Author: admin
ನಮ್ಮ ಮನಸ್ಸಿನಲ್ಲಿ ಕೆಟ್ಟ ವಿಚಾರಗಳು, ತಪ್ಪುಗಳು, ಅಪರಾಧಿ ಭಾವ ಬರುವುದು ತಪ್ಪಲ್ಲ. ಆದರೆ ಅದನ್ನು ಮನಸ್ಸಿನಲ್ಲಿಯೇ ಇಟ್ಟುಕೊಂಡು ಅದರ ಕುರಿತಾಗಿಯೇ ಯೋಚಿಸುತ್ತಿದ್ದರೆ, ಮನಸ್ಸು ದುರ್ಬಲಗೊಳ್ಳುತ್ತದೆ. ಸಮಸ್ಯೆಗಳ ಕುರಿತು ಹೆಚ್ಚಾಗಿ ಚಿಂತಿಸದೆ, ಮಲಗುವ ಮುನ್ನ ಎಲ್ಲಾ ಚಿಂತೆಗಳನ್ನು ಹೊರಹಾಕಿ ಮಲಗಿದರೆ, ಹೊಸ ದಿನವನ್ನು ಹೊಸದಾಗಿ ಆರಂಭಿಸಬಹುದು. ಆಗ ದೇಹ ಮನಸ್ಸು ಎರಡೂ ಸ್ವಸ್ಥವಾಗಿರುತ್ತದೆ. ಒಂದು ಊರಿನಲ್ಲಿ ಒಬ್ಬ ಯುವಕನಿದ್ದ. ಆತ ಸಣ್ಣ ಪುಟ್ಟ ವಿಷಯಗಳನ್ನು ಯೋಚಿಸುತ್ತಾ ಮತ್ತಷ್ಟು ಚಿಂತೆಗಳನ್ನು ತುಂಬಿಸಿಕೊಂಡು ಹೊರೆ ತಾಳಲಾರದೆ ದಿನವಿಡೀ ಒದ್ದಾಡುತ್ತಿದ್ದ. ಕೆಲವೊಮ್ಮೆ ತನ್ನನ್ನೇ ತಾನೇ ಬೈದುಕೊಳ್ಳುತ್ತಿದ್ದ. ಯಾಕೆ ಹುಟ್ಟಿಸಿದೆ ? ಯಾಕೆ ಇಂಥಹ ಕಷ್ಟ ಕೊಟ್ಟೆ ಎಂದು ದೇವರನ್ನು ಕೇಳುತ್ತಿದ್ದ. ತನ್ನ ಜಾತಕ, ರಾಶಿ, ನಕ್ಷತ್ರ, ಹುಟ್ಟಿದ ಘಳಿಗೆ, ಯಾವುದೂ ಸರಿ ಇಲ್ಲ. ಅದೃಷ್ಟವು ನನಗೆ ಸಮಯದಲ್ಲಿ ಕೈಕೊಡುತ್ತದೆ. ಹೀಗೆ ಹೇಳುತ್ತಲೇ ಮತ್ತೆ ಇದನ್ನೇ ಮನಸ್ಸಿನಲ್ಲಿ ಯೋಚಿಸುತ್ತಿದ್ದ. ಕೆಲವೊಮ್ಮೆ ಆಡಿದ ವ್ಯಂಗ್ಯ ಮಾತು, ಮಾಡಿದ ಅವಮಾನ ಇವುಗಳ ಸುತ್ತಲೇ ಯೋಚನೆಯನ್ನು ಹರಿಬಿಡುತ್ತಾ ಅತಿಯಾಗಿ ಅವರ ಮೇಲೆ ದ್ವೇಷ…
“ಸ್ವಾತಂತ್ರ್ಯ ಪೂರ್ವದಲ್ಲಿಯೇ ಬ್ರಿಟಿಷ್ ನಿವೃತ್ತ ಅಧಿಕಾರಿ ಪೋವೆಲ್ ರಿಂದ ಸ್ಥಾಪಿತವಾದ ಸ್ಕೌಟ್ಸ್ ಆಂಡ್ ಗೈಡ್ಸ್ ಆಂದೋಲನ ಇಂದು ಜಗತ್ತಿನಾದ್ಯಂತ ಪಸರಿಸಿ ಯುವ ಸಮುದಾಯವನ್ನು ಅದರಲ್ಲಿಯೂ ವಿಶೇಷವಾಗಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ದೈಹಿಕವಾಗಿ ಬೌದ್ಧಿಕವಾಗಿ ಸದೃಢವಾಗಿಸಿ ಉತ್ತಮ ಪ್ರಜೆಗಳಾಗಿ ರೂಪಿಸಲು ಸಹಕಾರಿಯಾಗಿದೆ. ಇಂದು ಭಾರತದ ಬಹುಪಾಲು ರಾಜ್ಯಗಳಲ್ಲಿ ತರಬೇತಿ ನಡೆಯುತ್ತಿದ್ದು ಬಹುಪಾಲು ಶಾಲೆಗಳಲ್ಲಿ ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಪಾಲ್ಗೊಂಡು ಉತ್ತಮ ಶಿಸ್ತು ನಡತೆಗಳನ್ನು ಕಲಿತು ಪಠ್ಯ ಮತ್ತು ಪಠ್ಯೇತರ ವಿಭಾಗದಲ್ಲೂ ಉತ್ತಮ ಸಾಧನೆ ತೋರಿಸುತ್ತಿದ್ದಾರೆ. ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಲ್ಲಿಯೇ ಸ್ಕೌಟ್ಸ್ ಆಂಡ್ ಗೈಡ್ಸ್ ಪರಿಚಯ ಮಾಡುವುದರಿಂದ ಉತ್ತಮ ಶಿಸ್ತು, ಗುಣ ನಡತೆಗಳನ್ನು ಜೀವನದುದ್ದಕ್ಕೂ ರೂಡಿಸಿಕೊಳ್ಳಲು ಸಹಕಾರಿಯಾಗುತ್ತದೆ” ಎಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಡಳಿತ ಮಂಡಳಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಸ್ಕೌಟ್ಸ್ ಆಂಡ್ ಗೈಡ್ಸ್ ಸಂಸ್ಥಾಪಕರ ದಿನಾಚರಣೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮತ್ತು ಸರ್ವಧರ್ಮ…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2025-26ನೇ ಸಾಲಿನ, 6 ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆ ವಿದ್ಯಾಗಿರಿ ಹಾಗೂ ಪುತ್ತಿಗೆ ಆವರಣದಲ್ಲಿ ಭಾನುವಾರ ನಡೆಯಿತು. ರಾಜ್ಯಾದ್ಯಾಂತ 32 ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಗಡಿಭಾಗದ ಜಿಲ್ಲೆಯಾದ ಕಾಸರಗೋಡು ಹಾಗೂ ಮಹಾರಾಷ್ಟ್ರದ ಗಡಿಜಿಲ್ಲೆಗಳಿಂದ 20134 ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ 18634 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಂತರ ಮಾತನಾಡಿದ ಅವರು ಈ ಕನ್ನಡನಾಡಿನಲ್ಲಿ ಜನ್ಮತಾಳಿ, ಬದುಕನ್ನ ನಡೆಸಿ, ಸಂಪಾದನೆಯನ್ನು ಗಳಿಸಿದ ನಮಗೆ ಈ ಕನ್ನಡ ನಾಡಿನ ಋಣ ಎಷ್ಟಿದೆ ಎಂಬುದನ್ನು ನಾವೆಲ್ಲ ಅರಿಯಬೇಕಿದೆ. ನಮ್ಮೆಲ್ಲರ ಕನ್ನಡದ ಬಗೆಗಿನ ಪ್ರೀತಿ ವೇದಿಕೆಯಲ್ಲಿ ಭಾಷಣ ಮಾಡಲು ಮಾತ್ರ ಸೀಮಿತವಾಗಿದೆ.ರಾಜಕಾರಣಿಗಳು ಅಥವಾ ಕನ್ನಡದ ಸಂಘ ಸಂಸ್ಥೆಗಳು ಕನ್ನಡಕ್ಕೆ ಕಿಂಚಿತ್ತು ಸಮಸ್ಯೆಯಾದರೂ ಗಂಭೀರವಾಗಿ…
ಬಂಟ್ಸ್ ಬಹ್ರೈನ್ ಸಂಘಟನೆಯ ನೂತನ ಅಧ್ಯಕ್ಷರಾಗಿ ಡಾ. ಮಿಥುನ್ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸದಸ್ಯರ ವಾರ್ಷಿಕ ಸಭೆಯಲ್ಲಿ ಡಾ. ಭಂಡಾರಿ ಅವರು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಅವರೊಂದಿಗೆ ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರೋಹನ್ ಶೆಟ್ಟಿ, ಸಹ ಕಾರ್ಯದರ್ಶಿಯಾಗಿ ಸುಕೇಶ್ ಶೆಟ್ಟಿ, ಖಜಾಂಚಿಯಾಗಿ ಪ್ರಶಾಂತ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ನಿತಿನ್ ಶೆಟ್ಟಿ, ಸಹಾಯಕ ಕ್ರೀಡಾ ಕಾರ್ಯದರ್ಶಿಯಾಗಿ ಗಣೇಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಯಕ್ಷಿತ್ ಶೆಟ್ಟಿ, ಸಹಾಯಕ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಧನಂಜಯ್ ರೈ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ದೀಪ ರವೀಂದ್ರ ಶೆಟ್ಟಿ, ನೂತನ ಆಡಲಿತ ಮಂಡಳಿಯಲ್ಲಿ ಸೇವೆ ಸಲ್ಲಿಸಲಿದ್ದಾರೆ. ನೂತನ ಆಡಳಿತ ಮಂಡಳಿಯು ಸತ್ಯನಾರಾಯಣ ಪೂಜೆಯೊಂದಿಗೆ ಕಾರ್ಯಾರಂಭ ಮಾಡಲಿದೆ.
ಕುಂದಾಪುರದ ಎಸ್.ಎಸ್. ಶೆಟ್ಟಿ ಸಮೂಹ ಸಂಸ್ಥೆಗಳ ಅಂಗ ಸಂಸ್ಥೆಯಾದ ಶ್ರೀ ಸನ್ನಿಧಿ ಟ್ರಾವೆಲ್ಸ್ ಬಸ್ಸುಗಳು ಮಾರ್ಚ್ 2 ರಂದು ಆರಂಭಗೊಂಡಿದೆ. ಉದ್ಯಮಿ ಸತೀಶ್ ಶೆಟ್ಟಿ ಹಾಗೂ ಸನ್ನಿಧಿ ಎಸ್. ಶೆಟ್ಟಿ ಮಾಲಕತ್ವದ ಶ್ರೀ ಸನ್ನಿಧಿ ಟ್ರಾವೆಲ್ಸ್ ನ ಬಸ್ಸುಗಳು ಕುಂದಾಪುರ, ಬೈಂದೂರು, ಕೊಕ್ಕರ್ಣೆ, ಕೊಲ್ಲೂರಿನಿಂದ ಬೆಂಗಳೂರಿಗೆ ಮಾರ್ಚ್ 2 ರಿಂದ ಪ್ರಯಾಣ ಆರಂಭಿಸಿದ್ದು, ವೆಬ್ಸೈಟ್, ರೆಡ್ಬಸ್, ಅಬಿಬಸ್, ಟ್ರಾವೆಲ್ಯಾರಿ, ಪೇಟಿಎಂ, ಫ್ಲಿಪ್ಕಾರ್ಟ್ ಮೂಲಕ ಮುಂಗಡ ಟಿಕೆಟ್ ಕಾದಿರಿಸಬಹುದು. ಸನ್ನಿಧಿ ಟ್ರಾವೆಲ್ಸ್ ಆಪ್ ಮೂಲಕ ಟಿಕೆಟ್ ಮಾಡಿದರೆ ಶೇ.15, ಸನ್ನಿಧಿ ಟ್ರಾವೆಲ್ಸ್ ವೆಬ್ಸೈಟ್ ಮೂಲಕ ಮುಂಗಡ ಟಿಕೆಟ್ ಕಾದಿರಿಸಿದರೆ ಶೇ.10 ರಿಯಾಯಿತಿ ಪಡೆಯಬಹುದು.ವಾರಾಂತ್ಯ, ಹಬ್ಬ ಹರಿ ದಿನಗಳಲ್ಲಿ ಕೂಡಾ ಪ್ರಯಾಣ ದರದಲ್ಲಿ ಏರಿಕೆ ಇರುವುದಿಲ್ಲ. ಬಸ್ಗಳು ಶಿವಮೊಗ್ಗ, ಧರ್ಮಸ್ಥಳ, ಮಂಗಳೂರು ಮಾರ್ಗದಲ್ಲಿ ಸಂಚರಿಸಲಿವೆ. ಸ್ಲೀಪರ್ ಕೋಚ್ ರಾಜ್ಯದಲ್ಲೇ ಪ್ರಥಮ ಬಾರಿಗೆ ಅತ್ಯಧುನಿಕ ಸೌಲಭ್ಯಗಳೊಂದಿಗೆ ವಿಶೇಷವಾಗಿ ವಿನ್ಯಾಸಪಡಿಸಿ ಮೂತ್ರಾಲಯದೊಂದಿಗೆ ಶೌಚಾಲಯವನ್ನೂ ಒಳಗೊಂಡಿರುವುದು ಈ ಬಸ್ಗಳ ವಿಶೇಷವಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಗರಿಷ್ಟ ಆದ್ಯತೆ ನೀಡಲಾಗಿದ್ದು, ೨೪…
ಸುಮಾರು 65 ಕೋಟಿ ರೂಪಾಯಿ ವೆಚ್ಚದಲ್ಲಿ ಇಳಕಲ್ ಕೆಂಪು ಶಿಲೆಯ ಗರ್ಭಗುಡಿ ಸಹಿತ ಸಂಪೂರ್ಣ ಪುನರ್ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಉಚ್ಚಂಗಿ ಹಾಗೂ ಸ್ವರ್ಣ ಗದ್ದುಗೆಯಲ್ಲಿ ಕಾಪು ಶ್ರೀ ಮಾರಿಯಮ್ಮನ ಪುನರ್ ಪ್ರತಿಷ್ಠೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ರತ್ನ ಖಚಿತ ಸ್ವರ್ಣ ಗದ್ದುಗೆಯಲ್ಲಿ ಕಾಪು ಶ್ರೀ ಮಾರಿಯಮ್ಮ ವಿರಾಜ ಮಾನಳಾಗುವುದರೊಂದಿಗೆ ಕಾಪು ಮಾರಿಯಮ್ಮನ ಕ್ಷೇತ್ರದಲ್ಲಿ ಸ್ವರ್ಣ ಯುಗ ಆರಂಭಗೊಂಡಿತು. ಕೊರಂಗ್ರಪಾಡಿ ವೇದಮೂರ್ತಿ ಕೆ.ಜಿ. ರಾಘವೇಂದ್ರ ತಂತ್ರಿ ಮಾರ್ಗದರ್ಶನದಲ್ಲಿ ಪ್ರಧಾನ ತಂತ್ರಿಗಳಾದ ಜ್ಯೋತಿಷ್ಯ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ನೇತೃತ್ವದಲ್ಲಿ ದೇವಳದ ಪ್ರಧಾನ ಆರ್ಚಕ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿ ಹಾಗೂ ವೈದಿಕ ವೃಂದದವರು ಬೆಳಗ್ಗೆ 11.05ರ ವೃಷಭ ಲಗ್ನ ಸುಮೂಹೂರ್ತದಲ್ಲಿ ಭಕ್ತಾದಿಗಳ ಸ್ವರ್ಣ ಕಾಣಿಕೆಯ ಮೂಲಕ ನಿರ್ಮಾಣಗೊಂಡಿರುವ ಸುಮಾರು 15 ಕೋಟಿ ರೂ. ವೆಚ್ಚದ ರತ್ನ ಖಚಿತ ಸ್ವರ್ಣಗದ್ದಿಗೆ (ಮಹಾಸ್ವರ್ಣಪೀಠ)ಯಲ್ಲಿ ಶ್ರೀ ಮಾರಿಯಮ್ಮನನ್ನು ಪುನರ್ ಸ್ಥಾಪಿಸಲಾಯಿತು.ಇದಕ್ಕೂ ಮೊದಲು ಬಾಲಾಲಯ ತೆರವುಗೊಳಿಸಿ ಉಚ್ಚಂಗಿ ಸಹಿತ…
ಆರೋಗ್ಯ ಕಾಳಜಿ ಹಾಗೂ ರಕ್ಷಣೆಯ ಧ್ಯೇಯದೊಂದಿಗೆ ನಮ್ಮ ಕ್ಲಿನಿಕ್ ತೆರೆಯಲಾಗುತ್ತಿದ್ದು, ಗ್ರಾಮಸ್ಥರು ಹಾಗೂ ಅರ್ಹರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಭಾನುವಾರ ಉಪ್ಪುಂದ ಗ್ರಾಮದ ತಾರಪತಿ ಹಾಗೂ ತಗ್ಗರ್ಸೆಯ ವಸ್ರೆಯಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿದರು. ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ. ಎಸ್. ಸುರೇಶ್ ಶೆಟ್ಟಿ ಮಾತನಾಡಿ, ಇಂದು ಅನೇಕ ಸೌಲಭ್ಯಗಳು ನಮ್ಮ ಬಳಿಗೆ ಬರುತ್ತಿದೆ. ಅದರ ಸದುಪಯೋಗ ಮಾಡಿಕೊಳ್ಳಬೇಕು. ವ್ಯವಸ್ಥೆಯನ್ನು ಒದಗಿಸುವುದು ಎಷ್ಟು ಮುಖ್ಯವೋ ಅದನ್ನು ಅಷ್ಟೇ ಚೆನ್ನಾಗಿ ಬಳಸಿಕೊಳ್ಳುವುದು ಅವಶ್ಯಕ ಎಂದರು. ನಮ್ಮ ಕ್ಲಿನಿಕ್ ನಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳ 12 ಪ್ಯಾಕೇಜ್ ಗಳು ಲಭ್ಯವಿರಲಿದೆ. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ ಆರೈಕೆ, ಬಾಲ್ಯ ಮತ್ತು ಹದಿ ಹರೆಯದವರ ಸಮಗ್ರ ಆರೋಗ್ಯ ಸೇವೆಗಳು, ಸಾರ್ವತ್ರಿಕ ಲಸಿಕೆಗಳು, ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳು,…
ಮೂಡುಬಿದಿರೆ: 2024 ಡಿಸೆಂಬರ್ ನಲ್ಲಿ ನಡೆದ ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಗಳಾದ ಅನನ್ಯ ಕೆ.ಎ.(258), ಬಿ ಸುಹಾಸ್ ರಾವ್ (230), ವಂದನಾ ಎಸ್.ಸಿ.(213), ನಿತ್ಯಾ ಸಂಜೀವ ಕುಲಕರ್ಣಿ (204), ನಿಶಿತಾ ಸಿ ಶೆಟ್ಟಿ (203) ಮತ್ತು ತಸ್ಮಯ್ ಎಮ್ (201) ಸಿ.ಎಸ್. ಎಕ್ಸಿಕ್ಯೂಟಿವ್ ಮೊಡ್ಯುಲ್ 1 ರಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊAದಿಗೆ ಉತ್ತೀರ್ಣರಾಗಿದ್ದಾರೆ. ಜೊತೆಯಲ್ಲಿ ಧನ್ವಿ ಹೆಚ್ ಪೈ (150) ಸಿ.ಎಸ್. ಎಕ್ಸಿಕ್ಯೂಟಿವ್ ಮೊಡ್ಯುಲ್ 2 ರಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮತ್ತು ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಸಿ.ಎಸ್. ಸಂಯೋಜಕರು ಅಭಿನಂದಿಸಿದ್ದಾರೆ.
ಮೂಡುಬಿದಿರೆ: ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಫಿಸಿಯೋ ಕನೆಕ್ಟ್ – 2025 ವಿದ್ಯಾಗಿರಿಯ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತೇಜಸ್ವಿನಿ ಆಸ್ಪತ್ರೆಯ ಆರ್ಥೋಸ್ಕೊಪಿ ಹಾಗೂ ಸ್ಪೋರ್ಟ್ಸ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಸುಮಂತ್ ನಾಯಕ್, ಶಸ್ತçಚಿಕಿತ್ಸೆಯು ಆರೋಗ್ಯದ ಸಮಸ್ಯೆಗೆ ಪರಿಹಾರ ನೀಡಬಲ್ಲದು ಆದರೆ ನಿಜವಾದ ಸವಾಲು ರೋಗಿಯ ಚೇತರಿಕೆಯಲ್ಲಿ ಕಂಡುಬರುತ್ತದೆ. ಫಿಸಿಯೋತೆರಪಿಸ್ಟ್ಗಳು ಅಂತಹ ಸವಾಲುಗಳನ್ನು ಬಗೆಹರಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು. ಅದ್ಯಕ್ಷತೆ ವಹಿಸಿದ್ದ ಆಳ್ವಾಸ್ ಹೆಲ್ತ್ ಸೆಂಟರ್ನ ಪ್ರಸೂತಿ ತಜ್ಞೆ ಡಾ. ಹನಾ ಶೆಟ್ಟಿ ಮಾತನಾಡಿ, ಕಲಿಯುವಿಕೆಯು ಒಂದು ನಿರಂತರ ಪ್ರಕ್ರಿಯೆ.ಈ ವಿಚಾರ ಸಂಕಿರಣದ ಮೂಲಕ ಪ್ರತಿಯೊಬ್ಬರು ಸವಾಲನ್ನು ಅರಿಯುವ ಜೊತೆಗೆ, ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿ. ಜ್ಞಾನದ ವಿನಿಮಯವಾಗುವುದು ಅಗತ್ಯ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ನ ಪ್ರಾಧ್ಯಪಕ ಡಾ. ಪ್ರಭು ರಾಜ ಗಾಯಗಳ ಚೇತರಿಕೆಯಲ್ಲಿ…
ಮೂರು ಬೆಳೆ ಬೆಳೆಯುತ್ತಿದ್ದ ಸಮೃದ್ಧ ಗದ್ದೆ ಸಾಲು ಕಟ್ಟಪುಣಿಯಲ್ಲಿ ರಾರಾಜಿಸುತ್ತಿದ್ದ ತೆಂಗು ಕಂಗು ಪಚ್ಚೆಪೈರು ಪಲ್ಗುಣಿಯ ಅಮೃತ ಧಾರೆಯನ್ನು ಎಲ್ಲೆಮೂಲೆಗಳಿಗೆ ಹೊತ್ತು ಹರಿಸುವ ನೀರ ತೊರೆಗಳು ಬಗೆ ಬಗೆಯ ಜೀವ ವೈವಿಧ್ಯ. ಆ ಸ್ವರ್ಗ ಸದೃಶ ಪ್ರಕೃತಿಯ ನಡುವೆ ಸಿಂಹ ಗಾಂಭಿರ್ಯದಿಂದ ಕಂಗೊಳಿಸುತ್ತಿದ್ದ ನೆಲ್ಲಿದಡಿ ಗುತ್ತು. ಆ ಭೂಮಿಯ ಬುಲೆಸೆಲೆ, ಐಸಿರಿ, ಭೂಮಿ ಬಾರಗರ ಸತ್ಯ ಧರ್ಮ ನ್ಯಾಯ ಪರಿಪಾಲನೆ ಕಂಡು ಪಾರಲೆ ಗುತ್ತಿನ ದೈವ ಕಾಂತೇರಿ ಜುಮಾದಿ ಒಂದು ಕೋಣ ಕಟ್ಟುವ ಹಗ್ಗದ ನೆಪ ಹೇಳಿಕೊಂಡು ನೆಲ್ಲಿದಡಿ ಗುತ್ತಿನ ಚಾವಡಿಗೆ ಕಾಲಿಟ್ಟ. ಮುಂದೆ ನೆಲ್ಲಿದಡಿ ಗುತ್ತು ವೈಭವದ ಶಿಖರ ಚುಂಭಿಸಿತು. ಆ ಕಾಲಕ್ಕೆ ಸರ್ಪದ ವಿಷಕ್ಕೆ ಮದ್ದು ಕೊಟ್ಟು ವಿಷ ವೈದ್ಯರಾಗಿ ಪ್ರಖ್ಯಾತಿ ಪಡೆದಿದ್ದ ಸೂರಿಂಜೆ ಗುತ್ತಿನ ತ್ಯಾಂಪ ಶೆಟ್ಯಾಲ್ ತನ್ನ ಅಂತ್ಯಕಾಲದಲ್ಲಿ ಸಮಷ್ಟಿಯ ಹಿತಕ್ಕಾಗಿ ಒಂದು ಮಹತ್ ಕಾರ್ಯ ನಡೆಸಿದರು. ಅವರ ಬಳಿ ಸಾವಿರಾರು ಜನರ ಜೀವ ಉಳಿಸಿದ ವಿಷ ಹೀರುವ ಕಲ್ಲುಗಳಿದ್ದವು. ಅದರಲ್ಲಿ ಒಂದನ್ನು ಶಿಬರೂರು ಕೊಡಮಣಿತ್ತಾಯ…