Author: admin
ಅವಿಭಜಿತ ಮಂಗಳೂರು ತಾಲೂಕು ವ್ಯಾಪ್ತಿಯ, 2023 – 24ನೇ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ 95% ಮತ್ತು ಅಧಿಕ ಅಂಕಗಳನ್ನು ಪಡೆದ ಬಂಟ ಸಮಾಜದ ವಿದ್ಯಾರ್ಥಿಗಳನ್ನು ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಗೌರವ ಪುರಸ್ಕಾರವನ್ನು ಅಗೋಸ್ತು ತಿಂಗಳ 15ನೇ ತಾರೀಕಿನಂದು ಬೆಳಗ್ಗೆ 10.30 ಗಂಟೆಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ ಸಭಾಭವನದಲ್ಲಿ ನೆರವೇರಿಸುವುದೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಂಕಪಟ್ಟಿ, ಆಧಾರ್ ಕಾರ್ಡ್ನ ಪ್ರತಿ ಮತ್ತು ಒಂದು ಭಾವಚಿತ್ರ ಸಮೇತ ಬಂಟರ ಯಾನೆ ನಾಡವರ ಮಾತೃ ಸಂಘದ ಕಛೇರಿ, ಒಂದನೇ ಮಹಡಿ, ಅಮೃತೋತ್ಸವ ಕಟ್ಟಡ ಮಂಗಳೂರು, ಇಲ್ಲಿ ಜುಲೈ ತಿಂಗಳ 31ನೇ ತಾರೀಕಿನೊಳಗೆ ಸಲ್ಲಿಸಲು ವಿನಂತಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಕೃಷ್ಣಪ್ರಸಾದ್ ರೈಯವರನ್ನು 9480015895 ಸಂಪರ್ಕಿಸಬಹುದು.
ಎಂಆರ್ ಪಿಎಲ್ ನ 4 ನೇ ಹಂತದ ನಿರ್ವಸಿತರ ಕುಟುಂಬಗಳ ಉದ್ಯೋಗ ಹಾಗೂ ಪುನರ್ವಸತಿ ಬೇಡಿಕೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ
ಎಂಆರ್ ಪಿಎಲ್ 4ನೇ ಹಂತದ ಭೂ ನಿರ್ವಸಿತರಾಗುವ ಕುತ್ತೆತೂರು, ಪೆರ್ಮುದೆ, ಎಕ್ಕಾರು ಗ್ರಾಮದ ನಿವಾಸಿಗಳಿಗೆ ಸಿಗಬೇಕಾದ ಪುನರ್ವಸತಿ ಹಾಗೂ ಉದ್ಯೋಗ ಮತ್ತಿತ್ತರ ಬೇಡಿಕೆಗಳ ಈಡೇರಿಸುವ ಕುರಿತಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು. ದ.ಕ ಜಿಲ್ಲಾ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್, ವಿಶೇಷ ಭೂಸ್ವಾದಿನಾಧಿಕಾರಿ, ಎಂಆರ್ ಪಿಎಲ್ ನ ಅಧಿಕಾರಿಗಳ ಮತ್ತು ಭೂ ನಿರ್ವಸಿತರ ಹಿತರಕ್ಷಣ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸ್ಥಳೀಯ ಶಾಸಕರು ಮತ್ತು ದ.ಕ ಜಿಲ್ಲಾ ಸಂಸದರು ಮಾತನಾಡಿ, ಎಂಆರ್ ಪಿಎಲ್ ನ ವಿಸ್ತರಣೆಗಾಗಿ ಸ್ಥಳಿಯರು ಭೂಮಿಯನ್ನು ತ್ಯಾಗ ಮಾಡುತ್ತಿದ್ದು ಅವರಿಗೆ ದೊರಕಬೇಕಾದ ಸವಲತ್ತುಗಳನ್ನು ಯಾವುದೇ ನಿಬಂದನೆಗಳಿಲ್ಲದೆ ಅಧಿಸೂಚನೆಗೆ ಮೊದಲು ಇದ್ದ ಎಲ್ಲಾ ಮನೆಗಳಿಗೆ ಸೂಕ್ತ ಪುನರ್ವಸತಿ ಮತ್ತು ಉದ್ಯೋಗವನ್ನು ವಿಳಂಬ ಮಾಡದೆ ಶೀಘ್ರವಾಗಿ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಆಗ್ರಹಿಸಲಾಯಿತು. ಸುಧೀರ್ಘ ಸಭೆಯಲ್ಲಿ ಕೊನೆಗೆ ಜಿಲ್ಲಾಧಿಕಾರಿಗಳು ಮತ್ತು ಎಂಆರ್ ಪಿಎಲ್ ನ ಅಧಿಕಾರಿಗಳು ಎಲ್ಲಾ ಬೇಡಿಕೆಗಳಿಗೆ ಒಪ್ಪಿಗೆ…
ಓರ್ವ ನಿಷ್ಠಾವಂತ ಸ್ವಯಂ ಸೇವಕ, ಸಮಾಜಮುಖಿ ಸಂಘಟಕ ಹಾಗೂ ಪ್ರಾಮಾಣಿಕ ಲೆಕ್ಕ ಪರಿಶೋಧಕ ಸಿಎ ಅಶೋಕ ಶೆಟ್ಟಿ ಎಂ ಅವರು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಪದವಿಗೆ ಸ್ಪರ್ಧಿಸುತ್ತಿದ್ದು, ಚುನಾವಣೆಯಲ್ಲಿ ತಾನು ಯಶಸ್ಸು ಸಂಪಾದಿಸುವೆನೆಂಬ ಆತ್ಮ ವಿಶ್ವಾಸದಲ್ಲಿದ್ದಾರೆ. ಕಾರಣ ಅವರು ಈಗಾಗಲೆ ತನ್ನ ಸಾಮಾಜಿಕ, ಸಾರ್ವಜನಿಕ ಸಂಘಟನೆಗಳಲ್ಲಿ ದುಡಿದ ಅನುಭವ ಹೊಂದಿದ್ದು ನಗರದಲ್ಲಿ ವ್ಯಾಪಕ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಕಾರ್ಕಳ ಸಂಬೆಟ್ಟು ಶೀನಪ್ಪ ಶೆಟ್ಟಿ ಮತ್ತು ಮುಲ್ಲಾಡ್ ಲಕ್ಷ್ಮಿ ಶೆಟ್ಟಿ ದಂಪತಿಯವರಿಗೆ ಕಿರಿಯ ಪುತ್ರನಾಗಿ ಜನಿಸಿದ ಅಶೋಕ ಶೆಟ್ಟಿ ಅವರು ತನ್ನ ಸಿಎ ಪದವಿಯನ್ನು ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಪೂರೈಸಿ ಬಳಿಕ ತನ್ನದೇ ಆದ ಲೆಕ್ಕ ಪರಿಶೋಧನೆ ಸಂಸ್ಥೆಯನ್ನು ಹುಟ್ಟು ಹಾಕಿ ಓರ್ವ ಯಶಸ್ವಿ ಜನಪ್ರಿಯ ಲೆಕ್ಕ ಪರಿಶೋಧಕರೆಂಬ ಪ್ರಸಿದ್ಧಿ ಪಡೆದಿದ್ದಾರೆ. ಎಂ.ಎಂ.ಎಸ್ ಎಂಡ್ ಕೊ. ಎಂಬ ಸಂಸ್ಥೆಯ ಸ್ಥಾಪನೆ ಮುಖಾಂತರ ಅನೇಕ ಪ್ರತಿಷ್ಠಿತ ಕಂಪೆನಿಗಳು ಹಾಗೂ ಬ್ಯಾಂಕ್ ಗಳ ಲೆಕ್ಕಪರಿಶೋಧಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಯುತರು ಮೂಲತಃ ಓರ್ವ ಸಾಮಾಜಿಕ, ಸಾಮುದಾಯಿಕ ಕಳಕಳಿ…
ಮನುಷ್ಯ ಜೀವನದಲ್ಲಿ ದಾನ ಮತ್ತು ಧರ್ಮ ಕೇವಲ ಬಾಯಿ ಮಾತಿನ ಪದಗಳಾಗಿ ಉಳಿಯುವುದಿಲ್ಲ. ನಾವು ಕೈಯೆತ್ತಿ ನೀಡುವ ದಾನ, ಶ್ರದ್ಧೆಯಿಂದ ಆಚರಿಸುವ ಧರ್ಮ ಇವೆರಡೂ ಸ್ವಾರ್ಥ ರಹಿತವಾಗಿರಬೇಕು. ಉದ್ಯಮಿ ಕೆ.ಕೆ ಶೆಟ್ಟರು ತಮ್ಮ ನಡೆ ನುಡಿಗಳಿಂದ ಈ ಮಾತನ್ನು ಅರ್ಥವತ್ತಾಗಿಸಿದ್ದಾರೆ’ ಎಂದು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಮತ್ತು ಲೇಖಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ 2024 ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಅಹಮದ್ ನಗರದ ಉದ್ಯಮಿ ಹಾಗೂ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿ ಕುತ್ತಿಕಾರ್ ಅವರಿಗೆ ಅವರಿಗೆ ದೇವಸ್ಥಾನ ಆಡಳಿತ ಮಂಡಳಿ ಸೇವಾ ಸಮಿತಿ ಮತ್ತು ಊರವರ ವತಿಯಿಂದ ಶ್ರೀ ಕ್ಷೇತ್ರದ ಸಭಾಂಗಣದಲ್ಲಿ ಜರುಗಿದ ಸಾರ್ವಜನಿಕ ಅಭಿನಂದನಾ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ‘ಬಡವರಿಗೆ ಆರೋಗ್ಯ ಚಿಕಿತ್ಸೆ, ಗೃಹ ನಿರ್ಮಾಣ, ಶೈಕ್ಷಣಿಕ ನೆರವು, ಸಾಂಸ್ಕೃತಿಕ ಸಾಮಾಜಿಕ ಕಾರ್ಯಕ್ರಮಗಳಿಗೆ ಧನ ಸಹಾಯವಲ್ಲದೇ…
ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಬಿ. ರವೀಂದ್ರ ಶೆಟ್ಟಿ ಅವರಿಗೆ ಹಸನ್ ಹವ್ವಾ ಫೌಂಡೇಶನ್ ಕುದೊಳಿ ಸಂಸ್ಥಾಪಕ ಅಬ್ದುಲ್ಲಾ ಮಾದು ಮೂಲೆ ನೀಡುವ ದತ್ತಿನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಾಸರಗೋಡಿನ ಸೀತಾಂಗೋಳಿ ಅಲಯನ್ಸ್ ಕನ್ವೆನ್ಶನ್ ಸೆಂಟರ್ನಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡ ಲಾಯಿತು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕೆಯುಡಬ್ಲ್ಯುಜೆ ಕರ್ನಾಟಕ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಹರೀಶ್ ಪಾಂಡು ಶೆಟ್ಟಿ ಆಡಳಿತದ ಫಾರ್ಮ್ಹೌಸ್ ಸಮೂಹ ಹೋಟೇಲಿಗೆ ಎಕನಾಮಿಕ್ ಟೈಮ್ಸ್ ಮತ್ತು ಎಫ್ ಬಿ ಲೀಡರ್ಸ್ ಅವಾರ್ಡ್
ವಸಾಯಿ ತಾಲೂಕಿನಲ್ಲಿ ಹೋಟೆಲ್ ಉದ್ಯಮ ಮತ್ತು ಸಮಾಜ ಸೇವೆಯಲ್ಲಿ ಭಾರಿ ಜನಪ್ರಿಯತೆಯನ್ನು ಪಡೆದಿರುವ ಪಾಂಡು ಎಲ್ ಶೆಟ್ಟಿಯವರ ಸುಪುತ್ರರಾದ ಹರೀಶ್ ಪಾಂಡು ಶೆಟ್ಟಿ ಮತ್ತು ಭರತ್ ಶೆಟ್ಟಿಯವರ ಫಾರ್ಮ್ ಹೌಸ್ ಸಮೂಹ ಹೋಟೇಲಿಗೆ ಎಕನಾಮಿಕ್ ಟೈಮ್ಸ್ ಮತ್ತು ಎಫ್ ಬಿ ಲೀಡರ್ಸ್ ಅವಾರ್ಡ್ ಲಭಿಸಿದೆ. ಪ್ರಶಸ್ತಿಯನ್ನು ಜುಲೈ 1 ರಂದು ನಗರದ ರಾಡಿಸನ್ ಬ್ಲೂ ಇಂಟರ್ನ್ಯಾಶನಲ್ ಹೋಟೇಲಿನಲ್ಲಿ ಜರಗಿದ ಸಮಾರಂಭದಲ್ಲಿ ಪಾಂಡು ಎಲ್ ಶೆಟ್ಟಿ ಮತ್ತು ಹೋಟೆಲಿನ ನಿರ್ದೇಶಕ ಹರೀಶ್ ಶೆಟ್ಟಿ, ಪಾಂಡು ಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಚಿತ್ರ ನಟಿ ಮುಗ್ಧ ಗೋಡ್ಸೆಯವರಿಂದ ಸ್ವೀಕರಿಸಿದರು. 2011 ರಲ್ಲಿ ಸ್ಥಾಪಿತವಾದ, ಫಾರ್ಮ್ ಹೌಸ್ ಗ್ರೂಪ್ ಹೋಟೆಲ್ ಆಂಡ್ ರೆಸ್ಟೋರೆಂಟ್ ವಸಾಯಿ ಪರಿಸರದಲ್ಲಿ ಉದ್ಯಮವನ್ನು ನಡೆಸಿ ಹಂತ ಹಂತವಾಗಿ ಅಲ್ಪಾವಧಿಯಲ್ಲಿ ತನ್ನ ಉದ್ಯಮವನ್ನು ದೇಶ ವಿದೇಶಗಳಲ್ಲಿ ನಡೆಸುತ್ತಾ ರುಚಿ ಸುಚಿಕರವಾದ ಆಹಾರದಿಂದ ಗ್ರಾಹಕರ ಗಮನ ಸೆಳೆದಿದೆ. ರೆಸ್ಟೋರೆಂಟ್ ಬ್ರಾಂಡ್ ‘ಫಾರ್ಮ್ ಹೌಸ್’ ಉನ್ನತ ಮಟ್ಟಕ್ಕೇರಿ ಮುನ್ನಡೆಯುತ್ತಾ ಗ್ರಾಹಕರನ್ನು ಆತ್ಮೀಯವಾಗಿ ಸ್ವಾಗತಿಸುತ್ತಿದೆ. ಕುಟುಂಬದೊಂದಿಗೆ ಗುಣಮಟ್ಟದ…
ಮೂಡುಬಿದಿರೆ: 2024 ಮೇ ಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿ ಸೋಜಾ ಡಿ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ ಲೋಬೋ, ಪಲ್ಲವಿ ಹೆಚ್ ಆರ್, ಪ್ರಜ್ವಲ್, ವಿಲಿಟಾ ಆಲ್ವಿಶಾ ರೇಗೊ, ಆಂಚಲ್, ಸುಷ್ಮಾ ಎನ್, ಕಿರಣ್ ಚಂದ್ರಶೇಖರ್ ಶೇರಿಗಾರ್, ರೋಯ್ಡನ್, ಕೌಶಿಕ್, ಕಿರಣ್ ಭಾರಧ್ವಜ್, ರಜತ್ ಜೈನ್, ಶುಭಂಕರ್, ರಾಕೇಶ್, ಪ್ರಖ್ಯಾತ್, ಪವನ್, ನಾಗರಾಜ್ ಜಿ ಶೆಟ್ಟಿ, ಹೇಮಂತ್ ಕುಮಾರ್ ಡಿ.ಕೆ. , ಶ್ರೀನಿಧಿ ಎಸ್ ಶೆಟ್ಟಿ, ಖುಶ್ಬೂ ಮತ್ತು ಗೀತಾ ನಿಶಾ ಪಿರೇರಾ – ಒಟ್ಟು 25 ವಿದ್ಯಾರ್ಥಿಗಳು, ಹಾಗೂ ಜನವರಿ 2024ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಕ್ಲಾರ್ಸನ್, ಮೇಘಾ, ತೇಜಸ್, ವಾಣಿಶ್ರೀ, ಧಾಮಿನಿ, ದರ್ಶನ್ ಜಿ ಎಚ್, ಪ್ರಸಾದ, ನೌಫಾಲ್, ಅಂಕಿತಾ ಕಲ್ಲಪ್ಪ, ರಾಷ್ಟ್ರೀತ್ ಸಿ.ಜಿ, ಅವಿನಾಶ್, ಸುಕ್ಷ್ಮಾ, ಅಭಿಷೇಕ್ ಚೋಟಿ ಸೇರಿದಂತೆ 13 ವಿದ್ಯಾರ್ಥಿಗಳು, ಒಟ್ಟು…
“ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ಟ್ರಿಯಾಥ್ಲನ್, ಬೀಚ್ ಫೆಸ್ಟಿವಲ್ ಉದ್ಘಾಟನೆ ಕಾರ್ಯಕ್ರಮ ಆದಿತ್ಯವಾರ ಸಂಜೆ ನಗರದ ಟಿಎಂಎ ಪೈ ಸ್ಟಾರ್ ಕಾನ್ಫರೆನ್ಸ್ ಹಾಲ್ನಲ್ಲಿ ಜರುಗಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತಾಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಮಂಗಳೂರು ಟ್ರಿಯಾಥ್ಲನ್ ಹಾಗೂ ಮಂಗಳೂರು ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜನೆಯಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುತ್ತಿರುವ ತಪಸ್ಯ ಫೌಂಡೇಶನ್ ಸಾರ್ಥಕ ಕೆಲಸವನ್ನು ಮಾಡುತ್ತಿದೆ. ಸಂಘಟನೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಮಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡುತ್ತದೆ ಎನ್ನುವುದರಲ್ಲಿ ಸಂಶಯವಿಲ್ಲ. ಕ್ಯಾನ್ಸರ್ ಪೀಡಿತ ಮಕ್ಕಳ ಆರೈಕೆಗೆ 100 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸುತ್ತಿರುವ ಸಂಘಟನೆಯ ಜೊತೆಗೆ ಮಹಾನಗರ ಪಾಲಿಕೆ ನಿರಂತರ ಸಹಕಾರ ನೀಡಲಿದೆ” ಎಂದರು. ಮಂಗಳೂರು ಸಂಸದ ಕ್ಯಾ. ಬೃಜೇಶ್ ಚೌಟ ಮಾತಾಡಿ, “ತಪಸ್ಯ ಫೌಂಡೇಶನ್ ಮಾಡುತ್ತಿರುವ ಕಾರ್ಯ ನಿಜವಾದ ತಪಸ್ಸು. ನೀವು ಮಾಡುತ್ತಿರುವ ಕೆಲಸ ದೇವರ…
ಮುಂಬಯಿಯ ಪ್ರಸಿದ್ಧ ಕಲಾ ಸಂಘಟಕ ಅಜೆಕಾರು ಬಾಲಕೃಷ್ಣ ಶೆಟ್ಟಿ ಸಂಚಾಲಕತ್ವದ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಆಶ್ರಯದಲ್ಲಿ ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು ಮಹಿಳಾ ಯಕ್ಷಗಾನ ತಾಳಮದ್ದಳೆ ತಂಡದ ಮುಂಬಯಿ ಪ್ರವಾಸದ ಸರಣಿ ಯಕ್ಷಗಾನ ತಾಳಮದ್ದಳೆಯ ಉದ್ಘಾಟನೆ ಕಾರ್ಯಕ್ರಮವು ಜುಲೈ 6 ರಂದು ಸಂಜೆ ಕುರ್ಲಾ ಪೂರ್ವದ ಬಂಟರ ಭವನದ ಸಂಕುಲದಲ್ಲಿರುವ ಶ್ರೀ ವಿಷ್ಣುಮೂರ್ತಿ ಜ್ಞಾನ ಮಂದಿರ ಸಭಾಂಗಣದಲ್ಲಿ ನಡೆಯಿತು. ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಸರಣಿ ತಾಳಮದ್ದಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಜೆಕಾರು ಬಾಲಕೃಷ್ಣ ಶೆಟ್ಟಿ ಮುಂಬಯಿಯಲ್ಲಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ. ಯುವ ಜನರು, ಮಹಿಳೆಯರು ಇಂದು ಯಕ್ಷಗಾನಕ್ಕೆ ಹೆಚ್ಚು ಆಕರ್ಷಿತರಾಗುತ್ತಿರುವುದರೊಂದಿಗೆ ಯಕ್ಷಗಾನ ಕಲಿತು ಯಕ್ಷಗಾನ ಪ್ರದರ್ಶಿಸಲು ಮುಂದಾಗಿರುವುದು ಯಕ್ಷಗಾನಕ್ಕೆ ಯಾವುದೇ ಸಂಕಷ್ಟವಿಲ್ಲ ಎಂಬುದನ್ನು ತೋರಿಸುತ್ತದೆ. ಕಲೆ, ಕಲಾವಿದರನ್ನು ಗೌರವಿಸಿ ಸಹಕರಿಸುವುದು ಮುಂಬಯಿ ತುಳು ಕನ್ನಡಿಗರ ಹೆಗ್ಗಳಿಕೆ ಎಂದರು. ಬಂಟರ ಸಂಘ ಮುಂಬಯಿ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ನವೀನ್ ಶೆಟ್ಟಿ ಇನ್ನಾ…
ಕಾವೂರು ಬಂಟರ ಸಂಘದ 23 ನೇಯ ವಾರ್ಷಿಕ ಮಹಾಸಭೆಯು ಜುಲೈ 7 ರಂದು ಸಂಜೆ ಕಾವೂರು ಸಹಕಾರ ಭವನದಲ್ಲಿ ನಡೆಯಿತು. ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಂ ಆರ್ ಜಿ ಗ್ರೂಪ್ ನ ಸಿಎಂಡಿ ಡಾ ಕೆ ಪ್ರಕಾಶ್ ಶೆಟ್ಟಿಯವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿ ತ್ರಿಶೂಲ್ ಶೆಟ್ಟಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಡಾ ವೈ ಭರತ್ ಶೆಟ್ಟಿ, ಜೈರಾಜ್ ಬಿ ರೈ, ಟಿ ಪ್ರವೀಣ್ ಚಂದ್ರ ಆಳ್ವ, ಸಿಎ ರಾಮ್ ಮೋಹನ್ ರೈ, ವಸಂತ್ ಶೆಟ್ಟಿ, ರವಿರಾಜ್ ಶೆಟ್ಟಿ ನಿಟ್ಟೆ, ಡಾ ಪ್ರವೀಣ್ ಕುಮಾರ್ ರೈ ಉಪಸ್ಥಿತರಿದ್ದರು.