Author: admin

ಬಂಟರ ಸಂಘ ಬಂಟ್ವಾಳ ತಾಲೂಕು ಯುವ ವಿಭಾಗದ 2025 -28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ನೂತನ ಯುವ ವಿಭಾಗದ ಅಧ್ಯಕ್ಷರಾಗಿ ಗೋಕುಲ್ ಭಂಡಾರಿ ಸಜೀಪ, ಉಪಾಧ್ಯಕ್ಷರಾಗಿ ರಂಜಿತ್ ಶೆಟ್ಟಿ ಗುಭ್ಯ, ಕಾರ್ಯದರ್ಶಿಯಾಗಿ ಸುನಾದ್ ರಾಜ್ ಶೆಟ್ಟಿ ಬೊಂಡಾಲ, ಕೋಶಾಧಿಕಾರಿಯಾಗಿ ರತನ್ ರೈ ಸರಪಾಡಿ, ಜೊತೆ ಕಾರ್ಯದರ್ಶಿಯಾಗಿ ಕುಮಾರಿ ಸುವೀಕ್ಷ ಭಂಡಾರಿ ಮುಡಿಪು ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಯುವ ವಿಭಾಗದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಹಾಗೂ ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಬಂಟರ ಸಂಘ ಬಂಟ್ವಾಳ ತಾಲೂಕಿನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರ್ವ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು. ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ರವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಪಾತ್ರ ಇನ್ನಷ್ಟು ಮಹತ್ತರವಾಗಿದೆ. ವಿದ್ಯಾರ್ಥಿಗಳಲ್ಲಿ ಮೌಲ್ಯಗಳು, ಸಂಸ್ಕಾರ, ಶಿಸ್ತು ಹಾಗೂ ಮಾನವೀಯತೆ ಬೆಳೆಸುವುದು ಶಿಕ್ಷಕರ ಮಹತ್ತರ ಜವಾಬ್ದಾರಿ ಎಂದು ನುಡಿದರು. ಗುರುವಂದನೆಯನ್ನು ಸ್ವೀಕರಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಲಾಯಿ ಬಾಕ್ಯಾರು, ತೆಳ್ಳಾರುವಿನ ಶಿಕ್ಷಕ ಕೆ. ಯೋಗೀಶ್ ಕಿಣಿ ಯವರು ಮಾತನಾಡಿ ಇಂದಿನ ಪೀಳಿಗೆಗೆ ಶಿಕ್ಷಕರು ಕೇವಲ ಪಾಠ ಬೋಧಕರು ಮಾತ್ರವಲ್ಲ, ಬಾಳಿನ ದಾರಿ ತೋರಿಸುವ ದೀಪಸ್ತಂಭರೂ ಆಗಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅನನ್ಯಎಂದು ಹೇಳಿದರು.  ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ) ಕಾರ್ಕಳ ಇಲ್ಲಿನ ಅಧ್ಯಕ್ಷರಾದ ಅವಿನಾಶ್ ಜಿ. ಶೆಟ್ಟಿಯವರು ಶಿಕ್ಷಕರ ಸೇವೆ ಶಾಶ್ವತ. ಅವರು…

Read More

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಾರ್ಕಳದ ಕ್ರೆöಸ್ಟ್ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More

ಗಣಿತನಗರ : ಇಂದಿನ ಬದುಕು ಒತ್ತಡದಲ್ಲಿರಲು ಕಾರಣ ಮನುಷ್ಯನಿಗೆ ತೃಪ್ತಿ ಇಲ್ಲದಿರುವುದೇ ಆಗಿದೆ. ನೆಮ್ಮದಿಯನ್ನು ಕಳಕೊಂಡ ಮನುಜ ತಾಳ್ಮೆ, ಸಹನೆಯ ಮನೋಭಾವವನ್ನು ಇಟ್ಟುಕೊಳ್ಳುವುದು ಮುಖ್ಯ. ವಿದ್ಯಾರ್ಥಿ ಜೀವನದಲ್ಲಿಯೇ ಸಾವಧಾನದ ಮನಸ್ಥಿತಿಯನ್ನು ರೂಢಿಸಿಕೊಂಡರೆ ಭವಿಷ್ಯದಲ್ಲಿ ಗೌರವದ ಉಪಸ್ಥಿತಿಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯ ಎಂದು ಪಳ್ಳಿ ಸ.ಪ.ಪೂ.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶ್ರೀ ವಸಂತ ಆಚಾರ್ ನುಡಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು. ಜ್ಞಾನಸುಧಾ ಒತ್ತಡರಹಿತವಾಗಿ ವಿದ್ಯಾರ್ಥಿಗಳ ಏಳಿಗೆಗೆ ತನ್ನ ಯೋಜನಾ ಬದ್ಧವಾದ ಶೈಕ್ಷಣಿಕ ಚಟುವಟಿಕೆಯನ್ನು ರೂಪಿಸಿಕೊಂಡು, ಮೌಲಿಕವಾದ ವಿಚಾರಧಾರೆಯನ್ನು ಪಸರಿಸುವ ಸಾಮಾಜಿಕ ಕಾರ್ಯಕ್ರಮಗಳ ಮುಖೇನ ಶೈಕ್ಷಣಿಕ ಕ್ಷೇತ್ರದಲ್ಲಿ ನಾಡಿನಲ್ಲಿ ಮಾದರಿಯಾಗಿ ನಿಂತಿದೆ ಎಂದರು. ನಿವೃತ್ತರಾದ ಬೋಳಾದ ಶ್ರೀ ರಾಮಕೃಷ್ಣ ಅನುದಾನಿಕ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಶ್ರೀ ಸತೀಶ್ ಕುಮಾರ್ ಕೆಮ್ಮಣ್ಣು, ಬೆಳ್ಮಣ್ಣುವಿನ ಸ.ಪ್ರೌ.ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸುಶೀಲಾ ಎನ್, ಎರ್ಲಪ್ಪಾಡಿಯ ಶ್ರೀ…

Read More

ಆಳ್ವಾಸ್ ಸಹಕಾರ ಸಂಘವು 2024-25 ನೇ ಸಾಲಿನಲ್ಲಿ 3.55 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ 17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ. ಆಳ್ವಾಸ್ ಕೃಷಿಸಿರಿ ಆವರಣದಲ್ಲಿನ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಶನಿವಾರ ನಡೆದ ಸಂಘದ 2024-25 ನೇ ಸಾಲಿನ 9ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು. ವಾರ್ಷಿಕ ವರದಿ ವಾಚಿಸಿದ ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ, ಸಂಘವು ಈ ಸಾಲಿನಲ್ಲಿ 170 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ ಈ ವರ್ಷ 19 ಲಕ್ಷದಷ್ಟು ಹೆಚ್ಚಿನ ಲಾಭ ಗಳಿಸಿದೆ. ಶೇ 99.62 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊಂಡಿದ್ದು, ಪ್ರಸ್ತುತ 5543 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು. ಆಳ್ವಾಸ್ ಸಹಕಾರಿ ಸಂಘದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಮಾತನಾಡಿ, ನಮ್ಮ ಆಳ್ವಾಸ್ ಸಹಕಾರಿ ಸಂಘ ಮುಂದಿನ ವರ್ಷ ತನ್ನ ದಶಮಾನೋತ್ಸವದ ಹಿರಿಮೆಯ ಮೈಲಿಗಲ್ಲನ್ನು ತಲುಪಲಿದೆ.…

Read More

ಚಿಣ್ಣರಬಿಂಬ ಪ್ರತಿವರ್ಷ ಶಿಬಿರ ಮಟ್ಟದಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸುತ್ತಾ ಬಂದಿರುವುದು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ. ಮುಂಬಯಿ ಮರಾಠಿ ನೆಲದಲ್ಲಿ ಚಿಣ್ಣರು ಕನ್ನಡ ಮಾತು ಕೇಳಲು ನಿಜಕ್ಕೂ ಸಂತೋಷವಾಗುತ್ತದೆ. ಇಂದು ಎಸ್.ಎಂ ಶೆಟ್ಟಿ ಶಿಬಿರದ ಮಕ್ಕಳ ಸ್ಪರ್ಧೆ ಉತ್ತಮವಾಗಿ ಮೂಡಿಬರುತ್ತಿದೆ. ಇಲ್ಲಿ ಎಲ್ಲರೂ ಉತ್ಸಾಹದಿಂದ ಕೆಲಸ ಮಾಡುತ್ತಿದ್ದೀರಿ. ಮಕ್ಕಳಲ್ಲಿರುವ ಪ್ರತಿಭೆಗೆ ಅವಕಾಶವನ್ನು ನೀಡುವ ಇಂತಹ ಸ್ಪರ್ಧೆಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸೋಪಾನವಾಗಬಲ್ಲದು ಎಂದು ಚಿಣ್ಣರಬಿಂಬದ ರೂವಾರಿ ಶ್ರೀ ಪ್ರಕಾಶ್ ಭಂಡಾರಿ ಅವರು ನುಡಿದರು. ಅವರು ಆಗಸ್ಟ್ 24ರಂದು ರವಿವಾರ ಮಧ್ಯಾಹ್ನ 1ಗಂಟೆಗೆ ಬಂಟರ ಸಂಘ ಎಸ್ ಎಮ್ ಶೆಟ್ಟಿ ಹೈಸ್ಕೂಲ್ ಹಾಗೂ ಜೂನಿಯರ್ ಕಾಲೇಜಿನ ಏಳನೇಯ ಮಹಡಿಯ ಸಭಾಂಗಣದಲ್ಲಿ ನಡೆದ ಮಕ್ಕಳ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದರು. ಅವರು ಪಾಲಕರನ್ನು ಹಾಗೂ ಚಿಣ್ಣರನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರತಿ ರವಿವಾರ ಶಿಬಿರದಲ್ಲಿ ಕನ್ನಡ ಮತ್ತು ಭಜನೆ ತರಗತಿ ನಡೆಯುತ್ತಿದೆ. ಶಿಬಿರ ಮುಖ್ಯಸ್ಥರು, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರು, ಕನ್ನಡ ಮತ್ತು…

Read More

ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2025ನೇ ಸಾಲಿನ ಸಿಬ್ಬಂದಿ ನೇಮಕಾತಿ ಆಯೋಗ ನಡೆಸುವ ವಿವಿಧ ನೇಮಕಾತಿ ಪರೀಕ್ಷೆಗಳು ಸದ್ಯದಲ್ಲೇ ನಡೆಯಲಿದ್ದು, ಈ ನೇಮಕಾತಿ ಮಂಡಳಿಯು ಕುರಿತು ಮಾಹಿತಿಯನ್ನು ಪ್ರಕಟಿಸಿರುತ್ತದೆ. ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿಯನ್ನು ನೀಡಲಿದ್ದು, ಈ ನೇಮಕಾತಿ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ತರಗತಿಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಕ್ರ್ಯಾಶ್ ಕೋರ್ಸ್ ತರಬೇತಿಯ ನೇರ ತರಗತಿಗಳು ಬೆಳಿಗ್ಗೆ ಸಮಯ 10.00ರಿಂದ ಸಂಜೆ 3.00ರ ವರೆಗೆ ಹಾಗೂ ಆನ್ಲೈನ್ ತರಗತಿಗಳು ರಾತ್ರಿ ಸಮಯ 8 ರಿಂದ 9 ರವರೆಗೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಸ್ಥೆಯನ್ನು ಸಂಪರ್ಕಿಸಿ ದಾಖಲಾತಿಯನ್ನು ಪಡೆದುಕೊಳ್ಳಲು ವಿದ್ಯಾಮಾತಾ ಅಕಾಡೆಮಿಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆಗಳು: 9620468869, 9148935808

Read More

ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ಯುಎಇ ವತಿಯಿಂದ ನಡೆದ 11ನೇಯ ಗಣೇಶೋತ್ಸವ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಕುಮಾರಿ ದಿವ್ಯನಿಧಿ ರೈ ಎರುಂಬುರವರಿಗೆ “ಸಂಗೀತ ಯಕ್ಷನಾಟ್ಯ ಭೂಷಣ” ಎಂಬ ಬಿರುದನ್ನು ಕೊಟ್ಟು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿದ್ವಾನ್ ಡಾ. ಸತ್ಯ ಕೃಷ್ಣ ಭಟ್, ಉದ್ಯಮಿ ಡಾ. ಬಿ.ಆರ್ ಶೆಟ್ಟಿ ಅಬುಧಾಬಿ, ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಮಾಜಿ ಸಚಿವರಾದ ಶ್ರೀ ಕೃಷ್ಣ ಜೆ. ಪಾಲೆಮಾರ್, ಮೂಡಬಿದ್ರೆ ಶಾಸಕರಾದ ಉಮನಾಥ್ ಕೋಟ್ಯಾನ್, ಉದ್ಯಮಿ ರಾಘವೇಂದ್ರ ಕುಡ್ವ, ಮಾರ್ಗದೀಪ ಸಮಿತಿಯ ಅಧ್ಯಕ್ಷರಾದ ಮಹೇಶ್ ಚಂದ್ರಗಿರಿ, ಉಪಾಧ್ಯಕ್ಷರಾದ ಪ್ರವೀಣ್ ಉಪ್ಪೂರು, ಜೊತೆ ಕಾರ್ಯದರ್ಶಿಯಾದ ಬಿಪಿನ್ ಚಂದ್ರ ನಾಯಕ್, ಕೋಶಾಧಿಕಾರಿ ರಾಜೇಶ್ ರಾವ್, ಕಾರ್ಯಕ್ರಮದ ಸಂಚಾಲಕರಾದ ಸುಗಂಧರಾಜ ಬೇಕಲ್ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಕುಮಾರಿ ದಿವ್ಯನಿಧಿ ರೈಯವರಿಂದ “ಸ್ವರ- ಸಮರ್ಪಣೆ” ಕಾರ್ಯಕ್ರಮ ನಡೆಯಿತು.

Read More

ಸುವರ್ಣ ಮಹೋತ್ಸವ ಸಂಭ್ರಮಾಚರಣೆಯಲ್ಲಿರುವ ಮೂಡುಬಿದಿರೆ ಲಯನ್ಸ್ ಕ್ಲಬ್ ವತಿಯಿಂದ ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯಂದು ಕೀರ್ತಿನಗರ ಲಯನ್ಸ್ ಪಾರ್ಕ್‌ನ ಹರಿಭವ ಸಭಾಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಕ್ಲಬ್ ಅಧ್ಯಕ್ಷ ಲ. ಶಿವಪ್ರಸಾದ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ ಶಂಕರ ಭಟ್, ಕೋಟೆಬಾಗಿಲು ಸ. ಉ. ಹಿ.ಪ್ರಾ ಶಾಲೆಯ ಮೇಬಲ್ ಫೆರ್ನಾಂಡಿಸ್ ಹಾಗೂ ಮಿಜಾರು ಕೆ.ಪಿ.ಎಸ್. ಶಾಲೆಯ ನಾಗೇಶ್ ಎಸ್. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಸದಸ್ಯ ವಿನೋದ್ ಕುಮಾರ್ ಅವರು ಶಿಕ್ಷಕ ವೃತ್ತಿ ಎಂಬುದು ಎಲ್ಲಾ ವೃತ್ತಿಗಳ ತಾಯಿಯಾಗಿದ್ದು ಅದಕ್ಕೆ ದೇವರಿಗೆ ಸಮಾನವಾದ ಸ್ಥಾನವನ್ನು ನೀಡಿದ ಉದಾತ್ತವಾದ ಸಂಸ್ಕೃತಿ ಬೆಳೆಸಿಕೊಂಡು ಬಂದ ಪರಂಪರೆ ನಮ್ಮದು. ಮಾಹಿತಿ ತಂತ್ರಜ್ಞಾನದ ಬೆಳವಣಿಗೆಯಿಂದ ಶಿಕ್ಷಣವೆಂಬುದು ಶಾಲೆಗೆ ಮಾತ್ರ ಸೀಮಿತವಾಗಿರದೆ ಗೂಗಲ್ ನಿಂದಲೂ ಬಹಳಷ್ಟು ಮಾಹಿತಿಯನ್ನು ಶಿಕ್ಷಣದ ರೂಪದಲ್ಲಿ ಪಡೆಯಬಹುದಾದ ಈ ಕಾಲಘಟ್ಟದಲ್ಲಿ ಶಿಕ್ಷಕರು ಹಲವಾರು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಆದುದರಿಂದ ಗೂಗಲ್ ನಲ್ಲಿ…

Read More

ಆದರ್ಶಪ್ರಾಯ : ಶ್ಯಾಮಲ ಕುಂದರ್ ವಿದ್ಯಾರ್ಥಿ ಎಂಬ ನಾಣ್ಯ ಬಹುಮೂಲ್ಯವಾಗಲು ಶಿಕ್ಷಕರು ಮತ್ತು ಪೋಷಕರೆಂಬ ಎರಡು ಮುಖಗಳ ಪಾತ್ರ ಬಹುಮುಖ್ಯ. ಕನಸು ಹೊತ್ತ ವಿದ್ಯಾರ್ಥಿಗಳನ್ನು ಪೋಷಿಸುವ ಪೋಷಕರು, ವಿದ್ಯಾಭ್ಯಾಸ ನೀಡುವ ಶಿಕ್ಷಕರನ್ನು ನಾವು ಗೌರವಿಸಬೇಕು. ಈ ನಿಟ್ಟಿನಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ಮೆಚ್ಚುವಂತಹದ್ದು. ಶಿಕ್ಷಣದ ಜೊತೆಜೊತೆಗೆ ಸಂಸ್ಕಾರ, ದೇಶಭಕ್ತಿ, ಮೌಲ್ಯಯುತ ಶಿಕ್ಷಣಕ್ಕೂ ಪ್ರಾಶಸ್ತ್ಯ ಕೊಡುತ್ತಿರುವುದು ಆದರ್ಶಪ್ರಾಯ ಎಂದು ರಾಷ್ಟಿçಯ ಮಹಿಳಾ ಅಯೋಗದ ಮಾಜಿ ಸದಸ್ಯರಾದ ಶ್ರೀಮತಿ ಶ್ಯಾಮಲಾ ಎಸ್ ಕುಂದರ್ ಹೇಳಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬ್ರಹ್ಮಾವರ ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಸಂಜೀವ ಶೆಟ್ಟಿ ಕೊರ್ಗಿ, ಬಿ.ಎಮ್.ಎಮ್. ಪ್ರೌಢಶಾಲೆ ಕೂರಾಡಿಯ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಎಸ್ ಮೂರ್ತಿ ರಾವ್, ಶ್ರೀ ವಿಷ್ಣು ಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಅನಂತ ಪದ್ಮನಾಭ ಭಟ್, ಪಂಚನಬೆಟ್ಟು ವಿದ್ಯಾವರ್ಧಕ…

Read More