Author: admin
ಚೀನಾದಲ್ಲಿ ಒಬ್ಬ ತರುಣ ರಾಜನಾದ. ಅವನು ಆಡಳಿತಕ್ಕೆ ಬೇಕಾದ ಜ್ಞಾನವನ್ನು ಪಡೆಯುತ್ತಿದ್ದ. ಬೇಟೆಯಲ್ಲೂ ತಾನೂ ನಿಷ್ಣಾತನಾಗಬೇಕೆಂಬುದು ಅವನ ಆಸೆ. ಅದಕ್ಕೆಂದೇ ಪರಿಣತನಾದ ಬೇಟೆಗಾರನಿಂದ ತರಬೇತಿ ಪಡೆದ. ತಿಂಗಳುಗಳ ತರಬೇತಿಯ ನಂತರ ಬೇಟೆಗೆಂದು ಪರಿವಾರದೊಡನೆ ಕಾಡಿಗೆ ನಡೆದ. ಅವನಿಗೋಸ್ಕರ ಒಂದು ಪುಟ್ಟ ಬಯಲಿನಲ್ಲಿ ಮರದ ಅಟ್ಟಣಿಗೆ ಕಟ್ಟಿದ್ದರು. ಆತ ಅದರ ಮೇಲೆ ತನ್ನ ಬಿಲ್ಲು ಬಾಣಗಳೊಂದಿಗೆ ಸಜ್ಜಾಗಿ ನಿಂತ. ಇವನ ಪರಿವಾರದವರು ಸುತ್ತಲಿನ ಕಾಡಿನಲ್ಲಿ ಹರಡಿ ಗದ್ದಲವನ್ನೆಬ್ಬಿಸಿದರು. ಆಗ ಗಾಬರಿಯಾಗಿ ಬಯಲಿಗೆ ನುಗ್ಗಿದ ಪ್ರಾಣಿಗಳನ್ನು ರಾಜ ಹೊಡೆಯಲಿ ಎಂಬುದು ಯೋಜನೆ. ಇದರಂತೆ ಕೆಲವು ಕ್ಷಣಗಳ ನಂತರ ತಮಟೆ, ಕಹಳೆಗಳ ಶಬ್ದ ಮತ್ತು ಜನರ ಕೂಗುವಿಕೆ ಕೇಳಿಸಿತು. ಮರುಕ್ಷಣವೇ ಒಂದು ಪುಟ್ಟ ಮೊಲ ಕುಪ್ಪಳಿಸುತ್ತ ಈತನ ಮುಂದೆಯೇ ನಿಂತಿತು. ಈತನನ್ನು ಕಂಡು ಗಾಬರಿಯಾದ ಮೊಲ ಮರಗಟ್ಟಿ ನಿಂತೇ ಬಿಟ್ಟಿತು. ರಾಜ ಬಿಲ್ಲಿಗೆ ಬಾಣ ಹೂಡಿದ. ಹೀಗೆ ಎದುರಿಗೇ ನಿಂತ ಮೊಲವನ್ನು ಹೊಡೆಯುವುದು ಯಾರಿಗಾದರೂ ಸುಲಭ. ಇನ್ನೇನು ಬಾಣ ಬಿಡಬೇಕೆನ್ನುವಷ್ಟರಲ್ಲಿ ಒಂದು ತೋಳ ಅಲ್ಲಿಗೆ ಓಡಿ…
ಕೊಡಗಿನ ಚಿತ್ರಶಿಲ್ಪ ಕಲಾವಿದ ಶ್ರೀ ಬಿ. ಕೆ. ಗಣೇಶ್ ರೈಯವರ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಮಂಗಳೂರಿನಲ್ಲಿ ಬಿಡುಗಡೆ
ಮಂಗಳೂರು ಡಾ. ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ 42ನೇ ಯ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಮತ್ತು ಲೇಖಕ ದುಬಾಯಿಯ ಬಗ್ಗೆ ಪ್ರಕಟಿತ ಲೇಖನಗಳ ಸಂಕಲನ “ಕಡಲಾಚೆಯ ರಮ್ಯ ನೋಟ ದುಬಾಯಿ” ಕೃತಿ ಮಂಗಳೂರು ಪತ್ರಿಕಾ ಭವನದಲ್ಲಿ 2025ನೇ ಮಾರ್ಚ್ 4ನೇ ತಾರೀಕು ಮಂಗಳವಾರ 11.00 ಗಂಟೆಗೆ ನಡೆದ ಬಿಡುಗಡೆ ಬಿಡುಗಡೆಯಾಯಿತು. ಪ್ರಾರಂಭದಲ್ಲಿ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸರ್ವರನ್ನು ಸ್ವಾಗತಿಸಿ, ಪ್ರಸ್ತಾವಿಕ ಭಾಷಣದಲ್ಲಿ ಕೃತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಯು.ಎ.ಇ. ಬಂಟ್ಸ್ ಅಧ್ಯಕ್ಷರಾದ ಶ್ರೀ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಲೋಕಾರ್ಪಣೆ ಮಾಡಿದರು. ದುಬಾಯಿಯಲ್ಲಿ ಕನ್ನಡ ಪುಸ್ತಕವನ್ನು ತನ್ನದೇ ಆದ ಶೈಲಿಯಲ್ಲಿ ರಚಿಸಿ ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಾಗೂ ಅತ್ಯಂತ ಸುಂದರವಾದ ವರ್ಣ ಚಿತ್ರದೊಂದಿಗೆ ಓದುಗರಿಗೆ ಮುಟ್ಟಿಸುವಲ್ಲಿ ಕೃತಿ ಯಶಸ್ವಿಯಾಗಿದೆ. ಎಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಚಿತ್ರ ಶಿಲ್ಪ…
ಬಲ್ಲಂಗುಡೆಲು ಶ್ರೀ ಪಾಡಂಗರೇ ಭಗವತೀ ಕ್ಷೇತ್ರದ ವಾರ್ಷಿಕ ಕಳಿಯಾಟ ಮಹೋತ್ಸವ ಸಂದರ್ಭದಲ್ಲಿ ಸತತ ಕಳೆದ ಐವತ್ತು ವರ್ಷಗಳಿಂದ ಯಕ್ಷಗಾನ ಸೇವೆಯನ್ನು ಮಾಡುತ್ತಿರುವ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯರಾದ ನ್ಯಾ.ಎಂ ದಾಮೋದರ ಶೆಟ್ಟಿ ಮಜಿಬೈಲ್ ರವರಿಗೆ ಗೆಳೆಯರ ಬಳಗ (ರಿ) ಬಲ್ಲಂಗುಡೆಲು ವತಿಯಿಂದ ಸನ್ಮಾನಿಸಲಾಯಿತು. ಗೆಳೆಯರ ಬಳಗ (ರಿ) ಬಲ್ಲಂಗುಡೆಲು ಇವರ 33 ನೇ ವರ್ಷದ ವಾರ್ಷಿಕೋತ್ಸವದ ಸಭಾ ವೇದಿಕೆಯಲ್ಲಿ ನ್ಯಾಯವಾದಿ ಎಂ.ದಾಮೋದರ ಶೆಟ್ಟಿಯವರ ಸೇವೆಯನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲಾಯಿತು. ಸಭಾ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಪ್ರಸಂಗಕರ್ತರಾದ ಯೋಗಿಶ್ ರಾವ್ ಚಿಗುರುಪಾದೆ, ಕ್ಷೇತ್ರದ ಪ್ರದಾನ ಮನೆತನದವರಾದ ರಾಮ್ ಪ್ರಕಾಶ್ ಆಳ್ವ ಪಟ್ಟತ್ತಮೊಗರು, ಕ್ಷೇತ್ರದ ಸೇವಾ ಸಮಿತಿಯ ಮಾಜಿ ಅಧ್ಯಕ್ಷರಾದ ಶೇಖರ ಎಂ ಸೊಯಿಪಕಲ್ಲು, ಕ್ಷೇತ್ರದ ಸೇವಾ ಸಮಿತಿಯ ಅಧ್ಯಕ್ಷರಾದ ಜಯರಾಮ ಬಲ್ಲಂಗುಡೆಲು, ಗೆಳೆಯರ ಬಳಗದ ಅಧ್ಯಕ್ಷರಾದ ಮಾದವ ಉಳಿಯ, ರಮೇಶ್ ಸುವರ್ಣ, ಗೆಳೆಯರ ಬಳಗದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಅರವೀಂದಾಕ್ಷ ಭಂಡಾರಿ…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ‘ವಿಕಸಿತ ಭಾರತದ ನಿರ್ಮಾಣಕ್ಕಾಗಿ ಭಾರತೀಯ ಯುವ ಜನತೆಯನ್ನು ವಿಜ್ಞಾನ ಹಾಗೂ ನಾವೀನ್ಯತೆಯ ಕ್ಷೇತ್ರದಲ್ಲಿ ಜಾಗತಿಕ ನಾಯಕತ್ವ ನಿರ್ಮಾಣ’ ಎಂಬ ಘೋಷ ವಾಕ್ಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉಜಿರೆಯ ಎಸ್ ಡಿಎಂ ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ದಿನೇಶ್ ಚೌಟ, ಯುವಜನರು ವಿಮರ್ಶಾತ್ಮಕ, ಸೃಜನಶೀಲ ಚಿಂತನೆ, ಸಂವಹನ, ಸಹಯೋಗ ಮತ್ತು ಸಮಯ ನಿರ್ವಹಣೆಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ವಿಜ್ಞಾನ ವಿಷಯದಲ್ಲಿ ಶೈಕ್ಷಣಿಕ ಬೆಳವಣಿಗೆ ಸಾಧ್ಯ. ವಿಜ್ಞಾನದಲ್ಲಿ ನಾವೀನ್ಯತೆ ಕಂಡುಕೊಂಡು ಜಾಗತಿಕ ಬೆಳವಣಿಗೆಯಾಗಬೇಕಾದರೆ ಪರಿಣಾಮಕಾರಿ ಆಲಿಸುವಿಕೆ ಹಾಗೂ ನಿರಂತರ ಕಲಿಯುವಿಕೆ ಅಗತ್ಯ ಎಂದರು. ಭಾರತವು ಸೇರಿದಂತೆ ಜಗತ್ತಿನಾದ್ಯಂತ ವಿಜ್ಞಾನ ವಿಷಯದಲ್ಲಿ ನೊಬೆಲ್ ಪ್ರಶಸ್ತಿ ವಿಜೇತರ ಕೊಡುಗೆಯನ್ನು ವಿವರಿಸಿದರು. ಬದುಕಿನಲ್ಲಿ ಯಶಸ್ವಿಯಾಗಲು ಮೂರು ‘ಎಲ್’ ಗಳಾದ ಲುಕಿಂಗ್, ಲರ್ನಿಂಗ್ ಹಾಗೂ ಲಿಸ್ನಿಂಗ್ನ ಅಗತ್ಯತೆಯನ್ನು ವಿವರಿಸಿದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಿವಿರಾಮನ್ ತಂಡ…
ಮೂಡುಬಿದಿರೆ: ಡಿಸೆಂಬರ್ 2024ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಅಮನ್ರಾಜ್ (414), ಕಾರ್ತಿಕ್ ಇಂದ್ರ (412), ಸೌಖ್ಯ (389), ಆಕಾಶ್ ಎ ಕಾಮತ್ (385), ವೈಷ್ಣವಿ ಬಿ.ವಿ. (384), ಕೆ ದಿಶಾ ರಾವ್ (382), ರಾನ್ಸನ್ ಫೆರ್ನಾಂಡಿಸ್ (379), ರಾಮ್ನಾಥ್ ಎಸ್ ಪ್ರಭು (372), ರ್ಯ ಎಂ (370), ಸುಮಂತ್ ದೇಸಾಯಿ (360), ಸುಶಾಂತ್ ಎಸ್ (354), ಕೃತಿಕಾ (354), ಖುಷಿ ಯು ಸಾಲಿಯಾನ್ (352), ಮೆಲನಿ (339), ಶಿವಾನಿ (335), ಸ್ಫೂರ್ತಿ (333), ಖುಷಿ ಹರೀಶ್ (331), ಭಾವನಾ (330), ಹರೀಶ್ (328), ಕೃತಿ (325), ಶ್ರೇಯಾ ಪೂಜಾರಿ (325), ಚಿನ್ಮಯ್ (315), ಶಿವಾನಿ ಕೋಟ್ಯಾನ್ (311), ಆಯುಷ್ ಎ ಕಾಮತ್ (307), ಪ್ರಕೃತಿ (307), ಕೌಶಲ್ (301), ಕವನ (300) ಹಾಗೂ ಐಶ್ವರ್ಯ (300) ಇವರು ಗ್ರೂಪ್ -01 ಮತ್ತು ಗ್ರೂಪ್ -02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ…
ಮೂಲ್ಕಿ ಬಂಟರ ಸಂಘದ ನವೀಕರಣಗೊಳ್ಳಲಿರುವ ನೂತನ ಭೋಜನ ಶಾಲೆಗೆ ಭಾನುವಾರ ಬೆಳಿಗ್ಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ದೆಪ್ಪುಣಿ ಗುತ್ತು ಗುತ್ತಿನಾರ್ ಸುಧಾಕರ ಶೆಟ್ಟಿ ಪ್ರಾರ್ಥನೆ ಸಲ್ಲಿಸಿದರು. ಕಾರ್ನಾಡು ಹರಿಹರ ದೇವಸ್ಥಾನದ ಆಡಳಿತ ಮೊಕ್ತೇಸರ ಎಮ್. ಎಚ್ ಅರವಿಂದ ಪೂಂಜ ನೂತನ ಭೋಜನ ಶಾಲೆಗೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಸಂಘದ ಗೌರವಾಧ್ಯಕ್ಷರುಗಳಾದ ಐಕಳ ಹರೀಶ್ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಉಪಾಧ್ಯಕ್ಷ ಜೀವನ್ ಶೆಟ್ಟಿ ಕಾರ್ನಾಡ್, ಕೋಶಾಧಿಕಾರಿ ಸ್ವರಾಜ್ ಶೆಟ್ಟಿ, ಜೊತೆ ಕೋಶಾಧಿಕಾರಿ ಶರತ್ ಶೆಟ್ಟಿ, ಮಹಿಳಾ ಅಧ್ಯಕ್ಷೆ ರೋಹಿಣಿ ಶೆಟ್ಟಿ, ಮಾಜಿ ಅಧ್ಯಕ್ಷೆ ಚಂದ್ರಕಲಾ ಶೆಟ್ಟಿ, ಹಿರಿಯರಾದ ಮುರಳಿಧರ ಭಂಡಾರಿ, ಸಂಘದ ಪದಾಧಿಕಾರಿಗಳಾದ ಗಂಗಾಧರ ಶೆಟ್ಟಿ ಬರ್ಕೆ ತೋಟ, ಮಹಿಮ್ ಹೆಗ್ಡೆ, ಕಿಶೋರ್ ಶೆಟ್ಟಿ ಬಪ್ಪನಾಡು, ರಾಜೇಶ್ ಶೆಟ್ಟಿ ಮಾನಂಪಾಡಿ, ಭಾನುಮತಿ ಶೆಟ್ಟಿ ಕಕ್ವಗುತ್ತು, ರಂಗನಾಥ ಶೆಟ್ಟಿ, ಶ್ರೀಶ ಐಕಳ, ದೇವಿ ಪ್ರಸಾದ್ ಶೆಟ್ಟಿ ಐಕಳ, ಸತೀಶ್ಚಂದ್ರ ಹೆಗ್ಡೆ, ಕೃಷ್ಣ…
ನಮ್ಮ ಮನಸ್ಸಿನಲ್ಲಿ ಕೆಟ್ಟ ವಿಚಾರಗಳು, ತಪ್ಪುಗಳು, ಅಪರಾಧಿ ಭಾವ ಬರುವುದು ತಪ್ಪಲ್ಲ. ಆದರೆ ಅದನ್ನು ಮನಸ್ಸಿನಲ್ಲಿಯೇ ಇಟ್ಟುಕೊಂಡು ಅದರ ಕುರಿತಾಗಿಯೇ ಯೋಚಿಸುತ್ತಿದ್ದರೆ, ಮನಸ್ಸು ದುರ್ಬಲಗೊಳ್ಳುತ್ತದೆ. ಸಮಸ್ಯೆಗಳ ಕುರಿತು ಹೆಚ್ಚಾಗಿ ಚಿಂತಿಸದೆ, ಮಲಗುವ ಮುನ್ನ ಎಲ್ಲಾ ಚಿಂತೆಗಳನ್ನು ಹೊರಹಾಕಿ ಮಲಗಿದರೆ, ಹೊಸ ದಿನವನ್ನು ಹೊಸದಾಗಿ ಆರಂಭಿಸಬಹುದು. ಆಗ ದೇಹ ಮನಸ್ಸು ಎರಡೂ ಸ್ವಸ್ಥವಾಗಿರುತ್ತದೆ. ಒಂದು ಊರಿನಲ್ಲಿ ಒಬ್ಬ ಯುವಕನಿದ್ದ. ಆತ ಸಣ್ಣ ಪುಟ್ಟ ವಿಷಯಗಳನ್ನು ಯೋಚಿಸುತ್ತಾ ಮತ್ತಷ್ಟು ಚಿಂತೆಗಳನ್ನು ತುಂಬಿಸಿಕೊಂಡು ಹೊರೆ ತಾಳಲಾರದೆ ದಿನವಿಡೀ ಒದ್ದಾಡುತ್ತಿದ್ದ. ಕೆಲವೊಮ್ಮೆ ತನ್ನನ್ನೇ ತಾನೇ ಬೈದುಕೊಳ್ಳುತ್ತಿದ್ದ. ಯಾಕೆ ಹುಟ್ಟಿಸಿದೆ ? ಯಾಕೆ ಇಂಥಹ ಕಷ್ಟ ಕೊಟ್ಟೆ ಎಂದು ದೇವರನ್ನು ಕೇಳುತ್ತಿದ್ದ. ತನ್ನ ಜಾತಕ, ರಾಶಿ, ನಕ್ಷತ್ರ, ಹುಟ್ಟಿದ ಘಳಿಗೆ, ಯಾವುದೂ ಸರಿ ಇಲ್ಲ. ಅದೃಷ್ಟವು ನನಗೆ ಸಮಯದಲ್ಲಿ ಕೈಕೊಡುತ್ತದೆ. ಹೀಗೆ ಹೇಳುತ್ತಲೇ ಮತ್ತೆ ಇದನ್ನೇ ಮನಸ್ಸಿನಲ್ಲಿ ಯೋಚಿಸುತ್ತಿದ್ದ. ಕೆಲವೊಮ್ಮೆ ಆಡಿದ ವ್ಯಂಗ್ಯ ಮಾತು, ಮಾಡಿದ ಅವಮಾನ ಇವುಗಳ ಸುತ್ತಲೇ ಯೋಚನೆಯನ್ನು ಹರಿಬಿಡುತ್ತಾ ಅತಿಯಾಗಿ ಅವರ ಮೇಲೆ ದ್ವೇಷ…
“ಸ್ವಾತಂತ್ರ್ಯ ಪೂರ್ವದಲ್ಲಿಯೇ ಬ್ರಿಟಿಷ್ ನಿವೃತ್ತ ಅಧಿಕಾರಿ ಪೋವೆಲ್ ರಿಂದ ಸ್ಥಾಪಿತವಾದ ಸ್ಕೌಟ್ಸ್ ಆಂಡ್ ಗೈಡ್ಸ್ ಆಂದೋಲನ ಇಂದು ಜಗತ್ತಿನಾದ್ಯಂತ ಪಸರಿಸಿ ಯುವ ಸಮುದಾಯವನ್ನು ಅದರಲ್ಲಿಯೂ ವಿಶೇಷವಾಗಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ದೈಹಿಕವಾಗಿ ಬೌದ್ಧಿಕವಾಗಿ ಸದೃಢವಾಗಿಸಿ ಉತ್ತಮ ಪ್ರಜೆಗಳಾಗಿ ರೂಪಿಸಲು ಸಹಕಾರಿಯಾಗಿದೆ. ಇಂದು ಭಾರತದ ಬಹುಪಾಲು ರಾಜ್ಯಗಳಲ್ಲಿ ತರಬೇತಿ ನಡೆಯುತ್ತಿದ್ದು ಬಹುಪಾಲು ಶಾಲೆಗಳಲ್ಲಿ ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಪಾಲ್ಗೊಂಡು ಉತ್ತಮ ಶಿಸ್ತು ನಡತೆಗಳನ್ನು ಕಲಿತು ಪಠ್ಯ ಮತ್ತು ಪಠ್ಯೇತರ ವಿಭಾಗದಲ್ಲೂ ಉತ್ತಮ ಸಾಧನೆ ತೋರಿಸುತ್ತಿದ್ದಾರೆ. ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಲ್ಲಿಯೇ ಸ್ಕೌಟ್ಸ್ ಆಂಡ್ ಗೈಡ್ಸ್ ಪರಿಚಯ ಮಾಡುವುದರಿಂದ ಉತ್ತಮ ಶಿಸ್ತು, ಗುಣ ನಡತೆಗಳನ್ನು ಜೀವನದುದ್ದಕ್ಕೂ ರೂಡಿಸಿಕೊಳ್ಳಲು ಸಹಕಾರಿಯಾಗುತ್ತದೆ” ಎಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಡಳಿತ ಮಂಡಳಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಸ್ಕೌಟ್ಸ್ ಆಂಡ್ ಗೈಡ್ಸ್ ಸಂಸ್ಥಾಪಕರ ದಿನಾಚರಣೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮತ್ತು ಸರ್ವಧರ್ಮ…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2025-26ನೇ ಸಾಲಿನ, 6 ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆ ವಿದ್ಯಾಗಿರಿ ಹಾಗೂ ಪುತ್ತಿಗೆ ಆವರಣದಲ್ಲಿ ಭಾನುವಾರ ನಡೆಯಿತು. ರಾಜ್ಯಾದ್ಯಾಂತ 32 ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಗಡಿಭಾಗದ ಜಿಲ್ಲೆಯಾದ ಕಾಸರಗೋಡು ಹಾಗೂ ಮಹಾರಾಷ್ಟ್ರದ ಗಡಿಜಿಲ್ಲೆಗಳಿಂದ 20134 ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ 18634 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಂತರ ಮಾತನಾಡಿದ ಅವರು ಈ ಕನ್ನಡನಾಡಿನಲ್ಲಿ ಜನ್ಮತಾಳಿ, ಬದುಕನ್ನ ನಡೆಸಿ, ಸಂಪಾದನೆಯನ್ನು ಗಳಿಸಿದ ನಮಗೆ ಈ ಕನ್ನಡ ನಾಡಿನ ಋಣ ಎಷ್ಟಿದೆ ಎಂಬುದನ್ನು ನಾವೆಲ್ಲ ಅರಿಯಬೇಕಿದೆ. ನಮ್ಮೆಲ್ಲರ ಕನ್ನಡದ ಬಗೆಗಿನ ಪ್ರೀತಿ ವೇದಿಕೆಯಲ್ಲಿ ಭಾಷಣ ಮಾಡಲು ಮಾತ್ರ ಸೀಮಿತವಾಗಿದೆ.ರಾಜಕಾರಣಿಗಳು ಅಥವಾ ಕನ್ನಡದ ಸಂಘ ಸಂಸ್ಥೆಗಳು ಕನ್ನಡಕ್ಕೆ ಕಿಂಚಿತ್ತು ಸಮಸ್ಯೆಯಾದರೂ ಗಂಭೀರವಾಗಿ…
ಬಂಟ್ಸ್ ಬಹ್ರೈನ್ ಸಂಘಟನೆಯ ನೂತನ ಅಧ್ಯಕ್ಷರಾಗಿ ಡಾ. ಮಿಥುನ್ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸದಸ್ಯರ ವಾರ್ಷಿಕ ಸಭೆಯಲ್ಲಿ ಡಾ. ಭಂಡಾರಿ ಅವರು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಅವರೊಂದಿಗೆ ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರೋಹನ್ ಶೆಟ್ಟಿ, ಸಹ ಕಾರ್ಯದರ್ಶಿಯಾಗಿ ಸುಕೇಶ್ ಶೆಟ್ಟಿ, ಖಜಾಂಚಿಯಾಗಿ ಪ್ರಶಾಂತ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ನಿತಿನ್ ಶೆಟ್ಟಿ, ಸಹಾಯಕ ಕ್ರೀಡಾ ಕಾರ್ಯದರ್ಶಿಯಾಗಿ ಗಣೇಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಯಕ್ಷಿತ್ ಶೆಟ್ಟಿ, ಸಹಾಯಕ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಧನಂಜಯ್ ರೈ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ದೀಪ ರವೀಂದ್ರ ಶೆಟ್ಟಿ, ನೂತನ ಆಡಲಿತ ಮಂಡಳಿಯಲ್ಲಿ ಸೇವೆ ಸಲ್ಲಿಸಲಿದ್ದಾರೆ. ನೂತನ ಆಡಳಿತ ಮಂಡಳಿಯು ಸತ್ಯನಾರಾಯಣ ಪೂಜೆಯೊಂದಿಗೆ ಕಾರ್ಯಾರಂಭ ಮಾಡಲಿದೆ.