Author: admin
ಮುಂಬಯಿ:- ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಂಘಟನಾ ಪುರಸ್ಕೃತ ತುಳುಕೂಟ ಫೌಂಡೇಶನ್, ನಾಲಾಸೋಪರ(ರಿ) ಹಾಗೂ ಶ್ರೀದೇವಿ ಯಕ್ಷ ಕಲಾನಿಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಪೂರ್ಣಿಮಾ ಸುಧಾಕರ ಶೆಟ್ಟಿ ಅವರಿಗೆ ತುಳುನಾಡ ಐಸಿರಿ ಪ್ರಶಸ್ತಿಯನ್ನಿತ್ತು ಗೌರವಿಸಲಾಯಿತು. ಮಹಿಳಾ ವಿಭಾಗದ ಕಾರ್ಯದರ್ಶಿ ಮಲ್ಲಿಕಾ ಪೂಜಾರಿ ಅವರು ಸನ್ಮಾನ ಪತ್ರ ವಾಚಿಸಿದರು. ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶಶಿಧರ.ಕೆ ಶೆಟ್ಟಿ ಅವರ ಮುಂದಾಳತ್ವದಲ್ಲಿ ದಿನಪೂರ್ತಿ ನಡೆದ ಪಂಚಕಲಾ ವೈಭವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿತು. ವೇದಿಕೆಯಲ್ಲಿ ಗಣ್ಯರಾದ ಬಿಲ್ಲವರ ಅಸೋಸಿಯೇಶನ್ನಿನ ಅಧ್ಯಕ್ಷರಾದ ಹರೀಶ್.ಜಿ.ಅಮೀನ್, ಉದ್ಯಮಿ ಪ್ರವೀಣ್ ಶೆಟ್ಟಿ ಬೊಯಿಸರ್, ವಾಸ್ತುತಜ್ಞರಾದ ಅಶೋಕ್ ಪುರೋಹಿತ್, ಹೆಸರಾಂತ ಉದ್ಯಮಿ ಎನ್.ಟಿ.ಪೂಜಾರಿ, ಉದ್ಯಮಿ ರತ್ನಾಕರ ಶೆಟ್ಟಿ, ಅಶೋಕ್ ಇಂಡಸ್ಟ್ರೀಸ್ನ ಆಡಳಿತ ನಿರ್ದೇಶಕರಾದ ಅಶೋಕ್ ಶೆಟ್ಟಿ, ಪೆರ್ಮುದೆ ಮೊದಲಾದವರ ಗಣ್ಯ ಉಪಸ್ಥಿತಿಯಲ್ಲಿ ಡಾ.ಪೂರ್ಣಿಮಾ ಸುಧಾಕರ ಶೆಟ್ಟಿ ಅವರು…
ಮೂಡುಬಿದಿರೆ: ಪ್ರಾಮಾಣಿಕತೆ ಎಂಬುದು ನಮ್ಮ ನೈತಿಕ ಮತ್ತು ಸಾಮಾಜಿಕ ಬದುಕಿನ ಬಹುಮುಖ್ಯ ಅಂಶ. ಜೀವನದಲ್ಲಿ ಕಷ್ಟ, ವಿಫಲತೆಗಳು ಹಾಗೂ ಆಕಸ್ಮಿಕ ಸಮಸ್ಯೆಗಳು ಬಂದರೂ, ಪ್ರಾಮಾಣಿಕತೆಯ ಹಾದಿಯಲ್ಲಿ ನಡೆದರೆ ಯಶಸ್ಸು ನಮಗೆ ಖಂಡಿತ ಒಲಿಯುತ್ತದೆ ಎಂದು ಮಾಜಿ ಸಚಿವ ಹಾಗೂ ರಾಜ್ ಫಿಶ್ ಮೀಲ್ ಆ್ಯಂಡ್ ಆಯಿಲ್ ಕಂಪೆನಿಯ ವ್ಯವಸ್ಥಾಪಕ ಪಾಲುದಾರ ಪ್ರಮೋದ ಮಧ್ವರಾಜ್ ನುಡಿದರು. ಅವರು ಶನಿವಾರ ಕುವೆಂಪು ಸಭಾಂಗಣದಲ್ಲಿ ನಡೆದ ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ನೂತನ ವಿದ್ಯಾರ್ಥಿ ಸ್ಟಾರ್ಟ್ಅಫ್ ವೇದಿಕೆ ‘ಟ್ರೆöಬ್ಲೇಜ್’ನ್ನು ಉದ್ಘಾಟಿಸಿ, ‘ಯಶಸ್ವಿ ನಾಯಕತ್ವದ ತಂತ್ರಗಳು’ ವಿಷಯದ ಕುರಿತು ಮಾತನಾಡಿದರು. ನಮ್ಮ ಪರಂಪರೆ, ಸಂಸ್ಕೃತಿ, ಆಚರಣೆ, ಗುರುಹಿರಿಯರು, ಪಾಲಕರು, ಪೋಷಕರನ್ನು ಮರೆತ ದಿನ, ನಮ್ಮ ಅವನತಿ ಪ್ರಾರಂಭವಾಗುತ್ತದೆ. ದುರಾದೃಷ್ಟಾವಷಾತ್ ನಮ್ಮ ಇಂದಿನ ಸಮಾಜ ಭಾರತೀಯ ಭವ್ಯ ಪರಂಪರೆಯನ್ನು ಕಡೆಗಾಣಿಸುತ್ತಾ ಸಾಗಿದೆ.ನಮ್ಮ ಸಂಸ್ಕೃತಿಯ ಭಾಗವಾಗಿದ್ದ ಎರಡು ಕೈಗಳನ್ನು ಜೋಡಿಸಿ ವಂದಿಸುವ ಸಂಸ್ಕೃತಿ ನಮ್ಮಲ್ಲಿ ಮರೆಯಾಗಿ ವಿದೇಶಗಳಲ್ಲಿ ಆಳವಡಿಸಿಕೊಳ್ಳಲಾಗುತ್ತಿದೆ. ಇದು ಸಲ್ಲದು ಎಂದರು. ತನ್ನ ಜೀವನ ವೃತಾಂತವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊAಡ…
ನಮಗೆ ಜೀವನದಲ್ಲಿ ವಿದ್ಯೆ, ಬುದ್ದಿ, ಸಂಸ್ಕಾರ, ಸಂಸ್ಕ್ರತಿಯನ್ನು ತಿಳಿ ಹೇಳಿ ಸುಸಂಸ್ಕ್ರತರನ್ನಾಗಿ ಮಾಡಿದ ಮಾತಾ ಪಿತರ ಸೇವೆ ಮಾಡುವುದು ಪ್ರತಿಯೊಬ್ಬನ ಕರ್ತವ್ಯ. ಹಾಗೆಯೇ ಸಮಾಜದಲ್ಲಿ ಬೆಳೆದು ನೆಲೆ ನಿಂತು ಗಣ್ಯ ವ್ಯಕ್ತಿಯಾಗಿ ರೂಪಿಸುವಲ್ಲಿ ಸಹಾಯ ಮಾಡಿದ ವ್ಯಕ್ತಿ, ಸಂಘ ಅಥವಾ ಸಮಾಜದ ಋಣವನ್ನು ಸಂದಾಯ ಮಾಡುವುದು ಕೂಡಾ ನಮ್ಮ ಧರ್ಮ ಎಂದು ಅರಿಯಬೇಕು. ನಾವು ನೀಡುವ ಯಾವುದೇ ದಾನ, ಧರ್ಮ, ಸೇವೆ ಯಾವುದೇ ಇರಲಿ ಅದು ನಮ್ಮ ತಂದೆ ತಾಯಿಯವರ ಆಶೀರ್ವಾದ ಮತ್ತು ದೈವ ದೇವರ ಕೃಪೆಯಿಂದ ಸಾಧ್ಯವಾಗಿದೆ. ನಾವು ಮಾಡಿದ ಸೇವೆಯ ಫಲ ನಮ್ಮ ಮಕ್ಕಳಿಗೆ ಸಿಗಬಹುದು. ಬಂಟ ಸಮಾಜಕ್ಕೆ ಸಂಘದ ಮೂಲಕ ಮಾನವೀಯತೆಯ ಸೇವೆ ಸಿಗಲಿ. ತಾವುಗಳು ಸಂಘದ ಮೂಲಕ ಹಾಕಿದ ಮೂರು ಯೋಜನೆಗಳು ಇಂದಿನ ದಿನಕ್ಕೆ ನಮ್ಮ ಸಮಾಜಕ್ಕೆ ಖಂಡಿತವಾಗಿ ಬೇಕಾಗಿದೆ. ದೈವ ದೇವರ ಆಶೀರ್ವಾದ ಹಿಡಿದುಕೊಂಡು ಬಂದಿದ್ದೇವೆ. ಇಲ್ಲಿ ನೆಲೆ ನಿಂತು ಬೆಳೆದಿದ್ದೇವೆ. ಬಂಟ ಸಮಾಜಕ್ಕಾಗಿ ನಮ್ಮ ಸಂಸ್ಕ್ರತಿಯನ್ನು ಬೆಳೆಸಬೇಕು. ಯಾವುದೇ ದ್ವೇಷ ಬೇದ ಭಾವ…
ತ್ರಿರಂಗ ಸಂಗಮ ಮುಂಬಯಿ ಇದರ ರೂವಾರಿಗಳಾದ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮತ್ತು ನವೀನ್ ಶೆಟ್ಟಿ ಇನ್ನಬಾಳಿಕೆ ಈ ತ್ರಿಮೂರ್ತಿಗಳು ಲಕ್ಷ್ಮೀ ಪುತ್ರರಲ್ಲದಿದ್ದರೂ ಸರಸ್ವತಿ ಪುತ್ರರು ಎನ್ನುವುದರಲ್ಲಿ ಯಾವ ಸಂದೇಹವೂ ಇಲ್ಲ. ಇದಕ್ಕೆ ಈ ಮೂವರಲ್ಲಿರುವ ವಿಭಿನ್ನ ರೀತಿಯ ಬಹುಮುಖ ಪ್ರತಿಭೆಗಳೇ ಸಾಕ್ಷಿ. ಬಂಟರ ಸಂಘದ ಎಲ್ಲಾ ಕಾರ್ಯಕ್ರಮಗಳ ಯಶಸ್ವಿಯ ಹಿಂದೆ ಈ ಮೂವರ ಯೋಗದಾನವೂ ಆವಿಸ್ಮರಣೀಯ ಎನ್ನುವಂತಿದೆ. ಅವರ ಸಮಾಜಪರ ಸೇವಾಕಾರ್ಯ ಅಪಾರ. ಇಂದು ಈ ಸಂಸ್ಥೆಯ ಮೂರನೇ ವರ್ಷದ ಈ ವಾರ್ಷಿಕೋತ್ಸವವು ಇಷ್ಟೊಂದು ಅದ್ದೂರಿಯೊಂದಿಗೆ ಜನಸಾಗರದ ಮಧ್ಯೆ ಜರಗಿದೆ ಎನ್ನುವಂತಿದ್ದರೆ ಅದಕ್ಕೆ ಈ ಮೂವರ ಸೇವಾಕಾರ್ಯವೇ ನಿದರ್ಶನವಾಗಿದೆ. ಕೇವಲ ಮಾತು ಮುಖ್ಯವಲ್ಲ. ನಾವು ಮಾಡುವ ಕೆಲಸಕ್ಕೆ ಮಾತನಾಡಬೇಕು ಎನ್ನುವುದನ್ನು ಮತ್ತು ಹಣ ಸಂಪಾದನೆಗಿಂತ ಜನರ ಮನಸ್ಸು ಗೆಲ್ಲುವುದು ಮುಖ್ಯ. ಇದುವೇ ದೊಡ್ಡ ಸಾಧನೆ ಎಂಬುದನ್ನು ಕಾರ್ಯಕ್ರಮದ ಮೂಲಕ ತೋರಿಸಿ ಕೊಟ್ಟ ಹಿರಿಮೆ ತ್ರಿರಂಗ ಸಂಗಮದ ರೂವಾರಿಗಳದ್ದಾಗಿದೆ ಎಂದು ಬಂಟರ ಸಂಘ ಮುಂಬೈ ಇದರ ಅಧ್ಯಕ್ಷ ಪ್ರವೀಣ್ ಭೋಜ…
ಮೂಡುಬಿದಿರೆ: ಮುಸ್ಲಿಂ ಭಾಂದವ್ಯ ವೇದಿಕೆ ಕರ್ನಾಟಕದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಸಂಪಾಜೆ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮೂಲಕ ಆಧುನಿಕ ಕಾಲಕ್ಕೆ ಅಗತ್ಯವಿರುವ ಶಿಕ್ಷಣ ವ್ಯವಸ್ಥೆ, ನೂತನ ಪ್ರಯೋಗಗಳನ್ನು ಹಳ್ಳಿಗಳಿಗೂ ತಲುಪಿಸುವ ಕಾರ್ಯವಾಗುತ್ತಿದೆ. ಅಲ್ಲದೇ ಮೂಡುಬಿದಿರೆಯ ಸಂಸ್ಕೃತಿಯ ಪರಂಪರೆಯನ್ನು ಮುಂದುವರಿಸಲು ಮೋಹನ್ ಆಳ್ವರು ಸೌಹಾರ್ದಯುತವಾಗಿ ಶ್ರಮಿಸುತ್ತಿದ್ದಾರೆ. ಇವರು ನಾಡಿನ ಅಸ್ಮಿತೆಯನ್ನು ಮೈಗೂಡಿಸಿಕೊಂಡು ವಿಶ್ವವ್ಯಾಪಕವಾಗಿ ಅಂಗೀಕೃತ ಹೊಂದಿರುವ ಓರ್ವ ಮಹಾನ್ ಸಾಧಕ ಎಂದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಎಂ. ಮೋಹನ್ ಆಳ್ವ, ಮನಸ್ಸು ಹಾಗೂ ಜೀವನ ಪದ್ಧತಿಯನ್ನು ಉತ್ತಮಗೊಳಿಸುವ ಮೂಲಕ ಸೌಹಾರ್ದ ಜೀವನ ನಡೆಸಲು ಸಾಧ್ಯ. ಬದುಕಿನ ಪ್ರತಿ ಹಂತದಲ್ಲೂ ಮೌಲ್ಯಯುತವಾಗಿರುವುದು ಬಹಳ ಅಗತ್ಯ. ತನ್ನ 73 ವರ್ಷಗಳ ಬದುಕಿನ ರೀತಿಗೆ ಸೌಹಾರ್ದ ಸಿರಿ ಪ್ರಶಸ್ತಿ…
ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯ ಉದ್ಘಾಟನೆ ನೆರವೇರಿತು. ಶರವು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿಗಳು ಉದ್ಘಾಟನೆ ನೆರವೇರಿಸಿ, ದೇವತಾ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಿ ಮಾರಿಯಮ್ಮನ ಕೃಪೆಗೆ ಪಾತ್ರರಾಗೋಣ. ಯಾವುದೇ ಕಾರ್ಯ ಆರಂಭ ಮಾಡುವಾಗ ಗಣಪತಿಯ ಸ್ಮರಣೆ ಅಗತ್ಯ. ಹೀಗಾಗಿ ಶರವು ದೇವಸ್ಥಾನದಲ್ಲಿ ಗಣಪತಿಯನ್ನು ಸ್ಮರಿಸಿ ಕಾಪು ಕ್ಷೇತ್ರಕ್ಕೆ ದಕ್ಷಿಣ ವಾಹಿನಿಯ ಹೊರೆಕಾಣಿಕೆ ಕಚೇರಿ ಶರವು ಕ್ಷೇತ್ರದಲ್ಲಿ ಉದ್ಘಾಟನೆಗೊಂಡು ಹೊರೆ ಕಾಣಿಕೆಗೆ ಚಾಲನೆ ನೀಡಲಾಗಿದೆ. ಫೆ. 25 ರಿಂದ ಮಾರ್ಚ್ 5 ರ ವರೆಗೆ ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಭಾಗವಹಿಸೋಣ ಎಂದರು. ಬಳಿಕ ಮಾತನಾಡಿದ ಹಸಿರುವಾಣಿ ಹೊರೆ ಕಾಣಿಕೆ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿಯವರು ಕಾಪುವಿನ ಅಮ್ಮನ ದೇವಾಲಯ ದಕ್ಷಿಣ ಭಾರತದಲ್ಲಿ ಅತೀ ಸುಂದರವಾಗಿ ಧಾರ್ಮಿಕ ಕ್ಷೇತ್ರಕ್ಕೆ ಮೆರುಗು ನೀಡುವ ವಾಸ್ತುವಿಗೆ ಅನುಗುಣವಾಗಿ ದೇವಸ್ಥಾನದ ಕಾಮಗಾರಿ ನಡೆಯುತ್ತಿದ್ದು ಕವಚ,…
ತುಳು ರಂಗಭೂಮಿಯಲ್ಲೇ ಹೊಸ ದಾಖಲೆ ಬರೆದಿರುವ “ಶಿವದೂತೆ ಗುಳಿಗೆ”ಯ ರೂವಾರಿ ವಿಜಯಕುಮಾರ್ ಕೊಡಿಯಾಲ್ಬೈಲ್ ಅವರು ಈಗ ಮತ್ತೊಂದು ಹೊಸ ಚಾರಿತ್ರಿಕ ನಾಟಕವನ್ನು ಪ್ರೇಕ್ಷಕರ ಮುಂದಿಡಲು ಮುಂದಾಗಿದ್ದಾರೆ. ಭಾರೀ ನಿರೀಕ್ಷೆ ಮೂಡಿಸಿರುವ ಈ ನಾಟಕವೇ “ಶಿವಾಜಿ”. ಈ ನಾಟಕವು ಮಾರ್ಚ್ 6ರಂದು ಕಟೀಲಿನಲ್ಲಿ ಮೊದಲ ಪ್ರದರ್ಶನ ಕಾಣಲಿದ್ದು, ಮಾರ್ಚ್ 13ರಂದು ಮಂಗಳೂರಿನ ಪುರಭವನದಲ್ಲಿ ಪ್ರದರ್ಶನ ನಡೆಯಲಿದೆ. ಆ ಮೂಲಕ ನಿರೀಕ್ಷೆ ಯಾವ ಮಟ್ಟಕ್ಕೆ ಇದೆ ಎಂಬುದು ಸ್ಪಷ್ಟವಾಗಲಿದೆ. ಮೊದಲ ಪ್ರದರ್ಶನ ಆಗುವ ಮೊದಲೇ ಈ ನಾಟಕದ 69 ಪ್ರದರ್ಶನಗಳು ಈಗಾಗಲೇ ಬುಕ್ಕಿಂಗ್ ಆಗಿದೆ. ಇದು ಆ ನಾಟಕ ಹಾಗೂ ವಿಜಯಕುಮಾರ್ ಕೊಡಿಯಾಲ್ಬೈಲ್ ಅವರ ಮೇಲೆ ತುಳುನಾಡಿಗರು ಇರಿಸಿದ ವಿಶ್ವಾಸಕ್ಕೆ ಸಾಕ್ಷಿಯಾಗಿದೆ.ಶಿವಾಜಿ ನಾಟಕಕ್ಕೆ ಮಹಾರಾಷ್ಟ್ರದಲ್ಲೇ ರಂಗವಿನ್ಯಾಸಕ್ಕೆ ಮುನ್ನುಡಿ ಬರೆಯಲಾಗಿದೆ. ಶಿವದೂತೆ ಗುಳಿಗನಿಕ್ಕಿಂತಲೂ ಅದ್ದೂರಿ ರಂಗವಿನ್ಯಾಸ ಈ ನಾಟಕದಲ್ಲಿ ಇರಲಿದ್ದು, ಇದಕ್ಕೆ ಸಾಕಷ್ಟು ಪೂರ್ವ ತಯಾರಿಯನ್ನೂ ಕೊಡಿಯಾಲ್ಬೈಲ್ ಅವರ ನೇತೃತ್ವದಲ್ಲಿ ಮಾಡಲಾಗಿದೆ. ಶಶಿರಾಜ್ ಕಾವೂರು ಅವರ ‘ಶಿವಾಜಿ’ ಕಥೆಯನ್ನು ಕೊಡಿಯಾಲ್ಬೈಲ್ ರಂಗಕ್ಕೆ ತರುತ್ತಿದ್ದು, ಎಷ್ಟು ಅದ್ದೂರಿತನ…
ಕಾರ್ಕಳ: ತಂದೆ-ತಾಯಿ-ಗುರುಗಳಿಗೆ ವಂದಿಸಿ ಪಡೆದ ವಿದ್ಯೆಯು ವಿದ್ಯಾರ್ಥಿಯ ಸಾಧನೆಗೆ ಕಾರಣವಾಗುತ್ತದೆ. ಸಂಕಲ್ಪ ಶುದ್ಧದಿಂದ ಇಟ್ಟಹೆಜ್ಜೆಯು ಯಶಸ್ಸನ್ನೇ ತಂದುಕೊಡುತ್ತದೆ. ಯಶಸ್ವಿ ಬದುಕಿನ ಸಾರ್ಥಕತೆ ಪೋಷಕರದಾಗುತ್ತದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹೇಳಿದರು. ಅವರು ರಾಷ್ಟ್ರೀಯ ಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕೆ ಎನ್.ಟಿ.ಎ ನಡೆಸಿದ ಪ್ರಥಮ ಹಂತದ ಜೆ.ಇ.ಇ ಮೈನ್ ಫಲಿತಾಂಶದಲ್ಲಿ 97ಕ್ಕೂ ಅಧಿಕ ಪರ್ಸಂಟೈಲ್ ಗಳಿಸಿದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 47 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ಸಾಧಕರಿಗೆ ಸನ್ಮಾನ ಹಾಗೂ ನಗದು ಪುರಸ್ಕಾರ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ 99.6ಕ್ಕೂ ಅಧಿಕ ಪರ್ಸಂಟೈಲ್ ಗಳಿಸಿದ ಸಾಧಕ ವಿದ್ಯಾರ್ಥಿಗಳಾದ ಧನುಶ್ ನಾಯಕ್, ತರುಣ್ ಎ. ಸುರಾನ, ಚಿಂತನ್ ಜೆ. ಎಂ ಮತ್ತು ಆಕಾಶ್ ಎಚ್ ಪ್ರಭು ಇವರಿಗೆ ತಲಾ 50 ಸಾವಿರ ರೂಪಾಯಿಯನ್ನು, 99ಕ್ಕೂ ಅಧಿಕ ಪರ್ಸಂಟೈಲ್ ಗಳಿಸಿದ ಹೃತ್ವಿಕ್ ಶೆಟ್ಟಿ, ಮನೋಜ್ ಕಾಮತ್, ವೇದಾಂತ್ ಶೆಟ್ಟಿ ಮತ್ತು ಸತೀಶ್ ಎಸ್.ಕೆ. ಇವರಿಗೆ ತಲಾ 20 ಸಾವಿರ…
ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ : ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ್ ಶೆಟ್ಟಿ
ಬಂಟ್ವಾಳ ತಾಲೂಕಿನ ಸಜೀಪ ಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ ಪ್ರಧಾನ ಅರ್ಚಕರಾದ ವೇ.ಮೂ ಮಹೇಶ್ ಭಟ್, ದೇವಿಪ್ರಸಾದ್ ಪೂಂಜಾ ಬರಂಗರೆ, ಸುಧೀರ್ ಕುಮಾರ್, ಕೆ.ಮೋಹನದಾಸ್ ಪೂಜಾರಿ, ನವೀನ್ ಕುಮಾರ್ ಪಣೋಲಿಬೈಲ್, ಅಣ್ಣು ನಾಯ್ಕ್ ನಗ್ರಿ, ಸುಜಾತ ಗಣೇಶ್ ಶೆಟ್ಟಿ, ಬೇಬಿ ಯೋಗೀಶ್ ಪೂಜಾರಿ ಅವರು ನೇಮಕಗೊಂಡಿದ್ದಾರೆ. ನೂತನ ವ್ಯವಸ್ಥಾಪನಾ ಸಮಿತಿ ದೇವಳದಲ್ಲಿ ಅಧಿಕಾರ ಸ್ವೀಕರಿಸಿದೆ. ಈ ಸಂದರ್ಭ ದೇವಳದ ಆಡಳಿತಾಧಿಕಾರಿ ತಾರನಾಥ ಸಾಲಿಯಾನ್ ಪಿ., ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಸಜೀಪ ಮುನ್ನೂರು ಮೂರ್ತೆದಾರರ ಸೇ.ಸ. ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಬೊಳ್ಳಾಯಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
ಮಾನವ ಜನ್ಮ ದೊಡ್ಡದು, ಅದನ್ನು ಹಾಳು ಮಾಡಬೇಡಿ, ಹುಚ್ಚಪ್ಪಗಳಿರಾ ಎಂಬ ಪದ ಮನುಜನ ಬದುಕಿನ ಸಾರ್ಥಕ್ಯಕ್ಕೆ ಕನ್ನಡಿಯಾಗಿದೆಯೋ ಅದೇ ರೀತಿ ಸಮಾಜದಲ್ಲಿ ಶಾಂತಿ ಸೌಹಾರ್ದತೆಯಿಂದ ಮಾನವನಾಗಿ ಬದುಕಿ ನಾವು ಸಮಾಜಕ್ಕೆ ಮಾದರಿಯಾಬೇಕು. ಜೀವನದಲ್ಲಿ ತೃಪ್ತಿ ಎಂಬುದು ಇದ್ದರೆ ದುರಾಸೆ ಬರುವುದಿಲ್ಲ ಹಾಗೂ ಜೀವನ ಸಮಾಧಾನಕರವಾಗಿರುತ್ತದೆ. ಶಾಂತಿ ಸೌಹಾರ್ದತೆ ಸಮಾಜದಲ್ಲಿ ನೆಲೆಯಾದರೆ ದೇಶ ಸದೃಡವಾಗಲು ಸಾದ್ಯ. ದೇಶ ಕಟ್ಟುವ ಕೆಲಸದಲ್ಲಿ ಪ್ರತಿಯೊಬ್ಬರ ಪಾಲು ಮಹತ್ವದ್ದು. ಆಕಾಂಕ್ಷೆ ಎಲ್ಲರಲ್ಲಿಯೂ ಇರಬೇಕು. ಆದರೆ ನಿಯತ್ತು ಮತ್ತು ಕಾನೂನು ಚೌಕಟ್ಟಿನಲ್ಲಿರಬೇಕು. ಮನುಷ್ಯ ಜೀವನದಲ್ಲಿ ವೈಯುಕ್ತಿಕವಾಗಿ ಮತ್ತು ಸಮಾಜದಲ್ಲಿ ನಮ್ಮ ಭಾವನೆಗಳು ಬದಲಾವಣೆ ಆಗುವುದು ಸಹಜ. ಆದರೆ ನಿಯತ್ತಿಗೆ ಬೆಲೆ ತರುವಂತಹ ಬದಲಾವಣೆ ಆಗಬೇಕು. ಅಧಿಕಾರದಲ್ಲಿರುವಾಗ ಅನ್ಯಾಯ, ಮೋಸ, ವಂಚನೆ, ಭ್ರಷ್ಟಾಚಾರ ಮಾಡುವುದು ಮಾನವೀಯತೆಯಲ್ಲ. ಅದು ದೇಶ ದ್ರೋಹ. ಕೇವಲ ವ್ಯಕ್ತಿಯಿಂದ ಮಾತ್ರ ತಪ್ಪುಗಳಾವುದು ಅಲ್ಲ. ಸಮಾಜದಿಂದ ಕೂಡಾ ತಪ್ಪುಗಳಾಗುತ್ತವೆ. ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಮಾನವೀಯತೆಯ ಸೇವೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾದ್ಯ ಎಂದು ಸುಪ್ರೀಂಕೋರ್ಟ್ ನ…















