Author: admin

ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ವಿಭಾಗ ಯುವ ಬಂಟರ ವಿಭಾಗ, ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಜುಲೈ 12 ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ನಡೆಯಿತು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿ.ಎ ಅಶೋಕ್ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಂಟ ಸಮುದಾಯದವರು ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಇದು ನಿಜಕ್ಕೂ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದೆ. ಬಂಟ ಸಮಾಜ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಯಾರೂ ಶಿಕ್ಷಣದಿಂದ ವಂಚಿತರಾಗದೆ ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಬೆಂಗಳೂರು ಬಂಟರ ಸಂಘದಿಂದ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ. ನಮ್ಮ ಸಮಾಜದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬೇಕು. ಅದಕ್ಕೆ ಬೇಕಾದ ಎಲ್ಲಾ…

Read More

ಬಂಟರ ಸಂಘಕ್ಕೆ ಸಮಾಜದಲ್ಲಿ ಉನ್ನತ ಗೌರವವಿದೆ. ಬಂಟ ಸಮಾಜ ಜಾತ್ಯಾತೀತ ಚಿಂತನೆಯಿಂದ ಕೂಡಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಆ ಚಿಂತನೆಯ ಮೂಲಕ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗುರುಪುರ ಬಂಟರ ಮಾತೃ ಸಂಘ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಹಾಗೂ ಬೆಂಗಳೂರು ಬಂಟರ ಸಂಘ ಇದರ ಸಹಯೋಗದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಿಲಿಕುಲ ಮೂಡುಶೆಡ್ಡೆಯಲ್ಲಿ ಜರಗಿದ ಗುರುಪುರ ಬಂಟರ ಮಾತೃ ಸಂಘದ 12ನೇ ವಾರ್ಷಿಕ ಸಮಾವೇಶ, ಮಹಾಸಭೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿವೇತನ ವಿತರಣೆ, ವಿದ್ಯಾರ್ಥಿ ಪುರಸ್ಕಾರ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಶಿಕ್ಷಣ ಎಂಬುದು ಪ್ರತಿಭೆಗೆ ಬೇಕಾದ ವಸ್ತು. ಅದನ್ನು ಕಾಪಾಡುವುದು ಮುಖ್ಯ. ಶಿಕ್ಷಣದೊಟ್ಟಿಗೆ ಸಂಸ್ಕೃತಿ ರಂಗ ಉಳಿಸುವ ಕಾರ್ಯ ಆಗಬೇಕು ಎಂದರು.   ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ…

Read More

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರು ಇಲ್ಲಿ ಯಕ್ಷ ಕಲಾರಂಗ (ರಿ) ಕಾರ್ಕಳ, ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಉದ್ಘಾಟನಾ ಸಮಾರಂಭ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಎಸ್ ಕೋಟ್ಯಾನ್ ರವರು ವಹಿಸಿಕೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯಕ್ಷ ಕಲಾರಂಗದ ಕಾರ್ಕಳ ಘಟಕದ ಅಧ್ಯಕ್ಷರಾದ ವಿಜಯ ಶೆಟ್ಟಿ, ಸಂಚಾಲಕರಾದ ಪದ್ಮನಾಭ ಗೌಡ, ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕದ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಯಕ್ಷ ಗುರುಗಳಾದ ಶ್ರೀ ಮಹಾವೀರ ಪಾಂಡಿ, ಊರಿನ ಹಿರಿಯರಾದ ಶ್ರೀ ಜಯಕೀರ್ತಿ ಕಡಂಬರು, ನಿವೃತ್ತ ಶಿಕ್ಷಕರಾದ ರಮಾನಾಥ ಶೆಣೈ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮಧ್ವರಾಜ್, ಶಾಲಾ ಹಿತೈಷಿ ಚಂದ್ರರಾಜ ಅತಿಕಾರಿ, ಗೋಪಾಲ ಪೂಜಾರಿ ಗರಡಿಮನೆ, ಪಂಚಾಯತ್ ಸದಸ್ಯರಾದ ಶೇಖರ ಅಂಚನ್, ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ಅರುಣ್ ಕುಮಾರ್ ಶೇಟ್ ನಿರ್ವಹಿಸಿ ಶಿಕ್ಷಕರಾದ ಆನಂದ್ ಪೂಜಾರಿ ಸ್ವಾಗತಿಸಿ, ಯಕ್ಷ…

Read More

ಸುರತ್ಕಲ್ ಬಂಟರ ಸಂಘದ ಆಶ್ತಯದಲ್ಲಿ ನಡೆಯುವ ಯಕ್ಷಸಿರಿಯ ಯಕ್ಷ ಶಿಕ್ಷಣದ ಯಕ್ಷ ಗುರುಗಳಾದ ರಾಕೇಶ್ ರೈ ಅಡ್ಕ ಅವರಿಗೆ ಗುರುವಂದನೆ ಕಾರ್ಯಕ್ರಮ ಬಂಟರ ಭವನದಲ್ಲಿ ನಡೆಯಿತು. ಮತ್ತೋರ್ವ ಗುರುಗಳಾದ ವಿದ್ಯಾಭೂಷಣ್ ಅವರಿಗೂ ಗುರುನಮನಗಳನ್ನು ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಗುರುಗಳ ಆಶೀರ್ವಾದ ಪಡೆದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಬಾಳ ಜಗನ್ನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಶುಭ ಹಾರೈಸಿದರು. ಮಹಿಳಾ ವೇದಿಕೆಯ ಅಧ್ಯಕ್ಷೆ ಸರೋಜ ಟಿ ಶೆಟ್ಟಿ, ಯಕ್ಷಸಿರಿ ಸಂಘಟಕಿ ಕವಿತಾ ಪಿ ಶೆಟ್ಟಿ, ಬಂಟರ ಸಂಘ ಹಾಗೂ ಮಹಿಳಾ ವೇದಿಕೆಯ ಪದಾಧಿಕಾರಿಗಳು, ಪೋಷಕರು ಈ ಸಂಧರ್ಭ ಉಪಸ್ಥಿತರಿದ್ದರು.

Read More

ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಕೆಯ್ಯೂರು ಇದರ ಸಾರ್ವಜನಿಕ ಗಣೇಶೋತ್ಸವ ಸಮಿತಿ ರಚನೆಯು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ. ಜಯರಾಮ ರೈ ಕೆಯ್ಯೂರು ಅವರ ಅಧ್ಯಕ್ಷತೆಯಲ್ಲಿ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಅಧ್ಯಕ್ಷರಾಗಿ ಹರೀಶ್ ಕಣಿಯಾರು, ಉಪಾಧ್ಯಕ್ಷರಾಗಿ ವಿನಯ ಕೊಡ್ಲೆ, ಕಾರ್ಯದರ್ಶಿಯಾಗಿ ದೀಕ್ಷಿತ್ ಕಣಿಯಾರು ಹಾಗೂ ಕೋಶಾಧಿಕಾರಿಯಾಗಿ ಅಶೋಕ ಇಳಂತಾಜೆ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ಶೀನಪ್ಪ ರೈ ದೇವಿನಗರ, ರವೀಂದ್ರ ಕೆ. ಎಸ್. ಕಣಿಯಾರು, ಪ್ರಮೀತ್ ರಾಜ್ ಕಟ್ಟತ್ತಾರು, ಮೋಹನ ಅಜಿಲ ಕಣಿಯಾರು, ಜಯಂತ ಪೂಜಾರಿ ಕೆಂಗುಡೇಲು, ಈಶ್ವರ ಕುಲಾಲ್ ಬೊಳಿಕ್ಕಳ, ರಾಧಾಕೃಷ್ಣ ಗೌಡ ಕೆಯ್ಯೂರು, ರಾಕೇಶ್ ಬಲ್ಲಾಳ್ ಸಣಂಗಳ, ವಿನಯ್ ಕುಮಾರ್ ಸಣಂಗಳ, ಇವರನ್ನು ಆಯ್ಕೆ ಮಾಡಲಾಯಿತು. ದೇವಾಲಯದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಅರ್ಚಕ ಶ್ರೀನಿವಾಸ್ ರಾವ್, ಉಮಾಕಾಂತ ಬೈಲಾಡಿ, ಜಲಜಾಕ್ಷಿ ಎ. ರೈ ಸಾಗು, ಸುಜಯ ಕೆಯ್ಯೂರು, ಅಶೋಕ್ ರೈ ದೇರ್ಲ, ಕೆ.ಎಸ್. ಚಂದ್ರಶೇಖರ ಪೂಜಾರಿ ಕಣಿಯಾರು,…

Read More

ಮುಂಬಯಿ, ಪಾಲ್ಗರ್, ವಸಾಯಿ ಹಾಗೂ ದುಬೈಯಲ್ಲಿ ಬಾರಿ ಜನಪ್ರಿಯತೆ ಗಳಿಸಿರುವ ಹೋಟೆಲ್ “ಫಾರ್ಮ್ ಹೌಸ್‌” ನ ಆಡಳಿತ ನಿರ್ದೇಶಕ, ಮುಂಬಯಿ ಬಂಟರ ಸಂಘದ ವಸಾಯಿ ದಹಾಣು ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹರೀಶ್ ಪಾಂಡು ಶೆಟ್ಟಿಯವರ ಧರ್ಮಪತ್ನಿ ಮಧುರಾ ಹರೀಶ್ ಶೆಟ್ಟಿಯವರು ಇತ್ತೀಚಿಗೆ ದಿಲ್ಲಿಯಲ್ಲಿ ನಡೆದ ಮಿಸೆಸ್ ವರ್ಲ್ಡ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಜಗತ್ತಿನ ವಿವಿಧ ದೇಶಗಳ ಸ್ಪರ್ಧಿಗಳ ಪೈಕಿ ಸ್ಪರ್ಧೆಯಲ್ಲಿ ಮಿಸೆಸ್ ಟ್ಯಾಲೆಂಟೆಡ್ ಮತ್ತು 4 ನೇ ರನ್ನರ್ ಅಪ್ ಆಗಿ ನಾಮ ನಿರ್ದೇಶನಗೊಂಡಿದ್ದಾರೆ. ಶ್ರೀಮತಿ ಮಧುರಾ ಹರೀಶ್ ಶೆಟ್ಟಿ ಅವರನ್ನು ಪಾಂಡು ಎಲ್ ಶೆಟ್ಟಿ, ಪದ್ಮಾವತಿ ಪಿ ಶೆಟ್ಟಿ, ಹರೀಶ್ ಪಿ ಶೆಟ್ಟಿ, ಭರತ್ ಪಿ ಶೆಟ್ಟಿ, ನವ್ಯ ಬಿ ಶೆಟ್ಟಿ, ಪಳ್ಳಿ ಕರುಣಾಕರ್ ಶೆಟ್ಟಿ, ಸುಧಾಮಣಿ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಬಂಟರ ಸಂಘದ ವಸಾಯಿ ದಹಾಣು ಪ್ರಾದೇಶಿಕ ಸಮಿತಿಯ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ವರದಿ ವಾಚಿಸಿದರು.‌ ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿ ಲೆಕ್ಕಪತ್ರ ಮಂಡಿಸಿದರು. ಬಳಿಕ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ‌ ನೆರವೇರಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ವೈದ್ಯಕೀಯ ಚಿಕಿತ್ಸೆಗೆ, ಮದುವೆಗೆ, ವಿದ್ಯಾಭ್ಯಾಸಕ್ಕೆ, ಮನೆ ರಿಪೇರಿಗೆ, ಕ್ರೀಡೆಗೆ, 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (95%) ಹೀಗೆ ಹತ್ತಾರು ಸಮಾಜಮುಖಿ ಕೆಲಸಗಳಿಗೆ ಒಕ್ಕೂಟದಿಂದ ಸುಮಾರು 50 ಲಕ್ಷ ರೂಪಾಯಿಗೂ ಮಿಕ್ಕಿದ ಅನುದಾನವನ್ನು ವಿತರಿಸಲಾಯಿತು. ಕಳೆದ ಏಳು ವರ್ಷಗಳಿಂದ ಒಕ್ಕೂಟದಿಂದ ಈವರೆಗೆ 30 ಕೋಟಿ ರೂಪಾಯಿಗೂ ಮಿಕ್ಕಿದ ಅನುದಾನವನ್ನು ವಿತರಿಸಲಾಗಿದೆ ಎಂದು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ತೋನ್ಸೆ…

Read More

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಟ್ರಸ್ಟಿನ ಅಧ್ಯಕ್ಷ ಅವಿನಾಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರವಾಜೆ ಇಲ್ಲಿ ನಡೆಯಿತು. ವಿದ್ಯಾಭಿಮಾನಿಗಳೂ ಹಿರಿಯರೂ ಆದ ವೈಕುಂಟ ಶೆಣೈ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಆನಂದ ನಾಯಕ್ ರವರು ವಿದ್ಯಾರ್ಥಿಗಳು ಮುಂದಿನ ವರ್ಷ ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯುವಲ್ಲಿ ಪ್ರಯತ್ನಿಸಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಅವಿನಾಶ್ ವಿ ಶೆಟ್ಟಿಯವರು ತನ್ನ ಸಣ್ಣ ಪ್ರಾಯದಲ್ಲೇ ಇಂಥಹ ಉತ್ತಮ ಕಾರ್ಯಕ್ರಮಗಳನ್ನು ಮಾಡಲು ಅಮ್ಮನಿಂದ ಬಂದ ಉತ್ತಮ ಸಂಸ್ಕಾರಗಳೇ ಕಾರಣ. ಜೊತೆಗೆ ಅವರು ಓರ್ವ ಉತ್ತಮ…

Read More

ಅದ್ಯಪಾಡಿ ಶ್ರೀ ಅದಿನಾಥೇಶ್ವರ ದೇವಸ್ಥಾನದಲ್ಲಿ ಎರಡು ರಥದ ಕೊಠಡಿ, ರಾಜ ಬೀದಿ ಕೆಲಸ, ದೇವಸ್ಥಾನದ ಸುತ್ತ ತಡೆಗೋಡೆ ಸಹಿತ ಕೆಲವು ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಎರಡು ಕೋಟಿ ರೂಪಾಯಿ ಅನುದಾನ ನೀಡಬೇಕೆಂದು ಕರ್ನಾಟಕ ಸರಕಾರ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿ ಅವರನ್ನು ಶ್ರೀ ಆದಿನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಭೇಟಿ ನೀಡಿ ಮನವಿ ಸಲ್ಲಿಸಿದರು. ಬೈಲು ಏತಮೊಗರು ದೊಡ್ಡಮನೆ ಹರೀಶ್ ಶೆಟ್ಟಿ ಮತ್ತು ಸುಜೀತ್ ಆಳ್ವ ಏತಮೊಗರು ಗುತ್ತು ಇವರ ನೇತೃತ್ವದಲ್ಲಿ ಸಚಿವರಿಗೆ ಮನವಿ ನೀಡಲಾಯಿತು. ಸಚಿವರು ಮನವಿ ಸ್ವೀಕರಿಸಿ ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡಿದರು. ಸಚಿವರನ್ನು ಭೇಟಿ ಮಾಡಿದ ನಿಯೋಗದಲ್ಲಿ ರಮಾನಾಥ್ ಅತ್ತಾರ್, ಸುಕೇಶ್ ಮಾಣೈ ತಲಕಳ, ಸತೀಶ್ ಆಳ್ವ, ಮನೋಹರ್ ಶೆಟ್ಟಿ, ವಸಂತ ಕುಮಾರ್ ಕಜೆ, ಮಧುಚಂದ್ರ ಶೆಟ್ಟಿ, ಮಹೇಶ್ ಭಟ್, ಕುಮಾರ್ ಶೆಟ್ಟಿ, ಜೀವನ್ ಮಲ್ಲಿ, ಮೋಹನ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ರೋಹಿತ್ ಶೆಟ್ಟಿ, ಸಂಪತ್ ಶೆಟ್ಟಿ, ಶಿವರಾಮ ಹೆಗ್ಡೆ, ಸುಜೀರ್…

Read More

ನಬಾರ್ಡ್ ನಿಯೋಜಿತ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ ತೆಲಂಗಾಣ, ತಮಿಳುನಾಡು, ಕೇರಳ ರಾಜ್ಯಗಳಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಶಾಖಾ ವ್ಯವಸ್ಥಾಪಕರನ್ನು ಒಳಗೊಂಡ 45 ಸದಸ್ಯರ ಅಧ್ಯಯನ ಪ್ರವಾಸ ತಂಡ ಮಂದಾರ್ತಿ ಸೇವಾ ಸಹಕಾರಿ ಸಂಘಕ್ಕೆ ಭೇಟಿ ನೀಡಿದರು. ಸಂಘದ ಅಧ್ಯಕ್ಷ ಗಂಗಾಧರ ಶೆಟ್ಟಿ ತಂಡವನ್ನು ಸ್ವಾಗತಿಸಿ, ಸೊಸೈಟಿಯ ಕಾರ್ಯ ವೈಖರಿ ಬಗ್ಗೆ ಮತ್ತು ನಡೆದು ಬಂದ ಹಾದಿಯ ಕುರಿತು ಮಾಹಿತಿ ನೀಡಿದರು. ನಬಾರ್ಡ್ ನ ಡಿ.ಜಿ.ಎಂ. ಯೋಗಿಶ್ ಸಂಘದ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Read More