Author: admin
ವಿದ್ಯಾಗಿರಿ: ಕ್ಲಾಟ್ ಒಕ್ಕೂಟವು 1ನೇ ಡಿಸೆಂಬರ್ 2024 ರಂದು ನಡೆಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್ಎಟಿ) 2025 ರಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಅಹನಾ ಎಂ.ಕೆ., ಕಾರ್ತಿಕ್ ಆರ್. ಮಳಲಿ ಮತ್ತು ಅಭಿನವ್ ಎಂ.ಎಸ್. ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಪ್ರತಿಷ್ಠಿತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿಗೆ ಪ್ರವೇಶ ಗಳಿಸಿದ್ದಾರೆ.ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಶಿಸ್ತು, ಬದ್ಧತೆ ಸಂಸ್ಥೆಗೆ ಹೆಮ್ಮೆ ತಂದಿದೆ. ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳು ವಿವಿಧ ಶೈಕ್ಷಣಿಕ ಮತ್ತು ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿ ನಿರಂತರವಾಗಿ ಅಸಾಧಾರಣ ಫಲಿತಾಂಶಗಳನ್ನು ನೀಡುತ್ತಿದೆ. ಸಮಗ್ರ ಕಲಿಕೆ ಮತ್ತು ವೈಯಕ್ತಿಕ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತಿದೆ . ವಿದ್ಯಾರ್ಥಿಗಳ ಅದ್ಭುತ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಪ್ರಾಚರ್ಯ ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್ಡಿ ಅಭಿನಂದಿಸಿದ್ದಾರೆ.
ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವ ಆಚರಣೆ ಪ್ರಯುಕ್ತ 2025 ರ ಜನವರಿ 5 ರಂದು ನಡೆಯಲಿರುವ ಕೆ.ಎಚ್.ಎಸ್ ಟ್ರೋಫಿ ಅಂತರಾಷ್ಟ್ರೀಯ ಬಂಟರ ಕ್ರೀಡಾ ಕೂಟದ ತಯಾರಿ ನಡೆಯುತ್ತಿದ್ದು, ಈ ಕ್ರೀಡಾಕೂಟದಲ್ಲಿ ದೇಶ ವಿದೇಶದಲ್ಲಿರುವ ಬಂಟರಿಗಾಗಿ ವಾಲಿಬಾಲ್, ಥ್ರೋಬಾಲ್, ಕಬಡ್ಡಿ, ಥ್ರೋಬಾಲ್ ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲಾಗಿದೆ. ಪುರುಷರಿಗಾಗಿ ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ ಸ್ಪರ್ಧೆಗಳು ಹಾಗೂ ಮಹಿಳೆಯರಿಗಾಗಿ ಥ್ರೋಬಾಲ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ. ಕ್ರೀಡಾ ಕೂಟವು ಪುಣೆಯ ಬಾಲೆವಾಡಿಯ ಶ್ರೀ ಶಿವ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈಗಾಗಲೇ ಕ್ರೀಡಾಕೂಟದ ಸುತ್ತೋಲೆಯನ್ನು ನೀಡಲಾಗಿದೆ. ಸಂಘದ ಸುವರ್ಣ ಮಹೋತ್ಸವಕ್ಕೆ ಪೂರಕವಾಗಿ ನಡೆಯಲಿರುವ ಈ ಕ್ರೀಡಾಕೂಟವು ಅದ್ದೂರಿಯಾಗಿ ಆಯೋಜಿಸುವ ಬಗ್ಗೆ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕುಶಲ್ ಹೆಗ್ಡೆ, ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಕಾರ್ಯಾಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ, ಸುವರ್ಣ ಮಹೋತ್ಸವ ಸಮಿತಿಯ ಕ್ರೀಡಾ ಕಾರ್ಯಾಧ್ಯಕ್ಷರಾದ ಎರ್ಮಾಳ್ ಚಂದ್ರಹಾಸ್ ಶೆಟ್ಟಿ,…
ಗೋವಾ ಬಂಟರ ಸಂಘದ ವತಿಯಿಂದ 2025 ರ ಜನವರಿ 19ರಂದು ನಡೆಯಲಿರುವ ರಜತ ಸಂಭ್ರಮ ಕಾರ್ಯಕ್ರಮದ ಲಾಂಛನ ಬಿಡುಗಡೆ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕಾವಡಿ ಸದಾಶಿವ ಶೆಟ್ಟಿ ಅನಾವರಣ ಮಾಡಿದರು. ಗೋವಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ ಬೆಳ್ಳಂಪಳ್ಳಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ವಿಜಯೇಂದ್ರ ಶೆಟ್ಟಿ ಕಬ್ಯಾಡಿ, ಜಗದೀಶ್ ಶೆಟ್ಟಿ ಪಳ್ಳಿ, ಜೊತೆ ಕಾರ್ಯದರ್ಶಿ ರಾಘವ ಶೆಟ್ಟಿ ಕೊಡ್ಲಾಡಿ, ನಿಕಟ ಪೂರ್ವ ಅಧ್ಯಕ್ಷ ಶಶಿಧರ ನಾಯ್ಕ್, ಸಂಘದ ಮಾಜಿ ಉಪಾಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ, ಶಶಿಧರ ರೈ, ಮಾಜಿ ಕಾರ್ಯದರ್ಶಿ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು.
ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ, ಮುಂಬಯಿ ಬಂಟರ ಸಂಘದ ಸಹಯೋಗದಲ್ಲಿ ಡಿಸೆಂಬರ್ 7ರಂದು ಜಾಗತಿಕ ಮಟ್ಟದ ವಿಶ್ವ ಬಂಟರ ಸಮಾಗಮವು ದಡ್ಡಂಗಡಿ ಚೆಲ್ಲಡ್ಕ ಭವಾನಿ ದೇರಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಿತು. ಸಾಮಾಜಿಕ ಕ್ಷೇತ್ರದಲ್ಲಿ ಸವಣೂರು ಕೆ. ಸೀತರಾಮ ರೈ ಸಹಿತ ಬೇರೆ ಬೇರೆ ಕ್ಷೇತ್ರದಲ್ಲಿ ಸುಮಾರು 13 ಮಂದಿ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ವಿದ್ಯಾಗಿರಿ (ಮೂಡುಬಿದಿರೆ):ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ‘ಅಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಮಂಗಳವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ಮುಸ್ಸಂಜೆಯಲ್ಲಿ ಪ್ರಕೃತಿ ರಮಣೀಯ ವಿಶಾಲ ಸಭಾಂಗಣದಲ್ಲಿ ತುಂಬಿದ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕಾರ್ಯಕ್ರಮ. ಸಾಹಿತ್ಯ ಮತ್ತು ಸಂಸ್ಕೃತಿ ಜೊತೆಯಾಗಿ ಮೇಳೈಸಿದ ಕಾರ್ಯಕ್ರಮ. ನಮ್ಮ ಸಾಂಸ್ಕೃತಿಕ ಸಂಪತ್ತು ಹೆಚ್ಚಾದಾಗ ಮನಸ್ಸು ಅರಳುತ್ತದೆ ಎಲ್ಲರಿಗೂ ಸಂತೋಷ ನೀಡುವ ವ್ಯಕ್ತಿತ್ವವೇ ಆಳ್ವ ಎಂದು ಬಣ್ಣಿಸಿದರು. ಒಳ್ಳೆಯದನ್ನು ಒಪ್ಪಿಕೊಂಡು ಅಪ್ಪಿಕೊಳ್ಳಿ. ಆ ಹಾದಿಯಲ್ಲಿ ಸಮಾಜ, ದೇಶ ಬೆಳೆಯಬೇಕು. ನಾವೂ ಪ್ರಕೃತಿಯನ್ನು, ಹೃದಯವನ್ನು ಅರಳಿಸಬೇಕು ಎಂದರು. ಆಳ್ವಾಸ್ ಕೃಷಿ ಮೇಳ ಕಂಡು ನೀವೂ…
ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ರ್ಷದ ಆಳ್ವಾಸ್ ವಿರಾಸತ್ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ. ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ಭಾಸವಾಯಿತು. ಉತ್ತರ ಭಾರತದಿಂದ ಹಿಡಿದು ದಕ್ಷಿಣದ ತುತ್ತ ತುದಿವರೆಗಿನ ವೈವಿಧ್ಯ ಕಲಾಪ್ರಕಾರಗಳೂ ಮಾತ್ರವಲ್ಲ, ಶ್ರೀಲಂಕಾ ಸೇರಿದಂತೆ ನೆರೆಹೊರೆ ರಾಷ್ಟ್ರಗಳ ಸಂಸ್ಕೃತಿ ಶ್ರೀಮಂತಿಕೆಗೆ ಆಳ್ವಾಸ್ ಆವರಣ ಸಾಕ್ಷಿಯಾಯಿತು. ಕರ್ಯಕ್ರಮದಲ್ಲಿ ಸಾನಿಧ್ಯವಿದ್ದ ಮೂಡುಬಿದಿರೆ ಜೈನ ಮಠದ ಭಟ್ಟಾರಕ ಚಾರುಕರ್ತಿ ಪಂಡಿತಾಚರ್ಯರ್ಯ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೊಂಡೆವೂರು ಯೋಗಾನಂದ ಸ್ವಾಮೀಜಿ, ಕೊಂಡವೂರು, ಮಾಣಿಲ ಮೋಹನದಾಸ ಸ್ವಾಮೀಜಿ ಹಾಗೂ ಕಟೀಲು ದೇವಳದ ಆನುವಂಶಿಕ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ ಅವರು ವೇದಿಕೆಯ ಬಲಭಾಗದಲ್ಲಿದ್ದ ರಥದಲ್ಲಿ ದೇವರ ಪ್ರತಿಷ್ಠಾಪನೆ ಮಾಡಿ ಭವ್ಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಿದರು. ನಿಗದಿಯಂತೆ ಕ್ಲುಪ್ತ ಸಮಯಕ್ಕೆ ಆರಂಭಗೊಂಡ ಈ ಭವ್ಯ ಸಾಂಸ್ಕೃತಿಕ ಮೆರವಣಿಗೆಯು ಜಾತ್ರೆಯ ಮೆರುಗನ್ನು ಮೂಡಿಸಿತು. ಇಕ್ಕೆಲೆಗಳಲ್ಲಿ…
ವಿದ್ಯಾಗಿರಿ: ಸೌಹಾರ್ದತೆಯಿಲ್ಲದೆ ಬದುಕಿಗೆ ಅರ್ಥವಿಲ್ಲ. ಪ್ರೀತಿ ಸೌಹಾರ್ದತೆಗಾಗಿ ನಾವು ಜೀವನದುದ್ದಕ್ಕೂ ಶ್ರಮಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ‘೩೦ನೇ ಆಳ್ವಾಸ್ ವಿರಾಸಾತ್’ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವದ ಅಂಗವಾಗಿ ರತ್ನಾಕರವರ್ಣಿ ವೇದಿಕೆಯಲ್ಲಿ ಬುಧವಾರ ಅವರು ಉಪನ್ಯಾಸ ನಿಡಿದರು. ಜಾನಪದ ಕಲೆಗಳ ವೈವಿಧ್ಯತೆಯನ್ನು ವಿದ್ಯಾರ್ಥಿಗಳು ಅಪ್ಪಿಕೊಳ್ಳಬೇಕು. ದೇಶದ ಕಲೆಯನ್ನು ಪ್ರೀತಿಸಬೇಕು ಎಂದರು. ಶುಚಿತ್ವವನ್ನು ಬಿಟ್ಟರೆ ಬದುಕೇ ಇಲ್ಲ. ಶುಚಿತ್ವ ಕೇವಲ ಮಾತಿಗೆ, ಬರಹಕ್ಕೆ ಮೀಸಲಾಗಬಾರದು. ನಮ್ಮ ಜೀವನದಲ್ಲಿ ಅಂತರ್ಗತವಾಗಬೇಕು. ಇದರ ಜೊತೆಗೆ ಮಣ್ಣು ಗಾಳಿ ನೀರು ಆಕಾಶವನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಈ ಅಂಶಗಳು…
ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಣಿಗೆ ಮುಂದಿನ ಐದು ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಸಾಜ ಸ.ಹಿ.ಪ್ರಾ ಶಾಲೆಯಲ್ಲಿ ನಡೆದ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ವೀರಣ್ಣರಿದ್ದು, ಸಮಿತಿಯಲ್ಲಿ 172 ಮಂದಿ ಸದಸ್ಯರ ಪೈಕಿ ಚಂದಪ್ಪ ಪೂಜಾರಿ ಕೆ, ಸುಂದರ ಎಂ, ಕುಟ್ಟಿ ನಲಿಕೆ ಕೆ, ಪ್ರವೀಣಚಂದ್ರ ಆಳ್ವ, ಅಣ್ಣಿ ಪೂಜಾರಿ ಸಾರ್ಯ ಉಷಾ ಸಾಜ, ಕಮಲಾಕ್ಷಿ ಸಾಜ, ವಸಂತಿ ಸಾಜ ನಳಿನಿ ಕೆ, ಕುಸುಮ ಎಂ ಅವರು ನಿರ್ದೇಶಕರಾಗಿ ಆಯ್ಕೆಯಾದರು. ಪುತ್ತೂರು ವಲಯ ಅರಣ್ಯ ಅಧಿಕಾರಿ ಕಿರಣ್ ಬಿ.ಎಂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಕೆ.ಟಿ.ಗೋಪಾಲ ಚುನಾವಣಾಧಿಕಾರಿಯಾಗಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಒಕ್ಕೂಟವು ಮುಂಬಯಿಯಲ್ಲಿ ಮೂರು ವಿಶ್ವ ಬಂಟರ ಸಮ್ಮಿಲನ, ಉಡುಪಿಯಲ್ಲಿ ಎರಡು ವಿಶ್ವ ಬಂಟರ ಸಮ್ಮಿಲನವನ್ನು ಆಯೋಜಿಸಿ, ಇದೀಗ ಮತ್ತೆ ಮುಂಬಯಿಯಲ್ಲಿ 6ನೇ ವಿಶ್ವ ಬಂಟರ ಸಮಾಗಮವನ್ನು ಬಂಟರ ಭಾವೈಕ್ಯದ ಸಂಕೇತವಾಗಿ ಇಂದು ಆಯೋಜಿಸಿದೆ. ಹಿಂದಿನ ಐದು ಸಮ್ಮಿಲನ ಯಶಸ್ಸಿನ ದ್ಯೋತಕವಾಗಿ, ಮುಂಬಯಿ ಬಂಟರ ಸಂಘದ ಸಂಪೂರ್ಣ ಸಹಕಾರದೊಂದಿಗೆ ಅಭೂತಪೂರ್ವ ಕಾರ್ಯಕ್ರಮವಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ ಎನ್ನಲು ಹರ್ಷವಾಗುತ್ತಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನುಡಿದರು. ಡಿಸೆಂಬರ್ 7ರಂದು ಶನಿವಾರ ಕುರ್ಲಾ ಪೂರ್ವ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಉದ್ಯಮಿ ಕೆ. ಡಿ ಶೆಟ್ಟಿಯವರ ಪ್ರಾಯೋಜಕತ್ವದ ದಡ್ಡಂಗಡಿ ಚೆಲ್ಲಡ್ಕ ಭವಾನಿ ದೇರಣ್ಣ ಶೆಟ್ಟಿ ವೇದಿಕೆಯಲ್ಲಿ ಬಂಟರ ಸಂಘದ ಸಂಪೂರ್ಣ ಸಹಕಾರದೊಂದಿಗೆ ಜರಗಿದ ವಿಶ್ವ ಬಂಟರ ಸಮಾಗಮ- 2024 ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಾಗತಿಕ ಬಂಟರ ಸಂಘಗಳ…
ಈ ಹಿಂದೆ ಯುಎಇಯಲ್ಲಿ ದಾಖಲೆ ಪ್ರದರ್ಶನ ಕಂಡ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರದ ತಂಡ ಇದೀಗ ಮತ್ತೊಮ್ಮೆ ಕರವಾಳಿಯ ತುಳುವರ, ತುಳು ಅಭಿಮಾನಿಗಳ ಮನಸೂರಗೈಯುವ ಚಿತ್ರದೊಂದಿಗೆ ಅರಬ್ ದೇಶಕ್ಕೆ ಕಾಲಿರಿಸಿದ್ದಾರೆ. ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಎಂಬ ಕೌಟುಂಬಿಕ ನವಿರು ಹಾಸ್ಯಮಯ ಸನ್ನಿವೇಶದ ಮಾರ್ಮಿಕ ಚಿತ್ರ ವೀಕ್ಷಕರ ನಡುವೆ ಗಮನ ಸೆಳೆಯಲು ಸಜ್ಜಾಗಿದೆ. ಈ ಚಿತ್ರದ ಯುಎಇಯ ಪ್ರೀಮಿಯರ್ ಪ್ರದರ್ಶನದ ಪೊಸ್ಟರ್ ಬಿಡುಗಡೆ, ವಿಡಿಯೋ ಸಾಂಗ್ ಮತ್ತು ಟಿಕೆಟ್ ಬಿಡುಗಡೆ ಕಾರ್ಯಕ್ರಮ ಡಿಸೆಂಬರ್ 8 ರಂದು ದುಬೈಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಚಿತ್ರ ನಿರ್ಮಾಪಕರಾದ ಹರೀಶ್ ಶೇರಿಗಾರ್, ಹರೀಶ್ ಬಂಗೆರ, ಆತ್ಮಾನಂದ ರೈ, ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಿನೇಶ್ ಶೆಟ್ಟಿ ಕೊಟ್ಟಿಂಜ, ಬ್ರಾಹ್ಮಣ ಸಮಾಜದ ಸುಧಾಕರ ರಾವ್ ಪೇಜಾವರ, ಉದ್ಯಮಿಗಳಾದ ಬು.ಅಬ್ದುಲ್ಲ, ಗುಣಶೀಲ್ ಶೆಟ್ಟಿ, ರಮಾನಂದ ಶೆಟ್ಟಿ, ಸಂದೀಪ್ ರೈ ನಂಜೆ, ಡಾ. ರಶ್ಮಿ, ಕರ್ನಾಟಕ ಸಂಘ…















