Author: admin

ಪ್ರತಿಷ್ಠಿತ ಪುಣೆ ಬಂಟರ ಸಂಘದ 2025 – 2027 ರ ಅವಧಿಗೆ ನೂತನ ಅಧ್ಯಕ್ಷರಾಗಿ ಹೋಟೆಲ್ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಕೆಂಜಾರು ಅಜಿತ್ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆದ ವಿಶೇಷ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಎರಡು ವರ್ಷಗಳಿಗಾಗಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಕೆಂಜಾರು ಅಜಿತ್ ಹೆಗ್ಡೆಯವರು ಪುಣೆಯಲ್ಲಿ ಪ್ರತಿಷ್ಠಿತ ಹೋಟೆಲ್ ಉದ್ಯಮಿಯಾಗಿ ಮಾತ್ರವಲ್ಲದೇ ಉದ್ಯಮದ ಯಶಸ್ಸಿನೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಸಿಂಪೋಣಿ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾಗಿದ್ದಾರೆ. ಪುಣೆ ಬಂಟರ ಸಂಘದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಪ್ರತಿಷ್ಠಿತ ಸಂಘದ ಭವನದ ನಿರ್ಮಾಣ ಹಂತದಲ್ಲಿ ಗುರುತರ ಸೇವೆಯನ್ನು ಸಲ್ಲಿಸಿದ್ದಾರೆ. ಅಲ್ಲದೆ ಸಂಘದ ಮೂಲಕ ವರ್ಷವಿಡೀ ಹತ್ತು ಹಲವು ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾ ಬಂದಿದ್ದಾರೆ. ಪುಣೆಯಲ್ಲಿನ ವಿವಿಧ ಸಂಘ ಸಂಸ್ಥೆಗಳಲ್ಲಿಯೂ…

Read More

ಪ್ರತಿಷ್ಠಿತ ಪುಣೆ ಬಂಟರ ಸಂಘದ 2025 – 2027 ರ ಅವಧಿಗೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಶಮ್ಮಿ ಅಜಿತ್ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆದ ವಿಶೇಷ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಎರಡು ವರ್ಷಗಳಿಗಾಗಿ ಮಹಿಳಾ ವಿಭಾಗದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಶಮ್ಮಿಅಜಿತ್ ಹೆಗ್ಡೆಯವರು ಪುಣೆ ಬಂಟರ ಸಂಘದ ಮಹಿಳಾ ವಿಭಾಗದಲ್ಲಿ ಹಲವಾರು ವರ್ಷಗಳಿಂದ ಸಕ್ರಿಯವಾಗಿ ಗುರುತಿಸಿಕೊಂಡು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮಹಿಳೆಯರ ಅಪಾರವಾಗಿ ಶ್ರಮಿಸಿದ್ದಾರೆ. ಈ ಹಿಂದೆ ಸಮಿತಿಯ ವಿವಿಧ ವಿಭಾಗಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ್ದಾರೆ.

Read More

ಮೇ.14ರಂದು ಖಂಡಿಗೆ ಮೀನು ಹಿಡಿಯುವ ಜಾತ್ರೆಯೊಂದಿಗೆ ಕಂಡೇವುದ ಆಯನ ಪ್ರಾರಂಭಗೊಳ್ಳಲಿದ್ದು, ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಚೇಳಾಯರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ಹಾಗೂ ಪರಿವಾರ ದೈವಗಳ ವಾರ್ಷಿಕ ಜಾತ್ರೆ ನಡೆಯಲಿದೆ ಎಂದು ತೋಕೂರು ಗುತ್ತು ಉದಯ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ಮೇ 14ರಂದು ಬೆಳಿಗ್ಗೆ ಗಂಟೆ 9ಕ್ಕೆ ಮೂಲಸ್ಥಾನದಲ್ಲಿ ಶುದ್ಧಕಲಶ, ಗಣಹೋಮ, ಬೆಳಿಗ್ಗೆ ಗಂಟೆ 11ಕ್ಕೆ ಸಂಕ್ರಮಣ ಪೂಜೆ, 12 ಗಂಟೆಗೆ ಮಹಾ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 8ಕ್ಕೆ ಮಹಾ ಅನ್ನಸಂತರ್ಪಣೆ, ರಾತ್ರಿ 9 ಗಂಟೆಗೆ ಬ್ರಹ್ಮಸ್ಥಾನದಲ್ಲಿ ಬ್ರಹ್ಮರಿಗೆ ತಂಬಿಲ, ಕುಮಾರ ಸಿರಿಗಳ ದರ್ಶನ, ಧರ್ಮದ ಶ್ರೀ ಉಳ್ಳಾಯ ಹಾಗೂ ಪರಿವಾರ ದೈವಗಳ ಭಂಡಾರ ಮೂಲಸ್ಥಾನ ಹೋಗುವುದು. ಸಿಡಿಮದ್ದು ಪ್ರದರ್ಶನ ನಂತರ ಧ್ವಜಾರೋಹಣ ನಡೆಯಲಿದೆ. ಮೇ 15 ಗುರುವಾರದಂದು ಬೆಳಿಗ್ಗೆ ಗಂಟೆ 5-00ಕ್ಕೆ ಧರ್ಮರಸು ಶ್ರೀ ಉಳ್ಳಾಯ, ಇಷ್ಟದೇವತೆ, ಬಬ್ಬರ್ಯ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ನಂತರ ನಂದಿಗೋಣ ಕುಮಾರ ಸಿರಿಗಳ ಭೇಟಿ,…

Read More

ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ 2025- 2027 ರ ಅವಧಿಗೆ ನೂತನ ಕಾರ್ಯಾಧ್ಯಕ್ಷರಾಗಿ ಹೋಟೆಲ್ ಉದ್ಯಮಿ, ಸಮಾಜ ಸೇವಕ ಸುಧಾಕರ ಸಿ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಿಶೇಷ ಮಹಾಸಭೆಯಲ್ಲಿ ಸಂಘದ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಹಾಗೂ ದಕ್ಷಿಣ, ಉತ್ತರ, ಪೂರ್ವ ಹಾಗೂ ಪಶ್ಚಿಮ ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಧಾಕರ ಸಿ ಶೆಟ್ಟಿಯವರು ಪುಣೆ ನಗರದಲ್ಲಿ ಹೋಟೆಲ್ ಉದ್ಯಮದಲ್ಲಿ ತನ್ನನ್ನು ತೊಡಗಿಸಿಕೊಂಡು ಸತತ ಪರಿಶ್ರಮದಿಂದ ಯಶಸ್ಸನ್ನು ಗಳಿಸಿದವರು. ಜೊತೆ ಜೊತೆಗೆ ಸಮಾಜಮುಖಿ ಚಿಂತನೆಯೊಂದಿಗೆ ವಿವಿಧ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡು ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದಾರೆ. ಹಲವಾರು ವರ್ಷಗಳಿಂದ ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದಲ್ಲಿ ಧಾರ್ಮಿಕ ಸೇವೆಯನ್ನು ಸಲ್ಲಿಸಿಕೊಂಡು ದೇವಸ್ಥಾನದ…

Read More

ಕನ್ನಡ ಎನ್ನುವುದು ಒಂದು ಭಾಷೆಯಲ್ಲ, ಅದು ಸಂಸ್ಕೃತಿ. ಕನ್ನಡದ ಒಳಗೆ ಶತಮಾನದಿಂದ ಹರಿದು ಬಂದ ಜ್ಞಾನ ಧಾರೆಯಿದೆ. ಕನ್ನಡ ಕಲಿಕೆಯಿಂದ ಅದನ್ನು ಕೈವಶ ಮಾಡಿಕೊಳ್ಳಲು ಸಾಧ್ಯ ಎಂಬುದಾಗಿ ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ| ಜಿ.ಎನ್ ಉಪಾಧ್ಯ ಅವರು ನುಡಿದರು. ಅವರು ಕನ್ನಡ ವಿಭಾಗ ಎಪ್ರಿಲ್ 13ರ ಆದಿತ್ಯವಾರದಂದು ನಡೆದ ಕನ್ನಡ ಸರ್ಟಿಫಿಕೇಟ್ ಕೋರ್ಸಿನ ವಿದ್ಯಾರ್ಥಿಗಳ ಸಮಾವೇಶದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದರು. ಕನ್ನಡ ವಿಭಾಗ ದೊಡ್ಡ ಪ್ರಮಾಣದಲ್ಲಿ ಕನ್ನಡೇತರರಿಗೆ, ಕನ್ನಡ ಬಾರದವರಿಗೆ ಕನ್ನಡ ಕಲಿಕಾ ತರಗತಿಗಳನ್ನು ನಡೆಸಿಕೊಂಡು ಬರುತ್ತಿದೆ. ಈ ಯೋಜನೆಗೆ ನಗರ ಉಪನಗರಗಳಲ್ಲಿ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಲು ಇದೊಂದು ಮಹತ್ವದ ಉಪಕ್ರಮ ಎಂದು ಕನ್ನಡ ಕಲಿತ ಮಕ್ಕಳಿಗೆ ಶುಭಾಶಯ ಕೋರಿದರು. ಕಳೆದ ಅನೇಕ ವರ್ಷಗಳಿಂದ ಕನ್ನಡ ಕಲಿಕಾ ಯೋಜನೆಯ ಸಂಚಾಲಕರಾಗಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಶೆಟ್ಟಿ ಅವರು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ. ಸರ್ಟಿಫಿಕೇಟ್ ಕೋರ್ಸಿನ ಶಿಕ್ಷಕರಾದ…

Read More

2024-25 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 600 ರಲ್ಲಿ 590 ಅಂಕ ಪಡೆದ ಉಪ್ಪುಂದ ಕಟ್ಕೆರೆ ವಿಜಯ್ ಕುಮಾರ್ ಶೆಟ್ಟಿ ಮತ್ತು ವಂಡ್ಸೆ ಕೊರ್ಗಿ ಮನೆ ಅಂಬಿಕಾ ಶೆಟ್ಟಿ ದಂಪತಿಗಳ ಪುತ್ರ ಅಭಿಜಿತ್ ಶೆಟ್ಟಿಯವರ ಸಾಧನೆಯನ್ನು ಗುರುತಿಸಿ ಬೈಂದೂರು ಬಂಟರ ಸಂಘದ ವತಿಯಿಂದ ಅಧ್ಯಕ್ಷ ಸಾಲ್ಗದ್ದೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಗಣ್ಯರು ವಿದ್ಯಾರ್ಥಿಯ ಮನೆಗೆ ತೆರಳಿ ಅಭಿನಂದಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಅಡಿಕೆ ಕೊಡ್ಲು ಫಲ ಪುಷ್ಪಗಳೊಂದಿಗೆ ಗೌರವಿಸಿ ಶುಭಕೋರಿದರು. ಉದ್ಯಮಿ, ಸಂಘದ ಉಪಾಧ್ಯಕ್ಷ ಜಗದೀಶ್ ಶೆಟ್ಟಿಯವರು ನಗದು ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಹರ್ಜಿ ಕರುಣಾಕರ ಶೆಟ್ಟಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಕೆ ಶಿವರಾಂ ಶೆಟ್ಟಿ, ಉದ್ಯಮಿ ರಿತೇಶ್ ಶೆಟ್ಟಿ ಕುಕನಾಡು, ಹಿರಿಯರಾದ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆಯನ್ನು ಕ್ರಿಯೇಟಿವ್ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಮತ್ತು ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಮಹಾ ನಾಯಕನಿಗೆ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ವಿನಾಯಕ ಜೋಗ್‍ರವರು ಅಂಬೇಡ್ಕರ್ ರವರ ಹೋರಾಟ, ಸಾಧನೆ, ಮತ್ತು ಸಂವಿಧಾನ ರಚನೆಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಸಂತೋಷ್ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಶಿಕ್ಷಣ ಕ್ಷೇತ್ರದ ಮಹೋನ್ನತ ಗುರಿಯೊಂದಿಗೆ ಏಳು ಜನ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ 2022ರಲ್ಲಿ ತನ್ನ ಶಿಕ್ಷಣ ಸೇವೆಯನ್ನು ಉಡುಪಿಗೂ ವಿಸ್ತರಿಸುವ ಯೋಜನೆಯೊಂದಿಗೆ ಕಲ್ಯಾಣಪುರದ ತ್ರಿಶಾ ಪ. ಪೂ. ಕಾಲೇಜಿನ ಶೈಕ್ಷಣಿಕ ಸಹಭಾಗಿತ್ವ ವಹಿಸಿಕೊಂಡಿತು. ಈಗಾಗಲೇ ಪಿ. ಯು ಫಲಿತಾಂಶದಲ್ಲಿ ಆರಂಭಿಕ ವರ್ಷದಲ್ಲೇ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಸಂಸ್ಥೆ ಉಡುಪಿಯ ಶಾಖೆಯಲ್ಲೂ ಆ ಯಶಸ್ಸನ್ನು ಮುಂದುವರೆಸಿದೆ. ತನ್ನ ಪ್ರಥಮ ವರ್ಷದ ಫಲಿತಾಂಶದಲ್ಲೇ 100% ಗಳಿಸುವುದರ ಜೊತೆಗೆ ಪಿ. ಯು. ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ರ್ಯಾಂಕ್ ಗಳಿಸುವ ಮೂಲಕ ಸಂಸ್ಥೆ ಕೀರ್ತಿ ಗಳಿಸಿದೆ. 94 ಮಕ್ಕಳೊಂದಿಗೆ ಪ್ರಾರಂಭವಾದ ವಿದ್ಯಾಸಂಸ್ಥೆಯಲ್ಲಿ ಇಂದು 400ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೇವಲ ಅಂಕ ಗಳಿಕೆಯ ಹಸಿವನ್ನು ಮಾತ್ರ ಬೆಳೆಸದೆ ಜೀವನ ಮೌಲ್ಯಗಳು, ನೈತಿಕತೆ, ಸದ್ವಿಚಾರಗಳನ್ನು ಪ್ರತಿನಿತ್ಯ ಬೋಧಿಸುತ್ತಿರುವುದು ಸಂಸ್ಥೆಯು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ಉಡುಪಿಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಯಶಸ್ಸಿನ ಪಯಣ · ಸಂಸ್ಥೆ ಪ್ರಾರಂಭದ ವರ್ಷದಲ್ಲೇ…

Read More

ಒಂದು ಊರಿನಲ್ಲಿ ನಾಲ್ಕು ಜನ ಸೊಸೆಯಂದಿರು ಇದ್ದರು. ತನ್ನ ನಾಲ್ಕು ಮಕ್ಕಳು ಹೆಂಡತಿಯರ ಗುಲಾಂ ಎಂದು ಅರಿತುಕೊಂಡು ಒಂದು ದಿನ ಅಟ್ಟದ ಮೇಲಿರುವ ಒಂದು ಹಳೆಯ ಪೆಟ್ಟಿಗೆ ತಂದು ತನ್ನೆಲ್ಲಾ ವಸ್ತುಗಳನ್ನು ಪೆಟ್ಟಿಗೆಯೊಳಗೆ ಹಾಕಿ ಭದ್ರವಾಗಿ ಮುಚ್ಚಿ ಅದಕ್ಕೆ ಒಂದು ದೊಡ್ಡ ಬೀಗದ ಕೈ ಹಾಕಿ ಕೀಲಿ ಕೈ ತನ್ನ ಹತ್ತಿರ ಇಟ್ಟುಕೊಂಡು ಇರುತ್ತಿದ್ದಳು. ರಾತ್ರಿ ಮಲಗುವಾಗ ತನ್ನ ತಲೆಯ ಹತ್ತಿರವೇ ಪೆಟ್ಟಿಗೆ ಇಟ್ಟುಕೊಂಡು ಮಲಗುವುದು. ಇದನ್ನು ಕಂಡು ನಾಲ್ಕು ಜನ ಸೊಸೆಯಂದಿರು ಹೇಗಾದರೂ ಮಾಡಿ ಪೆಟ್ಟಿಗೆ ಒಳಗೆ ಏನಿದೆ ಎಂದು ತಿಳಿದುಕೊಳ್ಳಬೇಕೆಂದು ಹೊಂಚು ಹಾಕುತ್ತಿದ್ದರು. ಅವಳು ಆಕಡೆ ಈಕಡೆ ಹೋದರೆ ಸಾಕು ಪೆಟ್ಟಿಗೆ ಎತ್ತಿ ಎತ್ತಿ ನೋಡುವುದು. ಬಹಳ ಭಾರವಾಗಿತ್ತು. ಇದರಲ್ಲಿ ಏನಿದೆ ಎಂಬ ಕುತೂಹಲ ಬೇರೆ. ಭಾರವಾದ ಪೆಟ್ಟಿಗೆಯೊಳಗೆ ನಮ್ಮ ಅತ್ತೆ ಬಂಗಾರ ಬೆಳ್ಳಿ ಇಟ್ಟಿರಬಹುದೆಂದು ಆಕೆಯನ್ನು ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಹೀಗಿರಲು ಒಂದು ದಿನ ಅತ್ತೆ ತೀರಿ ಹೋದರು. ಎಲ್ಲರಿಗೂ ಖುಷಿಯಾಯಿತು. ವಿಧಿ ವಿಧಾನಗಳನ್ನು ಮುಗಿಸಿದ ಬಳಿಕ…

Read More

2025- 26ನೇ ಸಾಲಿನಲ್ಲಿ ಬಂಟ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಪಿಯುಸಿ ಉಚಿತ ಶಿಕ್ಷಣ ಮತ್ತು ವಸತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ 4 ವರ್ಷಗಳಿಂದ 200 ಕ್ಕೂ ಮಿಕ್ಕಿದ ಗ್ರಾಮೀಣ ಪ್ರತಿಭಾನ್ವಿತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಮುನ್ನಡೆ ಸಾಧಿಸಿದ್ದಾರೆ. ಎಸ್ ಎಸ್ ಎಲ್ ಸಿಯಲ್ಲಿ ಶೇ 70 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಬಿಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿ ಪಿಯುಸಿ ಶಿಕ್ಷಣ ಪಡೆಯಲು ಇಚ್ಚಿಸುವ ಬಂಟ ವಿದ್ಯಾರ್ಥಿಗಳ ಆಯ್ಕೆಗಾಗಿ ಏಪ್ರಿಲ್ 27ರಂದು ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಕೊಂಬೆಟ್ಟು ಇಲ್ಲಿ ಪರೀಕ್ಷೆ ನಡೆಯಲಿರುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ 9448912371 ಅಥವಾ 9945999255, 9844430362 ಈ ನಂಬರ್ ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More