Author: admin

ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಜುಲೈ ಒಂದರ ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾಗೇಶ್ ಪುತ್ರನ್ ಅವರನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಪದಗ್ರಹಣ ಕಾರ್ಯಕ್ರಮದಲ್ಲಿ ಕ್ಲಬ್ ನ ನೂತನ ಅಧ್ಯಕ್ಷರಾದ ಲ. ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರುಮಾಜಿ ಜಿಲ್ಲಾ ಗವರ್ನರ್ ಲ. ಎಂಜೆಎಫ್ ದಿವಾಕರ ಶೆಟ್ಟಿ, ಪಿಎಂಜೆಎಫ್ ಲ. ರಂಜನ್ ಕಲ್ಕೂರ, ಪ್ರಾಂತಿಯ ಅಧ್ಯಕ್ಷರಾದ ಲ. ರಜತ ಹೆಗ್ಡೆ, ವಲಯ ಅಧ್ಯಕ್ಷರಾದ ಲ. ವಸಂತರಾಜ್ ಶೆಟ್ಟಿ, ಎಕ್ಸ್ಟೆಂಶನ್ ಚೇರ್ಮನ್ ಲ. ಅರುಣ್ ಕುಮಾರ್ ಹೆಗ್ಡೆಯವರ ಸಮಕ್ಷಮದಲ್ಲಿ ಸನ್ಮಾನಿಸಿ ಗೌರವಿಸಿದರು. ಈ ಸಂಧರ್ಭದಲ್ಲಿ ಪ್ರಾಂತೀಯ ಕಾರ್ಯದರ್ಶಿ ಲ. ಏಕನಾಥ ಬೋಳಾರ್, ಸ್ಥಾಪಕ ಅಧ್ಯಕ್ಷರಾದ ಲ. ಅಶೋಕ್ ಶೆಟ್ಟಿ ಸಂಸಾಡಿ, ಮಾಜಿ ಅಧ್ಯಕ್ಷರಾದ ಲ. ಉದಯ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಲ. ವೆಂಕಟರಮಣ ನಾಯಕ್, ಕೋಶಾಧಿಕಾರಿ ಲ. ಅರುಣ್ ಕುಮಾರ್ ಶೆಟ್ಟಿ, ನೂತನ ಕಾರ್ಯದರ್ಶಿ ಲ.ಭುಜಂಗ ಶೆಟ್ಟಿ ರಟ್ಟಾಡಿ, ಕೋಶಾಧಿಕಾರಿ ಲ. ಅಣ್ಣಪ್ಪ…

Read More

ಭಾರತ ಸಂಸ್ಕೃತಿಯನ್ನು ಉಳಿಸಿ ಸಾರ್ಥಕತೆಯ ಜೀವನವನ್ನು ನಡೆಸಲು ಕೋವಿಡ್ ಮಹಾ ಕಾಯಿಲೆ ನಮಗೆ ಕಳಿಸಿಕೊಟ್ಟಿದೆ. ಜೀವನ ಸಾರ್ಥಕವಾಗಬೇಕಾದರೆ ಇನ್ನೊಬ್ಬರಿಗೆ ಅನ್ಯಾಯವನ್ನು ಮಾಡದೆ ಸತ್ಕಾರ್ಯಗಳನ್ನು ಮಾಡುತ್ತಾ, ದಾನ ಧರ್ಮಗಳನ್ನು, ಪುಣ್ಯದ ಕಾರ್ಯಗಳನ್ನು ಮಾಡುತ್ತಾ ಬದುಕು ಕಟ್ಟಿದಾಗ ಜೀವನ ಸಾರ್ಥಕವಾಗುತ್ತದೆ ಎಂದು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ತಿಳಿಸಿದರು. ಸಯನ್ ಪೂರ್ವದ ನಿತ್ಯಾನಂದ ಸಭಾಗೃಹದಲ್ಲಿ ಜುಲೈ 20 ರಂದು ಜರಗಿದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚಿಸಿ, ಮುಂಬಯಿ ಮಹಾನಗರದಲ್ಲಿ ಅದೆಷ್ಟೋ ಜನರು ಸಂಪಾದನೆಯ ಬಹು ಪಾಲನ್ನು ಸಮಾಜ ಸೇವೆ, ದಾನ ಧರ್ಮಗಳ ಕಾರ್ಯಗಳಿಗಾಗಿ ವಿನಿಯೋಗಿಸುತ್ತಾರೆ. ಕಳೆದ ಹಲವಾರು ವರ್ಷಗಳಿಂದ ಗುರುದೇವ ಸೇವಾ ಬಳಗದ ಮೂಲಕವೂ ಸಮಾಜದ ಹಾಗೂ ಧರ್ಮದ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಅತ್ಯಂತ ಪುಣ್ಯದ ಕಾರ್ಯವಾಗಿದೆ. ಯಾವುದನ್ನೂ ಉಚಿತವಾಗಿ ಪಡೆದರೆ ಇದಕ್ಕೆ ಬೆಲೆ ಇರುವುದಿಲ್ಲ. ಶ್ರಮಪಟ್ಟು ಸಾಧನೆ ಮಾಡಿದಾಗ ಅದಕ್ಕೆ ಬೆಲೆ ಬರುತ್ತದೆ. ಆದ್ದರಿಂದ ಶ್ರಮಪಟ್ಟು ಸಾಧನೆಯಿಂದ ನಡೆಯಬೇಕು. ಅದರಿಂದ ಭಕ್ತಿ ಮಾರ್ಗವೂ ಕೂಡ ಸುಲಭವಾಗಿ ಲಭಿಸುತ್ತದೆ. ದಾನ ಧರ್ಮಗಳನ್ನು ಮಾಡುವಾಗ…

Read More

ಭೂಮಿಯ ಮೇಲೆ ಸಾವಿಲ್ಲದ ಯಾವುದೇ ವ್ಯಕ್ತಿ ಇಲ್ಲ. ಹುಟ್ಟಿದ ವ್ಯಕ್ತಿ ಒಂದಲ್ಲ ಒಂದು ದಿನ ಸಾಯಲೇಬೇಕು. ‎ಸತ್ತ ಮೇಲೆ ಪ್ರತಿಯೊಬ್ಬರಿಗೂ ಅವರ ಧರ್ಮದ ಪ್ರಕಾರ ಕೊನೆಯ ಕಾರ್ಯವನ್ನು ನಡೆಸಲಾಗುತ್ತದೆ. ಹಿಂದೂಗಳಲ್ಲಿ ಕೆಲವರಲ್ಲಿ ದೇಹವನ್ನು ಸುಡುವ ಪದ್ಧತಿ ಇದೆ. ಒಂದೊಂದು ಜಾತಿಯಲ್ಲಿ ಒಂದೊಂದು ವಿಧಾನದಲ್ಲಿ ಅಂತ್ಯಕ್ರಿಯೆಯನ್ನು ಕೈಗೊಳ್ಳಲಾಗುತ್ತದೆ. ‎ಆದರೆ ನಮಗೆ ಇಷ್ಟ ಬಂದ ಹಾಗೇ ಯಾವಾಗೆಂದರೆ ಆವಾಗ ಸತ್ತ ಹೆಣವನ್ನು ಸುಡಬಾರದು ಹಾಗೂ ಆ ಸತ್ತ ಹೆಣವನ್ನು ಒಬ್ಬಂಟಿಯಾಗಿ ಬಿಟ್ಟು ಹೋಗಲೂ ಬಾರದು. ಗರುಡ ಪುರಾಣದ ಪ್ರಕಾರ ಇಂತಹ ತಪ್ಪುಗಳನ್ನು ಮಾಡಲೇಬಾರದು ಎಂಬ ಉಲ್ಲೇಖವಿದೆ. ಸಾವಿನ ನಂತರದ ಕಾರ್ಯದ ಬಗ್ಗೆ ಗರುಡ ಪುರಾಣ ಏನು ಹೇಳುತ್ತದೆ. ‎ಸೂರ್ಯಾಸ್ತದ ನಂತರ ಅಂತ್ಯಕ್ರಿಯೆ ಮಾಡಿದರೆ ಏನಾಗುತ್ತದೆ? ಯಾವುದಾದರೂ ವ್ಯಕ್ತಿ ಸೂರ್ಯಾಸ್ತದ ನಂತರ ಸತ್ತರೆ ಆತನ ಅಂತ್ಯಕ್ರಿಯೆಯನ್ನು ಮಾರನೇ ದಿನ ಬೆಳಗ್ಗೆ ನೆರವೇರಿಸಬೇಕು ಹಾಗೂ ಆ ಹೆಣವನ್ನು ರಾತ್ರಿಯಿಡೀ ಇಟ್ಟುಕೊಳ್ಳಬೇಕು. ಯಾರಾದರೂ ಒಬ್ಬರು ಆ ಹೆಣದ ಪಕ್ಕದಲ್ಲಿ ಕೂರಲೇಬೇಕು. ಹೆಣವನ್ನು ಬಿಟ್ಟು ಎಲ್ಲಿಯೂ ಹೋಗುವ ಹಾಗಿಲ್ಲ. ‎ಗರುಡ…

Read More

ಹಲವಾರು ಸರಕಾರಿ ನೇಮಕಾತಿಗಳಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ನೇಮಕಾತಿಗೊಳ್ಳುವಂತೆ ಮಾಡಿದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಕೇಂದ್ರ ಕಛೇರಿ ಪುತ್ತೂರಿನಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಯುಸಿ/ಪದವಿ ವ್ಯಾಸಂಗದ ನಂತರದ ಅವಕಾಶಗಳ ಕುರಿತಾಗಿ ಒಂದು ದಿನದ ಮಾಹಿತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಸ್ಪರ್ಧಾತ್ಮಕ ಪರೀಕ್ಷೆಗಳ ಖ್ಯಾತ ತರಬೇತುದಾರ ಹಾಗೂ ಶಿಕ್ಷಣ ತಜ್ಞ ಅರವಿಂದ ಚೊಕ್ಕಾಡಿಯವರು ಕಾರ್ಯಾಗಾರವನ್ನು ಉದ್ಘಾಟಿಸಿದರು ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈಯವರು ಪ್ರಸ್ತಾವಿಕವಾಗಿ ಮಾತನಾಡಿ, ಖಾಸಗಿ ಮತ್ತು ಸರಕಾರಿ ವಲಯದ ಉದ್ಯೋಗಗಳ ಮಹತ್ವವನ್ನು ವಿವರಿಸಿ, ವಿದ್ಯಾಮಾತಾ ಅಕಾಡೆಮಿಯಲ್ಲಿರುವ ಅವಕಾಶಗಳ ಕುರಿತು ಬೆಳಕು ಚೆಲ್ಲಿದರು. ನಂತರದಲ್ಲಿ ಅರವಿಂದ ಚೊಕ್ಕಾಡಿರವರು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತೆಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಿದರು. ಉದ್ಯೋಗಾದರಿತವಾಗಿ ಮಾಹಿತಿಗಳ ಕೊರತೆಯಿಂದ ಹಲವಾರು ನೇಮಕಾತಿ ಪ್ರಕ್ರಿಯೆಗಳಲ್ಲಿ ಅವಕಾಶ ಕಳೆದುಕೊಳ್ಳುವುದನ್ನು ತಪ್ಪಿಸುವ ಸಲುವಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರತಿನಿತ್ಯ ಬೆಳಿಗ್ಗೆ 11…

Read More

ಪುತ್ತೂರು ತಾಲೂಕು ಮಹಿಳಾ ಬಂಟರ ವಿಭಾಗದ ಕಾರ್ಯಕಾರಿ ಸಮಿತಿ ಸಭೆಯು ಜುಲೈ 15 ರಂದು ಪುತ್ತೂರು ಎಂ. ಸುಂದರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ನರಿಮೊಗರುರವರು ಮಾತನಾಡಿ, ಆಗಸ್ಟ್ 3ರಂದು ಪುತ್ತೂರು ತಾಲೂಕು ಮಹಿಳಾ ಬಂಟರ ವಿಭಾಗದ ಆಶ್ರಯದಲ್ಲಿ ಆಟಿದ ಕೂಟ ಕಾರ್ಯಕ್ರಮ, ಬಂಟರ ಯಾನೆ ನಾಡವರ ಮಾತೃ ಸಂಘ, ಪುತ್ತೂರು ತಾಲೂಕು ಬಂಟರ ಸಂಘ ಹಾಗೂ ಯುವ ಮತ್ತು ವಿದ್ಯಾರ್ಥಿ ಬಂಟರ ವಿಭಾಗದ ಸಹಯೋಗದೊಂದಿಗೆ ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಲಿದ್ದು, ಈ ಕಾರ್ಯಕ್ರಮದಲ್ಲಿ ಪುತ್ತೂರು ಕಡಬ ತಾಲೂಕು ವ್ಯಾಪ್ತಿಯಲ್ಲಿರುವ ಎಲ್ಲಾ ಬಂಟ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಮಾದರಿ ಕಾರ್ಯಕ್ರಮವಾಗಬೇಕು. ಈ ಬಾರಿ ಆಟಿದ ಕೂಟ ಕಾರ್ಯಕ್ರಮದ ನೇತೃತ್ವವನ್ನು ಮಹಿಳಾ ಬಂಟರ ವಿಭಾಗದವರು ವಹಿಸಿಕೊಂಡು ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಬೇಕೆಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ…

Read More

ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಖಂಬದಕೋಣೆ ರೈತರ ಸೇವಾ ಸಹಕಾರ ಸಂಘದ ಹಿರಿಯ ಮತ್ತು ದಕ್ಷ ಅಧ್ಯಕ್ಷ, ಕಳೆದ 28 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಾ, ಸಂಘವನ್ನು ರಾಜ್ಯ ಮಟ್ಟದಲ್ಲಿ ಗುರುತಿಸಿಸುವಂತೆ ಮಾಡಿದ ಮಹಾನ್ ಸಾಧಕ ಎಸ್ ಪ್ರಕಾಶ್ಚಂದ್ರ ಶೆಟ್ಟಿಯವರಿಗೆ ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸಹಕಾರ ಸಂಘವು ಈಗ ಸಾವಿರ ಕೋಟಿಗೂ ಮಿಕ್ಕಿ ವಾರ್ಷಿಕ ವಹಿವಾಟು ದಾಖಲಿಸುತ್ತಿರುವುದು ಅವರ ಪ್ರಗತಿಪರ ನಾಯಕತ್ವದ ಪ್ರತೀಕವಾಗಿದೆ. ಅವರ ಈ ಅಮೂಲ್ಯ ಸೇವೆ ಹಾಗೂ ಕ್ರಿಯಾತ್ಮಕ ಚಿಂತನೆಗಳನ್ನು ಗುರುತಿಸಿ ಅವಿಭಜಿತ ಕುಂದಾಪುರ ತಾಲೂಕಿನ ಕೃಷಿ ಪತ್ತಿನ ಸಹಕಾರಿ ಸಂಘಗಳ ವತಿಯಿಂದ ನಡೆಯುವ ಅಭಿನಂದನಾ ಕಾರ್ಯಕ್ರಮದಲ್ಲಿ ಕುಂದಾಪುರ ಬಂಟರ ಸಂಘದ ಆರ್.ಎನ್ ಶೆಟ್ಟಿ ಸಭಾಭವನದಲ್ಲಿ ಜುಲೈ 20 ರಂದು ಬೆಳಗ್ಗೆ 10.30 ಕ್ಕೆ 2024- 25ನೇ ಸಾಲಿನ ‘ಸಹಕಾರ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

Read More

ಹೋಟೆಲು ಉದ್ಯಮಿ, ಶ್ರೀ ಕಾವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಘು ಎಲ್ ಶೆಟ್ಟಿಯವರು ಪಟ್ಲ ದಶಮ ಸಂಭ್ರಮಕ್ಕೆ ಘೋಷಣೆ ಮಾಡಿರುವ 5 ಲಕ್ಷ ರೂಪಾಯಿಗಳ ಚೆಕ್ಕನ್ನು ಶ್ರೀ ಕಾವೇಶ್ವರ ದೇವರ ಸನ್ನಿಧಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ್ ಎಸ್ ಪೂಂಜಾ, ಪ್ರದೀಪ್ ಆಳ್ವ ಕದ್ರಿ ಹಾಗೂ ಪಟ್ಲ ಫೌಂಡೇಶನ್ ನ ಪದಾಧಿಕಾರಿಗಳು, ಹಿತೈಷಿಗಳು ಉಪಸ್ಥಿತರಿದ್ದರು.

Read More

ಕಳೆದ ವಾರ ನನ್ನ ಜೀವನದಲ್ಲೊಂದು ಘಟನೆ ನಡೆಯಿತು. ಬೈಕಿನಲ್ಲಿ ಶಾಲೆಗೆ ಹೋದವ ನನ್ನ ದ್ವಿಚಕ್ರ ವಾಹನವನ್ನು ಶಾಲೆಯ ಮೂಲೆಯ ಕಾರಿಡಾರಿನಲ್ಲಿ ನಿಲ್ಲಿಸುವುದು ನನ್ನ ಅಭ್ಯಾಸ. ಆವತ್ತು ನಿಲ್ಲಿಸಲು ತೆಗೆದುಕೊಂಡು ಹೋದಾಗ ಗ್ರಾನೈಟ್ ಮತ್ತು ಟೈಲ್ಸ್ ಹಾಕಿದ ನೆಲದ ಮೇಲೆ ನೀರು ನಿಂತಿದ್ದರಿಂದ ನನ್ನ ಬೈಕ್ ಕೇರೆ ಹಾವಿನಂತೆ ಅತ್ತಿತ್ತ ಉರುಳಾಡಿ ಕ್ಷಣ ಮಾತ್ರದಲ್ಲಿ ಏನು ಮಾಡಬೇಕೆಂದು ಅರಿವಾಗದೆ ನನ್ನನ್ನು ಸೇರಿ ದೊಪ್ಪನೆ ಕೆಳಗೆ ಬಿತ್ತು. ಬಿದ್ದದ್ದು ನಾನು ಕರ್ತವ್ಯ ನಿರ್ವಹಿಸುವ ಶಾಲೆಯಲ್ಲೇ. ಒಳಗಿನ ಹಾಲಿನಲ್ಲಿ ಮುಂಜಾನೆಯ ಅಸೆಂಬ್ಲಿ ನಡೆಯುತ್ತಿತ್ತು. ಶಿಕ್ಷಕರೆಲ್ಲರೂ ಓಡಿ ಬಂದ್ರು. ಮಕ್ಕಳು ಕೂಡಾ ಏನಾಯಿತೆಂದು ಕುತೂಹಲದಿಂದ ಕಿಟಕಿ ಎಡೆಗಳಿಂದ ಇಣುಕಿದರು. ಬಿದ್ದವ ಕೀ ಆಫ್ ಮಾಡಿ ಬೈಕನ್ನು ಎತ್ತಿ ನಿಲ್ಲಿಸಿದೆ. (ದೇವರ ಆಶೀರ್ವಾದ ಮತ್ತು ನಿಮ್ಮಂತ ಒಂದಿಷ್ಟು ಜನರ ಸದಾಕಾಲದ ಹೃದಯಾಂತರಾಳದ ಹಾರೈಕೆ ನನಗೂ ಬೈಕಿಗೂ ಏನು ಆಗ್ಲಿಲ್ಲ) ಇದೇ ಘಟನೆ ನನ್ನ ಜೀವನದಲ್ಲಿ ಮುಂಚೆ ಎಲ್ಲಾದರೂ ನಡೆದಿದ್ರೆ ನಾನು ಪಾಠ ಮಾಡುವ ಶಾಲೆಯಲ್ಲಿ ಮಕ್ಕಳೆದುರು ಬಿದ್ದೆ ಎಂದು…

Read More

ಬೋಂಬೆ ಬಂಟ್ಸ್ ಅಸೋಸಿಯೇಶನ್ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಊರಿನ ಪ್ರಸಿದ್ಧ ಕಲಾವಿದರಿಂದ ಜುಲೈ 17 ರಂದು ಸ್ವಾಮಿ ನಿತ್ಯಾನಂದ ಹಾಲ್ ಸಯನ್ ಇಲ್ಲಿ “ಅಂಬಾ ಶಪಥ” ತಾಳಮದ್ದಳೆ ನಡೆಯಿತು. ಅಸೋಸಿಯೇಷನ್ ಅಧ್ಯಕ್ಷರಾದ ಅಡ್ವಕೇಟ್ ಡಿ.ಕೆ ಶೆಟ್ಟಿಯವರು ಪ್ರಾರಂಭದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ವರ್ಷಪೂರ್ತಿ ಅಸೋಸಿಯೇಶನ್ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಮನೋರಂಜನಾ ಕಾರ್ಯಕ್ರಮಗಳ ಅಂಗವಾಗಿ ನಾಟಕ, ಯಕ್ಷಗಾನ, ತಾಳಮದ್ದಲೆ ಮತ್ತಿತರ ವೈವಿಧ್ಯಮಯ ಕಾರ್ಯಕ್ರಮವು ನಡೆಯುತ್ತವೆ. ಕಲಾ ಪೋಷಕನಾಗಿರುವ ನಾನು ಕಲಾವಿದನಲ್ಲ. ನಮ್ಮ ಸಂಸ್ಥೆಯಲ್ಲಿ ಬಹಳಷ್ಟು ಒಳ್ಳೆಯ ಪ್ರತಿಭಾವಂತ ಕಲಾವಿದರಿದ್ದಾರೆ. ಅವರಿಗೂ ಮತ್ತು ಕಲಾವಿದರಿಗೆ ನಿರಂತರವಾಗಿ ಅಸೋಸಿಯೇಷನ್ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ ಎಂದು ನುಡಿದರು. ಅಸೋಸಿಯೇಷನ್ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅದ್ಯಪಾಡಿ ಸ್ವಾಗತಿಸಿ ಅಸೋಸಿಯೇಷನ್ ಬಗ್ಗೆ ಮಾತನಾಡಿ, ಮುಂದಿನ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು. ಉದ್ಘಾಟನಾ ಸಂದರ್ಭದಲ್ಲಿ ಅಸೋಸಿಯೇಷನ್ ನ ಗೌರವ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಶೇಖರ್…

Read More

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ ಜಿಲ್ಲೆಯ ಹಲವು ದೇವಸ್ಥಾನ ದೈವಸ್ಥಾನಗಳ ಜೀರ್ಣೋದ್ದಾರ ಸಮಿತಿಯ ಜವಾಬ್ದಾರಿಯನ್ನು ವಹಿಸಿ ಧಾರ್ಮಿಕವಾಗಿ ಸಾಮಾಜಿಕವಾಗಿ ಜನಾನುರಾಗಿಯಾಗಿದ್ದಾರೆ. ಮಾತ್ರವಲ್ಲದೆ ಪ್ರಗತಿಪರ ಕೃಷಿಕರೂ ಆಗಿದ್ದಾರೆ. ಉಪಾಧ್ಯಕ್ಷರಾಗಿ ಉದ್ಯಮಿ ಐತಪ್ಪ ಆಳ್ವ, ಕಾರ್ಯದರ್ಶಿಯಾಗಿ ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ಸದಾನಂದ ಆಳ್ವ ಕಂಪ, ಕೋಶಾಧಿಕಾರಿಯಾಗಿ ಉದ್ಯಮಿ ಲೋಕೇಶ್ ಶೆಟ್ಟಿ ಕುಳ, ಜೊತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಶೆಟ್ಟಿ ಸಜಿಪ, ಜೊತೆ ಕೋಶಾಧಿಕಾರಿಯಾಗಿ ವಿದ್ಯಾ ರೈ ಆಯ್ಕೆಯಾಗಿದ್ದಾರೆ.ಪದಾಧಿಕಾರಿಗಳ ಆಯ್ಕೆಯ ಸಭೆಯು ಬಂಟ್ವಾಳ ತಾಲೂಕು ಬಂಟರ ಭವನದ ಸಭಾಂಗಣದಲ್ಲಿ ಜರಗಿತು. ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಕಿರಣ್ ಹೆಗ್ಡೆ ಅನಂತಾಡಿ, ವಿವೇಕ್ ಶೆಟ್ಟಿ ನಗ್ರಿಗುತ್ತು, ಲೋಕನಾಥ ಶೆಟ್ಟಿ ಬಿಸಿರೋಡ್, ಶಾಂತಾರಾಮ ಶೆಟ್ಟಿ ಬೋಳಂತೂರು ನಡೆಸಿಕೊಟ್ಟರು. ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Read More