Author: admin
ವಿದ್ಯಾರ್ಥಿ ವೇತನ ನೀಡುವ ಉದ್ದೇಶ ಶಿಕ್ಷಣಕ್ಕೆ ಸ್ಫೂರ್ತಿ ನೀಡುವುದು, ಇದರ ಜತೆಗೆ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸುವ ಕಾರ್ಯವಾಗಬೇಕು. ಸಮಾಜ ಸುಧಾರಣೆ ಮಾಡುವ ಒಳ್ಳೆಯ ಕಾರ್ಯವನ್ನು ಗುರುಪುರ ಬಂಟರ ಮಾತೃ ಸಂಘ ಮಾಡುತ್ತಿದೆ. ನಕಾರಾತ್ಮಕ ಚಿಂತನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಮಕ್ಕಳಿಗೆ ಮಾರ್ಗದರ್ಶನ, ಸಂಸ್ಕೃತಿಯ ತಿಳುವಳಿಕೆ ನೀಡುವ ಕಾರ್ಯವಾಗಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಹೇಳಿದರು. ಗುರುಪುರ ಬಂಟರ ಮಾತೃ ಸಂಘ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮಂಗಳೂರು ಹಾಗೂ ಬೆಂಗಳೂರು ಬಂಟರ ಸಂಘ ಇದರ ಸಹಯೋಗದೊಂದಿಗೆ ವಾಮಂಜೂರು ಚರ್ಚ್ ಹಾಲ್ ನಲ್ಲಿ ನಡೆದ ಗುರುಪುರ ಬಂಟರ ಮಾತೃ ಸಂಘದ ವಾರ್ಷಿಕ ಸಮಾವೇಶ, ಮಹಾಸಭೆ, ಸಾಧಕರಿಗೆ ಸಮ್ಮಾನ, ವಿದ್ಯಾರ್ಥಿವೇತನ ವಿತರಣೆ, ವಿದ್ಯಾರ್ಥಿ ಪುರಸ್ಕಾರ, ಬಂಟ ಯುವತಿಯರ ಸಮಾವೇಶ- ಯುವ ಸಂಗಮ, 2024-27 ರ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ,…
ಯಕ್ಷಧ್ರುವ ಪಟ್ಲ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಕನಸಿನ “ಪಟ್ಲ ಯಕ್ಷಾಶ್ರಯ” ಯೋಜನೆಯ 30 ನೇ ಮನೆಯನ್ನು ಫಲಾನುಭವಿ ಶ್ರೀ ಕಟೀಲು ಮೇಳದ ಒಂದನೇ ಮೇಳದ ಕಲಾವಿದ ಪ್ರಶಾಂತ್ ಕಲ್ಲಡ್ಕರವರಿಗೆ ಹಸ್ತಾಂತರಿಸಲಾಯಿತು. ಯಕ್ಷಧ್ರುವ ಪಟ್ಲ ಟ್ರಸ್ಟಿನ ಮಹಾದಾನಿ, ಪ್ರತಿಷ್ಠಿತ ಎಂ ಆರ್ ಜಿ ಸಮೂಹ ಸಂಸ್ಥೆಗಳ ಸಿಎಂಡಿ ಡಾ| ಕೊರಂಗ್ರಪಾಡಿ ಪ್ರಕಾಶ ಶೆಟ್ಟಿಯವರು ಕೊಡುಗೆಯಾಗಿ ನೀಡಿದ ಈ ಮನೆಯ ಕೀಲಿ ಕೈ ಹಸ್ತಾಂತರ ಸಂದರ್ಭದಲ್ಲಿ ಟ್ರಸ್ಟಿನ ಬಂಟ್ವಾಳ ಘಟಕದ ಅಧ್ಯಕ್ಷರಾದ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ, ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ ಅಡ್ಯಾರ್ ಹಾಗೂ ಶ್ರೀಕಾಂತ್ ಅರಳ ಉಪಸ್ದಿತರಿದ್ದರು.
ಬಂಟ ಜನಾಂಗದ ಯುವಕ, ಯುವತಿಯರಿಗೆ ಮಾರ್ಗದರ್ಶನ ನೀಡುವ ಆದರ್ಶ ಕಾರ್ಯಕ್ರಮ ಇದಾಗಿದೆ. ಇದು ಕೇವಲ ಗುರುಪುರ ಬಂಟರ ಮಾತೃ ಸಂಘಕ್ಕೆ ಮಾತ್ರ ಸೀಮಿತವಾಗಿರದೇ ದೇಶ ವಿದೇಶದಲ್ಲಿರುವ ಎಲ್ಲಾ ಮಾತೃ ಸಂಘದವರು ಮಕ್ಕಳಿಗೆ ಸರಿಯಾದ ಮಾಹಿತಿ ಕೊಡುವ ಇಂತಹ ಕಾರ್ಯಕ್ರಮದ ಅನಿವಾರ್ಯತೆ ಇದೆ. ಇದು ಕೇವಲ ಬಂಟ ಸಮಾಜಕ್ಕೆ ಮಾತ್ರವಲ್ಲ ದೇಶದ ಸಮಸ್ತ ಯುವಕ, ಯುವತಿಯರಿಗೆ ಕಾಲಕಾಲಕ್ಕೆ ಸರಿಯಾಗಿ ಮಾರ್ಗದರ್ಶನ ಕೊಡಬೇಕಾದ ಅಗತ್ಯ ಇದೆ. ದೇಶದ ಯುವ ಶಕ್ತಿಯ ಮೇಲೆ ನಂಬಿಕೆ ಇಡಲಾಗಿದೆ. ಯುವ ಶಕ್ತಿ ನಮ್ಮ ದೇಶದ ಸಂಪತ್ತು ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಹೇಳಿದರು. ಅವರು ಗುರುಪುರ ಬಂಟರ ಮಾತೃ ಸಂಘ ಇದರ ಆಶ್ರಯದಲ್ಲಿ ಬಂಟ ಯಾನೆ ನಾಡವರ ಮಾತೃಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮಂಗಳೂರು ಹಾಗೂ ಬೆಂಗಳೂರು ಬಂಟರ ಸಂಘ ಇದರ ಸಹಯೋಗದೊಂದಿಗೆ ಗುರುಪುರ ಬಂಟರ ಮಾತೃ ಸಂಘದ ವಾರ್ಷಿಕ ಸಮಾವೇಶ, ಮಹಾಸಭೆ, ಸಾಧಕರಿಗೆ ಸನ್ಮಾನ,…
ಪುಣೆ ತುಳುಕೂಟವು ರಜತ ಮಹೋತ್ಸವ ಸಂಭ್ರಮದಲ್ಲಿದ್ದು ನಿರಂತರ ಕಾರ್ಯಕ್ರಮಗಳು ನಡೆಯಲಿದೆ. ಈ ನಿಟ್ಟಿನಲ್ಲಿ ರಜತ ಮಹೋತ್ಸವ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಜುಲೈ 11ರ ಗುರುವಾರದಂದು ಪುಣೆ ವಾರ್ಜೆಯಲ್ಲಿರುವ ಶಿವರ್ಶ್ ಹೋಟೆಲ್ ನ ಬ್ಯಾಂಕ್ವೇಟ್ ಹಾಲ್ ನಲ್ಲಿ ತುಳುಕೂಟದ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು ಪುಣೆ ತುಳುಕೂಟದ ಮತ್ತು ಮುಂದೆ ನಡೆಯಲಿರುವ ರಜತ ಮಹೋತ್ಸವದ ಬಗ್ಗೆ ಪ್ರಾಸ್ತಾವಿಕವಾಗಿ ಸಭೆಗೆ ತಿಳಿಸಿದರು ಹಾಗೂ ರಜತ ಮಹೋತ್ಸವದ ಯಶಸ್ವಿಗೆ ಸಮಿತಿ ರಚನೆಯ ಬಗ್ಗೆ ತಿಳಿಸಿದರು. ಅದೇ ಪ್ರಕಾರವಾಗಿ ಸಮಿತಿಯನ್ನು ರಚಿಸಲಾಗಿದ್ದು, ರಜತ ಮಹೋತ್ಸವ ಸಮಿತಿಗೆ ಉಪಾಧ್ಯಕ್ಷರುಗಳಾಗಿ ಸದಾನಂದ ನಾಯಕ್ ಮಾಳ, ಸಂತೋಷ್ ಶೆಟ್ಟಿ ಮಟ್ಟಾರು, ಸದಾಶಿವ್ ಸಾಲ್ಯಾನ್ ಖುಷ್ಬೂ, ಹರೀಶ್ ಶೆಟ್ಟಿ ಕುರ್ಕಾಲ್, ವಿಶ್ವನಾಥ್ ಪೂಜಾರಿ ಅಂಬಿಕಾ, ಪ್ರಧಾನ ಕಾರ್ಯದರ್ಶಿಯಾಗಿ ರೋಹಿತ್ ಶೆಟ್ಟಿ ನಗ್ರಿ ಗುತ್ತು, ಕೋಶಾಧಿಕಾರಿಯಾಗಿ ಸಿಎ. ಮನೋಹರ್ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾಗಿ ಶರತ್ ಭಟ್ ಅತ್ರಿವನ, ಸಚ್ಚಿದಾನಂದ ಶೆಟ್ಟಿ, ಜೊತೆ ಕೋಶಾಧಿಕಾರಿಯಾಗಿ ಹರೀಶ್ ಶೆಟ್ಟಿ ಕಸ್ಬಾ, ಸ್ಮರಣ ಸಂಚಿಕೆ ಸಂಪಾದಕ ಮಂಡಳಿಗೆ ಹರೀಶ್…
ಅವಿಭಜಿತ ಮಂಗಳೂರು ತಾಲೂಕು ವ್ಯಾಪ್ತಿಯ, 2023 – 24ನೇ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ 95% ಮತ್ತು ಅಧಿಕ ಅಂಕಗಳನ್ನು ಪಡೆದ ಬಂಟ ಸಮಾಜದ ವಿದ್ಯಾರ್ಥಿಗಳನ್ನು ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಗೌರವ ಪುರಸ್ಕಾರವನ್ನು ಅಗೋಸ್ತು ತಿಂಗಳ 15ನೇ ತಾರೀಕಿನಂದು ಬೆಳಗ್ಗೆ 10.30 ಗಂಟೆಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ ಸಭಾಭವನದಲ್ಲಿ ನೆರವೇರಿಸುವುದೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಂಕಪಟ್ಟಿ, ಆಧಾರ್ ಕಾರ್ಡ್ನ ಪ್ರತಿ ಮತ್ತು ಒಂದು ಭಾವಚಿತ್ರ ಸಮೇತ ಬಂಟರ ಯಾನೆ ನಾಡವರ ಮಾತೃ ಸಂಘದ ಕಛೇರಿ, ಒಂದನೇ ಮಹಡಿ, ಅಮೃತೋತ್ಸವ ಕಟ್ಟಡ ಮಂಗಳೂರು, ಇಲ್ಲಿ ಜುಲೈ ತಿಂಗಳ 31ನೇ ತಾರೀಕಿನೊಳಗೆ ಸಲ್ಲಿಸಲು ವಿನಂತಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಕೃಷ್ಣಪ್ರಸಾದ್ ರೈಯವರನ್ನು 9480015895 ಸಂಪರ್ಕಿಸಬಹುದು.
ಎಂಆರ್ ಪಿಎಲ್ ನ 4 ನೇ ಹಂತದ ನಿರ್ವಸಿತರ ಕುಟುಂಬಗಳ ಉದ್ಯೋಗ ಹಾಗೂ ಪುನರ್ವಸತಿ ಬೇಡಿಕೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ
ಎಂಆರ್ ಪಿಎಲ್ 4ನೇ ಹಂತದ ಭೂ ನಿರ್ವಸಿತರಾಗುವ ಕುತ್ತೆತೂರು, ಪೆರ್ಮುದೆ, ಎಕ್ಕಾರು ಗ್ರಾಮದ ನಿವಾಸಿಗಳಿಗೆ ಸಿಗಬೇಕಾದ ಪುನರ್ವಸತಿ ಹಾಗೂ ಉದ್ಯೋಗ ಮತ್ತಿತ್ತರ ಬೇಡಿಕೆಗಳ ಈಡೇರಿಸುವ ಕುರಿತಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು. ದ.ಕ ಜಿಲ್ಲಾ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್, ವಿಶೇಷ ಭೂಸ್ವಾದಿನಾಧಿಕಾರಿ, ಎಂಆರ್ ಪಿಎಲ್ ನ ಅಧಿಕಾರಿಗಳ ಮತ್ತು ಭೂ ನಿರ್ವಸಿತರ ಹಿತರಕ್ಷಣ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸ್ಥಳೀಯ ಶಾಸಕರು ಮತ್ತು ದ.ಕ ಜಿಲ್ಲಾ ಸಂಸದರು ಮಾತನಾಡಿ, ಎಂಆರ್ ಪಿಎಲ್ ನ ವಿಸ್ತರಣೆಗಾಗಿ ಸ್ಥಳಿಯರು ಭೂಮಿಯನ್ನು ತ್ಯಾಗ ಮಾಡುತ್ತಿದ್ದು ಅವರಿಗೆ ದೊರಕಬೇಕಾದ ಸವಲತ್ತುಗಳನ್ನು ಯಾವುದೇ ನಿಬಂದನೆಗಳಿಲ್ಲದೆ ಅಧಿಸೂಚನೆಗೆ ಮೊದಲು ಇದ್ದ ಎಲ್ಲಾ ಮನೆಗಳಿಗೆ ಸೂಕ್ತ ಪುನರ್ವಸತಿ ಮತ್ತು ಉದ್ಯೋಗವನ್ನು ವಿಳಂಬ ಮಾಡದೆ ಶೀಘ್ರವಾಗಿ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಆಗ್ರಹಿಸಲಾಯಿತು. ಸುಧೀರ್ಘ ಸಭೆಯಲ್ಲಿ ಕೊನೆಗೆ ಜಿಲ್ಲಾಧಿಕಾರಿಗಳು ಮತ್ತು ಎಂಆರ್ ಪಿಎಲ್ ನ ಅಧಿಕಾರಿಗಳು ಎಲ್ಲಾ ಬೇಡಿಕೆಗಳಿಗೆ ಒಪ್ಪಿಗೆ…
ಓರ್ವ ನಿಷ್ಠಾವಂತ ಸ್ವಯಂ ಸೇವಕ, ಸಮಾಜಮುಖಿ ಸಂಘಟಕ ಹಾಗೂ ಪ್ರಾಮಾಣಿಕ ಲೆಕ್ಕ ಪರಿಶೋಧಕ ಸಿಎ ಅಶೋಕ ಶೆಟ್ಟಿ ಎಂ ಅವರು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಪದವಿಗೆ ಸ್ಪರ್ಧಿಸುತ್ತಿದ್ದು, ಚುನಾವಣೆಯಲ್ಲಿ ತಾನು ಯಶಸ್ಸು ಸಂಪಾದಿಸುವೆನೆಂಬ ಆತ್ಮ ವಿಶ್ವಾಸದಲ್ಲಿದ್ದಾರೆ. ಕಾರಣ ಅವರು ಈಗಾಗಲೆ ತನ್ನ ಸಾಮಾಜಿಕ, ಸಾರ್ವಜನಿಕ ಸಂಘಟನೆಗಳಲ್ಲಿ ದುಡಿದ ಅನುಭವ ಹೊಂದಿದ್ದು ನಗರದಲ್ಲಿ ವ್ಯಾಪಕ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಕಾರ್ಕಳ ಸಂಬೆಟ್ಟು ಶೀನಪ್ಪ ಶೆಟ್ಟಿ ಮತ್ತು ಮುಲ್ಲಾಡ್ ಲಕ್ಷ್ಮಿ ಶೆಟ್ಟಿ ದಂಪತಿಯವರಿಗೆ ಕಿರಿಯ ಪುತ್ರನಾಗಿ ಜನಿಸಿದ ಅಶೋಕ ಶೆಟ್ಟಿ ಅವರು ತನ್ನ ಸಿಎ ಪದವಿಯನ್ನು ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಪೂರೈಸಿ ಬಳಿಕ ತನ್ನದೇ ಆದ ಲೆಕ್ಕ ಪರಿಶೋಧನೆ ಸಂಸ್ಥೆಯನ್ನು ಹುಟ್ಟು ಹಾಕಿ ಓರ್ವ ಯಶಸ್ವಿ ಜನಪ್ರಿಯ ಲೆಕ್ಕ ಪರಿಶೋಧಕರೆಂಬ ಪ್ರಸಿದ್ಧಿ ಪಡೆದಿದ್ದಾರೆ. ಎಂ.ಎಂ.ಎಸ್ ಎಂಡ್ ಕೊ. ಎಂಬ ಸಂಸ್ಥೆಯ ಸ್ಥಾಪನೆ ಮುಖಾಂತರ ಅನೇಕ ಪ್ರತಿಷ್ಠಿತ ಕಂಪೆನಿಗಳು ಹಾಗೂ ಬ್ಯಾಂಕ್ ಗಳ ಲೆಕ್ಕಪರಿಶೋಧಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಯುತರು ಮೂಲತಃ ಓರ್ವ ಸಾಮಾಜಿಕ, ಸಾಮುದಾಯಿಕ ಕಳಕಳಿ…
ಮನುಷ್ಯ ಜೀವನದಲ್ಲಿ ದಾನ ಮತ್ತು ಧರ್ಮ ಕೇವಲ ಬಾಯಿ ಮಾತಿನ ಪದಗಳಾಗಿ ಉಳಿಯುವುದಿಲ್ಲ. ನಾವು ಕೈಯೆತ್ತಿ ನೀಡುವ ದಾನ, ಶ್ರದ್ಧೆಯಿಂದ ಆಚರಿಸುವ ಧರ್ಮ ಇವೆರಡೂ ಸ್ವಾರ್ಥ ರಹಿತವಾಗಿರಬೇಕು. ಉದ್ಯಮಿ ಕೆ.ಕೆ ಶೆಟ್ಟರು ತಮ್ಮ ನಡೆ ನುಡಿಗಳಿಂದ ಈ ಮಾತನ್ನು ಅರ್ಥವತ್ತಾಗಿಸಿದ್ದಾರೆ’ ಎಂದು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಮತ್ತು ಲೇಖಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ 2024 ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಅಹಮದ್ ನಗರದ ಉದ್ಯಮಿ ಹಾಗೂ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿ ಕುತ್ತಿಕಾರ್ ಅವರಿಗೆ ಅವರಿಗೆ ದೇವಸ್ಥಾನ ಆಡಳಿತ ಮಂಡಳಿ ಸೇವಾ ಸಮಿತಿ ಮತ್ತು ಊರವರ ವತಿಯಿಂದ ಶ್ರೀ ಕ್ಷೇತ್ರದ ಸಭಾಂಗಣದಲ್ಲಿ ಜರುಗಿದ ಸಾರ್ವಜನಿಕ ಅಭಿನಂದನಾ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ‘ಬಡವರಿಗೆ ಆರೋಗ್ಯ ಚಿಕಿತ್ಸೆ, ಗೃಹ ನಿರ್ಮಾಣ, ಶೈಕ್ಷಣಿಕ ನೆರವು, ಸಾಂಸ್ಕೃತಿಕ ಸಾಮಾಜಿಕ ಕಾರ್ಯಕ್ರಮಗಳಿಗೆ ಧನ ಸಹಾಯವಲ್ಲದೇ…
ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಬಿ. ರವೀಂದ್ರ ಶೆಟ್ಟಿ ಅವರಿಗೆ ಹಸನ್ ಹವ್ವಾ ಫೌಂಡೇಶನ್ ಕುದೊಳಿ ಸಂಸ್ಥಾಪಕ ಅಬ್ದುಲ್ಲಾ ಮಾದು ಮೂಲೆ ನೀಡುವ ದತ್ತಿನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಾಸರಗೋಡಿನ ಸೀತಾಂಗೋಳಿ ಅಲಯನ್ಸ್ ಕನ್ವೆನ್ಶನ್ ಸೆಂಟರ್ನಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡ ಲಾಯಿತು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕೆಯುಡಬ್ಲ್ಯುಜೆ ಕರ್ನಾಟಕ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಹರೀಶ್ ಪಾಂಡು ಶೆಟ್ಟಿ ಆಡಳಿತದ ಫಾರ್ಮ್ಹೌಸ್ ಸಮೂಹ ಹೋಟೇಲಿಗೆ ಎಕನಾಮಿಕ್ ಟೈಮ್ಸ್ ಮತ್ತು ಎಫ್ ಬಿ ಲೀಡರ್ಸ್ ಅವಾರ್ಡ್
ವಸಾಯಿ ತಾಲೂಕಿನಲ್ಲಿ ಹೋಟೆಲ್ ಉದ್ಯಮ ಮತ್ತು ಸಮಾಜ ಸೇವೆಯಲ್ಲಿ ಭಾರಿ ಜನಪ್ರಿಯತೆಯನ್ನು ಪಡೆದಿರುವ ಪಾಂಡು ಎಲ್ ಶೆಟ್ಟಿಯವರ ಸುಪುತ್ರರಾದ ಹರೀಶ್ ಪಾಂಡು ಶೆಟ್ಟಿ ಮತ್ತು ಭರತ್ ಶೆಟ್ಟಿಯವರ ಫಾರ್ಮ್ ಹೌಸ್ ಸಮೂಹ ಹೋಟೇಲಿಗೆ ಎಕನಾಮಿಕ್ ಟೈಮ್ಸ್ ಮತ್ತು ಎಫ್ ಬಿ ಲೀಡರ್ಸ್ ಅವಾರ್ಡ್ ಲಭಿಸಿದೆ. ಪ್ರಶಸ್ತಿಯನ್ನು ಜುಲೈ 1 ರಂದು ನಗರದ ರಾಡಿಸನ್ ಬ್ಲೂ ಇಂಟರ್ನ್ಯಾಶನಲ್ ಹೋಟೇಲಿನಲ್ಲಿ ಜರಗಿದ ಸಮಾರಂಭದಲ್ಲಿ ಪಾಂಡು ಎಲ್ ಶೆಟ್ಟಿ ಮತ್ತು ಹೋಟೆಲಿನ ನಿರ್ದೇಶಕ ಹರೀಶ್ ಶೆಟ್ಟಿ, ಪಾಂಡು ಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಚಿತ್ರ ನಟಿ ಮುಗ್ಧ ಗೋಡ್ಸೆಯವರಿಂದ ಸ್ವೀಕರಿಸಿದರು. 2011 ರಲ್ಲಿ ಸ್ಥಾಪಿತವಾದ, ಫಾರ್ಮ್ ಹೌಸ್ ಗ್ರೂಪ್ ಹೋಟೆಲ್ ಆಂಡ್ ರೆಸ್ಟೋರೆಂಟ್ ವಸಾಯಿ ಪರಿಸರದಲ್ಲಿ ಉದ್ಯಮವನ್ನು ನಡೆಸಿ ಹಂತ ಹಂತವಾಗಿ ಅಲ್ಪಾವಧಿಯಲ್ಲಿ ತನ್ನ ಉದ್ಯಮವನ್ನು ದೇಶ ವಿದೇಶಗಳಲ್ಲಿ ನಡೆಸುತ್ತಾ ರುಚಿ ಸುಚಿಕರವಾದ ಆಹಾರದಿಂದ ಗ್ರಾಹಕರ ಗಮನ ಸೆಳೆದಿದೆ. ರೆಸ್ಟೋರೆಂಟ್ ಬ್ರಾಂಡ್ ‘ಫಾರ್ಮ್ ಹೌಸ್’ ಉನ್ನತ ಮಟ್ಟಕ್ಕೇರಿ ಮುನ್ನಡೆಯುತ್ತಾ ಗ್ರಾಹಕರನ್ನು ಆತ್ಮೀಯವಾಗಿ ಸ್ವಾಗತಿಸುತ್ತಿದೆ. ಕುಟುಂಬದೊಂದಿಗೆ ಗುಣಮಟ್ಟದ…