Author: admin

ನಮ್ಮ ದೇವಾಲಯದ ವತಿಯಿಂದ ಕಳೆದ 21 ವರ್ಷಗಳಿಂದ ಉಚಿತವಾಗಿ ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ನಡೆಸುತ್ತಿದ್ದು, ಪ್ರತಿ ವರ್ಷ ಉಚಿತ ಪುಸ್ತಕ ಹಾಗೂ ಇತರ ಶಾಲಾ ಪರಿಕರ, ಪ್ರತಿಭಾ ಪುರಸ್ಕಾರವನ್ನು ನೀಡುತ್ತಾ ಬಂದಿದ್ದೇವೆ. ಇಂದಿನ ಮಕ್ಕಳೇ ಮುಂದಿನ ಭವಿಷ್ಯ. ಆದ್ದರಿಂದ ವಿದ್ಯೆಗೆ ಸದಾ ಪ್ರೋತ್ಸಾಹ ನೀಡುತ್ತಿದ್ದೇನೆ. ಮನುಷ್ಯನಲ್ಲಿರುವ ಹಣ, ಸಂಪತ್ತು ಕಳವಾಗಬಹುದು. ಆದರೆ ವಿದ್ಯೆ ಎಂದಿಗೂ ಕಳವು ಮಾಡಲಾಗದ ಸಂಪತ್ತು. ಕುಸುಮೋದರ ಶೆಟ್ಟಿ ಅವರು ಭವಾನಿ ಫೌಂಡೇಶನ್ ಮುಖಾಂತರ 4-5 ಶಾಲೆಗಳನ್ನು ದತ್ತು ಪಡೆದು ಮುನ್ನಡೆಸುವಂತಹ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆ. ಮಕ್ಕಳು ಕಲಿತು ದೊಡ್ಡವರಾದ ಬಳಿಕ ನಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿ, ವಿದ್ಯೆ ಕಲಿಸಿದ ಗುರು ಹಾಗೂ ನಮಗೆ ಸಹಕರಿಸಿದ ಸಮಾಜದ ಋಣವನ್ನು ಎಂದಿಗೂ ಮರೆಯಬಾರದು ಎಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ ಶೆಟ್ಟಿ ಅವರು ನುಡಿದರು. ಫನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಸಭಾಂಗಣದಲ್ಲಿ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಳದ ವತಿಯಿಂದ ಆಯೋಜಿಸಲಾಗಿದ್ದ 21 ನೇ…

Read More

ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು (ರಿ) ಇದರ ಆಶ್ರಯದಲ್ಲಿ ಮಹಿಳಾ ಬಂಟರ ವಿಭಾಗ, ಯುವ ಬಂಟರ ವಿಭಾಗ, ವಿದ್ಯಾರ್ಥಿ ಬಂಟರ ವಿಭಾಗ ಇದರ ಸಹಕಾರದೊಂದಿಗೆ ಆಟಿಡೊಂಜಿ ಬಂಟೆರೆ ಸೇರಿಗೆ ಸಾಧಕರಿಗೆ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರವು ದಿನಾಂಕ 10-08-2024 ರ ಶನಿವಾರ ಎಂ ಸುಂದರ್ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಂಟರ ಸಂಘದ ಮಾರ್ಗದರ್ಶಕರಾದ ಸವಣೂರು ಸೀತಾರಾಮ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಬಂಟರ ಸಂಘದ ನೂತನ ಅಧ್ಯಕ್ಷ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಒಟ್ಟು ತಾಲೂಕಿನ ಬಂಟ ಬಂಧುಗಳನ್ನು ಒಂದು ಕಡೆ ಸೇರಿಸುವ ಕಾರ್ಯಕ್ರಮ ಇದಾಗಿದೆ. ತಾಲೂಕಿನಲ್ಲಿ ಅದೆಷ್ಟೋ ಸಾಧಕರಿದ್ದಾರೆ.…

Read More

ತುಳು ಭಾಷೆಯ ಬಗ್ಗೆ ಕೀಳರಿಮೆ ಬೇಡ. ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಒಂದಾಗಿದ್ದು, ನಾವೆಲ್ಲರೂ ತುಳು ಭಾಷೆ ಉಳಿವಿಗಾಗಿ ಪ್ರಯತ್ನಿಸೋಣ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ತುಳು ಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 30 ನೇ ವರ್ಷದ ಸಂಭ್ರಮ, ಅಮೃತ ಸೋಮೇಶ್ವರ ನೂತನ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಳು ಭಾಷೆಗೆ ಅಮೃತ ಸೋಮೇಶ್ವರ ಅವರ ಸೇವೆ, ಕೊಡುಗೆ ಅಪಾರ. ಅವರ ಹೆಸರಿನಲ್ಲಿ ಸಭಾಂಗಣ ನಿರ್ಮಿಸಿ ಅವರಿಗೆ ಗೌರವ ನೀಡುವ ಕೆಲಸ ಅಕಾಡೆಮಿಯಿಂದ ನಡೆದಿದೆ ಎಂದರು. ತುಳು ಭಾಷೆಗೆ ರಾಜ್ಯದ ಸ್ಥಾನಮಾನ ಮತ್ತು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಬೇಕು ಎಂದು ದೊಡ್ಡ ಮಟ್ಟಿನ ಪ್ರಯತ್ನ ಈಗಾಗಲೇ ನಡೆದಿದೆ. ಆದರೆ ಅದಕ್ಕೆ ಸರಿಯಾದ ಪ್ರತಿಫಲ ಸಿಕ್ಕಿಲ್ಲ. ವೀರಪ್ಪ ಮೊಯಿಲಿ ಅವರು ತುಳು ಭಾಷೆಯ ಮುಖ್ಯಮಂತ್ರಿ. ತುಳು ಸಾಹಿತ್ಯದ ಜತೆ ಜತೆಗೇ ಬೆಳೆದಿದ್ದಾರೆ. ಅವರು ಕೂಡಾ ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಕೆಲವಾರು ಕಾರಣಗಳಿಂದ ಇದರ ಅನುಷ್ಠಾನ ಸಾಧ್ಯವಾಗಿಲ್ಲ…

Read More

ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ನ 3ನೇ ವಾರ್ಷಿಕ ಮಹಾಸಭೆ ಸುರತ್ಕಲ್ ಸುಭಾಷಿತನಗರದ ಹೊಟೇಲ್ ಸೂರಜ್ ನ ಸಭಾಂಗಣದಲ್ಲಿ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಸೋಸಿಯೇಶನ್ ನ ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು ಪ್ರಸ್ತಾವಿಕವಾಗಿ ಮಾತನಾಡಿದರು.‌ ಸುಭಾಷಿತ ನಗರದಲ್ಲಿ ಕಳೆದ ಮೂರು ವರ್ಷಗಳಿಂದ ಬಹಳಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಶಾಸಕ ಡಾ. ವೈ ಭರತ್ ಶೆಟ್ಟಿಯವರ ಮೂಲಕ ರಾಜ್ಯ ಸರಕಾರದ 3 ಕೋಟಿ ರೂಪಾಯಿಯ ಅನುದಾನದಿಂದ ಗುತ್ತಿಗೆದಾರ ಸುಧಾಕರ ಪೂಂಜ ಅವರು ಸುಭಾಷಿತನಗರದ ಸಮಗ್ರ ಅಭಿವೃದ್ಧಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ ಎಂದು ಪುಷ್ಪರಾಜ ಶೆಟ್ಟಿಯವರು ತಿಳಿಸಿದರು. ವಾರ್ಷಿಕ ವರದಿಯನ್ನು ಚಂದ್ರಶೇಖರ ಶೆಟ್ಟಿ ಮಂಡಿಸಿದರು. ವಾರ್ಷಿಕ ಲೆಕ್ಕ ಪತ್ರವನ್ನು ಕೋಶಾಧಿಕಾರಿ ನರಸಿಂಹ ಸುವರ್ಣ ಮಂಡಿಸಿದರು. ಅಧ್ಯಕ್ಷ ರಮೇಶ್ ಶೆಟ್ಟಿ ಮಾತನಾಡಿ ಅಸೋಸಿಯೇಶನ್ ಗೆ ಕಚೇರಿಯ ಅವಶ್ಯಕತೆ ಇದ್ದು, ಇದೇ ಬರುವ ಡಿಸೆಂಬರ್ ತಿಂಗಳಿನಲ್ಲಿ ಮುಕ್ತಾಯ ಹಂತದಲ್ಲಿರುವ ಸುಭಾಷಿತ ಪ್ರೈಡ್ ಕಟ್ಟಡದಲ್ಲಿ ದೊರಕಲಿದೆ.…

Read More

ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಲ್‌ ಬೈಲ್ ನ 2024 -2025 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು. ಒಂದನೇ ರಾಜ್ಯಪಾಲರು ಮತ್ತು ಪದಗ್ರಹಣ ಅಧಿಕಾರಿ ಲಯನ್ ಅರವಿಂದ ಶೆಣೈ pmjf ಇವರು ನೂತನ ಅಧ್ಯಕ್ಷ ಸೂರಜ್ ಆಚಾರ್ಯ ಕದ್ರಿ, ಕಾರ್ಯದರ್ಶಿ ಕಿಶೋರ್ ಡಿ ಶೆಟ್ಟಿ, ಕೋಶಾಧಿಕಾರಿ ಸತ್ಯೇಂದ್ರ ಭಟ್ ಹಾಗೂ ಲಿಯೋ ನೂತನ ಅಧ್ಯಕ್ಷೆ ಜ್ಞಾಹ್ನವಿ, ಕಾರ್ಯದರ್ಶಿ ಸುಮಂತ್, ಕೋಶಾಧಿಕಾರಿ ಅಪೇಕ್ಷ ಕದ್ರಿ ಇವರುಗಳಿಗೆ ಪದಗ್ರಹಣ ಮಾಡಿದರು. ನೂತನ ಅಧ್ಯಕ್ಷ ಸೂರಜ್ ಆಚಾರ್ಯ, ಪತ್ನಿ ನಿಶಾ ಮತ್ತು ತಾಯಿ ಶಾಲಿನಿ ವಿ. ಆಚಾರ್ಯ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸದಸ್ಯರಾಗಿ ಆಯ್ಕೆಯಾದ ಕ್ಲಬ್ಬಿನ ಸದಸ್ಯ ಮೋಹನ್ ಕೊಪ್ಪಲ್ ಕದ್ರಿ, ಜೀ ಕನ್ನಡದ ಡ್ರಾಮಾ ಜೂನಿಯರ್ ಸೀಸನ್ 5ರ ಚಾಂಪಿಯನ್ ರಿಷಿಕಾ ಕುಂದೇಶ್ವರ ಕದ್ರಿ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ 98.08 ಅಂಕ ಗಳಿಸಿ ಸೈಂಟ್ ಅಲೋಶಿಯಸ್ ಶಾಲೆಗೆ 3ನೇ ಟಾಪರ್…

Read More

ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಜುಲೈ 19 ರಂದು ನಾಡಿನ ಹಿರಿಯ ಸಾಹಿತಿ, ಶಿಕ್ಷಕ ಕೆ.ವಿ. ಭಟ್ ಕುದಬೈಲ್ ವಿರಚಿತ ಮಾತನ ಮರ್ಮ ಕೃತಿಯನ್ನು ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಅವರೊಂದಿಗೆ ಸಾಹಿತ್ಯ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೃಷ್ಣ ಭಟ್ ಅವರು ಇದು ಬಯಸದೇ ಬಂದ ಭಾಗ್ಯ. ನಾನು ಶಿಕ್ಷಕನಾಗಿ ಬಹು ಕಾಲ ಕೆಲಸ ಮಾಡಿದವನು. ಮಕ್ಕಳ ಮನೋವಿಕಾಸದ ದೃಷ್ಟಿಯಿಂದ ಬರವಣಿಗೆ ಮಾಡಿರುವೆ. ಛಂದೋಬದ್ಧ ಕವಿತೆಗಳನ್ನು ಬರೆಯುವುದು ಅದರಲ್ಲೂ ಭಾಮಿನಿ ಷಟ್ಪದಿ ರಚನೆ ನನಗೆ ಇಷ್ಟ. ಸದ್ಯ ಎಲ್ಲರೂ ಮೊಬೈಲ್ ಮುಖಿಗಳಾಗಿರುವುದರಿಂದ ಓದುಗರ ಸಂಖ್ಯೆ ಕಡಿಮೆಯಾಗುತ್ತಿರುವುದಕ್ಕೆ ಅವರು ಇದೇ ಸಂದರ್ಭದಲ್ಲಿ ಕಳವಳ ವ್ಯಕ್ತಪಡಿಸಿದರು. ಮುಂಬಯಿ ವಿವಿ ಕನ್ನಡ ವಿಭಾಗ ಹೊರನಾಡಿನಲ್ಲಿ ಮಾಡುತ್ತಿರುವ ಕನ್ನಡ ಪರಿಚಾರಿಕೆ ದೊಡ್ಡದು ಗುಣಗಾನಗೈದರು. ಮಾತಿನ ಮರ್ಮ ಕೃತಿಯನ್ನು ಬಿಡುಗಡೆಗೊಳಿಸಿದ ನಂತರ ವಿಭಾಗದ ಮುಖ್ಯಸ್ಥ ಪ್ರೊ. ಜಿ. ಎನ್. ಉಪಾಧ್ಯ ಅವರು ಮಾತನಾಡುತ್ತಾ, ಕೃಷ್ಣ ಭಟ್ ಅವರದ್ದು ವಿದ್ವತ್ತಿನಿಂದ ಪ್ರೌಢವೂ ಲೋಕಾನುಭವ ಜೀವನಾನುಭವಗಳಿಂದ…

Read More

ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಆದಿತ್ಯವಾರ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ವಿ.ಕೆ ಸಮೂಹ ಸಂಸ್ಥೆ ಮುಂಬಯಿ ಇದರ ಸಿಎಂಡಿ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರು, “ಸಸಿ ವಿತರಣೆ ಬರೀ ಕಾಟಾಚಾರದ ಕಾರ್ಯಕ್ರಮವಾಗದೆ. ಮನೆಗೆ ಕೊಂಡೊಯ್ದ ಗಿಡವನ್ನು ಮಕ್ಕಳ ಕೈಯಲ್ಲಿ ನೆಡುವಂತೆ ಸಲಹೆ ನೀಡಬೇಕು. ಇದರಿಂದ ಅವರಿಗೂ ಪ್ರಕೃತಿ ಮತ್ತು ಪರಿಸರ ರಕ್ಷಣೆಯ ಕಾಳಜಿ ಮತ್ತು ಪ್ರೀತಿ ಬೆಳೆಯುತ್ತದೆ. ಯಾವ ಗಿಡವೂ ಸಾಯದಂತೆ ನೋಡಿಕೊಳ್ಳಬೇಕು. ಮರಗಳನ್ನು ಬೇಕಾಬಿಟ್ಟಿ ಕಡಿಯುತ್ತಿರುವ ಈ ವೇಳೆಯಲ್ಲಿ ಇದೊಂದು ಸಾರ್ಥಕ ಕಾರ್ಯಕ್ರಮವಾಗಿದೆ. ಸ್ವಚ್ಛ ಪರಿಸರ ಇದ್ದಲ್ಲಿ ನಾವೆಲ್ಲರೂ ಸ್ವಚ್ಛಂದವಾಗಿ ಬದುಕಲು ಸಾಧ್ಯ. ಎಲ್ಲರೂ ಈ ಕಾರ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ” ಎಂದರು.…

Read More

ಧೋ ಧೋ ಮಳೆಯ ಆರ್ಭಟ! ಅಲ್ಲಲ್ಲಿ ಹೆಂಚಿನ ಮಾಡಿನಿಂದ ಸೋರುವ ಹನಿಗಳು. ಅದರಡಿ ಬಂದು ಕುಳಿತ ವಿಧವಿಧ ಗಾತ್ರದ ಪಾತ್ರೆಗಳು. ದಲಿಯಿಂದ ರಾಚುವ ಮಳೆ ನೀರು. ಧಾರೆ ನೀರಿಗೆ ಅಂಗಳದಲ್ಲಿ ಬಂದು ಕುಳಿತ ಬಾಲ್ಡಿ, ಕೊಡಪಾನಗಳು, ಮನೆಯೊಳಗಿದ್ದ ಕಬ್ಬಿಣದ ಕತ್ತಿಗಳು ಅಂಗಳಕ್ಕೆ ಎಸೆಯಲ್ಪಟ್ಟಿವೆ. ಅಲ್ಲೆಲ್ಲೋ ಜಗಲಿಯಲ್ಲಿ ಮಲಗಿದ್ದ ತೆಂಗಿನ ಗರಿಯ ಪೊರಕೆಗಳು ಒಳಗಡೆ ಅವಿತು ಕುಳಿತುಕೊಳ್ಳುತ್ತಿವೆ . ಮನೆಯ ಟಾಮಿ, ಬಚ್ಚಲಿನ ಒಲೆಯ ಬೂದಿ ಎಳೆದು ಮಲಗಿದೆ. ಮನೆಯ ಅಡುಗೆ ಕೋಣೆಯಲ್ಲಿ, ಒಲೆಯ ಬಿಸಿಗೆ ಬೆಕ್ಕು ಮೈಕಾಸಿಕೊಳ್ಳುತ್ತಿದೆ. ಅಂಗಳದಿಂದ ಹರಿದು ಹೋಗುವ ನೀರಿನಲ್ಲಿ ಗುಳ್ಳೆಗಳು ಎದ್ದೆದ್ದು ಕುಣಿಯುತ್ತಾ, ಅಷ್ಟು ದೂರ ಸಾಗುತ್ತಾ ಹೋಗಿ ಅಲ್ಲಲ್ಲೇ ಒಡೆಯುತ್ತಿವೆ. ಕಸಕಡ್ಡಿ ನೀರಿಗೆ ದಾರಿಬಿಟ್ಟು ಉದ್ದಕ್ಕೆ ಮಲಗಿವೆ. ಗೋಂಕುರು ಕಪ್ಪೆಯ ವಟರ್ ವಟರ್ ಮಳೆಯ ಸದ್ದಿನೊಂದಿಗೆ ಪೈಪೋಟಿ ನಡೆಸುತ್ತಿವೆ. ಅಲ್ಲೆಲ್ಲೋ ಸಳಸಳ ಮಿಂಚು ಛಟೀಲೆಂದು ಹೊಡೆದ ಬೆನ್ನಲ್ಲೇ ಗಡಗಡ ಗುಡುಂಮೆಂದು ಗುಡುಗುವ ಗುಡುಗಿಗೆ ಮನೆಯೊಳಗೇ ಅಮ್ಮನಿಗೆ ಒತ್ತಿ ಕುಳಿತ ಮಕ್ಕಳ ಕಣ್ಣುಗಳು ಭಯದಿಂದ ಅರಳುತ್ತಿವೆ. ಮಳೆಯೆಂದರೆ ನನಗೋ ಬಾಲ್ಯದ ನೆನಪು ಒತ್ತರಿಸಿ ಒತ್ತರಿಸಿ ಬರುವುದು. ಎಂಥಾ ಮಳೆ ! ಅಂತಹ ಮಳೆಯ ಸಂಭ್ರಮವನ್ನು ಈ ದೂರದ ಊರಲ್ಲಿ ಮತ್ತೆ ಆನಂದಿಸಲುಂಟೇ? ಒಂದು…

Read More

ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2024-25 ನೇ ಶೈಕ್ಷಣಿಕ ವರ್ಷದ ‘ಆಸರೆ’ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಂದೆ ಅಥವಾ ತಾಯಿಯನ್ನು ಇಲ್ಲವೇ ಇಬ್ಬರನ್ನೂ ಕಳೆದುಕೊಂಡ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪ್ರಾಥಮಿಕ ಶಿಕ್ಷಣ (ಐದನೇ ತರಗತಿಯಿಂದ) ಪ್ರೌಢ ಶಿಕ್ಷಣ, ಪದವಿಪೂರ್ವ, ಪದವಿ ಸ್ನಾತಕೋತ್ತರ ಪದವಿ ಅಥವಾ ಯಾವುದೇ ವೃತ್ತಿಪರ ಕೋರ್ಸ್ ನ ಯಾವುದೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬಂಟ ಸಮುದಾಯವನ್ನು ಪ್ರತಿನಿಧಿಸುವ ಕುಂದಾಪುರ, ಬೈಂದೂರು ತಾಲೂಕಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ. ಮೀರಿರಬಾರದು. ಅರ್ಜಿ ಸಲ್ಲಿಸಲು ಅಂಕ ಗಳಿಕೆಯ ಯಾವುದೇ ನಿರ್ದಿಷ್ಟ ಮಿತಿ ಇರುವುದಿಲ್ಲ. ಸಂಘದ ಅಧಿಕೃತ ಜಾಲತಾಣ www.youthbuntskundapur.com ಮೂಲಕ ಅರ್ಜಿ ನಮೂನೆಯೊಂದಿಗೆ ಪೂರಕ ದಾಖಲೆಗಳನ್ನು ಲಗತ್ತಿಸಿ youthbunts.aasare@gmail.com ಈಮೇಲ್ ಕಳುಹಿಸಿಕೊಡಬಹುದಾಗಿದೆ. ಇಲ್ಲವೇ ಅಧ್ಯಕ್ಷರು, ಕುಂದಾಪುರ ತಾಲೂಕು ಯುವ…

Read More

ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ 2024-25 ನೇ ಸಾಲಿನ ಅಧ್ಯಕ್ಷೆಯಾಗಿ ನಿವೃತ್ತ ಶಿಕ್ಷಕಿ ವೇದಾವತಿ ರಾಜೇಶ್ ಬಂಗೇರ, ಪ್ರಧಾನ ಕಾರ್ಯದರ್ಶಿಯಾಗಿ ವಿದ್ಯಮಾತಾ ಅಕಾಡೆಮಿಯ ಅಧ್ಯಕ್ಷ ಭಾಗ್ಯೇಶ್ ರೈ, ಕೋಶಾಧಿಕಾರಿಯಾಗಿ ವತ್ಸಲಾ ಪದ್ಮನಾಭ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಪ್ರಥಮ ಉಪಾಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿ, ಎರಡನನೇಯ ಉಪಾಧ್ಯಕ್ಷರಾಗಿ ಚಂದ್ರಶೇಖರ್ ಪಿ, ನಿಕಟಪೂರ್ವ ಅಧ್ಯಕ್ಷ ಮತ್ತು ಎಲ್ ಸಿಐಎಫ್ ಛೇರ್ಮನ್ ರವೀಂದ್ರ ಪೈ, ಸರ್ವಿಸ್ ಆಕ್ಟಿವಿಟೀಸ್ ಛೇರ್ಮನ್ ಸುಮಿತ್ರಾ, ಮೆಂಬರ್ ಶಿಪ್ ಛೇರ್ಮನ್ ಆಗಿ ಕೇಶವ ಪೂಜಾರಿ ಬೆದ್ರಾಳ, ಟೈಲ್ ಟ್ವಿಸ್ಟರ್ ಆಗಿ ಮೊಹಮ್ಮದ್ ಹನೀಫ್, ಲಯನ್ಸ್ ಟೇಮರ್ ಆಗಿ ರಂಜಿನಿ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

Read More