Author: admin
ಗಣಿತನಗರ : ಒಬ್ಬ ವ್ಯಕ್ತಿಯ ಯಶಸ್ಸಿಗೆ, ಕನಸನ್ನು ನನಸು ಮಾಡಲು ಪರಿಸ್ಥಿತಿ ಮುಖ್ಯವಲ್ಲ ಮನಸ್ಥಿತಿ ಮುಖ್ಯ. ಸಕಾರಾತ್ಮ ಆಲೋಚನೆಗಳಿಗೆ ಸೋಲಿಲ್ಲ. ಯಾರಿಗೆ ಹೆತ್ತವರ ಆಲೋಚನೆಗಳು ಅರ್ಥವಾಗುತ್ತವೆಯೋ ಅಂತವರು ಎಂದೂ ಹಾದಿ ತಪ್ಪಲು ಸಾದ್ಯವಿಲ್ಲ ಎಂದು ಸ.ಪ.ಪೂ.ಕಾಲೇಜು ಸದಲಗ, ಚಿಕ್ಕೋಡಿ ಇಲ್ಲಿನ ಉಪನ್ಯಾಸಕ ಶ್ರೀ ವೀರೇಶ್ ಗದಿಗೆಪ್ಪಗೌಡ ಪಾಟೀಲ್ ನುಡಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-40ರಲ್ಲಿ “ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು. ಕನಸನ್ನು ನನಸು ಮಾಡಲು ಸಕಾರಾತ್ಮಕ ಆಲೋಚನೆ ಮುಖ್ಯ. ನಮ್ಮನ್ನು ತುಂಬಾ ಸುಲಭವಾಗಿ ಸೋಲಿಸುವ ಆಯುಧ ಭಯ. ನಮಗೆ ನಾವೇ ಪ್ರೇರಣೆಯನ್ನು ತುಂಬ ಬೇಕು ಎನ್ನುತ್ತಾ ಅನೇಕ ಮಹಾತ್ಮರ ಜೀವನ ಸಂದೇಶಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಶ್ರೀ ಅನಿಲ್ ಕುಮಾರ್ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲ ಶ್ರೀ ದಿನೇಶ್…
ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಅನ್ಸಿತ್ ಎ ಭಂಡಾರಿ, ಮನ್ವಿಶ್ ರಾವ್ ಮತ್ತು ಅಖಿಲ್ ಸಾಯಿ ಕೋಕ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯಾರಾದ ಮಾನಸ ವಿ ನಾಯಕ್, ಹರ್ಷಿತ ವಿ ನಾಯಕ್, ಆದ್ಯ ಎಸ್. ಪಡ್ರೆ, ಆರುಷಿ, ಪೂರ್ವಿ ಎಸ್. ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿ ವೇತನವನ್ನು ನೀಡುತ್ತಿರುವ ದಾನಿಗಳ ಆದರ್ಶವನ್ನು ಮೈಗೂಡಿಸಿಕೊಳ್ಳಿ. ಮುಂದೆ ಜೀವನದಲ್ಲಿ ನೀವು ಅವರಂತೆ ಶಿಕ್ಷಣಕ್ಕೆ ನೆರವು ನೀಡುವವರಂತಾಗಿ. ಟ್ರಸ್ಟಿನ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿಯವರ ನಿಸ್ವಾರ್ಥ ಸೇವೆಗೆ ಅಭಿನಂದನೆಗಳು ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿ “ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್” ವತಿಯಿಂದ ಎಸ್.ಕೆ.ಎಸ್ ಇನ್ಫ್ರಾ ಕಾರ್ಕಳ ಇವರ ಸಹಕಾರದೊಂದಿಗೆ ಹತ್ತನೇ ತರಗತಿ ಹಾಗೂ ಪಿಯುಸಿಯಲ್ಲಿ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹೆಬ್ರಿ ಪರಿಸರದ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಎಸ್.ಆರ್ ವಿದ್ಯಾಸಂಸ್ಥೆ ಹೆಬ್ರಿ ಇದರ ಅಧ್ಯಕ್ಷ ನಾಗರಾಜ ಶೆಟ್ಟಿ ಮಾತನಾಡುತ್ತಾ, ಕಷ್ಟಪಟ್ಟು ಕಲಿತ ಶಿಕ್ಷಣವು ನಮಗೆ ಅನೇಕ ಪಾಠಗಳನ್ನು ಕಲಿಸುತ್ತದೆ. ಸರಕಾರಿ ಶಾಲೆಗಳಲ್ಲಿ ಸಿಗುವ ಉತ್ತಮ ಶಿಕ್ಷಣವನ್ನು ಸದುಪಯೋಗಪಡಿಸಿಕೊಂಡು ಸಂಸ್ಕಾರಯುತ ನಾಗರೀಕರಾಗಿ ಎಂದು ಶುಭ ಹಾರೈಸಿದರು. ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹ ಸಂಸ್ಥಾಪಕ ಅಶ್ವತ್ ಎಸ್…
ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್ ನ ರೋಟರಿ ಗವರ್ನರ್ ರೋ. ರಾಮಕೃಷ್ಣ ಅವರು ಸುರತ್ಕಲ್ ಗೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಸುರತ್ಕಲ್ ನಲ್ಲಿರುವ ಅಭಿಷ್ ಕಟ್ಟಡದಲ್ಲಿರುವ ಚಾವಡಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು. ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್ ನ ಸಾಧನೆಯನ್ನು ಕೊಂಡಾಡಿದರು. ಇತ್ತೀಚೆಗೆ ನಡೆದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರೋಟರಿ ಕ್ಲಬ್ ಚಾಂಪ್ಯನ್ ಆಗಿರುವುದನ್ನು ಶ್ಲಾಘಿಸಿದರು. ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಬಾಳ ಜಗನ್ನಾಥ ಶೆಟ್ಟಿ ಹಾಗು ಕಟ್ಟಬೀಡು ಭಾಸ್ಕರ ರೈಯವರನ್ನು ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರನ್ನು ಸನ್ಮಾನಿಸಲಾಯಿತು. ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ರೋ. ರಾಮಕೃಷ್ಣ ಪಿ.ಕೆ, ಅಸಿಸ್ಟೆಂಟ್ ಗವರ್ನರ್ ಚಿನ್ನಗಿರಿ ಗೌಡ, ಸಂದೀಪ್ ರಾವ್ ಇಡ್ಯ, ಕ್ಲಬ್ಬಿನ ಅಧ್ಯಕ್ಷರಾದ ಸುಭೋದ್ ಕುಮಾರ್ ದಾಸ್, ಕಾರ್ಯದರ್ಶಿ ಕಿರಣ್ ಪ್ರಸಾದ್ ರೈ, ನವೀನ್ ಇಡ್ಯಾ, ಜಯಕುಮಾರ್ ಹಾಗೂ ಸುಧಾಕರ್ ಸಾಲ್ಯಾನ್ ಉಪಸ್ಥಿತರಿದ್ದರು. ಕೃತಿಕಾ ರೈ…
ಓನ್ಲಿ ಬಂಟ್ಸ್ ಆರ್ ಅಲ್ಲೋವ್ಡ್ ಫೇಸ್ಬುಕ್ ಬಳಗದ ಎಂಟನೇ ವಾರ್ಷಿಕೋತ್ಸವದ ಪ್ರಯುಕ್ತ ಸೆಪ್ಟೆಂಬರ್ 14 ರಂದು ಅಪರಾಹ್ನ 2.30 ರಿಂದ ಸಾಂತಾಕ್ರೂಜ್ ಬಿಲ್ಲವರ ಭವನದಲ್ಲಿ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ ಮಹಾಬಲ ಆಳ್ವ ರಚಿಸಿರುವ ‘ಜ್ವಾಲಾ ಮೋಹಿನಿ’ ಯಕ್ಷಗಾನ ಪ್ರಸಂಗವು ಗುರು ನಾರಾಯಣ ಯಕ್ಷಗಾನ ಮಂಡಳಿ ಸಾಂತಾಕ್ರೂಸ್ ಮುಂಬೈ ಇವರ ಸಂಯೋಜನೆಯಲ್ಲಿ ಪ್ರದರ್ಶನಗೊಳ್ಳಲಿದೆ. ಬಳಗದ ನಿರ್ವಾಹಕರಾದ ಪ್ರವೀಣ್ ಕಯ್ಯ, ಕಾಂತಿ ಶೆಟ್ಟಿ ಮುಂದಾಳತ್ವದಲ್ಲಿ ಕೂಟದ ಸರ್ವ ಸದಸ್ಯರ ಸಹಯೋಗದೊಂದಿಗೆ ನಡೆಯಲಿರುವ ಯಕ್ಷಗಾನ ಪ್ರದರ್ಶನದ ಹಿಮ್ಮೇಳ ಮುಮ್ಮೇಳದಲ್ಲಿ ನಗರದ ಪ್ರಸಿದ್ಧ ಹಾಗೂ ಪ್ರಬುದ್ಧ ಕಲಾವಿದರು ಭಾಗವಹಿಸಲಿದ್ದಾರೆ. ಸದಸ್ಯರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಬಳಗದ ಪರವಾಗಿ ನಿರ್ವಾಹಕರು ಮತ್ತು ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಡಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ 2025-26ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಶುಕ್ರವಾರ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪತ್ರಕರ್ತ ಧನಂಜಯ ಮೂಡಬಿದಿರೆ ಮಾತನಾಡಿ, “ಕೆಂಪು ಬಣ್ಣವನ್ನು ಸಾಮಾನ್ಯವಾಗಿ ಭೀಕರ, ಭಯಂಕರ, ರುದ್ರ ಎಂಬ ಅರ್ಥದಲ್ಲಿ ಕಾಣಲಾಗುತ್ತದಾದರೂ, ಅದು ಮುಗ್ದತೆಯ ಸಂಕೇತವೂ ಹೌದು. ಆ ಮುಗ್ದತೆಯೊಳಗೆ ಸೇವಾ ಮನೋಭಾವವನ್ನು ರಕ್ತಗತ ಮಾಡಿಕೊಂಡಿರುವುದೇ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆ,” ಎಂದರು. ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯವಾದ ಮಾನವೀಯತೆ, ನಿಷ್ಪಕ್ಷಪಾತತೆ, ತಟಸ್ಥತೆ, ಸ್ವಯಂಸೇವೆ, ಸ್ವಾತಂತ್ರ್ಯ, ಏಕತೆ, ಶಾಂತಿ-ಸ್ನೇಹ ಹಾಗೂ ಪ್ರಾಮಾಣಿಕತೆಗಳನ್ನು ಪ್ರತಿಯೊಬ್ಬ ಸದಸ್ಯರೂ ಪಾಲಿಸಬೇಕು ಎಂದು ಅವರು ಕರೆ ನೀಡಿದರು. ಪ್ರೀತಿ-ಸ್ನೇಹವನ್ನು ಉತ್ತೇಜಿಸುವ ಕಾರ್ಯಕ್ರಮಗಳ ಮೂಲಕ ಈ ಸಂಸ್ಥೆ ಜನಾನುರಾಗಿಯಾಗಿದೆ ಎಂದು ಹೇಳಿದರು. ಸಮಾಜದಲ್ಲಿ ಶಾಂತಿ ಮತ್ತು ಸಹಕಾರವನ್ನು ಕಾಪಾಡುವಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕಗಳು ಮಹತ್ವದ ಪಾತ್ರ ವಹಿಸುತ್ತಿವೆ. ಈ ಸಂಸ್ಥೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ನಾಗರಿಕರು, ಜವಾಬ್ದಾರಿ ಹೊಂದಿದ ನಾಯಕರು ಮತ್ತು ನಿಜವಾದ ಮಾನವೀಯತೆಯ ಸೇವಕರು…
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ), ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ 12 ಸೆಪ್ಟೆಂಬರ್ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಉದ್ಘಾಟಕರಾಗಿ ಆಗಮಿಸಿದ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸಂತೋಷ್ ಶೆಟ್ಟಿ ಇವರು ಮಾತನಾಡಿ ಸಮಾಜದ ಪ್ರಗತಿ ಆರೋಗ್ಯದ ಹಾದಿಯಲ್ಲೇ ಅಡಗಿದೆ. ಆರೋಗ್ಯದ ಅರಿವು ಬೆಳೆಯಲು ಜಾಗೃತಿ ಅತ್ಯವಶ್ಯಕ ಎಂದು ಕಿವಿಮಾತುಗಳನ್ನು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಪ್ರಾದೇಶಿಕ ಕಛೇರಿ, ಉಡುಪಿಯ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯರವರು ಆರೋಗ್ಯದ ಅರಿವು ಬೆಳಗಿದಾಗ ಮಾತ್ರ ಸಮಾಜ ಶ್ರೇಯೋಭಿವೃದ್ಧಿಯ ಹಾದಿ ಹಿಡಿಯುತ್ತದೆ ಎಂಬ ಸತ್ಯವಾಕ್ಯವನ್ನು ತಮ್ಮ ನಿರರ್ಗಳ ನುಡಿಗಳೊಂದಿಗೆ ತಿಳಿಸಿಕೊಟ್ಟರು. ಅಲ್ಲದೇ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ ಗಣನಾಥ ಶೆಟ್ಟಿ ರವರು ಜಾಗೃತಿಯ ಬೆಳಕು ಮೂಡಿದಾಗಲೇ ಸಮಾಜ ಆರೋಗ್ಯ, ಅರಿವು ಮತ್ತು ಪ್ರಗತಿಯನ್ನು ಕಾಣುತ್ತದೆ…
ಬಂಟ್ವಾಳ ತಾಲೂಕಿನ ಬೆಳ್ಳೂರು ವಲಯ ಬಂಟರ ಸಂಘದ (ಕರಿಯಂಗಳ, ಬಡಗ ಬೆಳ್ಳೂರು, ತೆಂಕ ಬೆಳ್ಳೂರು, ಕೂರಿಯಾಳ, ಅಮ್ಮುಂಜೆ) ವತಿಯಿಂದ ಸೋಣ ಸಂಭ್ರಮ – 2025 ಕಾರ್ಯಕ್ರಮವು ಸೆಪ್ಟೆಂಬರ್ 14ರಂದು ಭಾನುವಾರ ಬೆಳ್ಳೂರು ಕಾವೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಆಟೊಟ ಸ್ಪರ್ಧೆ, ವಿದ್ಯಾರ್ಥಿ ವೇತನ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಿ ಆಶೀರ್ವದಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೆಳ್ಳೂರು ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ರೈಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು, ಮಾಜಿ ಸಚಿವ ಬಿ ರಮಾನಾಥ ರೈ, ಶ್ರೀ ಕಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್ ಶೆಟ್ಟಿ, ಬೆಳ್ಳೂರು ಬಂಟರ ಸಂಘದ ಗೌರವಾಧ್ಯಕ್ಷ ಯಜಮಾನ ರತ್ನಾಕರ ಶೆಟ್ಟಿ ಮುಂಡಡ್ಕ ಗುತ್ತು, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ, ಬಂಟ್ವಾಳ ತಾಲೂಕು ಬಂಟರ ಸಂಘದ ನಿಕಟ ಪೂರ್ವ…
ಪೊನ್ನಗಿರಿ ಭಜನಾ ಸಪ್ತಾಹ ಅಮೃತ ಮಹೋತ್ಸವ ಸಮಿತಿಗೆ ಅಧ್ಯಕ್ಷರಾಗಿ ಮನೋಹರ ಶೆಟ್ಟಿ, ಕಾರ್ಯಾಧ್ಯಕ್ಷರಾಗಿ ಅನಿಲ್ ಶೆಟ್ಟಿ
ಸೂರಿಂಜೆ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾಮದೇವ ಭಜನಾ ಮಂಡಳಿಗೆ ಪ್ರಸ್ತುತ ಸಾಲಿನಲ್ಲಿ 75 ನೇ ವರ್ಷಚರಣೆ ಆಚರಿಸುವ ಸಲುವಾಗಿ ಪೊನ್ನಗಿರಿ ಭಜನಾ ಸಪ್ತಾಹ ಅಮೃತ ಮಹೋತ್ಸವ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಬೊಳ್ಳಾರುಗುತ್ತು ಸೂರಿಂಜೆ, ಕಾರ್ಯಾಧ್ಯಕರಾಗಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಜಯಶೀಲ ಪೊನ್ನಗಿರಿ ಸೂರಿಂಜೆ, ಕೋಶಾಧಿಕಾರಿಯಾಗಿ ವಾಮನ ಶೆಟ್ಟಿ ಗೋಣಮಜಲು ಸೂರಿಂಜೆ ಅಯ್ಕೆಯಾದರು.