹಾಗೂ ಅವರ ಕುಟುಂಬಕ್ಕೆ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷರಾದ ಡಾ| ಕನ್ಯಾನ ಸದಾಶಿವ ಶೆಟ್ಟಿ, ಡಾ| ಪ್ರಕಾಶ್ ಶೆಟ್ಟಿ, ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಮತ್ತು ಪಟ್ಲ ಸತೀಶ್ ಶೆಟ್ಟಿ, ಯಕ್ಷಧ್ರುವ ಪಟ್ಲ ಸಂಭ್ರಮ ದಶಮಾನೋತ್ಸವ ಸಮಿತಿಯ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಡಾ| ಹರ್ಷಕುಮಾರ್ ರೈ ಮಾಡಾವು ಸಾರಥ್ಯದ ಜನ್ಮ ಕ್ರಿಯೇಷನ್ಸ್ ಸಂಸ್ಥೆ ಹೊಸ ಪ್ರತಿಭೆಗಳನ್ನು, ಯುವ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಅವರಿಗೆ ವೇದಿಕೆ ಕೊಟ್ಟು ಬೆಳೆಸುವ ಕಾರ್ಯವನ್ನು ಮಾಡುತ್ತಿದ್ದು, ಕಳೆದ ಹತ್ತು ವರ್ಷಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ದೇಶಾಭಿಮಾನ ಜೊತೆಗೆ ದೇಶಭಕ್ತಿ ಸಾರುವ ಮತ್ತು ಭಕ್ತಿ ಗೀತೆಗಳ ಹಲವು ಕಿರುಚಿತ್ರಗಳು, ಆಲ್ಬಮ್ ಹಾಡು ಮತ್ತು ಧ್ವನಿಮುದ್ರಿಕೆಗಳನ್ನು ನಿರ್ಮಾಣ ಮಾಡಿ ದೇಶ ವಿದೇಶಗಳಲ್ಲಿ ಬಿಡುಗಡೆಗೊಳಿಸಿದ ಕೀರ್ತಿ ಜನ್ಮ ಕ್ರಿಯೇಷನ್ ಸಂಸ್ಥೆಗಿದೆ.ಧಾರ್ಮಿಕ ಕ್ಷೇತ್ರದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಮಾಡಿ ಜಾಗತಿಕ ಹಿಂದೂ ಫೌಂಡೇಶನ್ ನಿಂದ ಪ್ರಶಂಸೆ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ತ್ರಿವರ್ಣ, ಜೈ ಭಾರತಾಂಬೆ ಹಾಗೂ ಅಷ್ಟ ಕ್ಷೇತ್ರ ಗಾನ ವೈಭವ ಈ ಸಂಸ್ಥೆಯ ನಿರ್ಮಾಣದ ಪ್ರಮುಖವಾದವು ಆಗಿವೆ. ಇದೇ ಸಂಸ್ಥೆಯಿಂದ ಆಗಸ್ಟ್ 15 ರಂದು ನಮಸ್ತೆ ಸಿಂಧೂರ್ ಎಂಬ ದೇಶ ಭಕ್ತಿ ಸಾರುವ ಕಿರುಚಿತ್ರ ಬಿಡುಗಡೆಗೊಳ್ಳಲಿದೆ. ಡಾ|ಹರ್ಷಕುಮಾರ್ ರೈ ಅವರು ಪುತ್ತೂರು…
ಪಟ್ಲ ಫೌಂಡೇಶನ್ ನ ಆಧಾರ ಸ್ತಂಭ, ಯಕ್ಷಧ್ರುವ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು, ಸಾವಿರಾರು ಕುಟುಂಬಗಳ ಕಣ್ಣೀರು ಒರೆಸಿ ಆ ಮನೆಗಳ ನಂದಾದೀಪವಾಗಿ ಬೆಳಗುತ್ತಿರುವ ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಅವರು ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದಶಮ ಸಂಭ್ರಮಕ್ಕೆ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಈಗಾಗಲೇ ಸಾವಿರಾರು ಜನರಿಗೆ ದೇಶಾದ್ಯಾoತ ಉದ್ಯೋಗ ನೀಡಿ ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಬೃಹತ್ ಐಟಿ ಪಾರ್ಕ್ ನಿರ್ಮಾಣ ಮಾಡುವ ಯೋಜನೆಯೊಂದಿಗೆ ಇನ್ನಷ್ಟು ನಮ್ಮ ಊರಿನ ಸಾವಿರಾರು ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮಹಾಸಂಕಲ್ಪಕ್ಕೆ ಸಿದ್ಧರಾಗಿರುವ ಕೊರಂಗ್ರಪ್ಪಾಡಿಯ ಹೆಮ್ಮೆಯ ಕುವರ ಡಾ| ಪ್ರಕಾಶ್ ಶೆಟ್ಟಿಯವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಾರಂಭವಾದ 10 ವರ್ಷಗಳಿಂದಲೂ ವಿಶೇಷ ಸಹಕಾರ ನೀಡಿ ಇಷ್ಟು ಎತ್ತರಕ್ಕೆ ಸಂಸ್ಥೆ ಬೆಳೆಯಲು ಕಾರಣೀಕರ್ತರಾಗಿದ್ದಾರೆ. ಡಾ| ಕೆ ಪ್ರಕಾಶ್ ಶೆಟ್ಟಿಯವರು ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಬಹಳಷ್ಟು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.ಕೇಂದ್ರ ಸಮಿತಿಯ ಗೌರವಾಧ್ಯಕ್ಷರಾದ ಡಾ|…
ನಾವು ಸಣ್ಣವರು ಇರುವಾಗ ತುಂಬಾ ಬಡತನದ ಕಾಲ. ಅಂದರೆ ಆ ಕಾಲದಲ್ಲಿ ಎಲ್ಲರೂ ಇದ್ದದ್ದು ಹಾಗೆಯೇ. ಹೆಚ್ಚಿನವರು ಸಾಗುವಳಿ ಮಾಡಿದ ಅಕ್ಕಿ ಮಳೆಗಾಲದಲ್ಲಿ ಲೆಕ್ಕದ್ದು. ಅದನ್ನೇ ಮುಂದೆ ಮುಂದೆ ದೂಡಬೇಕು. ಮತ್ತೂ ಕಡಿಮೆಯಾದರೆ ಮತ್ತೆ ಸಾಲ ಮಾಡಬೇಕು. ರೇಷನ್ ಅಕ್ಕಿ ಇಷ್ಟೇ ಎಂದು ಕೊಡುತ್ತಿದ್ದರು. ಅದರಲ್ಲಿ ಕಲ್ಲು ಕಸ ತುಂಬಾ ಇರುತ್ತಿತ್ತು, ಅರ್ಧಕ್ಕರ್ಧ. ಅದಕ್ಕಾಗಿ ಮೊದಲೇ ಜಾಗರೂಕತೆ ವಹಿಸುತ್ತಿದ್ದರು. ರಾಗಿ ಹಾಕಿದ ಗಂಜಿ ಮಾಡುತ್ತಿದ್ದರು, ಹಲಸಿನ ಹಣ್ಣಿನ ಸಮಯದಲ್ಲಿ ಹಲಸಿನ ಪದಾರ್ಥ, ಹಲಸಿನ ಬೀಜ ಬೇಯಿಸುವುದು, ಗೆಣಸಿನ ಸಮಯದಲ್ಲಿ ಗೆಣಸು ಬೇಯಿಸುವುದು. ಗೆಣಸಿನ ಸಮಯದಲ್ಲಿ ಗೆಣಸು ಬೇಯಿಸಿ, ಸಣ್ಣ ಸಣ್ಣ ಹೋಳು ಮಾಡಿ, ಬಿಸಿಲಿನಲ್ಲಿ ಒಣಗಿಸಿ ಇಡುವುದು. ಅದನ್ನು ಮಳೆಗಾಲದಲ್ಲಿ ಹಲಸಿನ ಬೀಜದೊಟ್ಟಿಗೆ ಬೇಯಿಸುವುದು, ಹೀಗೆಲ್ಲಾ ಕಾಲ ಕಳೆಯುವುದು ರೂಢಿಯಾಗಿತ್ತು. ನಾವೇ ಎಂದಲ್ಲ, ಹೆಚ್ಚಿನವರು ಹೀಗೆಯೇ ಇದ್ದದ್ದು ಮತ್ತು ದೀಪದ ವಿಷಯ ಎಂದರೆ, ಚಿಮುಣಿ ಎಣ್ಣೆ ತಿಂಗಳಿಗೆ ಒಂದು ಬಾಟ್ಲಿ ರೇಷನ್ ನಲ್ಲಿ ಸಿಗುವುದು, ಬೇರೆ ಎಲ್ಲೂ ಸಿಗುವುದಿಲ್ಲ. ಅದಕ್ಕಾಗಿ ನನ್ನ…
ಮೂಡುಬಿದಿರೆ: ಮಂಗಳೂರು ವಿ.ವಿ ಮತ್ತು ಭುವನೇಂದ್ರ ಕಾಲೇಜು ಕಾರ್ಕಳ ಇದರ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ನ ಪುರುಷ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ತಂಡವು ಸತತ 20ನೇ ಬಾರಿ ಅವಳಿ ಪ್ರಶಸ್ತಿಯನ್ನು ಪಡೆÀದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಶ್ರೀ ಭುವನೇಂದ್ರ ಕಾಲೇಜು ತಂಡವನ್ನು ಸೋಲಿಸಿ ಶ್ರೀ ಎಂ.ಕೆ ಅನಂತರಾಜ್ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಮಹಿಳೆಯರ ತಂಡವು ಎಸ್.ವಿ.ಟಿ ಮಹಿಳಾ ಕಾಲೇಜು ತಂಡವನ್ನು ಸೋಲಿಸಿ ಫೇಬಿಯನ್ ಬಿ ಎನ್ ಕುಲೊಸೊ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಪುರುಷರ ವಿಭಾಗದಲ್ಲಿ ಬೆಸ್ಟ್ ಆಲ್ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್ನ ಪ್ರಜ್ವಲ್ ಹಾಗೂ ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ಶ್ರೀನಿವಾಸ್ ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿ ಬೆಸ್ಟ್ ಆಲ್ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್ನ ಸಹನಾ ಹಾಗೂ ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ವೇದಾ ಪಡೆದುಕೊಂಡರು. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ…
ಕಲಾವಿದರ ಸಂಕಷ್ಟಕ್ಕೆ ಬದ್ದರಾಗಿ ನಿಂತ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಕಾರ್ಯವೈಖರಿಗೆ ಗುಜರಾತ್ ನ ಕಲಾಭಿಮಾನಿ ಬಂಧುಗಳು ಶಂಕರ್ ಶೆಟ್ಟಿ, ರವಿನಾಥ್ ಶೆಟ್ಟಿ, ಅಜಿತ್ ಶೆಟ್ಟಿ ಹಾಗೂ ರಾಮಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಅನೇಕ ದಾನಿಗಳು ಮುಂದೆ ಬಂದು ಪಟ್ಲ ದಶಮ ಸಂಭ್ರಮಕ್ಕೆ 50 ಲಕ್ಷ ರೂಪಾಯಿ ದೇಣಿಗೆಯನ್ನು ಘೋಷಿಸಿದ್ದಾರೆ. ಯಕ್ಷಧ್ರುವ ದಶಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಬರೋಡ ಶಶಿಧರ ಶೆಟ್ಟಿ ಅವರ ವಿಶೇಷ ಮನವಿಗೆ ಸ್ಪಂದಿಸಿದ ಗುಜರಾತ್ ನ ದಾನಿಗಳಿಗೆ ಪಟ್ಲ ಫೌಂಡೇಶನ್ ಟ್ರಸ್ಟ್ ಯಾವತ್ತೂ ಚಿರಋಣಿಯಾಗಿದೆ ಎಂದು ಕೇಂದ್ರ ಸಮಿತಿಯ ಗೌರವಾಧ್ಯಕ್ಷ ಡಾ| ಕನ್ಯಾನ ಸದಾಶಿವ ಶೆಟ್ಟಿ, ಡಾ| ಪ್ರಕಾಶ್ ಶೆಟ್ಟಿ, ದಶಮಾನೋತ್ಸವ ಸಮಿತಿಯ ಅಧ್ಯಕ್ಷ ಬರೋಡ ಶಶಿಧರ ಶೆಟ್ಟಿ ಹಾಗೂ ಪಟ್ಲ ಫೌಂಡೇಶನ್ ಟ್ರಸ್ಟ್ ಪದಾಧಿಕಾರಿಗಳು ತಿಳಿಸಿದ್ದಾರೆ.
ದೈವ ನೇಮದ ಹದಿನಾರು ಕಟ್ಟು ಕಟ್ಟಲೆಗಳನ್ನು ವಿವರಿಸುವ ಭಕ್ತಿ ಭಾವಪೂರ್ಣ ವಿಶಿಷ್ಠ ಹಾಡೊಂದನ್ನು ಐಲೇಸಾ ದಿ ವಾಯ್ಸ್ ಆಫ್ ಓಷನ್ [ರಿ] ಸಂಸ್ಥೆ ಧ್ವನಿ ಮುದ್ರಿಸಿ ಚಿತ್ರೀಕರಿಸಿದ್ದು, ಇದೇ ಮೇ 18 ಭಾನುವಾರದಂದು ಬಿಡುಗಡೆ ಮಾಡಲಿದೆ. ಖ್ಯಾತ ಸಾಹಿತಿ, ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಸಚಿವ, ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದ ಕುಲಪತಿಯಾಗಿದ್ದ ಡಾ. ಚಿನ್ನಪ್ಪ ಗೌಡ ಇವರ ಸಾಹಿತ್ಯವನ್ನು ಖ್ಯಾತ ಸಂಗೀತ ನಿರ್ದೇಶಕ ವಿ ಮನೋಹರ್ ಅವರು ಸಂಗೀತಕ್ಕೆ ಅಳವಡಿಸಿದ್ದು ಮಂಗಳೂರಿನ ಉದಯೋನ್ಮುಖ ಗಾಯಕ ಹರಿಪ್ರಸಾದ್ ಅದ್ಭುತವಾಗಿ ಹಾಡಿದ್ದಾರೆ. ಮುಂಬೈಯ ಸಮಾಜಮುಖಿ ಸೇವಾ ಸಂಸ್ಥೆ ಶಿವಾಯ ಫೌಂಡೇಶನ್ ಈ ಹಾಡನ್ನು ಪ್ರಾಯೋಜಿಸಿ ತುಳು ಜಾನಪದ ಲೋಕಕ್ಕೊಂದು ಭಕ್ತಿಪೂರ್ಣ ಭಾವಗೀತೆಯೊಂದನ್ನು ಕೊಡುಗೆಯಾಗಿ ನೀಡಲಿದ್ದಾರೆ. ಹಾಡು ದೈವ ಆರಾಧನೆಯ ವಿವಿಧ ಕಟ್ಟು ಕಟ್ಟಲೆಗಳನ್ನು ವಿವರಿಸುತ್ತಾ ಲೋಕದ ತುಂಬೆಲ್ಲಾ ಸತ್ಯವನ್ನು ಉಳಿಸು ಎನ್ನುವ ಪ್ರಾಮಾಣಿಕ ಪ್ರಾರ್ಥನೆಯೊಂದಿಗೆ ಸಂಪನ್ನಗೊಳ್ಳುತ್ತದೆ. ನಿಟ್ಟೆ ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಡಾ. ಸತೀಶ್ ಕುಮಾರ್ ಭಂಡಾರಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಹಾಡನ್ನು…
ಈ ಬಾರಿಯ ಮಹಾರಾಷ್ಟ್ರ ಎಸ್ ಎಸ್ ಸಿ ಬೋರ್ಡ್ ಪರೀಕ್ಷೆಯಲ್ಲಿ ಹೊರನಾಡ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕರ್ನಾಟಕ ಸಂಘ ಡೊಂಬಿವಲಿ ಸಂಚಾಲಿತ ಮಂಜುನಾಥ ವಿದ್ಯಾಲಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಿಗೆ ಉತ್ತಮ ಫಲಿತಾಂಶ ಬಂದಿದೆ. ಕನ್ನಡ ಮಾಧ್ಯಮದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಪ್ರತಿಶತ ಫಲಿತಾಂಶ ತಂದಿರುತ್ತಾರೆ. ಅವರಲ್ಲಿ 4 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶೇ. 92 ಅಂಕಗಳೊಂದಿಗೆ ಸ್ನೇಹ ರಾಜು ಭಂಡಾರೆ ಪ್ರಥಮ, ಜಯಂತಿ ತಾರಾಸಿಂಗ್ ಚವ್ಹಾನ್ ಶೇ. 81.40 ಅಂಕಗಳೊಂದಿಗೆ ದ್ವಿತೀಯ, ಅರ್ಜುನ್ ಸುನೀಲ್ ರಾಠೋಡ್ ಶೇ. 79 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.ಆಂಗ್ಲ ಮಾಧ್ಯಮದಲ್ಲಿ ಒಟ್ಟು 139 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 74 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 54 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 11 ವಿದ್ಯಾರ್ಥಿಗಳು ದ್ವಿತೀಯ…















