Author: admin
ಪರಿಸರ ಸ್ವಚ್ಛವಾಗಿದ್ದರೆ ಊರಿನ ಸುಂದರತೆ ಜತೆಗೆ ಸಾಂಕ್ರಾಮಿಕ ರೋಗಗಳು ದೂರವಾಗಿ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಹಾಗಾಗಿ ಸ್ವಚ್ಛತೆ ಕಾಪಾಡಲು ಸಹಕರಿಸುವುದು ನಾಗರೀಕರ ಜವಾಬ್ದಾರಿಯಾಗಿದೆ ಎಂದು ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ರೋಶನಿ ನಿಲಯ ಕಾಲೇಜಿನ ಎನ್.ಎಸ್.ಎಸ್ ಘಟಕ ಮತ್ತು ಗ್ಲೋಬಲ್ ಇಕೋ ಗ್ರೀನ್ ಫೌಂಡೇಶನ್ ಸಹಭಾಗಿತ್ವದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಕಟ್ಟ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ರೋಟರಿ ಪದಾಧಿಕಾರಿ ಜಾಕ್ಸನ್ ಅತಿಥಿಗಳಾಗಿ ಭಾಗವಹಿಸಿದ್ದರು. ನಗರದ ತಾಲೂಕು ಪಂಚಾಯತ್ ಕಚೇರಿಯಿಂದ ರೈಲು ನಿಲ್ದಾಣದವರೆಗಿನ ರಸ್ತೆ ಬದಿಯನ್ನು ರೋಶನಿ ನಿಲಯ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು.
ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್ಕ್ರಾಸ್ ಸಮಾಜಕ್ಕೆ ನೆರವಾಗುತ್ತಿದೆ. ವಿಶ್ವದಾದ್ಯಂತ ರೆಡ್ಕ್ರಾಸ್ ಪಸರಿಸಿದ್ದು ಮಾನವೀಯ ಸೇವೆಯೇ ಸಂಸ್ಥೆಯ ಗುರಿಯಾಗಿದೆ ಎಂದು ದ.ಕ ಜಿಲ್ಲಾಧಿಕಾರಿ, ರೆಡ್ಕ್ರಾಸ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ದರ್ಶನ್ ಎಚ್.ವಿ ಹೇಳಿದರು. ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ರೆಡ್ಕ್ರಾಸ್ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ಭವ್ಯ ಶತಮಾನೋತ್ಸವ ಕಟ್ಟಡದ ನಿರ್ಮಾಣ ಸಹಿತ ರೆಡ್ಕ್ರಾಸ್ ದ.ಕ. ಜಿಲ್ಲಾ ಘಟಕದ ಕಾರ್ಯ ಚಟುವಟಿಕೆ ರಾಜ್ಯಕ್ಕೆ ಮಾದರಿಯಾಗಿದೆ’ ಎಂದರು. ರೆಡ್ಕ್ರಾಸ್ ಜಿಲ್ಲಾ ಘಟಕದ ಛೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ, ದ.ಕ. ಜಿಲ್ಲಾಡಳಿತ, ದಾನಿಗಳು ಹಾಗೂ ರೆಡ್ಕ್ರಾಸ್ ಸದಸ್ಯರ ನೆರವಿನಿಂದ ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡದ ನಿರ್ಮಾಣವಾಗಿರುವುದು ಹೆಮ್ಮೆ ತಂದಿದೆ. ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆ ಹಾಗೂ ಇತರ ಆರೋಗ್ಯ ಸಮಸ್ಯೆ ಸಂಬಂಧಿಸಿ ದಾಖಲಾದವರಿಗೆ ಅವಶ್ಯ ಇದ್ದರೆ ರೆಡ್ಕ್ರಾಸ್ ಬ್ಲಡ್ ಬ್ಯಾಂಕ್ನಿಂದ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ವೆನ್ಲಾಕ್…
ಕಾರ್ಕಳ ಕುಕ್ಕುಂದೂರು ವಿಜೇತ ವಿಶೇಷ ಶಾಲೆಗೆ ಕಾರ್ಕಳ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ಜನಾರ್ಧನ್ ಇಡ್ಯಾರವರಿಂದ ದೇಣಿಗೆ ಹಸ್ತಾಂತರ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ರೊ. ನವೀನ್ ಚಂದ್ರ ಶೆಟ್ಟಿ ಅವರು ರೋಟರಿಯ ಮುಖ್ಯ ಧ್ಯೇಯದಂತೆ ಸಮುದಾಯ ಸೇವೆಯಲ್ಲಿ ತೊಡಗಿಸಿಕೊಂಡ ಜನಾರ್ಧನ್ ಇಡ್ಯಾ ದಂಪತಿಗಳು ವಿಜೇತ ವಿಶೇಷ ಶಾಲೆಗೆ ನೀಡುತ್ತಿರುವ ಕೊಡುಗೆಯು ಇತರರಿಗೆ ಪ್ರೇರಣೆಯಾಗಲಿ ಎಂದರು. ರೂ. 50,000/-ದ ಚೆಕ್ಕನ್ನು ಸಂಸ್ಥೆಗೆ ಹಸ್ತಾಂತರಿಸಿ ಮಾತನಾಡಿದ ಜನಾರ್ಧನ್ ಇಡ್ಯಾರವರು ಈ ಸಂಸ್ಥೆಯ ಮಾನವೀಯ ಸೇವೆ, ಶಿಕ್ಷಕಿಯರ ತ್ಯಾಗ, ತಾಳ್ಮೆ ಮತ್ತು ಸೇವಾ ಮನೋಭಾವನೆ ಪ್ರಶಂಸನೀಯ ಇಂತಹ ಸಂಸ್ಥೆಗೆ ಎಲ್ಲರ ಸಹಕಾರ ದೊರೆಯಲಿ ಎಂದರು. ದೇವರ ಮಕ್ಕಳಿಗೆ ರೋಟರಿ ವತಿಯಿಂದ ಸಿಹಿ ತಿಂಡಿ ಹಂಚಲಾಯಿತು. ರೋಟರಿ ಕ್ಲಬ್ ಕಾರ್ಕಳ ಇದರ ಕಾರ್ಯದರ್ಶಿ ಚೇತನ್ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದ ರು. ಕ್ಲಬ್ಬಿನ ಸದಸ್ಯರಾದ ಜಗದೀಶ್ ಟಿ ಎ., ಸುರೇಶ್ ನಾಯಕ್, ವಸಂತ್…
ಸಾಕೇತ್ ಶೆಟ್ಟಿ ಅವರು ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಮಂಡಿಸಿದ ಮಹಾಪ್ರಬಂಧವಾದ “ಸಸ್ಟೇನಬಲ್ ಮ್ಯಾನೇಜ್ಮೆಂಟ್ ಸ್ಟ್ರಾಟಜಿ ಫಾರ್ ರಿಜುವೆನೇಶನ್ ಆಫ್ ಕೋಸ್ಟಲ್ ದಕ್ಷಿಣ ಕನ್ನಡ” ಕುರಿತು ಆಳವಾದ ಸಂಶೋಧನೆ ನಡೆಸಿ, ಸುರತ್ಕಲ್ ಪ್ರತಿಷ್ಠಿತ ಎನ್.ಐ.ಟಿ.ಕೆ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಇವರು ಕೊಲ್ಲಾಡಿ ರಾಮಯ್ಯ ಶೆಟ್ಟಿ ಹಾಗೂ ಬೆಳಿಯೂರು ಗುತ್ತು ಮೋಹಿನಿ ಶೆಟ್ಟಿ ಅವರ ಪುತ್ರರಾಗಿದ್ದು, ಡಾ| ಸಾಕೇತ್ ಶೆಟ್ಟಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಭವಿಷ್ಯದ ಯಶಸ್ಸಿಗೆ ಹಾರ್ದಿಕ ಶುಭಾಶಯಗಳು.
ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ನಡೆಸಲ್ಪಡುವ “ಯಕ್ಷ ಸಿರಿ” ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಜರುಗಿತು. ಗೋವಿಂದದಾಸ ಕಾಲೇಜು ಸುರತ್ಕಲ್ ಇದರ ಆಡಳಿತಾತ್ಮಕ ನಿರ್ದೇಶಕ ರಮೇಶ್ ಭಟ್ ಎಸ್.ಜಿ. ಇವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, ನಾನು ಸುರತ್ಕಲ್ ಬಂಟರ ಸಂಘವನ್ನು ಹತ್ತಿರದಿಂದ ಗಮನಿಸುತ್ತಾ ಬಂದವನು. ಪ್ರತೀ ಸ್ಪರ್ಧೆಯಲ್ಲೂ ಸುರತ್ಕಲ್ ಬಂಟರ ಸಂಘ ಪ್ರಶಸ್ತಿ ಪಡೆದುಕೊಂಡೇ ಬಂದಿದೆ. ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಸಂಘ ಸದಾ ಮುಂದಿದೆ. ಬಹುಷಃ ಇದೇ ಕಾರಣಕ್ಕೆ ರಾಜ್ಯೋತ್ಸವ ಪ್ರಶಸ್ತಿಗೂ ಸಂಘ ಭಾಜನವಾಗಿದೆ. ಯಕ್ಷಗಾನ ಅನ್ನುವುದು ಶ್ರೇಷ್ಠವಾದ ಕಲೆ. ಯಕ್ಷಗಾನ ಕಲಾವಿದನಿಗೆ ಭಾಷಾ ಶುದ್ಧಿ ಮತ್ತು ಸಂವಹನಾ ಸಾಮರ್ಥ್ಯವಿದೆ. ಪುರಾಣದ ಜ್ಞಾನ ಸಂಪಾದನೆಗೆ ಯಕ್ಷಗಾನ ಕಲೆ ಪೂರಕ. ಪುರಾಣ ಪುರುಷರ ಆದರ್ಶ ಚರಿತ್ರೆ ಮಕ್ಕಳಿಗೆ ತಿಳಿಯುತ್ತದೆ. ಹೀಗಾಗಿ ಇಂದಿನ ಮಕ್ಕಳಿಗೆ ಇದರ ತರಬೇತಿ ಅವಶ್ಯ. ಮಕ್ಕಳ ವ್ಯಕ್ತಿತ್ವದ ಸಕಾರಾತ್ಮಕ…
ರೋಟರಿ ಕ್ಲಬ್ ಕಾರ್ಕಳ ಇದರ ಪ್ರಾಯೋಜಕತ್ವದಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ಇಲ್ಲಿ ಕಾರ್ಕಳ ಕ್ಲಬ್ಬಿನ ವತಿಯಿಂದ ಹತ್ತನೇ ಇಂಟರ್ಯಾಕ್ಟ್ ಕ್ಲಬ್ಬಿನ ಪದಗ್ರಹಣ ಸಮಾರಂಭವು ನಡೆಯಿತು. ಪದಗ್ರಹಣ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ರೋಟರಿಯ ಮಾಜಿ ಸಹಾಯಕ ಗವರ್ನರ್ ಹರಿಪ್ರಕಾಶ್ ಶೆಟ್ಟಿಯವರು ರೋಟರಿಯ ಇತಿಹಾಸ ಹಾಗೂ ಕಾರ್ಕಳ ರೋಟರಿಯ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿಯವರು ಇಂಟರ್ಯಾಕ್ಟ್ ಕ್ಲಬ್ಬಿನ ನೂತನ ಅಧ್ಯಕ್ಷ ಲೇಖನ್ ವಿ ಜೈನ್ ಮತ್ತು ಕಾರ್ಯದರ್ಶಿ ಅರುಷಿ ಪ್ರಭುರವರಿಗೆ ಪದ ಪ್ರದಾನ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿ ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ನಾಯಕರಾಗಬೇಕೆ ಹೊರತು ಹಿಂಬಾಲಕರಾಗಬಾರದು. ಭವಿಷ್ಯದಲ್ಲಿ ಸಮಾಜದ ಆಸ್ತಿಯಾಗಬೇಕು ಎಂದರು. ರೋಟರಿ ಕ್ಲಬ್ಬಿನ ಇಂಟರ್ಯಾಕ್ಟ್ ಚೇರ್ಮನ್ ಬಾಲಕೃಷ್ಣ ದೇವಾಡಿಗ ಇಂಟರಾಕ್ಟ್ ಕ್ಲಬ್ಬಿನ ವತಿಯಿಂದ ಮಾಡಬಹುದಾದ ಕಾರ್ಯಕ್ರಮಗಳ ಬಗ್ಗೆ ಸಂಕ್ಷಿಪ್ತ…
ಬಂಟ ಸಮಾಜದ ಜನರು ಮಾಡದ ಉದ್ಯೋಗ ಇಲ್ಲ. ಪ್ರಯತ್ನಿಸದ ಉದ್ಯಮ ವ್ಯಾಪಾರಗಳಿಲ್ಲ. ಮಿಂಚದ ಕಲಾ ಸಾಹಿತ್ಯ ಪ್ರಕಾರಗಳಿಲ್ಲ. ಬೆಳ್ತಂಗಡಿ ತಾಲೂಕಿನಲ್ಲಿ ತುಂಬಾ ಜವಾಬ್ದಾರಿಯಿಂದ ಕೂಡಿದ ಉಪ ತಹಶೀಲ್ದಾರ್ ವೃತ್ತಿ ನಿರ್ವಹಣೆಯಲ್ಲಿ ತನ್ನ ಕಾರ್ಯ ವೈಖರಿಯಿಂದ ಶ್ರೀ ರವೀಂದ್ರ ಶೆಟ್ಟಿ ಹೊಸೂರು ರವರು ಅಪಾರ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಕುಂದಾಪುರ ತಾಲೂಕಿನ ಹೊಸೂರು ಗ್ರಾಮದ ಶ್ರೀ ಸಂಜೀವ ಶೆಟ್ಟಿ ಮತ್ತು ಸುಶೀಲಾವತಿ ಶೆಟ್ಟಿ ದಂಪತಿಯರಿಗೆ ಸುಪುತ್ರರಾಗಿ ಜನಿಸಿದ ಶೆಟ್ಟರು ಬಿ ಎ ಪದವೀಧರರು. ಶ್ರೀಯುತರ ಧರ್ಮಪತ್ನಿ ಶ್ರೀಮತಿ ಸುಮಂಗಲಾ ಆರ್ ಶೆಟ್ಟಿ ಅವರು ವಿಜ್ಞಾನ ಮತ್ತು ಶಿಕ್ಷಣ ತರಬೇತಿ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿಧರೆ. ಎಂ.ಎಸ್ಸಿ, ಎಂ.ಎಡ್ ಪದವಿ ಪಡೆದ ಬಳಿಕ ಪ್ರಸ್ತುತ ಗುರುಪುರ ಹೋಬಳಿ ಕುಟಿನ್ಹೊ ಪದವು ಇಲ್ಲಿರುವ ಡಾ.ಅಂಬೇಡ್ಕರ್ ವಸತಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರವೀಂದ್ರ ಶೆಟ್ಟಿ ಅವರು ತನ್ನ ವೃತ್ತಿ ಕರ್ತವ್ಯದ ಜೊತೆಗೆ ಜನಸಾಮಾನ್ಯರಿಗೆ ಸಹಾಯ ಆಗುವ ಮಹತ್ತರವಾದ ಕೆಲಸಗಳನ್ನು ಮಾಡಿ ಕೊಡುತ್ತಾರೆ. ಕೆಲವು ದಾಖಲಾತಿ ಕುರಿತ ಮಾಹಿತಿ,…
ಬಂಟರು ಕರಾವಳಿ ಪ್ರದೇಶವನ್ನು ಧಾರ್ಮಿಕ, ಸಾಂಸ್ಕೃತಿಕವಾಗಿ ಸಮೃದ್ಧಗೊಳಿಸಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಪ್ರಬುದ್ಧರು. ಆಧ್ಯಾತ್ಮಿಕ, ಧಾರ್ಮಿಕವಾಗಿ ಹಿಂದುಳಿದಿದ್ದು, ದೇವ, ದೈವಗಳ ಕುರಿತು ಜಿಜ್ಞಾಸೆಗಳಿವೆ. ನಮ್ಮ ಸಂಪ್ರದಾಯಗಳನ್ನು ತಿಳಿದುಕೊಳ್ಳಲು ಕುಲಗುರುವಿನ ಅಗತ್ಯವಿದೆ ಎಂದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಡಾ. ವಿದ್ಯಾವಾಚಸ್ಪತಿ ವಿಶ್ವ ಸಂತೋಷಭಾರತಿ ಸ್ವಾಮೀಜಿ ಹೇಳಿದರು. ಆಡ್ಯಾರ್ ಗಾರ್ಡನ್ನಲ್ಲಿರುವ ವಿ.ಕೆ ಶೆಟ್ಟಿ ಸಭಾಂಗಣದಲ್ಲಿ ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡು ಶ್ರೀ ಸಂಸ್ಥಾನದ ದಶಮ ಸಂಭ್ರಮದ ಸಂಕಲ್ಪ ‘ಬಂಟ ಸಂಸ್ಕೃತಿ ಪರಂಪರೆ ಅನಾವರಣ’ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಹಾ ಮಂಡಲದ ಪದಗ್ರಹಣ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಮುಂಬಯಿ ಹೇರಂಭ ಇಂಡಸ್ಟ್ರೀಸ್ ಸಿಎಂಡಿ ಡಾ| ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಬಾರ್ಕೂರು ಮಹಾಸಂಸ್ಥಾನ ಟ್ರಸ್ಟ್ ಕಾರ್ಯಾಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಆಶಯ ನುಡಿಗಳ ಜತೆಗೆ ಎಂಟು ಮಂಡಲಗಳ ಪದಾಧಿಕಾರಿಗಳ ಘೋಷಣೆ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಚಿವ ಬಿ.ರಮಾನಾಥ ರೈ, ಬಂಟರ…
ಸುರತ್ಕಲ್ನ ಅಭಿಷ್ ಬಿಸಿನೆಸ್ ಸೆಂಟರ್ನಲ್ಲಿ ಕಾಂಚೀವರಂ, ರೇಷ್ಮೆ ಸೀರೆಗಳ ಸಹಿತ ಅದ್ದೂರಿ ಬ್ರ್ಯಾಂಡೆಡ್ ಸೀರೆಗಳ ಮಳಿಗೆ ‘ಸಿರಿ ಎಕ್ಸ್ಕ್ಲೂಸಿವ್ ಸಾರಿ ಶಾಪ್’ ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡುತ್ತಾ, ‘ಸಿರಿ’ ಎಂದರೆ ಸಂಪತ್ತು. ಉದ್ಯಮಿ ಸುಧಾಕರ ಎಸ್ ಪೂಂಜಾ ಅವರು ತಮ್ಮ ವ್ಯವಹಾರ ಜೀವನದೊಂದಿಗೆ ಸಾಮಾಜಿಕ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಎಲ್ಲರ ಮನಸ್ಸು ಗೆದ್ದಿದ್ದಾರೆ. ಈಗ ಅವರ ಪುತ್ರಿ ಸ್ಫೂರ್ತಿ ಪೂಂಜ ಅವರು ಹೊಸ ಉದ್ಯಮ ಪ್ರಾರಂಭಿಸಿದ್ದು ಸಂತಸದ ಸಂಗತಿ. ಗ್ರಾಹಕರಿಗೆ ಪ್ರಾಮಾಣಿಕ ಸೇವೆ ನೀಡುವ ಮೂಲಕ ಯಶಸ್ಸು ಸಾಧಿಸಲಿ ಎಂದು ಆಶೀರ್ವದಿಸಿದರು. ಕಟೀಲು ಕ್ಷೇತ್ರದ ಕಮಲಾದೇವಿ ಆಸ್ರಣ್ಣ ಮಾತನಾಡಿ, ಭಾರತೀಯ ಉಡುಗೆ ತೊಡುಗೆಯಲ್ಲಿ ಸೀರೆಗೆ ಅಪಾರ ಮಹತ್ವವಿದೆ. ಭಾರತೀಯ ಸೀರೆಯ ಸೊಗಸು ವಿದೇಶೀಯರಿಗೂ ಮೆಚ್ಚುಗೆಗೆ ಪಾತ್ರವಾಗಿದೆ. ‘ಸಿರಿ’ ಮಳಿಗೆ ಮೂಲಕ ಸಾಂಪ್ರದಾಯಿಕ ಮತ್ತು ನವೀನ ವಿನ್ಯಾಸಗಳ ಸೀರೆಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಸಂಸ್ಥೆ ಇನ್ನಷ್ಟು…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸಂಘದ ನೂತನ ಪೋಷಕ ಸದಸ್ಯರಾಗಿ ಸೇರ್ಪಡೆಯಾದ ಹೈದರಾಬಾದ್ ನ ನಿರ್ಮಲ ಜಿಲ್ಲೆಯ ಯುವ ಹೋಟೆಲ್ ಉದ್ಯಮಿ ನಂದ್ರೋಳಿ ಹಣೆಮಕ್ಕಿ ಗಣೇಶ್ ಶೆಟ್ಟಿಯವರನ್ನು ಅವರ ಸ್ವಗೃಹ ಮುಳ್ಳಿಕಟ್ಟೆಯಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾದ ಅಶೋಕ್ ಶೆಟ್ಟಿ ಸಂಸಾಡಿ ಸನ್ಮಾನಿಸಿ ಗೌರವಿಸಿದರು. ಯುವ ಬಂಟರ ಸಂಘದ ನಿಕಟಪೂರ್ವ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಪ್ರಶಾಂತ್ ಶೆಟ್ಟಿ ಶಿರೂರು, ರಾಘವೇಂದ್ರ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.














