Author: admin
ಆಳ್ವಾಸ್ ಆಂಗ್ಲ ವಿಭಾಗದ ಗ್ಲಿಸ್ಟನ್ ವೇದಿಕೆ ಉದ್ಘಾಟನೆ ಮತ್ತು ಆಳ್ವಾಸ್ ಇಂಗ್-ಗೈಡ್ ಯೂಟ್ಯೂಬ್ ಚಾನೆಲ್ಗೆ ಚಾಲನೆ
ವಿದ್ಯಾಗಿರಿ: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ ವಿಷಯಗಳಲ್ಲಿ ಮಾತ್ರ ನೈಪುಣ್ಯರಾಗದೆ ಹೊಸ ಹೊಸ ವಿಷಯಗಳನ್ನು ಅನ್ವೇಷಿಸುತ್ತಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಇಂಗ್ಲಿಷ್ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ‘ಗ್ಲಿಸ್ಟನ್ ಸಾಹಿತ್ಯ ವೇದಿಕೆ’ ಮತ್ತು ‘ಇಂಗ್ಲಿಷ್ ಪ್ರಾಕ್ಟಿಸ್ ಸರ್ಟಿಫಿಕೇಟ್ ಕೋರ್ಸ್’ ಹಾಗೂ ‘ಆಳ್ವಾಸ್ ಇಂಗ್-ಗೈಡ್’ ಯೂಟ್ಯೂಬ್ ಚಾನೆಲ್ ಅನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆಯನ್ನು ಸುಲಭಗೊಳಿಸಲು ಈ ಚಾನೆಲ್ ಸಹಾಯಕವಾಗಲಿದೆ ಎಂದರು. ನಮ್ಮನ್ನು ನಾವೇ ಸರ್ವ ರೀತಿಯಲ್ಲಿ ಧೃಡಗೊಳಿಸಲು ಸಂವಹನ ಸಹಕಾರಿಯಾಗಿದೆ. ಪರಿಣಾಮಕಾರಿ ಸಂವಹನವು ಭಾಷಾ ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಕರ್ಜೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕ ರಾಜೇಶ್ ಆನಂದ್ ಮಾತನಾಡಿ, ಸಾಹಿತ್ಯ ಮತ್ತು ಭಾಷೆ ಎರಡು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಸಾಹಿತ್ಯವು ಭಾಷಾ ಪರಿಪೂರ್ಣತೆಯನ್ನು ಹೆಚ್ಚಿಸುತ್ತದೆ. ಭಾಷೆಯಿಂದ ಆಲಿಸುವ ಮತ್ತು ಮಾತನಾಡುವ ಕೌಶಲ ಅಭಿವೃದ್ಧಿಯಾಗುತ್ತದೆ ಎಂದು…
ಅಕ್ಟೋಬರ್ 16ರಿಂದ 20 ರ ವರೆಗೆ ಛತ್ತೀಸ್ಗಢದ ರಾಯ್ ಪುರದಲ್ಲಿ ಜರುಗಿದ ಆಲ್ ಇಂಡಿಯಾ ಫಾರೆಸ್ಟ್ ಕೀಡಾಕೂಟದಲ್ಲಿ ಸುಳ್ಯದ ಎಸಿಎಫ್ ಪ್ರವೀಣ್ ಶೆಟ್ಟಿಯವರು ಭಾಗವಹಿಸಿದ್ದು, ಶಾಟ್ ಫುಟ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ. ಹ್ಯಾಮರ್ ಥ್ರೋ ದಲ್ಲಿಯೂ ಕೂಡಾ ಭಾಗವಹಿಸಿ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.
ವಿದ್ಯಾಗಿರಿ: ಹಿಂದೆ ಕ್ರೀಡಾ ಸೌಲಭ್ಯಗಳ ಕೊರತೆ ಇದ್ದು, ಕ್ರೀಡಾಪಟುಗಳಿಗೆ ಸಾಧನೆ ಮಾಡಲು ಕಷ್ಟವಾಗುತ್ತಿತ್ತು. ಇಂದು ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ ಕಾಣುತ್ತಿದ್ದು, ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮಂಗಳವಾರ ಮೂಡುಬಿದಿರೆ ಸ್ವರಾಜ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ 2024 25 ವನ್ನು ಉದ್ಘಾಟಿಸಿ ಅವರು ಮಾತನಾಡಿದರು . ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕ ಸಿ.ಡಿ. ಜಯಣ್ಣ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯು ಕ್ರೀಡಾಕೂಟಗಳ ಆಯೋಜನೆಗೆ ಹೆಸರುವಾಸಿ. ಯಾವುದೇ ಕ್ರೀಡಾಕೂಟದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಕ್ರೀಡಾಪಟುಗಳು ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳುವುದು ಬಹಳ ಅವಶ್ಯಕ ಎಂದು ಸಲಹೆ ನೀಡಿದರು. ಶಿಸ್ತು, ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಯಶಸ್ಸು ಖಚಿತ ಎಂದರು. ಮೋಹನ ಆಳ್ವರು…
ಕರಾವಳಿ ಕರ್ನಾಟಕದ ತುಳುನಾಡಿನ ಮಂಗಳೂರಿನ ಶ್ರೀ ವಿಶ್ವನಾಥ್ ಶೆಟ್ಟಿ ಮತ್ತು ಶ್ರೀಮತಿ ಉಷಾ ವಿಶ್ವನಾಥ್ ಶೆಟ್ಟಿ ದಂಪತಿಗಳ ಪುತ್ರಿ ಕು|| ಸನ್ನಿಧಿ ವಿಶ್ವನಾಥ್ ಶೆಟ್ಟಿ ಪ್ರಸ್ತುತ ದುಬಾಯಿಯಲ್ಲಿ ನೆಲೆಸಿದ್ದಾರೆ. ವೃತ್ತಿಯಲ್ಲಿ ವಿಶ್ವನಾಥ್ಶೆ ಟ್ಟಿಯವರು ಮಲ್ಟಿ ನ್ಯಾಶನಲ್ ಕಂಪನಿಯ ಬ್ರ್ಯಾಂಚ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರವೃತ್ತಿಯಲ್ಲಿ ರಂಗಭೂಮಿ ನಟರು, ನಿರ್ದೇಶಕರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಕರ್ನಾಟಕ ಸಂಘ ಶಾರ್ಜಾದ ಉಪಾಧ್ಯಕ್ಷರಾಗಿದ್ದಾರೆ. ಜನ್ಮದಾತೆ ಶ್ರೀಮತಿ ಉಷಾ ಶೆಟ್ಟಿ ಯವರು ಸಹ ತನ್ನ ಗಾಯನ, ನೃತ್ಯಗಳಲ್ಲಿ ಪ್ರತಿಭೆಗಳ ಮೂಲಕ ಹಲವಾರು ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. ಸನ್ನಿಧಿ ಶೆಟ್ಟಿ ಬಾಲ್ಯದಿಂದಲೇ ತನ್ನಲ್ಲಿರುವ ಪ್ರತಿಭೆಯನ್ನು ವಿವಿಧ ಸಾಂಸ್ಕೃತಿಕ ವೇದಿಕೆಯಲ್ಲಿ ಅನಾವರಣ ಗೊಳಿಸುತ್ತಾ ಹೆಜ್ಜೆ ಗುರುತನ್ನು ಮೂಡಿಸಿದ್ದಾಳೆ. ಒಂದೂವರೆ ವಯಸಿನಲ್ಲೇ ಕಿನ್ನಿ ಪಿಲಿ (ಮರಿ ಹುಲಿವೇಷಧಾರಿಣಿಯಾಗಿ) ವೇದಿಕೆಮೇಲೆ ಪ್ರಥಮ ಪ್ರದರ್ಶನ ನೀಡಿದ್ದಾಳೆ. ತನ್ನ ಮೂರನೇಯ ವಯಸ್ಸಿನಲ್ಲಿ ದುಬಾಯಿಯ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯಲ್ಲಿ ತನ್ನ ಪುಟ್ಟ ಕಂಠಸಿರಿಯಲ್ಲಿ ಪ್ರಾರಂಭಿಸಿರುವ ಭಜನಾ ಸಂಗೀತ ಗಾಯನ ಇಂದಿಗೂ ಮುದುವರೆಸಿಕೊಂಡು ಬರುತ್ತಿದ್ದಾಳೆ. ನಾಲ್ಕನೆಯ…
ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿತು. ಗೋವಾ ತುಳು ಕೂಟವನ್ನು ಪುತ್ತೂರಿನ ಜನಪ್ರಿಯ ಶಾಸಕರು ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಭಾಷೆಯಾಗಿ ಜಾರಿಗೆ ತರುವ ಪ್ರಯತ್ನವನ್ನು ಮಾಡುತ್ತಿರುವ ಶ್ರೀ ಅಶೋಕ್ ಕುಮಾರ್ ರೈಯವರು ಉದ್ಘಾಟಿಸಿದರು. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬಯಿ ಮತ್ತು ಬೆಂಗಳೂರಿನಲ್ಲಿ ತುಳುವರು ತುಳುವರ ಸಂಘಗಳನ್ನು ಕಟ್ಟಿಕೊಂಡು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಅವರು ತುಳುನಾಡಿನಲ್ಲೇ ಇರುವಂತಹ ಅನುಭವವನ್ನು ಪಡೆದಿದ್ದಾರೆ. ಅದೇ ರೀತಿ ಗೋವಾದಲ್ಲೂ ತುಂಬಾ ಜನ ತುಳುವರಿದ್ದಾರೆ. ಅವರನ್ನು ಸಂಘಟಿಸುವ ಅವಕಾಶವಿರಲಿಲ್ಲ. ಯಾರಾದರೂ ತುಳುವಿನಲ್ಲಿ ಮಾತನಾಡುವುದನ್ನು ಕೇಳಿದರೆ ಯಾವ ಊರು? ಎಂದು ಕೇಳುವಷ್ಟು ಮಾತುಕತೆ ಮಾತ್ರ ನಡೆಯುತ್ತಿತ್ತು. ಅದಕ್ಕಿಂತ ಮುಂದೆ ಹೋಗುತ್ತಿರಲಿಲ್ಲ. ಹೀಗಾಗಿ ತುಳುವರನ್ನು…
ಪುತ್ತೂರು ತಾಲೂಕು ಬಂಟರ ಸಂಘ ಇದರ ಮಹಿಳಾ ವಿಭಾಗದ ಮಾಸಿಕ ಸಭೆ ಅಕ್ಟೋಬರ್ 17 ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿತು. ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ನಡೆದ ಬಂಟರ ಕ್ರೀಡಾ ಕೂಟದಲ್ಲಿ ಬಂಟರ ಮಹಿಳಾ ವಿಭಾಗ, ಪುತ್ತೂರು ಬಂಟರ ಸಂಘವನ್ನು ಪ್ರತಿನಿಧಿಸಿ, ತ್ರೋಬಾಲ್ ಆಟದಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡ ಬಗ್ಗೆ ಬಂಟರ ಮಹಿಳಾ ತಂಡಕ್ಕೆ ಸೂಕ್ತ ರೀತಿಯಲ್ಲಿ ತರಬೇತಿ ಹಾಗೂ ಮಾರ್ಗದರ್ಶನ ನೀಡುತ್ತಿರುವ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರೇಮನಾಥ ಶೆಟ್ಟಿ ಕಾವು ಇವರನ್ನು ಗೌರವಿಸಲಾಯಿತು. ಹಾಗೆಯೇ ಆಟಗಾರ್ತಿಯರನ್ನು ಮತ್ತು ಬಂಟರ ಮಹಿಳಾ ವಿಭಾಗದ ಕ್ರೀಡಾ ಸಂಚಾಲಕರಾದ ಸಬಿತಾ ಭಂಡಾರಿ ಹಾಗೂ ಸ್ವರ್ಣಲತಾ ಜೆ ರೈ ಇವರನ್ನು ಅಭಿನಂದಿಸಲಾಯಿತು. ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಮತ್ತು ಹರಿಣಾಕ್ಷಿ ಜೆ ಶೆಟ್ಟಿ ಇವರ ಪುತ್ರಿ ಸಮೃದ್ಧಿ ಜೆ.…
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ ೧೬ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ. ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦ ನೇರ ಸೆಟ್ಗಳಿಂದ ಪ್ರೇರಣಾ ಕಾಲೇಜು ತಂಡವನ್ನು ಮಣಿಸಿ, ಪ್ರಶಸ್ತಿಯನ್ನು ತನ್ನಲ್ಲಿ ಉಳಿಸಿಕೊಂಡಿತು. ಉತ್ತಮ ಪ್ರದರ್ಶನ ನೀಡಿದ ಮಹಿಳಾ ತಂಡವು ತೃತೀಯ ಸ್ಥಾನ ಪಡೆಯಿತು. ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
‘ಯಜ್ಞದಂತೆ ಸರ್ವಸಮರ್ಪಣೆಯ ಭಾವ ಬದುಕಿನಲ್ಲಿ ಇರಲಿ’ ವಿದ್ಯಾಗಿರಿ: ಎಲ್ಲಾದರೂ ಇರಿ, ಹೇಗಾದರೂ ಇರಿ. ಭಾರತೀಯತೀಯತೆ ಎತ್ತಿ ಹಿಡಿಯಿರಿ. ಉತ್ತಮ ಜೀವನ ರೂಪಿಸಿಕೊಳ್ಳಲು ಭಾರತವೇ ಶ್ರೇಷ್ಠ ಎಂದು ಶ್ರೀ ಕ್ಷೇತ್ರ ಕಟೀಲಿನ ವಿದ್ವಾನ್ ಕಮಲಾದೇವಿ ಪ್ರಸಾದ ಆಸ್ರಣ್ಣ ಹೇಳಿದರು . ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಳ್ವಾಸ್ ಕಾಲೇಜು (ಸ್ವಾಯತ್ತ) ಸಂಸ್ಕೃತ ವಿಭಾಗ ಮತ್ತು ಪ್ರಜ್ಞಾ -ಜಿಜ್ಞಾಸಾವೇದಿ ಆಶ್ರಯದಲ್ಲಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಆರಂಭಗೊಂಡ ೭ ದಿನಗಳ “ಶ್ರೀಮದ್ ವಾಲ್ಮೀಕಿರಾಮಾಯಣ -ಶ್ರವಣಸಪ್ತಾಹ ” ಉದ್ಘಾಟಿಸಿ ಅವರು ಮಾತನಾಡಿದರು. ರಾಮಾಯಣ ಎನ್ನುವುದು ರಾಮ, ರಾಮಸ್ಯ, ಅಯಣಂ. ಅಂದರೆ ರಾಮ ನಡೆದ ದಾರಿಯಲ್ಲಿ ಸಾಗುವುದು ಎಂದರ್ಥ. ರಾಮಾಯಣ ಎಂಬ ಪೂಜ್ಯನೀಯ ಕಾವ್ಯವನ್ನು ಲೋಕಕ್ಕೆ ಕೊಡುಗೆಯಾಗಿ ನೀಡಿದ ಕೀರ್ತಿ ಶ್ರೀ ವಾಲ್ಮೀಕಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ರಾಮನ ಕಾಲದಲ್ಲಿ ಪ್ರಜಾಪ್ರಭುತ್ವ ಇಲ್ಲದ್ದಿದರೂ ಪ್ರಜೆಗಳು ರಾಮನ ಆದರ್ಶಗಳನ್ನು ಪರಿಪಾಲನೆ ಮಾಡುತ್ತಿದ್ದರು. ಕೇವಲ ರಾಮನ ಹೆಸರನ್ನು ಪೂಜಿಸುವುದಲ್ಲದೆ ರಾಮನ ನಿಜಗುಣ , ಆದರ್ಶಗಳ ಪರಿಪಾಲನೆ ಮಾಡುತ್ತಾ ಜೀವನವನ್ನು…
ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಬಿಎ ವಿದ್ಯಾರ್ಥಿ ಚಿರಾಗ್ ರೈ ಮೇಗಿನಗುತ್ತು ಅವರು ಅಕ್ಟೋಬರ್ 30ರಿಂದ ಚೆನ್ನೈಯಲ್ಲಿ ನಡೆಯಲಿರುವ ದಕ್ಷಿಣ ವಲಯ ವಿಶ್ವವಿದ್ಯಾಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಚಿರಾಗ್ ರೈ ಅವರು ಸರ್ವೆ ಗ್ರಾಮದ ಮೇಗಿನಗುತ್ತಿನಲ್ಲಿ ವಾಸವಾಗಿದ್ದು, ಇವರ ತಂದೆ ಯತೀಶ್ ರೈ ಮುಂಡೂರು ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿದ್ದಾರೆ. ತಾಯಿ ಯೋಗಿನಿ ರೈ ಮುಂಡೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದಾರೆ.
ಆರೋಗ್ಯವೇ ಭಾಗ್ಯ ಎನ್ನುವಂತೆ ನಮ್ಮ ಆರೋಗ್ಯವನ್ನು ಪ್ರಕೃತಿಯ ಬದಲಾವಣೆಗನುಗುಣವಾಗಿ ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ. ದಿನ ನಿತ್ಯದ ಜೀವನದಲ್ಲಿ ಪ್ರಾಯಕ್ಕೆ ಅನುಗುಣವಾಗಿ ಶರೀರಕ್ಕೆ ಆಗುವ ತ್ರಾಸದಾಯಕ ಸನ್ನಿವೇಶಳಿಗೆ ಹೊಂದಿಕೊಳ್ಳಬೇಕು. ಹಿರಿ ಪ್ರಾಯದಲ್ಲಿ ಒತ್ತಡಕ್ಕೆ ಒಳಗಾಗುವುದು ಸರ್ವೇ ಸಾಮಾನ್ಯ. ಆದರೆ ತಾಳ್ಮೆಯಿಂದ ವ್ಯವಹರಿಸುವ ಗುಣ ನಮ್ಮಲ್ಲಿರಬೇಕು. ವ್ಯಾಯಮ, ಕ್ರೀಡೆ ಮತ್ತು ಚಟುವಟಿಕೆಯಿಂದ ಇರುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳಬೇಕು. ಇಂದಿನ ಯಾಂತ್ರಿಕ ಜೀವನದಲ್ಲಿ ಯುವ ಮಕ್ಕಳು ಕೂಡಾ ಒತ್ತಡಕ್ಕೆ ಒಳಾಗಾಗುವುದನ್ನು ನಾವು ಕಾಣುತ್ತೇವೆ. ಇದು ಇಂದಿನ ಜೀವನ ಪದ್ದತಿಯಿಂದ ಆಗುವ ಪರಿಣಾಮಗಳಾಗಿವೆ. ಪ್ರಕೃತಿಯ ಬದಲಾವಣೆಗೆ ಹೊಂದಿಕೊಂಡು ದೈಹಿಕ ಮಾನಸಿಕ ಯೋಗ ಕ್ಷೇಮದೊಂದಿಗೆ ಆರೋಗ್ಯ ಕಾಪಾಡಿಕೊಳ್ಳುವ ದೃಡತೆ ನಮ್ಮಲ್ಲಿರಬೇಕು ಎಂದು ಪುಣೆಯ ಖ್ಯಾತ ವೈದ್ಯರಾದ ಡಾ. ಚಿತ್ತರಂಜನ್ ಶೆಟ್ಟಿ ನುಡಿದರು. ಬಂಟ್ಸ್ ಅಸೋಸಿಯೇಷನ್ ಪುಣೆ ಇದರ ವತಿಯಿಂದ ನವರಾತ್ರಿಯ ಪ್ರಯುಕ್ತ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಹಾಗೂ ದಾಂಡಿಯಾ ರಾಸ್ ಧಾರ್ಮಿಕ ಕಾರ್ಯಕ್ರಮವು ಅಕ್ಟೋಬರ್ 11 ರಂದು ಪುಣೆಯ ಕ್ಯಾಂಪ್ ನಲ್ಲಿಯ ಪೂನಾ ಕ್ಲಬ್…















