Author: admin
ಮೀರಾ ದಹಾಣೂ ಬಂಟ್ಸ್ ವತಿಯಿಂದ ಪ್ರತೀ ವರ್ಷ ನಡೆಯುವ ಕ್ರೀಡಾಕೂಟದ ಮೊದಲ ಹಂತದಲ್ಲಿ ಫುಟ್ಬಾಲ್ ಪಂದ್ಯಾಟವು ಇದೇ ಬರುವ ಫೆಬ್ರವರಿ 4 ರ ರವಿವಾರದಂದು ಬೊಯಿಸರ್ ಪೂರ್ವದ ‘ಬೊಯಿಸರ್ ಸ್ಕೋರ್ ಸ್ಪೋರ್ಟ್ಸ್ ಮಾನ್’ನಲ್ಲಿ ಜರಗಲಿದೆ. ಅಂದು ನಡೆಯಲಿರುವ ಪುಟ್ಬಾಲ್ ಪಂದ್ಯಾಟದಲ್ಲಿ ಮೀರಾರೋಡ್ ನಿಂದ ದಹಾಣೂ ತನಕದ ವಲಯದ ಎಲ್ಲಾ ಬಂಟ ಕ್ರೀಡಾಪಟುಗಳ ತಂಡಗಳು ಭಾಗವಹಿಸಲಿದ್ದು, ಪಂದ್ಯಾಟವು ಮಧ್ಯಾಹ್ನ 2 ಗಂಟೆಯಿಂದ ಆರಂಭಗೊಳ್ಳಲಿದೆ. ಎರಡನೇ ಹಂತದಲ್ಲಿ ಹಲವಾರು ಕ್ರೀಡೆಗಳು ಫೆಬ್ರವರಿ 10 ರಂದು ವಿರಾರ್ ನ ಹಳೇ ವಿವಾ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ ಗಂಟೆ 7 ರಿಂದ ಆರಂಭಗೊಳ್ಳಲಿದೆ. ಮಹಾರಾಷ್ಟ್ರದ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ನಡೆಯಲಿರುವ ಈ ಪಂದ್ಯಾಟಕ್ಕೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಪಂದ್ಯಾಟವನ್ನು ಯಶಸ್ವಿಗೊಳಿಸುವಲ್ಲಿ ಭಾಗಿಯಾಗಬೇಕೆಂದು ಸಂಸ್ಥೆಯ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿಕೊಂಡಿದ್ದಾರೆ.
ವಿದ್ಯಾಗಿರಿ (ಮೂಡುಬಿದಿರೆ): ‘ಕಾಲೇಜುಗಳ ಹೊರ ನೋಟವನ್ನು ಹೋಲಿಕೆ ಮಾಡುವ ಬದಲು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಗಮನಿಸಿ. ಆ ಫಲಿತಾಂಶದ ಹಿಂದಿನ ಪರಿಶ್ರಮವನ್ನು ಹೋಲಿಕೆ ಮಾಡುವುದು ಉತ್ತಮ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಹೇಳಿದರು.ಆಳ್ವಾಸ್ ಕಾಲೇಜಿನ ಮುಂಡ್ರೆದುಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿಸಿರಿ) ಸಭಾಂಗಣದಲ್ಲಿ ಗುರುವಾರ ನಡೆದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ‘ಪೋಷಕರ – ಶಿಕ್ಷಕರ ಸಭೆ’ಯಲ್ಲಿಅವರು ಮಾತನಾಡಿದರು. ‘ಕರ್ನಾಟಕದಲ್ಲಿ ಹಲವಾರು ವಿದ್ಯಾಸಂಸ್ಥೆಗಳಿವೆ. ಆದರೆ, ಹೆಚ್ಚಿನ ಸಂಸ್ಥೆಗಳಲ್ಲಿ 1 ರಿಂದ 12 ನೇ ತರಗತಿಗೆ ಪೂರಕವಾಗುವ ವಾತಾವರಣ ಮತ್ತು ಸಮಗ್ರ ವ್ಯವಸ್ಥೆಯನ್ನು ಕಲ್ಪಿಸಿಲ್ಲ . ನಮ್ಮ ಪ್ರತಿಷ್ಠಿತ ಸಂಸ್ಥೆಯನ್ನು ಇಲ್ಲಿನ ಇತರ ಕಾಲೇಜುಗಳೊಂದಿಗೆ ಹೋಲಿಕೆ ಮಾಡುವುದು ದೊಡ್ಡ ತಪ್ಪು. ನಮ್ಮ ಸಂಸ್ಥೆಯಲ್ಲಿ ಎನ್ಸಿಆರ್ಟಿ ಪಠ್ಯಕ್ರಮದ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ಆ ಮೂಲಕ ವಿದ್ಯಾರ್ಥಿಗಳಲ್ಲಿ ಗುರಿ ಸಾಧಿಸುವ ಛಲದ ಹಾಗೂ ಪರಿಶ್ರಮವನ್ನು ರೂಪಿಸಲಾಗುತ್ತದೆ ಎಂದರು. ನಮ್ಮ ಸಂಸ್ಥೆಯಲ್ಲಿ ಒಟ್ಟು 22 ಸಾವಿರ ವಿದ್ಯಾರ್ಥಿಗಳು ಕಲಿಯುತ್ತಿದ್ದು, ಅದರಲ್ಲಿ…
ಕರ್ನಾಟಕದ ದಕ್ಷಿಣ ಭಾಗದಲ್ಲಿ ಒಬ್ಬ ಭಕ್ತನಿದ್ದ. ಆತನ ತಾಯಿಗೆ ವಯಸ್ಸಾಗಿತ್ತು. ಆಕೆ ಕಾಶಿಗೆ ಹೋಗಿ ವಿಶ್ವನಾಥನ ಮಡಿಲಲ್ಲಿ ಸಾಯಬೇಕು ಅಂತ ಬಯಸುತ್ತಾ ಇದ್ದಳು. ತನ್ನ ಇಡೀ ಜೀವನದಲ್ಲಿ ಏನನ್ನು ಕೇಳಿರದ ಆಕೆ ತನ್ನ ಮಗನ ಹತ್ತಿರ ಇದನ್ನೊಂದು ಕೇಳಿಯೇ ಬಿಟ್ಟಳು. ನನ್ನನ್ನು ಕಾಶಿಗೆ ಕರೆದುಕೊಂಡು ಹೋಗು, ನನಗೂ ವಯಸ್ಸಾಗಿದೆ. ನಾನು ಅಲ್ಲಿ ಹೋಗಿ ಸಾಯಬೇಕು ಅಂತ. ಹಾಗಾಗಿ ಇವನು ತನ್ನ ವೃದ್ಧ ತಾಯಿಯನ್ನು ಕರೆದುಕೊಂಡು ಹೊರಟ. ದಕ್ಷಿಣ ಕರ್ನಾಟಕದಿಂದ ಕಾಶಿವರೆಗೆ ಕಾಡಿನ ದಾರಿಯಲ್ಲಿ ನಡೆಯೋದು ಅಂದರೆ, ಅದು ತುಂಬಾನೇ ದೂರ. ವಯಸ್ಸಾಗಿದ್ದರಿಂದ ನಡೆದು ನಡೆದು ತಾಯಿ ಅಸ್ವಸ್ಥಗೊಳ್ಳುತ್ತಾಳೆ. ಹಾಗಾಗೀ ತಾಯಿಯನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ಹೊರಟನು. ನಡೆದಿದ್ದರಿಂದ ಆತನ ಶಕ್ತಿಯೂ ಕುಂದುತ್ತಾ ಬರುತ್ತಿತ್ತು. ಮುಂದೆ ಹೋಗೋಕೆ ಅವನಿಗಿದ್ದ ಒಂದೇ ಒಂದು ದಾರಿ ಎಂದರೆ ಶಿವ ಶಿವ ಎಂದು ಜಪಿಸೋದು. ಈ ಒಂದು ಪ್ರಯತ್ನದಲ್ಲಿ ನನ್ನನ್ನು ಸೋಲೋಕೆ ಬಿಡಬೇಡ, ನನ್ನ ತಾಯಿ ನನ್ನ ಬಳಿ ಕೇಳಿದ ಏಕೈಕ ವಿಚಾರವಿದು. ಇದನ್ನು ಪೂರೈಸೋ…
ವಿದ್ಯಾಗಿರಿ: ‘ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ಕಡಿಮೆ ಮಾಡಿ, ಪರಿಸರ ಹಸಿರು ಹೆಚ್ಚಿಸಿ’ ಎಂದು ಇಂಧನ ಮತ್ತು ಜೌಗು ಪ್ರದೇಶ ಸಂಶೋಧನಾ ತಂಡದ ಸಂಯೋಜಕ, ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನದ ವಿಜ್ಞಾನಗಳ ಕೇಂದ್ರ (ಸಿಇಎಸ್) ದಲ್ಲಿನ ಪರಿಸರ ಮಾಹಿತಿ ವ್ಯವಸ್ಥೆಯ (ಇಎನ್ವಿಐಎಸ್) ಸಂಚಾಲಕ ಡಾ ಟಿ. ವಿ. ರಾಮಚಂದ್ರ ಹೇಳಿದರು.ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಶಾಲೆಯ ಆವರಣದಲ್ಲಿ ಗುರುವಾರ ‘ವಿಶ್ವ ತೇವಭೂಮಿ ದಿನ -2024’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು . ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುವುದರಿಂದ ಜನರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ, ಸಾಧ್ಯವಾದಷ್ಟು ಪಾಲಿಥಿನ್ ಚೀಲಗಳ ಬಳಕೆಯನ್ನು ನಿಲ್ಲಿಸಬೇಕು. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಎಲ್ಲ ವಿದ್ಯಾರ್ಥಿಗಳ ಆದ್ಯ ಕರ್ತವ್ಯ ಎಂದರು. ಮುಂದಿನ 16ನೇ ಕೆರೆ (ಲೇಕ್)ಸಮ್ಮೇಳನದ ಸ್ವಚ್ಛತಾ ಕಾರ್ಯವನ್ನು ಆಳ್ವಾಸ್ ಆಳ್ವಾಸ್ನಲ್ಲಿ ನಡೆಸಲಾಗುತ್ತಿದ್ದು, ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಿ.ಚಿತ್ರಕಲೆಯ ಸ್ಪರ್ಧೆಯನ್ನು ನಡೆಸುತ್ತಿದ್ದೇವೆ. ನನ್ನ ದೇಶದ ಪ್ರತಿಯೊಂದು ಮಗು ಉಜ್ವಲವಾಗಬೇಕು ಮತ್ತು ಪ್ರತಿ ಮಗು ಪರಿಸರ ಸಾಕ್ಷರಾಗಿರಬೇಕು ಎಂದು ಉದ್ದೇಶವನ್ನು…
ವಿದ್ಯಾಗಿರಿ(ಮೂಡುಬಿದಿರೆ): ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ನಾಲ್ಕು ದಿನಗಳ ಕಾಲ ನಡೆದ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 29ನೇ ವಿರಾಸತ್ ಗೆ ಭಾನುವಾರ ರಾತ್ರಿ ತೆರೆ ಬಿತ್ತು. ಲೋಕ ಮಾರ್ಗದರ್ಶಕರಾದ ರಾಮ-ಕೃಷ್ಣರ ಮೂರ್ತಿ ಪ್ರತಿಷ್ಠಾಪಿಸಿದ ಸಾಂಸ್ಕೃತಿಕ ರಥವನ್ನು ಮುಖ್ಯ ವೇದಿಕೆಯ ಮುಂಭಾಗದಲ್ಲಿ ಎಡದಿಂದ ಬಲಕ್ಕೆ ಎಳೆಯಲಾಯಿತು. ಇದಕ್ಕೂ ಮೊದಲು ಕಿರು ರಥದಲ್ಲಿ ಗಣಫತಿ, ಪಲ್ಲಕ್ಕಿಯಲ್ಲಿ ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ ಹನುಮಂತ, ಸಂಪತ್ತಿನ ಧ್ಯೋತಕವಾದ ಮಹಾಲಕ್ಷ್ಮಿ ಹಾಗೂ ವಿದ್ಯಾಮಾತೆ ಮಹಾ ಸರಸ್ವತಿ ಮೂರ್ತಿಗಳನ್ನು ಕರೆ ತರಲಾಯಿತು. ರಥಯಾತ್ರೆಯಲ್ಲಿ ಮೈಸೂರು, ಪಂಡರಾಪುರ ಹಾಗೂ ಮಂಗಳೂರು ಹರೇಕೃಷ್ಣ ಪಂಥದ ಭಜನಾ ತಂಡಗಳ ಭಜನೆ ಹಾಡಿನ ಮೂಲಕ ಭಕ್ತಿ ಪ್ರಭಾವಳಿ ಮೂಡಿಸಿದರು. 15 ಅರ್ಚಕರು ಮಂತ್ರ ಘೋಷ ಮಾಡಿದರು. ತಟ್ಟಿರಾಯ, ಅಪ್ಸರೆಯರು, ಕಳಶ ಹಿಡಿದ ಯುವತಿಯರು, ಹುಲಿರಾಯ, ಕೊಂಬು, ಕಹಳೆ…
ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದ ೩೬ನೆಯ ಕೃತಿ ಬಿಡುಗಡೆಯಾಯಿತು. ಕನ್ನಡ ಸಹಾಯಕ ಪ್ರಾಧ್ಯಾಪಕ, ಲೇಖಕ ಡಾ. ಎನ್. ಪ್ರವೀಣ್ಚಂದ್ರ ಇವರ ಲೇಖನ ಸಂಕಲನ ಸ್ಪೂರ್ತಿಯ ಚಿಲುಮೆಗಳು ಕೃತಿ ಬಿಡುಗಡೆ ಕಾರ್ಯ ಕ್ರಮವು ಮಂಗಳೂರು ಪತ್ರಿಕಾ ಭವನದಲ್ಲಿ ಅಕ್ಟೋಬರ್ ೧೭ರಂದು ಸೋಮವಾರ ಬೆಳಿಗ್ಗೆ ೧೦.೩೦ಕ್ಕೆ ನೆರವೇರಿತು. ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಹಾಗೂ ಸೂರಜ್ ಎಜುಕೇಶನ್ ಟ್ರಸ್ಟ್ ಮುಡಿಪು ಇದರ ಅಧ್ಯಕ್ಷರಾದ ಡಾ. ಮಂಜುನಾಥ್ ಎಸ್. ರೇವಣಕರ್ರವರು ಕೃತಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಕಾಲೇಜ್ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಯೋಗೀಶ್ ಕೈರೋಡಿ ಕೃತಿ ಪರಿಚಯ ಮಾಡುತ್ತಾ ಇಂದಿನ ಆಧುನಿಕ ಸಂದರ್ಭದಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಚಿತ್ರಿಸುವ ಈ ರೀತಿಯ ಕೃತಿಗಳ ಅಗತ್ಯ ಹೆಚ್ಚು ಇದೆ. ಎಲೆಮರೆಯ ಕಾಯಿಗಳ ಹಾಗೆ ಕೆಲಸ ಮಾಡಿ ಅಪೂರ್ವ ಸಾಧನೆಗೈದ ಮಹನೀಯರುಗಳ ದಾರಿ…
ಬಂಟರ ಸಮುದಾಯದ ಪ್ರತೀ ವ್ಯಕ್ತಿಯಲ್ಲಿ ಕಾಣಬಹುದಾದ ವಿಶೇಷ ಗುಣಗಳೆಂದರೆ ಸ್ವಪರಿಶ್ರಮದಲ್ಲಿ ವಿಶ್ವಾಸ ಮತ್ತು ಅನನ್ಯ ಆತ್ಮಗೌರವ. ಅವರ ಈ ವಿಶೇಷಗಳು ಇಂದು ಅವರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದೆ. ತಾವು ಸುಶಿಕ್ಷಿತರಾದರೂ ಬೆವರಿಳಿಸಿ ದುಡಿಯುವುದಕ್ಕೆ ಹಿಂಜರಿಯಲಾರರು. ಕಾರಣ ಅವರು ಪರಿಶ್ರಮಕ್ಕೆ ಪರ್ಯಾಯ ಇಲ್ಲವೆಂಬ ಮೂಲಮಂತ್ರದ ಅರ್ಥ ಬಲ್ಲರು. ಬೆಳ್ಳಾರೆ ತಂಬಿನಮಕ್ಕಿ ಮೂಲದ ರಾಕೇಶ್ ಶೆಟ್ಟಿ ಅವರು ಇಂದು ಪುಣೆ ನಗರದ ಓರ್ವ ಯಶಸ್ವಿ ಯುವ ಉದ್ಯಮಿ ಜೊತೆಗೆ ಪ್ರಭಾವಿ ಜನನಾಯಕನಾಗಿ ಗುರುತಿಸಲ್ಪಡುತ್ತಿದ್ದಾರೆ. ಭಾಗೀರಥಿ ರೈ ಅಮ್ಮು ರೈ ದಂಪತಿಯ ಕಿರಿಯ ಪುತ್ರ ರಾಕೇಶ್ ಪದವೀಧರ ಯುವಕ. ಭವಿಷ್ಯದ ಬಗ್ಗೆ ಭವ್ಯ ಕಲ್ಪನೆಗಳನ್ನು ಹೊಂದಿದ ಕನಸುಗಾರ. ಉದ್ಯಮಶೀಲನಾಗಿ ಕಸುವು ತೋರಿಸಿದ ಸಮರ್ಥ. ಮಹಾರಾಷ್ಟ್ರದ ಸಾಂಸ್ಕೃತಿಕ ರಾಜಧಾನಿ ಎಂಬ ಖ್ಯಾತಿಯ ಪುಣೆ ನಗರಕ್ಕಾಗಮಿಸಿದ ರಾಕೇಶ್ ಶೆಟ್ಟರು ಹತ್ತಾರು ಕ್ಷೇತ್ರಗಳಲ್ಲಿ ದುಡಿದು ಸ್ವಯಂ ಉದ್ಯೋಗ ಸೃಷ್ಟಿಸಿಕೊಂಡು ತನ್ನ ಅದೃಷ್ಟ ಪರೀಕ್ಷೆ ಮಾಡಿಕೊಂಡು ನಂತರದ ದಿನಗಳಲ್ಲಿ ಹೊಟೇಲ್ ಉದ್ಯಮ ಪ್ರಾರಂಭಿಸಿದರು. ತನ್ನ ಕಠಿಣ ಪರಿಶ್ರಮ, ಅಚಲ ವಿಶ್ವಾಸ,…
ವಿದ್ಯಾಗಿರಿ (ಮೂಡುಬಿದಿರೆ): ಸಂಗೀತ ಲೋಕದ ದಿಗ್ಗಜರಾದ ವಯೋಲಿನ್ ವಾದಕ ಮೈಸೂರು ಮಂಜುನಾಥ, ಕೊಳಲು ವಾದಕ ಗೋಡ್ಖಿಂಡಿ ಹಾಗೂ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಅವರಿಗೆ ಭಾನುವಾರ ‘ಆಳ್ವಾಸ್ವಿರಾಸತ್-2023’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿದ್ದ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದ ವಿಶಾಲ ವೈಭವದ ವೇದಿಕೆಯಲ್ಲಿ ಆಸೀನರಾದ ಮೂವರು ಸಾಧಕರಿಗೆ ಅವರದ್ದೇ ರಾಗ ಸಂಯೋಜನೆಯ ವಯೋಲಿನ್, ಬಾನ್ಸುರಿ ಹಾಗೂ ಸಂಗೀತದ(ಜೈ ಹೋ) ಮೂಲಕ ಅಭಿಮಾನದ ಪ್ರೀತಿಯನ್ನು ಧಾರೆ ಎರೆಯಲಾಯಿತು. ಶಾಲು, ಹೂಹಾರ, ಸ್ಮರಣಿಕೆ, ಪ್ರಶಸ್ತಿ ಪತ್ರದ ಜೊತೆಗೆ 1 ಲಕ್ಷ ರೂಪಾಯಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಪನ್ನೀರು, ತಿಲಕ, ಪುಷ್ಪಾರ್ಚನೆ ಹಾಗೂ ಆರತಿ ಮೂಲಕ ಗೌರವಿಸಲಾಯಿತು. ಆಳ್ವಾಸ್ ಸಾಂಸ್ಕೃತಿಕ ತಂಡವು ಸ್ವರ ಗಾನದ ಆರತಿ ಗಾನಸುಧೆ ಹರಿಸಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿ ವಿನಮ್ರತೆಯಿಂದ ಮಾತನಾಡಿದ ಮೈಸೂರು ಮಂಜುನಾಥ, ನನ್ನ ಲೋಕದ ಸಮಸ್ತ ಸಂಭ್ರಮ ಮೂಡುಬಿದಿರೆಗೆ ಆಳ್ವರು ತಂದಿದ್ದಾರೆ ಎಂದು ದೇವೇಂದ್ರ ನಾಚುವ ಹಾಗೆ…
ಮುಂಬಯಿ, ಅ.14: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಕಳೆದ ರಾತ್ರಿ ನಡೆಸಲಾದ ಹತ್ಯೆಯತ್ನವನ್ನು ಬಿಜೆಪಿ ಉತ್ತರ ಮುಂಬಯಿ ಕ್ಷೇತ್ರದ ಉಪಾಧ್ಯಕ್ಷ ಎರ್ಮಾಳ್ ಹರೀಶ್ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ಕರ್ನಾಟಕ ರಾಜ್ಯದ ಗೃಹ ಇಲಾಖೆ ಮತ್ತು ದ.ಕ ಜಿಲ್ಲಾ ಪೊಲೀಸ್ ಉನ್ನತಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವೇ ಘಟನೆಗೆ ಕಾರಣಕರ್ತನಾದ ಅಪರಿಚಿತನ ಪತ್ತೆಹಚ್ಚಿ ಸೂಕ್ತವಾದ ಕ್ರಮ ಕೈಗೊಳ್ಳುವಂತೆ ಎರ್ಮಾಳ್ ಹರೀಶ್ ಶೆಟ್ಟಿ ಒತ್ತಾಯಿಸಿದ್ದಾರೆ. ಓರ್ವ ಯುವನಾಯಕನಾಗಿದ್ದ ಜವಾಬ್ದಾರಿಯುತ ಜನಪ್ರತಿನಿಧಿಯ ಶಾಸಕರ ಕಾರನ್ನು ಅನುಮಾನಾಸ್ಪದವಾಗಿ ಹಿಂಬಾಲಿಸಿ ನಡೆಸಿದ ಹತ್ಯಾಯತ್ನವು ಸಹಿಸುವಂತಹದ್ದಲ್ಲ. ಇಂತಹ ದುಷ್ಕೃತ್ಯಕ್ಕೆ ಮುಂದಾದ ಯಾವನೇ ವ್ಯಕ್ತಿಯಾಗಲಿ, ಸಂಘಟನೆಯನ್ನಾಗಲಿ ಕ್ಷಮಿಸುವ ಮಾತೇ ಇಲ್ಲ. ಸಾಹಸಕ್ಕೆ ಮುಂದಾಗುವವರು ಎದುರು ಬಂದು ತಮ್ಮ ಎದೆಗಾರಿಕೆಯನ್ನು ಸಾರ್ವಜನಿಕವಾಗಿ ತೋರಿಸಲಿ ಎಂದೇಳುವೆ. ಒಂದೇ ಸಮಾಜದಲ್ಲಿದ್ದು ದ್ರೋಹ ಬಗೆಯುವ ಇಂತಹ ಯಾವ ದುಷ್ಕರ್ಮಿಗಳಿಗೂ ಮನ್ನಿಸುವ ಪ್ರೆಶ್ನೆಯೇ ಬಾರದು ಎಂದೂ ಎರ್ಮಾಳ್ ಹರೀಶ್ ತಿಳಿಸಿದ್ದಾರೆ.
ಬಂಟರ ಸಂಘ ಮುಂಬಯಿ ಇದರ 9 ಪ್ರಾದೇಶಿಕ ಸಮಿತಿಗಳಲ್ಲೊಂದಾದ ಡೊಂಬಿವಲಿ ಪ್ರಾದೇಶಿಕ ಸಮಿತಿಯ 2023-2026ರ ಅವಧಿಯ ಕಾರ್ಯಾಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಫೆಬ್ರವರಿ 7ರಂದು ಸಂಜೆ 5 ಗಂಟೆಗೆ ಸರಿಯಾಗಿ ಡೊಂಬಿವಲಿ ಪೂರ್ವದ, ಕಟೈ ನಾಕ ಪರಿಸರದಲ್ಲಿರುವ ಕುಶಲ ಗ್ರೀನ್ ಲಾನ್ಸ್ ಹೋಟೆಲ್ ನ ಸಭಾಗೃಹದಲ್ಲಿ ನಡೆಯಲಿದೆ. ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟರ ಅಧ್ಯಕ್ಷತೆಯಲ್ಲಿ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟರ ಗೌರವಾನ್ವಿತ ಉಪಸ್ಥಿತಿ ಹಾಗೂ ಸಂಘದ ಇತರ ಪದಾಧಿಕಾರಿಗಳಾದ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿ, ಗೌ.ಪ್ರ. ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಕೋಶಾಧಿಕಾರಿ ರಮೇಶ್ ಬಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಶಶಿಧರ್ ಕೆ. ಶೆಟ್ಟಿ ಇನ್ನಂಜೆ, ಪೂರ್ವ ವಲಯ ಸಮನ್ವಯಕ ಸುಕುಮಾರ್ ಎನ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಶೆಟ್ಟಿಯವರ ಸಮ್ಮುಖದಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮ…