Author: admin

ಮಿಜಾರು: ಇದು ಗೂಗಲ್ ಮಾಹಿತಿ ಸುನಾಮಿಯ ಕಾಲ, ಆದರೆ, ಶಿಕ್ಷಕರ ಸ್ಥಾನ ತುಂಬಲು ಗೂಗಲ್ ಗೆ ಸಾಧ್ಯವಿಲ್ಲ. ವಿದ್ಯಾರ್ಥಿಗಳು ನಮ್ಮ ತರಗತಿಯಲ್ಲಿ ಏಕೆ ಕುಳಿತುಕೊಳ್ಳಬೇಕು ಎಂದು ಶಿಕ್ಷಕರು ತಮ್ಮಲ್ಲಿ ಪ್ರಶ್ನಿಸಿಕೊಳ್ಳಬೇಕು. ಆಗ ತರಗತಿಯ ಎಲ್ಲ ವಿದ್ಯಾರ್ಥಿಗಳು ಬುದ್ಧಿವಂತರಾಗುತ್ತಾರೆ ಎಂದು ರಾಜೀವ್ ಗಾಂಧಿ ಅರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ. ರಾಮಚಂದ್ರ ಸೆಟ್ಟಿ ಹೇಳಿದರು. ಆಳ್ವಾಸ್ ಪ್ರಕೃತಿಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಯೋಗ ಸಭಾಂಗಣದಲ್ಲಿ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದಲ್ಲಿ ಗುರುವಾರ ಅವರು ಮಾತನಾಡಿದರು. ಈ ಪೀಳಿಗೆಯಲ್ಲಿ ಶಿಕ್ಷಕರು ಸಹ ತಮ್ಮನ್ನು ತಾವು ನವೀಕರಿಸಿಕೊಳ್ಳಬೇಕಾದ ಅವಶ್ಯಕತೆಯಿದೆ. ಇಲ್ಲದಿದ್ದರೆ ಅವರು ಪ್ರಸ್ತುತ ತಂತ್ರಜ್ಞಾನದಿಂದ ಮತ್ತು ಪ್ರಸ್ತುತ ಕಲಿಕಾ ಮಾಧ್ಯಮದಿಂದ ಹಿಂದುಳಿಯುತ್ತಾರೆ. ಆದ್ದರಿಂದ ತರಬೇತಿಯ ಅಗತ್ಯವಿದೆ ಎಂದರು.ವಿದ್ಯಾರ್ಥಿಗೆ ಹೊಸ ವಿಷಯಗಳ ಕುರಿತು ಕಲಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಒಬ್ಬ ಶಿಕ್ಷಕ ತನ್ನನ್ನು ತಾನು ನವೀಕರಿಸಿಕೊಳ್ಳಲು ಪ್ರಶ್ನಾರ್ಥಕ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ವಿಷಯದ…

Read More

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ವತಿಯಿಂದ ನಡೆಸಲ್ಪಡುವ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಾರ್ಷಿಕೋತ್ಸವ ಡಿಸೆಂಬರ್ 14 ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಕಾರ್ಯಕ್ರಮ ಉದ್ಘಾಟಿಸಿ ಸಂಸ್ಥೆಯ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ದಕ್ಷಿಣ ಕನ್ನಡದಲ್ಲಿ ಸಾಂಸ್ಕೃತಿಕ ಸಂಪತ್ತು ಹೇರಳವಾಗಿದೆ, ಇಲ್ಲಿ ಆಧುನಿಕತೆ ಸೊಗಡಿನೊಂದಿಗೆ ಹಿಂದಿನ ಕಾಲದಿಂದ ನಡೆದು ಬಂದಿರುವ ಯಕ್ಷಗಾನ, ಕಂಬಳವನ್ನು ಜನ ಬಹಳ ಪ್ರೀತಿಯಿಂದ ಸ್ವೀಕಾರ ಮಾಡುತ್ತಾರೆ. ಒಳ್ಳೆಯ ವ್ಯಕ್ತಿಯಾಗಿ ಸಮಾಜದಲ್ಲಿ ಬದುಕಬೇಕು, ಯಾವುದೇ ಒತ್ತಡವನ್ನು ನಾವು ತಲೆಗೆ ಹಾಕಿಕೊಳ್ಳಬಾರದು, ಖುಷಿಯಾಗಿ ಬದುಕಬೇಕು ಎಂದು ಹೇಳಿದ ಅವರು, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಾಧನೆಯ ಬಗ್ಗೆ ಹೆಮ್ಮೆಯಾಯಿತು. ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿಯವರ ನಾಯಕತ್ವದಲ್ಲಿ ಶಾಲೆಯು ಅತ್ಯುತ್ತಮವಾದ ಪ್ರಗತಿಯನ್ನು ಸಾಧಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀ ರಾಮಕೃಷ್ಣ ಪ್ರೌಢಶಾಲೆಯು ದಾಖಲೆಯನ್ನು ನಿರ್ಮಿಸಿದೆ.…

Read More

ಕುಂಬ್ಳೆ ಸುಂದರ ರಾವ್ ಅವರು ಯಕ್ಷಗಾನ, ಧಾರ್ಮಿಕ, ಸಾಮಾಜಿಕ, ರಾಜಕೀಯ ಸೇರಿದಂತೆ ಸರ್ವ ಕ್ಷೇತ್ರದ ಸಾಧಕರಾಗಿದ್ದರು ಎಂದು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಮತ್ತು ಕೀರ್ತಿಶೇಷ ಕುಂಬ್ಳೆ ಸುಂದರ್ ರಾವ್ ಸಂಸ್ಮರಣ ವೇದಿಕೆ ಜಂಟಿಯಾಗಿ ನಗರದ ಕೆನರಾ ಪದವಿ ಪೂರ್ವ ಕಾಲೇಜಿನ ತೆರೆದ ಸಭಾಂಗಣದಲ್ಲಿ ಆಯೋಜಿಸಿದ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕುಂಬ್ಳೆ ಅವರು ಸಾಹಿತಿ, ವಿದ್ವಾಂಸ, ಕಲಾವಿದರು ಅವರ ಮಾತುಗಾರಿಕೆಯಲ್ಲಿ ಸಾಹಿತ್ಯಕ ಅಂಶ ಅಡಗಿತ್ತು. ತಾಳಮದ್ದಳೆಯಲ್ಲಿ ಅವರ ಮಾತುಗಾರಿಕೆ ಅಸಾಧಾರಣ ಹವ್ಯಾಸಿ, ವೃತ್ತಿ ಕಲಾವಿದರೊಂದಿಗೆ ಒಡನಾಟ ಹೊಂದಿದ್ದ ಅವರು ಸಾಮಾಜಿಕ ಜೀವನದಲ್ಲಿ ಸರಳ ವ್ಯಕ್ತಿತ್ವ, ಅವರ ಪಾತ್ರದಲ್ಲಿ ಸಮಾಜಕ್ಕೆ ಸಂದೇಶ ನೀಡುವ ಅಂಶ ಅಡಗಿತ್ತು. ಯುವಕರಿಗೆ ಪ್ರೇರಣದಾಯಕ ವ್ಯಕ್ತಿತ್ವ ಹೊಂದಿದ್ದ ಅವರು ಯಕ್ಷಗಾನದ ಎಲ್ಲಾ ಪ್ರಕಾರಗಳಲ್ಲಿ ತೊಡಗಿಸಿ ಕುಂಬ್ಳೆತನವನ್ನು ಎತ್ತಿ ತೋರಿಸಿದ್ದಾರೆ ಎಂದರು. ಕುಂಬ್ಳೆ ಸುಂದರ್…

Read More

ಮೂಡುಬಿದಿರೆ: ವಿದ್ಯಾರ್ಥಿಗಳ ಸಾಧನೆಗೆ  ಪೋಷಕರ ಮತ್ತು ಶಿಕ್ಷಕರ ಕೊಡುಗೆ ಅಪಾರ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪೋಷಕರ ಮತ್ತು ಶಿಕ್ಷಕರ ತ್ಯಾಗವನ್ನು ಮರೆಯಬಾರದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಅವರು ಮಂಗಳವಾರ ವಿದ್ಯಾಗಿರಿಯ ವಿ.ಎಸ್ ಆಚರ‍್ಯ ಸಭಾಂಗಣದಲ್ಲಿ ನಡೆದ ಆಳ್ವಾಸ್  ಪ.ಪೂ ಕಾಲೇಜಿನ ಸಾಂಸ್ಕೃತಿಕ ಸಂಘದ ಪ್ರತಿಭಾ ಪುರಸ್ಕಾರ ಕರ‍್ಯಕ್ರಮದಲ್ಲಿ ಮಾತನಾಡಿದರು. ಪ್ರತಿ ಕೆಲಸವನ್ನು ಶ್ರದ್ಧೆಯಿಂದ, ಮನಸ್ಸಿಟ್ಟು ನಿರ್ವಹಿಸಿ. ಆಗ ಅಭ್ಯುದಯ ಸಹಜವಾಗಿ  ನಮ್ಮಲ್ಲಿ ಮೂಡುತ್ತದೆ. ಕೆಲವು ಸಂಧರ್ಭದಲ್ಲಿ ನಮ್ಮ ನಡುವೆ ಇರುವ ವ್ಯವಸ್ಥೆ ನಮಗೆ ಕಟ್ಟುನಿಟ್ಟಾಗಿ ಇದ್ದಾಗ ಕಷ್ಟವೆನಿಸಿದರೂ, ಅವುಗಳು ನಮ್ಮ ವ್ಯಕ್ತಿತ್ವ ನಿರ್ಮಾಣದಲ್ಲಿ ಮಹತ್ತರ ಪಾತ್ರವಹಿಸುತ್ತವೆ. ಆಳ್ವಾಸ್‌ನ ವಿದ್ಯಾರ್ಥಿಗಳು ಅದೃಷ್ಟಶಾಲಿಗಳು. ಡಾ ಎಂ ಮೋಹನ್ ಆಳ್ವರವರಂತವರ ಮಾರ್ಗದರ್ಶನ, ನಿಮ್ಮನ್ನು ಶ್ರೇಷ್ಠ ವಿದ್ಯಾರ್ಥಿಗಳನ್ನಾಗಿಸುತ್ತದೆ. ಎಳವೆಯಲ್ಲಿಯೆ ಇಂಗ್ಲೆಂಡ್ನ ಆಕ್ಸಫರ್ಢ್ ವಿವಿಯಿಂದ ಅತ್ಯುತ್ತಮ ವಿದ್ಯಾರ್ಥಿ ಎಂಬ ಪ್ರಶಸ್ತಿಯನ್ನು ಪಡೆದವರು ಡಾ ಆಳ್ವರು. ಆಳ್ವಾಸ್‌ನಲ್ಲಿ 5 ಗಂಟೆಯ ನಂತರ ಆರಂಭವಾಗುವ ಕಲಿಕೆ ಹೆಚ್ಚು ಪರಿಣಾಮಕಾರಿಯಾಗಿದೆ. ಈ ಯೋಚನೆ ಮತ್ತು ಯೋಜನೆಯ…

Read More

ಅರಬ್ ಸಂಯುಕ್ತ ಸಂಸ್ಥಾನದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಕರ್ನಾಟಕ ಪರ ಸಂಘಟನೆಗಳು ಕಾರ್ಯೊನ್ಮುಕವಾಗಿದೆ. ಇವುಗಳಲ್ಲಿ ಅತ್ಯಂತ ಹಿರಿಯ ಸಂಘಟನೆಗಳಲ್ಲಿ 47 ವರ್ಷಗಳಿಂದ ಯಶಸ್ವಿ ಹೆಜ್ಜೆಗುರುತುಗಳನ್ನು ಮೂಡಿಸಿರುವ ಯು.ಎ.ಇ. ಬಂಟ್ಸ್ ಎಕ್ಸಿಕ್ಯೂಟ್ ಬೋರ್ಡ್ ನ ವಾರ್ಷಿಕ ಮಹಾಸಭೆ ದುಬಾಯಿ ಕರಾಮದಲ್ಲಿರುವ ಫಾರ್ಚೂನ್ ಆಟ್ರಿಯಂ ಹೋಟೆಲ್ ಸಭಾಂಗಣದಲ್ಲಿ 2024 ಡಿಸೆಂಬರ್ 14ನೇ ತಾರೀಕಿನಂದು ಮಧ್ಯಾಹ್ನ 3.00 ಗಂಟೆಯಿಂದ ನಡೆಯಿತು. ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ. ಯು.ಎ.ಇ. ಬಂಟ್ಸ್ ಉಪಾಧ್ಯಕ್ಷರಾಗಿ ಹಲವು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನಿಕಟ ಪೂರ್ವ ಅಧ್ಯಕ್ಷರಾಗಿರುವ ಶ್ರೀ ಸರ್ವೋತ್ತಮ ಶೆಟ್ಟಿಯವರಿಂದ ಅಧಿಕಾರ ಹಸ್ತಾಂತರ ಸ್ವೀಕರಿಸಿದ ನಂತರ ನೂತನ ಆಡಳಿತ ಮಂಡಳಿಯ ಸರ್ವ ಸದಸ್ಯರಿಂದ ಪ್ರಮಾಣ ವಚನ ಸ್ವೀಕರಿಸಿದರು. 2025-26 ನೆ ಸಾಲಿನ ಯು.ಎ.ಇ. ಬಂಟ್ಸ್ ನ ಕಾರ್ಯಕಾರಿ ಸಮಿತಿಯವರು ಸಹ ಉಪಸ್ಥಿತರಿದ್ದರು. ನೂತನ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀ…

Read More

ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ| ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷರಾಗಿ ಡಾ| ಗಣನಾಥ ಶೆಟ್ಟಿ ಎಕ್ಕಾರ್ ಅವರನ್ನು ಸರ್ಕಾರ ನೇಮಕಗೊಳಿಸಿದೆ. ಸದಸ್ಯರಾಗಿ ಉಲ್ಲಾಸ್ ಕಾರಂತ, ಆತ್ರಾಡಿ ಅಮೃತ ಶೆಟ್ಟಿ, ಡಾ| ಭಾರತಿ ಮರವಂತೆ, ಡಾ ಪ್ರಸಾದ್ ರಾವ್, ಸತೀಶ್ ಕೊಡವೂರು, ಮಂಚಿ ರಮೇಶ್, ಸಂತೋಷ್ ನಾಯಕ್ ಪಟ್ಲ, ಚೇತನ ತೆರಾಡಿ, ಜಿ ಎಂ ಶರೀಫ್ ಹೂಡೆ, ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿದೆ.

Read More

ಮೂಡುಬಿದಿರೆ: ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಸೋಸಿಯನ್ ಹಾಗೂ ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್  ಸಂಸ್ಥೆ ಇವುಗಳ ಜಂಟಿ ಆಶ್ರಯದಲ್ಲಿ ಮಧುಗಿರಿ ಸ್ಪೋಟ್ಸ್ ಕ್ಲಬ್ ಮಧುಗಿರಿಯಲ್ಲಿ ನಡೆದ  ಕರ್ನಾಟಕ ರಾಜ್ಯಮಟ್ಟದ ಜ್ಯೂನಿಯರ ಬಾಲಕ ಹಾಗೂ ಬಾಲಕಿಯರ ಎರಡು  ವಿಭಾಗದ ಪ್ರಥಮ ಪ್ರಶಸ್ತಿ ಹಾಗೂ ಬಾಲಕಿಯರ ದ್ವಿತೀಯ ಪ್ರಶಸ್ತಿಯನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡರು. ಬಾಲಕರ ವಿಭಾಗದ ಪೈನಲ್ಸ್ನಲ್ಲಿ ಆಳ್ವಾಸ್ ಬಾಲಕರ ತಂಡ ಬೆಂಗಳೂರಿನ ರಾಜೇಶ್ವರಿ ಯುತ್ ಕ್ಲಬ್ (ಆರ್‌ವೈಸಿ) ತಂಡವನ್ನು 35-31 ಹಾಗೂ 35-27 ನೇರ ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗಳಿಸಿತು.  ಆಳ್ವಾಸ್ ಬಾಲಕಿಯರ ತಂಡ ಫೈನಲ್ಸ್  ಹಣಾಹಣಿಯಲ್ಲಿ ಆಳ್ವಾಸ್‌ನ ಎ ತಂಡವನ್ನು, ಆಳ್ವಾಸ್‌ನ ಬಿ ತಂಡವು 35-29 ಹಾಗೂ 35-33 ನೇರ ಸೆಟ್‌ಗಳಿಂದ ಸೋಲಿಸಿ  ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದುಕೊಂಡವು.  ಬಾಲಕರ ವಿಭಾಗದಲ್ಲಿ ರಾಜ್ಯದ ಸುಮಾರು 24 ತಂಡಗಳು ಹಾಗೂ ಬಾಲಕಿಯರ ವಿಭಾದಲ್ಲಿ 16 ತಂಡಗಳು ಭಾಗವಹಿಸಿದ್ದವು.  ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ…

Read More

ವಿದ್ಯಾಗಿರಿ:  ದೇಶ ಬಿಟ್ಟು ಗಾಂಧಿಯಿಲ್ಲ,  ಗಾಂಧಿ ಬಿಟ್ಟು ಭಾರತವಿಲ್ಲ ಎಂಬುದನ್ನು ಎಲ್ಲರು ಅರಿತುಕೊಳ್ಳುವ ಅಗತ್ಯವಿದೆ ಎಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ  ನಾಡೋಜ ಡಾ. ವೂಡೇ ಪಿ ಕೃಷ್ಣ ಹೇಳಿದರು . ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಕನ್ನಡ ವಿಭಾಗ ಮತ್ತು ಬೆಂಗಳೂರಿನ  ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಂಯುಕ್ತಾಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ನಡೆದ ‘ ಮಹಾತ್ಮರನ್ನು ಅರ್ಥ ಮಾಡಿಕೊಳ್ಳಲು ಕೆಲವು ಪ್ರಶ್ನೆಗಳು ‘ ಎರಡು ದಿನಗಳ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಂತಿಯುತವಾಗಿ ಸ್ವಾತಂತ್ರ‍್ಯವನ್ನು ತಂದುಕೊಟ್ಟು, ನೈತಿಕತೆಯ ಉತ್ತುಂಗದಲ್ಲಿ ಬದುಕಿ ಬಾಳಿದ ಕೀರ್ತಿ ಗಾಂಧಿಯವರಿಗೆ ಸಲ್ಲುತ್ತದೆ ಎಂದರು. ಗಾಂಧೀಜಿ ಅವರ ಬಗ್ಗೆ ಅಧಿಕೃತ ಸಾಹಿತ್ಯ  ಓದಿ ಅರ್ಥೈಸಿಕೊಳ್ಳಿ. ನಂತರ ಪ್ರಶ್ನಿಸಿ. ಆದರೆ ಗೊತ್ತಿಲ್ಲದೇ ಟೀಕಿಸಬೇಡಿ ಎಂದರು. ಅಹಿಂಸಾತ್ಮಕ ಮತ್ತು  ಸಾಮುದಾಯಿಕ ಸಮಾಜದ ಪರಿಕಲ್ಪನೆಯ ಆಲೋಚನೆಯನ್ನು ಮೈಗೂಡಿಸಿ  ಬದುಕಿದರೆ ಗಾಂಧಿಗೆ ಸಲ್ಲಿಸುವ ಗೌರವವಾಗುತ್ತದೆ ಎಂದು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಮಾತನಾಡಿ…

Read More

ಬಂಟರ ಸಂಘ ಬೆಂಗಳೂರು ಯುವ ವಿಭಾಗವು ಈ ಬಾರಿ ಹೊಸ ವರ್ಷಾಚರಣೆಯನ್ನು ಬಂಟರ ಸಂಘದ ಆವರಣದಲ್ಲಿ ಡಿಸೆಂಬರ್ 31ರಂದು ಆಚರಿಸಲು ಉದ್ದೇಶಿಸಿದೆ. ಯುವ ವಿಭಾಗವು ಈಗಾಗಲೇ ಸಂಪೂರ್ಣ ಸಿದ್ಧತೆಯಲ್ಲಿ ತೊಡಗಿದ್ದು, 22ನೇ ನವಂಬರ್ 20204 ರಂದು ಹೊಸ ವರ್ಷ ಆಚರಣೆಯ ಪೋಸ್ಟರ್ ಅನಾವರಣ ಕಾರ್ಯಕ್ರಮವನ್ನು ಸಂಘದ ಆಶಾ ಪ್ರಕಾಶ್ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾನ್ವಿತ ಅಧ್ಯಕ್ಷರಾದ ಸಿಎ ಅಶೋಕ್ ಶೆಟ್ಟಿಯವರು ವಹಿಸಿದ್ದು, ಸಂಜೆ 7 ಕ್ಕೆ ಸರಿಯಾಗಿ ಸಂಘದ ಶ್ರೀ ವರಸಿದ್ಧಿ ವಿನಾಯಕ ಪ್ರಾರ್ಥನಾ ಮಂದಿರದಲ್ಲಿ ಪೂಜೆ ಸಲ್ಲಿಸಿ ನಂತರ ಗಣ್ಯರೊಡಗೂಡಿ ಪೋಸ್ಟರನ್ನು ಅನಾವರಣಗೊಳಿಸಲಾಯಿತು. ಗೌರವ ಕಾರ್ಯದರ್ಶಿಗಳಾದ ವಿಜಯ್ ಜೆ ಶೆಟ್ಟಿ ಹಾಲಾಡಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ, ಮಹಿಳಾ ಉಪಾಧ್ಯಕ್ಷೆ ಕಾಂತಿ ಶೆಟ್ಟಿ, ಜೊತೆ ಕಾರ್ಯದರ್ಶಿ ಜಯಶ್ರೀ ಸಿ ರೈ, ಯುವ ವಿಭಾಗದ ಚೇರ್ ಪರ್ಸನ್ ಅಜಿತ್ ವಿ ಶೆಟ್ಟಿ, ಸಂಚಾಲಕರಾದ ಪ್ರಸಾದ್ ಶೆಟ್ಟಿ ಅರೆಹೊಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂಧರ್ಭ ಸಂಘದ ಪದಾಧಿಕಾರಿಗಳು, ಯುವ ವಿಭಾಗದ…

Read More

ಪುತ್ತೂರು ಯುವ ಬಂಟರ ಸಂಘದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕಥಾವಚನ, ಪ್ರವಚನ ಕಾರ್ಯಕ್ರಮವು ಡಿಸೆಂಬರ್ 15 ರಂದು ಪುತ್ತೂರು ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ವಿಶೇಷ ಮಂಟಪ ಹಾಗೂ ಅಲಂಕಾರದೊಂದಿಗೆ ದೇವರ ಪೂಜೆಯನ್ನು ನೆರವೇರಿಸಲಾಯಿತು. ವೇದಮೂರ್ತಿ ನಾಗರಾಜ್ ಭಟ್ ರವರಿಂದ ವೈದಿಕ ಕಾರ್ಯಕ್ರಮಗಳು ಜರಗಿತು. ಕಿರಣ್ ಕುಮಾರ್ ಪಡುಪಣಂಬೂರು, ಗೀತಾ ಹಾಗೂ ಡಾ. ಸತ್ಯನಾರಾಯಣ ಪುಣಿಚಿತ್ತಾಯರವರು ಶ್ರೀ ಸತ್ಯನಾರಾಯಣ ಪೂಜೆಯ ಕಥಾವಚನ ಮತ್ತು ಪ್ರವಚನವನ್ನು ನಡೆಸಿಕೊಟ್ಟರು. ಅಬುದಾಬಿಯ ಇಂಡಿಯಾ ಸೋಶಿಯಲ್ ಮತ್ತು ಕಲ್ಚರಲ್ ಸೆಂಟರ್ ನ ಅಧ್ಯಕ್ಷ ಮಿತ್ರಂಪಾಡಿ ಜಯರಾಮ್ ರೈರವರು ಅನ್ನ ಸಂತರ್ಪಣೆಯ ಸೇವಾಕರ್ತರಾಗಿ ಸಹಕರಿಸಿದರು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ದಯಾನಂದ ರೈ ಮನವಳಿಕೆ, ಲಕ್ಷ್ಮೀನಾರಾಯಣ ರೈ ಅರಿಯಡ್ಕ, ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷ ರಮೇಶ್ ರೈ ಡಿಂಬ್ರಿ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಗುತ್ತು, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ,…

Read More