Author: admin

ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ ಮಟ್ಟ) ಕಬಡ್ಡಿ ಪಂದ್ಯಾಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್‍ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳು ಚಾಂಪಿಯನ್ ಆಗಿವೆ. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ಬುಧವಾರ ನಡೆದ ಪುರುಷರ ಫೈನಲ್‍ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ಮಣಿಸಿದ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಪ್ರಶಸ್ತಿ ಎತ್ತಿ ಹಿಡಿಯಿತು. ಮಹಿಳಾ ವಿಭಾಗದಲ್ಲಿ ಬಾಗಲಕೋಟೆಯ ಸಜ್ಜಲಶ್ರೀ ಇನ್‍ಸ್ಟಿಟ್ಯೂಟ್ ಆಫ್ ನಸಿರ್ಂಗ್ ಸೈನ್ಸಸ್ ಕಾಲೇಜನ್ನು ಮಣಿಸಿದ ಉಜಿರೆಯ ಎಸ್‍ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಆತಿಥೇಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ…

Read More

ವಿದ್ಯಾಗಿರಿ: ಭಾಷಾ ಶಾಸ್ತ್ರದಲ್ಲಿ ಪರಿಣಿತಿ ಹೊಂದಿದಾಗ ಇಂಗ್ಲಿಷ್ ಅಧ್ಯಯನ ಸುಲಲಿತವಾಗುತ್ತದೆ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ರಾವ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ವತಿಯಿಂದ ಕಾಲೇಜಿನ ಎ.ವಿ ಹಾಲ್ ನಲ್ಲಿ ಬುಧವಾರ ನಡೆದ ಭಾμÁಶಾಸ್ತ್ರ ವಿಷಯದ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳ ಶಿಕ್ಷಣ ವ್ಯವಸ್ಥೆಯಲ್ಲಿ ತಜ್ಞ ಅಧ್ಯಾಪಕರ ಕೊರತೆ ಇದೆ ಎಂದು ಸಾಮಾನ್ಯವಾಗಿ ಹೇಳುತ್ತಾರೆ. ಆದರೆ ಇದು ಸತ್ಯಕ್ಕೆ ದೂರವಾದ ಮಾತು. ವಿದ್ಯಾರ್ಥಿಗಳು ಜ್ಞಾನದ ಅನ್ವೇಷಣೆಯಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಂಡರೆ, ಅಧ್ಯಾಪಕರೊಂದಿಗೆ ಚರ್ಚಿಸಿದರೆ, ಅಧ್ಯಾಪಕರು ಜ್ಞಾನವನ್ನು ವೃದ್ಧಿಸಿಕೊಳ್ಳಲು ಹೆಚ್ಚು ಶ್ರಮವನ್ನು ವಹಿಸುತ್ತಾರೆ ಎಂದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಆಳ್ವಾಸ್ ಕಾಲೇಜಿನ ಕುಲಸಚಿವ (ಅಕಾಡೆಮಿಕ್ಸ್) ಡಾ.ಟಿ ಕೆ ರವಿಚಂದ್ರನ್ ಸ್ವಾಗತಿಸಿ, ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಪವಿತ್ರ ತೇಜ್ ನಿರೂಪಿಸಿ, ವಂದಿಸಿದರು.

Read More

ಬಂಟರ ಸಂಘ ಮುಂಬಯಿ ಹಲವು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು ಪ್ರಾರಂಭದಿಂದಲೇ ಸಂಘವು ವಿದ್ಯೆಗೆ ಒತ್ತು ನೀಡುತ್ತಾ ಬಂದಿದೆ. ಸಮಾಜದಲ್ಲಿ ಶೈಕ್ಷಣಿಕ ಅಭಿವೃದ್ಧಿ ಬಂಟರ ಸಂಘದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ. ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳೊಂದಿಗೆ ವಿವಿಧ ರೀತಿಯ ಶಿಕ್ಷಣಕ್ಕೆ ಅವಕಾಶವಿದ್ದು ನಮ್ಮ ಮಕ್ಕಳಿಗೆ ಮಾತ್ರವಲ್ಲದೇ ಇತರ ಸಮಾಜದ ತುಳು ಕನ್ನಡಿಗ ಮಕ್ಕಳಿಗೂ ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ರಿಯಾಯಿತಿ ಇದ್ದು ಸಮಾಜದ ಮಕ್ಕಳಿಗೆ ದೊರೆಯುವ ಈ ವಿಶೇಷ ರಿಯಾಯಿತಿಯ ಸದುಪಯೋಗ ಪಡೆಯಬೇಕು ಎಂದು ಬಂಟರ ಸಂಘ ಮುಂಬಯಿ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ನುಡಿದರು. ಬಂಟರ ಸಂಘ ಮುಂಬಯಿ ವಸಾಯಿ – ದಹಾಣು ಪ್ರಾದೇಶಿಕ ಸಮಿತಿಯಿಂದ ಜೂನ್ 16 ರಂದು ನಾಲಾಸೋಪಾರ ಪಶ್ಚಿಮದ ಹೋಟೆಲ್ ಗ್ಯಾಲಕ್ಸಿ ಸಭಾಗೃಹದಲ್ಲಿ ಸಂಘದ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿಧವೆಯರಿಗೆ ಹಾಗೂ ವಿಕಲ ಚೇತನರಿಗೆ 2024 ರ ಆರ್ಥಿಕ ಸಹಾಯವನ್ನು ವಿತರಿಸಲಾಗಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ…

Read More

ಜನ್ಮ ಫೌಂಡೇಶನ್ ಟ್ರಸ್ಟ್ ಪುತ್ತೂರು ಇದರ ನೇತೃತ್ವದಲ್ಲಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರಾಥಮಿಕ) ಕೆಯ್ಯೂರು ಇದರ ಸಹಕಾರದೊಂದಿಗೆ ಕುರಿಯ ಮಾಡಾವು ಏಳ್ನಾಡುಗುತ್ತು ಅಮ್ಮಕ್ಕ ತ್ಯಾಂಪಣ್ಣ ರೈ ಸ್ಮರಣಾರ್ಥ ೧೨ ನೇ ವರ್ಷದ ಪುಸ್ತಕ ವಿತರಣೆ ಹಾಗೂ ವಿದ್ಯಾಸಿರಿ ಪುರಸ್ಕಾರ ಜೂ.೧೮ ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಪ್ರಾಥಮಿಕ ವಿಭಾಗದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೆಯ್ಯೂರು ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರು ದೀಪ ಬೆಳಗಿಸಿ ಉದ್ಘಾಟಿಸಿ, ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಕೋಶ ಓದು, ದೇಶ ಸುತ್ತು ಎಂಬಂತೆ ಹರ್ಷಕುಮಾರ್ ರೈಯವರು ತಾನು ಕಲಿತ ಶಾಲೆಗೆ ತನ್ನಿಂದ ಸಾಧ್ಯವಾಗುವ ರೀತಿಯಲ್ಲಿ ಸಹಾಯ ಮಾಡುತ್ತಾ ಬಂದಿದ್ದಾರೆ. ಅವರು ನೀಡಿದ ಪುಸ್ತಕಗಳನ್ನು ಸದ್ಭಳಕೆ ಮಾಡಿಕೊಂಡು ಒಳ್ಳೆಯ ವಿದ್ಯಾರ್ಥಿಗಳಾಗಿ ಉತ್ತಮ ಶಿಕ್ಷಣವನ್ನು ಪಡೆಯುವಂತಾಗಿರಿ ಎಂದು ಹೇಳಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷ…

Read More

ಹಿಂದೊಂದು ಕಾಲವಿತ್ತು- ಹಿರಿಯರು ಬದುಕಿ ಬಾಳಿದ ಮನೆಯಲ್ಲಿ, ಅವರ ಪಡಿನೆರಳಾಗಿ ಇದ್ದು ದುಡಿಯುತ್ತಾ, ಮದುವೆ ಆಗಿ ಮಕ್ಕಳಾದ ಮೇಲೆ ಅವರ ಬೇಕು ಬೇಡಗಳನ್ನು ಪೂರೈಸಿ, ಅವರ ಜೀವನ ಒಂದು ಹಂತಕ್ಕೆ ಬಂದ ಮೇಲೆ ತಮ್ಮದೇ ಸ್ವಂತ ಮನೆಯಲ್ಲಿ ಕೊನೆಯ ದಿನಗಳನ್ನು ಕಳೆದ ಅದೆಷ್ಟೋ ಜೀವಗಳಿಗೆ ಒಂದು ರೀತಿಯ ಸಂತೃಪ್ತಿಯಿತ್ತು. ಆದರೆ ಈಗ ಕಾಲ ಬದಲಾಗುವುದರೊಂದಿಗೆ ಪರಿಸ್ಥಿತಿಯೂ ಬದಲಾಗಿದೆ; ಜೊತೆಗೆ ಪ್ರಾಯ ಮಾಗುತ್ತಾ ಬರುತ್ತಿದ್ದಂತೆ ಹಿರಿಯರ ನಿರೀಕ್ಷೆಗಳು ಕೂಡಾ. ‘ಇನ್ನು ನಾವು ಮಕ್ಕಳು- ಮೊಮ್ಮಕ್ಕಳೊಂದಿಗೆ ಆರಾಮಾಗಿ ಇರಬಹುದು, ನಮ್ಮ ಜವಾಬ್ದಾರಿ ಮುಗಿಯಿತು. ಮಕ್ಕಳನ್ನು ಬೆಳೆಸಿ, ಓದಿಸಿ, ಅವರ ಕಾಲ ಮೇಲೆ ನಿಲ್ಲುವಂತೆ ಮಾಡಿದ್ದಾಯ್ತು. ಇನ್ನು ಯಾವ ಜವಾಬ್ದಾರಿಯೂ ಇಲ್ಲ. ಕಾಲನ ಕರೆ ಬರುವವರೆಗೆ ದಿನ ಸವೆಸಿದರಾಯಿತು’ ಅಂತ. ಹೌದಾ..!? ಆದರೆ ಮನಸ್ಸಿನ ಬಯಕೆಯಂತೆ ಎಲ್ಲರ ಬದುಕು ನಡೆಯದು. ಕೆಲ ಹಿರಿಯರಿಗೆ ಹೊಸ ಜವಾಬ್ದಾರಿಗಳು ಹೆಗಲಿಗೇರಿವೆ. ‘ಮಕ್ಕಳಿಗೆ ಮದುವೆ ಮಾಡಿಕೊಟ್ಟ ನಂತರ ಮಕ್ಕಳಿಗಾಗಿ ಪಾಲಿಸಬೇಕಾದ ತಮ್ಮ ಕರ್ತವ್ಯಗಳು ಮುಗಿದವು; ಇನ್ನು ಬದುಕು ನಿರಾಳ’ ಎಂದು…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ಸರಕಾರಿ ಪ್ರೌಢ ಶಾಲೆ, ಮೀನಕಳಿಯ ಬೈಕಂಪಾಡಿಯಲ್ಲಿ 2024- 25 ರ ಸಾಲಿನ ಯಕ್ಷನಾಟ್ಯ ತರಬೇತಿ ಜೂನ್ 19 ರಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನೆಗೊಂಡಿತು. ಶ್ಯಾಮ ಕನ್ಸ್ಟ್ರಕ್ಷನ್ಸ್ ನ ಇಂಜಿನಿಯರ್ ಶ್ರೀ ಪ್ರಸಿದ್ಧ ಪಿ. ಇವರು ಕಾರ್ಯಕ್ರಮ ಉದ್ಘಾಟಿಸಿ, ಯಕ್ಷಗಾನ ಎಲ್ಲಾ ಪ್ರಕಾರಗಳಲ್ಲಿಯೂ ಜ್ಞಾನವೃದ್ಧಿಗೆ ಪ್ರಯೋಜನವಾಗುತ್ತದೆ. ಯಕ್ಷಗಾನ ಬರೇ ಕಲೆಗೋಸ್ಕರ ಕಲಿಯುವುದಲ್ಲ. ನಮ್ಮ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಲು ಸದವಕಾಶ ಎಂದು ಹೇಳುತ್ತಾ ಶುಭ ಕೋರಿದರು. ಯಕ್ಷ ಶಿಕ್ಷಣ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ್ (USA) ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿ ಶ್ರೀ ಶಿವರಾಮ ಪಣಂಬೂರು ಇವರು ಮಾತನಾಡುತ್ತಾ, ಶುದ್ಧ ಕನ್ನಡ ಇಂದಿಗೂ ಉಳಿದಿದೆ ಎಂದಾದರೆ ಅದು ಯಕ್ಷಗಾನದಿಂದ ಮಾತ್ರ. ಅಲ್ಲದೇ ಗುರು ಹಿರಿಯರನ್ನು ಗೌರವದಿಂದ ಕಾಣಲು ಇಂತಹ ಯಕ್ಷ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀ ಲಕ್ಷ್ಮೀನಾರಾಯಣ ಇವರು ಮಾತನಾಡುತ್ತಾ, ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡುವಲ್ಲಿ…

Read More

ವಿದ್ಯಾಗಿರಿ: ನಿಮ್ಮ ವ್ಯಕ್ತಿತ್ವ ಹಾಗೂ ಕೌಶಲಗಳ ಮೂಲಕವೇ ಸಮಾಜಕ್ಕೆ ಪರಿಚಿತರಾಗಿ ಎಂದು ಆಳ್ವಾಸ್ ಕಾಲೇಜಿನ ಕುಲಸಚಿವ (ಅಕಾಡೆಮಿಕ್ಸ್) ಡಾ ಟಿ. ಕೆ. ರವೀಂದ್ರನ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಚಾರ ಸಂಕಿರಣ ಸಭಾಂಗಣದಲ್ಲಿ ಪದವಿ ಸಮಾಜ ಕಾರ್ಯ ವಿಭಾಗದ ಸ್ಪಟಿಕ ವಿದ್ಯಾರ್ಥಿ ವೇದಿಕೆಯ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ದೊಡ್ಡದಾಗಿ ಕನಸು ಕಾಣಬೇಕು. ಇದರಿಂದ ಉನ್ನತ ಸಾಧನೆ ಮಾಡಲು ಸಾಧ್ಯ. ವರ್ತಮಾನದಲ್ಲಿ ಜಗತ್ತು ಒಂದು ಪುಟ್ಟ ಹಳ್ಳಿ ಆಗಿದೆ. ಅವಕಾಶಗಳು ವಿಸ್ತಾರಗೊಂಡಿದ್ದು, ಸ್ಪರ್ಧೆ ಹೆಚ್ಚಿದೆ ಎಂದರು. ಸಮಾಜ ಕಾರ್ಯದ ವಿದ್ಯಾರ್ಥಿಗಳಿಗೆ ಅವಕಾಶಗಳ ಕೊರತೆ ಬರಲು ಸಾಧ್ಯವಿಲ್ಲ. ಈ ವೃತ್ತಿಯೂ ನೀಡುವ ಸಂತೃಪ್ತಿ ಬೇರೆ ಕಡೆಯೂ ಸಿಗಲು ಸಾಧ್ಯವಿಲ್ಲ ಎಂದು ಹೇಳಿದರು. ವಿದ್ಯಾರ್ಥಿ ಜೀವನದ ಮಹತ್ವ ತಿಳಿಯುವುದು ಕಾಲೇಜಿನಿಂದ ಹೊರ ಹೋದ ಮೇಲೆ. ನಿಜವಾದ ಜೀವನ ಪ್ರಾರಂಭವಾಗುವುದು ನೀವು ವಿದ್ಯಾಭ್ಯಾಸ ಮುಗಿಸಿದ ನಂತರ. ವಿದ್ಯಾರ್ಥಿ ಜೀವನದಲ್ಲಿ ಕೆಲವರು ತಮ್ಮ ತಪ್ಪುಗಳಿಗೆ ಕಾಲೇಜನ್ನು ದೂರುತ್ತಾರೆ. ಆದರೆ ವೃತ್ತಿ ಜೀವನದಲ್ಲಿ ನಿಮ್ಮ ತಪ್ಪುಗಳಿಗೆ…

Read More

ಮೂಡುಬಿದಿರೆ: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತ, ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‍ನ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮಂಗಳವಾರ ವಿದ್ಯಾಗಿರಿಯಲ್ಲಿ ಅಭಿನಂದಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‍ನ ಗೌರವಾಧ್ಯಕ್ಷ ಡಾ ಎಂ ಮೋಹನ್ ಆಳ್ವ ಮಾತನಾಡಿ, ನಮ್ಮ ದೇಶದಲ್ಲಿ ಪರಿಚಿತ ಆಟವಾಗಿ, ಆದರೆ ಈ ಭಾಗದಲ್ಲಿ ಅಷ್ಟೊಂದು ಖ್ಯಾತಿಗೆ ಬಾರದ ಕ್ರೀಡೆಯನ್ನು, ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್, ಕಳೆದ ಐದು ವರ್ಷಗಳ ಸತತ ಪರಿಶ್ರಮದಿಂದಾಗಿ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ನಿರ್ಮಾಣ ಮಾಡಿದೆ ಎಂದು ಹರ್ಷ ವ್ಯಕ್ತ ಪಡಿಸಿದರು. ಮಾನವ ಸಂಪತ್ತಿನ ಸರಿಯಾದ ಬಳಕೆಯಿಂದ ದೇಶದ ಸಮೃದ್ಧಿ ಸಾಧ್ಯ. ಮುಂದುವರಿದ ಯಾವ ದೇಶದಲ್ಲೂ ನಮ್ಮಲ್ಲಿರುವಷ್ಟು ಯುವ ಶಕ್ತಿಯಿಲ್ಲ. ಈ ಯುವ ಶಕ್ತಿಯ ಸರಿಯಾದ ಸದ್ಭಳಕೆ ಮುಖ್ಯ. ನಮ್ಮನ್ನಾಳುವ ಸರ್ಕಾರಗಳು ಇದರೆಡೆಗೆ ಗಮನವಹಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಜೋಡಿಸಿಕೊಳ್ಳಬೇಕು.…

Read More

ವಿದ್ಯಾಗಿರಿ (ಮೂಡುಬಿದಿರೆ): ಕಾಲೇಜು ಮಟ್ಟದಲ್ಲಿ ಕ್ರೀಡೆಗೆ ಪ್ರಾಮುಖ್ಯತೆಯನ್ನು ನೀಡಿದರೆ ಮಾತ್ರ ದೇಶದಲ್ಲಿ ಕ್ರೀಡೆ ಬೆಳೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ ಹೇಳಿದರು. ಇಲ್ಲಿರುವ ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಶೆಟ್ಟಿ ಸಭಾಂಗಣದಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಆತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ) ಮಟ್ಟದ ಪುರುಷರ ಮತ್ತು ಮಹಿಳಾ ಕಬಡ್ಡಿ ಚಾಂಪಿಯನ್‍ಶಿಪ್‍ನಲ್ಲಿ ಅವರು ಮಾತನಾಡಿದರು.  ಕ್ರೀಡೆಯನ್ನು ಬೆಳೆಸುವಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕೊಡುಗೆ ಅಪಾರ. ಸರ್ಕಾರದ ನೆರವಿಲ್ಲದೆಯೂ ಆಳ್ವಾಸ್ ಸಂಸ್ಥೆ ಕ್ರೀಡಾಪಟುಗಳ ಬೆಳವಣಿಗೆಗೆ ಶ್ರಮ ಪಡುತ್ತಿದೆ. ಈ ಮಾದರಿ ದೇಶದಲ್ಲೇ ಮೊದಲು ಎಂದರು. ಮುಂದಿನ ದಿನಗಳಲ್ಲಿ ನಮ್ಮ ಫೆಡರೇಶನ್ ಕಪ್ ಅನ್ನು ಆಳ್ವಾಸ್‍ನಲ್ಲೆ ನಡೆಸಲಾಗುವುದು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿಗಳು ದೇಶಿಯ ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಂತೋಷ…

Read More

ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ ಸೋಮವಾರ ನಗರದ ಪುರಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ನ ಸಿಎಂಡಿ ಕೆ.ಎಂ. ಶೆಟ್ಟಿ ಮದ್ಯಗುತ್ತು ಅವರು, “ಸಮಾಜ ಕಲ್ಯಾಣ ಕಾರ್ಯಕ್ರಮಗಳು ಅವಿರತವಾಗಿ ನಡೆಯಲಿ. ಇದಕ್ಕೆ ನಾವೆಲ್ಲರೂ ತುಂಬು ಮನಸ್ಸಿನಿಂದ ಸಹಕಾರ ನೀಡಬೇಕಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಉದ್ಯಮ ಸ್ಥಾಪನೆಗೆ ಆಡಳಿತ ನಡೆಸುವವರ ಸಹಕಾರ ಅಗತ್ಯ ಬೇಕು. ಇದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯಮಿಗಳು ತಮ್ಮ ತಾಯ್ನಾಡಿನಲ್ಲೇ ಉದ್ಯಮ ಸ್ಥಾಪನೆಗೆ ಮುಂದಾಗಲಿದ್ದಾರೆ” ಎಂದರು. ಒಕ್ಕೂಟದ ಮಹಾದಾನಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, “ಐಕಳ ಹರೀಶ್ ಶೆಟ್ಟಿ ಅವರು ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು. ಇನ್ನೂ ಮುಂದಿನ ದಿನಗಳಲ್ಲೂ ಸಂಘಟನೆ ಇದೇ ರೀತಿ ಅರ್ಥಪೂರ್ಣ ಕಾರ್ಯಕ್ರಮ ಕೈಗೊಳ್ಳಲಿ”…

Read More