Author: admin

ಮಂದಾರ್ತಿ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಶತಸಾರ್ಥಕ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷ ಗಂಗಾಧರ ಶೆಟ್ಟಿ, ಆಶಾ ಜಿ. ಶೆಟ್ಟಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ್ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ನಿರ್ದೇಶಕ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಹಿರಿಯಡ್ಕ ರೈತರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ಇನ್ನಂಜೆ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ರಾಜೇಶ್ ರಾವ್, ಹೆಗ್ಗುಂಜೆ ಗ್ರಾಪಂ ಅಧ್ಯಕ್ಷ ರಾಮಕೃಷ್ಣ, ಕಾಡೂರು ಗ್ರಾಪಂ…

Read More

ಇಂದು ಶಿಕ್ಷಣ ಸಂಸ್ಥೆಗಳು ದೇಶದ ಭವಿಷ್ಯದ ಭದ್ರ ಬುನಾದಿಗೆ ಕಾರಣವಾಗಿವೆ. ಹೆಚ್ಚು ಹೆಚ್ಚು ಉತ್ತಮ ಶಿಕ್ಷಣ ಸಂಸ್ಥೆಗಳು ಸ್ಥಾಪನೆಗೊಂಡು ಶಿಕ್ಷಣ ಸರ್ವರಿಗೂ ಸಿಗುವಂತಾಗಬೇಕು. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಪೋಷಕರು ಉತ್ತಮ ಶಿಕ್ಷಣ ನೀಡಿದರೆ ಅದುವೇ ಅಮೂಲ್ಯ ಆಸ್ತಿಯಾಗುತ್ತದೆ. ಇಂದಿನ ಯುವ ಪೀಳಿಗೆಗೆ ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ಪರಿಚಯಿಸುವುದು ಅತ್ಯಗತ್ಯ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಕೋಟೇಶ್ವರ ಯಡಾಡಿ ಮತ್ಯಾಡಿ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹೆಗ್ಗದ್ದೆ ಸ್ಟುಡಿಯೋ ಯೂಟ್ಯೂಬ್ ಚಾನಲ್ ನ ಸಂದೀಪ್ ಶೆಟ್ಟಿ ಮಾತನಾಡುತ್ತಾ “ಮಕ್ಕಳು ಎಳವೆಯಲ್ಲಿಯೇ ಕನಸು ಕಾಣಬೇಕು ಮತ್ತು ನನಸಾಗಿಸಲು ಪ್ರಯತ್ನಿಸಬೇಕು” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡಿ, ಮಕ್ಕಳಿಗೆ ನಮ್ಮ ನಾಡಿನ ಆಚಾರ ವಿಚಾರಗಳನ್ನು ತಿಳಿಸುವುದು…

Read More

ಅಂಬಾಭವಾನಿ ಕ್ರಾಕರ್ಸ್ ಕಾರ್ಕಳ, ಈ ಬಾರಿಯ ದೀಪಾವಳಿ ಹಬ್ಬದ ಪ್ರಯುಕ್ತ ನಡೆಸಿದ ಪಟಾಕಿ ಮಾರಾಟದಲ್ಲಿ ಬಂದ ಲಾಭಾಂಶದಲ್ಲಿ ಈ ಬಾರಿ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 90ಕ್ಕಿಂತ ಅಧಿಕ ಅಂಕ ಪಡೆದ ಕಾರ್ಕಳ ತಾಲೂಕಿನ ಆಟೋ ಚಾಲಕರ 50 ಮಂದಿ ಮಕ್ಕಳಿಗೆ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಮೂಲಕ ತಲಾ ರೂ. 5,000 ದಂತೆ ಒಟ್ಟು ರೂಪಾಯಿ 2,50,000 ಮೊತ್ತ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಲಾಗಿದೆ. 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚಿನ ಅಂಕ ಪಡೆದ ಆಟೋ ಚಾಲಕರ ಮಕ್ಕಳು ಮತ್ತು ಪೋಷಕರು ಸಂಸ್ಥೆಯನ್ನು ಸಂಪರ್ಕಿಸಿ ವಿವರಗಳನ್ನು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಅವಿನಾಶ್ ಶೆಟ್ಟಿಯವರನ್ನು ಸಂಪರ್ಕಿಸಬಹುದು. 9844552182

Read More

“ಸಾಧನೆ” ಎಂದರೇನು ಎಂಬ ಪ್ರಶ್ನೆಯನ್ನು ಯಾರಿಗಾದರೂ ಕೇಳಿದರೇ ಬರುವ ಉತ್ತರ ಬಹಳ ವಿಭಿನ್ನವಾಗಿರುತ್ತದೆ. ಕೆಲವರಿಗೆ ಕಾರು, ಬಂಗಲೆ ಅಥವಾ ಹಣ ಮಾಡುವುದೇ ಸಾಧನೆಯಾದರೆ, ಹೆಸರು ಹಾಗೂ ಕೀರ್ತಿಗಳಿಸುವುದೇ ಇನ್ನು ಕೆಲವರಿಗೆ ಸಾಧನೆ ಆಗಿರುತ್ತದೆ. ಮತ್ತಷ್ಟು ಕೆದಕಿದರೆ ಅವರಿಂದ ಬರುವ ಉತ್ತರವೇನೆಂದರೆ ಅವರು ಗಳಿಸಿದ ಆ ವಸ್ತುಗಳ ಬಗ್ಗೆ, ಕೀರ್ತಿ ಮತ್ತು ಯಶಸ್ಸಿನ ಕುರಿತು ಸಮಾಜಕ್ಕೆ ತಿಳಿಸಿ, ಅದೇ ಸಮಾಜ ಅವರ ಸ್ಥಾನಮಾನವನ್ನು ಅವರ ಹಣ, ಕಾರು, ಬಂಗಲೆ, ಯಶಸ್ಸು, ಕೀರ್ತಿಯಿಂದ ಅಳೆದು ತೂಗಿ ನೀಡುವ ಪಟ್ಟವೇ ಸಾಧನೆಯಾಗಿರುತ್ತದೆ ಹೊರತು ಅದರಿಂದ ಕಿಂಚಿತ್ತೂ ತೃಪ್ತಿ ಅವರಿಗೆ ಸಿಕ್ಕಿರುವುದಿಲ್ಲ. ಅನಂತರದ ಬದುಕು ಆ ಪಟ್ಟವನ್ನು ಉಳಿಸಿಕೊಳ್ಳುವುದರೊಂದಿಗೆ ಮುಂದುವರೆಯುತ್ತಿರುತ್ತದೆ, ಸಾಧನೆಯ ಹಾದಿ ತಪ್ಪಿ ಹೋಗಿರುತ್ತದೆ. ನಿಮ್ಮಲ್ಲಿ ಹಣವಿರಲಿ ಇಲ್ಲದಿರಲಿ, ನೀವು ವಾಸಿಸುವ ಮನೆ, ವಾಹನ, ಬಟ್ಟೆಯ ತನಕ ಎಲ್ಲವನ್ನು ಗಮನಿಸಿ ನಿಮಗೊಂದು ಸ್ಥಾನ ಕಲ್ಪಿಸಿಕೊಡುತ್ತದೆ ಈ ಸಮಾಜ. ಹಾಗಾಗಿ ನಮಗೆ ಗೊತ್ತಿಲ್ಲದಂತೆ ನಾವು ತೋರಿಕೆಯ ಜೀವನ ಶೈಲಿಯನ್ನು ನಮ್ಮದಾಗಿಸಿಕೊಳ್ಳುತ್ತಾ ಹೋಗುತ್ತೇವೆ. ಸಮಾಜ ನಿರ್ಧರಿಸುವ ಆ ಒಂದು…

Read More

2024 ರ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ನವೆಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ಉದ್ಯಮ ಕ್ಷೇತ್ರದ ಅದ್ವಿತೀಯ ಸಾಧಕರಾಗಿ ಸಾವಿರಾರು ಜನರ ಬದುಕಿಗೆ ಬೆಳಕಾದ ಅಭಿವೃದ್ಧಿಯ ರೂವಾರಿ, ಧೈವ ದೇವಸ್ಥಾನಗಳ ಅಭಿವೃದ್ಧಿಯ ಪ್ರೇರಕ ಶಕ್ತಿಯಾಗಿ, ಕರಾವಳಿಯ ನೂರಾರು ಸಂಘ ಸಂಸ್ಥೆಗಳಿಗೆ ನೆರವಿನ ಶಕ್ತಿ ನೀಡಿದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಒಲಿದು ಬಂದಿದ್ದು, ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ ಸಮಾರಂಭ ಜರಗಲಿದೆ ಎಂದು ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮೀರಾ ರೋಡ್ ನಿವಾಸಿಯಾದ ಕಳತ್ತೂರು ಅಂಗಡಿಗುತ್ತು ವೀರೇಂದ್ರ ವಿ ಶೆಟ್ಟಿ ಮತ್ತು ಶೀರೂರು ಮೂಡುಮನೆ ಸುಕನ್ಯಾ ವಿ ಶೆಟ್ಟಿ ದಂಪತಿಯ ಮಗನಾದ ಪ್ರಖ್ಯಾತ್ ವಿ ಶೆಟ್ಟಿಯವರಿಗೆ ನವೆಂಬರ್ 1 ರಂದು ಮಂಗಳೂರಿನಲ್ಲಿ 2024 ರ ಸಾಲಿನ ಕರ್ನಾಟಕ ರಾಜ್ಯೋತ್ಸವ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು. ಇವರಿಗೆ ಕಲೆ, ಸಂಗೀತ, ಕ್ರೀಡೆ, ಶಿಕ್ಷಣ ಇವೆಲ್ಲದರಲ್ಲಿ ತುಂಬಾ ಆಸಕ್ತಿ ಇದ್ದು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರು ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಮತ್ತು ಹಲವಾರು ಬಂಗಾರದ ಪದಕವನ್ನು ಗೆದ್ದಿರುತ್ತಾರೆ. 2020 ರಲ್ಲಿ ಬಂಟರ ಸಂಘ ಮುಂಬಯಿ ಏರ್ಪಡಿಸಿದ “ಚಿಣ್ಣರ ಚಿಲಿಪಿಲಿ” ಎಂಬ ಫ್ಯಾಷನ್ ಶೋನಲ್ಲಿ ಭಾಗವಹಿಸಿ 2 ನೇ ಸ್ಥಾನವನ್ನು ಪಡೆದಿದ್ದರು. ಹಾಗೆಯೇ ಓದಿನಲ್ಲೂ ಸಹ ಮುಂದಿದ್ದು SSC ಯಲ್ಲಿ 93%, HSC ಯಲ್ಲಿ 88% ಅಂಕವನ್ನು ಪಡೆದು ಪಾಸಾದರು. MHT CET ಪರೀಕ್ಷೆಯಲ್ಲಿ 99 ಅಂಕವನ್ನು ಪಡೆದು ಭಾರತದ ಅತ್ಯಂತ ಕಠಿಣ ಪರೀಕ್ಷೆಯಾದ Jee Mains ಪರೀಕ್ಷೆಯಲ್ಲಿ 98.50 ಅಂಕವನ್ನು ಪಡೆದು ಸುರತ್ಕಲ್ ಎನ್…

Read More

ವಿದ್ಯಾಗಿರಿ: ‘ಜೀವನದಲ್ಲಿ ಒಮ್ಮೆಯಾದರೂ ರಕ್ತದಾನಿಯಾಗಿ, ಅದು ನೀವು ಸಮಾಜಕ್ಕೆ ನೀಡುವ ಅತ್ಯುತ್ತಮ ಸೇವೆಯಾಗುತ್ತದೆ’ ಎಂದು  ಲಯನ್ಸ್ 317ಡಿ ಜಿಲ್ಲಾ ಸಂಪುಟ ಕಾರ್ಯದರ್ಶಿ ಗೀತಾ ರಾವ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ಆರೋಗ್ಯ ಕೇಂದ್ರ, ಮಂಗಳೂರಿನ ಕೆಎಂಸಿ ಆಸ್ಪತ್ರೆ, ವೆನ್‌ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆ, ನಿಡ್ಡೋಡಿ ಲಯನ್ಸ್ ಕ್ಲಬ್, ಆಳ್ವಾಸ್ ಚಿಗುರು ವಿದ್ಯಾರ್ಥಿ ವೇದಿಕೆ, ಆಳ್ವಾಸ್ ಎನ್‌ಎಸ್‌ಎಸ್, ಆಳ್ವಾಸ್ ರೆಡ್‌ಕ್ರಾಸ್ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನವು ಶ್ರೇಷ್ಠ ದಾನವಾಗಿದ್ದು, ಅತ್ಯಂತ ಕಠಿಣ ಸಂದರ್ಭದಲ್ಲಿ ರಕ್ತದಾನ ಮಾಡಿ ನೆರವಾಗುವುದು ಅತ್ಯುತ್ತಮ ಸೇವೆಯಾಗಿದೆ ಎಂದರು. ಆಳ್ವಾಸ್ ಕಾಲೇಜು ಶಿಕ್ಷಣದ ಜೊತೆ ಸಂಸ್ಕೃತಿ ಮತ್ತು ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದ್ದು, ಮಾನವೀಯ ಮೌಲ್ಯಗಳಿಗೆ ಒತತ್ತು ನೀಡುತ್ತಿದೆ. ರಕ್ತದಾನದಂತಹ    ಸಮಾಜ ಕಾರ್ಯಗಳ ಮೂಲಕ ನವ ಪೀಳಿಗೆಗೆ ಮಾದರಿಯಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ನಿಡ್ಡೋಡಿ ಲಯನ್ ಕ್ಲಬ್…

Read More

ಅಪರೂಪದ ಅವಕಾಶ ಸದುಪಯೋಗಪಡಿಸಿಕೊಳ್ಳಿ : ಕಾರ್ಕಳ ಬಿ.ಇ.ಓ. ಶ್ರೀ ಭಾಸ್ಕರ್ ಟಿ ದೇಶದ ಯುವ ಪೀಳಿಗೆಯನ್ನು ಸದೃಢ ನಾಯಕರನ್ನಾಗಿ ರೂಪಿಸಲು ರಚಿಸಿರುವ ಎನ್ ಎಸ್ ಎಸ್ ಸ್ವಯಂ ಸೇವಕರಾಗಿ ಶಿಬಿರಗಳಲ್ಲಿ ಭಾಗವಹಿಸುವುದು ಅಪರೂಪದ ಅವಕಾಶ ಇದರಲ್ಲಿ ಸಕ್ರೀಯವಾಗಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಕಳದ ಬಿ.ಇ.ಓ. ಭಾಸ್ಕರ್ ಟಿ ಯವರು ಹೇಳಿದರು. ಇವರು ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಂಬಾಡಿ, ಪದವು ಇಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಶಿಕ್ಷಣ ನೈಜ ಶಿಕ್ಷಣ : ಸವಿತಾ ಎರ್ಮಾಳ್ ಶಿಬಿರದ ದಿಕ್ಸೂಚಿ ಭಾಷಣ ಮಾಡಿದ ಮಂಗಳೂರು ವಿಭಾಗದ ಎನ್.ಎಸ್.ಎಸ್. ವಿಭಾಗಾಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಇವರು ಮಾತನಾಡಿ ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ಸಮಾಜಮುಖಿ ಕೆಲಸಗಳನ್ನು ಪ್ರಕೃತಿ ಶಿಕ್ಷಣಗಳೊಂದಿಗೆ ಕಲಿಸುವ ಮಾಧ್ಯಮವಾಗಿದೆ. ಜ್ಞಾನಸುಧಾದ ಎನ್.ಎಸ್.ಎಸ್. ಈ ನಿಟ್ಟಿನಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತ 10ನೇ ಶಿಬಿರವನ್ನು ನಡೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಜ್ಞಾನಸುಧಾದ ಡಾ.ಸುಧಾಕರ ಶೆಟ್ಟಿ ಸಮಾಜಕ್ಕೆ ಮಾದರಿ : ನವೀನ್ ನಾಯಕ್ ವಿದ್ಯಾರ್ಥಿಗಳ…

Read More

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು ಮತ್ತು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 47 ಚಿನ್ನ, 17 ಬೆಳ್ಳಿ ಮತ್ತು 07 ಕಂಚಿನ ಪದಕಗಳೊಂದಿಗೆ 71 ಪದಕದೊಂದಿಗೆ 4 ಕ್ರೀಡಾಕೂಟದ ನೂತನ ಕೂಟ ದಾಖಲೆಯನ್ನು ನಿರ್ಮಿಸುವ ಮೂಲಕ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಶಸ್ತಿ, ಪ್ರೌಢಶಾಲಾ 14ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ಪ್ರೌಢಶಾಲಾ 17ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿಯೊಂದಿಗೆ ಕ್ರೀಡಾಕೂಟದ ಸಮಗ್ರ ಚಾಂಪಿಯನ್ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ: ಬಾಲಕರ ವಿಭಾಗ : ಸುಭಾಷ್ ಎ…

Read More

ಪ್ರತಿಯೊಂದು ಕ್ರೀಡಾ ತಂಡಕ್ಕೂ ಮೆಂಟರ್‌ ಇರುತ್ತಾರೆ. ಅವರ ಮುಖ್ಯ ಪಾತ್ರ, ತಂಡಕ್ಕೆ ಮಾರ್ಗದರ್ಶನ ಮತ್ತು ಸಲಹೆಯನ್ನು ನೀಡುವುದು, ತಮ್ಮ ಅನುಭವ ಮತ್ತು ನೈಪುಣ್ಯತೆಯನ್ನ ತಂಡದ ಕ್ರೀಡಾಳುಗಳಿಗೆ ನೀಡುತ್ತ ತಂಡವನ್ನ ಗೆಲುವಿನ ಹಂತಕ್ಕೆ ಕೊಂಡೊಯ್ಯುವುದು. ಅವರು ಕ್ರೀಡಾಳುಗಳಿಗೆ ಸ್ಫೂರ್ತಿ ತುಂಬುವ ಪರಿ, ತಂಡವನ್ನು ಮುನ್ನೆಡೆಸುವ ರೀತಿ, ಮಾರ್ಗದರ್ಶನ ನೀಡುವ ವಿಧಾನ, ಇವರ ವಿವಿಧ ರೀತಿಯ ಪ್ರಯತ್ನಗಳು ತಂಡದ ಗೆಲುವಿನಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಇದೇ ರೀತಿಯ ಕಾರ್ಯತಂತ್ರಗಳನ್ನು ಕಾರ್ಪೋರೇಟ್‌ ಕಂಪೆನಿಗಳಲ್ಲಿ ಉದ್ಯೋಗಿಗಳ ಸಾಮರ್ಥ್ಯ ಹೆಚ್ಚಿಸಲು ಮತ್ತು ಉದ್ಯೋಗಿಗಳು ಇನ್ನೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು, ಕೆಲವು ತರಬೇತಿ ಕಾರ್ಯಾಗಾರಗಳನ್ನ ಹಮ್ಮಿಕೊಳ್ಳುತ್ತಾರೆ. ಇಲ್ಲಿ ನೀಡುವ ತರಬೇತಿಗಳಿಂದ ಕಂಪೆನಿಯ ಉತ್ಪಾದಕತೆಯೂ ಹೆಚ್ಚಾಗುತ್ತದೆ ಮತ್ತು ಉದ್ಯೋಗಿಗಳಲ್ಲಿ ಹೊಸ ಉತ್ಸಾಹವನ್ನು ಮೂಡಿಸುತ್ತದೆ. ಉದ್ಯೋಗಿಗಳ ವೈಯುಕ್ತಿಕ ಮಟ್ಟದಲ್ಲಿ ನೋಡುವುದಾದರೆ, ಈ ತರಬೇತಿ ಕಾರ್ಯಾಗಾರಗಳು ಸಂವಹನ ಕೌಶಲವನ್ನು ಹೆಚ್ಚಿಸುತ್ತದೆ, ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸುತ್ತದೆ, ಕಠಿನ ಸಮಯದಲ್ಲಿ ಪರಿಸ್ಥಿತಿ ನಿಭಾಯಿಸುವಂತಹ ಸಾಮರ್ಥ್ಯವನ್ನು ನೀಡುತ್ತದೆ. ಉದ್ಯೋಗಿಗಳ ಪರಸ್ಪರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಅರಿತುಕೊಂಡು ಸಹಕರಿಸಲು ಅನುವು ಮಾಡಿಕೊಡುತ್ತದೆ.…

Read More