Author: admin
ಪ್ರಕೃತಿಯ ಜತೆ ಮನುಷ್ಯನಿಗೆ ಅವಿನಾಭಾವ ಸಂಬಂಧ ಇದೆ. ಕ್ಯಾನ್ಸರ್ ನಂತಹ ಮಾರಕ ಕಾಯಿಲೆಯನ್ನು ಗುಣಪಡಿಸುವ ಔಷಧೀಯ ಗಿಡಗಳು ಪ್ರಕೃತಿಯಲ್ಲಿದ್ದು, ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕ ಶೀನ ಶೆಟ್ಟಿ ಹೇಳಿದರು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನ ಮಂಗಳೂರು ತಾಲೂಕು ಘಟಕದ ವತಿಯಿಂದ ಜನಶಿಕ್ಷಣ ಟ್ರಸ್ಟ್ ಮುಡಿಪು, ಜನಜೀವನ ಬಾಳೆಪುಣಿ ಮತ್ತು ಚಿತ್ತಾರ ಬಳಗದ ಸಹಯೋಗದಲ್ಲಿ ಜನಶಿಕ್ಷಣ ಟ್ರಸ್ಟ್ ನ ಸಭಾಂಗಣದಲ್ಲಿ ನಡೆದ ಹಸಿರಾಗಿಸೋಣ ಪರಿಸರ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಅಭಾಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಡಾ. ಮೀನಾಕ್ಷಿ ರಾಮಚಂದ್ರ, ಅಭಾಸಾಪ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ಜನಜೀವನ ಬಾಳೆಪುಣಿ ಅಧ್ಯಕ್ಷ ರಮೇಶ್ ಶೇಣವ ಅಧ್ಯಕ್ಷತೆ ವಹಿಸಿದ್ದರು. ಜನ ಶಿಕ್ಷಣ ಟ್ರಸ್ಟ್ ನ ತರಬೇತಿ ಕೇಂದ್ರದ ಶಿಕ್ಷಕಿ ಕಾವೇರಿ ಅವರನ್ನು ಸನ್ಮಾನಿಸಲಾಯಿತು. ನರಿಂಗಾನ ಗ್ರಾ.ಪಂ ಅಧ್ಯಕ್ಷ ಮಹಮ್ಮದ್ ನವಾಝ್, ಇರಾ…
ಜೂನ್ 25: ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಹಾಗೂ ವಿವಿಧ ಸಂಘಗಳ, ತರಗತಿ ನಾಯಕರ ಪದಗ್ರಹಣ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಸೈಬರ್, ಆರ್ಥಿಕ ಮತ್ತು ಮಾದಕ (ಅ.ಇ.ಓ) ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ರವರು ಆಗಮಿಸಿದ್ದರು. ಅವರು ಮಾತನಾಡಿ ಜಿ ಎಮ್ ಸಂಸ್ಥೆ ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕನ್ನು ಪ್ರದರ್ಶಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಚುನಾವಣೆಯ ಅನುಭವವನ್ನು ನೀಡಿದೆ. ಮಕ್ಕಳು ಕಲಿಕೆಯ ಜೊತೆಗೆ ಬದುಕುವ ಕಲೆಯನ್ನು ತಿಳಿಯಬೇಕು. ನಮ್ಮ ಬದುಕನ್ನು ನಾವೇ ರೂಪಿಸಿಕೊಳ್ಳುವುದು ನಿಜವಾದ ನಾಯಕತ್ವವೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಚುನಾಯಿತ ನಾಯಕರಿಗೆ ಅಭಿನಂದನೆ ಸಲ್ಲಿಸಿ ಈಗ ನಿಮ್ಮೆಲ್ಲರ ಜವಾಬ್ದಾರಿ ಇಮ್ಮಡಿಯಾಗಿದ್ದು ಇತರರಿಗೆ ಮಾರ್ಗದರ್ಶಕರಾಗಿ ಕಾರ್ಯವನ್ನು ನಿರ್ವಹಿಸಬೇಕು. ಭವಿಷ್ಯದಲ್ಲಿ ಯಾವುದೇ ದುಷ್ಟ ಚಟಗಳಿಗೆ ಬಲಿಯಾಗದೇ ಪೋಷಕರ ನಿರೀಕ್ಷೆಯನ್ನು, ನಂಬಿಕೆಯನ್ನು ಉಳಿಸಿಕೊಳ್ಳಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಉತ್ತಮ ನಾಯಕನಿಗೆ ಸತ್ಕಾರ, ಗೌರವಗಳು ಹುಡುಕಿಕೊಂಡು ಬರುತ್ತದೆ. ಎಲ್ಲರೂ…
ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ವಿದ್ಯಾರ್ಥಿ ವೇತನ, ವಿಧವೆ ಹಾಗೂ ವಿಕಲ ಚೇತನರಿಗೆ ಆರ್ಥಿಕ ಸಹಾಯ
ಮುಂಬಯಿ ಮಹಾನಗರದಲ್ಲಿ ಸುಮಾರು ನಾಲ್ಕು ಲಕ್ಷಗಿಂತಲೂ ಅಧಿಕ ಬಂಟ ಸಮುದಾಯದವರಿದ್ದು, ಇನ್ನೂ ಲಕ್ಷಾಂತರ ಸಮಾಜ ಬಾಂಧವರು ಸಂಘದ ಸದಸ್ಯರಾಗದೇ ಇದ್ದು, ಅಂಥವರು ಪ್ರಾದೇಶಿಕ ಸಮಿತಿಯನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯರನ್ನಾಗಿ ಮಾಡಬೇಕಾಗಿದೆ. ಯಾಕೆಂದರೆ ಸಂಘದ ಸದಸ್ಯರೇ ಸಂಘದ ಸಂಪತ್ತು. ಬಂಟರ ಸಂಘದ ಮುಂಬಯಿ ಹೆಸರು ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಿದೆ. ಬಂಟರ ಸಂಘದ ಎಸ್.ಎಂ ಶೆಟ್ಟಿ ಶಿಕ್ಷಣ ಸಂಸ್ಥೆಗಳಲ್ಲಿ ಒಂದು ಮಗುವಿಗೆ ಸುಮಾರು 23 ವರ್ಷ ಕಲಿಯುವ ಅವಕಾಶ ಇದೆ. ಇದೀಗ ಒಂಭತ್ತು ಸಾವಿರ ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ. ಅನಂತರ ಉನ್ನತ ಶಿಕ್ಷಣ ಮಾಡುವುದಕ್ಕೆ ಮಹಾನಗರದಲ್ಲಿ ಎಲ್ಲಿಯೂ ಇರದ ಎಲ್ಲಾ ಸೌಲಭ್ಯಗಳು ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಇದ್ದು, ಒಂದು ಬೆಸ್ಟ್ ಶಿಕ್ಷಣ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ. ಬೊರಿವಲಿಯಲಿ ರೂಪಾಯಿ 180 ಕೋಟಿ ವೆಚ್ಚದ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿದ್ದು ಪ್ರತೀ ವಾರ ಅದಕ್ಕಾಗಿ ಡೋನೇಶನ್ ಕ್ಯಾಂಪ್ ನಡೆಸುತ್ತಿದ್ದೇವೆ. ಸಂಘಕ್ಕೆ ನೂರು ವರ್ಷ ಪೂರ್ತಿಯಾಗುವ ಸಂದರ್ಭದಲ್ಲಿ ಪ್ರತೀ ಪ್ರಾದೇಶಿಕ ಸಮಿತಿಯಲ್ಲಿ ನೂರು ಲಕ್ಷ ರೂಪಾಯಿ…
ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ಶನಿಪೂಜೆಯು ಶ್ರೀ ಕ್ಷೇತ್ರ ಕದ್ರಿಯ ಅರ್ಚಕ ವೇ.ಮೂ. ಕೃಷ್ಣ ಅಡಿಗರ ಪೌರೋಹಿತ್ಯದಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ ಅತಿಥಿ ಕಲಾವಿದರು ಹಾಗೂ ಸಂಘದ ಕಲಾವಿದರ ಕೂಡುವಿಕೆಯಲ್ಲಿ “ಶ್ರೀ ಶನೀಶ್ವರ ಮಹಾತ್ಮೆ” ಯಕ್ಷಗಾನ ಪ್ರದರ್ಶಿಸಲ್ಪಟ್ಟಿತು. ನಾಟ್ಯಗುರು ದೀಪಕ್ ರಾವ್ ಪೇಜಾವರ ಇವರ ನಿರ್ದೇಶನದಲ್ಲಿ ಜರುಗಿದ ಯಕ್ಷಗಾನದಲ್ಲಿ ತಾಯ್ನಾಡಿನಿಂದ ಆಗಮಿಸಿದ್ದ ಅತಿಥಿ ಕಲಾವಿದರಾದ ಕದ್ರಿ ನವನೀತ ಶೆಟ್ಟಿ ಹಾಗೂ ವಿಜಯ ಕುಮಾರ್ ಶೆಟ್ಟಿ ಮೊಯ್ಲೊಟ್ಟು ಭಾಗವಹಿಸಿದ್ದರು. ಅತಿಥಿ ಭಾಗವತರಾಗಿ ರೋಶನ್ ಎಸ್. ಕೋಟ್ಯಾನ್ ಪಾಲ್ಗೊಂಡಿದ್ದರು. ಈ ವಿಶೇಷ ಕಾರ್ಯಕ್ರಮದಲ್ಲಿ ಸುಮಾರು 600 ಕ್ಕೂ ಅಧಿಕ ಭಗವದ್ಭಕ್ತರು ಪಾಲ್ಗೊಂಡು ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ದ್ವೀಪದ ಭಜನಾ ಕಲಾವಿದರಿಂದ ಭಜನಾ ಸಂಕೀರ್ತನೆ ಸೇವೆಯೂ ಜರುಗಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪೂಜಾ ಅರ್ಚಕರಾದ ಕೃಷ್ಣ ಅಡಿಗ ಕದ್ರಿ, ಯಕ್ಷಗಾನದ ಅತಿಥಿ ಕಲಾವಿದರಾದ ಕದ್ರಿ ನವನೀತ್ ಶೆಟ್ಟಿ,…
ಯೋಗ ನಮ್ಮ ಭಾರತೀಯ ಆಧ್ಯಾತ್ಮಿಕ ಪರಂಪರೆಯ ಒಂದು ಅಂಗ ಮತ್ತು ಪುರಾತನ ಕಾಲದಿಂದ ಬಹಳ ಅಭಿವೃದ್ದಿ ಪಥದಲ್ಲಿ ನಡೆದು ಬಂದಿರುವ ಕಲೆ. ಮನಸ್ಸು ಮತ್ತು ದೇಹವನ್ನು ಒಂದಕ್ಕೊಂದು ಸಂಪರ್ಕಿಸುವ ಪ್ರಾಚೀನ ಕಲೆ. ಪ್ರತಿನಿತ್ಯ ಯೋಗದಿಂದ ನಮ್ಮ ದೇಹ ಸದೃಡಗೊಳ್ಳಬಹುದು ಮತ್ತು ಏಕಾಗ್ರತೆಯಿಂದ ಮನಸ್ಸಿಗೆ ಶಾಂತಿಯನ್ನು ಪಡೆಯಬಹುದು. ಸ್ಥಿರ ಉತ್ತಮ ಅರೋಗ್ಯ ಪಡಯಲು ಯೋಗ ಬಹು ಮುಖ್ಯ ಸಾಧನ. ಯೋಗ ದೇಹಕ್ಕೆ ರೋಗ ನೀರೋಧಕ ಶಕ್ತಿಯನ್ನು ನೀಡುತ್ತದೆ. ಯೋಗದಲ್ಲಿ ನಾವೆಲ್ಲರೂ ಜ್ಞಾನ ಪಡೆದಂತೆ ನಮ್ಮ ಮಕ್ಕಳಿಗೆ ಸಣ್ಣ ಪ್ರಾಯದಲ್ಲೇ ಯೋಗದ ಮಹತ್ವವನ್ನು ತಿಳಿಸುವ ಅಗತ್ಯತೆ ಇದೆ. ಯೋಗದಿಂದ ಅರೋಗ್ಯ ಭಾಗ್ಯ ಪಡೆಯಬಹುದು ಎಂದು ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಗಣೇಶ್ ಹೆಗ್ಡೆ ಪುಣ್ಚೂರ್ ನುಡಿದರು. ಪುಣೆ ಬಂಟ್ಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 21 ಶುಕ್ರವಾರದಂದು ವಾನ್ ವಾಡಿಯ ಮಹಾತ್ಮ ಪುಲೆ ಸಾಂಸ್ಕ್ರತಿಕ ಭವನದಲ್ಲಿ ಭಾರತೀಯ ಯೋಗ ಸಂಸ್ಥಾನ ಪುಣೆ ವಿಭಾಗದ ಮುಖ್ಯಸ್ಥರಾದ ಕೆಮ್ತೂರು…
ಬಾರ್ಕೂರು ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಗಣೇಶ್ ಶೆಟ್ಟಿ ಬಿ, ಕಾರ್ಯದರ್ಶಿಯಾಗಿ ಹೆಚ್ ಅಜಿತ್ ಕುಮಾರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳಾಗಿ ಯು ಕೆ ವಾಸುದೇವ್ ಶೆಟ್ಟಿ, ಆನಂದ ಶೆಟ್ಟಿ, ಕೆ ಬಾಬು ನಾಯಕ್, ಹರೀಶ್ ಕುಂದರ್, ಆರ್ ರತ್ನಾಕರ್ ಶೆಟ್ಟಿ, ಗಣೇಶ್ ಆಚಾರ್ಯ, ರಾಜು ಪೂಜಾರಿ, ಸುಧಾಕರ್ ರಾವ್, ಕಿಶೋರ್ ಶೆಟ್ಟಿ, ಜಯಶ್ರೀ ಶೆಟ್ಟಿ, ಶ್ರೀನಿವಾಸ್ ಶೆಟ್ಟಿಗಾರ್, ಸತೀಶ್ ಲಿಮಿನ್, ಡಾ. ಸುರೇಶ್ ಶೆಟ್ಟಿ, ಪ್ರಕಾಶ್ ತಂತ್ರಿ, ಎ ರತ್ನಾಕರ್ ಶೆಟ್ಟಿ, ರತ್ನಾಕರ್ ಶೆಟ್ಟಿ ಬಿ, ಸೀತಾರಾಮ್ ಎಸ್ ಆಯ್ಕೆಯಾಗಿದ್ದಾರೆ. ಯುವ ಸಂಘಟಕರಿಗೆ ಸಂಸ್ಥೆಯ ಹೊಣೆ : ಗಣೇಶ್ ಶೆಟ್ಟಿ ಅವರು ಹಲಸು ಮೇಳ ಸೇರಿದಂತೆ ಅನೇಕ ಕಾರ್ಯಕ್ರಮ ಆಯೋಜನೆ ಮೂಲಕ ಕರಾವಳಿಯಲ್ಲಿ ತಮ್ಮದೇ ಹೆಸರು ಹೊಂದಿದ್ದು, ಸ್ವದೇಶಿ ಆಯುರ್ವೇದ ಸಂಸ್ಥೆಯ ಮಾಲೀಕರಾಗಿ, ಸದ್ಗುರು ಆಯುರ್ವೇದ ಸಂಸ್ಥೆಯ ಕರಾವಳಿ ಮುಖ್ಯಸ್ಥರಾಗಿ, ನಮ್ಮೂರ್ ಬಾರ್ಕೂರು ಸಂಘಟಕರಾಗಿ, ಬೆಣ್ಣೆ ಕುದ್ರು ಗಣೇಶೋತ್ಸವದ ಅಧ್ಯಕ್ಷರಾಗಿ, ಯುವ ಉದ್ಯಮಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾರ್ಯದರ್ಶಿಯಾಗಿರುವ ಹೆಚ್ ಅಜಿತ್ ಕುಮಾರ್…
ಪ್ರೋ ನರೇಂದ್ರ ಎಲ್ ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸಂಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ ಮೂಡುಬಿದಿರೆ: ಮೂಲತಃ ಕೃಷಿ ಕುಟುಂಬದಿಂದ ಬಂದ ಪ್ರೋ ನರೇಂದ್ರ ನಾಯಕ್ರು ಶೈಕ್ಷಣಿಕ ಕ್ಷೇತ್ರದಲ್ಲೂ ಕೃಷಿಯ ಮೂಲಸತ್ವಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶೈಕ್ಷಣಿಕ ಕೃಷಿಕ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ(ಕುಪ್ಮಾ) ಅಧ್ಯಕ್ಷ ಡಾ ಎಂ ಮೋಹನ ಆಳ್ವ ನುಡಿದರು. ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಮೂಡುಬಿದಿರೆಯ ಆಳ್ವಾಸ್ನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಕಲಾ ಪ್ರೇಮಿ, ಶಿಕ್ಷಣ ತಜ್ಞ ಪ್ರೋ ನರೇಂದ್ರ ಎಲ್ ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸಂಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಸಾಧನೆಯಿಂದ ಪ್ರೇರೆಪಿತರಾಗೋಣ ಒಬ್ಬ ಕೃಷಿಕನಲ್ಲಿರುವ ಎಲ್ಲಾ ಮೂಲ ಗುಣಗಳನ್ನು ತಾನು ಸ್ಥಾಪಿಸಿರುವ ಎಕ್ಸಪರ್ಟ್ ಕಾಲೇಜಿನಲ್ಲಿ ಆಳವಡಿಸಿಕೊಳ್ಳಲಾಗಿದೆ. ಹಚ್ಚ ಹಸಿರಿನ ಪ್ರಕೃತಿ…
ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 6 ವಿದೇಶ ಗಣ್ಯರು ಸೇರಿದಂತೆ 60 ಸಾಧಕರಿಗೆ 2024 ರ ಸಾಲಿನ 49 ನೇಯ ವಾರ್ಷಿಕ ‘ಆರ್ಯಭಟ ಅಂತರ್ ರಾಷ್ಟ್ರೀಯ ಪ್ರಶಸ್ತಿ’ಯನ್ನು ಪ್ರಕಟಿಸಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಉಚ್ಚನ್ಯಾಯಾಲಯದ ಗೌರವಾನ್ವಿತ ನಿವೃತ್ತ ನ್ಯಾಯಮೂರ್ತಿಗಳಾದ ಡಾ| ಹೆಚ್.ಬಿ.ಪ್ರಭಾಕರ ಶಾಸ್ತ್ರಿಯವರು ನೆರವೇರಿಸಲಿದ್ದು, ಮುಖ್ಯ ಅಥಿತಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ| ಮಹೇಶ್ ಜೋಶಿಯವರು, ಖ್ಯಾತ ಚಲನಚಿತ್ರ ನಿರ್ದೇಶಕರಾದ ಡಾ. ಎಸ್.ನಾರಾಯಣ್ ರವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಆರ್ಯಭಟ ಸಂಸ್ಥೆಯ ಸಂಸ್ಥಾಪಕರಾದ ಡಾ. ಹೆಚ್.ಎಲ್.ಎನ್.ರಾವ್ ರವರು ವಹಿಸಲಿದ್ದಾರೆ. ಕಾನೂನು ಮತ್ತು ನ್ಯಾಯಾಂಗ ವಿಭಾಗದಿಂದ ಸಿ.ಕೆ. ವಿರೇಶ್ಕುಮಾರ್, ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ರಕ್ಷಿತ್ ಶೆಟ್ಟಿ, ಪತ್ರಕರ್ತರಾದ ವೈ.ಎಸ್.ಎಲ್.ಸ್ವಾಮಿ. ಸರ್ಕಲ್ ಇನ್ಸ್ಪೆಕ್ಟರ್ ಆರ್.ಪಿ.ಅನಿಲ್, ಅಬುಧಾಬಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಿತ್ರಂಪಾಡಿ ಜಯರಾಂ ರೈ, ಕತಾರ್ನಿಂದ ಅನಿಲ್ ಚಂದ್ರಶೇಖರ್ ಬಾಸಗಿ, ಲಂಡನ್ನಿಂದ ಡಾ. ಸತ್ಯವತಿ ಮೂರ್ತಿ, ಅಮೇರಿಕಾದಿಂದ ಪ್ರದ್ಯುಮ್ನ ಕಶ್ಯಪ್, ಕೃಷ್ಣ ಆದೋನಿ ಸೇರಿದಂತೆ…
ವ್ಯಕ್ತಿಯ ಬದುಕು ಮತ್ತು ಸಾಧನೆಗಳನ್ನು ವಿವರಿಸುವ ಕೃತಿಗಳಲ್ಲಿ ಎರಡು ವಿಧಗಳಿವೆ. ೧. ಆತ್ಮ ಕಥನ ೨. ಜೀವನ ಚರಿತ್ರೆ. ಲೇಖಕನೇ ತನ್ನ ಹುಟ್ಟು ಶಿಕ್ಷಣ ಉದ್ಯೋಗ ಸಾಧನೆಗಳನ್ನು ನಾನು, ನನ್ನದು ಎಂದು ಮಂಡಿಸುತ್ತಾ ಬರೆದರೆ ಅದು ಆತ್ಮಕಥನವಾಗುತ್ತದೆ. ಒಬ್ಬ ಸಾಧಕನ ಬಗ್ಗೆ ಮತ್ತೊಬ್ಬ ಲೇಖಕ ಬರೆದರೆ ಅದು ಜೀವನ ಚರಿತ್ರೆಯಾಗುತ್ತದೆ. ಈ ಬಗೆಯ ರಚನೆಗಳ ತುಲನೆಗೆ ನಾನಿಲ್ಲಿ ಹೋಗುವುದಿಲ್ಲ. ನಾವು ಗಮನಿಸಬೇಕಾದ ಒಂದು ಮುಖ್ಯ ಅಂಶವನ್ನು ಹೇಳುತ್ತೇನೆ. ಆತ್ಮ ಕಥನ ಪದವನ್ನು ಗಮನಿಸಿ. ದೇಹದ ಕಥನ ಎಂದು ಕರೆಯುವುದಿಲ್ಲ, ಬದುಕಿನ ಕಥನ ಎಂದು ಹೇಳುವುದಿಲ್ಲ, ದೇಹ ಬದುಕಿನ ವಿವರಗಳೆಲ್ಲವನ್ನು ಒಳಗೊಂಡಿದ್ದರೂ ಕೂಡ . ಆತ್ಮ ಕಥನಗಳಲ್ಲಿ ಆತ್ಮ ಸಾಕ್ಷಿ ಮುಖ್ಯವಾಗಿರುತ್ತದೆ ಎಂಬ ಕಾರಣಕ್ಕೆ. ಲೇಖಕ ಹೇಳಿದ್ದಕ್ಕೆ ಅವನ ಆತ್ಮವೇ ಸಾಕ್ಷಿ, ಬೇರೆ ಸಾಕ್ಷಿ ಇಲ್ಲ, ಕೇಳಬೇಕಾಗಿಲ್ಲ. ಜೀವನ ಚರಿತ್ರೆ ಧ್ವನಿಸುವ ಅರ್ಥ ತುಸು ಬೇರೆ ಇರುತ್ತದೆ. ಆತ್ಮಕ್ಕೆ ನಾಶ ಇಲ್ಲ, ಸತ್ಯವನ್ನಲ್ಲದೆ ಸುಳ್ಳು ಹೇಳುವುದಿಲ್ಲ. ಎದೆ ಮುಟ್ಟಿ ಹೇಳುವ ಸತ್ಯ ಅದು.…
ಪ್ರತಿಯೊಬ್ಬರೂ ಯೋಧರಂತೆ ಜೀವನದಲ್ಲಿ ಶಿಸ್ತು, ಯೋಧನ ಮನಃಸ್ಥಿತಿಯನ್ನು ಬೆಳೆಸಿಕೊಂಡು ದೇಶಕ್ಕಾಗಿ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡು ಅಭಿವೃದ್ಧಿಯಲ್ಲಿ ಕೈ ಜೋಡಿಸುವುದು ಯೋಗ ವಿತ್ ಯೋಧ ಪರಿಕಲ್ಪನೆಯ ಉದ್ದೇಶವಾಗಿದೆ ಎಂದು ದ.ಕ. ಸಂಸದ ಬ್ರಿಜೇಶ್ ಚೌಟ ಹೇಳಿದರು. ಸಸಿಹಿತ್ಲುವಿನಲ್ಲಿ ಆಯೋಜಿಸಲಾದ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ಸಹಕಾರದಲ್ಲಿ ಹಂತ ಹಂತವಾಗಿ ಬೀಚ್ ಅಭಿವೃದ್ಧಿಯ ನೀಲಿ ನಕಾಶೆ ರೂಪಿಸಲಾಗುವುದು. ನವಯುಗ ನವಪಥ ಪರಿಕಲ್ಪನೆಯೊಂದಿಗೆ ಮುಂದಿನ ದಿನದಲ್ಲಿ ದ.ಕ. ಜಿಲ್ಲೆಯ ಅಭಿವೃದ್ಧಿಯ ಪರಿಕಲ್ಪನೆ ನನ್ನದಾಗಿದೆ. ಪ್ರಥಮ ಅಂಗವಾಗಿ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಕೇಂದ್ರವಾಗಿ ಸಸಿಹಿತ್ಲು ಬೀಚ್ ಅನ್ನು ರೂಪಿಸುವ ನಿಟ್ಟಿನಲ್ಲಿ “ಯೋಗ ವಿದ್ ಯೋಧ’ ಹೆಸರಲ್ಲಿ ಯೋಗ ದಿನವನ್ನು ಇಲ್ಲಿ ಆಚರಿಸಲಾಗಿದೆ ಎಂದರು. ನಿವೃತ್ತ ಯೋಧರ ತಂಡ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು, ಎನ್ನೆಸ್ಸೆಸ್ ತಂಡ, ಕಂಬಳ ಓಟದ ಸುದರ್ಶನ್ ದೋಟ, ವಂದಿತ್ ಶೆಟ್ಟಿ ಬಂಬ್ರಾಣ, ಯೋಗ ಪಟು ಮೈತ್ರಿ ಮಲ್ಲಿ, ಅತ್ಲೆಟ್ ವಿಕಾಸ್ ಪುತ್ರನ್, ಸರ್ಫಿಂಗ್ ಫೌಂಡೇಷನ್ನ ಗೌರವ್ ಹೆಗ್ಡೆ, ಪ್ರವಾಸೋದ್ಯಮ ಇಲಾಖೆಯ…