Author: admin

ಸುಬ್ರಮಣ್ಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ನೆಟ್ ಬಾಲ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದೆ. ತಂಡದಲ್ಲಿ ನಿಖಿತಾ, ಹರ್ಷಿತಾ, ಸಂಧ್ಯಾ, ಹೇಮ, ದಿವ್ಯ ಪ್ರತಿನಿಧಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಕ ಪ್ರೇಮಾನಾಥ ಶೆಟ್ಟಿ ಕಾವು ಕ್ರೀಡಾಪಟುಗಳನ್ನು ಗೌರವಿಸಿದರು.

Read More

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಗ್ರಾಮೀಣ ಪ್ರದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಯಾಗಿ ಸಮಾಜದಲ್ಲಿ ಗುರುತಿಸಿಕೊಂಡ ಹೆಗ್ಗಳಿಕೆಯ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳ ಜೀವನದ ಆಶಾಕಿರಣವಾಗಿ ಈಡೀ ರಾಜ್ಯವೇ ಹೆಮ್ಮೆಯಿಂದ ಗುರುತಿಸಿಕೊಂಡ ವಿದ್ಯಾಸಂಸ್ಥೆಯಾಗಿದೆ. ಕೇವಲ ಶಿಕ್ಷಣ ಮಾತ್ರವಲ್ಲದೆ ಸಾಂಸ್ಕೃತಿಕ, ಸಾಹಿತ್ಯ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಈಡೀ ರಾಷ್ಟವೇ ಗುರುತಿಸುವಂತಹ ಅದ್ಭುತ ಸಾಧನೆಯನ್ನು ಗಳಿಸಿದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ. ದಿನಾಂಕ ೦೭-೧೧-೨೦೨೫ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು, ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಕ್ಸಿಂಗ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯಶ್ಚಿತ್ ಎಸ್ ಶೆಟ್ಟಿ ವಿಜಯಶಾಲಿಯಾಗುವುದರ ಮೂಲಕ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಮೊದಲು ಹಲವಾರು ಕ್ರೀಡೆಗಳಾದ ಪುಟ್ಬಾಲ್, ವಾಲಿಬಾಲ್, ಥ್ರೋಬಾಲ್, ಕರಾಟೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುವುದು ಎಕ್ಸಲೆಂಟ್‌ನ ಸಾಧನೆ. ಈ ಸಾಧನೆಯ ಜೊತೆಗೆ ಬಾಕ್ಸಿಂಗ್ ಪಂದ್ಯದಲ್ಲಿಯೂ…

Read More

ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ 22 ನೇ ವಾರ್ಷಿಕೋತ್ಸವ ಸಮಾರಂಭವು ನವೆಂಬರ್ 9 ರವಿವಾರದಂದು ಅಪರಾಹ್ನ ಘಂಟೆ 2.30 ರಿಂದ ಬಾಣೆರ್ ನಲ್ಲಿರುವ ಬಂಟರ ಭವನದ ಓಣಿಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕ್ರತಿಕ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಶ್ರೀ ಗುರುದೇವ ದತ್ತ ಸಂಸ್ಥಾನಮ್ ಶ್ರೀ ದತ್ತಗುರು ವೀರಾಂಜನೇಯ ಸ್ವಾಮಿ ಕ್ಷೇತ್ರ ಒಡಿಯೂರಿನ ಪರಮ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾದ್ವಿ ಮಾತಾನಂದಮಯೀಯವರು ದಿವ್ಯ ಉಪಸ್ಥಿತರಿರುವರು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಪಾದುಕ ಪೂಜೆ, ಗುರುವಂದನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಭೆಯಲ್ಲಿ ಒಡಿಯೂರಿನ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳು ಮತ್ತು ಸಾದ್ವಿ ಮಾತಾನಂದಮಯಿಯವರು ಅಶೀರ್ವಚನದ ಮೂಲಕ ಜ್ಞಾನ ಸಂದೇಶ ನೀಡಲಿದ್ದಾರೆ. ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಅಜಿತ್ ಹೆಗ್ಡೆ ಕೆಂಜಾರು ಗುತ್ತು…

Read More

ವಿದ್ಯಾರಣ್ಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ ಪಿ ಶೆಟ್ಟಿ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ (SGFI) ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಯು ಶ್ರೀಯುತ ಪ್ರಕಾಶ್ ಶೆಟ್ಟಿ ಮತ್ತು ಶ್ರೀಮತಿ ಸಂಗೀತಾ ಪಿ ಶೆಟ್ಟಿ ದಂಪತಿಯರ ಪುತ್ರಿ. ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಯಾದಗಿರಿ ಜಿಲ್ಲೆ ಶಹಾಪುರದ ದಿಗ್ಗಿ ರೋಡ್ ಸರಕಾರಿ ಮಾದರಿ ಪದವಿ ಪೂರ್ವ ಕಾಲೇಜು ದಿಗ್ಗಿ ರೋಡ್ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ (ನ.4 ಮತ್ತು ನ.5) ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸಂಸ್ಥೆಯ…

Read More

ರೋಟರಿ ಕ್ಲಬ್ ಕಾರ್ಕಳ, ರೋಟರಿ ಆನ್ಸ್ ಕ್ಲಬ್ ಕಾರ್ಕಳ ಆಶ್ರಯದಲ್ಲಿ ಆರೋಗ್ಯಕ್ಕಾಗಿ ಸ್ವಚ್ಛತೆ ಮತ್ತು ಹದಿಹರೆಯದ ಸಮಸ್ಯೆಗಳ ಮಾಹಿತಿ ಕಾರ್ಯಕ್ರಮವು ಎಸ್.ವಿ.ಟಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಆರೋಗ್ಯವಂತ ಸಮಾಜಕ್ಕೆ ಸ್ವಚ್ಛ ಸಮಾಜ ಅತೀ ಮುಖ್ಯವಾಗಿದೆ. ಆದುದರಿಂದ ಸ್ವಚ್ಛತೆ ಬಗ್ಗೆ ಹಮ್ಮಿಕೊಂಡ ಮಾಹಿತಿ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ರೊ. ಡಾ. ದಿಶಾ ಕಿಶನ್ ರವರು ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ಮೂಲಕ ಹಾಗೂ ಹದಿಹರೆಯದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ವೇದಿಕೆಯಲ್ಲಿ ರೋಟರಿ ಡಿಸ್ಟ್ರಿಕ್ಟ್ ಛೇರ್ಮನ್ ಹರಿಪ್ರಕಾಶ್ ಶೆಟ್ಟಿ, ಎಸ್.ವಿ.ಟಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಮಾಲಿನಿ, ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಯಶವಂತಿ ಯಶೋಧರ್ ಅತಿಥಿಗಳನ್ನು ಪರಿಚಯಿಸಿದರು. ರೋಟರಿ ಕ್ಲಬ್ಬಿನ ಸದಸ್ಯರಾದ ವಿಜೇಂದ್ರ ಕುಮಾರ್ ಸುರೇಶ ನಾಯಕ್, ವಸಂತ್ ಎಂ, ಹರಿಚಂದ್ರ…

Read More

ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಾಜ್ಯಮಟ್ಟದ ವೇಟ್‌ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟ ಗಳಿಸಿದರು. ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮದುಲಿಂಗ ಎಂ (60 ಕೆ.ಜಿ. ವಿಭಾಗ)- ಚಿನ್ನ, ವಸಂತ್ ಕುಮಾರ್ ಸಿ.ಜಿ. (79 ಕೆ.ಜಿ. ವಿಭಾಗ)- ಚಿನ್ನ, ಸಾಯಿ ಹಿತೇಶ್ (94 ಕೆ.ಜಿ. ವಿಭಾಗ)- ಚಿನ್ನ, ಹರ್ಷ ಸಿ.ಆರ್ (110+ ಕೆ.ಜಿ. ವಿಭಾಗ)-ಚಿನ್ನ ಹಾಗೂ ಹರ್ಷಿತಾ (69 ಕೆ.ಜಿ. ವಿಭಾಗ) ಕಂಚಿನ ಪದಕದೊಂದಿಗೆ ಒಟ್ಟು 4 ಚಿನ್ನ ಹಾಗೂ 1 ಕಂಚಿನ ಪದಕ ಗಳಿಸಿದರು. ವಿಟಿಯು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್‌ನ ನೈದಿಲ್ ಪೂಜಾರಿ (70 ಕೆ.ಜಿ. ವಿಭಾಗ) ಚಿನ್ನದ ಪದಕದೊಂದಿಗೆ ಮಿಸ್ಟರ್ ವಿಟಿಯು ‘ಮೋಸ್ಟ್ ಮಸ್ಕುಲರ್ ಮ್ಯಾನ್’ ಪಟ್ಟ ಪಡೆದರು. ಸೋಹಮ್ ಕುಡಚಿ (85 ಕೆ.ಜಿ. ವಿಭಾಗ) ಚಿನ್ನದ ಪದಕ ಪಡೆದರೆ, ಜಗದೀಶ್ ಗೌಡ (85 ಕೆಜಿ ವಿಭಾಗ)- ಬೆಳ್ಳಿಯ ಪದಕ, ವಸಂತ್…

Read More

ನಾಗರಾಜ್ ಬಿ ಶೆಟ್ಟಿ ಅವರು ತನ್ನ ವಿಚಕ್ಷಣ ಮತಿಯಿಂದ ಹಣಕಾಸು ಕ್ಷೇತ್ರದಲ್ಲಿ ಬಹು ಎತ್ತರದ ಸ್ಥಾನ ಗಳಿಸಿದವರು. ಎಂ.ಬಿ.ಎ, ಎಲ್.ಎಲ್.ಬಿ ಹಾಗೂ ಡಿ.ಲಿಟ್ ಪಡೆದ ಅಪರೂಪರ ವ್ಯಕ್ತಿತ್ವ ಇವರದ್ದಾಗಿದೆ. ಬಹುಮುಖಿ ಸಾಧಕರಾಗಿ ಬಹು ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಮನುಷ್ಯ ಸಂಕಲ್ಪ ಮಾಡಿದರೆ ಏನೆಲ್ಲಾ ಸಾಧಿಸಬಹುದೆನ್ನುವುದನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ. ಅಖಿಲ ಭಾರತ ಮಾನವ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯ ಕುರಿತ ಸಂಘಟನೆಯಲ್ಲಿ ಉನ್ನತ ಸ್ಥಾನದಲ್ಲಿ ಕಾರ್ಯ ನಿರ್ವಹಿಸಿದ ಹೆಗ್ಗಳಿಕೆ ಇವರಿಗಿದೆ. ಅವೆನ್ ಸ್ಪ್ರಿಂಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಓಪ್ಟಿನ್ ಬಿ2ಬಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಲ್ಲಿ ಕ್ಯಾರಿಯರ್ ಹಾಗೂ ಲೈಫ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬ್ಯಾಂಕಿಂಗ್, ತಂತ್ರಜ್ಞಾನ, ಆಡಳಿತ ಕುರಿತು ವಿಸ್ತೃತ ಅಧ್ಯಯನ ಮಾಡಿರುವ ನಾಗರಾಜ್ ಶೆಟ್ಟಿ ಅವರು ತನ್ನ ಬಿಡುವಿಲ್ಲದ ಕಾಯಕದ ಕಾರ್ಯಕ್ಷೇತ್ರದಲ್ಲಿ ಯಶ ಸಾಧಿಸುವುದರ ಮೂಲಕ ಬಂಟ ಸಮುದಾಯದ ಕಣ್ಮಣಿಯಾಗಿ ಪ್ರತಿಯೊಬ್ಬರ ಪ್ರೀತಿ ಅಭಿಮಾನಗಳಿಗೆ ಪಾತ್ರರಾಗಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ರಾಂಕ್ ವಿಜೇತರಾದ ಶೆಟ್ಟಿ ಅವರು ವಾಣಿಜ್ಯ,…

Read More

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ, ದಿ. ಮನೋಹರ ಪ್ರಸಾದ್ ಸಂಸ್ಕರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಕುತ್ತಾರಿನ ವೆಜಿನೇಷನ್ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಮಾತನಾಡಿ, ಕಳೆದ 28 ವರ್ಷಗಳಿಂದ ಅಬ್ಬಕ್ಕ ಉತ್ಸವ ಸಮಿತಿಯು ಅಬ್ಬಕ್ಕನ ಹೆಸರಿನಲ್ಲಿ ನಿರಂತರ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತುಳುನಾಡಿನ ವೀರ ರಾಣಿಯ ಹೆಸರು ಚಿರಸ್ಥಾಯಿಯಾಗುವಂತೆ ಮಾಡಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ಕಲಾವಿದ ಕದ್ರಿ ನವನೀತ ಶೆಟ್ಟಿ ಮಾತನಾಡಿ, ಪತ್ರಿಕಾರಂಗದಲ್ಲಿ ದಿ. ಮನೋಹರ್ ಪ್ರಸಾದ್ ಅವರ ಸಾಧನೆ ಅವಿಸ್ಮರಣೀಯ. ಅವರ ಪ್ರತಿಭೆ, ಶ್ರಮ ಮತ್ತು ಬರವಣಿಗೆಯ ಶೈಲಿ ಯುವ ಪತ್ರಕರ್ತರಿಗೆ ಪ್ರೇರಣೆ ಆಗಿದೆ ಎಂದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ ಕೊಣಾಜೆ, ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ನ ಉಳ್ಳಾಲ ಘಟಕದ ಅಧ್ಯಕ್ಷ ರಾಜೇಶ್ ಉಳ್ಳಾಲ್ ಮುಖ್ಯ ಅತಿಥಿಗಳಾಗಿ…

Read More

ಪಾವಂಜೆ ಮೇಳದ ಕಲಾವಿದ, ಪ್ರಬಂಧಕ “ಯಕ್ಷ ರಾಮ” ಬಿರುದಾಂಕಿತ ಮಾಧವ ಕೊಳತ್ತಮಜಲು ಅವರಿಗೆ ಕದ್ರಿ ದೇವಸ್ಥಾನದಲ್ಲಿ ನಡೆದ ಕದ್ರಿ ಯಕ್ಷ ಬಳಗದ ಪಾವಂಜೆ ಮೇಳದ ಸೇವೆ ಆಟದ ವೇದಿಕೆಯಲ್ಲಿ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಹಿರಿಯ ವೈದ್ಯ ಡಾ. ಜಯಶಂಕರ್ ಮಾರ್ಲ, ಉದ್ಯಮಿ ಜಿತೇಂದ್ರ ಕೊಟ್ಟಾರಿ, ದಿವಾಕರ ಶೆಟ್ಟಿ, ಯಕ್ಷಗಾನ ಅಕಾಡೆಮಿ ಸದಸ್ಯ ವಿಜಯ ಕುಮಾರ್ ಮೊಯ್ಲೊಟ್ಟು, ಸಂಜಯ್ ಕುಮಾರ್ ಗೋಣಿಬೀಡು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕದ್ರಿ ಯಕ್ಷ ಬಳಗದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಅವರು ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಅವರ ಸ್ಮರಣೆ ಮಾಡಿದರು. ಅರ್ಚಕ ಕದ್ರಿ ರವಿ ಅಡಿಗ ಅವರು ಶನೀಶ್ವರನ ಕಥೆಯ “ಛಾಯಾ ನಂದನ” ನೂತನ ಪ್ರಸಂಗದ ಮೊದಲ ಪ್ರದರ್ಶನ ಆಕರ್ಷಣೀಯವಾಗಿ ಮೂಡಿ ಬಂದಿದ್ದು ಸಾವಿರಾರು ಪ್ರದರ್ಶನಗಳನ್ನು ಕಾಣುವಂತಾಗಲಿ ಎಂದು ಹರಸಿದರು. ಪ್ರಸಂಗ ಕರ್ತ ಕದ್ರಿ ನವನೀತ ಶೆಟ್ಟಿ ಅವರು ರಚಿಸಿದ “ಛಾಯಾ ನಂದನ “ಕೃತಿ ಯ…

Read More

ಖ್ಯಾತ ಲೇಖಕ ಹಾಗೂ ಸಾಹಿತಿ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿಯವರಿಗೆ ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನೀಡಿ ಸಮ್ಮಾನಿಸಲಾಯಿತು. ವಿಜಯ ಬ್ಯಾಂಕ್ ನ ನಿವೃತ್ತ ಮುಖ್ಯ ಪ್ರಬಂಧಕರಾದ ಅವರು ಎಂಎ, ಎಲ್.ಎಲ್.ಬಿ, ಸಿಎ ಐಐಬಿ ಪದವೀಧರರು. ಅವರ 400ಕ್ಕೂ ಅಧಿಕ ಆರ್ಥಿಕತೆ, ಬ್ಯಾಂಕಿಂಗ್, ಶೈಕ್ಷಣಿಕ, ಪ್ರಜಾಪ್ರಭುತ್ವ, ಸಂವಿಧಾನ, ಪ್ರಕೃತಿ ಮತ್ತು ಪರಿಸರ ಹಾಗೂ ಇತರ ವೈಚಾರಿಕ ಕನ್ನಡ ಮತ್ತು ಆಂಗ್ಲ ಭಾಷೆಯ ಬರಹಗಳು ಪ್ರಮುಖ ದಿನಪತ್ರಿಕೆ, ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಹಲವು ಸಂಘ ಸಂಸ್ಥೆ, ಪ್ರತಿಷ್ಠಿತ ಶಿಕ್ಷಣ ಸಂಸ್ಥೆ, ಆಕಾಶವಾಣಿ, ದೂರದರ್ಶನಗಳಲ್ಲಿ ಆರ್ಥಿಕತೆ, ಪರಿಸರ, ಶಿಕ್ಷಣ, ಸಮಾಜ, ನೀತಿ ಸಂಬಂಧಿತ ವಿಚಾರಗೋಷ್ಠಿ ಉಪನ್ಯಾಸ ನೀಡಿದ್ದಾರೆ. ಸಂದರ್ಶಕ ಉಪನ್ಯಾಸಕರೂ ಆಗಿದ್ದಾರೆ. ಐದು ಪ್ರಮುಖ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿದ್ದಾರೆ. ಪ್ರಕೃತಿಯೇ ಮಹಾಮಾತೆ, ಬದುಕಿನ ಹಾದಿ, ನೋಬೆಲ್ ಪುರಸ್ಕೃತ ಟಾಗೋರರ ಆಂಗ್ಲ ಗೀತಾಂಜಲಿಯ ಕನ್ನಡಾನುವಾದ, ವ್ಯಾಲ್ಯೂಸ್ ಆ್ಯಂಡ್ ವಾಯ್ಸಸ್, ಲ್ಯಾಂಗ್ವೇಜ್ ಆಫ್ ದಿ ನೇಚರ್ ಎಂಬ ಐದು…

Read More