Author: admin
ಬಂಟರ ಸಂಘ ಮುಂಬಯಿಯ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ವತಿಯಿಂದ ಮಾರ್ಚ್ 30ರ ಆದಿತ್ಯವಾರದಂದು ಚೈತ್ರ ನವರಾತ್ರಿಯ ಆರಂಭದ ದಿನದಂದು ಸಂಜೆ ಪೊವಾಯಿಯ ಎಸ್.ಎಂ ಶೆಟ್ಟಿ ಕಾಲೇಜಿನ ಸಭಾಂಗಣದಲ್ಲಿ ‘ಮಾತಾ ಕಿ ಚೌಕಿ’ ಭಕ್ತಿಪೂರ್ಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮವನ್ನು ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ದುರ್ಗಾ ಮಾತೆಗೆ ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಈ ಶುಭ ದಿನದಂದು ನಡೆಯಲಿರುವ ಈ ಭಕ್ತಿ ಪ್ರಧಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಹಾಗೂ ಇಂತಹ ಧಾರ್ಮಿಕ ಕಾರ್ಯಗಳು ನಾವು ನಡೆಸಿಕೊಂಡು ಬಂದಾಗ ಸಮಾಜ ಮತ್ತು ಬದುಕು ಭದ್ರವಾಗಿ ಸುಂದರವಾಗುತ್ತದೆ ಎಂದು ಶುಭ ಹಾರೈಸಿದರು. ಬಂಟರ ಸಂಘದ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸೂರಜ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶೋಭಾ ಅಮರನಾಥ್ ಶೆಟ್ಟಿ ಮುಂದಾಳತ್ವದಲ್ಲಿ ಯಶಸ್ವಿಯಾಗಿ ನೆರವೇರಿತು.ಬಂಟರ ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ…
ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಹಕಾರಿ ಸಂಘ ಅತ್ತಾವರ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಶಾಂತಾನಂದ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.ಮಂಗಳೂರು ಅತ್ತಾವರ ಮೆಸ್ಕಾಂ ನಲ್ಲಿ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ಮೂಲದ ಶಾಂತಾನಂದ ಶೆಟ್ಟಿಯವರು ಸಮಾಜಸೇವಕರಾಗಿಯೂ ಗುರುತಿಸಿಕೊಂಡಿದ್ದಾರೆ.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯ ಸುತ್ತಮುತ್ತಲಿನ ಪರಿಸರದಲ್ಲಿ ಮೊಟ್ಟ ಮೊದಲ ಬಾರಿಗೆ ವೈಯಕ್ತಿಕ ಸೌಂದರ್ಯ ಹಾಗೂ ಆರೈಕೆ ಕ್ಷೇತ್ರಕ್ಕೆ ಸಂಬ0ದಿಸಿದ ಆಳ್ವಾಸ್ ಅಕಾಡೆಮಿ ಆಫ್ ಮೇಕಪ್ ಆರ್ಟಿಸ್ಟಿç, ಪೋಲಿಶ್- ನೈಲ್ಸ್ ಆ್ಯಂಡ್ ಬ್ಯೂಟಿ, ಹೆಲ್ದೀ ಸಿಪ್ ಹಾಗೂ ಲ್ಯಾಕ್ಟೇಶನ್ ಕನ್ಸಲ್ಟೇನ್ಸಿ ಸರ್ವೀಸಸ್ ಅನ್ನು ಮೂಡುಬಿದಿರೆಯ ಆಳ್ವಾಸ್ ಆ್ಯಸ್ಥೇಟಿಕ್ ರಿಜುವನೇಶನ್ ಸೆಂಟರ್ ಆವರಣದಲ್ಲಿ ಯುಗಾದಿಯ ಶುಭ ಸಂಧರ್ಭದ0ದು ಉದ್ಘಾಟನೆಗೊಳಿಸಲಾಯಿತು. ಮಂಗಳೂರಿನ ಕಾಸ್ಮೆಟಿಕ್ ಸ್ತ್ರೀರೋಗ ತಜ್ಞೆ ಹಾಗೂ ಮಿಸೆಸ್ ಇಂಡಿಯಾ ಇಂಡಿಪೆoಡೆoಟ್ ಇಂಟರ್ನ್ಯಾಷನಲ್ ಖ್ಯಾತಿಯ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಲೋಕಾರ್ಪಣೆಗೊಳಿಸಿದರು. ಕರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್, ನಿಮ್ಮ ಕನಸ್ಸನ್ನು ನನಸಾಗಿಸಲು ಸದಾ ಕರ್ಯಪ್ರವೃತ್ತರಾಗಿರಿ. ಎಂದೂ ಹಿಂಜರಿಕೆ ಬೇಡ. ನಿಮ್ಮ ಗುರಿಗಳನ್ನು ಸಾಧಿಸಲು ನಿಮಗೆ ಉತ್ಸಾಹವಿದ್ದರೆ ಖಂಡಿತ ಸಮಯ ಲಭಿಸುತ್ತದೆ ಎಂದರು. ಮೇಕಪ್ ಕಲೆ ಸಾಮಾನ್ಯವಾಗಿ ಮಹಿಳೆಯರಿಗೆ ಮಾತ್ರ ಎಂಬ ತಪ್ಪು ಕಲ್ಪನೆ ಇದೆ. ಆದರೆ, ಈ ಕಲೆಯು ಲಿಂಗಭೇದವನ್ನು ಮೀರಿ ಎಲ್ಲರಿಗೂ ಸಮಾನ ಅವಕಾಶ ನೀಡುತ್ತದೆ.…
ಬ್ರಹ್ಮಾವರ : ಇಲ್ಲಿನ ಜಿ ಎಮ್ ಸಮೂಹ ವಿದ್ಯಾಸಂಸ್ಥೆಯಲ್ಲಿ ‘ಈಜು ಕೊಳ’ ಮತ್ತು ‘ಅಮ್ಯೂಸ್ಮೆಂಟ್ ಪಾರ್ಕ್’ನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಉದ್ಘಾಟಿಸಿ, ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಈಜುಕೊಳ ಮತ್ತು ಮಕ್ಕಳ ಮನೋರಂಜನೆಗಾಗಿ ಅಮ್ಯೂಸ್ಮೆಂಟ್ ಪಾರ್ಕ್ನ್ನು ನೀಡುವ ನನ್ನ ಕನಸು ಸಾಕಾರಗೊಂಡಿದೆ ಎಂದರು. ಈಜುವಿಕೆಯು ಮನರಂಜನೆ, ವ್ಯಾಯಾಮ, ಚಿಕಿತ್ಸೆ ಮತ್ತು ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಭಾಗವಹಿಸುವುದು, ದೈಹಿಕ ಮತ್ತು ಮಾನಸಿಕ ಒತ್ತಡಗಳ ನಿವಾರಣೆಯಂತಹ ಪ್ರಯೋಜನಗಳನ್ನು ನೀಡುತ್ತದೆ. ಇಲ್ಲಿ ನುರಿತ ತರಬೇತಿದಾರರಿಂದ ಮಕ್ಕಳಿಗೆ ಈಜು ಕಲಿಸುವುದರ ಜೊತೆಯಲ್ಲಿ ಅವರ ಮನೋರಂಜನೆಗಾಗಿ ಅಮ್ಯೂಸ್ಮೆಂಟ್ ಪಾರ್ಕ್ನ್ನು ಸಹ ಸಿದ್ಧಗೊಳಿಸಲಾಗಿದೆ. ಇದರಲ್ಲಿ ತರಬೇತಿ ಪಡೆದ ಮಕ್ಕಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕವನ್ನು ಗೆಲ್ಲುವಂತಾಗಲಿ ಎಂದು ಶುಭಹಾರೈಸಿದರು. ಜಿ ಎಮ್ ಗ್ಲೋಬಲ್ ಸ್ಕೂಲ್ನ ಪ್ರಾಂಶುಪಾಲರಾದ ಪ್ರಣವ್ ಶೆಟ್ಟಿ, ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಪೋಷಕರ ಹಾಗೂ ಮಕ್ಕಳ ಉತ್ತಮ ಪ್ರತಿಕ್ರಿಯೆಗೆ ಅಭಿನಂದಿಸಿ ಶುಭ…
ಇತಿಹಾಸ ಪ್ರಸಿದ್ಧ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿಯ ಸಭೆಯು ಊರಿನ ಗಡಿ ಪ್ರಧಾನರು, ಗುರಿಕಾರರು ಹಾಗೂ ಊರ ಹತ್ತು ಸಮಸ್ತರನ್ನು ಒಳಗೊಂಡ ಪಡ್ರೆ, ಕೊಡಿಪಾಡಿ, ಅರಂತಬೆಟ್ಟು, ಮದಕಾಡಿ, ಮುಂಚೂರು, ದಾಮು ಶೆಟ್ಟಿ, ಬೀರಣ್ಣ ಶೆಟ್ಟಿ, ಭಂಡಾರ ಮನೆ ಮುಕ್ಕ ಹಾಗೂ ಮಿತ್ರಪಟ್ಟದವರು ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ದೈವಕ್ಕೆ ಸಂಬಂಧಪಟ್ಟ ಗುರಿಕಾರರನ್ನು ಒಳಗೊಂಡು ಮಾರ್ಚ್ 16 ರಂದು ದೈವಸ್ಥಾನದ ವಠಾರದಲ್ಲಿ ಊರ, ಪರವೂರ ಭಕ್ತರ ಮಹಾಸಭೆಯಲ್ಲಿ ಸರ್ವಾನುಮತದಿಂದ ನೂತನ ಆಡಳಿತ ಮಂಡಳಿಯ ಅಧ್ಯಕರನ್ನಾಗಿ ದಿನಕರ ಶೆಟ್ಟಿ ತೆಂಕು ಮೇಗಿನ ಮನೆ ಪಡ್ರೆ ಇವರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ದೇವಣ್ಣ ಶೆಟ್ಟಿ ಬಡಗು ಮೇಗಿನಮನೆ ಪಡ್ರೆ, ಉಪಾಧ್ಯಕ್ಷರಾಗಿ ಸತೀಶ್ ಮುಂಚೂರು, ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲತೀಶ್ ಶೆಟ್ಟಿ ಪಡ್ರೆ, ಕೋಶಾಧಿಕಾರಿಯಾಗಿ ಯೋಗೀಶ್ ಕರ್ಕೇರ ಮುಕ್ಕ, ಜೊತೆ ಕಾರ್ಯದರ್ಶಿಯಾಗಿ ಮುಖೇಶ್ ಶೆಟ್ಟಿ ಪಡ್ರೆ, ಸುನಿಲ್ ಮಿತ್ರಪಟ್ಟ, ಶ್ರೀಮತಿ ಸಪ್ನಾ ಲಕ್ಷ್ಮೀಶ ಆಳ್ವ, ಜೊತೆ ಕೋಶಾಧಿಕಾರಿಯಾಗಿ ಸಿ.ಎ ಅಪೇಕ್ಷ…
ಸಂಘ ಸಂಸ್ಥೆಗಳು ಇದ್ದರೆ ಸಾಲದು, ಸಕ್ರೀಯವಾಗಿ ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವಂತಾಗ ಬೇಕು. ಆ ನಿಟ್ಟಿನಲ್ಲಿ ಸುರತ್ಕಲ್ ತಡಂಬೈಲ್ ನಲ್ಲಿರುವ ವೀರ ಕೇಸರಿ ಸಂಸ್ಥೆ ನಿರಂತರ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ, ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ನುಡಿದರು. ತಡಂಬೈಲ್ ವೀರಕೇಸರಿ ಸಂಸ್ಥೆ ಮಾರಿಗುಡಿ ಬಳಿ ಮಾರಿಪೂಜಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ನಾಟಕ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೀರ ಕೇಸರಿ ಸಂಸ್ಥೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಮುಖ್ಯವಾಗಿ ಕಳೆದ 46 ವರ್ಷಗಳಿಂದ ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಸಾಂಸ್ಕೃತಿಕ ಮತ್ತು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿರುವ ವೀರ ಕೇಸರಿ ಸಂಸ್ಥೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ಸನ್ಮಾನಿಸುವುದು ಮುಂತಾದ ಕಾರ್ಯಕ್ರಮಗಳನ್ನು ಸಂಘಟನೆ ನಿರಂತರವಾಗಿ ಮಾಡುತ್ತಿದೆ. ವೀರಕೇಸರಿ ಸಂಸ್ಥೆಯ ಸಮಾಜಮುಖಿ ಚಟುವಟಿಕೆಗಳನ್ನು ಜಿಲ್ಲಾಡಳಿತ…
ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಸಂಸ್ಥಾಪಕ ಡಾ| ಎ. ಸದಾನಂದ ಶೆಟ್ಟಿ ಅವರ ನೇತೃತ್ವದಲ್ಲಿ ವರ್ಷಪ್ರತಿ ಜರಗುವ ತುಳುವರ ಸೌರಮಾನ ಯುಗಾದಿ ‘ಬಿಸು ಪರ್ಬೊ’ ಸಂಭ್ರಮವನ್ನು ಈ ಬಾರಿ ಏಪ್ರಿಲ್ 16ರಂದು ಮಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಟ್ರಸ್ಟ್ ಪದಾಧಿಕಾರಿಗಳ ಸಭೆ ಏಪ್ರಿಲ್ 1ರಂದು ಬಲ್ಮಠದ ಕುಡ್ಲ ಸದಾಶಯ ಕಚೇರಿಯಲ್ಲಿ ಜರಗಿತು. ಕಾರ್ಯಾಧ್ಯಕ್ಷ ದೇವಿ ಚರಣ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಸುಕಣಿ, ಪದ ನಲಿಕೆ: ತುಳುನಾಡಿನ ಕೃಷಿ ಸಮೃದ್ಧಿಯನ್ನು ಬಿಂಬಿಸುವ ತುಳುವರ ಯುಗಾದಿಯನ್ನು ಅರ್ಥವತ್ತಾಗಿ ಆಚರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅಲ್ಲದೆ ತುಳು ಸಂಸ್ಕೃತಿಯನ್ನು ಬಿಂಬಿಸುವ ‘ಪದ ನಲಿಕೆ’ ಹಾಡು ಮತ್ತು ಕುಣಿತಗಳ ‘ಬಿಸು ಮಿನದನ’ ಕಾರ್ಯಕ್ರಮವನ್ನು ವಿವಿಧ ಬಂಟರ ಸಂಘಗಳ ವತಿಯಿಂದ ನಡೆಸಲಾಗುವುದು. ಇದರೊಂದಿಗೆ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಸಲುವಾಗಿ ತಜ್ಞರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗುವುದು ಎಂದು ಸಭಾಧ್ಯಕ್ಷರು ನುಡಿದರು. ‘ಎಪ್ರಿಲ್ 14ರಂದು ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ವಿರುವುದರಿಂದ ಈ ಕಾರ್ಯಕ್ರಮವನ್ನು 2025 ಏಪ್ರಿಲ್…
ಮೇ 6ರಿಂದ 12ರವರೆಗೆ ನಡೆಯುವ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅಗತ್ಯವಿರುವ ಮಡಲು ಹಾಗೂ ಪೊರಕೆ ತಯಾರಿಕೆ ಬ್ರಹ್ಮಕಲಶೋತ್ಸವ ಮಾತೃ ಸಮಿತಿ ನೇತೃತ್ವದಲ್ಲಿ ಭಾನುವಾರ ಚಾಲನೆ ನೀಡಲಾಗಿದೆ. ದೇವಳದ ಆಡಳಿತ ಮೊಕ್ತೇಸರ ತಾರನಾಥ ರೈ ಪಡ್ಡಂಬೈಲ್ ಗುತ್ತು ಚಾಲನೆ ನೀಡಿದರು. ಕಲ್ಲಗದ್ದೆ, ಚನಿಯಪ್ಪ ಪರಗುಡ್ಡೆ, ಮಾತೃ ಮಂಡಳಿ ಅಧ್ಯಕ್ಷೆ ರಾಜಶ್ರೀ ಟಿ. ರೈ ಪೆರ್ಲ, ಚೇತನಾ, ಯಶೋದ ಕಾನ, ನಿರ್ಮಲ ಶೇಷಪ್ಪ ಭಾಗವಹಿಸಿದ್ದರು.ನಾಲ್ಕು ಗ್ರಾಮಗಳ ಪ್ರಾದೇಶಿಕ ಸಮಿತಿಗಳ ಮಹಿಳಾ ಸದಸ್ಯೆಯರು ಮಡಲು ಹೆಣೆಯುವ, ಹಿಡಿಸೂಡಿ ತಯಾರಿಸುವ ಕೈಂಕರ್ಯದಲ್ಲಿ ತೊಡಗಿಕೊಂಡರು. ಪ್ರೇಮ ಕಲ್ಲಗದ್ದೆ, ಲೀಲಾವತಿ ಆಚಾರ್ಯ, ರೇಣುಕಾ ಕಲ್ಲಗದ್ದೆ, ಯಶೋಧ ಕಾನ, ಸಾವಿತ್ರಿ ಕುರೆಡ್ಕ, ಸರೋಜಿನಿ ಮುಗೇರು ಪ್ರಾತ್ಯಕ್ಷಿಕೆ ನೀಡಿದರು. ಮಕ್ಕಳು ಕೂಡ ಮಡಲು ಹೆಣೆಯುವ ಕಾಯಕದಲ್ಲಿ ಭಾಗಿಯಾದರು.ಬ್ರಹ್ಮಕಲಶೋತ್ಸಕ್ಕೆ ಸುಮಾರು 600 ಹೆಣೆದ ಮಡಲು ಅಗತ್ಯವಿದ್ದು, ಮುಂದಿನ ದಿನಗಳಲ್ಲಿ ಮಾತೃ ಸಂಘದ ನಾನಾ ಪ್ರಾದೇಶಿಕ ಸಮಿತಿಗಳ ನೇತೃತ್ವದಲ್ಲಿ ಅಲ್ಲಲ್ಲಿ ಮಡಲು ಹೆಣೆದು, ಹಿಡಿಸೂಡಿ ತಯಾರಿಸಿ ಕ್ಷೇತ್ರಕ್ಕೆ ತಂದೊಪ್ಪಿಸುವ ಯೋಜನೆ ಇರಿಸಲಾಗಿದೆ…
ನಮ್ಮ ಹೃದಯವು ನಮ್ಮ ದೇಹವನ್ನು ಚಾಲನೆಯಲ್ಲಿರುವ ಎಂಜಿನ್ನಂತಿದೆ. ಆದರೆ ನಾವು ಅದನ್ನು ಕಾಳಜಿ ವಹಿಸದಿದ್ದರೆ ಅದು ಒಡೆಯಲು ಪ್ರಾರಂಭಿಸಬಹುದು ಮತ್ತು ವೇಗವಾಗಿರುತ್ತದೆ. ಹೃದ್ರೋಗವು ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ ಮತ್ತು ವಯಸ್ಸು ಅಥವಾ ತಳಿಶಾಸ್ತ್ರದಂತಹ ಕೆಲವು ಅಪಾಯಕಾರಿ ಅಂಶಗಳನ್ನು ನೀವು ಬದಲಾಯಿಸಲು ಸಾಧ್ಯವಾಗದಿದ್ದರೂ, ನಮ್ಮ ಹೃದಯವನ್ನು ಬಲವಾಗಿ ಮತ್ತು ಆರೋಗ್ಯಕರವಾಗಿಡಲು ನಾವು ಮಾಡಬಹುದಾದ ಸಾಕಷ್ಟು ವಿಷಯಗಳಿವೆ. ನಮ್ಮ ಹೃದಯಕ್ಕೆ ನಾವು ಮಾಡಬಹುದಾದ ಕೆಟ್ಟ ಕೆಲಸಗಳಲ್ಲಿ ಧೂಮಪಾನವು ಒಂದು. ಪ್ರತಿ ಪಫ್ ನಮ್ಮ ರಕ್ತಪ್ರವಾಹವನ್ನು ವಿಷದಿಂದ ತುಂಬಿಸುತ್ತದೆ. ಅದು ನಮ್ಮ ಅಪಧಮನಿಗಳನ್ನು ಕಿರಿದಾಗಿಸುತ್ತದೆ, ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಮತ್ತು ಆಮ್ಲಜನಕವನ್ನು ಪಂಪ್ ಮಾಡಲು ಹೃದಯವು ಹೆಚ್ಚಿನ ಸಮಯವನ್ನು ಕೆಲಸ ಮಾಡುತ್ತದೆ. ಒಳ್ಳೆಯ ಸುದ್ದಿ? ನಾವು ತ್ಯಜಿಸಿದ ಕ್ಷಣ, ನಮ್ಮ ಹೃದಯವು ಗುಣವಾಗಲು ಪ್ರಾರಂಭಿಸುತ್ತದೆ. ಒಂದು ದಿನದೊಳಗೆ ಹೃದ್ರೋಗದ ಅಪಾಯವು ಕಡಿಮೆಯಾಗಲು ಪ್ರಾರಂಭವಾಗುತ್ತದೆ ಮತ್ತು ಒಂದು ವರ್ಷದ ನಂತರ, ಧೂಮಪಾನಿಗಳಿಗೆ ಹೋಲಿಸಿದರೆ ಇದು ಈಗಾಗಲೇ ಅರ್ಧದಷ್ಟು ಕಡಿಮೆಯಾಗಿದೆ. ನಮ್ಮ ದೇಹವನ್ನು ಚಲಿಸುವಂತೆ ಮಾಡುವುದು ಮತ್ತೊಂದು ಪ್ರಮುಖ…
ಸಾಹಿತ್ಯ ಕ್ಷೇತ್ರದಲ್ಲಿ ಒಂದು ಕಾಲದಲ್ಲಿ ಮೂಲೆ ಗುಂಪಾಗಿದ್ದ ಚುಟುಕು ಸಾಹಿತ್ಯ ಈಗ ಬಹಳಷ್ಟು ಪ್ರತೀತಿಯನ್ನು ಪಡೆಯುತ್ತಾ ಇದೆ. ಹಿಡಿಯಲ್ಲಿ ಇಡಿಯನ್ನು ತೋರಿಸುವ ಶಕ್ತಿ ಚುಟುಕಿಗಿರುವುದೇ ಇದಕ್ಕೆ ಕಾರಣವಾಗಿದೆ. ಸತ್ವ ತತ್ವಗಳನ್ನು ಒಳಗೊಂಡ ಧ್ವನಿ ಪೂರ್ಣವಾದ ಗಟ್ಟಿ ಚುಟುಕುಗಳಿಗೆ ಓದುಗರ ಮನದಲ್ಲಿ ಉಳಿಯುವ ತಾಕತ್ತು ಯಾವತ್ತಿಗೂ ಇರುತ್ತದೆ ಎಂದು ಕಾಸರಗೋಡು ಜಿಲ್ಲಾ ಏಳನೇ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಿದ್ದ ಶಿಕ್ಷಕ, ತುಳು, ಕನ್ನಡ ಕವಿ ಹರೀಶ ಸುಲಾಯ ಒಡ್ಡಂಬೆಟ್ಟು ಅಭಿಪ್ರಾಯ ಪಟ್ಟರು. ಕಾಸರಗೋಡು ಜಿಲ್ಲಾ ಏಳನೇ ಚುಟುಕು ಸಾಹಿತ್ಯ ಸಮ್ಮೇಳನ ಮತ್ತು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಬೆಳ್ಳಿ ಹಬ್ಬದ ಸಂಭ್ರಮವು ಮಾರ್ಚ್ 27 ಗುರುವಾರದಂದು ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಸಮ್ಮೇಳನ ಅಧ್ಯಕ್ಷರನ್ನು ಮೆರವಣಿಗೆಯಲ್ಲಿ ವೇದಿಕೆಗೆ ಕರೆ ತರುವ ಮೂಲಕ ಪ್ರಾರಂಭಗೊಂಡು ಸುಮಾರು 108 ಕವಿಗಳ ಚುಟುಕು ಕವಿಗೋಷ್ಠಿ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹು ವಿಜೃಂಭಣೆಯಿಂದ ನಡೆಯಿತು. ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಂಚಾಲಕ ಡಾ| ಎಂಜಿಆರ್ ಅರಸ್…















