Author: admin

ಮೂಡುಬಿದಿರೆ: ‘ಕ್ರೀಡೆಯಲ್ಲಿ ಸಕ್ರಿಯರಾಗುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಹೇಳಿದರು. ನಗರದ ಸ್ವರಾಜ್ ಮೈದಾನದಲ್ಲಿ ಶುಕ್ರವಾರ ನಡೆದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಂಸ್ಥೆಗಳ ‘ಕ್ರೀಡಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಸಂಘಟಿಸುವ ಕಾರ್ಯಕ್ರಮ ಶಿಸ್ತು ಮತ್ತು ಅನನ್ಯತೆಗೆ ಸಾಕ್ಷಿಯಾಗಿರುತ್ತದೆ ಎಂದರು. ಇದು ಜೀವನದಲ್ಲಿ ನಾನು ಕಂಡ ಅನನ್ಯ ಕಾರ್ಯಕ್ರಮ ಎಂದು ಶ್ಲಾಘಿಸಿದರು. ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಸಾಧನೆ ಮಾಡಿದ ಪ್ರತಿಷ್ಠಾನದ ಎಂಟು ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ತಂದು, ಏಕಲವ್ಯ ಪ್ರಶಸ್ತಿ ಪುರಸ್ಕೃತ, ಅಂತರರಾಷ್ಟ್ರೀಯ ಕ್ರೀಡಾಪಟು, ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊಲೀಸ್ ಉಪ ನಿರೀಕ್ಷಕ ಅಭಿಷೇಕ ಎನ್. ಶೆಟ್ಟಿ ಅವರಿಗೆ ಹಸ್ತಾಂತರಿಸಿ, ಕ್ರೀಡಾ ಜ್ಯೋತಿ ಬೆಳಗಲಾಯಿತು.ವಿದ್ಯಾರ್ಥಿನಿ ವೀಕ್ಷಿತಾ ರಾಮಕೃಷ್ಣ ಗೌಡ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು.…

Read More

ಮೂಡುಬಿದಿರೆ: ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿವಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳಾ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿವಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ತಂಡದ 10 ಜನ ಆಟಗಾರ್ತಿಯರ ಪೈಕಿ ನಾಯಕಿ ಸಹನಾ ಎಚ್. ಎಂ ಸೇರಿದಂತೆ 9 ಕ್ರೀಡಾಪಟುಗಳು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಕ್ವಾಟರ್‌ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿವಿಯು ತಮಿಳುನಾಡಿನ ಯೂನಿವರ್ಸಿಟಿ ಆಫ್ ಮದ್ರಾಸ್ ತಂಡವನ್ನು 35-23, 35-29 ನೇರ ಸೆಟ್‌ನಲ್ಲಿ ಸೋಲಿಸಿ 18ನೇ ಬಾರಿಗೆ ಲೀಗ್ ಹಂತಕ್ಕೆ ಆಯ್ಕೆಯಾಗಿತ್ತು. ಲೀಗ್ ಹಂತದಲ್ಲಿ ತಮಿಳುನಾಡಿನ ಮಧುರೈಯ ಕಾಮರಾಜ್ ವಿವಿ ತಂಡವನ್ನು 35-15, 35-26 ಅಂತರಗಳಿ0ದ, ಮಹಾತ್ಮಾ ಗಾಂಧಿ ವಿವಿಯನ್ನು 35-18, 35-14 ನೇರ ಅಂತರಗಳಿ0ದ ಸೋಲಿಸಿ ಫೈನಲ್ ಪ್ರವೇಶಿಸಿತು. ಅಂತಿಮ ಸುತ್ತಿನಲ್ಲಿ ತಮಿಳುನಾಡಿನ ಅಣ್ಣಾ ವಿವಿಯೊಂದಿಗಿನ ರೋಚಕ ಪಂದ್ಯಾಟದಲ್ಲಿ ರನ್ನರ್ ಅಪ್ ಸ್ಥಾನ ಗಳಿಸುವಲ್ಲಿ ಯಶಸ್ವಿಯಾಯಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಕನ್ನಡ ಸಂಘ ಸಾಂತಾಕ್ರೂಜ್ ತನ್ನ 67 ನೇ ವಾರ್ಷಿಕೋತ್ಸವವು ಮಾರ್ಚ್ 29 ರಂದು ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿನ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ಸುಜಾತ ಆರ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರಂಭವನ್ನು ಬಾಬಾ’ಸ್ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ, ಬಂಟರ ಸಂಘ ಮುಂಬಯಿ ಇದರ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಿಲ್ಲವರ ಅಸೋಸಿಯೇಷನ್ ಮುಂಬೈ ಅಧ್ಯಕ್ಷ ಹರೀಶ್ ಜಿ. ಅಮೀನ್, ಬಂಟರ ಸಂಘ ಮುಂಬಯಿಯ ಪೊವಾಯಿ ಎಜುಕೇಶನ್ ಸಮಿತಿ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಜವಾಬ್ ಅಧ್ಯಕ್ಷ ರಾಜೇಶ್ ಬಿ. ಶೆಟ್ಟಿ, ಪ್ರಸಿದ್ಧ ಜ್ಯೋತಿಷಿ, ವಾಸ್ತುತಜ್ಞ ಅಶೋಕ್ ಪುರೋಹಿತ್ ಗೌರವ ಅತಿಥಿಗಳಾಗಿ ಆಗಮಿಸಿದ್ದು, ಸಂಘವು ವಾರ್ಷಿಕವಾಗಿ ಕೊಡ ಮಾಡುವ ಸಾಧಕ ಸನ್ಮಾನಗಳನ್ನು ಪ್ರಧಾನಿಸಿ ಸಂಘವು ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಕೊಡ ಮಾಡುವ ಶೈಕ್ಷಣಿಕ ಆರ್ಥಿಕ ನೆರವು, ಆರೋಗ್ಯ ನಿಧಿ ವಿತರಿಸಿ ವಿದ್ಯಾರ್ಥಿಗಳ ದತ್ತು ಸ್ವೀಕಾರಗೈದರು.ಇದೇ ಸಂದರ್ಭದಲ್ಲಿ ಸಂಘದ ಮಹಾದಾನಿ, ಚೀನಾದ…

Read More

ದೆಹಲಿಯಲ್ಲಿ ರಾಜ್ಯ ಸರಕಾರ ನಿರ್ಮಿಸಿರುವ ಕರ್ನಾಟಕ ಭವನ ಕಾವೇರಿಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಜಂಟಿಯಾಗಿ ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಈ ಹಿಂದೆ ಇದು ಮೈಸೂರು ಭವನವಾಗಿತ್ತು. ದೆಹಲಿಯಲ್ಲಿ ಒಟ್ಟು ಮೂರು ಕರ್ನಾಟಕ ಭವನಗಳು ಇವೆ. ಸುಭದ್ರ ರಾಜ್ಯ ನಿರ್ಮಾಣದಲ್ಲಿ ಎಲ್ಲರ ಭಾಗವಹಿಸುವಿಕೆ ಅಗತ್ಯವಾಗಿದ್ದು, ಕೇಂದ್ರ ಸರಕಾರದ ಬಳಿ ಹಲವು ಕೆಲಸ ಕಾರ್ಯಗಳಿಗಾಗಿ ಅಧಿಕಾರಿಗಳು, ಸಚಿವರು, ಶಾಸಕರು ದೆಹಲಿಗೆ ಬರಬೇಕಾಗುತ್ತದೆ. ಇವರೆಲ್ಲರಿಗೂ ಕರ್ನಾಟಕ ಭವನ ತಂಗಲು ಸಹಾಯವಾಗುತ್ತದೆ ಎಂದರು. ಅಲ್ಲದೆ, ಕರ್ನಾಟಕ ಭವನ ಎರಡರ ಪುನರ್ ನಿರ್ಮಾಣ ಮಾಡುವ ಯೋಜನೆಯೂ ಇದೆ ಎಂದು ತಿಳಿಸಿದರು. ಕೊರೋನಾ ಸೇರಿ ಹಲವು ಸಂಕಷ್ಟಗಳಿಂದಾಗಿ ಕಟ್ಟಡ ಕಾಮಗಾರಿಗೆ ವಿಳಂಬವಾಯಿತು. ಈಗ ಭವ್ಯ ಕಟ್ಟಡ ನಿರ್ಮಾಣಗೊಂಡಿದೆ. ಕರ್ನಾಟಕ ಭವನ ಬೆಳೆದು ಬಂದ ಇತಿಹಾಸ ಕುರಿತು ಬೋರ್ಡ್ ಹಾಕಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಖರ್ಗೆಯವರ ಸಲಹೆಯಂತೆ ಶಾಸಕರು ತಂಗಲು ಇನ್ನಷ್ಟು ಅನುಕೂಲಗಳನ್ನು ಮಾಡಿಕೊಡುತ್ತೇವೆ…

Read More

ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ, ಭಾಸ್ಕರ ಶೇರಿಗಾರ್‌ ಮತ್ತು ಸರ್ವೋತ್ತಮ ಶೆಟ್ಟಿ ಅಬುದಾಬಿ ಅವರ ನೇತೃತ್ವದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.ಮನವಿ ಸ್ವೀಕರಿಸಿದ ಖಾದರ್ ಅವರು ಬೇಡಿಕೆಗೆ ಸ್ಪಂದಿಸುವುದಾಗಿ ತಿಳಿಸಿದರು.

Read More

ಇವತ್ತು ಗುರ್ಮೆ ಸುರೇಶಣ್ಣನ ಜನ್ಮದಿನ. ಸುರೇಶಣ್ಣ ಮತ್ತು ಹಸುವಿಗೂ, ಹಸುಗೂಸಿಗೂ ದೊಡ್ಡದೇನು ವ್ಯತ್ಯಾಸವಿಲ್ಲ. ಅವರ ಹೃದಯ ನಿಷ್ಕಲ್ಮಶ. ಯಾವಾಗಾದರೊಮ್ಮೆ ಕರೆ ಮಾಡುವ ಸುರೇಶಣ್ಣ ತಡ ರಾತ್ರಿಯ ತನಕವೂ ಲಹರಿಗೆ ಬಿದ್ದು ಮಾತಾಡುತ್ತಾರೆ. ಅದು ಅವರ ಅಂತರಂಗ ಅರಳಿಕೊಳ್ಳುವ ಕಾಲವೆನೋ! ಯಾವ ಜನ್ಮದ ಬಂಧುವೋ ಎನ್ನುವಂತೆ ನಾವು ಹರಟುತ್ತೇವೆ. ಏನಿದೆ ಅಷ್ಟು ಮಾತಾಡಲು ವಿಷಯ? ಆದರೂ ಮಾತಾಡಿರುತ್ತೇವೆ. ಅವರ ಆರೋಗ್ಯ, ಸಮಾಜದ ಅನಾರೋಗ್ಯ, ಹತ್ತಿರವಿದ್ದೂ ದೂರ ನಿಲ್ಲುವವರು, ದೂರವಿದ್ದೂ ಹತ್ತಿರವಿರುವವರು, ಏನೂ ಇಲ್ಲದೆ ದೂರುವವರು ಹೀಗೆ ನನ್ನ ಮತ್ತು ಸುರೇಶಣ್ಣನ ಮಾತಿನ ನಡುವೆ ಎಲ್ಲರೂ ಬಂದು ಹೋಗುತ್ತಾರೆ. ನನ್ನ ಜೀವನದಲ್ಲಿ ನೋಡಿದ ಕೆಲವೇ ಕೆಲವು ನಿಷ್ಕಲ್ಮಶ ಹೃದಯದವರಲ್ಲಿ ಗುರ್ಮೆ ಸುರೇಶಣ್ಣನೂ ಒಬ್ಬರು. ಸುರೇಶಣ್ಣ ಕಾಪು ಕ್ಷೇತ್ರದ “ಪುಣ್ಯಪುರುಷ” ಎನ್ನುವುದು ನನ್ನ ಅಭಿಪ್ರಾಯ. ಮೊನ್ನೆ ಕಾಪು ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ ನೋಡಿದಾಗ ನನಗೆ ಹಾಗನ್ನಿಸಿತು. ಅವರ ಮುಂದಿನ ಹೆಜ್ಜೆ ಪೇರ್ಡೂರು ಅನಂತ ಪದ್ಮನಾಭ ದೇವಸ್ಥಾನದ ಕಡೆಗಿದೆ! ಸುರೇಶಣ್ಣ ಏನಾದರೊಂದು ಮಾಡಬೇಕು ಎಂದು ಹೆಜ್ಜೆ…

Read More

ದೀಕ್ಷಿತ್ ರೈಯವರು ಬ್ಯಾಚುಲರ್ ಆಫ್ ವಿಷುಯಲ್ ಆರ್ಟ್ಸ್ ನ 2024 ನೇ ಸಾಲಿನ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ರ‌್ಯಾಂಕ್ ನೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಆಧೀನಕ್ಕೊಳಪಟ್ಟ ಮಹಾಲಸಾ ವಿಷುಯಲ್ ಆರ್ಟ್ಸ್ ಪದವಿಯನ್ನು ಪೂರೈಸಿ ಪ್ರಸ್ತುತ ಬೆಂಗಳೂರು ಯೂನಿವರ್ಸಿಟಿಯಲ್ಲಿ ಮಾಸ್ಟರ್ ಆಫ್ ವಿಷುಯಲ್ ಆರ್ಟ್ಸ್ ಸ್ನಾತಕೋತ್ತರ ಪದವಿ ಓದುತ್ತಿರುವ ಇವರು ಎಡಮಂಗಲ ಗ್ರಾಮದ ಪೊಯ್ಯತ್ತೂರು ವಿಶ್ವನಾಥ ರೈ ಮತ್ತು ಶೀಲಾವತಿ ರೈ ದಂಪತಿಯ ಪುತ್ರರಾಗಿದ್ದಾರೆ.

Read More

ಬಂಟರ ಸಂಘ ಮುಂಬಯಿಯ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ವತಿಯಿಂದ ಮಾರ್ಚ್ 30ರ ಆದಿತ್ಯವಾರದಂದು ಚೈತ್ರ ನವರಾತ್ರಿಯ ಆರಂಭದ ದಿನದಂದು ಸಂಜೆ ಪೊವಾಯಿಯ ಎಸ್.ಎಂ ಶೆಟ್ಟಿ ಕಾಲೇಜಿನ ಸಭಾಂಗಣದಲ್ಲಿ ‘ಮಾತಾ ಕಿ ಚೌಕಿ’ ಭಕ್ತಿಪೂರ್ಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮವನ್ನು ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ದುರ್ಗಾ ಮಾತೆಗೆ ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಈ ಶುಭ ದಿನದಂದು ನಡೆಯಲಿರುವ ಈ ಭಕ್ತಿ ಪ್ರಧಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಹಾಗೂ ಇಂತಹ ಧಾರ್ಮಿಕ ಕಾರ್ಯಗಳು ನಾವು ನಡೆಸಿಕೊಂಡು ಬಂದಾಗ ಸಮಾಜ ಮತ್ತು ಬದುಕು ಭದ್ರವಾಗಿ ಸುಂದರವಾಗುತ್ತದೆ ಎಂದು ಶುಭ ಹಾರೈಸಿದರು. ಬಂಟರ ಸಂಘದ ಉಪಾಧ್ಯಕ್ಷ ಮಹೇಶ್ ಎಸ್‌. ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸೂರಜ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶೋಭಾ ಅಮರನಾಥ್ ಶೆಟ್ಟಿ ಮುಂದಾಳತ್ವದಲ್ಲಿ ಯಶಸ್ವಿಯಾಗಿ ನೆರವೇರಿತು.ಬಂಟರ ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ…

Read More

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಹಕಾರಿ ಸಂಘ ಅತ್ತಾವರ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಶಾಂತಾನಂದ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.ಮಂಗಳೂರು ಅತ್ತಾವರ ಮೆಸ್ಕಾಂ ನಲ್ಲಿ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ಮೂಲದ ಶಾಂತಾನಂದ ಶೆಟ್ಟಿಯವರು ಸಮಾಜಸೇವಕರಾಗಿಯೂ ಗುರುತಿಸಿಕೊಂಡಿದ್ದಾರೆ.

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯ ಸುತ್ತಮುತ್ತಲಿನ ಪರಿಸರದಲ್ಲಿ ಮೊಟ್ಟ ಮೊದಲ ಬಾರಿಗೆ ವೈಯಕ್ತಿಕ ಸೌಂದರ್ಯ ಹಾಗೂ ಆರೈಕೆ ಕ್ಷೇತ್ರಕ್ಕೆ ಸಂಬ0ದಿಸಿದ ಆಳ್ವಾಸ್ ಅಕಾಡೆಮಿ ಆಫ್ ಮೇಕಪ್ ಆರ್ಟಿಸ್ಟಿç, ಪೋಲಿಶ್- ನೈಲ್ಸ್ ಆ್ಯಂಡ್ ಬ್ಯೂಟಿ, ಹೆಲ್ದೀ ಸಿಪ್ ಹಾಗೂ ಲ್ಯಾಕ್ಟೇಶನ್ ಕನ್‌ಸಲ್ಟೇನ್ಸಿ ಸರ್ವೀಸಸ್ ಅನ್ನು ಮೂಡುಬಿದಿರೆಯ ಆಳ್ವಾಸ್ ಆ್ಯಸ್ಥೇಟಿಕ್ ರಿಜುವನೇಶನ್ ಸೆಂಟರ್ ಆವರಣದಲ್ಲಿ ಯುಗಾದಿಯ ಶುಭ ಸಂಧರ್ಭದ0ದು ಉದ್ಘಾಟನೆಗೊಳಿಸಲಾಯಿತು. ಮಂಗಳೂರಿನ ಕಾಸ್ಮೆಟಿಕ್ ಸ್ತ್ರೀರೋಗ ತಜ್ಞೆ ಹಾಗೂ ಮಿಸೆಸ್ ಇಂಡಿಯಾ ಇಂಡಿಪೆoಡೆoಟ್ ಇಂಟರ್ನ್ಯಾಷನಲ್ ಖ್ಯಾತಿಯ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಲೋಕಾರ್ಪಣೆಗೊಳಿಸಿದರು. ಕರ‍್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್, ನಿಮ್ಮ ಕನಸ್ಸನ್ನು ನನಸಾಗಿಸಲು ಸದಾ ಕರ‍್ಯಪ್ರವೃತ್ತರಾಗಿರಿ. ಎಂದೂ ಹಿಂಜರಿಕೆ ಬೇಡ. ನಿಮ್ಮ ಗುರಿಗಳನ್ನು ಸಾಧಿಸಲು ನಿಮಗೆ ಉತ್ಸಾಹವಿದ್ದರೆ ಖಂಡಿತ ಸಮಯ ಲಭಿಸುತ್ತದೆ ಎಂದರು. ಮೇಕಪ್ ಕಲೆ ಸಾಮಾನ್ಯವಾಗಿ ಮಹಿಳೆಯರಿಗೆ ಮಾತ್ರ ಎಂಬ ತಪ್ಪು ಕಲ್ಪನೆ ಇದೆ. ಆದರೆ, ಈ ಕಲೆಯು ಲಿಂಗಭೇದವನ್ನು ಮೀರಿ ಎಲ್ಲರಿಗೂ ಸಮಾನ ಅವಕಾಶ ನೀಡುತ್ತದೆ.…

Read More