Author: admin
ಕೊಡಗಿನ ಚಿತ್ರಶಿಲ್ಪ ಕಲಾವಿದ ಶ್ರೀ ಬಿ. ಕೆ. ಗಣೇಶ್ ರೈಯವರು ರಚಿಸಿರುವ ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರ ಕಥೆ ಪುಸ್ತಕ ಕಾವೇರಿ ನದಿಯ ಉಗಮ ಸ್ಥಾನ ಪವಿತ್ರ ತೀರ್ಥ ಕ್ಷೇತ್ರ ತಲಕಾವೇರಿಯ ಸನ್ನಿಧಿಯಲ್ಲಿ 2025 ಅಕ್ಟೋಬರ್ ತುಲಾ ಮಾಸದ ೧೫ನೇ ತಾರೀಕಿನಂದು ಪೂರ್ವಾಹ್ನ ಶುಭ ಗಳಿಗೆಯಲ್ಲಿ ಸಕಲ ಪೂಜಾವಿಧಿ ವಿಧಾನಗಳೊಂದಿಗೆ ಲೋಕಾರ್ಪಣೆಯಾಯಿತು. ಮಡಿಕೇರಿ ಐಶ್ವರ್ಯ ಕ್ರಿಯೇಶನ್ಸ್ ನ ದ್ವಿತೀಯ ಪ್ರಕಟಣೆಯಾಗಿರುವ ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರ ಕಥೆ ಪುಸ್ತಕ 1995 ರಲ್ಲಿ ಕನ್ನಡ, ಕೊಡವ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಜಲವರ್ಣ ಕಲಾಕೃತಿಯೊಂದಿಗೆ ನಿರ್ಮಾಣವಾಗಿದ್ದ ಚಿತ್ರಕಥೆ ಪುಸ್ತಕ ಇದೀಗ ದ್ವಿತೀಯ ಮುದ್ರಣ ಹಾಗೂ ಪ್ರಕಟಣೆ ನವ್ಯ ತಂತ್ರಜ್ಞಾನದೊಂದಿಗೆ ಡಿಜಿಟಲ್ ಗ್ರಾಫಿಕ್ಸ್ ನಲ್ಲಿ ಅತ್ಯಂತ ಸುಂದರವಾಗಿ ಚಿತ್ರಕಥೆ ಮೂಡಿಬಂದಿದೆ. ಈ ಬಾರಿ ಕನ್ನಡ, ಅರೆಭಾಷೆ, ಇಂಗ್ಲೀಷ್ ಮತ್ತು ತಮಿಳು ಭಾಷೆಯಲ್ಲಿ ಮುದ್ರಣವಾಗಿದೆ. ವಿವಿಧ ಭಾಷಿಗರಿಗೆ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರಕಥೆ ಮಕ್ಕಳಿಂದ , ವಯೋ ವೃದ್ದರವರೆಗೂ…
ಕಾರ್ಕಳ ಸಾಣೂರಿನ ರಾಜೇಶ್ವರಿ ನ್ಯಾಶನಲ್ ಸ್ಕೂಲ್ನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14 ಮತ್ತು 17 ವರ್ಷ ವಯೋಮಾನದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ 04 ಜನ ಬಾಲಕಿಯರು ಹಾಗೂ 08 ಜನ ಬಾಲಕರು ಒಟ್ಟು 12 ಕ್ರೀಡಾಪಟುಗಳು ಪ್ರಥಮ ಸ್ಥಾನ ಪಡೆದುಕೊಂದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಂದೇ ಶಾಲೆಯಿಂದ 12 ಜನ ಕ್ರೀಡಾಪಟುಗಳು ಆಯ್ಕೆಯಾಗಿರುವುದು ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಹೆಮ್ಮೆಯ ವಿಚಾರವಾಗಿರುತ್ತದೆ. 14 ವರ್ಷ ವಯೋಮಿತಿ ವಿಭಾಗ :- ಅರ್ಟಿಸ್ಟಿಕ್ ಯೋಗ ಪೇರ್ : ಶ್ಯಾಮ್ ಹಾಗೂ ಶಶಿಕುಮಾರ್ – ಪ್ರಥಮ, ರಿದಮಿಕ್ ಯೋಗ ಪೇರ್ : ಆದರ್ಶ್ ಹಾಗೂ ಶಶಾಂಕ್ – ಪ್ರಥಮ, ಅರ್ಟಿಸ್ಟಿಕ್ ಸಿಂಗಲ್ : ಆದರ್ಶ್ ಕೆ ಎಸ್ – ಪ್ರಥಮ, ಟ್ರೆಡಿಶನಲ್ ಸಿಂಗಲ್ – ಶಶಿಕುಮಾರ್ ವಿ ಜಿ – ಪ್ರಥಮ, 17 ವರ್ಷ ವಯೋಮಿತಿಯ ಬಾಲಕರ ವಿಭಾಗ, ಅರ್ಟಿಸ್ಟಿಕ್ ಯೋಗ ಪೇರ್ : ಕಾರ್ತಿಕ್ ಹಾಗೂ ಪ್ರಜ್ವಲ್ – ಪ್ರಥಮ,…
ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್ : ಶಿಸ್ತುಬದ್ಧ ಕವಿಗೋಷ್ಠಿಯಿಂದ ನಮ್ಮೆಲ್ಲರ ಸ್ಪೂರ್ತಿ ಹೆಚ್ಚಾಗಿದೆ – ಪ್ರಮೋದಾ ಮಾಡ
ಕನ್ನಡ ಸಾಂಸ್ಕೃತಿಕ ಕೇಂದ್ರ ಈ ಸಂಸ್ಥೆಯು ಮುಂಬೈ ಮತ್ತು ನಗರದ ಗ್ರಾಮೀಣ ಪರಿಸರದ ಬರಹಗಾರರ ಬೆನ್ನು ತಟ್ಟಿ ಈ ಬರಹಗಾರರು ಇನ್ನಷ್ಟು ಬೆಳೆಯಬೇಕು ಎಂಬ ನಿಟ್ಟಿನಲ್ಲಿ ಅವರಿಗೆ ಬಹಳ ಪ್ರೋತ್ಸಾಹ ನೀಡುತ್ತಾ ಬಂದ ಸಮಾಜಪರ ಸಾಹಿತ್ಯಪರ ಸಂಸ್ಥೆ ಆಗಿದೆ ಎಂದರೆ ಅತಿಶಯೋಕ್ತಿಯ ಮಾತಾಗದು. ಈ ವರ್ಷ ಸಂಸ್ಥೆ ನೀಡಿದ ಎಂಟು ವಿಷಯಗಳನ್ನು ಆಧಾರವಾಗಿಟ್ಟುಕೊಂಡು ಇಲ್ಲಿ ಅನೇಕ ಹೊಸಬರು ಮತ್ತು ಬಹಳಷ್ಟು ಕಡೆ ಕವಿತೆಗಳನ್ನು ಸಾದರಪಡಿಸಿ ಅನುಭವ ಉಳ್ಳವರು. ಒಟ್ಟು ಈ 10 ಮಂದಿ ಕವಿಗಳು ಕೂಡಾ ತಮ್ಮ ತಮ್ಮ ಕವಿತೆಗಳನ್ನು ಬಹಳ ಸುಂದರವಾಗಿ ಪ್ರಸ್ತುತಪಡಿಸಿದ್ದಾರೆ. ಎಲ್ಲಾ ಕವಿಗಳು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಅರ್ಥಪೂರ್ಣವಾದ ಕವಿತೆಗಳನ್ನು ರಚಿಸಿ ಸಾಹಿತ್ಯಾಸಕ್ತರ ಮುಂದೆ ಸಾದರಪಡಿಸಿದ್ದಾರೆ. ಎಲ್ಲರೂ ನಿಜವಾಗಿಯೂ ಅಭಿನಂದನಾರ್ಹರು ಮಾತ್ರವಲ್ಲ ಎಲ್ಲರಿಗೂ ಸಾಹಿತ್ಯ ಕ್ಷೇತ್ರದಲ್ಲಿ ಉಜ್ವಲವಾದ ಭವಿಷ್ಯವಿದೆ ಎಂದು ನಾನು ಭಾವಿಸುತ್ತೇನೆ. ಇಂತಹ ಶಿಕ್ಷಕರ ದಿನಾಚರಣೆ ಮತ್ತು ನವರಾತ್ರಿ ಶುಭ ಸಂದರ್ಭದಲ್ಲಿ ಕವಿಗೋಷ್ಠಿಯನ್ನು ಏರ್ಪಾಡು ಮಾಡಿದ ಎರಡು ದಶಕಗಳ ಇತಿಹಾಸ ಇರುವ ಪ್ರತಿಷ್ಠಿತ ಸಂಸ್ಥೆ…
ಹಸಿವಿಗೆ ಅನ್ನದ ಹೊರತು ಚಿನ್ನ ತಿನ್ನಲು ಸಾಧ್ಯವೇ? ಹೌದಲ್ವಾ? ಉದರ ಹಸಿವಿಗೆ ಆ ಕ್ಷಣ ಅನ್ನ ನೀಡಿ ಸಹಕರಿಸುವವನೇ ಪರಮಾತ್ಮನಿಗೆ ಸಮ. ಹಸಿದವನ ಕರೆದು ಒಂದು ತುತ್ತು ಅನ್ನ ನೀಡಿ ಸಹಕರಿಸಿದರೆ ಕೋಟಿ ಪುಣ್ಯವಂತೆ. ಉಂಡವನ ಮೊಗದ ತೃಪ್ತಿ, ಬಡಿಸಿದವನ ಮುಖದಲ್ಲಿ ಸಂತೃಪ್ತಿಯ ಭಾವ. ನಾವು ಎಷ್ಟೋ ಸಾರ್ವಜನಿಕ ಸಮಾರಂಭಗಳು, ಮನೆಯ ಕಾರ್ಯಕ್ರಮಗಳಲ್ಲಿ ನೋಡುತ್ತೇವೆ. ಹಾಕಿಸಿಕೊಂಡು, ಅರ್ಧಂಬರ್ಧ ತಿಂದು ಉಣುವ ಎಲೆಯಲ್ಲೋ, ತಟ್ಟೆಯಲ್ಲೋ ಬಿಟ್ಟು ಏಳುತ್ತೇವೆ. ತಿನ್ನುವ ಆಹಾರವನ್ನು ಪೋಲು ಮಾಡಬಾರದು. ಲೋಕದಲ್ಲಿ ಹಸಿವಿನಿಂದಾಗಿ ಸಾಯುವವರೂ ಇದ್ದಾರೆ. ಮಕ್ಕಳಿಗೆ ರೈತನ ಬೆವರಿನ ಬೆಲೆಯನ್ನು ಬಾಲ್ಯದಿಂದಲೇ ಕಲಿಸಬೇಕು. ಅಕ್ಕಿ ಹೇಗೆ ಆಗುತ್ತದೆಂಬ ಅರಿವು ಮಕ್ಕಳಿಗಿರಲಿ. ‘ಅಕ್ಕಿ ಅಂಗಡಿಯಲ್ಲಿ ಬೆಳೆಯುತ್ತದೆ ಎನ್ನುವ ದಿನ ದೂರವಿಲ್ಲ. ಕೃಷಿ ಕೆಲಸ ಕಾರ್ಯಗಳು, ಅನ್ನದಾತರ ಪರಿಶ್ರಮದ, ಅವರ ಬೇನೆ ಬೇಸರಿಕೆ ಎಲ್ಲದರ ಮಾಹಿತಿ ಮಕ್ಕಳಿಗೆ ತಿಳಿದಿರಬೇಕು. ಒಂದು ಅಗುಳು ಅನ್ನವನ್ನು ಸಹ ಬಿಸಾಡಬಾರದೆಂಬ ಅರಿವಿರಲಿ. ನಾವು ಸಹ ಉಣ್ಣುವ ಆಹಾರವನ್ನು ಹಾಳು ಮಾಡಬಾರದು. ಕೊರೋನಾ ಕಾಲದಲ್ಲಿ ಆಹಾರದ ಅಗತ್ಯ…
ಆಳ್ವಾಸ್ ಸ್ವಾಯತ್ತ ಕಾಲೇಜಿನ ಮನಶಾಸ್ತ್ರ ವಿಭಾಗ ಹಾಗೂ ಆಳ್ವಾಸ್ ಸೆಂಟರ್ ಫಾರ್ ವೆಲ್ನೆಸ್ ಟ್ರೈನಿಂಗ್ವತಿಯಿಂದ ಪಿಜಿ ಸೆಮಿನಾರ್ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಸ್ ಚಾಲಕರಿಗಾಗಿ ‘ವಿರಮಿಸಿ ಹಾಗೂ ನವಚೇತನ ಪಡೆಯಿರಿ’ ಎಂಬ ವಿಶೇಷ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಚರ್ಯ ಡಾ| ಕುರಿಯನ್, ಸಮಾಜದಲ್ಲಿ ಐವತ್ತು ವರ್ಷಗಳ ಹಿಂದೆ ಚಾಲಕ ವೃತ್ತಿ, ಇಂದಿನ ವಿಮಾನದ ಪೈಲಟ್ ವೃತ್ತಿಯಂತೆ ಎಲ್ಲರಿಂದ ಮನ್ನಣೆಗೆ ಪಾತ್ರವಾಗಿತ್ತು. ಕಾಲಕ್ರಮೇಣ, ಈ ವೃತ್ತಿಯ ಪ್ರಾಮುಖ್ಯತೆ ಕಡಿಮೆಯಾಗುತ್ತಿದ್ದರೂ, ವಾಸ್ತವದಲ್ಲಿ ಇದು ಅತ್ಯಂತ ಜವಾಬ್ದಾರಿಯುತ ಹಾಗೂ ಸವಾಲಿನ ಕೆಲಸವಾಗಿದೆ. ಚಾಲಕರು ದಿನನಿತ್ಯದ ಕೆಲಸದಲ್ಲಿ ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮಾನಸಿಕ ಆರೋಗ್ಯವನ್ನು ಸ್ಥಿರವಾಗಿರಿಸಿಕೊಂಡು ಕಾಳಜಿಯುತವಾಗಿರುವುದು ಬಹಳ ಮುಖ್ಯ. ವಾಹನದ ಕಾರ್ಬೋರೇಟರ್ ಹೀಟ್ ಆದಾಗ ನೀರು ಬಳಕೆ ಮಾಡುವಂತೆ, ಇಂಜಿನ್ ಆಯಿಲ್ ನಿಯಮಿತವಾಗಿ ಬದಲಿಸುವಂತೆ, ನಮ್ಮ ಮನಸ್ಸಿಗೂ ವಿಶ್ರಾಂತಿ ಮತ್ತು ಸಮರ್ಪಕ ಆರೈಕೆ ಅಗತ್ಯ ಎಂದರು. ಆಳ್ವಾಸ್ ಸೆಂಟರ್ ಫಾರ್ ವೆಲ್ನೆಸ್ ಟ್ರೈನಿಂಗ್ನ…
ಸಮಾಜ ಸೇವಕ, ಪುಣೆಯ ಖ್ಯಾತ ಹೋಟೆಲ್ ಉದ್ಯಮಿ, ಬಂಟ್ಸ್ ಅಸೋಸಿಯೇಷನ್ ಪುಣೆಯ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ಮಿಯ್ಯಾರು ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡುವ ಸಲುವಾಗಿ ಪೋಷಕ ಸದಸ್ಯರಾಗಿ ಸೇರ್ಪಡೆಗೊಂಡಿದ್ದಾರೆ. ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ನೂತನ ಪೋಷಕ ಸದಸ್ಯರಾದ ಆನಂದ ಶೆಟ್ಟಿ ಮಿಯ್ಯಾರು ಇವರನ್ನು ಹೂಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಶಶಿಧರ್ ಶೆಟ್ಟಿ ಇನ್ನಂಜೆ, ಪೋಷಕ ಸದಸ್ಯರಾದ ಗಿರೀಶ್ ಶೆಟ್ಟಿ ತೆಳ್ಳಾರ್, ಪ್ರಕಾಶ್ ಶೆಟ್ಟಿ ಪುಣೆ ಮತ್ತು ರವೀಂದ್ರ ಶೆಟ್ಟಿ ಕೊಟ್ರಪಾಡಿ ಇವರುಗಳು ಉಪಸ್ಥಿತರಿದ್ದರು.
ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ‘ಸೈಬರ್ ಕ್ರೈಮ್, ಡ್ರಗ್ ಟ್ರಾಫಿಕಿಂಗ್ ಹಾಗೂ ಸೋಶಿಯಲ್ ಆ್ಯಂಡ್ ಲೀಗಲ್ ಇಂಪ್ಲಿಕೇಶನ್ಸ್’ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಸೋಮವಾರದಂದು ವಿದ್ಯಾಗಿರಿ ಕ್ಯಾಂಪಸ್ನಲ್ಲಿ ಆಯೋಜಿಸಲಾಗಿತ್ತು. ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ ಐಪಿಎಸ್ ಮಾತನಾಡಿ, “ಸೈಬರ್ ಅಪರಾಧಗಳು ಇಂದು ಅತ್ಯಂತ ಸಂಕೀರ್ಣ ಹಾಗೂ ಕಾನೂನು ಜಾರಿಗೆ ಅತಿ ದೊಡ್ಡ ಸವಾಲಾಗಿ ಪರಿಣಮಿಸಿವೆ. ವಂಚಕರು ಈಗ ಅಸಲಿಯಂತೆ ಕಾಣುವ, ನಕಲಿ ಹೂಡಿಕೆ ವೆಬ್ಸೈಟ್ ಲಿಂಕ್ಗಳನ್ನು ಸೃಷ್ಟಿಸುತ್ತಿದ್ದಾರೆ. ಜನರು ಅವುಗಳ ಮೇಲೆ ಕ್ಲಿಕ್ ಮಾಡಿದಾಗ ನಕಲಿ ಅಪ್ಲಿಕೇಶನ್ ಡೌನ್ಲೋಡ್ ಆಗಿ, ಜನರು ಅದನ್ನು ನಿಜವೆಂದು ನಂಬಿ ನಿರಂತರವಾಗಿ ಹಣ ಹೂಡುತ್ತಾರೆ. ಈ ಹಣ ವಂಚಕರ ‘ಮ್ಯೂಲ್ ಅಕೌಂಟ್’ (ಬೇರೊಬ್ಬರ ಹೆಸರಿನಲ್ಲಿ ತೆರೆಯಲಾದ ಆದರೆ ಸೈಬರ್ ವಂಚಕರಿಂದ ನಿಯಂತ್ರಿಸಲ್ಪಡುವ ಬ್ಯಾಂಕ್ ಖಾತೆ) ಗಳಿಗೆ ವರ್ಗಾಯಿಸಲಾಗುತ್ತದೆ. ಈ ಖಾತೆಗಳು ಹಲವು ರಾಜ್ಯಗಳಲ್ಲಿ ಹರಡಿರುವುದರಿಂದ ಹಣದ ವರ್ಗಾವಣೆಯನ್ನು ಪತ್ತೆ ಹಚ್ಚುವುದು ಕಷ್ಟವಾಗುತ್ತದೆ. ನಂತರ ಈ ಹಣವನ್ನು ನಗದಾಗಿ ಬದಲಾಯಿಸಿ ಬಿಟ್ಕಾಯಿನ್ಗೆ ಪರಿವರ್ತಿಸಿ ವಿದೇಶಗಳಿಗೆ ಕಳುಹಿಸುತ್ತಾರೆ…
ಈಗಾಗಲೇ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರಾಗಿರುವ ಹೊಟೇಲ್ ಶೀತಲ್ ಪುಣೆ ಇದರ ಸಿ.ಎಂ.ಡಿ ವಿಶ್ವನಾಥ ಶೆಟ್ಟಿಯವರ ಧರ್ಮಪತ್ನಿ ಬಂಟರ ಸಂಘ ಪುಣೆಯ ಮಹಿಳಾ ವಿಭಾಗದ ಮಾಜಿ ಕಾರ್ಯಧ್ಯಕ್ಷೆ ಶ್ರೀಮತಿ ಸಂಧ್ಯಾ ವಿಶ್ವನಾಥ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡುವ ಸಲುವಾಗಿ ಪೋಷಕ ಸದಸ್ಯರಾಗಿ ಸೇರ್ಪಡೆಗೊಂಡಿದ್ದಾರೆ. ಇನ್ನು ಮುಂದೆ ದಂಪತಿಗಳು ಇಬ್ಬರೂ ಸಹ ಒಕ್ಕೂಟದ ಪೋಷಕ ಸದಸ್ಯರಾಗಿರುತ್ತಾರೆ.
ಮೀರಾ ಭಯಂದರ್ ನ ಹೆಸರಾಂತ ವೀರ ಕೇಸರಿ ಸಂಸ್ಥೆಯು ನಾಸ್ತಿಕ ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಸದಾ ಕಾಪಾಡಿಕೊಳ್ಳುವಲ್ಲಿ ನಿರಂತರ ಶ್ರಮಿಸುತ್ತಿರುವ ಸಂಸ್ಥೆ. ಈ ಸಂಸ್ಥೆಯ ವತಿಯಿಂದ ಕಳೆದ ವರ್ಷ ಸಂಪೂರ್ಣ ರಾಮಾಯಣ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಿ ಇದೀಗ ಭಗವದ್ಗೀತೆಯ ಪರೀಕ್ಷೆಯನ್ನು ಕನ್ನಡ ಇಂಗ್ಲೀಷ್ ಹಾಗೂ ಹಿಂದಿ ಭಾಷೆಯಲ್ಲಿ ಕಳೆದ ಜುಲೈ 20 ರಂದು ವಿಧ್ವಾನ್ ಶ್ರೀ ರಾಧಾಕೃಷ್ಣ ಭಟ್ ರವರ ಮಾರ್ಗದರ್ಶನದೊಂದಿಗೆ ಮತ್ತು ಶ್ರೀ ಸಾಣೂರು ಸಾಂತಿಂಜ ಜನಾರ್ದನ್ ಭಟ್ ಆಶೀರ್ವಾದದಿಂದ ಹಾಗೂ ವೀರ ಕೇಸರಿ ಮೀರಾ ಭಯಂದರ್ ನ ಅಧ್ಯಕ್ಷರಾದ ಹರೀಶ್ ರೈಯವರ ನೇತೃತ್ವದಲ್ಲಿ ಭಯಂದರ್ ಸೈಂಟ್ ಆಗ್ನೇಸ್ ಇಂಗ್ಲಿಷ್ ಹೈಸ್ಕೂಲ್ ಇಲ್ಲಿ ಆಯೋಜಿಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶದ ಅಂಗವಾಗಿ ಸಂಸ್ಥೆಯ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮವು ನವೆಂಬರ್ 15 ರಂದು ಜಿ 9, ಸ್ಪೋರ್ಟ್ಸ್ ಟರ್ಫ್ ಹಾಗೂ ಲ್ಹಾನ್ ಇಂದ್ರಲೋಕ ಕಲಾವತಿ ಮಂದಿರದ ಬಳಿ, ಭಯಂದರ್ ಇಂದ್ರಲೋಕ ನಾಕಾ ಇಲ್ಲಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತುಳು, ಕನ್ನಡ…
ಮಂಗಳ ಗಂಗೋತ್ರಿಯ ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ 19ನೇ ಬಾರಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಸೆಮಿಫೈನಲ್ ಹಂತದಲ್ಲಿ ಆಳ್ವಾಸ್ ಕಾಲೇಜು, ಉಜಿರೆಯ ಎಸ್ಡಿಎಮ್ ಕಾಲೇಜನ್ನು 3-0 ನೇರ ಸೆಟ್ಗಳಲ್ಲಿ ಸೋಲಿಸಿ ಫೈನಲ್ಗೆ ಅರ್ಹತೆ ಗಳಿಸಿತು. ಫೈನಲ್ ಪಂದ್ಯದಲ್ಲಿ ಆಳ್ವಾಸ್ ಕಾಲೇಜು, ಮಂಗಳೂರಿನ ಎಸ್ಡಿಎಂ ಬಿಬಿಎಂ ಕಾಲೇಜನ್ನು 3-0 ನೇರ ಸೆಟ್ಗಳಲ್ಲಿ ಸೋಲಿಸಿ, 15ನೇ ಬಾರಿ, ಶ್ರೀ ಕೆಮ್ಮಾರ ಬಾಲಕೃಷ್ಣ ಗೌಡ ಸ್ಮಾರಕ ರೋಲಿಂಗ್ ಟ್ರೋಫಿಯನ್ನು ಪುರುಷರ ವಿಭಾಗದಲ್ಲಿ ಪಡೆದುಕೊಂಡಿತು. ಅಂತೆಯೇ ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ ಮೂರನೇ ಸ್ಥಾನ ಪಡೆದುಕೊಂಡಿತು. ಪ್ರಶಸ್ತಿ ವಿತರಣಾ ಸಂಧರ್ಭ ಡಾ| ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವಿಜೇತ ತಂಡಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.














