Author: admin
ನಾನು ಕೂಡ ಸರಕಾರಿ ಶಾಲೆಯಲ್ಲಿ ಕಲಿತು ಈ ಮಟ್ಟಕ್ಕೆ ಬೆಳೆದಿದ್ದೇನೆ. ಅನೇಕ ಸಾಧಕರು ಸರಕಾರಿ ಶಾಲೆಗಳಲ್ಲಿಯೇ ವಿದ್ಯಾಭ್ಯಾಸ ಮಾಡಿ ದೊಡ್ಡ ಮಟ್ಟ ತಲುಪಿದ್ದಾರೆ. ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವುದರ ಬಗ್ಗೆ ಕೀಳಂದಾಜು ಸಲ್ಲದು ಎಂದು ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು. ಕುಂದಾಪುರದ ಕೆರಾಡಿ ಶಾಲೆಯನ್ನು ರಿಷಬ್ ಶೆಟ್ಟಿ ಫೌಂಡೇಶನ್ ನೇತೃತ್ವದಲ್ಲಿ ಮಾದರಿ ಶಾಲೆಯನ್ನಾಗಿಸುವ ನಿಟ್ಟಿನಲ್ಲಿ ನಡೆದ ಸಮಾಲೋಚನೆ, ಅಭಿವೃದ್ಧಿ ಯೋಜನೆ ಪಟ್ಟಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆರಾಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಸ್ಪೋಕನ್ ಇಂಗ್ಲಿಷ್, ಕಂಪ್ಯೂಟರ್ ಶಿಕ್ಷಣದ ಜತೆಗೆ ಕಲೆ, ಕ್ರೀಡೆ, ಯೋಗದ ಸ್ಮರ್ಧಾತ್ಮಕ ಪರೀಕ್ಷಾ ತಯಾರಿ, ವ್ಯಕ್ತಿತ್ವ ವಿಕಸನ ತರಗತಿ, ವಾಹನ ವ್ಯವಸ್ಥೆ ಮಾಡಲಾಗುವುದು. ನಮ್ಮದು ಖಾಸಗಿ ಶಾಲೆಯ ಜತೆ ಸ್ಪರ್ಧೆಯಲ್ಲ. ಆದರೆ ಕನ್ನಡ ಶಾಲೆಯನ್ನು ಮಾದರಿಯಾಗಿಸುವುದು ನಮ್ಮ ಗುರಿ. ರಿಷಬ್ ಶೆಟ್ಟಿ ಫೌಂಡೇಶನ್ ಮುಂದಿನ 5 ವರ್ಷಗಳ ಅವಧಿಗೆ ಶಾಲೆಯ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಿದೆ ಎಂದರು. ಕೆರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದರ್ಶನ ಶೆಟ್ಟಿ, ಊರ…
ಚೇಳಾರ್ ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ಗಡಿ ಪ್ರಧಾನರಾದ ಖಂಡಿಗೆ ಬೀಡು ಆದಿತ್ಯ ಮುಕ್ಕಾಲ್ದಿ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಗೌರವಾರ್ಥ ಸಾರ್ವಜನಿಕ ನುಡಿ ನಮನ ಕಾರ್ಯಕ್ರಮವು ಚೇಳಾರ್ ಖಂಡಿಗೆ ಬೀಡು ಶ್ರೀ ಧರ್ಮರಸು ದೈವಸ್ಥಾನದಲ್ಲಿ ನಡೆಯಿತು. ಪಣಿಯೂರುಗುತ್ತು ಕರುಣಾಕರ ಶೆಟ್ಟಿ ಮಾತನಾಡಿ, ಆದಿತ್ಯ ಮುಕ್ಕಾಲ್ದಿ ಅವರು ಮೂವತ್ತು ವರ್ಷಗಳ ಕಾಲ ಗಡಿ ಪ್ರದಾನರಾಗಿ ಸಲ್ಲಿಸಿದ ಸೇವೆ ಅನನ್ಯವಾದುದು. ಆದಿತ್ಯ ಮುಕ್ಕಾಲ್ದಿಯವರ ಉಸಿರು ನಿಂತರೂ ಹೆಸರು ಶಾಶ್ವತವಾಗಿ ಉಳಿಯಲಿದೆ ಎಂದರು. ಚೇಳಾರ್ ಶ್ರೀ ಶಾರದಾ ವಿದ್ಯಾ ಟ್ರಸ್ಟ್ ನ ಅಧ್ಯಕ್ಷೆ ವೀಣಾ ಶೆಟ್ಟಿ ಮಾತನಾಡಿ, ಆದಿತ್ಯ ಮುಕ್ಕಾಲ್ದಿ ಅವರಲ್ಲಿ ಅಭಿಮಾನ, ಆತ್ಮೀಯತೆ, ಪ್ರೀತಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಮಹಿಳೆಯರಿಗೆ ನೀಡುವ ಗೌರವವನ್ನು ಅವರಲ್ಲಿ ಕಾಣಲು ಸಾಧ್ಯವಿತ್ತು ಎಂದರು. ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ ಪೆರ್ಮುದೆ ಮಾತನಾಡಿ ಆದಿತ್ಯ ಮುಕ್ಕಾಲ್ದಿ ಅವರು ಕೃಷಿ ಬದುಕಿನ ಜೊತೆಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು. ದೈವಾರಾಧನೆಯಲ್ಲಿ ಅಧಿಕಾರಯುತವಾಗಿ ಮಾತನಾಡ ಬಲ್ಲರು.…
ಮೂಡುಬಿದಿರೆ ಮೂಲದ ಖ್ಯಾತ ಮಕ್ಕಳ ತಜ್ಞರಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕರ ಶೆಟ್ಟಿ ಅವರು ಪುಣೆಯ ಸಂತ ವಿನ್ಸೆಂಟ್ಸ್ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಅಪೌಷ್ಟಿಕತೆ ಕುರಿತು ಮಾಹಿತಿ ಶಿಬಿರವನ್ನು ನಡೆಸಿಕೊಟ್ಟರು. ಡಾ.ಸುಧಾಕರ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ಶಾಲಾಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದ್ದಾರೆ. ಪುಣೆಯ ಕಂಟೋನ್ಮೆಂಟ್ ಬೋರ್ಡ್ ಆಸ್ಪತ್ರೆಯ ಸಹಯೋಗದೊಂದಿಗೆ ಈ ಶಿಬಿರ ನಡೆಯಿತು.
ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಬಂಟರ ಸಂಘದ ಸರ್ವ ಸದಸ್ಯರ ಮಹಾಸಭೆ ಇತ್ತೀಚಿಗೆ ದಾವಣಗೆರೆಯ ಕುಂದುವಾಡ ರಸ್ತೆಯಲ್ಲಿರುವ ಬಂಟರ ಭವನ ಸಭಾಂಗಣದಲ್ಲಿ ನಡೆದಿದ್ದು, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಯಕ್ಷಗಾನ ಬಾಲ ಕಲಾವಿದರಾದ ನಗರದ ಸೆಂಟ್ ಪಾಲ್ಸ್ ಕಾನ್ವೆಂಟ್ ನಲ್ಲಿ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಶ್ರಿತ ಹಟ್ಟಿಯಂಗಡಿ ಆನಂದ ಶೆಟ್ಟಿ, ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಹರೀಶ್ ಶೆಟ್ಟಿ ನೂಜಿಯವರು ಯಕ್ಷಗಾನ ಪ್ರದರ್ಶನದೊಂದಿಗೆ ಅತ್ಯದ್ಭುತವಾಗಿ ತಾಳಕ್ಕೆ ಸರಿಯಾಗಿ ಕುಣಿತದೊಂದಿಗೆ ನೆರೆದ ಪ್ರೇಕ್ಷಕರ ಹೃನ್ಮನ ತಣಿಸಿದರು. ಕರ್ನಾಟಕ ಕರಾವಳಿ ಜಿಲ್ಲೆಗಳ ಆರಾಧನಾ ಗಂಡು ಕಲೆ, ಯಕ್ಷಗಾನವನ್ನು ವಾಣಿಜ್ಯ ನಗರಿ ದಾವಣಗೆರೆಯಲ್ಲಿ ವೈಭವೀಕರಿಸಿದ ಈ ಯಕ್ಷಗಾನ ಬಾಲ ಕಲಾವಿದರಿಗೆ ದಾವಣಗೆರೆಯ ಯಕ್ಷರಂಗ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ್ ಶೆಟ್ಟಿ, ಸಿಎ ಉಮೇಶ್ ಶೆಟ್ಟಿ ಸೇರಿದಂತೆ ಸಂಸ್ಥೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು, ಯಕ್ಷ ಪ್ರೇಮಿಗಳು ಸಂಭ್ರಮದಿಂದ ಮೆಚ್ಚುಗೆಯೊಂದಿಗೆ ಅಭಿನಂದಿಸಿದರು. ದಾವಣಗೆರೆಯ ಪ್ರತಿಷ್ಠಿತ ಜೆ. ಜೆ.…
ಮನಸಿನಲ್ಲಿ ಭಾವನೆಗಳ ಮೆರವಣಿಗೆ ಎಂದರೆ ಬದುಕಿನಲ್ಲಿ ಅದೆಷ್ಟು ಚಂದದ ಅನುಭೂತಿ ಅಲ್ಲವೇ? ಆದರೆ ಭಾವನೆಗಳು ಬರೀ ಸಂಭ್ರಮವನ್ನಷ್ಟೇ ತುಂಬಿಕೊಂಡು ಬರುವುದಿಲ್ಲ. ಕೆಲವೊಮ್ಮೆ ಹೇಳತೀರದ ದುಃಖ, ಮೌನದ ಕಟ್ಟೆ ಒಳಗೆ ಅಡಗಿ ಕುಳಿತ ಹತಾಶೆ, ನಿಗ್ರಹಿಸಿಕೊಂಡ ಕೋಪ – ಮುನಿಸು, ಹೇಳದೇ ಉಳಿದ ಮಾತಿನ ತೊಳಲಾಟ, ದ್ವೇಷ ಎಲ್ಲವನ್ನು ಹೊತ್ತು ತರುತ್ತವೆ. ಆದರೆ ಇದೇ ಭಾವನೆಗಳ ಕೈಗೆ ನಮ್ಮ ಮನಸನ್ನು ಕೊಟ್ಟರೆ ಎದ್ದು ನಿಲ್ಲಬೇಕಾದ ಬದುಕು ಕ್ಷಣ ಮಾತ್ರದಲ್ಲಿ ಕುಗ್ಗಿ ಮುನ್ನಡೆಯುವ ಭರವಸೆಯನ್ನೇ ಕಳೆದುಕೊಂಡು ಬಿಡುತ್ತದೆ. ಇದು ಪ್ರತಿಯೊಬ್ಬರ ಬದುಕಿನ ನೈಜ ಸತ್ಯ. ಬಾಲ್ಯದಿಂದ “ಬದುಕು ಒಂದು ಚಲಿಸುವ ದೋಣಿ ಇದ್ದಂತೆ “ಎಂದು ಹೇಳಿ ಬೆಳೆಸುವ ನಮ್ಮ ಹಿರಿಯರು ಅದರ ಅರ್ಥ ತಿಳಿಸಿ ಹೇಳುವುದರಲ್ಲಿ ಬಹಳಷ್ಟು ಸಲ ಸೋತು ಬಿಡುತ್ತಾರೆ. ಕೆಲವೊಮ್ಮೆ ನಾವೆಷ್ಟೋ ಮಾತುಗಳನ್ನು ನುಂಗಿ ಬಿಟ್ಟಿರುತ್ತೇವೆ. ಯಾರೋ ಏನೋ ಹೇಳಿದರೆಂದು ತಲೆ ಕೆಡಿಸಿಕೊಂಡು ನಮ್ಮ ಕನಸುಗಳನ್ನೇ ಬಲಿ ಕೊಟ್ಟಿರುತ್ತೇವೆ. ತಿರುಗಿ ಬಿದ್ದರೆ ಅಪಮಾನವಾದೀತು ಎಂಬ ಭಯಕ್ಕೆ ಅವ್ಯಕ್ತ ಭಾವದ ಬಣ್ಣ ಬಳಿಯುತ್ತೇವೆ.…
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಜನವರಿಯಲ್ಲಿ ನಡೆಸಿದ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಗಳ ರ್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಮೂಡುಬಿದಿರೆಯ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಶೇಕಡಾ 100 ಫಲಿತಾಂಶವನ್ನು ದಾಖಲಿಸಿದೆ. ಆ ಮೂಲಕ ತನ್ನ ಕಾಲೇಜಿನ 15 ಸ್ನಾತಕೋತ್ತರ ವಿಭಾಗದ 40 ವಿದ್ಯಾರ್ಥಿಗಳು ಅತ್ಯುತ್ತಮ ಮತ್ತು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಪ್ರತ್ಯೇಕ ವಿಭಾಗಗಳಲ್ಲಿ 11 ರ್ಯಾಂಕ್ ಪಡೆದಿರುತ್ತಾರೆ. ಒಟ್ಟು ವಿವಿಧ ವಿಭಾಗದಲ್ಲಿ ಮೂರು ಪ್ರಥಮ ರ್ಯಾಂಕ್ , ಎರಡು ದ್ವಿತೀಯ ರ್ಯಾಂಕ್, ಒಂದು ಮೂರನೇ ರ್ಯಾಂಕ್ , ಒಂದು ನಾಲ್ಕನೇ ರ್ಯಾಂಕ್ , ಒಂದು ಐದನೇ ರ್ಯಾಂಕ್ , ಮೂರು ಒಂಬತ್ತನೆ ರ್ಯಾಂಕ್ ಗಳಿಸಿದ್ದಾರೆ. ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದಲ್ಲಿ ಡಾ.ಪೃಥ್ವಿ ಎನ್ ಭಟ್ ಪ್ರಥಮ ರ್ಯಾಂಕ್ ಪಡೆಯುವುದರ ಜೊತೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಚಿನ್ನದ ಪದಕ ವಿಜೇತರಾಗಿದ್ದಾರೆ. ಕ್ರಿಯಾ ಶರೀರ ಸ್ನಾತಕೋತ್ತರ ವಿಭಾಗದಲ್ಲಿ ಡಾ. ಶೆಟ್ಟಿ ಸುಪ್ರೀತಾ ಸುಂದರ್ ಪ್ರಥಮ ರ್ಯಾಂಕ್ , ರಚನಾ…
ಮೂಡುಬಿದಿರೆ: ವಿದ್ಯಾವಂತರಾದ ನೀವು ಮತದಾನ ಮಾಡುವುದರ ಜೊತೆಗೆ ಸಾರ್ವಜನಿಕರಲ್ಲಿ ಮತದಾನದ ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಕೆಲಸಮಾಡಬೇಕು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಚಂದ್ರನಾಥ್ ಎಂ ತಿಳಿಸಿದರು. ಅವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಕೇಂದ್ರ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಹಾಗೂ ವಿಘ್ನೇಶ್ವರ ಸ್ಪೋಟ್ರ್ಸ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ‘ಮತದಾನ ಜಾಗೃತಿ ಅಭಿಯಾನ’ ದಲ್ಲಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಶ್ರೇಷ್ಠ ಕಾರ್ಯ. ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು. ಸ್ವಾತಂತ್ರ್ಯ ನಂತರ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಳವಡಿಸಿಕೊಂಡೆವು. ಈ ವ್ಯವಸ್ಥೆಯಲ್ಲಿ ನಮ್ಮಿಂದ ಆಯ್ಕೆ ಆದ ಪ್ರತಿನಿಧಗಳೇ ನಮ್ಮನ್ನು ಆಳುವಂತವರು. ‘ಚುನಾವಣಾ ಪರ್ವ ದೇಶದ ಗರ್ವ’ ಈ ವರ್ಷದ ಚುನಾವಣಾ ಧ್ಯೇಯವಾಕ್ಯವಾಗಿ ಚುನಾವಣಾ ಆಯೋಗ ಘೋಷಿಸಿದೆ. ಉತ್ತಮ ವ್ಯಕ್ತಿಗಳ ಆಯ್ಕೆಯ ಮೂಲಕ ಸಧೃಡ ಸರಕಾರದ ನಿರ್ಮಾಣ ಸಾಧ್ಯ. ಮತದಾನ ದಿನ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸ, ಭವ್ಯ ಭಾರತದ ಏಳಿಗೆಗೆ…
ಸತತ ಮೂರನೇ ಬಾರಿಗೆ ಪುತ್ತೂರು ನಗರ ಸಭಾ ಸದಸ್ಯರಾಗಿ ಆಯ್ಕೆಯಾದ ಭಾಜಪ ಸಂಘ ಪರಿವಾರದ ಜನಪ್ರಿಯ ಪ್ರಭಾವಿ ಕಾರ್ಯಕರ್ತ ಶ್ರೀ ರಮೇಶ್ ರೈ ನೆಲ್ಲಿಕಟ್ಟೆಯವರು ತನ್ನ ನಿಸ್ವಾರ್ಥ ಜನಪರ ಸೇವೆ ಹಾಗೂ ಪಾರದರ್ಶಕ ಸಂಘಟನೆಗಳಿಂದ ಜನಪ್ರಿಯರಾಗಿದ್ದಾರೆ. ತನ್ನ ಪರಿಸರದ ಸಮಾಜ ಬಾಂಧವರ ಸರ್ವಾಂಗೀಣ ಪ್ರಗತಿಯ ಕನಸು ಕಂಡು ಕಾರ್ಯಪ್ರವೃತ್ತರಾಗಿರುತ್ತಾರೆ. ದೇಶದ ಪ್ರಧಾನಿ ಮೋದಿಯವರ ಕನಸಿನ ಭಾರತ ಕಟ್ಟುವಲ್ಲಿ ಪ್ರಾಮಾಣಿಕ ಭ್ರಷ್ಟಾಚಾರ ರಹಿತ ಸೇವಾನಿರತ ರೈಯವರು ಸುತ್ತ ಮುತ್ತಲಿನ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸುಳ್ಯದಲ್ಲಿ ಮಂಗಳಾ ಮೋಟಾರ್ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದು ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿಸಿ ಕೊಂಡಿದ್ದಾರೆ. ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಭಾವದಿಂದ ಬೆರೆಯುವ ವಿಶೇಷ ಗುಣ ಹೊಂದಿರುವ ಇವರು ತನ್ನ ವಿಶೇಷ ಜನಪ್ರಿಯತೆಯ ಪರಿಣಾಮ ಸ್ವರೂಪ ಎಂಬಂತೆ ಇದೀಗ ಮೂರನೇ ಬಾರಿಗೆ ಪುತ್ತೂರು ನಗರಾಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಅವರ ಅಭಿಮಾನಿಗಳು ಅವರಿಗೆ ಶುಭ ಹಾರೈಸಿದ್ದಾರೆ. ತನ್ನ ಉದ್ಯಮ ರಾಜಕೀಯ ಸಾಮಾಜಿಕ ಜೀವನದ ಜೊತೆಗೆ ಓರ್ವ ಆದರ್ಶ ಕುಟುಂಬ…
ಓರ್ವ ಸುಸಂಸ್ಕೃತ ವಿದ್ಯಾವಂತ, ಸಾಮಾಜಿಕ ಮತ್ತು ಕಲಾ ಸೇವಾ ಮನೋಭಾವ ಕುಟುಂಬದಿಂದ ಬಂದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆಯವರು ಬೆಂಗಳೂರು ಮಹಾನಗರ ಪಾಲಿಕೆಯ ಅಪರ ಆಯುಕ್ತರಾಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಸರಳ ಸೌಮ್ಯ ಸ್ವಭಾವದ ಮತ್ತು ಸಕಲರನ್ನೂ, ಸಕಲ ವಯೋಮಾನದವರನ್ನೂ ಪ್ರೀತಿ ಮತ್ತು ಗೌರವದಿಂದ ಕಾಣುವ ನಮ್ಮ ಅಜಿತಣ್ಣ ಇಂದು ಈ ಉನ್ನತ ಮಟ್ಟದ ಹುದ್ದೆಗೆ ನಿಯೋಜನೆಗೊಂಡಿದ್ದು ಸಮಸ್ತ ಜನತೆಗೂ ಮತ್ತು ಬಂಟ ಸಮಾಜ ಬಾಂಧವರಿಗೆ ಬಹಳ ಸಂತಸ ತಂದಿದೆ. ವಿಶೇಷವೇನೆಂದರೆ ಮೊಟ್ಟ ಮೊದಲ ಬಾರಿಗೆ ಬಂಟ ಸಮಾಜದ ಅಧಿಕಾರಿ ವಿಶೇಷ ಆಸನವನ್ನು ಅಲಂಕರಿಸಿದ್ದಾರೆ. ಇವರು ಮತ್ತು ಇವರ ಕುಟುಂಬದ ಸದಸ್ಯರೆಲ್ಲರಿಗೂ ಭಗವಂತನ ಅನುಗ್ರಹ ಇರಲಿ ಎಂದು ನಮ್ಮೆಲ್ಲರ ಹಾರೈಕೆ.
ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನ್ನಿನ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದ್ದು, ಫೆ 22 ರಂದು ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಗುಡ್ಡಪ್ಪ ಸುವರ್ಣರಿಗೆ ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ ಪಟ್ಲ ಫೌಂಡೇಶನ್ನಿನ ಮೂಲಕ ನೂತನ ಮನೆಯನ್ನು ನಿರ್ಮಿಸಿ ಗೃಹಪ್ರವೇಶ ಕಾರ್ಯಕ್ರಮ ನೆರವೇರಿಸಿ ಮನೆಯನ್ನು ಹಸ್ತಾಂತರಿಸಲಾಯಿತು. ಕೊಡುಗೈ ದಾನಿಗಳು, ಫೌಂಡೇಶನ್ನಿನ ಮಹಾದಾನಿಗಳೂ ಆದ ಉದ್ಯಮಿ ಶಶಿಧರ ಬಿ. ಶೆಟ್ಟಿ ಬರೋಡರವರ ಹೆಸರಿನಲ್ಲಿ ಈ ಮನೆಯನ್ನು ನಿರ್ಮಿಸಲಾಗಿದೆ. ಪುತ್ತೂರು ಘಟಕದ ಗೌರವಾಧ್ಯಕ್ಷ ಸವಣೂರು ಸೀತಾರಾಮ ರೈ, ಹಿರಿಯ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ಸಸಿಹಿತ್ಲು ಮೇಳದ ಯಜಮಾನ ರಾಜೇಶ್ ಗುಜರನ್, ಸುಳ್ಯ ಘಟಕದ ಶ್ರೀನಾಥ್ ರೈ, ಪ್ರೀತಮ್ ರೈ, ಬೆಳ್ಳಾರೆ ರಮೇಶ್ ರೈ, ಪ್ರಶಾಂತ್ ರೈ ಪಂಜ, ಡಾ.ಪ್ರಖ್ಯಾತ ಶೆಟ್ಟಿ ಹಾಗೂ ಪಟ್ಲ ಸತೀಶ್ ಶೆಟ್ಟಿಯವರ…