Author: admin
ಹಳೆಯ ತಲೆಮಾರಿನ ಹಿರಿಯ ಯಕ್ಷಗಾನ ಅರ್ಥಧಾರಿ ದಿ| ಎ.ಕೆ. ನಾರಾಯಣ ಶೆಟ್ಟಿ ಫರಂಗಿಪೇಟೆ ಅವರ ಧರ್ಮಪತ್ನಿ ಶ್ರೀಮತಿ ಕಾವೇರಿ ಎನ್. ಶೆಟ್ಟಿಯವರು ವಯೋ ಸಹಜ ಅನಾರೋಗ್ಯದಿಂದ ಅಕ್ಟೋಬರ್ 18ರಂದು ಬಜಪೆಯ ತಮ್ಮ ಮಗಳ ಮನೆಯಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೂಲತಃ ಪೆರುವಾಯಿ ಗುತ್ತು ಮನೆತನದವರಾದ ಕಾವೇರಿ ಅವರಿಗೆ ಎರಡು ಗಂಡು ಹಾಗೂ ಆರು ಮಂದಿ ಹೆಣ್ಣು ಮಕ್ಕಳು. ಪತಿಯ ಸೋದರಳಿಯ ಮಹೇಶ್ ಮೋಟಾರ್ಸ್ ಮಾಲಕ ಎ.ಕೆ. ಜಯರಾಮ ಶೇಖ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. ಜಯರಾಮ ಶೇಖ ಅವರು ತಮ್ಮ ಸೋದರ ಮಾವನ ನೆನಪಿಗಾಗಿ ಯಕ್ಷಾಂಗಣ ಮಂಗಳೂರು ಆಶ್ರಯದಲ್ಲಿ ಕಳೆದ 12 ವರ್ಷಗಳಿಂದ ನಡೆಸುತ್ತಿದ್ದ ‘ದಿ.ಎ.ಕೆ ನಾರಾಯಣಶೆಟ್ಟಿ ಸಂಸ್ಮರಣ ಕಾರ್ಯಕ್ರಮ’ದಲ್ಲಿ ಉತ್ಕಟ ಕಲಾಪ್ರೇಮಿಯಾಗಿದ್ದ ಕಾವೇರಿ ಶೆಟ್ಟಿಯವರು ಪ್ರತಿವರ್ಷ ತಪ್ಪದೆ ಭಾಗವಹಿಸುತ್ತಿದ್ದರು. ಶನಿವಾರ ಬಜಪೆಯಲ್ಲಿ ಜರಗಿದ ಅವರ ಅಂತ್ಯವಿಧಿಯಲ್ಲಿ ಊರವರು ಹಾಗೂ ಬಂಧುಗಳು ಅಪಾರ ಸಂಖ್ಯೆಯಲ್ಲಿ ಸೇರಿ ಚರಮಾಂಜಲಿ ಅರ್ಪಿಸಿದರು.
ಕಾರ್ಕಳ ರೋಟರಿ ಆ್ಯನ್ಸ್ ವತಿಯಿಂದ ರೋಟರಿ ಬಾಲ ಭವನದಲ್ಲಿ ಬಳೆ ಇಡುವ ಕಾರ್ಯಕ್ರಮ ಹಾಗೂ ನವರಾತ್ರಿ ನವರಂಗೋತ್ಸವ ಸಡಗರದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಆ್ಯನ್ಸ್ ಸದಸ್ಯೆಯರು ಉತ್ಸಾಹದಿಂದ ಭಾಗವಹಿಸಿ, ಸಾಂಸ್ಕೃತಿಕ ಪ್ರತಿಭೆ ಮತ್ತು ಸೃಜನಶೀಲತೆಯ ಪ್ರದರ್ಶನ ನೀಡಿದರು. ಮುಖ್ಯ ಅತಿಥಿಯಾಗಿ ಶ್ರೀಮತಿ ಶೈಲಜಾ ಭಟ್ (ಮಾತಾಜಿ, ಯು.ಎಸ್. ನಾಯಕ್ ಹೈಸ್ಕೂಲ್, ಪಟ್ಲ) ಅವರು ಉಪಸ್ಥಿತರಿದ್ದು, ಮಹಿಳೆಯರ ಸಕ್ರಿಯ ಪಾತ್ರ ಮತ್ತು ಸಾಮಾಜಿಕ ಬಾಂಧವ್ಯವನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ವಿಜಯ್ ಶ್ರೀ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಡಾ. ಆಶಾ ಹೆಗಡೆ ಅವರು ಸಂಪೂರ್ಣ ಬಳೆಯ ಪ್ರಾಯೋಜಕತ್ವ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಜ್ಯೋತಿ ಪದ್ಮನಾಭ ಅವರು ಸುಂದರವಾಗಿ ನಿರ್ವಹಿಸಿದರು. ಭಾಗವಹಿಸಿದ ಎಲ್ಲರಿಗೂ ಬಹುಮಾನಗಳನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ರೋಟರಿ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಚೇತನ್ ನಾಯಕ್, ಕೋಶಾಧಿಕಾರಿ ಹರ್ಷಿಣಿ ವಿಜಯರಾಜ್ ಶೆಟ್ಟಿ ಹಾಗೂ ಎಲ್ಲಾ ರೋಟರಿ ಸದಸ್ಯರು, ಆ್ಯನ್ಸ್ ಚೇರ್ಮನ್ ವೃಂದಾ ಶೆಟ್ಟಿ, ಆ್ಯನ್ಸ್ ಅಧ್ಯಕ್ಷೆ ಜಯಂತಿ…
ನಾವಿಂದು ಬದುಕುತ್ತಿರುವುದು ಅತಿರಂಜಿತವಾದ ಮಾಧ್ಯಮ ಯುಗದಲ್ಲಿ. ಡಿಜಿಟಲ್ ಮಾಧ್ಯಮಗಳು ತಮ್ಮ ಕದಂಬ ಬಾಹುಗಳನ್ನು ವಿಸ್ತರಿಸಿದ ರೀತಿಯನ್ನು ನೋಡಿದರೆ ಸಾಕು; ಅವು ಒಕ್ಟೋಪಸ್ ಮಾದರಿಯಲ್ಲಿ ಎಲ್ಲಾ ಕ್ಷೇತ್ರಗಳನ್ನು ವ್ಯಾಪಿಸಿ ಬಿಟ್ಟಿವೆ. ಎಲೆಕ್ಟ್ರಾನಿಕ್ ತಂತ್ರಜ್ಞಾನವು ಮುದ್ರಣ ಮಾಧ್ಯಮಗಳನ್ನು ಹಿಂದಿಕ್ಕಿ ವೇಗವಾಗಿ ಬೆಳೆಯುತ್ತಿರುವುದು ಅದ್ಭುತ ಅನಿಸಿದರೂ, ಅಷ್ಟೇ ಆತಂಕ ಹುಟ್ಟಿಸುತ್ತಿರುವುದು ಸುಳ್ಳಲ್ಲ. ದಿನ ಬೆಳಗಾದರೆ ಜಾಗತಿಕ ರಂಗದ ಸೂಕ್ಷ್ಮಾತಿ ಸೂಕ್ಷ್ಮ ವಿದ್ಯಮಾನಗಳು ಮಾಧ್ಯಮಗಳಲ್ಲಿ ಬಟಾ ಬಯಲಾಗುತ್ತವೆ. ಭಾಷೆ, ಸಂಸ್ಕೃತಿ –ಸಂಪ್ರದಾಯಗಳನ್ನು ಉಳಿಸುವ ಅಥವಾ ಅಳಿಸುವ ದಾಯಭಾಗಿತ್ವವೂ ಈ ಮಾಧ್ಯಮಗಳ ಮೇಲಿವೆ. ಇಂತಹ ಒಂದು ಸಂಕ್ರಮಣ ಕಾಲಘಟ್ಟದಲ್ಲಿ ತುಳುನಾಡಿಗರ ಆಶಾಕಿರಣವಾಗಿ ಮಂಗಳೂರಿನಲ್ಲಿ ಹುಟ್ಟುಪಡೆದ ತುಳುಭಾಷೆಯ ಪ್ರಪ್ರಥಮ ಟಿ.ವಿ ವಾರ್ತಾವಾಹಿನಿ ‘ನಮ್ಮಕುಡ್ಲ’. ತುಳು ಭಾಷೆ ಅಳಿವಿನಂಚಿಗೆ ಹೋಗುತ್ತಿದೆ ಎಂಬ ಬೇಜವಾಬ್ದಾರಿಯ ಹೇಳಿಕೆಗಳ ನಡುವೆಯೇ ತುಳು ಭಾಷೆಯಲ್ಲಿ ಮತ್ತು ಅದು ಆಡುನುಡಿಯಾಗಿರುವ ಈ ನಾಡಿನಲ್ಲಿ ಏನಿದೆ ಎಂಬುದನ್ನು ನಮ್ಮಕುಡ್ಲ ಹೇಳುತ್ತಾ ಬಂದಿದೆ. ಮುಂಬಯಿಯಲ್ಲಿ ಉದ್ಯಮಿಯಾಗಿದ್ದ ಬಿ.ಪಿ ಕರ್ಕೇರ ಮತ್ತು ಲಕ್ಷ್ಮೀ ಕರ್ಕೇರ ದಂಪತಿಯ ಮಕ್ಕಳು ಹರೀಶ್, ಸುರೇಶ್, ಮೋಹನ್, ಲೀಲಾಕ್ಷ…
ಕ್ರಿಯೇಟಿವ್ ಕಾಲೇಜಿನಲ್ಲಿ ರೋಟರಿ ಇಂಟರಾಕ್ಟ್ ಕ್ಲಬ್ನ ನೂತನ ಕ್ಲಬ್ ನ ಇನ್ಸ್ಟಾಲೇಶನ್ ಕಾರ್ಯಕ್ರಮ ನೆರವೇರಿತು. ಅತಿಥಿಯಾಗಿ ಆಗಮಿಸಿದ ರೋಟರಿ ಕ್ಲಬ್ ಕಾರ್ಕಳದ ಮಾಜಿ ಅಧ್ಯಕ್ಷರು ಹಾಗೂ ಇಸ್ರೋ ವಿಜ್ಞಾನಿ ಜನಾರ್ಧನ್ ಇದ್ಯಾರವರು ದೀಪ ಪ್ರಜ್ವಲಿಸಿ ಸಮಾರಂಭವನ್ನು ಉದ್ಘಾಟಿಸಿದರು. ನಂತರ ಅವರು ಇಂಟರಾಕ್ಟ್ ಚಟುವಟಿಕೆಗಳ ಮಹತ್ವ ಮತ್ತು ವಿದ್ಯಾರ್ಥಿಗಳ ಸಮಾಜಮುಖಿ ಬೆಳವಣಿಗೆಯ ಕುರಿತು ಮಾತನಾಡಿದರು. ನೂತನ ಇಂಟರಾಕ್ಟ್ ಅಧ್ಯಕ್ಷರಾಗಿ ಎಚ್.ಎಂ. ಸಮೃದ್ಧ್ ಹಾಗೂ ಕಾರ್ಯದರ್ಶಿಯಾಗಿ ದಿಗಂತ್ ಅಧಿಕಾರ ಸ್ವೀಕರಿಸಿದರು. ತಮ್ಮ ತಂಡದ ಸದಸ್ಯರನ್ನು ಅವರು ಈ ಸಂದರ್ಭದಲ್ಲಿ ಪರಿಚಯಿಸಿದರು. ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಅವರು ನೂತನ ತಂಡದ ಪದಗ್ರಹಣ ನೆರವೇರಿಸಿ, ಹೊಸ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರಿಗೆ ಶುಭ ಹಾರೈಕೆಗಳನ್ನು ನೀಡಿದರು. ಅವರು “ಇಂಟರಾಕ್ಟ್ ಕ್ಲಬ್ನಲ್ಲಿ ಭಾಗಿಯಾಗುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಲು ಅವಕಾಶ ಸಿಗುತ್ತದೆ” ಎಂದು ಹೇಳಿದರು. ಇಂಟರಾಕ್ಟ್ ಚೇರ್ಮನ್ ಬಾಲಕೃಷ್ಣ ದೇವಾಡಿಗ ಅವರು ಇಂಟೆರೆಕ್ಟ್ ಸಕಾರಾತ್ಮಕ ಬಳಕೆ ಹಾಗೂ ಅದರ…
ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನ ಆಶ್ರಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಂಗಳೂರು ವಲಯ ವಾಲಿಬಾಲ್ ಟೂರ್ನಮೆಂಟ್ನ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ಸ್ ಆದರೆ, ಮಹಿಳೆಯರ ವಿಭಾಗದಲ್ಲಿ ಮಂಗಳೂರಿನ ಫಾದರ್ ಮುಲ್ರ್ಸ್ ನರ್ಸಿಂಗ್ ಕಾಲೇಜು ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷ ವಿಭಾಗ ವಿಜೇತರು: ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಮೂಡುಬಿದಿರೆ. ರನ್ನರ್ : ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ಮೂಡುಬಿದಿರೆ. ಮೊದಲ ರನ್ನರ್- ಅಪ್ : ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು, ಮೂಡುಬಿದಿರೆ. ಎರಡನೇ ರನ್ನರ್-ಅಪ್: ಕೆ.ವಿ.ಜಿ ಮೆಡಿಕಲ್ ಕಾಲೇಜು, ಸುಳ್ಯ ಮಹಿಳಾ ವಿಭಾಗ, ವಿಜೇತರು : ಫಾದರ್ ಮುಲ್ಲರ್ಸ್ ನರ್ಸಿಂಗ್ ಕಾಲೇಜು, ಮಂಗಳೂರು. ರನ್ನರ್ : ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು, ಮೂಡುಬಿದಿರೆ. ಮೊದಲ ರನ್ನರ್- ಅಪ್ : ಎಂ.ವಿ ಶೆಟ್ಟಿ ಫಿಸಿಯೋಥೆರಪಿ ಕಾಲೇಜು, ಮಂಗಳೂರು. ಎರಡನೇ ರನ್ನರ್- ಅಪ್ : ಕೊಡಗು ಮೆಡಿಕಲ್ ಕಾಲೇಜು, ಮಡಿಕೇರಿ.…
ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ ನ (ಎನ್ಸಿಸಿ) 18 ಕರ್ನಾಟಕ ಬೆಟಾಲಿಯಾನ್ನಿಂದ ಆಳ್ವಾಸ್ನ ವಿದ್ಯಾಗಿರಿಯ ಆವರಣದಲ್ಲಿ 10 ದಿನಗಳ ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ನಡೆಯಿತು. ಮಂಗಳೂರಿನ ಎನ್ಸಿಸಿ ಸಮೂಹದ ಮುಖ್ಯ ಕಛೇರಿಯ ವ್ಯಾಪ್ತಿಗೊಳಪಟ್ಟ ವಿವಿಧ ಬ್ಯಾಟಾಲಿಯನ್ಗಳಿಂದ 600 ಎನ್ಸಿಸಿ ಕೆಡೆಟ್ಗಳು ಭಾಗವಹಿಸಿದ್ದರು. ಕೆಡೆಟ್ಗಳಿಗೆ ಫೈರಿಂಗ್, ಬ್ಯಾಟಲ್ ಕ್ರಾಫ್ಟ್, ಡ್ರಿಲ್, ನಕ್ಷೆ ಓದುವಿಕೆ, ರೈಫಲ್ನ ನಿರ್ವಹಣೆ, ಫೀಲ್ಡ್ ಕ್ರಾಫ್ಟ್ ಮತ್ತು ಮಿಲಿಟರಿ ವಿಷಯಗಳಲ್ಲಿ ತರಬೇತಿ ನೀಡಲಾಯಿತು. ಮಂಗಳೂರಿನ ಎನ್ಸಿಸಿ ಸಮೂಹದ ಮುಖ್ಯ ಕಛೇರಿಯಿಂದ ಒಟ್ಟು 80 ಕೆಡೆಟ್ಗಳು ಬೆಂಗಳೂರಿನಲ್ಲಿ ನಡೆಯುವ ಐಜಿಸಿ- ಆರ್ಡಿಸಿ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಕಮಾಂಡಿಂಗ್ ಆಫೀಸರ್ ಲೆಫ್ಟಿನೆಂಟ್ ಕರ್ನಲ್ ರೋಹಿತ್ ರೈ ಮಾತನಾಡಿ, ಇಷ್ಟು ದೊಡ್ಡ ಸಂಖ್ಯೆಯ ಕ್ಯಾಂಪ್ ಒಂದೇ ಆವರಣದಲ್ಲಿ ಬಹಳ ವ್ಯವಸ್ಥಿತವಾಗಿ ನೆರವೇರಲು ಸಹಾಯ ಮಾಡಿದ ಆಳ್ವಾಸ್ ಸಂಸ್ಥೆಯ ಅಧ್ಯಕ್ಷರು, ಟ್ರಸ್ಟಿ ಹಾಗೂ ಸಹಕರಿಸಿದ ಸರ್ವರನ್ನು ಸ್ಮರಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಇಂತಹ ಶಿಬಿರಗಳು ಯುವಕರಲ್ಲಿ ದೇಶಭಕ್ತಿ, ಶಿಸ್ತು ಮತ್ತು ಸೇವಾಭಾವವನ್ನು…
ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡು ಶ್ರೀ ಸಂಸ್ಥಾನದ ದಶಮ ಸಂಭ್ರಮದ ಸಂಕಲ್ಪ ‘ಬಂಟ ಸಂಸ್ಕೃತಿ ಪರಂಪರೆ ಅನಾವರಣ’ ದಕ್ಷಿಣ ಕನ್ನಡ ಜಿಲ್ಲಾ ಮಹಾಮಂಡಲದ ಪದಗ್ರಹಣ ಸಮಾರಂಭ ಅಕ್ಟೋಬರ್ 19ರಂದು ಭಾನುವಾರ ಸಂಜೆ 3 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿರುವ ವಿ.ಕೆ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಂಟ್ಸ್ ಹಾಸ್ಟೆಲ್ ನಲ್ಲಿರುವ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆಯಿತು. ಶ್ರೀ ಬಾರ್ಕೂರು ಮಹಾಸಂಸ್ಥಾನ ಟ್ರಸ್ಟಿನ ಕಾರ್ಯಾಧ್ಯಕ್ಷ ಡಾ. ಎಂ ಮೋಹನ್ ಆಳ್ವ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಜಿಲ್ಲಾ ಮಹಾಮಂಡಲ, ತಾಲೂಕು ಮಂಡಲ ಸಹಿತ ಎಂಟು ಮಂಡಲಗಳ ಪದಗ್ರಹಣ ನಡೆಯಲಿದ್ದು, ಜವಾಬ್ದಾರಿಗಳನ್ನು ಹಂಚಿಕೊಡಲಾಯಿತು. ಜಿಲ್ಲಾ ಮಹಾಮಂಡಲದ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ದ.ಕ ಮಹಾಮಂಡಳ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್, ಜೆಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ, ಉದ್ಯಮಿ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಬಂಟ್ವಾಳ ಬಂಟರ ಸಂಘದ ಕೋಶಾಧಿಕಾರಿ ಲೋಕೇಶ್ ಶೆಟ್ಟಿ, ಉಮೇಶ್ ರೈ ಮೇಗಿನಮನೆ,…
ಮಾಜಿ ಯೋಧ ಗರೋಡಿ ತಿಮ್ಮಪ್ಪ ಆಳ್ವ ಅವರು ಗುರುವಾರ ಸಂಜೆ ಮಂಗಳೂರಿನ ಕುಂಟಿಕಾನ ಬಳಿಯ ಲೋಹಿತ್ ನಗರದ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ ಪುತ್ರಿಯನ್ನು ಅಗಲಿದ್ದಾರೆ. ಅವರ ಇಚ್ಛೆಯಂತೆ ದೇಹವನ್ನು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾನ ನೀಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆವರು ಭೂಸೇನೆಯಲ್ಲಿ ಸೇವೆ ಸಲ್ಲಿಸಿದ್ದು, 1971 ರ ಭಾರತ ಪಾಕ್ ಯುದ್ಧ ಸಂದರ್ಭ ಹೆಲಿಕಾಪ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸಿ ಬದುಕಿದ್ದರು. ಬಳಿಕ 10 ವರ್ಷ ಕಾಲ ದೇಶ ಸೇವೆಯಲ್ಲಿ ತೊಡಗಿದ್ದರು. ಸೇನೆಯಿಂದ ಸ್ವಯಂ ನಿವೃತ್ತರಾಗಿ ಮಂಗಳೂರಿನಲ್ಲಿ ಫುಡ್ ಇನ್ಸ್ ಪೆಕ್ಟರ್ ಆಗಿದ್ದರು. ಬೆಳ್ತಂಗಡಿ, ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿ 2000 ರಲ್ಲಿ ನಿವೃತ್ತರಾಗಿದ್ದರು. ಇತ್ತೀಚೆಗೆ ಅವರ ಅನುಭವ ಕಥನ ‘ಗರೋಡಿ ಮನೆಯಿಂದ ಸೇನಾ ಗರಡಿಗೆ’ ಪ್ರಕಟವಾಗಿತ್ತು. ಪಾಕ್ ವಿರುದ್ಧದ ಮೂರೂ ಯುದ್ಧದಲ್ಲಿ ಭಾಗವಹಿಸಿದ್ದ ಹಿರಿಮೆ ಜಿ.ಟಿ ಆಳ್ವ ಅವರದ್ದು. ಡೆಹ್ರಾಡೂನ್,…
ಇದೊಂದು ಚೋಟುದ್ದದ, ರುಚಿಕರ ಪಚ್ಚೆ ಬಾಳೆಹಣ್ಣಿನ ಕತೆ. ಆಗಸ್ಟ್ 17 ರಂದು ಗುರುವಾಯೂರಿನ ಶ್ರೀಕೃಷ್ಣನ ದರ್ಶನಕಾಂಕ್ಷಿಯಾಗಿ, ಮಗ, ಮಡದಿಯೊಂದಿಗೆ ಹೋಗಿದ್ದೆ. ಬೆಳಿಗ್ಗೆ ಬೇಗ ನಾಲ್ಕರಿಂದ ಆರೂವರೆವರೆಗೆ ಹಿರಿಯ ನಾಗರಿಕರಿಗೆ ಹಾಗೂ ಅವರ ಜೊತೆಗಾರರಿಬ್ಬರಿಗೆ ನೇರ ಪ್ರವೇಶ ಎಂದು ಬರೆದಿತ್ತು ಜಾಲತಾಣದಲ್ಲಿ. ಹಾಗಾಗಿ ಬೇಗ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಸ್ನಾನಾದಿ ಆಹ್ನಿಕಗಳನ್ನು ತೀರಿಸಿ, ಮಡಿಯುಟ್ಟು ಮೂವರೂ ದೇವಸ್ಥಾನಕ್ಕೆ ಧಾವಿಸಿದೆವು. ಅಲ್ಲಿ ಹೋದರೆ, ಜಯ ವಿಜಯರು ತಡೆದು, ಆದಿತ್ಯವಾರ ಈ ವಿಶೇಷ ಸವಲತ್ತು ಹಿರಿಯ ನಾಗರಿಕರಿಗೆ ಇಲ್ಲ ಎಂದು ಹಿಂದೆ ಕಳುಹಿಸಿದರು. ಸಾಮಾನ್ಯ ದರ್ಶನ ಆಕಾಂಕ್ಷಿಗಳ ಏಳು ಸುತ್ತಿನ ಸಾಲು ನೋಡಿದರೆ, ಆ ದಿನ ದೇವಸ್ಥಾನದ ಗರ್ಭಗುಡಿಯ ತನಕ ಹೋಗಲು ನಾಲ್ಕಾರು ತಾಸು ಬೇಕು. ಅಳೆದೂ, ಸುರಿದೂ ಅರ್ಧ ಗಂಟೆ ಸರತಿ ಸಾಲಿನಲ್ಲಿ ನಿಂತು, ಪ್ರತಿಯೊಬ್ಬರೂ ಸಾವಿರ ರೂಪಾಯಿಯ ಪೂಜೆಯ ರಸೀತಿ ಪಡೆದು, ಇನ್ನೇನು ಒಳ ಹೋಗಬೇಕು ಎನ್ನುವಾಗ ಬಲಿ (ದೇವಸ್ಥಾನಕ್ಕೆ ಪ್ರದಕ್ಷಿಣೆ) ಆರಂಭವಾಯಿತು. ಕುಂಜರದ ಮೇಲೆ ಉತ್ಸವ ಮೂರ್ತಿಯನ್ನು ಹಿಡಿದುಕೊಂಡು, ಸಕಲ ವಾದ್ಯ…
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್ಗಳ ಅಂತರದಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಪಡೆಯಿತು. ವೈಯಕ್ತಿಕ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್ನ ರಾಹುಲ್, ಬೆಸ್ಟ್ ಸೆಟ್ಟರ್ ಪ್ರಶಸ್ತಿಯನ್ನು ಆಳ್ವಾಸ್ನ ಪುನೀತ್ ಹಾಗೂ ಬೆಸ್ಟ್ ಲಿಬ್ರೊ ಪ್ರಶಸ್ತಿಯನ್ನು ಆಳ್ವಾಸ್ನ ಮಂಜುನಾಥ್ ಪಡೆದರು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.














