Author: admin

ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ ಉಡುಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಡಾ. ಪ್ರಶಾಂತ್‌ ಶೆಟ್ಟಿ ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ ಭಟ್‌ ಅವರನ್ನು ಉಡುಪಿ ಓಶಿಯನ್ ಪರ್ಲ್ ನಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ನಿರ್ಣಯಿಸಲಾಯಿತು. ಖಜಾಂಚಿಯಾಗಿ ಜ್ಞಾನಸುಧಾ ಸಂಸ್ಥೆಯ ಡಾ. ಸುಧಾಕರ್‌ ಶೆಟ್ಟಿ, ಕಾರ್ಯದರ್ಶಿಯಾಗಿ ಕ್ರಿಯೇಟಿವ್‌ ಸಂಸ್ಥೆಯ ಅಶ್ವತ್‌ ಎಸ್‌. ಎಲ್‌, ಸಹಕಾರ್ಯದರ್ಶಿಗಳಾಗಿ ಕ್ರಿಯೇಟಿವ್‌ ಸಂಸ್ಥೆಯ ಡಾ. ಗಣನಾಥ್‌ ಶೆಟ್ಟಿ, ಸುಜ್ಞಾನ ಸಂಸ್ಥೆಯ ಪ್ರತಾಪ್‌ ಚಂದ್ರ ಶೆಟ್ಟಿ, ಉಪಾಧ್ಯಕ್ಷರುಗಳನ್ನಾಗಿ ಸುಜ್ಞಾನ ಸಂಸ್ಥೆಯ ರಮೇಶ್‌ ಶೆಟ್ಟಿ, ಎಕ್ಸಲೆಂಟ್‌ ಕುಂದಾಪುರದ ದೀಪಾ ಎಂ. ಹೆಗಡೆ, ಅಮೃತ ಭಾರತಿ ಹೆಬ್ರಿಯ ಸತೀಶ್‌ ಪೈ ಹಾಗೂ ರಾಜೇಶ್ವರಿ ಸಂಸ್ಥೆ ಕಾರ್ಕಳದ ದೇವಿಪ್ರಸಾದ್‌ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಸಮಿತಿಯ ಗೌರವ ಉಪಾಧ್ಯಕ್ಷರಾದ ರಾಧಕೃಷ್ಣ ಶೆಣೈ, ಫಾದರ್‌ ವಿನ್ಸೆಂಟ್‌ ಕ್ರಾಸ್ತ, ಪ್ರೋ. ಆಲ್ಬಂಟ್‌ ರೋಡ್ರಿಗಸ್‌ (ದಂಡತೀರ್ಥ…

Read More

ಇತ್ತೀಚಿಗೆ ಪರಿಚಯವಾದ ಒಬ್ರು ಮಾತನಾಡುತ್ತ ನನ್ನ ಬಳಿ ನಿಮ್ಮ ಹೆಂಡತಿ ಏನು ಕೆಲಸ ಮಾಡೋದು ಎನ್ನುವುದಾಗಿ ಪ್ರಶ್ನಿಸಿದ್ರು ಅವಳದ್ದು ಅರಣ್ಯ ಇಲಾಖೆ ಉಪವಲಯ ಅರಣ್ಯಾಧಿಕಾರಿಗಳು ಅಂದೆ. ಅದು ಹೇಗೆ ಮರ್ರೆ ನಿಮಗೆ ಅವರನ್ನು ಮದುವೆ ಮಾಡಿ ಕೊಟ್ರು ಅಂದ್ರು ??? ಕಸಿವಿಸಿಯಾದರೂ ವ್ಯಂಗ್ಯವೆನಿಸಿದರೂ ಯಾಕೆ ಎಂದು ಮರು ಪ್ರಶ್ನಿಸಿದೆ ಅಲ್ಲಾ ನೀವು ನೋಡಿದ್ರೆ ಪ್ರಾಥಮಿಕ ಶಾಲೆಯ ಟೀಚರು ಅವರು ಅರಣ್ಯ ಇಲಾಖೆಯ ಆಫೀಸರ್ ನಿಮ್ಮ ಅದೃಷ್ಟ ಅಂದ್ರು. ನಾನೇ ಮಹಾನ್ ವ್ಯಕ್ತಿ ಎಂದುಕೊಂಡಿದ್ದವನ ಜಂಘಾಬಲ ಉಡುಗಿ ಹೋಯಿತು. ಈ ಸಮಾಜದರಲ್ಲಿರುವ ಮನುಷ್ಯರು ನಾವು ಅಂದುಕೊಂಡಷ್ಟು ಸುಲಭವಲ್ಲ. ಎಲ್ಲವನ್ನು ಎಲ್ಲರನ್ನೂ ಲೆಕ್ಕಹಾಕಿ ನೋಡ್ತಾರೆ ಅಂತ ಅರಿವಾಯಿತು ಇನ್ನು ಸ್ವಲ್ಪ ಸಮಯ ಬಿಟ್ಟಿದ್ರೆ ನಿನಗೆ ಮದುವೆಯಾಗ್ಲಿಕ್ಕೆ ಹೆಣ್ಣು ಕೊಟ್ಟಿದ್ದೆ ಹೆಚ್ಚು ಅಂತ ಹೇಳುತ್ತಿದ್ರೇನೋ ಆ ಅವಕಾಶ ಕೊಡದೆ ನಮ್ಮ ಮಾತನ್ನು ತುಂಡರಿಸಿದೆ. ತದನಂತರ ಮನಸ್ಸಿನಲ್ಲಿ ಒಂದಿಷ್ಟು ಆಲೋಚನೆಗಳು ಅವರು ಕೇಳಿದ್ದು ಸರಿ ಇದೆ ಅಲ್ವಾ ನಾನು ಜೀವನದಲ್ಲಿ ಏನನ್ನ ಸಾಧಿಸಿದ್ದೇನೆ ! ಗುರುತರವಾದಂತದ್ದು ಏನೂ…

Read More

ರೋಟರಿ ಕ್ಲಬ್ ಕಾರ್ಕಳ, ರೋಟರಿ ಆನ್ಸ್ ಕ್ಲಬ್ ಮತ್ತು ವಿಹಾನ ಮೆಲೋಡೀಸ್ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಚಾಣಕ್ಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ). ಇವರ ವತಿಯಿಂದ “ವಾಯ್ಸ್ ಆಫ್ ಚಾಣಕ್ಯ- 2025” ಸೀಸನ್ 8 ಇದರ ಆಯ್ಕೆ ಪ್ರಕ್ರಿಯೆಯು ರೋಟರಿ ಬಾಲ ಭವನ ಅನಂತಶಯನ ಕಾರ್ಕಳ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಮಾತನಾಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿಯವರು, ಪ್ರತಿಯೊಬ್ಬರು ತಮಗೆ ಸಿಕ್ಕಿದ ಅವಕಾಶವನ್ನು ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು. ಸತತ ಪ್ರಯತ್ನದಿಂದ ಯಾವುದೇ ಕ್ಷೇತ್ರದಲ್ಲಿ ಮುಂದೆ ಬರಬಹುದು ಎಂದರು. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆಯ ಪ್ರಯತ್ನ ಅಭಿನಂದನೀಯ ಎಂದರು. ವೇದಿಕೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇಲ್ಲಿನ ಪ್ರಭಾರ ಪ್ರಾಂಶುಪಾಲರಾದ ವಿದ್ಯಾದರ ಹೆಗ್ಡೆ, ಆನ್ಸ್ ಕ್ಲಬ್ಬಿನ ಅಧ್ಯಕ್ಷೆ ಜಯಂತಿ ಆನಂದ ನಾಯಕ್, ತರಬೇತುದಾರರಾದ…

Read More

ಆಳ್ವಾಸ್ ಕಾನೂನು ಕಾಲೇಜಿನ ನೂತನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೆಡ್‌ಕ್ರಾಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರ ಕುವೆಂಪು ಸಭಾಭವನದಲ್ಲಿ ನೆರವೇರಿತು. ಯನಪೋಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕಿ ಹಾಗೂ ವಿಸ್ತರಣೆ ಮತ್ತು ಔಟ್‌ರೀಚ್ ಚಟುವಟಿಕೆಗಳ ನಿರ್ದೇಶಕಿ ಹಾಗೂ ಆಳ್ವಾಸ್‌ನ ಹಿರಿಯ ವಿದ್ಯಾರ್ಥಿನಿ ಡಾ. ಅಶ್ವಿನಿ ಶೆಟ್ಟಿ ಉದ್ಘಾಟಿಸಿದರು. ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕಾಲೇಜು ಅವಧಿಯಲ್ಲಿ ನೀಡಲ್ಪಡುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಂಡರೆ ಅದು ಜೀವನದ ದಿಕ್ಕನ್ನೇ ಬದಲಿಸಬಲ್ಲದು. ಎನ್‌ಎಸ್‌ಎಸ್‌ ನಂತಹ ವೇದಿಕೆಗಳು ವಿದ್ಯಾರ್ಥಿಗಳಿಗೆ ನಾಯಕತ್ವ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಭಾವನೆ ಬೆಳೆಸುತ್ತವೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಅರಿಯುವ ಮತ್ತು ಪರಿಹಾರ ಮಾರ್ಗಗಳನ್ನು ಹುಡುಕುವ ಅಪರೂಪದ ಅವಕಾಶ ಇಲ್ಲಿ ದೊರಕುತ್ತದೆ. ವಿವಿಧ ನವೀನ ಯೋಜನೆಗಳು, ಸಂಶೋಧನಾ ಪ್ರಕಟಣೆಗಳು ಎನ್‌ಎಸ್‌ಎಸ್ ಚಟುವಟಿಕೆಗಳ ಮೂಲಕ ಸಾಧ್ಯವಾಗಬಲ್ಲದು. ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವು ಮೂಡಿಸಲು ಕಾರ‍್ಯಕ್ರಮ ಹಮ್ಮಿಕೊಂಡು, ನಂತರ ಪ್ರೀ-ಟೆಸ್ಟ್ ಹಾಗೂ ಪೋಸ್ಟ್-ಟೆಸ್ಟ್ ವಿಧಾನದಲ್ಲಿ ಅಧ್ಯಯನ ನಡೆಸಿ, ಅದರ ಫಲಿತಾಂಶವನ್ನು…

Read More

ಗುರುವಾಯನಕೆರೆ ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಸುಕೇಶ್ ರವರು ಕಾರಣಾಂತರಗಳಿಂದ ಕೆಲಸ ಕಳೆದುಕೊಂಡು ಬೇಸತ್ತಿರುವ ಸಮಯದಲ್ಲಿ ಸ್ವ ಉದ್ಯೋಗ ಮಾಡಲು ಉದ್ಯಮಿ, ಸಮಾಜ ಸೇವಕ ಶಶಿಧರ ಶೆಟ್ಟಿ ಬರೋಡ ಅವರು ನೆರವು ನೀಡಿ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ ಶೆಟ್ಟಿ ಗುರುವಾಯನಕೆರೆ ಉಪಸ್ಥಿತರಿದ್ದರು.

Read More

ಗಣಿತನಗರ: ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ. ಆದರೆ ಇಂದಿನ ಯುವಜನತೆ ಮೊಬೈಲ್ ಗೀಳಿಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕ ಸಮಾಜಕ್ಕಾಗಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದೇಶದ ಉನ್ನತಿಗೆ ಕೈಜೋಡಿಸುವವರಾಗಿ, ಸಮಾಜಮುಖಿ ವ್ಯಕ್ತಿತ್ವವಾಗಿ ರೂಪುಗೊಂಡಾಗ ಜೀವನ ಸಾರ್ಥಕವಾಗುತ್ತದೆ ಎಂದು ಶ್ರೀ ಮೂಕಾಂಬಿಕಾ ದೇವಳ ಸ್ವತಂತ್ರ್ಯ ಪದವಿ ಪೂರ್ವ ಕಾಲೇಜು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕೇಶ್ ಶೆಟ್ಟಿ ಹೊಸಮಠ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್ ವಹಿಸಿದ್ದರು. ಅರ್ನ್‍ಲರ್ನ್ ಬಿಸ್‍ನೆಸ್ ಪೈರ್ ಉದ್ಘಾಟನೆ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಸಂಸ್ಥೆಯ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳೇ ಮುನ್ನಡೆಸುವ ಅರ್ನ್‍ಲರ್ನ್ ಬಿಸ್‍ನೆಸ್ ಪೈರನ್ನು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳ ಸ್ವತಂತ್ರ್ಯ ಪದವಿ ಪೂರ್ವ ಕಾಲೇಜು ಇಲ್ಲಿನ ದೈಹಿಕ ಶಿಕ್ಷಣ…

Read More

ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಮತ್ತು ಮಕ್ಕಳ ಚಿಕಿತ್ಸಾ ವಿಭಾಗ ಇವರ ಸಹಯೋಗದೊಂದಿಗೆ ರೋಟರಿ ಕ್ಲಬ್ ಹಾಗೂ ರೋಟರಿ ಆನ್ಸ್ ಕ್ಲಬ್ ಕಾರ್ಕಳ ಇವರು ಆಯೋಜಿಸಿದ ಆರೋಗ್ಯಕರ ಶಿಶು ಸ್ಪರ್ಧೆ ಮತ್ತು ತಪಾಸಣಾ ಶಿಬಿರವು ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಮುಖ್ಯ ಅತಿಥಿ ಡಾ. ಪ್ರಜ್ಞಾ ಮಲ್ಯರವರು ಪುಟ್ಟ ಮಗುವಿನ ಆರೋಗ್ಯದ ಬಗ್ಗೆ ವೈದ್ಯರ ಸೂಕ್ತ ಸಲಹೆ ಪಡೆದು ಜಾಗೃತಿ ವಹಿಸಬೇಕು ಎಂದರು. ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಚಿಕ್ಕ ಮಗುವಿನ ಆರೋಗ್ಯದ ಬಗ್ಗೆ ಪೋಷಕರು ಜಾಗೃತಿ ವಹಿಸುವುದರಿಂದ ಮುಂದೆ ಸುದೃಢ ಮನಸ್ಸಿನ ಆರೋಗ್ಯವಂತ ಯುವ ಪೀಳಿಗೆಯನ್ನು ಕಾಣಬಹುದು ಎಂದರು. ಡಾ. ಆಶಾ ಹೆಗ್ಡೆ ಮಕ್ಕಳ ಆರೋಗ್ಯದ ಕುರಿತು ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸರ್ಟಿಫಿಕೇಟ್ ಮತ್ತು ಗಿಫ್ಟ್ ಹಾಂಪರ್ಸ್ ನೀಡಲಾಯಿತು. ವೇದಿಕೆಯಲ್ಲಿ…

Read More

ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರು. ಬಾಲಕರ ವಿಭಾಗದಲ್ಲಿ ಆಳ್ವಾಸ್‌ನ ಸಾಗರ್ ದ್ವಿತೀಯ, ವರುಣ್ ತೃತೀಯ, ಸಮರ್ಥ ನಾಲ್ಕನೇ ಸ್ಥಾನ, ವಿನಯ್ ಐದನೇ ಸ್ಥಾನ ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ಆಳ್ವಾಸ್‌ನ ನಾಗಿಣಿ ಪ್ರಥಮ, ಚರಿಷ್ಮಾ ದ್ವಿತೀಯ, ಜಾಹ್ನವಿ ತೃತೀಯ ಸ್ಥಾನ ಪಡೆದರು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

“ನವ್ನೂಮೇಶ್-೨೦೨೫” ಐ.ಎಂ.ಜೆ ಇನ್ಸ್ಟಿಟ್ಯೂಷನ್ ಮೂಡ್ಲಕಟ್ಟೆ, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ‘ಅಂತರ್ ಕಾಲೇಜು ಪೆಸ್ಟ್-೨೦೨೫’ ಉಡುಪಿ ಜಿಲ್ಲಾ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ೩೬ ಕಾಲೇಜುಗಳಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ತಂಡವು ಪ್ರಶಸ್ತಿಗಳ ಜೊತೆಗೆ ಪ್ರಶಸ್ತಿಗಳನ್ನು ಪಡೆದು, ಪ್ರಶಸ್ತಿಗಳ ಸರಮಾಲೆಯೊಂದಿಗೆ ಉಡುಪಿ ಜಿಲ್ಲೆಗೆ ಸಮಗ್ರ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರ ಜೊತೆಗೆ ಸೈನ್ಸ್ ಸ್ಟಿçಮ್ ಪ್ರಥಮ, ಕಲ್ಚರಲ್ ಸ್ಟಿçÃಮ್ ಪ್ರಥಮ ಪ್ರಶಸ್ತಿಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆಯವರು, ಪ್ರಾಂಶುಪಾಲರು ನಾಗರಾಜ್ ಶೆಟ್ಟಿ ಹಾಗೂ ಬೋಧಕ- ಬೋಧಕೇತರ ವರ್ಗದವರು ಶುಭಹಾರೈಸಿದ್ದಾರೆ.

Read More

ಸುಬ್ರಮಣ್ಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ನೆಟ್ ಬಾಲ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದೆ. ತಂಡದಲ್ಲಿ ನಿಖಿತಾ, ಹರ್ಷಿತಾ, ಸಂಧ್ಯಾ, ಹೇಮ, ದಿವ್ಯ ಪ್ರತಿನಿಧಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಕ ಪ್ರೇಮಾನಾಥ ಶೆಟ್ಟಿ ಕಾವು ಕ್ರೀಡಾಪಟುಗಳನ್ನು ಗೌರವಿಸಿದರು.

Read More