Author: admin

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಪ್ರೊಫೆಸರ್ ಅಕ್ಷಯ ಆರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಅಕ್ಷಯ ಆರ್ ಶೆಟ್ಟಿ ಅವರು ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೆಜ್ಮೆಂಟ್ ಕಾಲೇಜ್ ನ ಪ್ರಾಧ್ಯಾಪಕಿ. ಬಜಪೆ ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆಯಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೆರ್ಗ, ಹಿಡಿ ಅಕ್ಕಿಯ ಧ್ಯಾನ ಸಹಿತ ಹಲವು ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಜೊತೆಗೆ ಸಾಮಾಜಿಕ ಧಾರ್ಮಿಕ, ಶೈಕ್ಷಣಿಕ ವಿಚಾರಗಳಿಗೆ ಸಂಬಂಧಿಸಿದ ಲೇಖನಗಳನ್ನೂ ಅವರು ಬರೆದಿರುತ್ತಾರೆ.

Read More

ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾ.17ರಂದು ಮುಂಬಯಿಗೆ ಆಗಮಿಸಿದ್ದು ಈ ಸಂದರ್ಭದಲ್ಲಿ ಪನ್ವೆಲ್ ಮಹಾನಗರ ಪಾಲಿಕೆಯ ನಗರಸೇವಕ ಹಾಗೂ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ನಂದಾವರ ಇದರ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷರಾದ ಸಂತೋಷ್ ಜಿ ಶೆಟ್ಟಿ ದಲಂದಿಲ ಇವರ ನೇತೃತ್ವದಲ್ಲಿ ನವಿ ಮುಂಬಯಿಯ ನ್ಯೂ ಪನ್ವೆಲ್ ಪೂರ್ವದ ಭಗತ್ ವಾಡಿಯ ಹೋಟೆಲ್ “ಸ್ಪೈಸ್ ವಾಡಿ” ಇಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ತುಳು ಕನ್ನಡಿಗ ಅಭಿಮಾನಿಗಳೊಂದಿಗೆ ಸಮಾಲೋಚನೆ ಸಭೆ ನಡೆಯಿತು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪನ್ವೆಲ್ ಪರಿಸರದಲ್ಲಿ ಹಾಗೂ ಮುಂಬಯಿಯ ವಿವಿಧ ಸಮುದಾಯದ ಅನೇಕ ಗಣ್ಯರು ಉಪಸ್ಥಿತರಿದ್ದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಅಭಿನಂದನಾ ಪೂರ್ವಕವಾಗಿ ಸ್ವಾಗತಿಸಿದರು. ಸ್ವಾಗತಿಸುತ್ತಾ ಪ್ರಾಥಮಿಕ ಮಾತುಗಳನ್ನಾಡಿದ ನಗರಸೇವಕ ಸಂತೋಷ್ ಜಿ ಶೆಟ್ಟಿ ಅವರು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಭರವಸೆಯ ವ್ಯಕ್ತಿಯೊಬ್ಬರು ಇಂದು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು ನಮ್ಮೆಲ್ಲರ ಸೌಭಾಗ್ಯ. ಮಿಲಿಟರಿಯಲ್ಲಿ ದೇಶ ರಕ್ಷಣೆಯ ಸೇವೆಗೈದು…

Read More

ಬದುಕೆಂಬ ಪಾತ್ರೆಯಲ್ಲಿ ಪ್ರೀತಿಯೊಂದನ್ನು ಬಿಟ್ಟು ಬೇರೇನನ್ನು ತುಂಬಿಸಿದರೂ ಅದು ನಮಗೇ ಮಾರಕ. ಬೇಡದ ನಕಾರಾತ್ಮಕ ಭಾವನೆಗಳಿಂದ ತುಂಬಿರುವ ಪಾತ್ರೆಯನ್ನು ಬರಿದಾಗಿಸಿ ಅದರಲ್ಲಿ ಪ್ರೀತಿ ತುಂಬಿಸೋಣ, ಪ್ರೀತಿಯನ್ನೇ ಇತರರಿಗೂ ಹಂಚೋಣ. ಐದು ವರ್ಷದ ಪುಟ್ಟ ಹುಡುಗನೊಬ್ಬ ತನ್ನ ಮೂರು ವರ್ಷದ ಪುಟಾಣಿ ತಂಗಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ. ಪುಟ್ಟ ಪುಟ್ಟ ಹೆಜ್ಜೆಗಳನ್ನಿಟ್ಟುಕೊಂಡು ಮುಂದೆ ಮುಂದೆ ಹೋಗುತ್ತಿದ್ದ ಹುಡುಗನಿಗೆ ತಂಗಿಯ ಹೆಜ್ಜೆ ನಿಧಾನವಾಗಿದ್ದು ಗೊತ್ತಾಯಿತು. ಆತ ತಿರುಗಿ ನೋಡಿದ. ತಂಗಿ ಯಾವುದೋ ಅಂಗಡಿ ಮುಂದೆ ನಿಂತು ಏನನ್ನೋ ತದೇಕವಾಗಿ ನೋಡುತ್ತಿದ್ದಳು. ಆತ ಹಿಂದಕ್ಕೆ ಬಂದು ನೋಡಿದ. ಅದೊಂದು ಗೊಂಬೆಗಳ ಅಂಗಡಿ. ‘ನಿಂಗೇನು ಬೇಕು?’ ಎಂದು ಅಣ್ಣ ಕೇಳಿದ. ಆ ಪುಟ್ಟ ಹುಡುಗಿ ಅಂಗಡಿಯಲ್ಲಿದ್ದ ದೊಡ್ಡ ಗೊಂಬೆಯತ್ತ ಬೊಟ್ಟು ಮಾಡಿ ತೋರಿಸಿ ‘ಅದು ಬೇಕು’ ಎಂದಳು. ಹುಡುಗ ಒಬ್ಬ ಜವಾಬ್ದಾರಿಯುತ ದೊಡ್ಡಣ್ಣನಂತೆ ಆಕೆಯ ಕೈ ಹಿಡಿದುಕೊಂಡು ಅಂಗಡಿಯತ್ತ ನಡೆದು ಆ ಗೊಂಬೆಯನ್ನೆತ್ತಿ ಅವಳ ಕೈಯಲ್ಲಿಟ್ಟ. ಖುಷಿಗೆ ಆಕೆಯ ಕಣ್ಣುಗಳರಳಿದವು. ಅಂಗಡಿಯ ಮಾಲೀಕ ಇವೆಲ್ಲವನ್ನು ಅಚ್ಚರಿಯಿಂದ ನೋಡುತ್ತಿದ್ದ. ಆ…

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಮತ್ತು ಬಂಟರ ಸಂಘ ಸುರತ್ಕಲ್ ಇದರ ಸಂಯುಕ್ತ ಆಶ್ರಯದಲ್ಲಿ “ಎಸ್ಸೆಸ್ಸೆಲ್ಸಿ ನಂತರ ಮುಂದೇನು” ವಿಚಾರದ ಕುರಿತು ಮಾಹಿತಿ ಕಾರ್ಯಕ್ರಮ ಶನಿವಾರ ಸಂಜೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು, “ಈಗಿನ ಪಠ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ 100 ಅಂಕ ಗಳಿಸುವುದು ಕಷ್ಟವಲ್ಲ, ಆದರೆ ಮುಂದೆ ಬರಲಿರುವ ಪಿಯು ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಅತ್ಯಮೂಲ್ಯವಾಗಿದೆ. ಎನ್ ಸಿ ಆರ್ ಸಿಲೆಬಸ್ ನಲ್ಲಿ ಎಷ್ಟು ಅಂಕ ಪಡೆದರೂ ಮೆಡಿಕಲ್, ಡೆಂಟಲ್ ಅಥವಾ ಬೇರೆ ಶಿಕ್ಷಣ ಪಡೆಯಲು ಸಾಧ್ಯವಾಗುವುದಿಲ್ಲ. ಮೆಡಿಕಲ್ ಸೀಟ್ ಪಡೆಯಬೇಕಾದರೆ ನೀಟ್ ನಂತಹ ಪೂರಕ ಪರೀಕ್ಷೆಗೆ ಹಾಜರಾಗಬೇಕು. ಮಕ್ಕಳಿಗೆ ಕರ್ನಾಟಕ ಹೊರತುಪಡಿಸಿದರೆ ಬೇರೆ ರಾಜ್ಯಗಳಲ್ಲಿ ಒಂದನೇ ತರಗತಿಯಿಂದಲೇ ಪೂರಕ ಪರೀಕ್ಷೆ ತರಬೇತಿ ಆರಂಭವಾಗುತ್ತದೆ. ಇದು ಬೆಳೆಯುತ್ತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ನಮ್ಮ ಇಡೀ ದೇಶದಲ್ಲಿ ಇರುವುದು ಅಂದಾಜು ಎರಡೂವರೆ ಲಕ್ಷ ಸಿಎ, ಸಿಎಸ್…

Read More

ಕನ್ನಡ ವೆಲ್ಫೇರ್ ಸೊಸೈಟಿಯ ಜನಪ್ರಿಯತೆಯ ಹಿನ್ನಲೆಯಲ್ಲಿ ಸೊಸೈಟಿಯ ಮಹಿಳೆಯರ ಪಾತ್ರ ಮಹತ್ತರವಾಗಿದೆ. ನಮ್ಮ ಈ ಸಂಘದಲ್ಲಿ ಮಹಿಳೆಯರು ಎಲ್ಲಾ ಸಮಾಜಪರ ಸೇವಾ ಕಾರ್ಯಗಳಲ್ಲಿ ಸದಾ ಸಕ್ರಿಯವಾಗಿ ಕೆಲಸ ಮಾಡುವುದರಿಂದ ಸಂಸ್ಥೆಯು ಸದಾ ಕ್ರಿಯಾಶೀಲವಾಗಿರುವಂತಾಗಿದೆ. ನಮ್ಮ ಸಂಸ್ಥೆಯು ಮಹಿಳೆಯರ ಯಾವುದೇ ಕಾರ್ಯಕ್ರಮಕ್ಕೂ ಉತ್ತಮ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಮಹಿಳೆಯರು ಸಮಾಜದಲ್ಲಿ ಮುಂದೆ ಬರಬೇಕು ಅವರ ಆತ್ಮ ವಿಶ್ವಾಸವು ಹೆಚ್ಚಿಸಬೇಕು ಎಂಬುದೇ ಕನ್ನಡ ವೆಲ್ಫೇರ್ ಸೊಸೈಟಿಯ ಉದ್ದೇಶವಾಗಿದೆ ಹಾಗೂ ಮುಖ್ಯ ಗುರಿಯಾಗಿದೆ. ಅದಕ್ಕಾಗಿ ಸಂಘದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಮಹಿಳೆಯರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ನ ಅಧ್ಯಕ್ಷ ನವೀನ್ ಶೆಟ್ಟಿ ಇನ್ನ ಬಾಳಿಕೆ ತಮ್ಮಅಭಿಮತವನ್ನು ವ್ಯಕ್ತಪಡಿಸಿದರು. ಅವರು ಮಾ.14ರ ಗುರುವಾರದಂದು ಸಂಜೆ ಘಾಟ್ಕೋಪರ್ ಪೂರ್ವದ ಕನ್ನಡ ವೆಲ್ಫೇರ್ ಸೊಸೈಟಿಯ ಮಹಿಳಾ ವಿಭಾಗದ ಆಶ್ರಯದಲ್ಲಿ ಘಾಟ್ಕೋಪರ್ ಪೂರ್ವದಲ್ಲಿನ ಕನ್ನಡ ವೆಲ್ಫೇರ್ ಸೊಸೈಟಿಯ ಮಹೇಶ್ ಎಸ್. ಶೆಟ್ಟಿ (ಬಾಬಾ ಗ್ರೂಪ್ ) ಆಡಿಟೋರಿಯಂನಲ್ಲಿ ಜರಗಿದ ಜಾಗತಿಕ ಮಹಿಳಾ ದಿನಾಚರಣೆಯ…

Read More

ಪ್ರತಿಷ್ಠಿತ ಡಾ. ವಿಶ್ವನಾಥ್ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ಇದರ 2022-2023 ನೇ ಸಾಲಿನ ವಿಕಾಸ ಪುಸ್ತಕ ಪುರಸ್ಕಾರವನ್ನು ಯುವ ಪತ್ರಕರ್ತ, ಲೇಖಕ ಡಾ. ದಿನೇಶ್ ಶೆಟ್ಟಿ ರೆಂಜಾಳ ಅವರಿಗೆ ಮಾ. 16 ರಂದು ಸಾಂತಾಕ್ರೂಜ್ ಪೂರ್ವದ  ಕಲಿನಾ ಕ್ಯಾಂಪಸ್ ವಿದ್ಯಾನಗರಿಯ ತಿಲಕ್ ಭವನದ ಭೂಗೋಳ ವಿಭಾಗದ ಸಭಾಗೃಹದಲ್ಲಿ ನಡೆದ ವಾರ್ಷಿಕ ಪ್ರಶಸ್ತಿ ಪ್ರಧಾನ ಮತ್ತು ಕೃತಿ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಿಸಲಾಯಿತು. ಡಾ. ವಿಶ್ವನಾಥ್ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ಇದರ ಸಂಸ್ಥಾಪಕ, ಹಿರಿಯ ಸಾಹಿತಿ ಡಾ. ವಿಶ್ವನಾಥ್ ಕಾರ್ನಾಡ್ ಅವರ ಉಪಸ್ಥಿತಿ ಹಾಗು  ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಮುಖ್ಯಸ್ಥ ಡಾ. ಜಿ. ಎನ್. ಉಪಾಧ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪ್ರಸಿದ್ಧ ಜನಪದ ವಿದ್ವಾಂಸ, ಸಾಹಿತಿ ಡಾ. ಕಾಳೇಗೌಡ ನಾಗವಾರ, ಹಿರಿಯ ತಂತ್ರಜ್ಞ ಮತ್ತು ಅನುವಾದಕ ವೆಂಕಟ್ರಾಜ್ ಅವರು ಪಾಲ್ಗೊಂಡು ಡಾ. ದಿನೇಶ್ ಶೆಟ್ಟಿಯವರನ್ನು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರ,  ಗೌರವ ಗ್ರಂಥ, ನಗದು ಬಹುಮಾನದೊಂದಿಗೆ ಪುರಸ್ಕಾರವನ್ನು ಪ್ರಧಾನಿಸಿ…

Read More

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈಯವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ನ್ಯಾಯವಾದಿಯಾಗಿ ತುಳು ಸಾಹಿತಿ, ತುಳು ನಾಟಕ ರಚನೆಕಾರರಾಗಿ, ನಟರಾಗಿ, ತುಳು ಸಂಘಟಕರಾಗಿ ಗುರುತಿಸಿಕೊಂಡಿರುವ ಕುಂಬ್ರ ದುರ್ಗಾಪ್ರಸಾದ್ ರೈಯವರು ಈ ಹಿಂದೆಯೂ 3 ವರ್ಷಗಳ ಕಾಲ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪುತ್ತೂರು ತುಳು ಕೂಟದ ಅಧ್ಯಕ್ಷರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು ಕಾವು, ಪರ್ಪುಂಜ, ಕುಂಬ್ರ ಮತ್ತು ಪುತ್ತೂರಿನಲ್ಲಿ ತುಳು ಸಮ್ಮೇಳನವನ್ನು ಆಯೋಜನೆ ಮಾಡಿದ ಹೆಗ್ಗಳಿಕೆ ಹೊಂದಿದ್ದಾರೆ. ಸವಣೂರಿನಲ್ಲಿ ನಡೆದ ವಿಶ್ವ ತುಳುವೆರೆ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಧರ್ಮಸ್ಥಳದಲ್ಲಿ ನಡೆದ ವಿಶ್ವ ತುಳು ಸಮ್ಮೇಳನದ ಪುತ್ತೂರು ತಾಲೂಕಿನ ಸ್ವಾಗತ ಸಮಿತಿಯ ಪದಾಧಿಕಾರಿಯಾಗಿ, ಒಡಿಯೂರು ತುಳು ತೇರ್ ಒಯಿಪುಗ ಇದರ ಪುತ್ತೂರು ಸಮಿತಿಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ ಇವರ ಕಾಲೇಜು ದಿನಗಳಲ್ಲಿ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನಲ್ಲಿ ತುಳು ಕೂಟ ಆರಂಭಿಸಿದ…

Read More

ಬಂಟರು ಇಂದು ಒಂದು ಪ್ರಬಲ ಸಮುದಾಯದ ಜನತೆ ಎಂಬ ಮನೋಭಾವ ಸಾಧಾರಣ ರಾಷ್ಟ್ರವ್ಯಾಪಿ ಮಾತ್ರವಲ್ಲ ವಿದೇಶಿ ಮುಖ್ಯರಿಗೂ ಮನವರಿಕೆಯಾಗಿದೆ ಎಂದರೆ ಅತಿಶಯೋಕ್ತಿ ಆಗಲಾರದು. ಆದರೆ ಇದು ತಮ್ಮ ಸಾಂಘಿಕ ಶಕ್ತಿಯಿಂದಲ್ಲ, ವೈಯಕ್ತಿಕ ಸಾಮರ್ಥ್ಯ ಪ್ರತಿಭೆಯಿಂದ ಎಂಬ ವಿಚಾರ ಯಾರೂ ಅಲ್ಲಗಳೆಯಲಾರರು. ಅಪ್ರತಿಮ ಪ್ರತಿಭೆಯ ತಂತ್ರಜ್ಞಾನಿಗಳು, ವೈದ್ಯಶಾಸ್ತ್ರ ಪ್ರಭೃತಿ, ಅನುಪಮ ಆಡಳಿತ ತಜ್ಞರು, ಅಸಾಧಾರಣ ಚಾಣಾಕ್ಷ ಅರ್ಥ ಶಾಸ್ತ್ರಿಗಳು, ಸಾಹಿತಿಗಳು, ಕಲಾವಿದರು, ನಟರು ಹೀಗೆ ತಮ್ಮ ವೈಯಕ್ತಿಕ ಪ್ರತಿಭಾ ಸಾಮರ್ಥ್ಯಗಳಿಂದ ಬಂಟರ ಕೀರ್ತಿ ಪತಾಕೆಯನ್ನು ವಿಶ್ವದಗಲ ಹಾರಿಸಿದ್ದಾರೆ. ನಮ್ಮ ಒಗ್ಗಟ್ಟು, ಸಾಂಘಿಕ ಶಕ್ತಿ, ಪರಸ್ಪರ ಸದ್ಭಾವ ಇವೆಲ್ಲವೂ ಈ ದಿನದವರೆಗೂ ಪ್ರಶ್ನಾರ್ಹವಾಗಿಯೇ ಉಳಿದಿದೆ. ಇದಕ್ಕೆ ಕಾರಣವೇನಿರಬಹುದೆಂಬ ಚಿಂತನೆ ಆತ್ಮಾವಲೋಕನ ಇಂದು ಎಂದಿಗಿಂತ ಹೆಚ್ಚಿದೆ. ಬಂಟರನ್ನು ಭಾವನಾತ್ಮಕವಾಗಿ ಬೆಸೆಯುವ ಕೆಲಸ ಇನ್ನೂ ಆಗಬೇಕಾಗಿದೆ. ಇಂದು ಬಂಟ ಸಂಘಟನೆಗಳಲ್ಲಿ ದುಡಿಯುವವರ ಸಂಖ್ಯೆ ಶೇಕಡಾ ಇಪ್ಪತ್ತರಷ್ಟೂ ಇಲ್ಲ. ಈ ಸಂಖ್ಯೆ ಇತರ ಬಂಟರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸಮರ್ಥ ಇರಬಹುದೆ? ಇಂದು ಬಂಟ ಸಮಾಜದ ಹಿರಿಯರನ್ನು ಬಿಟ್ಟರೆ ಇತರ…

Read More

ಯು.ಎ.ಇಯ ಪ್ರತಿಷ್ಠಿತ ನಾಟಕ ತಂಡ ಗಮ್ಮತ್ ಕಲಾವಿದೆರ್ ಯು.ಎ.ಇ ತಮ್ಮ 11 ನೇ ವರ್ಷಾಚರೆಣೆಯ ಅಂಗವಾಗಿ ತಮ್ಮ ಚೊಚ್ಚಲ ಯಶಸ್ವಿ ತುಳು ಸಾಂಸಾರಿಕ ಹಾಸ್ಯಮಯ ನಾಟಕ “ವಾ ಗಳಿಗೆಡ್ ಪುಟುದನಾ” ದುಬೈನ ಎಮಿರೇಟ್ಸ್ ಥಿಯೇಟರ್ನಲ್ಲಿ ಪ್ರದರ್ಶನಗೊಂಡಿತು. ಸರ್ವ ಶ್ರೀಗಳಾದ ಸರ್ವೋತ್ತಮ್ ಶೆಟ್ಟಿ, ಕಲಾಪೋಷಕರುಗಳಾದ ಹರೀಶ್ ಶೇರಿಗಾರ್, ಪ್ರವೀಣ್ ಕುಮಾರ್ ಶೆಟ್ಟಿ, ಸಂದೀಪ್ ರೈ ನಂಜೆ, ಜೋಸೆಫ್ ಮಾತಾಯಿಸ್, ಗಮ್ಮತ್ ಕಲಾವಿದೆರ್ ನ ಪೋಷಕರಾದ ಹರೀಶ್ ಬಂಗೇರ, ಡಯಾನ್ ಡಿಸೋಜಾ, ಜೇಮ್ಸ್ ಮೆಂಡೋನ್ಸಾ, ಮನೋಹರ್ ತೋನ್ಸೆ, ಅಧ್ಯಕ್ಷರಾದ ರಾಜೇಶ್ ಕುತ್ತಾರ್, ರಂಗ ನಿರ್ದೇಶಕ ವಿಶ್ವನಾಥ್ ಶೆಟ್ಟಿ ಮೊದಲಾದ ಗಣ್ಯರು ದೀಪ ಬೆಳಗಿಸುವುದರೊಂದಿಗೆ “ವಾ ಗಳಿಗೆಡ್ ಪುಟುದನಾ” ನಾಟಕಕ್ಕೆ ಚಾಲನೆ ನೀಡಿದರು ಮತ್ತು ಗಮ್ಮತ್ ಕಲಾವಿದೆರ್ ಯು ಎ ಇ ಅಧ್ಯಕ್ಷರಾದ ರಾಜೇಶ್ ಕುತ್ತಾರ್ ರವರು ಪ್ರಾಸ್ತಾವಿಕ ಸ್ವಾಗತದೊಂದಿಗೆ ಗಣ್ಯರನ್ನು ಅಭಿನಂದಿಸಿ ಗೌರವಿಸಿದರು. ಕಾರ್ಯಕ್ರಮದ ಅರಂಭದಲ್ಲಿ ಇತ್ತೀಚೆಗೆ ಅಗಲಿದ ದುಬೈಯ ಕಲಾಪೋಷಕ ದಿ. ದಿವೇಶ್ ಆಳ್ವ ಮತ್ತು ರಂಗ ಸಂಘಟಕ ದಿ. ಕಾಪು ಲೀಲಾಧರ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಕನಸಿನ ಯೋಜನೆಗಳ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ ಕೊಡಿಸುವಲ್ಲಿ ಅಭೂತಪೂರ್ವ ಸಹಕಾರ ನೀಡಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ರವರನ್ನು ಒಕ್ಕೂಟದ ಪರವಾಗಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಾಗೂ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈಯವರು ಉಪಸ್ಥಿತರಿದ್ದರು.

Read More