Author: admin
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ‘ಸಾಮರ್ಥ್ಯವನ್ನು ಸಮರ್ಥ, ಸಮಾಜಮುಖಿಯಾಗಿ ಬಳಸಿ’
ವಿದ್ಯಾಗಿರಿ (ಮೂಡುಬಿದಿರೆ): ಅಡುಗೆ ಮನೆಯಿಂದ ಯುದ್ಧಭೂಮಿವರೆಗೆ ಸಾಮಥ್ರ್ಯ ಪ್ರದರ್ಶಿಸಲು ಮಹಿಳೆ ಶಕ್ತಳು. ಆಕೆ ತನ್ನ ಸಾಮಥ್ರ್ಯವನ್ನು ಸಮರ್ಥ ಹಾಗೂ ಸಮಾಜಮುಖಿಯಾಗಿ ಬಳಸಿಕೊಳ್ಳಬೇಕು ಎಂದು ಬೆಂಗಳೂರು ಅದಮ್ಯ ಚೇತನ ಫೌಂಡೇಷನ್ ಸ್ಥಾಪಕಾಧ್ಯಕ್ಷೆ ತೇಜಸ್ವಿನಿ ಅನಂತ ಕುಮಾರ್ ಹೇಳಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ -2024 ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ಕಾಲೇಜಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣ (ಕೃಷಿಸಿರಿ)ದಲ್ಲಿ ಗುರುವಾರ ಹಮ್ಮಿಕೊಂಡ ‘ಆಳ್ವಾಸ್ ಮಹಿಳಾ ವೇದಿಕೆಯ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಮತ್ತು ವೈವಿಧ್ಯಮಯ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಬ್ಬ ವ್ಯಕ್ತಿ ದಿನಕ್ಕೆ ಸುಮಾರು 700 ಕೆ.ಜಿ. ಆಮ್ಲಜನಕ ಬಳಸಿದರೆ, ಒಂದು ಮರ 100 ಕೆಜಿ ಉತ್ಪಾದಿಸುತ್ತದೆ. ಹೀಗಾಗಿ ಒಬ್ಬ ವ್ಯಕ್ತಿ ಬದುಕಲು ಏಳು ಮರಗಳ ಅವಶ್ಯಕತೆ ಇದೆ. ಆದರೆ, ಬೆಂಗಳೂರಿನಲ್ಲಿ 14 ಲಕ್ಷ ಮರಗಳಿದ್ದು, ಕೋಟಿಗೂ ಅಧಿಕ ಜನಸಂಖ್ಯೆ ಇದೆ. ಇದರ ತೀವ್ರತೆ ಅರಿತು ಸಸಿ ನೆಡುವ ಕಾರ್ಯಕ್ರಮವನ್ನು ಅದಮ್ಯ ಫೌಂಡೇಶನ್ ಹಾಕಿಕೊಂಡಿದೆ ಎಂದರು. …
ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದ್ದು ಸಿನಿಮಾದ ಟೈಟಲ್ ಪೋಸ್ಟರನ್ನು ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಸಿನಿಮಾ ಕುರಿತು ಮಾಹಿತಿ ನೀಡಿದ ಚೇತನ್ ರೈ ಮಾಣಿ ಅವರು, “ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು, ಆನೇಕಲ್ಲು, ಉಪ್ಪಳ, ಮಂಗಲ್ಪಾಡಿ ಹಾಗೂ ಕುಬಣೂರು ಪರಿಸರದಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸುಮಾರು 20 ದಿನಗಳ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದ್ದು ಪಿಎನ್ ಆರ್ ಬ್ಯಾನರ್ ನಲ್ಲಿ ನಿರ್ಮಿಸಿದ “ಆರಾಟ” ಕನ್ನಡ ಚಲನಚಿತ್ರಕ್ಕೆ ರಾಘವೇಂದ್ರ ಹೊಳ್ಳ ಟಿ, ರಾಂಪ್ರಸಾದ್ ಕೆ, ನಿತೇಶ್ ಮಾಡಮ್ಮೆ ಹಾಗೂ ಸ್ನೇಹಿತರು ಬಂಡವಾಳ ಹೂಡಿದ್ದಾರೆ ಎಂದು ಮಾಹಿತಿ ನೀಡಿದರು. ಬಳಿಕ ಮಾತಾಡಿದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಅವರು, ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದ್ದು ಕರಾವಳಿಯ ಜನಜೀವನಕ್ಕೆ ತೀರಾ ಹತ್ತಿರವಾಗಿದೆ. ಹಾಡುಗಳು ಚೆನ್ನಾಗಿದ್ದು ಸುಂದರವಾದ ಲೊಕೇಶನ್ ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಜನರಿಗೆ ಸಂಪೂರ್ಣ ಮನೋರಂಜನೆ ನೀಡಲು…
ಕತ್ತಲೆ ಆವರಿಸಿದ ತುಳು ಸಿನಿಮಾರಂಗಕ್ಕೆ ಬೆಳಕು ನೀಡುವ ಸಿನಿಮಾ ಬರಬೇಕಾಗಿದೆ. ಏಕಾತನೆಯಿಂದ ಕೂಡಿದ ಸಿನಿಮಾದಿಂದ ಬೇಸತ್ತ ಪ್ರೇಕ್ಷಕರು ಹೊಸ ಬಗೆಯ ಸಿನಿಮಾಗಳ ಕುರಿತು ನಿರೀಕ್ಷೆ ಮಾಡುತ್ತಾರೆ. ಸುಮುಖ ಪ್ರೊಡಕ್ಷನ್ ನಿರ್ಮಿಸಿರುವ “ತುಡರ್” ತುಳು ಸಿನಿಮಾದ ಹಾಡು ಭಾರತ್ ಮಾಲ್ ನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಬಿಡುಗಡೆಯ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ದೀಪ ಬೆಳಗಿಸಿ ಮಾತನಾಡಿದರು. ಸಿನಿಮಾ ಒಂದೇ ಆಯಾಮದಲ್ಲಿ ಸಾಗಬಾರದು. ಬದಲಾವಣೆ ಅಗತ್ಯ. ತುಡರ್ ಸಿನಿಮಾದಲ್ಲಿ ಹೊಸ ಹೊಸ ಕಲಾವಿದರಿದ್ದಾರೆ. ಬಾಲಿವುಡ್ ನ ಹೆಸರಾಂತ ತಂತ್ರಜ್ಞರಿದ್ದಾರೆ. ಸಿನಿಮಾದಲ್ಲಿ ಒಳ್ಳೆಯ ಕತೆ, ನಿರೂಪಣೆ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಎಂದು ವಿಜಯಕುಮಾರ್ ಕೊಡಿಯಾಲ್ ಬೈಲ್ ತಿಳಿಸಿದರು. ಹಾಸ್ಯ ಚಿತ್ರಗಳ ಜೊತೆಗೆ ಸದಭಿರುಚಿಯ ಕಥಾವಸ್ತುವನ್ನು ಒಳಗೊಂಡ ಸಿನಿಮಾಗಳು ಬರಬೇಕು. ತುಡರ್ ಸಿನಿಮಾ ಹೊಸಬರ ಪ್ರಯತ್ನಕ್ಕೆ ಎಲ್ಲರ ಬೆಂಬಲ ಪ್ರೋತ್ಸಾಹ ಬೇಕಾಗಿದೆ ಎಂದು ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ತಿಳಿಸಿದರು. ಸಮಾರಂಭದಲ್ಲಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಕಾರ್ಪೋರೇಟರ್ ಕಿರಣ್ ಕುಮಾರ್, ಪ್ರೇಮ್…
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಗಿರುವ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ರಜತ ಮಹೋತ್ಸವದ ಪ್ರಯುಕ್ತ ಹೆಜಮಾಡಿಯ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ತಂಡ ಪ್ರಶಸ್ತಿ ಗೆದ್ದುಕೊಂಡಿದೆ. ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ, ಕಾಪು, ಕಾರ್ಕಳ, ಕುಂದಾಪುರ ಹಾಗೂ ಬ್ರಹ್ಮಾವರ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಉಡುಪಿ ಮತ್ತು ಕುಂದಾಪುರ ತಂಡಗಳು ಅತೀ ಹೆಚ್ಚು ಅಂಕಗಳನ್ನು ಗಳಿಸಿ ಫೈನಲ್ ಪ್ರವೇಶಿಸಿದರು. ಅಂತಿಮ ಪಂದ್ಯದಲ್ಲಿ ಉಡುಪಿ ತಂಡವು ಕುಂದಾಪುರ ತಂಡವನ್ನು ಐದು ರನ್ ಗಳಲ್ಲಿ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಯತೀಶ್ ತಿಂಗಳಾಯ, ಸಂತೋಷ್ ಕುಂದೇಶ್ವರ, ಹರೀಶ್ ಕುಂದಾಪುರ, ರಾಘವೇಂದ್ರ ಅವರು ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು. ಪಂದ್ಯಾಟ ಉದ್ಘಾಟನೆ: ಪಂದ್ಯಾಕೂಟವನ್ನು ಪಡುಬಿದ್ರೆಯ ಆಸ್ಪೆನ್ ಇನ್ಫಾ ಸಂಸ್ಥೆಯ ಮಹಾ ಪ್ರಬಂಧಕ ಅಶೋಕ್ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ತಹಶೀಲ್ದಾರ್ ಪ್ರತಿಭಾ…
ಇನ್ನಂಜೆ ಹಾಲು ಉತ್ಪಾದಕರ ಸಂಘ (ರಿ) ಇದರ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆಯಾಗಿದ್ದಾರೆ. ಇನ್ನಂಜೆ ಪರಿಸರದಲ್ಲಿ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಶಿವರಾಮ್ ಶೆಟ್ಟಿ ಅವರನ್ನು ಗ್ರಾಮದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಇನ್ನಂಜೆ, ಮಾಜಿ ಪಂಚಾಯತ್ ಅಧ್ಯಕ್ಷ ಸಮಾಜ ಸೇವಕ ರವಿವರ್ಮ ಶೆಟ್ಟಿ, ಪಂಚಾಯತ್ ಸದಸ್ಯ ದಿವೇಶ್ ಶೆಟ್ಟಿ, ಲೋಕು ಪೂಜಾರಿ, ಪ್ರಶಾಂತ್ ಕೆ ಶೆಟ್ಟಿ ಕಲ್ಲಟ್ಟೆ, ಚಿಂತನ್ ಶೆಟ್ಟಿ, ನಿಲೇಶ್ ಶೆಟ್ಟಿ, ಸದಾನಂದ ಶೆಟ್ಟಿ, ಪ್ರಶಾಂತ್ ಆಚಾರ್ಯ, ಪ್ರಶಾಂತ್ ಜಿ ಶೆಟ್ಟಿ, ಜಗದೀಶ್ ಅಮೀನ್, ಪ್ರಕಾಶ್ಚoದ್ರ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.
ಮೂಡುಬಿದಿರೆ: ಸ್ಮಾರ್ಟ್ ಬ್ರಿಡ್ಜ್ ಸಂಸ್ಥೆಯು ಸೇಲ್ಸ್ ಫೋರ್ಸ್ ಸಹಯೋಗದಲ್ಲಿ ಈಚೆಗೆ ಹೈದರಾಬಾದ್ನಲ್ಲಿ ಆಯೋಜಿಸಿದ ಅಕಾಡೆಮಿಯ ಎಕ್ಸಲೆನ್ಸ್ ಅವಾಡ್ರ್ಸ್ ಸಮಾರಂಭದಲ್ಲಿ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು (ಎಐಇಟಿ) ‘ಸ್ಕಿಲ್ ಫೋರ್ಜ್’ ಪುರಸ್ಕಾರಕ್ಕೆ ಪಾತ್ರವಾಗಿದೆ. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ) 300ಕ್ಕೂ ಅಧಿಕ ವಿದ್ಯಾರ್ಥಿಗಳು ಎಐಸಿಟಿಇ ಸಹಯೋಗದ ಸ್ಮಾರ್ಟ್ ಬ್ರಿಡ್ಜ್ ಹಾಗೂ ಸೇಲ್ಸ್ ಫೋರ್ಸ್ ಬೆಂಬಲಿತ ವಚ್ರ್ಯುವಲ್ ಇಂಟರ್ಶಿಫ್ ಪ್ರೋಗ್ರಾಮ್ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು,ದಾಖಲಾರ್ಹ ಪ್ರಗತಿಯಾಗಿದೆ. ಎಐಇಟಿ ಈ ಸಾಧನೆ ಮಾಡಿದ ರಾಜ್ಯದ ಏಕೈಕ ಇಂಜಿನಿಯರಿಂಗ್ ಕಾಲೇಜು. ಆಳ್ವಾಸ್ ನಿಯೋಜನೆ ಮತ್ತು ತರಬೇತಿ ಘಟಕದ ಮುಖ್ಯಸ್ಥ ಸುಶಾಂತ್ ಅನಿಲ್ ಲೋಬೊ ಪ್ರಶಸ್ತಿ ಸ್ವೀಕರಿಸಿದರು. ಅಲ್ಲದೇ, ಎಐಇಟಿಯು ಪ್ರತಿಷ್ಠಿತ ಕಂಪೆನಿಗಳಾದ ಸರ್ವೀಸ್ನೌ, ಯುಐಪಾತ್, ಇನ್ಫೋಸಿಸ್, ಸ್ಪ್ರಿಂಗ್ಬೋರ್ಡ್, ವಿಪ್ರೊ. ಟ್ಯಾಲೆಂಟ್ ನೆಕ್ಟ್ಸ್ ಮತ್ತಿತರ ಕಂಪೆನಿಗಳ ಸಹಯೋಗದಲ್ಲಿದ್ದು, ಕಾಲೇಜಿನ ಹಲವಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆತಿದೆ. ಕಾಲೇಜಿನ ಈ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ…
ಯಕ್ಷಧ್ರುವ ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿದೆ. ಮೂಡಬಿದ್ರೆಯ ಆಳ್ವಾಸ್ ಆವರಣದಲ್ಲಿ ನಡೆದ ಯಕ್ಷ ಶಿಕ್ಷಣದಲ್ಲಿ ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಯಕ್ಷಗಾನ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಬಲ್ಲಾಲ್ ಬಾಗ್ ನಲ್ಲಿರುವ ಪತ್ತು ಮುಡಿ ಸೌಧದಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಧ್ರುವ ಪಟ್ಲ ಸಂಭ್ರಮ 2024 ಮೇ 26 ರಂದು ಜರಗಿಸುವುದೆಂದು ತೀರ್ಮಾನಿಸಲಾಗಿ ಆ ದಿನದ ಕಾರ್ಯಕ್ರಮಗಳ ಬಗ್ಗೆ ಕರೆದಿರುವ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಟ್ಲ ಫೌಂಡೇಶನ್ ಟ್ರಸ್ಟ್ ಈ ವರೆಗೆ 24 ಮನೆಗಳನ್ನು ನಿರ್ಮಿಸಿ ಕಲಾವಿದರಿಗೆ ಹಸ್ತಾಂತರ ಮಾಡಿದೆ. ಯಕ್ಷಾಶ್ರಯ ವಸತಿ ಯೋಜನೆಯಡಿ 25 ನೇ ಮನೆಯ ಹಸ್ತಾಂತರ ಮಾಚ್೯ 22 ರಂದು ಕುಂಬಳೆಯ ಸಮೀಪ ನಡೆಯಲಿರುವುದು. ಈಗಾಗಲೇ ಸುಮಾರು 200 ಮನೆಗಳ ರಿಪೇರಿ ದುರಸ್ತಿ ಕಾಮಗಾರಿಗೆ ಆರ್ಥಿಕ ಸಹಾಯ ಮಾಡಲಾಗಿದೆ. ಅದೇ ರೀತಿ…
ಐಲೇಸಾ ದಿ ವಾಯ್ಸ್ ಆಫ್ ಓಷನ್ (R)ಮತ್ತು ಕರಾವಳಿ ಲೇಖಕಿಯರ-ವಾಚಕಿಯರ ಸಂಘ(ರಿ.), ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಶ್ರೀಮತಿ ರೂಪಕಲಾ ಆಳ್ವ ರಚನೆಯ “ಶಿವಸುಗಿಪು”- ಕಾವೂರು ಶ್ರೀ ಮಹಾಲಿಂಗೇಶ್ವರ ದೇವರ ತುಳು ಭಕ್ತಿಗೀತೆಗಳ ಬಿಡುಗಡೆ ಕಾರ್ಯಕ್ರಮ ದಿನಾಂಕ 07.03.2024, ಗುರುವಾರ, ಸಂಜೆ 7:30ರಿಂದ 9:30 ರ ವರೆಗೆ ವರ್ಚುವಲ್ ವೇದಿಕೆಯಲ್ಲಿ ನಡೆಯಲಿದೆ. 26 ವರ್ಷಗಳ ಹಿಂದೆ ಧ್ವನಿಸುರುಳಿ ಮೂಲಕ ಹೊರಬಂದಿದ್ದ ಈ ಹಾಡುಗಳು ಮತ್ತೆ ದೃಶ್ಯ ಸಂಯೋಜನೆಯೊಂದಿಗೆ ನವೀನವಾಗಿ ಮೂಡಿಬರಲಿದ್ದು, ದೇಗುಲದ ಪ್ರಧಾನ ಅರ್ಚಕರಾದ ಶ್ರೀ ಶ್ರೀನಿವಾಸ ಭಟ್ ಆಶೀರ್ವಚನ ಮಾಡಲಿರುವರು. ಶ್ರೀ ರವಿ ಶೆಟ್ಟಿ ಮೂಡಂಬೈಲು ಮ್ಯಾನೇಜಿಂಗ್ ಡೈರೆಕ್ಟರ್, ಎಟಿಎಸ್, ಕತಾರ್ ಅಧ್ಯಕ್ಷತೆ ವಹಿಸಿ, ನ್ಯಾಯವಾದಿ ಹಾಗೂ ನಾಟಕಕಾರರಾದ ಶ್ರೀ ಶಶಿರಾಜ್ ಕಾವೂರು ಹಾಡುಗಳ ಬಿಡುಗಡೆ ಮಾಡಲಿರುವರು. ಶ್ರೀಮತಿ ಯಶೋದಾ ಮೋಹನ್ ಕಾವೂರು ಹಾಡುಗಳ ಪರಿಚಯ ಮಾಡಲಿದ್ದು, ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಜ್ಯೋತಿ ಚೇಳಾೈರು, ಹಿರಿಯ ಸಾಹಿತಿ ಶ್ರೀಮತಿ ಚಂದ್ರಕಲಾ ನಂದಾವರ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಹಿರಿಯ…
ಪುಣೆಯ ಖ್ಯಾತ ಹೋಟೆಲ್ ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರು, ಪುಣೆ ಬಂಟರ ಸಂಘದ ಅತ್ಯಂತ ಯಶಸ್ವಿ ಅಧ್ಯಕ್ಷ, ಬಂಟ ಸಮಾಜದ ಮುಖಂಡರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ಮಾಲಕತ್ವದ ಕೊರೊನೆಟ್ ಬ್ಯೂಟಿಕ್ ಹೋಟೆಲ್ ನೂತನ ವಿನ್ಯಾಸದೊಂದಿಗೆ ಪುಣೆಯ ಆಪ್ಟೆ ರೋಡ್ ನಲ್ಲಿ ಮಾರ್ಚ್ 1ರಂದು ಎಂ ಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೆ ಪ್ರಕಾಶ್ ಶೆಟ್ಟಿಯವರ ಉದ್ಘಾಟನೆಯೊಂದಿಗೆ ಶುಭಾರಂಭಗೊಂಡಿತು. ವಾಸ್ತು ಪೂಜೆ, ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ದೇವತಾ ಕಾರ್ಯಗಳು ನಡೆದವು. ಈ ಸಂಧರ್ಭ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಂ.ಆರ್.ಜಿ ಗ್ರೂಪ್ ನ ಸಿ.ಎಂ.ಡಿ ಕೆ ಪ್ರಕಾಶ್ ಶೆಟ್ಟಿ, ಜಾಗತಿಕ ಬಂಟರ ಸಂಘದ ಪದಾಧಿಕಾರಿಗಳು, ಮುಂಬಯಿ ಬಂಟರ ಸಂಘದ ಪ್ರಮುಖರು, ಖ್ಯಾತ ಉದ್ಯಮಿಗಳು ಆಗಮಿಸಿ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಹಾಗೂ ಶ್ರೀಮತಿ ದಿವ್ಯಾ ಸಂತೋಷ್ ಶೆಟ್ಟಿಯವರನ್ನು ಶಾಲು ಪುಷ್ಪಗುಚ್ಛ ಸ್ಮರಣಿಕೆ ನೀಡಿ…
ಉತ್ತಮ ವಿಚಾರಧಾರೆಯ ಸೇವಾ ಕಾರ್ಯ ಸಮಾಜದಲ್ಲಿ ಸಾಮರಸ್ಯ ಬೆಳೆಯಲು ಮತ್ತು ಸಂಘಟನೆ ಬೆಳೆಯಲು ಕಾರಣವಾಗುತ್ತದೆ. ಯಾವುದೇ ರೀತಿಯ ಕಾರ್ಯಯೋಜನೆ ಇರಲಿ ದೃಡ ಮನಸ್ಸು ಮತ್ತು ಶ್ರಮದಿಂದ ಯಶಸ್ಸು ಪಡೆಯಬಹುದು. ಸಮಾಜ ಸೇವೆಯಲ್ಲಿರುವ ನಾವೆಲ್ಲರೂ ಶ್ರಮಜೀವಿಗಳು ಒಗ್ಗಟ್ಟು ಮತ್ತು ಕ್ರೀಯಾಶೀಲ ಉತ್ತಮ ಚಿಂತನೆಯ ಮೂಲಕ ಸಮಾಜಕ್ಕೆ ಮೌಲ್ಯಯುತವಾದ ಕೊಡುಗೆಯನ್ನು ನೀಡಿ ಗೌರವವನ್ನು ಪಡೆಯುತ್ತೇವೆ. ಕ್ರೀಡೆ ಅಥವಾ ಕ್ರಿಕೆಟ್ ಕೂಡಾ ನಮ್ಮ ಜೀವನದ ಹಾಗೆ ಸೋಲು ಗೆಲುವು ಏಳು ಬೀಳು ಏನಿದೆಯೋ ಅದನ್ನು ಸಮಾನವಾಗಿ ಸ್ವೀಕರಿಸಿ ಜೀವನದಲ್ಲಿ ಮುನ್ನಡೆಯಬೇಕು. ಕ್ರೀಡೆಯಿಂದ ಆರೋಗ್ಯ ಭಾಗ್ಯ, ಶಕ್ತಿ ದೊರಕುತ್ತದೆ. ಇಂತಹ ದೊಡ್ಡ ಕೂಟವನ್ನು ಆಯೋಜನೆ ಮಾಡುವುದೆಂದರೆ ಕಠಿನ ಪರಿಶ್ರಮದಿಂದ ಮಾತ್ರ ಸಾದ್ಯ. ಇದಕ್ಕೆ ಬಲಯುತವಾದ ಸಂಘಟನೆ ಮತ್ತು ಒಗ್ಗಟ್ಟು ಮುಖ್ಯ. ಮಾನವ ಮೌಲ್ಯವನ್ನರಿತು ನಾವು ಮಾಡುವ ಯಾವುದೇ ಕಾರ್ಯ ಇರಲಿ ಅದರಿಂದ ಸಾಧನೆಗೆ ಫಲ ಪಡೆಯಬಹುದು. ಸಾಯಿ ಕ್ರಿಕೆಟರ್ಸ್ ನ ವಸಂತ್ ಶೆಟ್ಟಿ ವರ್ಲ್ಡ್ ಬಂಟ್ಸ್ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡುವ ಮೂಲಕ ಪುಣೆ ಬಂಟರ ಹೆಮ್ಮೆಯನ್ನು…