Author: admin

ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಬಂಟರ ಸಂಘದ ಸರ್ವ ಸದಸ್ಯರ ಮಹಾಸಭೆ ಇತ್ತೀಚಿಗೆ ದಾವಣಗೆರೆಯ ಕುಂದುವಾಡ ರಸ್ತೆಯಲ್ಲಿರುವ ಬಂಟರ ಭವನ ಸಭಾಂಗಣದಲ್ಲಿ ನಡೆದಿದ್ದು, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಯಕ್ಷಗಾನ ಬಾಲ ಕಲಾವಿದರಾದ ನಗರದ ಸೆಂಟ್ ಪಾಲ್ಸ್ ಕಾನ್ವೆಂಟ್ ನಲ್ಲಿ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಶ್ರಿತ ಹಟ್ಟಿಯಂಗಡಿ ಆನಂದ ಶೆಟ್ಟಿ, ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಹರೀಶ್ ಶೆಟ್ಟಿ ನೂಜಿಯವರು ಯಕ್ಷಗಾನ ಪ್ರದರ್ಶನದೊಂದಿಗೆ ಅತ್ಯದ್ಭುತವಾಗಿ ತಾಳಕ್ಕೆ ಸರಿಯಾಗಿ ಕುಣಿತದೊಂದಿಗೆ ನೆರೆದ ಪ್ರೇಕ್ಷಕರ ಹೃನ್ಮನ ತಣಿಸಿದರು. ಕರ್ನಾಟಕ ಕರಾವಳಿ ಜಿಲ್ಲೆಗಳ ಆರಾಧನಾ ಗಂಡು ಕಲೆ, ಯಕ್ಷಗಾನವನ್ನು ವಾಣಿಜ್ಯ ನಗರಿ ದಾವಣಗೆರೆಯಲ್ಲಿ ವೈಭವೀಕರಿಸಿದ ಈ ಯಕ್ಷಗಾನ ಬಾಲ ಕಲಾವಿದರಿಗೆ ದಾವಣಗೆರೆಯ ಯಕ್ಷರಂಗ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ್ ಶೆಟ್ಟಿ, ಸಿಎ ಉಮೇಶ್ ಶೆಟ್ಟಿ ಸೇರಿದಂತೆ ಸಂಸ್ಥೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು, ಯಕ್ಷ ಪ್ರೇಮಿಗಳು ಸಂಭ್ರಮದಿಂದ ಮೆಚ್ಚುಗೆಯೊಂದಿಗೆ ಅಭಿನಂದಿಸಿದರು. ದಾವಣಗೆರೆಯ ಪ್ರತಿಷ್ಠಿತ ಜೆ. ಜೆ.…

Read More

ಮನಸಿನಲ್ಲಿ ಭಾವನೆಗಳ ಮೆರವಣಿಗೆ ಎಂದರೆ ಬದುಕಿನಲ್ಲಿ ಅದೆಷ್ಟು ಚಂದದ ಅನುಭೂತಿ ಅಲ್ಲವೇ? ಆದರೆ ಭಾವನೆಗಳು ಬರೀ ಸಂಭ್ರಮವನ್ನಷ್ಟೇ ತುಂಬಿಕೊಂಡು ಬರುವುದಿಲ್ಲ. ಕೆಲವೊಮ್ಮೆ ಹೇಳತೀರದ ದುಃಖ, ಮೌನದ ಕಟ್ಟೆ ಒಳಗೆ ಅಡಗಿ ಕುಳಿತ ಹತಾಶೆ, ನಿಗ್ರಹಿಸಿಕೊಂಡ ಕೋಪ – ಮುನಿಸು, ಹೇಳದೇ ಉಳಿದ ಮಾತಿನ ತೊಳಲಾಟ, ದ್ವೇಷ ಎಲ್ಲವನ್ನು ಹೊತ್ತು ತರುತ್ತವೆ. ಆದರೆ ಇದೇ ಭಾವನೆಗಳ ಕೈಗೆ ನಮ್ಮ ಮನಸನ್ನು ಕೊಟ್ಟರೆ ಎದ್ದು ನಿಲ್ಲಬೇಕಾದ ಬದುಕು ಕ್ಷಣ ಮಾತ್ರದಲ್ಲಿ ಕುಗ್ಗಿ ಮುನ್ನಡೆಯುವ ಭರವಸೆಯನ್ನೇ ಕಳೆದುಕೊಂಡು ಬಿಡುತ್ತದೆ. ಇದು ಪ್ರತಿಯೊಬ್ಬರ ಬದುಕಿನ ನೈಜ ಸತ್ಯ. ಬಾಲ್ಯದಿಂದ “ಬದುಕು ಒಂದು ಚಲಿಸುವ ದೋಣಿ ಇದ್ದಂತೆ “ಎಂದು ಹೇಳಿ ಬೆಳೆಸುವ ನಮ್ಮ ಹಿರಿಯರು ಅದರ ಅರ್ಥ ತಿಳಿಸಿ ಹೇಳುವುದರಲ್ಲಿ ಬಹಳಷ್ಟು ಸಲ ಸೋತು ಬಿಡುತ್ತಾರೆ. ಕೆಲವೊಮ್ಮೆ ನಾವೆಷ್ಟೋ ಮಾತುಗಳನ್ನು ನುಂಗಿ ಬಿಟ್ಟಿರುತ್ತೇವೆ. ಯಾರೋ ಏನೋ ಹೇಳಿದರೆಂದು ತಲೆ ಕೆಡಿಸಿಕೊಂಡು ನಮ್ಮ ಕನಸುಗಳನ್ನೇ ಬಲಿ ಕೊಟ್ಟಿರುತ್ತೇವೆ. ತಿರುಗಿ ಬಿದ್ದರೆ ಅಪಮಾನವಾದೀತು ಎಂಬ ಭಯಕ್ಕೆ ಅವ್ಯಕ್ತ ಭಾವದ ಬಣ್ಣ ಬಳಿಯುತ್ತೇವೆ.…

Read More

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಜನವರಿಯಲ್ಲಿ ನಡೆಸಿದ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಗಳ ರ‍್ಯಾಂಕ್  ಪಟ್ಟಿ ಪ್ರಕಟಗೊಳಿಸಿದ್ದು, ಮೂಡುಬಿದಿರೆಯ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಶೇಕಡಾ 100 ಫಲಿತಾಂಶವನ್ನು ದಾಖಲಿಸಿದೆ. ಆ ಮೂಲಕ ತನ್ನ ಕಾಲೇಜಿನ 15 ಸ್ನಾತಕೋತ್ತರ ವಿಭಾಗದ 40 ವಿದ್ಯಾರ್ಥಿಗಳು ಅತ್ಯುತ್ತಮ ಮತ್ತು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಪ್ರತ್ಯೇಕ ವಿಭಾಗಗಳಲ್ಲಿ 11 ರ‍್ಯಾಂಕ್  ಪಡೆದಿರುತ್ತಾರೆ. ಒಟ್ಟು ವಿವಿಧ ವಿಭಾಗದಲ್ಲಿ ಮೂರು ಪ್ರಥಮ ರ‍್ಯಾಂಕ್ , ಎರಡು ದ್ವಿತೀಯ ರ್ಯಾಂಕ್, ಒಂದು ಮೂರನೇ ರ‍್ಯಾಂಕ್ , ಒಂದು ನಾಲ್ಕನೇ ರ‍್ಯಾಂಕ್ , ಒಂದು ಐದನೇ ರ‍್ಯಾಂಕ್ , ಮೂರು ಒಂಬತ್ತನೆ ರ‍್ಯಾಂಕ್  ಗಳಿಸಿದ್ದಾರೆ. ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದಲ್ಲಿ ಡಾ.ಪೃಥ್ವಿ ಎನ್ ಭಟ್ ಪ್ರಥಮ ರ‍್ಯಾಂಕ್  ಪಡೆಯುವುದರ ಜೊತೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಚಿನ್ನದ ಪದಕ ವಿಜೇತರಾಗಿದ್ದಾರೆ. ಕ್ರಿಯಾ ಶರೀರ ಸ್ನಾತಕೋತ್ತರ ವಿಭಾಗದಲ್ಲಿ ಡಾ. ಶೆಟ್ಟಿ ಸುಪ್ರೀತಾ ಸುಂದರ್ ಪ್ರಥಮ ರ‍್ಯಾಂಕ್ , ರಚನಾ…

Read More

ಮೂಡುಬಿದಿರೆ: ವಿದ್ಯಾವಂತರಾದ ನೀವು ಮತದಾನ ಮಾಡುವುದರ ಜೊತೆಗೆ ಸಾರ್ವಜನಿಕರಲ್ಲಿ ಮತದಾನದ ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಕೆಲಸಮಾಡಬೇಕು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಚಂದ್ರನಾಥ್ ಎಂ ತಿಳಿಸಿದರು. ಅವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಕೇಂದ್ರ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಹಾಗೂ ವಿಘ್ನೇಶ್ವರ ಸ್ಪೋಟ್ರ್ಸ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ‘ಮತದಾನ ಜಾಗೃತಿ ಅಭಿಯಾನ’ ದಲ್ಲಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಶ್ರೇಷ್ಠ ಕಾರ್ಯ. ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು. ಸ್ವಾತಂತ್ರ್ಯ ನಂತರ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಳವಡಿಸಿಕೊಂಡೆವು. ಈ ವ್ಯವಸ್ಥೆಯಲ್ಲಿ ನಮ್ಮಿಂದ ಆಯ್ಕೆ ಆದ ಪ್ರತಿನಿಧಗಳೇ ನಮ್ಮನ್ನು ಆಳುವಂತವರು. ‘ಚುನಾವಣಾ ಪರ್ವ ದೇಶದ ಗರ್ವ’ ಈ ವರ್ಷದ ಚುನಾವಣಾ ಧ್ಯೇಯವಾಕ್ಯವಾಗಿ ಚುನಾವಣಾ ಆಯೋಗ ಘೋಷಿಸಿದೆ. ಉತ್ತಮ ವ್ಯಕ್ತಿಗಳ ಆಯ್ಕೆಯ ಮೂಲಕ ಸಧೃಡ ಸರಕಾರದ ನಿರ್ಮಾಣ ಸಾಧ್ಯ. ಮತದಾನ ದಿನ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸ, ಭವ್ಯ ಭಾರತದ ಏಳಿಗೆಗೆ…

Read More

ಸತತ ಮೂರನೇ ಬಾರಿಗೆ ಪುತ್ತೂರು ನಗರ ಸಭಾ ಸದಸ್ಯರಾಗಿ ಆಯ್ಕೆಯಾದ ಭಾಜಪ ಸಂಘ ಪರಿವಾರದ ಜನಪ್ರಿಯ ಪ್ರಭಾವಿ ಕಾರ್ಯಕರ್ತ ಶ್ರೀ ರಮೇಶ್ ರೈ ನೆಲ್ಲಿಕಟ್ಟೆಯವರು ತನ್ನ ನಿಸ್ವಾರ್ಥ ಜನಪರ ಸೇವೆ ಹಾಗೂ ಪಾರದರ್ಶಕ ಸಂಘಟನೆಗಳಿಂದ ಜನಪ್ರಿಯರಾಗಿದ್ದಾರೆ. ತನ್ನ ಪರಿಸರದ ಸಮಾಜ ಬಾಂಧವರ ಸರ್ವಾಂಗೀಣ ಪ್ರಗತಿಯ ಕನಸು ಕಂಡು ಕಾರ್ಯಪ್ರವೃತ್ತರಾಗಿರುತ್ತಾರೆ. ದೇಶದ ಪ್ರಧಾನಿ ಮೋದಿಯವರ ಕನಸಿನ ಭಾರತ ಕಟ್ಟುವಲ್ಲಿ ಪ್ರಾಮಾಣಿಕ ಭ್ರಷ್ಟಾಚಾರ ರಹಿತ ಸೇವಾನಿರತ ರೈಯವರು ಸುತ್ತ ಮುತ್ತಲಿನ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸುಳ್ಯದಲ್ಲಿ ಮಂಗಳಾ ಮೋಟಾರ್ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದು ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿಸಿ ಕೊಂಡಿದ್ದಾರೆ. ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಭಾವದಿಂದ ಬೆರೆಯುವ ವಿಶೇಷ ಗುಣ ಹೊಂದಿರುವ ಇವರು ತನ್ನ ವಿಶೇಷ ಜನಪ್ರಿಯತೆಯ ಪರಿಣಾಮ ಸ್ವರೂಪ ಎಂಬಂತೆ ಇದೀಗ ಮೂರನೇ ಬಾರಿಗೆ ಪುತ್ತೂರು ನಗರಾಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಅವರ ಅಭಿಮಾನಿಗಳು ಅವರಿಗೆ ಶುಭ ಹಾರೈಸಿದ್ದಾರೆ. ತನ್ನ ಉದ್ಯಮ ರಾಜಕೀಯ ಸಾಮಾಜಿಕ ಜೀವನದ ಜೊತೆಗೆ ಓರ್ವ ಆದರ್ಶ ಕುಟುಂಬ…

Read More

ಓರ್ವ ಸುಸಂಸ್ಕೃತ ವಿದ್ಯಾವಂತ, ಸಾಮಾಜಿಕ ಮತ್ತು ಕಲಾ ಸೇವಾ ಮನೋಭಾವ ಕುಟುಂಬದಿಂದ ಬಂದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆಯವರು ಬೆಂಗಳೂರು ಮಹಾನಗರ ಪಾಲಿಕೆಯ ಅಪರ ಆಯುಕ್ತರಾಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಸರಳ ಸೌಮ್ಯ ಸ್ವಭಾವದ ಮತ್ತು ಸಕಲರನ್ನೂ, ಸಕಲ ವಯೋಮಾನದವರನ್ನೂ ಪ್ರೀತಿ ಮತ್ತು ಗೌರವದಿಂದ ಕಾಣುವ ನಮ್ಮ ಅಜಿತಣ್ಣ ಇಂದು ಈ ಉನ್ನತ ಮಟ್ಟದ ಹುದ್ದೆಗೆ ನಿಯೋಜನೆಗೊಂಡಿದ್ದು ಸಮಸ್ತ ಜನತೆಗೂ ಮತ್ತು ಬಂಟ ಸಮಾಜ ಬಾಂಧವರಿಗೆ ಬಹಳ ಸಂತಸ ತಂದಿದೆ. ವಿಶೇಷವೇನೆಂದರೆ ಮೊಟ್ಟ ಮೊದಲ ಬಾರಿಗೆ ಬಂಟ ಸಮಾಜದ ಅಧಿಕಾರಿ ವಿಶೇಷ ಆಸನವನ್ನು ಅಲಂಕರಿಸಿದ್ದಾರೆ. ಇವರು ಮತ್ತು ಇವರ ಕುಟುಂಬದ ಸದಸ್ಯರೆಲ್ಲರಿಗೂ ಭಗವಂತನ ಅನುಗ್ರಹ ಇರಲಿ ಎಂದು ನಮ್ಮೆಲ್ಲರ ಹಾರೈಕೆ.

Read More

ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನ್ನಿನ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದ್ದು, ಫೆ 22 ರಂದು ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಗುಡ್ಡಪ್ಪ ಸುವರ್ಣರಿಗೆ ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ ಪಟ್ಲ ಫೌಂಡೇಶನ್ನಿನ ಮೂಲಕ ನೂತನ ಮನೆಯನ್ನು ನಿರ್ಮಿಸಿ ಗೃಹಪ್ರವೇಶ ಕಾರ್ಯಕ್ರಮ ನೆರವೇರಿಸಿ ಮನೆಯನ್ನು ಹಸ್ತಾಂತರಿಸಲಾಯಿತು. ಕೊಡುಗೈ ದಾನಿಗಳು, ಫೌಂಡೇಶನ್ನಿನ ಮಹಾದಾನಿಗಳೂ ಆದ ಉದ್ಯಮಿ ಶಶಿಧರ ಬಿ. ಶೆಟ್ಟಿ ಬರೋಡರವರ ಹೆಸರಿನಲ್ಲಿ ಈ ಮನೆಯನ್ನು ನಿರ್ಮಿಸಲಾಗಿದೆ. ಪುತ್ತೂರು ಘಟಕದ ಗೌರವಾಧ್ಯಕ್ಷ ಸವಣೂರು ಸೀತಾರಾಮ ರೈ, ಹಿರಿಯ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ಸಸಿಹಿತ್ಲು ಮೇಳದ ಯಜಮಾನ ರಾಜೇಶ್ ಗುಜರನ್, ಸುಳ್ಯ ಘಟಕದ ಶ್ರೀನಾಥ್ ರೈ, ಪ್ರೀತಮ್ ರೈ, ಬೆಳ್ಳಾರೆ ರಮೇಶ್ ರೈ, ಪ್ರಶಾಂತ್ ರೈ ಪಂಜ, ಡಾ.ಪ್ರಖ್ಯಾತ ಶೆಟ್ಟಿ ಹಾಗೂ ಪಟ್ಲ ಸತೀಶ್ ಶೆಟ್ಟಿಯವರ…

Read More

ಸುರತ್ಕಲ್ ಸ್ಪೋಟ್ಸ್೯ ಆ್ಯಂಡ್ ಕಲ್ಚರಲ್ ಕ್ಲಬ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ಓವರ್ ಆರ್ಮ್ ಹಿರಿಯರ ಕ್ರಿಕೆಟ್ ಪಂದ್ಯಾಟ ಸೀಸನ್ 3ರ ಪಂದ್ಯಾಕೂಟ ಮಾರ್ಚ್ 2 ಮತ್ತು 3 ರಂದು ಸುರತ್ಕಲ್ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಾಕೂಟದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಅರಸೀಕೆರೆ, ದ.ಕ ಜಿಲ್ಲೆ, ಉಡುಪಿ ಜಿಲ್ಲೆಯ ಪ್ರತಿಷ್ಠಿತ ತಂಡಗಳು ಭಾಗವಹಿಸಲಿದೆ. ವಿಜೇತ ತಂಡ ಟ್ರೋಫಿಯೊಂದಿಗೆ 1,00,000 ನಗದು, ದ್ವಿತೀಯ ಸ್ಥಾನಿ ಟ್ರೋಫಿಯೊಂದಿಗೆ 50,005 ನಗದು ಹಾಗೂ ಸೆಮಿಫೈನಲ್ ಪರಾಜಿತ ತಂಡಕ್ಕೆ ಟ್ರೋಫಿಯೊಂದಿಗೆ ಗೌರವಧನ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ನೀಡಲಾಗುವುದು. ಸುರತ್ಕಲ್ ಸ್ಪೋರ್ಟ್ಸ್ ಕಲ್ಚರಲ್ ಕ್ಲಬ್ ನ ತೃತೀಯ ವಾರ್ಷಿಕೋತ್ಸವ ಮಾರ್ಚ್ 4 ರಂದು ಸಂಜೆ 6 ಗಂಟೆಗೆ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂಜೆ ಗಂಟೆ 6.00ರಿಂದ ಸಭಾ ಕಾರ್ಯಕ್ರಮ, ಸನ್ಮಾನ ಸಮಾರಂಭದ ಬಳಿಕ ಕಲಾ ಸಂಗಮ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್…

Read More

ಮೂಡುಬಿದಿರೆ: ಅಸ್ಸಾಂನ ಗೌಹಾಟಿಯಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂನಿರ್ಸಿಟಿ ಗೇಮ್ಸ್‍ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕಬಡ್ಡಿ ತಂಡವು ಚಿನ್ನದ ಪದಕವನ್ನು ಗಳಿಸಿದೆ. ಅಂತರ್ ವಿಶ್ವಿದ್ಯಾಲಯಗಳ ಕಬಡ್ಡಿ ಚಾಂಪಿಯನ್‍ಶಿಪ್ ನಲ್ಲಿ ಅಂತಿಮ ಎಂಟರ ಘಟ್ಟಕ್ಕೆ ಆಯ್ಕೆಯಾದ ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ಮಂಗಳೂರು ವಿವಿಯು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಸೆಮಿಫೈನಲ್ ಲಗ್ಗೆ ಇಟ್ಟಿತ್ತು. ಸೆಮಿಫೈನಲ್‍ನಲ್ಲಿ ಹರಿಯಾಣದ ಚೌಧರಿ ಬನ್ಸಿಲಾಲ್ ವಿವಿಯ ತಂಡವನ್ನು ಹಾಗೂ ಫೈನಲ್‍ನಲ್ಲಿ ರಾಜಸ್ತಾನದ ಕೋಟಾ ವಿಶ್ವ ವಿದ್ಯಾಲಯವನ್ನು 36-22 ಅಂಕಗಳೊಂದಿಗೆ ಪರಾಭವಗೊಳಿಸಿ 2023-24ನೇ ಸಾಲಿನ ಖೇಲೋ ಇಂಡಿಯಾ ಯೂನಿರ್ಸಿಟಿ ಗೇಮ್ಸ್ ಕಬಡ್ಡಿ ಚಾಂಪಿಯನ್ ಪಟ್ಟವನ್ನು ಪ್ರಥಮ ಬಾರಿಗೆ ಅಲಂಕರಿಸಿತು. ವಿಜೇತ ತಂಡದಲ್ಲಿ ಆಳ್ವಾಸ್ ವಿದ್ಯಾ ಸಂಸ್ಥೆಯ ಐದು ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಐವರು ವಿದ್ಯಾರ್ಥಿಗಳು ಕ್ರೀಡಾ ದತ್ತು ಶಿಕ್ಷಣದಡಿ ಆಳ್ವಾಸ್‍ನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಅಖಿಲ ಭಾರತೀಯ ಅಂತರ್ ವಿವಿ ಪುರುಷರ ಕಬಡ್ಡಿ ಪಂದ್ಯಾಟದಲ್ಲೂ ಚಾಂಪಿಯನ್ಸ್ ಇತ್ತೀಚೆಗೆ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ಅಖಿಲ ಭಾರತೀಯ ಅಂತರ್ ವಿವಿ ಪುರುಷರ ಕಬಡ್ಡಿ ಚಾಂಪಿಯನ್‍ಶಿಪ್‍ನಲ್ಲಿ…

Read More

ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಮತ್ತು ಕಾರ್ತಿಕ ತಂತ್ರಿ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ ಗಂಟೆ 7.48 ರಿಂದ 8.37 ರ ಮೀನಾ ಲಗ್ನ ಸಮುಹೂರ್ತದಲ್ಲಿ ಬ್ರಹ್ಮ ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆ ಶ್ರೀ ಭೂತ ಬಲಿ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಮುಂಬಯಿ ಕಾರ್ದಾಂಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ಪುರುಷೋತ್ತಮ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಉಪಾಧ್ಯಕ್ಷರಾದ ವಿಲಾಸ್ ರೈ ಪಾಲ್ತಾಡು, ನಾರಾಯಣ ರೈ ಮೊದೆಲ್ಯಾಡಿ, ಚಂದ್ರಶೇಖರ ರೈ ನಳೀಲು, ಸಂಜೀವ ಗೌಡ ಪಾಲ್ತಾಡಿ, ರಘುನಾಥ ರೈ ನಡುಕೋಟೆಲು, ಪ್ರಧಾನ ಕಾರ್ಯದರ್ಶಿ ಸುರೇಶ್ಚಂದ್ರ ರೈ ಪಾಲ್ತಾಡಿ, ಕಾರ್ಯದರ್ಶಿ ಪ್ರವೀಣ್ ಕುಮಾರ್ ರೈ ನಳೀಲು, ಜತೆ ಕಾರ್ಯದರ್ಶಿ ಪ್ರವೀಣ್ ಕುಮಾರ್ ರೈ ನಳೀಲು, ಜತೆ ಕಾರ್ಯದರ್ಶಿ ಡಾ. ಶುಭ್ ದೀಪ್ ರೈ ಕೋಲ್ಪೆಗುತ್ತು, ಖಜಾಂಚಿ…

Read More