Author: admin
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಮಾರು 1500 ಕೆ.ಜಿ. ಭಾರದ ಹಾಗೂ ಐದು ಅಡಿ ಎತ್ತರದ ಕಂಚಿನ ಗಂಟೆ ಸ್ಥಾಪನೆಯಾಗಲಿದೆ. ದೇಶದಲ್ಲೇ ದ್ವಿತೀಯ ಅತ್ಯಂತ ದೊಡ್ಡ ಗಂಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಸದ್ಯ ಅಯೋದ್ಯೆ ಶ್ರೀರಾಮ ಮಂದಿರದಲ್ಲಿ ಇರುವ 2200 ಕೆ.ಜಿ. ಗಂಟೆ ದೇಶದಲ್ಲೇ ಅತ್ಯಂತ ದೊಡ್ಡ ಗಂಟೆಯಾಗಿದೆ. ಕಾಪುವಿನಲ್ಲಿ ಸ್ಥಾಪಿಸಲಾಗುವ ಈ ಗಂಟೆ ಕರ್ನಾಟಕ ರಾಜ್ಯದಲ್ಲೇ ಅತ್ಯಂತ ದೊಡ್ಡ ಗಂಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಫೆಬ್ರವರಿ 9ರಂದು ನಡೆಯಲಿರುವ ಕಾಪು ಹೊಸ ಮಾರಿಗುಡಿಯ ನೂತನ ಸ್ವರ್ಣ ಗದ್ದುಗೆ, ಬೆಳ್ಳಿರಥ ಮತ್ತಿತರ ಕೊಡುಗೆಗಳನ್ನು ಬರಮಾಡಿಕೊಳ್ಳಲು ವೈಭವದ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಆ ಸಂದರ್ಭದಲ್ಲಿ ಈ ಗಂಟೆಯನ್ನು ಅದ್ದೂರಿ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಗುವುದು.ಮುಂಬೈಯ ಮಿರಾರೋಡ್ ನಲ್ಲಿ ಅಲಯನ್ಸ್ ಇನ್ಫ್ರಾಸ್ಟ್ರಕ್ಟರ್ ಆಂಡ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಉದ್ಯಮ ಸಂಸ್ಥೆ ಹೊಂದಿರುವ ಅರವಿಂದ ಶೆಟ್ಟಿ ಮತ್ತು ಪಲ್ಲವಿ ಶೆಟ್ಟಿ ದಂಪತಿ ಮಾರಿಯಮ್ಮನ ನೂತನ ದೇಗುಲಕ್ಕೆ ಇದನ್ನು ಕೊಡುಗೆಯಾಗಿ ನೀಡಲಿದ್ದಾರೆ. ಆಂಧ್ರಪ್ರದೇಶದ ಬಿ.ಎಸ್.ಎಂ ಫೌಂಡ್ರಿ…
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಇದರ ವತಿಯಿಂದ ಫೆಬ್ರವರಿ 6 ರಂದು ಶ್ರೀ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ ಮತ್ತು ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರದ ಲೋಕಾರ್ಪಣೆ, ತುಳು ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮವನ್ನು ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪೋಜ್ವಲನ ಮಾಡುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಸಾದ್ವಿ ಶ್ರೀ ಮಾತನಂದಮಯಿ, ಸುಳ್ಯ ಕ್ಷೇತ್ರ ವಿಧಾನಸಭಾ ಶಾಸಕಿ ಭಾಗೀರತಿ ಮುರುಳ್ಯ, ಮೂಲ್ಕಿ ಬಂಟರ ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ವಾಮಯ್ಯ ಶೆಟ್ಟಿ ದಂಪತಿಗಳು, ದಾಮೋದರ್ ಶೆಟ್ಟಿ, ವಿಕ್ರಂ ಹೆಗ್ಡೆ, ಸುರೇಶ್ ರೈ ಮಕರಜ್ಯೋತಿ, ನವನೀತ್ ಶೆಟ್ಟಿ ಕದ್ರಿ, ಡಾ ಅದೀಪ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪೇಟೆಮನೆ, ಒಡಿಯೂರು ಶ್ರೀ ಗುರುದೇವಾನಂದ ಸಂಸ್ಥಾನಮ್ ನ ಎಲ್ಲಾ ಪದಾಧಿಕಾರಿಗಳು, ಸಮಿತಿ ಸದಸ್ಯರುಗಳು ಹಾಗೂ ಇತರರು ಉಪಸ್ಥಿತರಿದ್ದರು.
ಬಂಟರ ಸಂಘ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ : ಸೀರೆ, ವಜ್ರಾಭರಣ ಹಾಗೂ ಇನ್ನಿತರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ
ಬಂಟರ ಸಂಘ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಫೆಬ್ರವರಿ 2 ರಂದು ಆಯೋಜಿಸಿದ್ದ ಸೀರೆ, ವಜ್ರಾಭರಣ ಹಾಗೂ ಇತರ ಆಕರ್ಷಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಯಶಸ್ವಿಯಾಗಿ ನೆರವೇರಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಅವರು ಮಾತನಾಡುತ್ತಾ, ಮಹಿಳೆಯರು ಅಲಂಕರಿಸಿಕೊಂಡರೆ ಮನೆಗೂ ಶೋಭೆ. ಇಂದಿನ ಈ ಪ್ರದರ್ಶನ ವಿಶೇಷವಾಗಿ ಮಹಿಳೆಯರಿಗಾಗಿದ್ದರೂ ಈ ಮೂಲಕ ತುಂಬಾ ಜನರಿಗೆ ಅನುಕೂಲವಾಗಲಿದೆ. ವ್ಯಾಪಾರದ ದೃಷ್ಟಿಯಿಂದ ಒಂದೆಡೆಯಾದರೆ ಮತ್ತೊಂದು ಕಡೆ ಎಲ್ಲರೂ ಸಂತೋಷದಿಂದ ಬೆರೆಯುವ ಅವಕಾಶ ದೊರೆಯುತ್ತದೆ. ಬಂಟರ ಸಂಘದ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿರುವುದು ನನಗೆ ಸಂತಸವನ್ನು ನೀಡಿದೆ. ಅದರಲ್ಲೂ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಪ್ರತಿಯೊಂದು ಕಾರ್ಯಕ್ರಮವೂ ಉತ್ತಮ ರೀತಿಯಲ್ಲಿ ಮೂಡಿ ಬರುತ್ತಿದೆ. ಇದಕ್ಕೆ ನಿಮ್ಮೆಲ್ಲರ ಪರಿಶ್ರಮವೇ ಕಾರಣ. ಇಂದಿನ ಈ ಪ್ರದರ್ಶನವೂ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಮುಂಬಯಿ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಅರ್ ಶೆಟ್ಟಿಯವರು ಮಾತನಾಡುತ್ತಾ,…
ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಕಂಪ್ಯೂಟರ್ ತರಬೇತಿ ಕೇಂದ್ರ, ಗ್ರಂಥಾಲಯ ಮತ್ತು ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಲಾಯಿತು. ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು- 300 ಟ್ರೀಸ್ ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ಮುಲ್ಲಿಬಾರು ಸ.ಹಿ.ಪ್ರಾ ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಮತ್ತು ಕ್ರೀಡಾ ಸಾಮಾಗ್ರಿಗಳನ್ನು ಒಳಗೊಂಡ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಗೌರವಾನ್ವಿತ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಉದ್ಘಾಟಿಸಿದರು. ಗ್ರಂಥಾಲಯಕ್ಕೆ ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾoತರಿಸಿದರು ಹಾಗೂ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ನಂತರ ಮಾತನಾಡಿದ ಶಾಸಕರು, ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆಯ ಬಗ್ಗೆ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 300 ಟ್ರೀಸ್ ಬಗ್ಗೆ ವಿವರಿಸಿದರು. ಮುಲ್ಲಿಬಾರು ಅಂತಹ ಕಡು ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತಿರುವುದಾಗಿ ಹೇಳಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಊರ, ಪರ ಊರ ದಾನಿಗಳ ನೆರವನ್ನೂ ಸ್ಮರಿಸಿದರು. ಸ್ವಯಂಸ್ಪೂರ್ತಿ…
ಮಹಾಕುಂಭ ಮೇಳದಲ್ಲಿ ಪ್ರಯಾಗ್ ರಾಜ್ ನ ಪಲಿಮಾರು ಮಾಧ್ವ ಮಠದಲ್ಲಿ ಶ್ರೀ ಶ್ರೀ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಕೇಂದ್ರೀಯ ಸಮಿತಿಯ ತಂಡವನ್ನು ಪೂಜ್ಯ ಸ್ವಾಮೀಜಿಯವರ ಶಿಷ್ಯ ವೃಂದದವರು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಊಟ ಫಲಹಾರಗಳನ್ನು ನೀಡಿ ಸತ್ಕರಿಸಿದರು ಹಾಗೂ ಬ್ರಾಹ್ಮೀ ಮುಹೂರ್ತದಲ್ಲಿ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ ನೇತೃತ್ವದಲ್ಲಿ ನೆರವೇರಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ, ಕೋಶಾಧಿಕಾರಿ ಸಿಎ ಸುರೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ತಂಡದಲ್ಲಿದ್ದರು.
ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ವತಿಯಿಂದ ಫೆಬ್ರವರಿ 8ರಂದು ಶನಿವಾರ ಸಂಜೆ 4 ಗಂಟೆಯಿಂದ ಮೀಂಜ ಬಂಟರ ಸಂಘ ಮೈದಾನ ಚಿಗುರುಪಾದೆಯಲ್ಲಿ ನಡೆಯುವ ಸದಾಶಿವ ಸಹಾಯ ಹಸ್ತ ವಿತರಣೆ ಮತ್ತು ಉಚಿತ ಅರೋಗ್ಯ ವಿಮೆ ಉದ್ಘಾಟನೆ ಹಾಗೂ ಸದಾಶಿವ ಶೆಟ್ಟಿ ಅಭಿಮಾನಿ ಬಳಗ ಹಾಗೂ ಹಿತೈಷಿಗಳಿಂದ ತುಳುನಾಡ ಕಣ್ಮಣಿ, ಕೊಡುಗೈ ದಾನಿ ಕರ್ನಾಟಕ ರಾಜ್ಯೋತ್ಸವ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಸದಾಶಿವ ಶೆಟ್ಟಿ ಕನ್ಯಾನರವರಿಗೆ ಅಭಿನಂದನಾ ಕಾರ್ಯಕ್ರಮವು ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ತುಳು ಜಾನಪದ ನಾಟಕದೊಂದಿಗೆ ಸಮಾರೋಪಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸುಮಾರು 4000 ಕ್ಕಿಂತ ಮೇಲ್ಪಟ್ಟು ಜನಸಾಮಾನ್ಯರು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಉಪಹಾರ ಮತ್ತು ಭೋಜನದ ವ್ಯವಸ್ಥೆ ಇದೆ ಹಾಗೂ ಈ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಸ್ತ, ಉಚಿತ ಅರೋಗ್ಯ ಕುಟುಂಬ ವಿಮೆ (5 ಲಕ್ಷ) ಆಂಬುಲೆನ್ಸ್ ಹಸ್ತಾಂತರ, ಶಾಲಾ ವಾಹನ ಹಸ್ತಾಂತರ, ಶಾಲಾ ಅಭಿವೃದ್ಧಿಗೆ ಸಹಾಯ, ಅಂಗವಿಕಲರಿಗೆ ಕೃತಕ ಕಾಲು,…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಉಡುಪಿಯ ಕೊಳಲಗಿರಿಯ ಸಮೀಪ ಇರುವ ಹೋಂ ಡಾಕ್ಟರ್ ಫೌಂಡೇಶನ್ ನ ಆಡಳಿತಕ್ಕೊಳಪಟ್ಟ ಸ್ವರ್ಗ ಅಸಹಾಯಕರ ಅರಮನೆ ಅನಾಥಾಶ್ರಮಕ್ಕೆ 35000 ರೂಪಾಯಿ ಮೌಲ್ಯದ ಶುದ್ಧ ಕುಡಿಯುವ ನೀರಿನ ವಾಟರ್ ಫಿಲ್ಟರ್ ಹಾಗೂ ಆಶ್ರಮಕ್ಕೆ ಬೇಕಾದ 10000 ಮೌಲ್ಯದ ದಿನಬಳಕೆಯ ವಸ್ತುಗಳನ್ನು ಸಂಘದ ವತಿಯಿಂದ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿ ಹೋಮ್ ಡಾಕ್ಟರ್ ಫೌಂಡೇಶನ್ ನ ಆಡಳಿತ ನಿರ್ದೇಶಕ ಡಾ. ಶಶಿಕಿರಣ್ ಶೆಟ್ಟಿ ಅವರಿಗೆ ಹಸ್ತಾಂತರ ಮಾಡಿದರು.ಈ ಸಂಧರ್ಭ ಸಂಘದ ಅಧ್ಯಕ್ಷ ಶ್ರೀ ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಶ್ರೀಮತಿ ನಿಮಿತ ಶೆಟ್ಟಿ ಮತ್ತು ಸ್ವರ್ಗ ಆಶ್ರಮದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಒಟ್ಟು 25 ಕಂಬಳ ನಡೆಯಲಿದ್ದು, ಶಿವಮೊಗ್ಗದಲ್ಲಿ ಕೊನೆಯ ಕಂಬಳವನ್ನು ಏಪ್ರಿಲ್ 19 ಮತ್ತು 20 ರಂದು ಆಯೋಜಿಸಲಾಗುತ್ತಿದೆ. ಕಂಬಳದ ಟ್ರ್ಯಾಕ್ಗೆ ಫೆಬ್ರವರಿ 10ರಂದು ಮಧ್ಯಾಹ್ನ 3 ಗಂಟೆಗೆ ಭೂಮಿ ಪೂಜೆ ನಡೆಸಲಾಗುತ್ತದೆ ಎಂದು ಮಲೆನಾಡ ತುಂಗಭದ್ರಾ ಜೋಡುಕರೆ ಕಂಬಳ ಸಮಿತಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂಬಳ ಸಮಿತಿ ಪ್ರಮುಖರು, ಶಿವಮೊಗ್ಗ ಭದ್ರಾವತಿ ರಸ್ತೆಯ ಮಾಚೇನಹಳ್ಳಿಯ ಜಯಲಕ್ಷ್ಮಿ ಪೆಟ್ರೋಲ್ ಬಂಕ್ ಹಿಂಭಾಗ 16 ಎಕರೆ ಜಾಗದಲ್ಲಿ ಕಂಬಳ ನಡೆಸಲಾಗುತ್ತಿದೆ ಎಂದರು. ಮಲೆನಾಡ ಕಂಬಳ ಅಧ್ಯಕ್ಷ ಮುಚ್ಚೂರು ಕಲ್ಕುಡೆ ಲೋಕೇಶ್ ಶೆಟ್ಟಿ ಮಾತನಾಡಿ, ಇದು ಕೇವಲ ಕೋಣ ಓಡಿಸುವ ಸ್ಪರ್ಧೆಯಲ್ಲ. ಇದರಲ್ಲಿ ತುಳುನಾಡಿನ ಇತಿಹಾಸ ಮತ್ತು ಸಂಪ್ರದಾಯ ಇದೆ. ಕೃಷಿ ಚಟುವಟಿಕೆ ಮುಗಿದ ನಂತರ ಈ ಸ್ಪರ್ಧೆಗಳು ನಡೆಯುತ್ತವೆ. ಪ್ರತಿ ಬಾರಿ 25 ಕಂಬಳ ನಡೆಯುತ್ತವೆ. ಈ ಬಾರಿಯ ಕೊನೆಯ ಕಂಬಳ ಶಿವಮೊಗ್ಗದಲ್ಲಿ ನಡೆಯಲಿದೆ. ಕಂಬಳ ನಡೆಸಲು ಹಲವು ನಿಯಮಗಳಿವೆ. ಆ ನಿಯಮದಂತೆಯೇ ಸ್ಪರ್ಧೆ ಆಯೋಜಿಸಲಾಗುತ್ತದೆ ಎಂದರು.ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್…
ಅಂದೊಂದು ಕಾಲವಿತ್ತು. ಸಂಜೆ ಹೊತ್ತಿಗೆ, ದೇವರಿಗೆ ದೀಪವಿಟ್ಟು ಮನೆ ಮನೆಯಲ್ಲಿ ಹಿರಿಯರು ಕುಳಿತು ಭಜನೆ ಮಾಡುತ್ತಿದ್ದರು. ಅವರ ಪಕ್ಕದಲ್ಲಿ ಅಂಬೆಗಾಲಿಡೋ ಮಗುವಿನಿಂದ ಹಿಡಿದು ಕಾಲೇಜು ಓದೋ ಮಕ್ಕಳು ಕುಳಿತಿರುತ್ತಿದ್ದರು. ಅದರ ಜೊತೆಗೆ ತಾಳ ತಟ್ಟುವ ಆ ಕಲೆ ಯಾವ ಸಂಗೀತ ತರಗತಿಯಲ್ಲೂ ಕಲಿತಿದ್ದಲ್ಲ. ಸಾಲು ಸಾಲು ಭಜನೆಗಳು ದೊಡ್ಡವರ ಬಾಯಿಂದ ಮಕ್ಕಳ ಬಾಯಲ್ಲಿ ಸರಾಗವಾಗಿ ಹರಿದು ಬರುತ್ತಿತ್ತು. ಯಾರೂ ಕೂತು ಒಂದೊಂದೇ ಪದಗಳನ್ನು ಕಲಿಸುತ್ತಿರಲಿಲ್ಲ. ಮೊಬೈಲ್, ಆಡಿಯೋ, ವಿಡಿಯೋಗಳಿರಲಿಲ್ಲ. ರೇಡಿಯೋ ಆನ್ ಮಾಡಿದ್ರೆ ಬೆಳಿಗ್ಗೆ ಶುರುವಾಗುವ ಅದೇ ಭಕ್ತಿ ಹಾಡುಗಳು ಕಿವಿಗೆ ಮನಸ್ಸಿಗೆ ತಲುಪುತ್ತಿತ್ತು. ಆದರೆ ಈಗ ಕಾಲ ಬದಲಾಯಿತು. ನಾವು ಬದಲಾದ ಕೆಲಸ, ಅನಿವಾರ್ಯತೆಯು ಬದುಕಿನ ಅಗತ್ಯತೆಗಳು ಬಿಟ್ಟು ಹೊರಗೆ ಹೊರಟ ನಾವುಗಳು ಈ ಸ್ವರ್ಧಾತ್ಮಕ ಬದುಕಿನ ನಾಗಲೋಟದಲ್ಲಿ ನಾ ಮುಂದು ತಾ ಮುಂದು ಎಂದು ಓಡುತ್ತಿದ್ದೇವೆ. ಜೊತೆಗೆ ನಮ್ಮ ಮಕ್ಕಳನ್ನು ಯಾಂತ್ರಿಕ ಬದುಕಿಗೆ ತಳ್ಳುತ್ತಿದ್ದೇವೆ. ಹಳ್ಳಿಗಳಲ್ಲಿ ಅವಿಭಕ್ತ ಕುಟುಂಬವಿತ್ತು. ಅದಲ್ಲದಿದ್ದರೂ ವಿಭಕ್ತ ಕುಟುಂಬದಲ್ಲಿ ಅಜ್ಜ, ಅಜ್ಜಿ, ಅಕ್ಕ, ತಂಗಿ,…
ಘರ್ಷಣೆಗಾಗಿ ಜಾತಿ ಸಂಘಟನೆ ಇರುವುದಲ್ಲ. ನಮ್ಮ ಸಮಾಜದ ಆರ್ಥಿಕವಾಗಿ ಹಿಂದುಳಿದವರನ್ನು ಮೇಲಕ್ಕೆ ಎತ್ತುವ, ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗುವ ಉದ್ದೇಶವನ್ನು ಹೊಂದಿದಾಗ ಮಾತ್ರ ಜಾತಿ ಸಂಘಟನೆಗೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಇಂದು ದಾನಿಗಳ ನೆರವಿನಿಂದ 10 ಲಕ್ಷ ರೂಪಾಯಿ ವಿದ್ಯಾರ್ಥಿವೇತನವನ್ನು ಸಮಾಜದ ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಹೆಬ್ರಿ ಬಂಟರ ಸಂಘದ ಅಧ್ಯಕ್ಷ ಸೀತಾನದಿ ವಿಠಲ ಶೆಟ್ಟಿ ಹೇಳಿದರು. ಅವರು ಹೆಬ್ರಿ ಶ್ರೀಮತಿ ಶೀಲಾ ಸುಭೋದ್ ಬಲ್ಲಾಳ ಬಂಟರ ಸಭಾಭವನದ ವಠಾರದ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವೇದಿಕೆಯಲ್ಲಿ ನಲವತ್ತರ ಸಂಭ್ರಮ ಸಮಾವೇಶದ ಸಮಾರಂಭದಲ್ಲಿ ಬಂಟ ಸಾಧಕರನ್ನು ಸನ್ಮಾನಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಹೆಬ್ರಿ ಬಂಟರ ಸಂಘದ ಗೌರವಾಧ್ಯಕ್ಷ ಮುನಿಯಾಲು ಉದಯ ಶೆಟ್ಟಿ, ಜಿ.ಎಂ ಎಜ್ಯುಕೇಶನ್ ಟ್ರಸ್ಟ್ ಇದರ ಅಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ, ಡಿವೈಎಸ್ ಪಿ ರತ್ನಾಕರ್ ಶೆಟ್ಟಿ, ಯು.ಎಸ್.ಕೆ. ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಮಾರಳಿ ಪ್ರತಾಪ್ ಹೆಗ್ಡೆ, ಮುಖ್ಯ ಯೋಜನಾಧಿಕಾರಿ…















