Author: admin
ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ) ಇದರ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ ಆಯ್ಕೆಯಾದರು. ಸೂರಜ್ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಅಸೋಸಿಯೇಶನ್ ನ ನಾಲ್ಕನೇ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ ವರದಿ ವಾಚಿಸಿದರು. ನರಸಿಂಹ ಸುವರ್ಣ ಲೆಕ್ಕಪತ್ರ ಮಂಡಿಸಿದರು. ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಕೈಗೊಂಡ ಕೆಲಸ ಕಾರ್ಯಗಳ ವಿವರವನ್ನು ಸಭೆಯ ಮುಂದಿಟ್ಟರು. ಬಳಿಕ ನಡೆದ ಪದಾಧಿಕಾರಿಗಳ ಆಯ್ಕೆಯಲ್ಲಿ ರಮೇಶ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಮುಂದಿನ ಎರಡು ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿಯಾಗಿ ನರಸಿಂಹ ಸುವರ್ಣ, ಜತೆ ಕಾರ್ಯದರ್ಶಿಯಾಗಿ ಲಕ್ಷ್ಮೀ ಚಂದ್ರಶೇಖರ್ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು ಅವರನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾಗಿ ಸತ್ಯಜಿತ್ ಸುರತ್ಕಲ್, ಬಾಳ…
ಮೀರಾರೋಡ್ ಪೂನಮ್ ಸಾಗರ್, ಆಶೀರ್ವಾದ್ ಬಿಲ್ಡಿಂಗ್ ನಿವಾಸಿ ಕೊರಂಗ್ರಪಾಡಿ ದೊಡ್ಡಮನೆ ಕುಮಾರ್ ನಾರಾಯಣ ಶೆಟ್ಟಿ (78) ಯವರು ಜುಲೈ 15 ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಇಬ್ಬರು ಗಂಡು ಮಕ್ಕಳಾದ ಉದಯ ಹಾಗೂ ಉಲ್ಲಾಸ್ ಮತ್ತು ಮಗಳು ಕುತ್ಯಾರು ಅಂಜಾರು ಮನೆ ಉಷಾ ದಾಮೋದರ್ ಶೆಟ್ಟಿ ಹಾಗೂ ಬಂಟರ ಸಂಘ ಮುಂಬಯು ಇದರ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಅಮಿತಾ ಕಿಶೋರ್ ಶೆಟ್ಟಿ (ಸೋದರ ಮಾವ) ಸೇರಿದಂತೆ ಪರಿಸರದ ಅಪಾರ ವರ್ಗದ ಬಂಧು- ಬಳಗದವರನ್ನು ಅಗಲಿದ್ದಾರೆ. ಕುಮಾರ್ ಶೆಟ್ಟಿಯವರ ನಿಧನಕ್ಕೆ ಕರ್ನಾಟಕ ಸಂಘ, ಬಂಟರ ಸಂಘ ಮುಂಬಯಿ ಇದರ ಮೀರಾ ಭಯಂದರ್ ಪ್ರಾದೇಶಿಕ ಸಮಿತಿ, ಮೀರಾ ಭಯಂದರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಮೋದ್ ಸಾಮಂತ್ ಶೋಕವನ್ನು ವ್ಯಕ್ತಪಡಿಸಿದ್ದಾರೆ. ಮೃತರ ಅಂತಿಮ ಯಾತ್ರೆಯು ಅವರ ನಿವಾಸದಿಂದ ಜುಲೈ 16 ರ ಬುಧವಾರ ಬೆಳಿಗ್ಗೆ 8.30ಕ್ಕೆ ಹೊರಡಲಿದೆ.
ಪುಣೆಯ ಖ್ಯಾತ ಮಕ್ಕಳ ತಜ್ಞ, ಸಮಾಜರತ್ನ ಡಾ. ಸುಧಾಕರ್ ಶೆಟ್ಟಿಯವರು ಮೂಡಬಿದಿರೆಯ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜ್ ನಲ್ಲಿ Approach to Pediatric pratice ವಿಷಯದ ಬಗ್ಗೆ ಅತಿಥಿ ಉಪನ್ಯಾಸಕರಾಗಿ ವಿಶೇಷ ಉಪನ್ಯಾಸ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕರ್ ಶೆಟ್ಟಿಯವರು ಸಮಾಜ ಸೇವಕರಾಗಿ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ, ಕೆಲಸ ಕಾರ್ಯಗಳು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಜನ ಮನ್ನಣೆ ಗಳಿಸಿದೆ. ಇವರು ನಟಿಸಿದ ‘ಹೇ ಪ್ರಭು’ ಚಲನಚಿತ್ರ ಸದ್ಯದಲ್ಲೇ ಬಿಡುಗಡೆಗೊಳ್ಳಲಿದೆ.
ಶಿಕ್ಷಣವು ಅತ್ಯುತ್ತಮ ಬಂಡವಾಳ. ಕೇವಲ ಉದ್ಯೋಗ ಪಡೆಯಲು ಮಾತ್ರ ಶಕ್ತಿ ಎಂಬ ನಂಬಿಕೆ ಹಿಂದೆ ಇತ್ತು. ಆದರೆ ಈಗ ಜ್ಞಾನ ಮತ್ತು ಕೌಶಲಕ್ಕಾಗಿ ಓದು ಎಂಬ ಗ್ರಹಿಕೆ ಆರಂಭವಾಗಿದೆ. ವಿದ್ಯಾರ್ಥಿಗಳು ಕೇವಲ ಮಾರ್ಕ್ ಹಿಂದೆ ಹೋಗದೆ ಜ್ಞಾನ ಮತ್ತು ಕೌಶಲಗಳನ್ನು ಪಡೆಯಬೇಕು. ಸಂಸ್ಕೃತಿ ಮರೆತರೆ ಒಂದು ಜನಾಂಗವೇ ಅವನತಿ ಹೊಂದುತ್ತದೆ ಎಂದು ಕೇಮಾರು ಸಾಧನಾಶ್ರಮದ ಈಶ ವಿಠಲದಾಸ ಸ್ವಾಮೀಜಿ ಅವರು ಹೇಳಿದರು. ಅವರು ಬಜಗೂಳಿ ಜ್ಯೂನಿಯರ್ ಕಾಲೇಜಿನಲ್ಲಿ ಅಮ್ಮನ ನೆರವು ಫೌಂಡೇಶನ್ ಮೂಲಕ ಕೊಡ ಮಾಡಿದ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಆಶೀರ್ವಚನ ನೀಡುತ್ತಿದ್ದರು. ದಿವಂಗತ ಶಿವಣ್ಣ ಶೆಟ್ಟಿ ದೇಜುಬೆಟ್ಟು ರೆಂಜಾಳ ಅವರ ಹೆಸರಿನಲ್ಲಿ ಅವರ ಮಕ್ಕಳು ಮತ್ತು ಕುಟುಂಬದವರು ಈ ವಿದ್ಯಾರ್ಥಿವೇತನಗಳ ಪ್ರಾಯೋಜಕರಾಗಿದ್ದರು. ಕಾರ್ಕಳ ತಾಲೂಕಿನ ವಿವಿಧ ಸರಕಾರಿ ಪ್ರೌಢಶಾಲೆಗಳ ಎಸ್.ಎಸ್.ಎಲ್.ಸಿ ಮತ್ತು ಪದವಿಪೂರ್ವ ತರಗತಿಯಲ್ಲಿ 90% ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಗಳನ್ನು ಈ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಯಿತು. ಬಜಗೊಳಿಯ ಅಹಿಂಸಾ ಎನಿಮಲ್ ಕೇರ್ ಟ್ರಸ್ಟಿಗೆ ಅಮ್ಮನ ನೆರವು ಫೌಂಡೇಶನ್…
ಜುಲೈ 12 ರಂದು ಸಾಗರ ಬಂಟರ ಸಂಘದ ಕಟ್ಟಡಕ್ಕೆ ಹಲವಾರು ಸಂಘ ಸಂಸ್ಥೆಗಳಲ್ಲಿ ಪ್ರಸಿದ್ದರಾಗಿರುವ ವಾಗ್ಮಿ, ಅತ್ಯುತ್ತಮ ಸಂಘಟಕ, ಪ್ರೊಫೆಸರ್ ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ನೇತೃತ್ವದ ನಿಯೋಗ ಭೇಟಿ ನೀಡಿತು. ಜೊತೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಮುಖ ಹಾಗೂ ಪ್ರಭಾವಿ ಬಂಟ ರಾಜಕೀಯ ನಾಯಕ ಸಂಘಟಕ ದಿವಾಕರ್ ಶೆಟ್ಟಿ, ಹಲವಾರು ಸಂಘ ಸಂಸ್ಥೆಯ ಅನುಭವಿ ಪ್ರಖ್ಯಾತ ಉದ್ಯಮಿ, ದಾನಿ ಪಿಂಗಾರ ರಾಜಮೋಹನ್ ಹೆಗ್ಡೆ, ಸಂಘಟಕ ಅಪರೂಪದ ವ್ಯಕ್ತಿತ್ವ ಹೊಂದಿರುವ ದಾನಿ ಶೆಟ್ಟಿ ಮೆಡಿಕಲ್ ಅರುಣ್ ಶೆಟ್ಟಿ, ಯುವನಾಯಕ ಸಂಘಟಕ ರಾಘವೇಂದ್ರ ಶೆಟ್ಟಿ, ಪ್ರಜಾಶಕ್ತಿ ಪತ್ರಿಕೆಯ ಯುವಶಕ್ತಿ ಮಂಜುನಾಥ್ ಶೆಟ್ಟಿ ಆಗಮಿಸಿದ್ದರು. ಇವರೆಲ್ಲರನ್ನು ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಹಕ್ಲಾಡಿ ಹಾಗೂ ತಾಲ್ಲೂಕಿನ ಬಂಟ ಮುಖಂಡರು ಆತ್ಮೀಯವಾಗಿ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ಅವರು, ಬಂಟ ಸಮುದಾಯದ ಏಳಿಗೆಗಾಗಿ ಶಿವಮೊಗ್ಗ…
ಸಾಮಾನ್ಯವಾಗಿ ಪದವಿಪೂರ್ವ ಶಿಕ್ಷಣ (PUC) ಪದವಿ ಮುಗಿಸಿದ ವಿದ್ಯಾರ್ಥಿಗಳು ಮುಂದೇನು ಎಂಬ ಯೋಚನೆಯಲ್ಲಿದ್ದರೆ ಪುತ್ತೂರು ಮತ್ತು ಸುಳ್ಯದಲ್ಲಿ ನಡೆಯಲಿದೆ ಸಂಪೂರ್ಣ ಮಾಹಿತಿ ಕಾರ್ಯಗಾರ. ಪ್ರತಿಷ್ಠಿತ ಸರಕಾರಿ ನೇಮಕಾತಿಗಳು ಮತ್ತು ಖಾಸಗಿ ಉದ್ಯೋಗಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಜುಲೈ 20 ರಂದು ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಾಗೂ ಜುಲೈ 27 ರಂದು ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯಾಮಾತಾ ಅಕಾಡೆಮಿ ಸುಳ್ಯದಲ್ಲಿ ಉಚಿತ ತರಬೇತಿಯು ನಡೆಯಲಿರುವುದು. ತರಬೇತಿ ಕಾರ್ಯಗಾರದಲ್ಲಿ ಸರಕಾರಿ ಉದ್ಯೋಗಗಳು ಮತ್ತು ಖಾಸಗಿ ಕ್ಷೇತ್ರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ಆಸಕ್ತರು ತಕ್ಷಣ ಹೆಸರು ನೋಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ. ವಿಳಾಸ : ವಿದ್ಯಾಮಾತಾ ಅಕಾಡೆಮಿ, ಹಿಂದುಸ್ತಾನ್ ಕಾಂಪ್ಲೆಕ್ಸ್, ಎಪಿಎಂಸಿ ರೋಡ್ ಪುತ್ತೂರು 9620468869, 9148935808 ವಿದ್ಯಾಮಾತಾ ಅಕಾಡೆಮಿ ಟಿ.ಎ.ಪಿ.ಸಿ.ಎಂ.ಸಿ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ 9448527606
ಮೂಡುಬಿದಿರೆ: ಆರೋಗ್ಯ ಕ್ಷೇತ್ರದಲ್ಲಿ ಮಾನಸಿಕ ರೋಗಗಳ ಚಿಕಿತ್ಸೆಯ ವೈದ್ಯರು ಹಾಗೂ ವ್ಯಸನಮುಕ್ತ ಕೇಂದ್ರಗಳ ಅಗತ್ಯ ಬಹಳಷ್ಟಿದೆ. ನಮ್ಮ ದೇಶದಲ್ಲಿನ ಪ್ರತೀ ಜಿಲ್ಲೆಯಲ್ಲಿ 2 ಲಕ್ಷ ಜನ ಮದ್ಯವ್ಯಸನದ ಸಮಸ್ಯೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಬಳಲುತ್ತಿದ್ದಾರೆ. ಆದರೆ ಈ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ವ್ಯವಸ್ಥೆ ನಮ್ಮಲ್ಲಿಲ್ಲ ಎಂದು ಉಡುಪಿಯ ಡಾ ಎವಿ ಬಾಳಿಗಾ ಆಸ್ಪತ್ರೆಯ ನಿರ್ದೇಶಕ ಡಾ ಪಿವಿ ಭಂಡಾರಿ ನುಡಿದರು. ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಮಿಜಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಬಹುಶಿಸ್ತೀಯ ಸಮಗ್ರ ಚಿಕಿತ್ಸೆಗಳನ್ನು ನೀಡುವ ‘ಆಳ್ವಾಸ್ ಪುನರ್ಜನ್ಮ’ ಮಾನಸಿಕ ಆರೋಗ್ಯ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ನಂತರದ ದಿನಗಳಲ್ಲಿ ಜನರು ಹೃದಯ ಸಮಸ್ಯೆಗೆ ಹೆಚ್ಚಿನ ಗಮನಕೊಡುತ್ತಿದ್ದು, ವಾಸ್ತವದಲ್ಲಿ ಮಾನಸಿಕ ರೋಗದಿಂದ ಬಳಲುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಈ ಸಮಸ್ಯೆ ಮಕ್ಕಳಿಂದ ಹಿಡಿದು ವೃದ್ಧಾಪ್ಯದವರನ್ನು ಕಾಡುತ್ತಿದೆ. ಮಾನಸಿಕ ರೋಗಗಳಿಗೆ ಚಿಕಿತ್ಸೆಯು ಎಲ್ಲರಿಗೂ ಸುಲಭವಾಗಿ ಕೈಗೆಟುಕುವ ದರದಲ್ಲಿ, ಹತ್ತಿರದಲ್ಲಿ ಲಭ್ಯವಿರಬೇಕು. ಈ ಕ್ಷೇತ್ರದಲ್ಲಿನ ವೃತ್ತಿಪರತೆ ಮಾತ್ರ ಚಿಕಿತ್ಸೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಬಲ್ಲದು. ಆಳ್ವಾಸ್…
ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 11 ಜುಲೈ 2025 ರಂದು 6/8 ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು. ಉದ್ಘಾಟಕರಾಗಿ ಆಗಮಿಸಿದ 6 ಕರ್ನಾಟಕ ಎನ್.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ರವರು ಮಾತನಾಡಿ ಎನ್.ಸಿ.ಸಿ ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ಎನ್.ಸಿ.ಸಿ ಯ ಶಿಸ್ತು, ಸಮಯ ಪಾಲನೆ, ನಾಯಕತ್ವ ಹಾಗೂ ದೇಶಪ್ರೇಮದ ಕುರಿತು ಉಲ್ಲೇಖಿಸಿ, ಯುವಜನತೆ ರಾಷ್ಟ್ರದ ಭವಿಷ್ಯ, ಅವರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗುತ್ತದೆ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಎಂ.ಎ ಮುಲ್ತಾನಿ, ಪಿ.ಐ ಸ್ಟಾಫ್ ವರ್ಗದವರು, ಕಾಲೇಜು ಎನ್.ಸಿ.ಸಿ ನೌಕಾ ಘಟಕದ ಸಿ.ಟಿ.ಒ ಆಗಿರುವ ಆಂಗ್ಲ…
ಅಕ್ಷರ ಅಭ್ಯಾಸವ ಕಲಿಸಿ ಶಿಸ್ತು ಸ್ನೇಹವ ಬೆಳೆಸಿ ಜ್ಞಾನ ಸುಧೆಯ ನಮಗೆಲ್ಲಾ ಹರಸಿದವರೇ ಗುರುವರ್ಯರು : ಅಡ್ವೋಕೇಟ್ ಡಿ.ಕೆ ಶೆಟ್ಟಿ
ಜುಲೈ 10 ರಂದು ಗುರುವಾರ ಗುರುಪೂರ್ಣಿಮೆಯ ನಿಮಿತ್ತ ಜುಹೀ ನಗರದ ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಬಂಟ್ಸ್ ಸೆಂಟರ್ ನಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಶಾಂತಾ ಎನ್ ಶೆಟ್ಟಿಯವರ ಮುಂದಾಳತ್ವದಲ್ಲಿ ನಡೆದ ಗುರು ವಂದನಾ ಕಾರ್ಯಕ್ರಮದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸದಸ್ಯರು ಭಾಗವಹಿಸಿ ಶ್ರೀ ಗುರು ನಿತ್ಯಾನಂದ ಸ್ವಾಮೀಜಿಯವರ ಭಾವಚಿತ್ರಕ್ಕೆ ಫಲ ಪುಷ್ಪಾದಿಗಳನ್ನು ಅರ್ಪಿಸಿ, ಭಜನೆ ಹಾಗೂ ಕುಣಿತ ಭಜನೆಯೊಂದಿಗೆ ಬಹು ವಿಜೃಂಭಣೆಯಿಂದ ಗುರುಪೂರ್ಣಿಮೆಯನ್ನು ನೆರವೇರಿಸಿದರು. ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರು ಗುರು ವಂದನೆಯನ್ನು ಸಮರ್ಪಿಸಿ ಹಿತ ನುಡಿಯನ್ನಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಐಕಳ ಕಿಶೋರ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಅಡ್ವೋಕೇಟ್ ಶೇಖರ ಶೆಟ್ಟಿ, ಖಜಾಂಚಿ ಸಿ.ಎ ವಿಶ್ವನಾಥ ಶೆಟ್ಟಿ, ಮಾಜಿ ಅಧ್ಯಕ್ಷರಾದ ಶ್ಯಾಮ ಎನ್ ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆಯರಾದ ಶ್ರೀಮತಿ ಶಾರದಾ ಶೆಟ್ಟಿ, ಲತಾ ಜಿ ಶೆಟ್ಟಿ, ಮೊದಲಾದ ಗಣ್ಯರು ಉಪಸ್ಥಿತರಿದ್ದರಲ್ಲದೆ ಮಹಿಳಾ ವಿಭಾಗದ ಸಮಿತಿ ಸದಸ್ಯೆ ಗೀತಾ ಶೆಟ್ಟಿಯವರ ಪತಿ…
ಜುಲೈ 13ನೇ ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ಬೆಳ್ಮಣ್ ಸೂರಜ್ ಹಿಲ್ಸ್ ವನದುರ್ಗ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಇದರ ಉದ್ಘಾಟನಾ ಸಮಾರಂಭವು ಬೆಳ್ಮಣ್ ನ ಹೋಟೆಲ್ ಸೂರಜ್ ಇನ್ ಸಭಾಭವನದಲ್ಲಿ ನಡೆಯಲಿದ್ದು, ಬೆಳ್ಮಣ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ವಿಘ್ನೇಶ್ ಭಟ್ ಅವರು ಉದ್ಘಾಟಿಸಲಿದ್ದಾರೆ. ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲ ದಾಸ ಸ್ವಾಮೀಜಿಯವರು ಹಾಗೂ ಬೆಳ್ಮಣ್ ಚರ್ಚಿನ ಧರ್ಮ ಗುರುಗಳಾದ ರೇ ಫಾ. ಫೆಡರಿಕ್ ಮಸ್ಕರೇನಸ್ ಆಶೀರ್ವಚನ ನೀಡಲಿದ್ದು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಿ ಜಯಕರ ಶೆಟ್ಟಿ ಇಂದ್ರಾಳಿ ಅವರು ಭದ್ರತಾ ಕೊಠಡಿಯ ಉದ್ಘಾಟನೆ ಮಾಡಲಿದ್ದು, ಸುಹಾಸ್ ಹೆಗ್ಡೆ ನಂದಳಿಕೆ ಅವರು ಗಣಕಯಂತ್ರ ಉದ್ಘಾಟನೆ ಮಾಡಲಿದ್ದಾರೆ.