Author: admin
ಹೌದು ಇದು ಅಲ್ಲ ಎಂದು ನೀವು ಯಾರೂ ಹೇಳುವ ಹಾಗಿಲ್ಲ. ಹಳ್ಳಿ ಡೆಲ್ಲಿ ಎಲ್ಲೆಲ್ಲಿ, ಭಿಕ್ಷುಕ, ಕ್ಷೌರಿಕ, ನೇತಾರ, ಸರದಾರ, ಸಂತ, ಸಾಧು, ಸನ್ಯಾಸಿ, ಮಾಲೀಕ, ಕಾವಲುಗಾರ, ಕೂಲಿ ಕಾರ್ಮಿಕ, ಬಡವ ಬಲ್ಲಿದ, ಹೆಣ್ಣು, ಗಂಡು ಈ ಯಾವ ಭೇದವೂ ಇರದೇ ಮನೆಯಲ್ಲಿ ಕಡಿಮೆ ಪಕ್ಷ ಒಂದು, ಇನ್ನು ಪ್ರತಿಯೊಬ್ಬನಲ್ಲೂ ಒಂದೊಂದು, ಇನ್ನೂ ಮುಂದುವರಿದ ಒಬ್ಬೊಬ್ಬನಲ್ಲಿ ಮೂರು ನಾಲ್ಕು ಮೊಬೈಲ್ ಇರುವವರೂ ಇದ್ದಾರೆ. ಒಟ್ಟಾರೆ ಹೇಳುವುದಾದರೆ ನಮ್ಮ ದೇಹದ ಒಂದು ಅವಿಭಾಜ್ಯ ಅಂಗದಂತಿದೆ. ಹಾಗಾಗಿಯೇ ಅಂದೆ ಇದೊಂದು ನಮ್ಮ ದೇಹದ ಅಂಗ ಈ ಮೊಬೈಲ್ ಎಂಬ ಕರ್ಣ ರಾಕ್ಷಸ ಇದು ಪೂಜೆಯ ಭಟ್ರ ಆರತಿ ತಟ್ಟೆಯ ಅಡಿಯಲ್ಲಿ, ಸೊಂಟದಲ್ಲಿ, ದರ್ಶನ ಪಾತ್ರಿಯ ಕಚ್ಚೆಯಲ್ಲಿ, ತೆಂಗಿನ ಮರ ಏರಿದವನ ಚಡ್ಡಿಯಲ್ಲಿ, ಮೀನು ವ್ಯಾಪಾರಿಯ ಬುಟ್ಟಿಯಲ್ಲಿ, ಮೇಸ್ತ್ರಿಯ ಸಿಮೆಂಟ್ ಚಟ್ಟಿಯಲ್ಲಿ, ಮಲ್ಲಿಗೆಯ ಅಟ್ಟಿಯಲ್ಲಿ ಎಲ್ಲೆಂದರಲ್ಲಿ ಗುಂಯ್ ಗುಡುತ್ತಿರುತ್ತದೆ. ಹಾಗಾಗಿ ಮುಂಚೆಯೆಲ್ಲಾ ಕೈಯೋ ಕಾಲೋ ಮುರಿದರೆ ಅಂಗ ಊನ ಎನ್ನುವರು. ಆದರೆ ಈಗ ಮೊಬೈಲ್ ಇಲ್ಲದ…
ಯಕ್ಷಧ್ರುವ ಫೌಂಡೇಶನ್ ( ರಿ.) ಮಂಗಳೂರು ವತಿಯಿಂದ ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ ಯಕ್ಷ ಶಿಕ್ಷಣ ತರಗತಿಯನ್ನು ಯಕ್ಷ ಧ್ರುವ ಫೌಂಡೇಶನ್ ಮುಡಿಪು ಘಟಕದ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಯಕ್ಷ ಧ್ರುವ ಫೌಂಡೇಶನ್ ಮಂಗಳೂರು ಇದರ ಸಂಘಟನ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಯಕ್ಷಗಾನ ಗುರುಗಳಾದ ಅಶ್ವಥ್ ಮಂಜನಾಡಿ, ಶಾಲಾ ಸಂಚಾಲಕರಾದ ಕಡೆಂಜ ಸೋಮಶೇಖರ್ ಚೌಟ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ರಾಧಾಕೃಷ್ಣ ರೈ, ಹಿರಿಯ ಶಿಕ್ಷಕಿ ಶ್ರೀಮತಿ ಮೋಹಿನಿಯವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಸಂಸ್ಥೆಯ ಹಳೇ ವಿದ್ಯಾರ್ಥಿಯಾದ ಪ್ರದೀಪ್ ಆಳ್ವ, ಸಾಮಾಜಿಕ, ಧಾರ್ಮಿಕ ಮುಂದಾಳು ಹಾಗು ಸಂಸ್ಥೆಯ ಹಳೆ ವಿದ್ಯಾರ್ಥಿಯಾದ ಸಂತೋಷ್ ಕುಮಾರ್ ರೈ ಬೋಳಿಯಾರು, ಯಕ್ಷಗಾನ ಗುರುಗಳಾದ ಅಶ್ವಥ್ ಮಂಜನಾಡಿ ಇವರುಗಳನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ದೈಹಿಕ ಶಿಕ್ಷಣ…
ಮುಂದಿನ ದಿನಗಳಲ್ಲಿ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಜೀರ್ಣೋದ್ದಾರದ ಕಾರ್ಯವನ್ನು ಭಕ್ತಾಭಿಮಾನಿಗಳ ಸಹಕಾರದೊಂದಿಗೆ ವಿನೂತನ ಶೈಲಿಯಲ್ಲಿ ಲೋಕಕ್ಕೆ ಮಾದರಿಯಾಗಿ ನಿರ್ವಹಿಸಿ ಸಾಧಿಸಲಿರುವುದಾಗಿ ಬೆಂಗಳೂರಿನ ಎಂಆರ್ ಜಿ ಗ್ರೂಪ್ ನ ಸಂಸ್ಥಾಪಕ, ಆಡಳಿತ ನಿರ್ದೇಶಕ ಡಾ| ಕೆ.ಪ್ರಕಾಶ್ ಶೆಟ್ಟಿ ಹೇಳಿದರು. ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಾಂಗಣದಲ್ಲಿ ಮಂಗಳೂರು ವಿವಿ ಪ್ರದಾನಿಸಿದ ಗೌರವ ಡಾಕ್ಟರೇಟ್ ಗಾಗಿ ದೇವಳದ ಜೀರ್ಣೋದ್ದಾರ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರಿಂದ ಆಯೋಜಿಸಲ್ಪಟ್ಟ ‘ಪ್ರಕಾಶಾಭಿನಂದನೆ’ ಸ್ವೀಕರಿಸಿ ಮಾತನಾಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೇಗುಲದ ಅರ್ಚಕ ಶ್ರೀ ಹರಿ ಭಟ್ ಶುಭಾಶಂಸನೆ ನೀಡಿದರು. ಡಾ. ರಾಘವೇಂದ್ರ ರಾವ್ ಅಭಿನಂದನಾ ಭಾಷಣ ಮಾಡಿದರು. ಆಶಾ ಪ್ರಕಾಶ್ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಪಿ. ರಾಘವೇಂದ್ರ ನಾವಡ, ಪಡುಬಿದ್ರಿ ಗ್ರಾ.ಪಂ. ಅಧಕ್ಷೆ ಶಶಿಕಲಾ ವೈ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಕಮಿಷನರ್ ಪ್ರಶಾಂತ್ ಕುಮಾರ್ ಶೆಟ್ಟಿ, ದೇವಸ್ಥಾನದ ಅರ್ಚಕರಾದ ಗುರುರಾಜ ಭಟ್ ವೈ. ಮತ್ತು…
ಏರ್ ಪೋರ್ಟ್ಸ್ ಎವಿಯೇಶನ್ ಎಂಪ್ಲಾಯೀಸ್ ಯೂನಿಯನ್ (ಎಎಇಯು) ಮುಂಬಯಿ ಇದರ ಸಂಘಟನಾ ಕಾರ್ಯದರ್ಶಿಯಾಗಿ ಕಳತ್ತೂರು ವಿಶ್ವನಾಥ್ ಜಗನ್ನಾಥ್ ಶೆಟ್ಟಿ ಅವರನ್ನು ನೇಮಿಸಲು ಕೋರ್ ಕೆಮಿಟಿಯು ನಿರ್ಧರಿಸಿದೆ. ಈ ನೇಮಕಾತಿಯು ಎಎಇಯು ಅವಧಿಯದ್ದಾಗಿರುತ್ತದೆ. ನಾವು ಈ ವಿಷಯವನ್ನು ತಿಳಿಸಲು ತುಂಬಾ ಸಂತೋಷಪಡುತ್ತಿದ್ದೇವೆ. ನೀವು ನಿಮ್ಮ ಕೌಶಲ್ಯ ಮತ್ತು ಅನುಭವದೊಂದಿಗೆ, ನೀವು ಅತ್ಯುತ್ತಮ ಸೇವೆಯನ್ನು ಸಲಿಸುತ್ತೀರಿ ಮತ್ತು ನಮ್ಮ ಎಎಇಯು ಸಂಸ್ಥೆಯಲ್ಲಿ ಸಂಘಟನಾ ಕಾರ್ಯದರ್ಶಿಯಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತೀರಿ ಎಂದು ನಾವು ನಂಬುತ್ತೇವೆ. ಸಂಘಟನಾ ಕಾರ್ಯದರ್ಶಿಯಾಗಿ ನಾವು ನಿಮ್ಮನ್ನು ಎಎಇಯು ಕುಟುಂಬದಲ್ಲಿ ಸ್ವಾಗತಿಸುತ್ತೇವೆ ಮತ್ತು ನಿಮ್ಮ ಮುಂದಿನ ಪ್ರಯತ್ನಕ್ಕಾಗಿ ನಿಮಗೆ ಶುಭ ಹಾರೈಸುತ್ತೇವೆ ಎಂದು ಸಂಸ್ಥೆಯ ಅಖಿಲ ಭಾರತ ಅಧ್ಯಕ್ಷರಾದ ನಿತಿನ್ ಜಾಧವ್ ಹಾಗೂ ಪ್ರಧಾನ ಕಾರ್ಯದರ್ಶಿ ಸರ್ವಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾಗಿರಿ (ಮೂಡುಬಿದಿರೆ): ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ “ಅಂಕುರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ಸದಾ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಒತ್ತು ನೀಡಿದೆ. ಸಾಂಸ್ಕøತಿಕ, ಕ್ರೀಡಾ, ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ದತ್ತು ಸ್ವೀಕಾರದ ಅಡಿಯಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತಿದೆ. ಸಂಸ್ಥೆಯು ಈ ಹಿಂದೆ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಸಾಗಬೇಕಾದ ಅನಿವಾರ್ಯತೆ ಇತ್ತು. ಆಗ ಕೆಲವು ಸಮಸ್ಯೆಗಳು ಎದುರಾಗುತ್ತಿದ್ದವು. ಆದರೆ ಇದೀಗ ಸ್ವಾಯತ್ತ ಸ್ಥಾನಮಾನದೊಂದಿಗೆ ಗುಣಮಟ್ಟದ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷೆ, ಫಲಿತಾಂಶವನ್ನು…
ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಜುಲೈ ಕೊನೆಯ ವಾರ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಉಳ್ಳಾಲ ತಾಲೂಕು ಮಟ್ಟದ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದಲ್ಲಿ ‘ಮಕ್ಕಳ ಅಬ್ಬಕ್ಕ’ ಕಾರ್ಯಕ್ರಮದ ಬಗ್ಗೆ ನಡೆಸುವ ಬಗ್ಗೆ ಚಿಂತನಾ ಸಭೆಯೊಂದು ತೊಕ್ಕೊಟ್ಟು ರತ್ನಂ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರು ”ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ, ಸಾಂಸ್ಕೃತಿಕ ಪ್ರಜ್ಞೆ ಮತ್ತು ಸ್ಥಳೀಯ ಇತಿಹಾಸದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ‘ಮಕ್ಕಳ ಅಬ್ಬಕ್ಕ’ ಎಂಬ ಹೊಸ ಪರಿಕಲ್ಪನೆಯ ಕಾರ್ಯಕ್ರಮವನ್ನು ನಡೆಸಲಾಗುವುದು. ಇದರಲ್ಲಿ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ‘ಪಠ್ಯ ಪುಸ್ತಕದಲ್ಲಿ ಅಬ್ಬಕ್ಕ’ ಎಂಬ ಪ್ರಬಂಧ ಸ್ಪರ್ಧೆ ಮತ್ತು ‘ನನ್ನ ಕಲ್ಪನೆಯಲ್ಲಿ ಅಬ್ಬಕ್ಕನ ಚಿತ್ರ’ ಎಂಬ ಚಿತ್ರಕಲಾ ಸ್ಪರ್ಧೆಯನ್ನು ಪೂರ್ವಭಾವಿಯಾಗಿ ಏರ್ಪಡಿಸಲಾಗಿದೆ” ಎಂದರು. ಜಿಲ್ಲಾ ಸಾಹಿತ್ಯ ಪರಿಷತ್ತಿನ ಉಳ್ಳಾಲ ಘಟಕದ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಭಾಸ್ಕರ ರೈ ತಿಳಿಸಿದರು. ಸಂಚಾಲಕ ರವೀಂದ್ರ ಶೆಟ್ಟಿ…
ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಮಂಗಳೂರು ಅರ್ಪಿಸುವ ವೀಣಾ ಟಿ ಶೆಟ್ಟಿಯವರ ಲೇಖನಗಳ ಸಂಗ್ರಹ “ಗೋಡೆಯ ಮೇಲಿನ ಚಿತ್ತಾರ” ಪುಸ್ತಕ ಬಿಡುಗಡೆ ಸಮಾರಂಭವು ಜುಲೈ 8 ರಂದು ಸೋಮವಾರ ಸಂಜೆ 5 ಗಂಟೆಗೆ ಕೆನರಾ ಪದವಿ ಕಾಲೇಜು ಶತಮಾನೋತ್ಸವ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ರಂಗ ಸಂಗಾತಿಯ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ವಹಿಸಲಿದ್ದಾರೆ. ಪುಸ್ತಕ ಬಿಡುಗಡೆಯನ್ನು ಖ್ಯಾತ ಬರಹಗಾರ್ತಿ, ಅನುವಾದಕರಾದ ಡಾ ಪಾರ್ವತಿ ಜಿ ಐತಾಳ್ ಮಾಡಲಿದ್ದಾರೆ. ಚಿಂತಕ, ವಾಗ್ಮಿ ಡಾ| ಅರುಣ್ ಉಳ್ಳಾಲ್ ಪುಸ್ತಕ ಪರಿಚಯ ಮಾಡಲಿದ್ದಾರೆ. ರಂಗಕರ್ಮಿ, ಸಾಹಿತಿ ಶಶಿರಾಜ್ ರಾವ್ ಕಾವೂರು ಕಾರ್ಯಕ್ರಮ ನಿರ್ವಹಿಸಲಿದ್ದಾರೆ.
ರಂಗ ಸವ್ಯಸಾಚಿ ಕಿಶೋರ್ ಡಿ ಶೆಟ್ಟಿ ನೇತೃತ್ವದ ಶ್ರೀ ಲಲಿತೆ ಕಲಾವಿದರು (ರಿ) ತಂಡದ ಮೂಲಕ ಪ್ರದರ್ಶನ ಕಾಣಲಿರುವ “ಶನಿ ಮಹಾತ್ಮೆ” ತುಳು ಪೌರಾಣಿಕ ನಾಟಕವು ತುಳು ರಂಗಭೂಮಿಯಲ್ಲಿ ಸಂಚಲನ ಉಂಟು ಮಾಡಲಿದೆ ಎಂದು ಕದಿರೆಯ ಕಲಾವಿದರು ಸಂಸ್ಥೆಯ ಅಧ್ಯಕ್ಷ ಗೋಕುಲ್ ಕದ್ರಿ ಶುಭ ಪ್ರತೀಕ್ಷೆಗೈದರು. ಕದ್ರಿಯಲ್ಲಿ ಜರಗಿದ ಕದ್ರಿ ನವನೀತ ಶೆಟ್ಟಿ ವಿರಚಿತ ನೂತನ ಕಲಾಕೃತಿ “ಶನಿ ಮಹಾತ್ಮೆ” ನಾಟಕದ ಮುಹೂರ್ತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ತುಳು ಪೌರಾಣಿಕ, ಚಾರಿತ್ರಿಕ ನಾಟಕ ಪ್ರದರ್ಶನಗಳಿಗೆ ನೂತನ ವೇದಿಕೆ ಹಾಗೂ ಪ್ರೇಕ್ಷಕರನ್ನು ಸೃಷ್ಟಿಸಿದ ನಿಜ ಅರ್ಥದ ಕಲಾಪೋಷಕ ಕಿಶೋರ್ ಶೆಟ್ಟಿ” ಎಂದರು. ಕದ್ರಿ ದೇವಸ್ಥಾನದ ಅರ್ಚಕ ಕೃಷ್ಣ ಅಡಿಗ ಅವರು ಕದ್ರಿಯ ಸಾಮೂಹಿಕ ಶನೀಶ್ವರ ಪೂಜಾ ಸಂಧರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಿ “ಶನಿ ದೇವರು ಬೇರೆ ಬೇರೆ ಯುಗಗಳಲ್ಲಿ ತೋರಿದ ಮಹಿಮೆಗಳನ್ನು ನಾಟಕ ರೂಪದಲ್ಲಿ ಶನಿ ದೇವರ ಭಕ್ತರಿಗೆ ಪ್ರಸ್ತುತ ಪಡಿಸುವುದು ಪುಣ್ಯ ಕಾರ್ಯ. ನಾಲ್ಕು ದಶಕಗಳಿಂದ “ಶನೀಶ್ವರ ಮಹಾತ್ಮೆ” ಯಕ್ಷಗಾನದಲ್ಲಿ ಅರ್ಥಧಾರಿಯಾಗಿ,…
ಕಳೆದ ಮೂರು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅತೀ ಹೆಚ್ಚು ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ವರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ, ಯಶಸ್ವಿಯಾಗಿ ಮುನ್ನಡೆಯುತ್ತಿರುವ ಹೆಸರಾಂತ ವಿದ್ಯಾಮಾತಾ ಅಕಾಡೆಮಿಯು ರಾಷ್ಟ್ರೀಯ ಅರ್ಹತಾ ಪರೀಕ್ಷೆಗೂ ಕೂಡಲೇ ತರಬೇತಿ ಪ್ರಾರಂಭಿಸಲಿದೆ. ಕಾರಣಾಂತರದಿಂದ ತಡೆ ಹಿಡಿಯಲಾಗಿರುವ 2024 ರ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಇದರ ಮರು ಪರೀಕ್ಷೆಯನ್ನು ಆಗಸ್ಟ್ ತಿಂಗಳ ಕೊನೆಗೆ ನಡೆಸಲು ಸರಕಾರ ತೀರ್ಮಾನಿಸಿದ್ದು, ಪರೀಕ್ಷೆ ಎದುರಿಸೋ ಅಭ್ಯರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿಯು ಒಂದು ತಿಂಗಳ ಅವಧಿಯ ಆನ್ ಲೈನ್ ತರಬೇತಿ ನೀಡಲು ನುರಿತ ತರಬೇತುದಾರರೊಂದಿಗೆ ಸಿದ್ಧವಾಗಿದೆ. NET ಮರು ಪರೀಕ್ಷೆಯನ್ನು ಎದುರಿಸಲಿರೋ ಅಭ್ಯರ್ಥಿಗಳೆಲ್ಲಾ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಅಕಾಡೆಮಿ ಪ್ರಕಟಣೆ ಹೇಳಿದೆ. K-SET/KAR-TET ಪರೀಕ್ಷೆಯಲ್ಲೂ ಅಕಾಡೆಮಿ ಸಾಧನೆ ಅಮೋಘ : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET), ಶಿಕ್ಷಕರ ನೇಮಕಾತಿ, ರಾಷ್ಟ್ರೀಯ ಅರ್ಹತಾ ಪರೀಕ್ಷೆ ಹಾಗೂ ಇತರೆ ಶಿಕ್ಷಕರ ನೇಮಕಾತಿ, ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳಿಗೆ…
ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿಗೆ ಯುಜಿಸಿಯಿಂದ ಸ್ವಾಯತ್ತ ಸ್ಥಾನಮಾನದ ಮಾನ್ಯತೆ (ಅಟೋನೋಮಸ್)
ಮೂಡುಬಿದಿರೆ: ಕಲೆ, ಸಂಸ್ಕøತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ ‘ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು’ (ಎಐಇಟಿ) ಸ್ವಾಯತ್ತ ಸ್ಥಾನಮಾನ ಪಡೆದಿದ್ದು, 2034-35ನೇ ಸಾಲಿನ ವರೆಗೆ ಅನ್ವಯಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವೈಶಿಷ್ಟ್ಯಗಳು: ‘ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ನ್ಯಾಕ್ನ ಮೊದಲ ಸೈಕಲ್ನಲ್ಲೇ (ಓಂಂಅ) ಂ+ ಶ್ರೇಣಿಯನ್ನು ಸಿಜಿಪಿಎ 3.32 (4 ಸ್ಕೇಲ್) ಗ್ರೇಡ್ನೊಂದಿಗೆ 16 ಜನವರಿ 2028ರ ವರೆಗೆ ಅನ್ವಯವಾಗುವಂತೆ ಪಡೆದಿದೆ. ನಿರ್ಫ್ (ಓIಖಈ) ಇನ್ನೋವೇಷನ್ ರ್ಯಾಂಕಿಂಗ್ ಅನ್ನು 150ರಿಂದ 300 ಬ್ಯಾಂಡ್ನಲ್ಲಿ ಪಡೆದಿದೆ. ಜೊತೆಯಲ್ಲಿ ಕಾಲೇಜಿನ ಹಲವು ಎಂಜಿನಿಯರಿಂಗ್ಗೆ ವಿಭಾಗಗಳು ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ (ಓಃಂ) ಮಾನ್ಯತೆಯನ್ನು ಪಡೆದಿವೆ.ಪ್ರಮುಖ ಸಂಶೋಧನಾ ಸಂಸ್ಥೆಯಾದ ಇಸ್ರೊ ಹಾಗೂ ಇಸ್ರೋದ ಸಹ ಸಂಸ್ಥೆಗಳಾದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರ, ಹೈದರಾಬಾದ್,…