Author: admin
ಎಸ್.ಯು. ಪಣಿಯಾಡಿಯವರ ಉತ್ಸಾಹ ಕನಸುಗಳೊಂದಿಗೆ 1928ರ ಸೆಪ್ಟೆಂಬರ್ 23 ರಂದು ಉಡುಪಿಯಲ್ಲಿ ತುಳುವ ಮಹಾಸಭೆ ಸ್ಥಾಪನೆಗೊಂಡಿತು. ತುಳುವ ಮಹಾಸಭೆಯ ಪ್ರಥಮ ವರ್ಷದ ಕಾರ್ಯಕಾರಿ ಸಮಿತಿ ಹೀಗಿತ್ತು. ಅಂಜಾರು ರಾಮಣ್ಣ ಹೆಗ್ಗಡೆ (ಅಧ್ಯಕ್ಷ), ಎಸ್.ಯು. ಪಣಿಯಾಡಿ (ಕಾರ್ಯದರ್ಶಿ), ಸದಸ್ಯರು – ಡಾ. ಯು. ರಾಮಚಂದ್ರ ರಾವ್, ಹಿರಿಯಡ್ಕ ನಾರಾಯಣ ರಾವ್, ಯು. ವೆಂಕಪ್ಪಯ್ಯ, ಮುಂತಾದವರು.1984 ರವರೆಗೆ ಪೊಳಲಿ ಸೀನಪ್ಪ ಹೆಗ್ಡೆ ಮತ್ತು ಬಡಕ ಬಯಲು ಪರಮೇಶ್ವರಯ್ಯನವರು ನಡೆಸಿಕೊಂಡು ಬಂದಿದ್ದರು. ಇನ್ನು ನಾಲ್ಕು ವರ್ಷಗಳಲ್ಲಿ ಐತಿಹಾಸಿಕ ಈ ತುಳು ಚಳುವಳಿಗೆ ನೂರು ವರ್ಷ ತುಂಬಲಿದೆ. ಅವರ ಹೋರಾಟದ ಕಿಚ್ಚು ತುಳುವರಲ್ಲಿ ಸ್ವಾಭಿಮಾನ ಮೂಡಿಸಿ ಇದುವರೆಗೆ ತುಳುವನ್ನು ಉಳಿಸಿಕೊಂಡು ಬಂದಿದೆ. ಆದರೆ ತುಳುವ ಮಹಸಭೆಯ ಯಾವುದೇ ಬೇಡಿಕೆಗಳು ಇದುವರೆಗೆ ಪೂರ್ತಿಯಾಗಿಲ್ಲ ಎನ್ನುವುದು ಖೇದಕರ. ತುಳುವ ಮಹಾಸಭೆಯ 96ನೇ ವರ್ಷದ ಈ ಸಂದರ್ಭದಲ್ಲಿ ಹಿರಿಯರ ಯೋಚನೆ ಯೋಜನೆಗಳನ್ನು ಮರು ಸ್ಥಾಪಿಸಬೇಕು ಎಂಬ ಉದ್ದೇಶದಿಂದ ತುಳುವರ್ಲ್ಡ್ ಫೌಂಡೇಶನ್ ಕಾರ್ಯ ಯೋಜನೆಗಳನ್ನು ರೂಪಿಸಿಕೊಂಡಿದೆ. ತುಳುವ ಮಹಾಸಭೆಯ ಪ್ರಕಾರ ತುಳುವವರೆಂದರೆ; ತುಳು…
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಉಡುಪಿ ತಾಲೂಕು ಸಮಿತಿಯ ವತಿಯಿಂದ ಜಾನಪದ, ರಂಗಭೂಮಿ, ಸಾಂಸ್ಕೃತಿಕ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ನೀಡಿ ಸನ್ಮಾನಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘಗಳ ಉಡುಪಿ ತಾಲೂಕು ಸಮಿತಿಯ ವತಿಯಿಂದ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ ಕಲಾಧರ ಯಕ್ಷರಂಗ ಬಳಗ ಜಲವಳ್ಳಿ ಇವರಿಂದ ಬಡಗುತಿಟ್ಟು ಯಕ್ಷಗಾನ ‘ಜ್ವಾಲಾ ಪ್ರತಾಪ’ ಪ್ರದರ್ಶನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಿತು. ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ತಾಲೂಕು ಸಮಿತಿ ಸಂಚಾಲಕ ಶಿವಪ್ರಸಾದ್ ಹೆಗ್ಡೆ, ಉಪ ಸಂಚಾಲಕ ದಿನೇಶ್ ಹೆಗ್ಡೆ, ನಿಕಟ ಪೂರ್ವ ಸಂಚಾಲಕ ಜಯರಾಜ್ ಹೆಗ್ಡೆ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಭುಜಂಗ ಶೆಟ್ಟಿ, ಮಿಥುನ್ ಹೆಗ್ಡೆ, ಸುಭಾಸ್ ಬಲ್ಲಾಳ್, ಶ್ರೀಧರ…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಸೆಪ್ಟೆಂಬರ್ 15 ರಂದು ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯರವರ ಜನ್ಮದಿನದ ಅಂಗವಾಗಿ ಇಂಜಿನಿಯರ್ ಪ್ರವೀಣ್ ಕುಮಾರ್ ಶೆಟ್ಟಿ ನಿರಕೋಡ್ಲುರವರನ್ನು ಸನ್ಮಾನಿಸುವ ಮೂಲಕ ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಯಿತು. ಇಂಜಿನಿಯರ್ ಪ್ರವೀಣ್ ಕುಮಾರ್ ಶೆಟ್ಟಿ ನಿರಕೋಡ್ಲು ಅವರನ್ನು ಕೋಟೇಶ್ವರದ ಅವರ ಸ್ವಗೃಹದಲ್ಲಿ ತಾಲೂಕು ಯುವ ಬಂಟರ ಸಂಘದ ಸ್ಥಾಪಕ ಅಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ಜೆ.ಪಿ ಪ್ಯಾಶನ್ ಮಾಲೀಕ ರತ್ನಾಕರ್ ಶೆಟ್ಟಿ ಹಾಗೂ ಗುತ್ತಿಗೆದಾರರಾದ ಪ್ರಭಾಕರ್ ಶೆಟ್ಟಿಯವರು ಸನ್ಮಾನಿಸಿದರು. ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀಧರ ಶೆಟ್ಟಿ ಹುಯ್ಯಾರು, ಖಜಾಂಚಿ ಭರತರಾಜ್ ಶೆಟ್ಟಿ ಜಾಂಬೂರು, ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸುನಿಲ್ ಶೆಟ್ಟಿ ಹೇರಿಕುದ್ರು, ಪ್ರಶಾಂತ ಶೆಟ್ಟಿ ಶಿರೂರು ಉಪಸ್ಥಿತರಿದ್ದರು. ದಶಮ ಸಂಭ್ರಮದ ಕೋಶಾಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.
ಶ್ರದ್ದಾ ಭಕ್ತಿಯ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಕಾರ್ಯ, ಬ್ರಹ್ಮಕಲಶೋತ್ಸವ ಅಥವಾ ಯಾವುದೇ ರೀತಿಯ ಧಾರ್ಮಿಕ ಕಾರ್ಯಗಳು ನಡೆಯುತ್ತವೆ ಎಂದರೆ ನಂಬಿದ ಭಕ್ತರಾದ ನಮಗೆಲ್ಲರಿಗೂ ಮತ್ತು ಲೋಕ ಕಲ್ಯಾಣಕ್ಕೋಸ್ಕರ ಆಗುತ್ತದೆ. ಕ್ಷೇತ್ರಗಳು ಬೆಳಗಿದಂತೆ ನಾಡು ಸುಭೀಕ್ಷವಾಗುತ್ತದೆ. ನಮಗೆ ನಮ್ಮ ಕಾತ್ರಜ್ ಅಯ್ಯಪ್ಪ ಕ್ಷೇತ್ರದ ಜೀರ್ಣೋದ್ದಾರ ಮಾಡುವ ಸೌಭಾಗ್ಯ ದೇವರು ಒದಗಿಸಿ ಕೊಟ್ಟಿದ್ದಾರೆ. ಪುಣೆಯ ಸರ್ವ ಭಕ್ತಾಭಿಮಾನಿಗಳ ಸಹಕಾರ ಸಿಕ್ಕಿದೆ. ನಮ್ಮ ನಿರೀಕ್ಷೆಗೂ ಮೀರಿ ಜೀರ್ಣೋದ್ದಾರದ ಕಾರ್ಯಗಳು ನಡೆಯುತ್ತಿವೆ. ನಮ್ಮ ಲೆಕ್ಕಾಚಾರಕ್ಕಿಂತ ಹೆಚ್ಚಿನ ಖರ್ಚು ಕೂಡಾ ಆಗುತ್ತಿದೆ. ಆದರೆ ದೇವತಾ ಕಾರ್ಯಕ್ಕೆ ಅರ್ಥಿಕ ಬಲ ತಮ್ಮೆಲ್ಲರ ಸಹಕಾರದಿಂದ ಬರುತ್ತದೆ ಎಂಬ ನಂಬಿಕೆ ನಮ್ಮದು. ಇನ್ನು ಅಂತಿಮ ಹಂತದ ಜೀರ್ಣೋದ್ದಾರ ಕೆಲಸಗಳು ಬಾಕಿ ಇದೆ. ಇದಕ್ಕೆ ಸಾಧಾರಣ ಒಂದೂವರೆ ಕೋಟಿವರೆಗಿನ ಅರ್ಥಿಕ ಸಂಪನ್ಮೂಲದ ಅವಶ್ಯಕತೆ ಇದೆ. ಇದನ್ನು ಕ್ರೂಡೀಕರಿಸುವ ಕೆಲಸ ಮಾಡುತ್ತಿದ್ದೇವೆ. ಕ್ಷೇತ್ರದ ಭಕ್ತರು ತಮ್ಮ ಇಚ್ಚೆಯಂತೆ ಮುಂದೆ ಬಂದು ತನು ಮನ ಧನದ ಸೇವೆ ನೀಡಿ ಸಹಕಾರ ನೀಡಬೇಕು. ತಾವು ನಂಬಿದ ಶ್ರೀ ಅಯ್ಯಪ್ಪ…
ಸೆಪ್ಟೆಂಬರ್ 15 ರಂದು ಆದಿತ್ಯವಾರ ಸಂಜೆ ‘ಇಂಜಿನಿಯರ್ಸ್ ಡೇ’ ಪ್ರಯುಕ್ತ, ಸಮಾಜಮುಖಿ ಸೇವಾ ಮನೋಭಾವದ, ಪರೋಪಕಾರಿ, ಪ್ರಾಮಾಣಿಕ, ಕರ್ತವ್ಯ ಪ್ರಜ್ಞೆಯ ಸರಕಾರಿ ಅಧಿಕಾರಿ, ಕೋಟ ಮೆಸ್ಕಾಂ ನಲ್ಲಿ ಇಂಜಿನಿಯರ್ ಆಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ, ಜನಮನ್ನಣೆ ಗಳಿಸಿದ ಇಂಜಿನಿಯರ್ ಹಾಲಾಡಿ ಪ್ರಶಾಂತ್ ಶೆಟ್ಟಿಯವರನ್ನು ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಬನ್ನಾಡಿ ಪ್ರವೀಣ್ ಹೆಗ್ಡೆಯವರು ‘ಇಂಜಿನಿಯರ್ಸ್ ಡೇ’ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು.ಲಯನ್ಸ್ ಕ್ಲಬ್ ನ ಸ್ಥಾಪಕ ಕಾರ್ಯದರ್ಶಿ ಲಯನ್ ಪ್ರೊಫೆಸರ್ ಕಲ್ಕಟ್ಟೆ ಚಂದ್ರ ಶೇಖರ್ ಶೆಟ್ಟಿಯವರು ಸನ್ನಾನಿತಗೊಂಡ ಲಯನ್ ಇಂಜಿನಿಯರ್ ಹಾಲಾಡಿ ಪ್ರಶಾಂತ್ ಶೆಟ್ಟಿಯವರ ಬಗ್ಗೆ ಹಾಗೂ ಇಂಜಿನಿಯರ್ಸ್ ಡೇ ಮಹತ್ವದ ಕುರಿತು ಮಾತನಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಲಯನ್ ಇಂಜಿನಿಯರ್ ಹಾಲಾಡಿ ಪ್ರಶಾಂತ್ ಶೆಟ್ಟಿಯವರು, ಸರ್ ಎಮ್. ವಿಶ್ವೇಶ್ವರಯ್ಯರವರ ಜೀವನ ಕುರಿತು ಮಾತನಾಡಿ, ಇಂಜಿನಿಯರ್ಸ್ ಡೇ ಪ್ರಯುಕ್ತ ತನ್ನನ್ನು ಸನ್ಮಾನಿಸಿದ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಸದಸ್ಯರಿಗೆ ಕೃತಜ್ನತೆಗಳನ್ನು ಸಲ್ಲಿಸಿ ಶುಭ ಹಾರೈಸಿದರು.…
ಮುಂಬಯಿ (ಆರ್ಬಿಐ), ಸೆ.15: ಮುಂಬಯಿ ಸಾರಸ್ವತ ಲೋಕದ ಸಜ್ಜನ ಸಾಹಿತಿ, ‘ಶಿಮುಂಜೆ ಪರಾರಿ’ ಕಾವ್ಯ ನಾಮದಿ ಚಿರಪರಿಚಿತ ತುಳು ಕನ್ನಡ ಕವಿ, ಅನುವಾದಕಾರ, ನಾಟಕಕಾರ, ಅಧ್ಯಾಪಕ, ಕಂಠದಾನ ಕಲಾವಿದ ಮತ್ತು ನಟ ಎಂದೆಣಿಸಿ ಬಹುಮುಖ ಪ್ರತಿಭೆಗಳಿಂದ ಜನಮಾನಸದಲ್ಲಿ ಜನಾನುರೆಣಿಸಿರುವ ಶಿಮುಂಜೆ ಪರಾರಿ (ಸೀತಾರಾಮ ಮುದ್ದಣ್ಣ ಶೆಟ್ಟಿ 84.) ಇಂದಿಲ್ಲಿ ಆದಿತ್ಯವಾರ ಬೆಳಿಗ್ಗೆ ಅಂಧೇರಿ ಪಶ್ಚಿಮದ ಜೀವನ್ ನಗರ್ನ ನ್ಯೂ ಚಂದ್ರ ಹೌಸಿಂಗ್ ಸೊಸೈಟಿಯಲ್ಲಿನ ನಿವಾಸದಲ್ಲಿ ನಿಧನರಾದರು.ಉಡುಪಿ ಜಿಲ್ಲೆಯ ಮುಲ್ಕಿಯ ಕಕ್ವ ಗ್ರಾಮ ಅತಿಕಾರಿಬೆಟ್ಟು ಇಲ್ಲಿ ಕಲ್ಯಾಣಿ ಶೆಟ್ಟಿ ಮತ್ತು ಶಿಮುಂಜೆ ಮುದ್ದಣ್ಣ ಶೆಟ್ಟಿ ದಂಪತಿಗಳ ಸುಪುತ್ರನಾಗಿ ಜನ್ಮತಾಳಿ ಸಜ್ಜನ ಸಾಹಿತಿ ಎಂದೇ ಪ್ರಸಿದ್ಧರಾದ ‘ಶಿಮುಂಜೆ ಪರಾರಿ’ ಕಾವ್ಯನಾಮದಿಂದ ಜನಮಾನಸದಲ್ಲಿ ನೆಲೆ ನಿಂತವರು.ಕಳೆದ ಹಲವಾರು ವರ್ಷಗಳಿಂದ ಅಂಧೇರಿ ಪೂರ್ವದ ಚಕಲಾ ಇಲ್ಲಿನ ಹವಾ ಮಹಲ್ನಲ್ಲಿ ವಾಸವಾಗಿದ್ದ ಮೃತರು ಪತ್ನಿ ಚಂದ್ರಿಕಾ ಶೆಟ್ಟಿ, ಮಕ್ಕಳಾದ ಅರ್ಚನಾ ಶೆಟ್ಟಿ ಮತ್ತು ಅಪರ್ಣಾ ಶೆಟ್ಟಿ ಸೇರಿದಂತೆ ಅಪಾರ ಬಂಧು ಬಳಗ, ಶಿಷ್ಯವರ್ಗವನ್ನು ಅಗಲಿದ್ದಾರೆ.ಶಿಮುಂಜೆ ಅವರಿಗೆ ಮರಾಠಿ ಗುಜರಾತಿ…
ಸಸಿಹಿತ್ಲು ಸಮುದ್ರ ತಟದಲ್ಲಿ ಬೀಚ್ ಕ್ಲೀನಿಂಗ್ ಅಭಿಯಾನ ಹಾಗೂ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆಪ್ಟೆಂಬರ್ 15, ಭಾನುವಾರದಂದು ಆಚರಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್.ಸಿ.ಸಿ., ಎನ್.ಎಸ್.ಎಸ್. ನ 120 ವಿದ್ಯಾರ್ಥಿಗಳು ಪಾಲ್ಗೊಂಡು 30-40 ಚೀಲದಷ್ಟು ಕಸವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ, ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಪರವಾದ ಘೋಷಣೆಗಳನ್ನು ಒಟ್ಟಿಗೆ ಕೂಗುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಭಾರತ, ಮತ್ತು ಬಹುತ್ವದ ನೆಲೆಯಲ್ಲಿ ರೂಪುಗೊಂಡ ಭಾರತಕ್ಕೆ ಪ್ರಜಾಪ್ರಭುತ್ವ ಒಂದು ವರ. ನಾವು ಯಾವುದೇ ಜಾತಿ, ಮತ ಧರ್ಮ, ಭಾಷೆಗೆ ಸೇರಿದವರಾದರೂ ನಾವೆಲ್ಲ ಭಾರತೀಯರು ಎಂಬ ಹೆಮ್ಮೆ ಮತ್ತು ಐಕ್ಯತಾ ಭಾವ ನಮ್ಮಲ್ಲಿ ಸದಾ ಇರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ನುಡಿದರು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಾಣಿಕ್ಯ, ಐ.ಸಿ.ಸಿ. ಸಫಿರ್ಂಗ್ ಸ್ವಾಮಿ ಪ್ರತಿಷ್ಠಾನದ ನಿರ್ದೇಶಕರು ಹಾಗೂ ಸಫಿರ್ಂಗ್ ಸ್ವಾಮಿ ಪ್ರತಿಷ್ಠಾನದ ನಿರ್ದೇಶಕರು ಗೌರವ್ ಹೆಗ್ಡೆ…
ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ, 2023 ರ ಸಾಲಿನ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ 2024 ರ ಸಾಲಿನ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಜಯಕರ ಶೆಟ್ಟಿ ಇಂದ್ರಾಳಿ ಅವರು ಶತಮಾನೋತ್ಸವನ್ನು ಯಶಸ್ವಿಯಾಗಿ ಪೂರೈಸಿರುವ ಉಡುಪಿಯ ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಕಳೆದ 42 ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದು, ಸೊಸೈಟಿಯನ್ನು ಉಡುಪಿ ಜಿಲ್ಲೆಯ ಯಶಸ್ವಿ ಸಹಕಾರಿ ಸಂಸ್ಥೆಯಾಗಿ ಜನಮನದಲ್ಲಿ ಪ್ರತಿಷ್ಠಾಪಿಸಿದ್ದಾರೆ. 1918ರಲ್ಲಿ ಸ್ಥಾಪನೆಗೊಂಡ ಈ ಸೊಸೈಟಿ, 1978ರಿಂದ 1981ರವರೆಗೆ ವ್ಯವಹಾರ ಸ್ಥಗಿತಗೊಂಡು ಮುಚ್ಚುವ ಸ್ಥಿತಿಯಲ್ಲಿದ್ದು, ಸರಕಾರದ ಆಡಳಿತಾಧಿಕಾರಿಗಳ ಕಾಲದಿಂದ ವಿವಿಧ ಹುದ್ದೆಗಳ ಮೂಲಕ ಅದಕ್ಕೊಂದು ಹೊಸ ಆಯಾಮ ದೊರಕಿಸಿಕೊಟ್ಟು ಅದೊಂದು ಬೃಹತ್ ಸಂಸ್ಥೆಯಾಗಿ ಬೆಳೆಯಲು ಕಾರಣೀಭೂತರಾಗಿದ್ದಾರೆ. ಶಿವಳ್ಳಿ ಗ್ರಾಮದ ಇಂದ್ರಾಳಿಯ ಪ್ರತಿಷ್ಠಿತ ಕೃಷಿಕ ಬಂಟ ಮನೆತನದಲ್ಲಿ ಜನಿಸಿದ ಜಯಕರ ಶೆಟ್ಟಿ ಇಂದ್ರಾಳಿ ಅವರು ಸಹಕಾರಿ…
ತುಳುಕೂಟ ಪುಣೆಯ ರಜತ ಮಹೋತ್ಸವ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಹಾಗೂ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮಗಳು ವಿವಿಧ ವಯೋಮಿತಿಗೆ ಅನುಗುಣವಾಗಿ ಸೆಪ್ಟೆಂಬರ್ 15 ರಂದು ರವಿವಾರ ಪುಣೆಯ ಶ್ಯಾಮ್ ರಾವ್ ಕಲ್ಮಾಡಿ ಕನ್ನಡ ಹೈಸ್ಕೂಲ್ ಕೇತ್ಕರ್ ರೋಡ್ ಇಲ್ಲಿ ಬೆಳಿಗ್ಗೆ ಗಂಟೆ 9 ರಿಂದ ಸಂಜೆ ಗಂಟೆ 5 ರವರೆಗೆ ನಡೆಯಲಿದೆ. ಬೆಳಿಗ್ಗೆ ಗಂಟೆ 9 ರಿಂದ ಸ್ಪರ್ಧೆಗಳು ಆರಂಭವಾಗಲಿದ್ದು, ಮೊದಲಾಗಿ 5 ರಿಂದ 15 ವರ್ಷದ ಮಕ್ಕಳಿಗಾಗಿ ತುಳು ಮತ್ತು ಕನ್ನಡ ಭಕ್ತಿಗೀತೆ, 5 ರಿಂದ 15 ವರ್ಷದೊಳಗಿನ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ, 20 ವರ್ಷದ ಮೇಲಿನ ಮಹಿಳೆಯರು ಮತ್ತು ಪುರುಷರಿಗಾಗಿ ರಂಗೋಲಿ ಸ್ಪರ್ಧೆ, 1 ರಿಂದ 5 ವರ್ಷದ ವರೆಗಿನ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, 6 ರಿಂದ 10 ವರ್ಷದೊಳಗಿನ ಮಕ್ಕಳಿಗಾಗಿ ಬಾಲಕೃಷ್ಣ ಸ್ಪರ್ಧೆ ನಡೆಯಲಿದೆ. ಮಹಿಳೆಯರಿಗಾಗಿ ತುಳುನಾಡಿನ ಸಂಸ್ಕೃತಿಯ ಸೀರೆ ಮತ್ತು ಒಡವೆಗಳನ್ನು ಧರಿಸಿ ನಡೆಸುವ ಫ್ಯಾಷನ್ ಶೋ ಸ್ಪರ್ಧೆ ಮತ್ತು ಕವಿ ಗೋಷ್ಠಿ, 20 ವರ್ಷ…
ನೆನಪುಗಳು ಎಂದಾಗ ಮೊದಲು ಕಣ್ಣ ಮುಂದೆ ಬರುವುದು ಬಾಲ್ಯ ಜೀವನ, ಆಟ ಪಾಠ. ಅದೆಷ್ಟು ಸುಂದರ ಆ ದಿನಗಳು. ಯಾವುದೇ ಜವಾಬ್ದಾರಿ, ಮೋಸ ವಂಚನೆ ತಿಳಿಯದೆ ಸಂತೋಷದಿಂದ ಕಳೆದ ಕ್ಷಣಗಳವು. ನಾವು ಮಕ್ಕಳಾಗಿರುವಾಗ ಯಾವಾಗ ದೊಡ್ಡವರಾಗುತ್ತೇವೋ ಎಂದು ಅಂದುಕೊಳ್ಳುತ್ತಿದ್ದೆವು. ಆದರೆ ಈಗ ಮತ್ತದೇ ಆ ಬಾಲ್ಯವೇ ಬೇಕೆಂದೆನಿಸಿದೆ. ಅಪ್ಪ ಅಮ್ಮನ ಜತೆ ಜಗಳವಾಡಿ ಹತ್ತು ರೂಪಾಯಿಯ ನೋಟನ್ನು ತೆಗೆದುಕೊಂಡು ಅದರಲ್ಲಿ ದೊರೆತ ಚಾಕಲೇಟ್ ಅನ್ನು ತನ್ನ ಜತೆ ಇದ್ದ ಗೆಳೆಯರೊಡನೆ ಕೂಡಿ ತಿಂದು ಆನಂದ ಪಟ್ಟ ಆ ಕ್ಷಣಗಳು ಎಂದಿಗೂ ಮಾಸದು. ಮೊದಲ ಬಾರಿಗೆ ಅಪ್ಪ ಅಮ್ಮನನ್ನು ಬಿಟ್ಟು ಶಾಲೆಗೆ ಹೋಗಬೇಕೆಂದರೆ ಮನದಲ್ಲಿ ಅದೇನೋ ಕಸಿವಿಸಿ. ನೀಲಿ ಬಿಳಿ ಸಮವಸ್ತ್ರವನ್ನು ಧರಿಸಿ, ಬ್ಯಾಗಿಗೆ ಪುಸ್ತಕ, ಪೆನ್ಸಿಲ್ ಮುಂತಾದವುಗಳನ್ನು ತುಂಬಿಸಿಕೊಂಡು ಶಾಲೆಗೆ ಹೊರಟಾಗ ಅಮ್ಮನ ಕಣ್ಣೀರ ವಿದಾಯ ಆದರೂ ಮುಖದಲ್ಲೇನೋ ಒಂದು ಮಂದಹಾಸ. ನಲಿ ಕಲಿ ತರಗತಿಯನ್ನು ಪ್ರವೇಶಿಸಿದಾಗ ಕಂಡ ಹೊಸ ಹೊಸ ಮುಖಗಳಿಂದ ಬೇಸರವಾಗಿ ಕಣ್ಣೀರು ಹಾಕಿದಾಗ ಟೀಚರ್ ಬಂದು ಸಮಾಧಾನಪಡಿಸಿ…














