Author: admin
ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಕಾರಣೀಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎ.9 ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೃಢಕಲಶಾಭಿಷೇಕ ನಡೆಯಲಿದೆ. ದೇವಸ್ಥಾನದಲ್ಲಿ ಬೆಳಿಗ್ಗೆ 8.30ರಿಂದ ದೇವತಾ ಪ್ರಾರ್ಥನೆ ಮಹಾಗಣಪತಿ ಹೋಮ, ಕಲಶ ಪೂಜೆ, ಮಧ್ಯಾಹ್ನ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ದೃಢಕಲಶಾಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ದೇವಸ್ಥಾನದಲ್ಲಿ ಪ್ರತೀ ತಿಂಗಳ ಸಂಕಷ್ಠಿಯಂದು ಮಹಾಗಣಪತಿ ಹೋಮ, ಸಂಕ್ರಮಣದಂದು ರಾತ್ರಿ ವಿಶೇಷ ರಂಗಪೂಜೆ, ಪ್ರತೀ ತಿಂಗಳ ಷಷ್ಠಿಯಂದು ಮಧ್ಯಾಹ್ನ ಷಷ್ಠಿ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಅಲ್ಲದೇ ಭಕ್ತಾಧಿಗಳು ಇಚ್ಚಿಸಿದ ದಿನಗಳಲ್ಲಿ ಶ್ರೀ ದೇವರಿಗೆ ಕಾರ್ತಿಕ ಪೂಜೆ, ಶ್ರೀ ಸತ್ಯನಾರಾಯಣ ಪೂಜೆ, ಆಶ್ಲೇಷ ಬಲಿ, ಶ್ರೀ ಶನೀಶ್ವರ ಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದೆ. ಭಕ್ತಾಧಿಗಳು ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ.
ಕೆಲವು ವರ್ಷಗಳ ಹಿಂದೆ ಭಜನಾ ಮಂದಿರಗಳಾಗಲಿ, ಭಜನಾ ಸಂಘಗಳಾಗಲಿ ಇರಲಿಲ್ಲ. ದಾಸರೇಣ್ಯರು ಊರೂರು ಪರಿವ್ರಾಜಕರಾಗಿ (ನಿತ್ಯ ಸಂಚಾರಿ) ಗುಡಿಯ ದೇವರನ್ನು ತಮ್ಮ ಹೃದಯ ಮಂದಿರದಲ್ಲಿ ನೆಲೆಗೊಳಿಸಿ ಮಧುಕರ ವೃತ್ತಿ (ಜೇನುನೋಣಗಳಂತೆ) ಭಕ್ತಿ ಭಾವವನ್ನು ಪಸರಿಸಿದ್ದರು. ಇವರ ಭಕ್ತಿ ಶ್ರದ್ಧೆಗೆ ಗುಡಿಯ ಮುಂಭಾಗದಲ್ಲಿ ನಡೆಯುತ್ತಿದ್ದ ಯಾಗ, ಯಜ್ಞ, ಹೋಮ ಹವನಗಳೊಂದಿಗೆ ಹಾಲು ಜೇನಿನ ಅಭಿಷೇಕ ಸುರಿಯುತ್ತಿದ್ದರೂ ಹಿಂಭಾಗದಲ್ಲಿ ಮೈಮರೆತು ಹಾಡುತ್ತಿದ್ದ ಭಜನಾ ನೃತ್ಯಕ್ಕೆ ತುಳುನಾಡಿನಲ್ಲಿ ದೇವರ ವಿಗ್ರಹವೇ ತಿರುಗಿ ನಿಲ್ಲಲಿಲ್ಲವೇ? ಅದುವೇ ಭಜನೆಯ ಮಹತ್ವ. ಭಜನೆ ಹಾಗೂ ಭಜಕರಲ್ಲಿ ಮೇಲು ಕೀಲು, ಬಡವ ಬಲ್ಲಿದ, ಬ್ರಾಹ್ಮಣ ದಲಿತ, ಪಂಡಿತ ಪಾಮರ ಎಂಬ ತಾರತಮ್ಯವಿಲ್ಲ. ಒಟ್ಟಿಗೆ ಕುಳಿತು ಸರ್ವ ನಾಮದಲ್ಲಿ ಏಕ ದೇವರನ್ನು ಕಾಣುವುದು ಭಜನೆಯಲ್ಲಿ ಮಾತ್ರ. ದೇವಸ್ಥಾನದಲ್ಲಿ ದೇವರ ಸ್ಥಾನ ಗರ್ಭಗುಡಿಯಾದರೆ, ಭಜನಾ ಮಂದಿರದಲ್ಲಿ ದೇವರ ಸ್ಥಾನ ಭಜಕನ ಹೃದಯದಲ್ಲಿ ಎಂಬ ಭಾವ. ಸಾಕ್ಷಿಗಾಗಿ ಒಂದು ದೀಪ. ತುಳುನಾಡಿನಲ್ಲಿ ಭಜನಾ ಮಂದಿರದ ಉಗಮ 1970 ರ ನಂತರ ಆಗಿದೆ. ಕೃಷಿ ಕಾರ್ಮಿಕರು ಆ…
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕಾಮಗಾರಿಗಳು ಬಹಳಷ್ಟು ಭರದಿಂದ ಸಾಗುತ್ತಿದ್ದು 2024ರ ಎಪ್ರಿಲ್, ಮೇ ತಿಂಗಳಿನಲ್ಲಿಯೇ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಎಂದು ನಿಶ್ಚಯಿಸಿದ್ದು, ಆ ಪ್ರಯುಕ್ತ ಎಪ್ರಿಲ್ 9 ರ ಮಂಗಳವಾರ ಬೆಳಿಗ್ಗೆ ಗಂಟೆ 8.30 ಕ್ಕೆ ಸರಿಯಾಗಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ ಪ್ರಾರ್ಥಿಸುವ ಮೂಲಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡುವುದೆಂದು ತೀರ್ಮಾನಿಸಲಾಗಿದೆ ಎಂದು ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿಯವರು ಹೇಳಿದ್ದಾರೆ. ಅವರು ದೇವಳದ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಪುವಿನ ಅಮ್ಮನ ದೇಗುಲದ ಕಾಮಗಾರಿಗಳು ಬಹಳಷ್ಟು ಭರದಿಂದ ಸಾಗುತ್ತಿದ್ದು 2024ರ ಎಪ್ರಿಲ್, ಮೇ ತಿಂಗಳಿನಲ್ಲಿಯೇ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಮಾಡಬಹುದೆಂದು ನಿಶ್ಚಯಿಸಿದ್ದರೂ, ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಮಾಡಲು ಹಾಗೂ ಕಾರ್ಯಕ್ರಮದಲ್ಲಿ ಗಣ್ಯರೆಲ್ಲರೂ ಭಾಗವಹಿಸಲು ತೊಂದರೆಯಾಗುತ್ತದೆ ಎಂದು ತಿಳಿದು ಬಂದಿದೆ. ಅಲ್ಲದೇ ಜೂನ್ 12 ರಿಂದ ದಕ್ಷಿಣಾಯಣ ಪ್ರಾರಂಭವಾಗುವುದರಿಂದ ಪ್ರತಿಷ್ಠೆಗೆ ಸೂಕ್ತವಾದ ದಿನಗಳು ಲಭ್ಯವಾಗಿರುವುದಿಲ್ಲ. ಆದುದರಿಂದ ಅಭಿವೃದ್ಧಿ ಸಮಿತಿಯು ಕ್ಷೇತ್ರದ ಪ್ರಧಾನ ತಂತ್ರಿಗಳಾದ…
ಒರ ಜಡ್ಡ್ ದ ಕಂಡೊಲೆನ ಬರಿತ ತೋಡುಡು ಕುಂಟು ಅರ್ದೊಂದು ಇತ್ತೆರ್ ಎನ್ನಪ್ಪೆ. ಯಾನ್ ದಂಡೆಡ್ ಕುದೊಂದು ಪೊಲ್ಲೆ ಪಾತೆರೊಂದು ಇತ್ತೆ. ಅಪಗ ಮರಟೊಂಜಿ ಮಂಗೆ (ದಿ) ಬಂಜಿಗ್ ಅಮತ್ ಪತೊಂದಿ ಕಿನ್ನಿದೊಟ್ಟುಗು ಎಂಕಲೆನ್ ತೂದು ಕುಲ್ಯಾಟ್ಟದ್ ‘ಟೆರ್ರೆಂಕ್’ ಪಂಡ್. ಅಪಗ ಎನ್ನಪ್ಪೆಗ್ ಒಂಜಿ ಕತೆ ನಿನೆಪಾಂಡ್. ಸೀತೆ, ಅವ್ವೆ ನಮ್ಮ ರಾಮನ ಕೈ ಪತಿನ ಬುಡೆದಿ. ಏರಾ ಮಡ್ಡೆಲೆ ದಾದನ ಪಂಡೆಗೆ, ಇಂಬೆ ತನ್ನ ಕಾರಡಿಯೇ ತನ್ಕ್ ತೋಜಂದಿನ, ಪೊರ್ತಿಂಗೊಲ್ದ ಬುಡೆದಿನಿ ಮಲ್ಲ ಕಾಡ್ ಡ್ ಬುಡಿಯೆ ಮೆಲ್ಲ, ಮಲ್ಲ ಮುರ್ಗೊಲೆನ ಬಾಯಿಗ್ ಬೂರಡ್ ಪಂದಾ ದಾನ್ಯ. ಆಲೆಗೊಂತೆ ಐಸ ಇತ್ಂಡ್, ವಾಲ್ ಮುಕಿ ರುಸಿಕುಲು ತೂದು, ಆರೆನ ಗುಡ್ಚಿಲ್ ಗ್ ಲೆಸೊಂದು ಪೋಯೆರ್. ದಿನ ದಿಂಜಿದ್, ಒರ್ಂಬ ತಿಂಗೊಲು ಪತ್ತ್ ದಿನ ಕರಿನಗ ಆನ್ ಬಾಲೆ ಪೆತ್ತೊಲು. ಬಾಲೆಗ್ ಲವೆ ಪಂದ್ ಪುದರ್ ದೀಯೆರ್. ಪೆತ್ತಿ ಪದಿನಾಜನೆ ಅಮೆ ಕಲೆವರೆ, ಸೀತೆ ಬಾಲೆದ ಮಡೆಕುಂಟು, ಪಜೆ ಪತೊಂದು ತೋಡುಗು…
ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಸಹಿತ ಮಹಾ ಗಣಪತಿ ಗ್ರಾಮದ ಆರಾಧ್ಯ ದೇವರಾಗಿದ್ದರೂ ಗ್ರಾಮದ ಯಾವುದೇ ಮನೆಗಳಲ್ಲಿ ಗಣಪತಿ ಫೋಟೋ ಇಡುವಂತಿಲ್ಲ. ಗಣಹೋಮ ಮಾಡುವಂತಿಲ್ಲ. ಚೌತಿ ಹಬ್ಬ ಆಚರಿಸುವಂತಿಲ್ಲ. ಪೆರ್ಣಂಕಿಲ ಗ್ರಾಮದ ಗಡಿ ವ್ಯಾಪ್ತಿಯೊಳಗಿರುವ ಈ ವಿಶಿಷ್ಟ ಸಂಪ್ರದಾಯ ಇಂದಿಗೂ ಪಾಲನೆಯಾಗುತ್ತಿದೆ. ಬಡವನಿರಲಿ, ಶ್ರೀಮಂತನಿರಲಿ ಮನೆಗಳಲ್ಲಿ ಆಡಂಭರಕ್ಕೆ ಅವಕಾಶವಿಲ್ಲದೆ, ಕ್ಷೇತ್ರ ದೇವತೆಯನ್ನು ಮರೆಯದೆ ಎಲ್ಲರೂ ಭಕ್ತರ ನೆಲೆಯಲ್ಲಿ ದೇವಳಕ್ಕೆ ಬರಬೇಕು. ತಮ್ಮ ಕಷ್ಟ ನೋವು ಹೇಳಿಕೊಳ್ಳಬೇಕೆನ್ನುವುದೇ ಇದರ ಹಿಂದಿರುವ ತತ್ವವಾಗಿದೆ. ಪೆರ್ಣಂಕಿಲ ಗ್ರಾಮದ ಮನೆಗಳಲ್ಲಿ ಎಮ್ಮೆಯನ್ನೂ ಸಾಕುವಂತಿಲ್ಲ. ಭಕ್ತನೊಬ್ಬ ದನದ ಹಾಲೆಂದು ಹೇಳಿ ಎಮ್ಮೆ ಹಾಲು ತಂದು ಕೊಟ್ಟಿದ್ದನ್ನು ದೇವರಿಗೆ ಅಭಿಷೇಕ ಮಾಡಿದ್ದು ಮರುದಿನ ಎಮ್ಮೆ ಸತ್ತಿತು. ಆ ಬಳಿಕ ಪೆರ್ಣಂಕಿಲ ಗ್ರಾಮದಲ್ಲಿ ಎಮ್ಮೆ ಸಾಕುವಂತಿಲ್ಲ. ಕೊಡಿಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಪೆರ್ಣಂಕಿಲ ಗ್ರಾಮದಲ್ಲಿ 400 ಮನೆ,1,841 ಜನರಿದ್ದಾರೆ. ದೇವಳದಲ್ಲಿ ಜಾತ್ರೆಗೆ ಕೊಡಿ ಏರಿದ ಮೇಲೆ ಪೆರ್ಣಂಕಿಲ ಗ್ರಾಮದಿಂದ ಯಾವುದೇ ದಿಬ್ಬಣ ಹೊರಡಬಾರದು (ಬೇರೆ ಊರಿಂದ ದಿಬ್ಬಣದಲ್ಲಿ ಹೊರಟು ಬರುತ್ತಾರೆ). ಮನೆಗಳಲ್ಲಿ…
ಜೀವನದ ಕೊನೆಯುಸಿರು ಇರುವವರೆಗೂ ಕ್ಯಾನ್ಸರ್ ರೋಗಿಗಳನ್ನು ಗೌರವದಿಂದ ಕಾಣುವುದೇ ಉಪಶಾಮಕ ಆರೈಕೆ ವಾರ್ಡಿನ ಉದ್ದೇಶವಾಗಿದೆ. ತಪಸ್ಯ ಫೌಂಡೇಷನ್ ಹಮ್ಮಿಕೊಂಡಿರುವ ಮಾನವೀಯತೆಯ ಕಾರ್ಯಕ್ಕೆ ಯೆನೆಪೋಯ ಸಂಸ್ಥೆ ಸದಾ ಬೆಂಬಲಿಸುತ್ತದೆ ಎಂದು ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಎಂ. ವಿಜಯ್ ಕುಮಾರ್ ಅಭಿಪ್ರಾಯಪಟ್ಟರು. ಅವರು ತಪಸ್ಯ ಫೌಂಡೇಷನ್, ಲಯನ್ಸ್ ಇಂಟರ್ನ್ಯಾಷನಲ್ ೩೧೭ಡಿ ಆಶ್ರಯದಲ್ಲಿ ನರಿಂಗಾನದ ಯೆನೆಪೋಯ ಆಯುರ್ವೇದ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ತಾತ್ಕಾಲಿಕ ಉಪಶಾಮಕ ಆರೈಕೆ ವಾರ್ಡನ್ನು ಉದ್ಘಾಟಿಸಿ ಮಾತನಾಡಿದರು. ಕ್ಯಾನ್ಸರ್ ರೋಗದ ನೈಸರ್ಗಿಕ ಇತಿಹಾಸವನ್ನು ಬದಲಾಯಿಸದೇ ರೋಗ ಲಕ್ಷಣಗಳಿಗೆ ಕಂಡುಕೊಳ್ಳುವ ಪರಿಹಾರ, ತೊಡಕುಗಳ ನಿವಾರಣೆ ವಾರ್ಡಿನ ಮೂಲಕ ಸಾಧ್ಯ. ಕ್ಯಾನ್ಸರ್ ರೋಗಿಗಳು ಮನೆ ಮಂದಿಯಿಂದ ತಿರಸ್ಕರಿಸಲ್ಪಡುವಾಗ, ಸಲಹಲು ಅಸಾಧ್ಯವಾದಂತಹ ರೀತಿಯಲ್ಲಿ ಇರುತ್ತಾರೆ. ಅಂತಹವರನ್ನು ಗೌರವದಿಂದ ಕಾಣಲು ತಪಸ್ಯ ಫೌಂಡೇಷನ್ ಮುಡಿಪು ಭಾಗದಲ್ಲಿ ನಿರ್ಮಿಸುವ ಕೇಂದ್ರಕ್ಕೆ ಸಹಕಾರ ಅಗತ್ಯ . ಯೆನೆಪೋಯ ಸಂಸ್ಥೆ ತಪಸ್ಯ ಫೌಂಡೇಷನ್ ಸದಾ ಜತೆಗಿದೆ ಎಂದರು. ೩೧೭ಡಿ ಪಾಸ್ಟ್ ಮಲ್ಟಿಪಲ್ ಕೌನ್ಸಿಲ್ ಚೇರ್ಪರ್ಸನ್ ವಸಂತ್ ಕುಮಾರ್ ಶೆಟ್ಟಿ ಮಾತನಾಡಿ,…
ಪಾಳುಬಿದ್ದ ಮೂಲ ತರವಾಡು ಮನೆಯನ್ನು ಜೀರ್ಣೋದ್ದಾರಗೊಳಿಸುವ ಮೊದಲು ಒಂದು ಜ್ಯೋತಿಷ್ಯ ಪ್ರಶ್ನೆ ಅಗತ್ಯವಿದೆ. ಕಾರಣ ಕುಟುಂಬದ ಧರ್ಮದೈವಗಳು, ನಾಗ ಸಾನಿಧ್ಯ, ಪ್ರೇತಾತ್ಮಗಳ ಸದ್ಗತಿಯ ಬಗ್ಗೆ ತಿಳಿಯಬೇಕಾಗಿದೆ. ಅದಕ್ಕಾಗಿ ಯೋಗ್ಯ ಜ್ಯೋತಿಷ್ಯರನ್ನು ಹುಡುಕಿ ಕುಟುಂಬದ ಹಿನ್ನಲೆಯನ್ನು ತಿಳಿದ ಹಿರಿಯರನ್ನು ಸೇರಿಸಿ, ಚರ್ಚಿಸಿ ದೈವಜ್ಞರು ನೀಡಿದ ಪರಿಹಾರದಂತೆ ಹೊಸ ತರವಾಡು ಮನೆ, ದೈವಸ್ಥಾನ ಭಂಡಾರ ಮತ್ತು ನಾಗ ಪ್ರತಿಷ್ಠೆಗಳನ್ನು ಕರ್ಮಜ್ಞಾನಿಗಳಾದ ಆಚಾರ್ಯ (ತಂತ್ರಿ)ರಿಂದ ಶುದ್ಧ ಕ್ರಿಯಾದಿ ಕರ್ಮಗಳನ್ನು ಮಾಡಿಸುವುದು, ದೈವಗಳಿಗೆ ನೇಮ ಕೊಟ್ಟು ವರ್ಷಂಪ್ರತಿ ಸೂಚಿಸಿದ ಪರ್ವಗಳನ್ನು ತಂಬಿಲಗಳನ್ನು ಮಾಡಿಸಿಕೊಂಡು ಬರುವುದು. ಇದು ನಮ್ಮ ಹಿರಿಯರು ಹಿಂದಿನಿಂದಲೂ ಆಚರಿಸಿಕೊಂಡು ಬಂದ ಪದ್ಧತಿ ಆದರೆ ಈಗ ಕೆಲವು ಕುಟುಂಬಸ್ಥರು ಮೇಲೆ ಸೂಚಿಸಿದ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಪೂರ್ತಿಗೊಳಿಸಿ, ಬ್ರಹ್ಮಕಲಶಾದಿಗಳನ್ನು ಮಾಡಿಸಿ, ಮಾಡಿದ್ದು ಸರಿಯಾಗಿದೆಯೇ ಎಂದು ತಿಳಿಯಲು ಮತ್ತೊಬ್ಬ ಜ್ಯೋತಿಷ್ಯರ ಮೊರೆ ಹೋಗಿ ಪ್ರಶ್ನೆ ಇರಿಸುವುದು ಸಾಮಾನ್ಯವಾಗಿದೆ. ಅಲ್ಲಿ ನೀವು ಮಾಡಿದ ಯಾವ ಕಾರ್ಯಗಳೂ ಸರಿಯಾಗಿಲ್ಲ. ದೈವಸ್ಥಾನ, ನಾಗಪ್ರತಿಷ್ಠೆಗಳಲ್ಲೂ ದೋಷವಿದೆ. ಪ್ರೇತಾತ್ಮಗಳಿಗೆ ಮೋಕ್ಷವಾಗಿಲ್ಲ ಕರ್ಮದೋಷವಿದೆ. ಕೂಡಲೇ ಅಷ್ಠಮಂಗಲ…
ಮುಂಬಯಿಯಲ್ಲಿ ನೆಲೆಸಿರುವ ತುಳು ಕನ್ನಡಿಗರ ಮಹಾ ಸಮಾವೇಶವು ಎಪ್ರಿಲ್ 7 ರಂದು ರಂದು ಸಂಜೆ 5 ರಿಂದ ಥಾಣೆ ಪಶ್ಚಿಮ ವರ್ತಕ್ ನಗರದ ಪೋಕ್ರಾಣ್ ರೋಡ್, ನಂಬರ್ -1ರ ಕ್ಯಾಡ್ ಬರಿ ಕಂಪೆನಿ ಎದುರಿನ ರೇಮಂಡ್ ಗಾರ್ಡನ್ ನಲ್ಲಿ ನಡೆಯಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪನ್ವೇಲ್ ಮಹಾನಗರ ಪಾಲಿಕೆಯ ಮಾಜಿ ಸಭಾಪತಿ, ಬಿಜೆಪಿ ನಾಯಕ, ಸಮಾಜ ಸೇವಕ, ಸಂಘಟಕ ಸಂತೋಷ್ ಜಿ. ಶೆಟ್ಟಿ ನೇತೃತ್ವದಲ್ಲಿ ಮುಂಬಯಿಯಲ್ಲಿ ನೆಲೆಸಿರುವ ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಹಾಗೂ ಕಾಸರಗೋಡು ಲೋಕಸಭಾ ಕ್ಷೇತ್ರದ ಬಂಧುಗಳನ್ನು ಒಂದುಗೂಡಿಸಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ. ಮೂರು ಲೋಕಸಭಾ ಕ್ಷೇತ್ರಗಳ ವಿವಿಧ ಸಮಸ್ಯೆಗಳ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಾಗುವುದು. ಸಮಾವೇಶದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್…
ವೀರ ಕೇಸರಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಸೇವಾ ಸಂಸ್ಥೆ. ಕಳೆದ 45 ವರ್ಷಗಳಿಂದ ತಡಂಬೈಲ್ ಪರಿಸರದಲ್ಲಿ ವೀರಕೇಸರಿ ಸೇವಾ ಸಂಸ್ಥೆಯು ಕ್ರೀಡೆ, ಸಾಂಸ್ಕೃತಿಕ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಪರ ಕೆಲಸ ಮಾಡಿ ಶ್ಲಾಘನೆಗೆ ಪಾತ್ರವಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಕಟಪೂರ್ವ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ತಿಳಿಸಿದರು. ಮಾರಿಪೂಜಾ ಮಹೋತ್ಸವದ ಅಂಗವಾಗಿ ಮಾರಿಗುಡಿ ಶ್ರೀ ಮಹಮ್ಮಾಯಿ ದೇವಸ್ಥಾನದ ವಠಾರದಲ್ಲಿ ನಡೆದ ವೀರಕೇಸರಿಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಮಾರಂಭದಲ್ಲಿ ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಶಶಿಧರ ಪಡುಬಿದ್ರೆ ಮಾತನಾಡಿ, ವೀರ ಕೇಸರಿ ಸಂಸ್ಥೆಯಿಂದ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದ ಕಾರ್ಯಕ್ರಮ ನಡೆದಿರುವುದರಿಂದ ಪರಿಸರದ ನಾಗರಿಕರಿಗೆ ಅನುಕೂಲವಾಗಿದೆ. ಇಂತಹ ಸಮಾಜಮುಖಿ ಕಾರ್ಯಕ್ರಮ ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಉದ್ಯಮಿ ರಮೇಶ್ ರಾವ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಸಮಾಜ ಸೇವಕಿ ಶಾಂತಾ, ಮಹಾಬಲ ಪೂಜಾರಿ ಕಡಂಬೋಡಿ, ಲಕ್ಷ್ಮೀನಾರಾಯಣ ಭಟ್,…
ನಮ್ಮ ನಾಡಿನಲ್ಲಿ ಅದೆಷ್ಟೋ ವೈದ್ಯರು ವಿವಿಧ ಬಗೆಯ ರೋಗಿಗಳ ಆರೋಗ್ಯ ಕಾಳಜಿಯಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕೇವಲ ಹಣ ಸಂಪಾದನೆ ಮಾತ್ರ ತಮ್ಮ ವೃತ್ತಿಯ ಲಕ್ಷ್ಯವಲ್ಲವೆಂದು ಸಾಬೀತು ಪಡಿಸಿ ಜನರ ಪ್ರೀತಿ ವಿಶ್ವಾಸ ಗೆದ್ದಿದ್ದಾರೆ. ಅಂಥವರ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕರ್ ಶೆಟ್ಟಿ ಅವರನ್ನು ಹೆಸರಿಸಬಹುದು. ಡಾ ಸುಧಾಕರ್ ಶೆಟ್ಟಿಯವರು ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸಮಸ್ಯೆಗಳಿಗೆ ಸದಾ ಪರಿಹಾರ ಕಾರ್ಯಗಳಲ್ಲಿ ತಕ್ಷಣ ಸ್ಪಂದಿಸುತ್ತಾರೆ. ಬಡವರು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರ ಸೇವೆಯಲ್ಲಿ ಸುಖ ಕಾಣುವ ಇವರು ಆಧುನಿಕ ರೀತಿಯ ವೈದ್ಯೋಪಚಾರಗಳಿಂದ ವಂಚಿತರಾಗಿರುವ ಪ್ರದೇಶದ ಜನರ ಬಗ್ಗೆ ಅತೀವ ಕಾಳಜಿ ವಹಿಸುತ್ತಾ ಜನರ ಗಮನ ಸೆಳೆಯುತ್ತಿದ್ದಾರೆ. ಇದೀಗ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಆರೋಗ್ಯ ಕುರಿತಂತೆ ಅವರನ್ನು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಿ ಸೂಕ್ತ ಚಿಕಿತ್ಸೆ, ವ್ಯವಸ್ಥೆ ಮಾಡುವಂಥಹ ಒಂದು ನವೀನ ಅಭಿಯಾನವನ್ನು ಡಾ. ಸುಧಾಕರ್ ಶೆಟ್ಟರು ಹಮ್ಮಿಕೊಂಡಿದ್ದು ವೇಣೂರಿನ ಬಜ್ರೆ…