Author: admin
ಮಂದಾರ್ತಿ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಶತಸಾರ್ಥಕ್ಯ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತು. ಶ್ರೀ ಕ್ಷೇತ್ರ ಮಂದಾರ್ತಿಯ ಪ್ರಧಾನ ಅರ್ಚಕ ವೇದಮೂರ್ತಿ ಎಂ ಶ್ರೀಪತಿ ಅಡಿಗ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ, ಉಪಾಧ್ಯಕ್ಷ ಕೆ. ಶಂಭುಶಂಕರ ರಾವ್, ನಿರ್ದೇಶಕರಾದ ಎಚ್. ವಿಠಲ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಪ್ರವೀಣ್ ಶೆಟ್ಟಿ, ಬಸವ ಮರಾಠಿ, ಗುರುಪ್ರಸಾದ್, ಅರುಣ್ ಕುಮಾರ್ ಶೆಟ್ಟಿ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಶತಸಾರ್ಥಕ್ಯ ಸಮಾರೋಪ ಸಮಾರಂಭ ನವೆಂಬರ್ 3ರ ಬೆಳಗ್ಗೆ 10:30ಕ್ಕೆ ಜರಗಲಿದೆ. ಸಹಕಾರಿ ಧುರೀಣರು, ಸಚಿವರು, ಜನಪ್ರತಿನಿಧಿಗಳು ಇಲಾಖಾ ಅಧಿಕಾರಿಗಳು, ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಈ ಜಗತ್ತು ದಿನದಿನವೂ ನವನವೀನ. ಪುರಾಣದ ಉಲ್ಲೇಖಗಳಂತೆ ಮತ್ತು ಅಥರ್ವ ವೇದದಲ್ಲಿ ಹದಿನಾಲ್ಕು ಲೋಕಗಳನ್ನು ಹೆಸರಿಸಲಾಗಿದೆ. ಏಳು ಮೇಲಿನ ಲೋಕಗಳು (ವ್ಯಾಹೃತಿಗಳು) ಮತ್ತು ಏಳು ಕೆಳಗಿನ ಲೋಕಗಳು (ಪಾತಾಳಗಳು), ಅವೆಂದರೆ ಮೇಲೆ ಭೂ, ಭುವಸ್, ಸ್ವರ, ಮಹಸ್, ಜನಸ್, ತಪಸ್, ಹಾಗೂ ಸತ್ಯ ಮತ್ತು ಕೆಳಗೆ ಅತಳ, ವಿತಳ, ಸುತಳ, ರಸಾತಳ, ತಲಾತಳ, ಮಹಾತಳ, ಪಾತಾಳ ಹಾಗೂ ನರಕ ಎಂಬವುಗಳು. ಆದರೆ ಲೋಕಗಳಲ್ಲಿ ಈ ನಮ್ಮ ಭೂಲೋಕದಂತಹ ಬದಲಾವಣೆ ಬೇರೆಲ್ಲೂ ಇಲ್ಲವಂತೆ. ಬಾಕಿ ಲೋಕಗಳಲ್ಲಿ ನಿತ್ಯವೂ ಅದೇ ಸ್ಥಿರವಾದ ಸುಂದರತೆ. ಇದು ಭೂಲೋಕ ವಾಸಿಗಳಾದ ನಮಗೆ ಸಂತೋಷವೇ. ಪರಮಾತ್ಮ ಶ್ರೀ ಕೃಷ್ಣನಂದಂತೆ ಬದಲಾವಣೆ ಜಗದ ನಿಯಮ. ಅದು ನಿತ್ಯವೂ ನಿರಂತರವೂ ನಡೆಯುತ್ತಲೇ ಇರಬೇಕು. ಹಾಗಿದ್ದರೇನೇ ಚಂದವೂ. ಆದರೆ ಯಾವ ಕಾಲಕ್ಕೆ ಎಷ್ಟು ಬೇಕೋ ಅಷ್ಟೇ ಆದರೆ ಚಂದ ಅಲ್ವೇ? ಕ್ರಿಮಿಕೀಟಗಳಂತೆ ಯೌವನ ಬಂದ ಮಾತ್ರಕ್ಕೆ ಜೋಡಿಯಾಗಿ ಆ ಕೂಡಲೇ ಮಕ್ಕಳೂ ಆಗಿ, ಅವುಗಳು ಕ್ಷಣ ಮಾತ್ರದಲ್ಲಿ ಬೆಳೆದು, ಮತ್ತೆ ಕೆಲವೇ ದಿನದಲ್ಲಿ…
ಅಭಿವೃದ್ಧಿಯ ಪಥದತ್ತ ಸಾಗುತ್ತಿರುವ ನವಿ ಮುಂಬಯಿ ಪರಿಸರದಲ್ಲಿ ಬಂಟರ ಒಗ್ಗಟ್ಟಿನ ಶಕ್ತಿ ಕೇಂದ್ರವಾಗಿರುವ ಬಂಟ್ಸ್ ಸೆಂಟರ್ ನಲ್ಲಿ ನವೀಕೃತಗೊಂಡಿರುವ ನಮ್ಮ ಹೆಸರಿನ ಸಭಾಭವನ ಈ ಪರಿಸರದ ಎಲ್ಲಾ ಜನರಿಗೂ ಅನುಕೂಲವಾಗುವ ಭವನವಾಗಲಿ. ಅಸೋಸಿಯೇಷನ್ ನ ಅಧ್ಯಕ್ಷರಾದ ಸಿಎ ಸುರೇಂದ್ರ ಶೆಟ್ಟಿ ಮತ್ತು ಅವರ ತಂಡವು ಈ ಭವ್ಯ ಕಟ್ಟಡದ ತಳಮಹಡಿಯಲ್ಲಿರುವ ತನ್ನ ಹೆಸರಿನ ಭವನವನ್ನು ಹವಾ ನಿಯಂತ್ರಿತ ಭವನವನ್ನಾಗಿ ಪರಿವರ್ತಿಸಿದೆ. ಉತ್ತಮವಾದ ಕಾರ್ಯವನ್ನು ಹಮ್ಮಿಕೊಂಡಿದೆ. ಭವ್ಯ ಬಂಟ್ಸ್ ಸೆಂಟರ್ ಉತ್ತಮವಾದ ನಿವೇಶನವನ್ನು ಹೊಂದಿದ್ದು, ರಾತ್ರಿ ಶಾಲೆ ಹಾಗೂ ಹಗಲು ಶಾಲೆಯನ್ನು ನಡೆಸುತ್ತಿರುವುದು ಅಭಿಮಾನದ ವಿಷಯವಾಗಿದೆ. ಸಂಘಟನೆಯನ್ನು ಉನ್ನತ ಮಟ್ಟಕ್ಕೆ ತರುವಲ್ಲಿ ಎಲ್ಲರೂ ಶ್ರಮಿಸುತ್ತಿದ್ದಾರೆ. ಇಂಥಹ ಉತ್ತಮ ಕಾರ್ಯಕ್ಕೆ ಸಮಾಜ ಬಾಂಧವರ ಸಹಕಾರವು ಯಾವತ್ತೂ ಇದೆ. ಆದುದರಿಂದ ಈ ಸಂಘಟನೆಯನ್ನು ಇನ್ನೂ ಉನ್ನತ ಮಟ್ಟಕ್ಕೆ ತರುವ ಪ್ರಯತ್ನವನ್ನು ನಾವೆಲ್ಲಾ ಸೇರಿ ಮಾಡೋಣ ಎಂದು ಬಾಂಬೇ ಬಂಟ್ಸ್ ಅಸೋಸಿಯೇಷನ್ ಟ್ರಸ್ಟಿ ರಿಜೆನ್ಸಿ ಗ್ರೂಪ್ ಆಫ್ ಹೋಟೆಲ್ ನ ಆಡಳಿತ ನಿರ್ದೇಶಕ ಬಂಟ್ಸ್ ಸೆಂಟರ್ ನ…
2024 ರ ಸಾಲಿನ ಬಂಟ ವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಉಮೇಶ್ ಶೆಟ್ಟಿ ಮಂದಾರ್ತಿ ಸಾರಥ್ಯದ ಅಭಯ ಸೇವಾ ಫೌಂಡೇಶನ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಸೇವಾ ಸಂಕಲ್ಪ ಕಾರ್ಯಕ್ರಮವನ್ನು ರಾಜಾಜಿನಗರ ಶ್ರೀರಾಮ ಮಂದಿರ ಆಟದ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕ ಡಾ| ಕೆ ಪ್ರಕಾಶ್ ಶೆಟ್ಟಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ವ್ಯವಸ್ಥಾಪಕ ನಿರ್ದೇಶಕ ಆರ್. ಉಪೇಂದ್ರ ಶೆಟ್ಟಿ, ಸ್ವಾತಿ ಗ್ರೂಪ್ ನ ನಿರ್ದೇಶಕ ಮಧುಕರ್ ಶೆಟ್ಟಿ, ಡಾ. ಅಂಜನಪ್ಪ, ಡಾ. ಪದ್ಮಿನಿ ಪ್ರಸಾದ್, ರಾಜಕೀಯ ಮುಖಂಡರಾದ ಆರ್.ವಿ. ಹರೀಶ್, ಡಿ.ಸಿ.ಪಿ. ಸೈಮುಲ್ಲಾ ಅದಾಲತ್, ನಿವೃತ್ತ ಕರ್ನಲ್ ಪಿ.ವಿ ಹರಿ, ವಿಶ್ವ ಹಿಂದೂ ಪರಿಷತ್ತು ಪ್ರಾಂತ್ಯ ಕಾರ್ಯದರ್ಶಿಗಳಾದ ಜಗನ್ನಾಥ ಶಾಸ್ತ್ರೀರವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಮಾತನಾಡಿ, ಸಂಸ್ಕೃತಿ ಸಂಪ್ರದಾಯ ಉಳಿಯಬೇಕು ಎಂದರೆ ನಾವೆಲ್ಲರೂ…
ಯಾಂತ್ರೀಕೃತ ಜೀವನ ನಡೆಸುತ್ತಿರುವ ಸಹಕಾರಿ ಸಿಬ್ಬಂದಿಗಳು ಗೆಲುವು ಸೋಲು ಪ್ರಾಮುಖ್ಯತೆಯನ್ನು ತೆಗೆದುಕೊಳ್ಳದೆ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಂಘಟನಾತ್ಮಕವಾಗಿ ಸಹಕಾರಿಗಳು ಬಲಿಷ್ಠರು ಎಂದು ತೋರಿಸಿ ಕೊಟ್ಟಿದ್ದೇವೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಮಂದಾರ್ತಿ ಸೇವಾ ಸಹಕಾರಿ ಸಂಘದ ಶತಮಾನೋತ್ಸವದ ಪ್ರಯುಕ್ತ ಶತಸಾರ್ಥರ್ಕ್ಯ ಕಾರ್ಯಕ್ರಮದ ಅಂಗವಾಗಿ ಮಂದಾರ್ತಿ ಪ್ರೌಢಶಾಲಾ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಸಹಕಾರಿ ಕ್ರೀಡಾಕೂಟದಲ್ಲಿ ಕ್ರೀಡಾ ಧ್ವಜಾರೋಹಣ ಮಾಡಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದರು. ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ ಕ್ರೀಡಾ ಜ್ಯೋತಿ ಪ್ರಜ್ವಲನೆ ಮಾಡಿ ಮತ್ತು ಸಭಾ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಉದ್ಯಮಿ ಪ್ರತಾಪ ಹೆಗ್ಡೆ ಮಾರಾಳಿ ಪಥ ಸಂಚಲನ ಗೌರವ ಸ್ವೀಕರಿಸಿದರು. ಡಾ. ನಾಗಾನಂದ ಭಟ್ ಕ್ರೀಡಾ ದ್ಯೋತಕವಾಗಿ ಪಾರಿವಾಳಗಳನ್ನು ಹಾರಿಸಿಬಿಟ್ಟರು.…
ಆಳ್ವಾಸ್ ಆಂಗ್ಲ ವಿಭಾಗದ ಗ್ಲಿಸ್ಟನ್ ವೇದಿಕೆ ಉದ್ಘಾಟನೆ ಮತ್ತು ಆಳ್ವಾಸ್ ಇಂಗ್-ಗೈಡ್ ಯೂಟ್ಯೂಬ್ ಚಾನೆಲ್ಗೆ ಚಾಲನೆ
ವಿದ್ಯಾಗಿರಿ: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ ವಿಷಯಗಳಲ್ಲಿ ಮಾತ್ರ ನೈಪುಣ್ಯರಾಗದೆ ಹೊಸ ಹೊಸ ವಿಷಯಗಳನ್ನು ಅನ್ವೇಷಿಸುತ್ತಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಇಂಗ್ಲಿಷ್ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ‘ಗ್ಲಿಸ್ಟನ್ ಸಾಹಿತ್ಯ ವೇದಿಕೆ’ ಮತ್ತು ‘ಇಂಗ್ಲಿಷ್ ಪ್ರಾಕ್ಟಿಸ್ ಸರ್ಟಿಫಿಕೇಟ್ ಕೋರ್ಸ್’ ಹಾಗೂ ‘ಆಳ್ವಾಸ್ ಇಂಗ್-ಗೈಡ್’ ಯೂಟ್ಯೂಬ್ ಚಾನೆಲ್ ಅನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆಯನ್ನು ಸುಲಭಗೊಳಿಸಲು ಈ ಚಾನೆಲ್ ಸಹಾಯಕವಾಗಲಿದೆ ಎಂದರು. ನಮ್ಮನ್ನು ನಾವೇ ಸರ್ವ ರೀತಿಯಲ್ಲಿ ಧೃಡಗೊಳಿಸಲು ಸಂವಹನ ಸಹಕಾರಿಯಾಗಿದೆ. ಪರಿಣಾಮಕಾರಿ ಸಂವಹನವು ಭಾಷಾ ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಕರ್ಜೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕ ರಾಜೇಶ್ ಆನಂದ್ ಮಾತನಾಡಿ, ಸಾಹಿತ್ಯ ಮತ್ತು ಭಾಷೆ ಎರಡು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಸಾಹಿತ್ಯವು ಭಾಷಾ ಪರಿಪೂರ್ಣತೆಯನ್ನು ಹೆಚ್ಚಿಸುತ್ತದೆ. ಭಾಷೆಯಿಂದ ಆಲಿಸುವ ಮತ್ತು ಮಾತನಾಡುವ ಕೌಶಲ ಅಭಿವೃದ್ಧಿಯಾಗುತ್ತದೆ ಎಂದು…
ಅಕ್ಟೋಬರ್ 16ರಿಂದ 20 ರ ವರೆಗೆ ಛತ್ತೀಸ್ಗಢದ ರಾಯ್ ಪುರದಲ್ಲಿ ಜರುಗಿದ ಆಲ್ ಇಂಡಿಯಾ ಫಾರೆಸ್ಟ್ ಕೀಡಾಕೂಟದಲ್ಲಿ ಸುಳ್ಯದ ಎಸಿಎಫ್ ಪ್ರವೀಣ್ ಶೆಟ್ಟಿಯವರು ಭಾಗವಹಿಸಿದ್ದು, ಶಾಟ್ ಫುಟ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ. ಹ್ಯಾಮರ್ ಥ್ರೋ ದಲ್ಲಿಯೂ ಕೂಡಾ ಭಾಗವಹಿಸಿ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.
ವಿದ್ಯಾಗಿರಿ: ಹಿಂದೆ ಕ್ರೀಡಾ ಸೌಲಭ್ಯಗಳ ಕೊರತೆ ಇದ್ದು, ಕ್ರೀಡಾಪಟುಗಳಿಗೆ ಸಾಧನೆ ಮಾಡಲು ಕಷ್ಟವಾಗುತ್ತಿತ್ತು. ಇಂದು ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ ಕಾಣುತ್ತಿದ್ದು, ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮಂಗಳವಾರ ಮೂಡುಬಿದಿರೆ ಸ್ವರಾಜ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ 2024 25 ವನ್ನು ಉದ್ಘಾಟಿಸಿ ಅವರು ಮಾತನಾಡಿದರು . ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕ ಸಿ.ಡಿ. ಜಯಣ್ಣ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯು ಕ್ರೀಡಾಕೂಟಗಳ ಆಯೋಜನೆಗೆ ಹೆಸರುವಾಸಿ. ಯಾವುದೇ ಕ್ರೀಡಾಕೂಟದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಕ್ರೀಡಾಪಟುಗಳು ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳುವುದು ಬಹಳ ಅವಶ್ಯಕ ಎಂದು ಸಲಹೆ ನೀಡಿದರು. ಶಿಸ್ತು, ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಯಶಸ್ಸು ಖಚಿತ ಎಂದರು. ಮೋಹನ ಆಳ್ವರು…
ಕರಾವಳಿ ಕರ್ನಾಟಕದ ತುಳುನಾಡಿನ ಮಂಗಳೂರಿನ ಶ್ರೀ ವಿಶ್ವನಾಥ್ ಶೆಟ್ಟಿ ಮತ್ತು ಶ್ರೀಮತಿ ಉಷಾ ವಿಶ್ವನಾಥ್ ಶೆಟ್ಟಿ ದಂಪತಿಗಳ ಪುತ್ರಿ ಕು|| ಸನ್ನಿಧಿ ವಿಶ್ವನಾಥ್ ಶೆಟ್ಟಿ ಪ್ರಸ್ತುತ ದುಬಾಯಿಯಲ್ಲಿ ನೆಲೆಸಿದ್ದಾರೆ. ವೃತ್ತಿಯಲ್ಲಿ ವಿಶ್ವನಾಥ್ಶೆ ಟ್ಟಿಯವರು ಮಲ್ಟಿ ನ್ಯಾಶನಲ್ ಕಂಪನಿಯ ಬ್ರ್ಯಾಂಚ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರವೃತ್ತಿಯಲ್ಲಿ ರಂಗಭೂಮಿ ನಟರು, ನಿರ್ದೇಶಕರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಕರ್ನಾಟಕ ಸಂಘ ಶಾರ್ಜಾದ ಉಪಾಧ್ಯಕ್ಷರಾಗಿದ್ದಾರೆ. ಜನ್ಮದಾತೆ ಶ್ರೀಮತಿ ಉಷಾ ಶೆಟ್ಟಿ ಯವರು ಸಹ ತನ್ನ ಗಾಯನ, ನೃತ್ಯಗಳಲ್ಲಿ ಪ್ರತಿಭೆಗಳ ಮೂಲಕ ಹಲವಾರು ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. ಸನ್ನಿಧಿ ಶೆಟ್ಟಿ ಬಾಲ್ಯದಿಂದಲೇ ತನ್ನಲ್ಲಿರುವ ಪ್ರತಿಭೆಯನ್ನು ವಿವಿಧ ಸಾಂಸ್ಕೃತಿಕ ವೇದಿಕೆಯಲ್ಲಿ ಅನಾವರಣ ಗೊಳಿಸುತ್ತಾ ಹೆಜ್ಜೆ ಗುರುತನ್ನು ಮೂಡಿಸಿದ್ದಾಳೆ. ಒಂದೂವರೆ ವಯಸಿನಲ್ಲೇ ಕಿನ್ನಿ ಪಿಲಿ (ಮರಿ ಹುಲಿವೇಷಧಾರಿಣಿಯಾಗಿ) ವೇದಿಕೆಮೇಲೆ ಪ್ರಥಮ ಪ್ರದರ್ಶನ ನೀಡಿದ್ದಾಳೆ. ತನ್ನ ಮೂರನೇಯ ವಯಸ್ಸಿನಲ್ಲಿ ದುಬಾಯಿಯ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯಲ್ಲಿ ತನ್ನ ಪುಟ್ಟ ಕಂಠಸಿರಿಯಲ್ಲಿ ಪ್ರಾರಂಭಿಸಿರುವ ಭಜನಾ ಸಂಗೀತ ಗಾಯನ ಇಂದಿಗೂ ಮುದುವರೆಸಿಕೊಂಡು ಬರುತ್ತಿದ್ದಾಳೆ. ನಾಲ್ಕನೆಯ…
ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿತು. ಗೋವಾ ತುಳು ಕೂಟವನ್ನು ಪುತ್ತೂರಿನ ಜನಪ್ರಿಯ ಶಾಸಕರು ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಭಾಷೆಯಾಗಿ ಜಾರಿಗೆ ತರುವ ಪ್ರಯತ್ನವನ್ನು ಮಾಡುತ್ತಿರುವ ಶ್ರೀ ಅಶೋಕ್ ಕುಮಾರ್ ರೈಯವರು ಉದ್ಘಾಟಿಸಿದರು. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬಯಿ ಮತ್ತು ಬೆಂಗಳೂರಿನಲ್ಲಿ ತುಳುವರು ತುಳುವರ ಸಂಘಗಳನ್ನು ಕಟ್ಟಿಕೊಂಡು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಅವರು ತುಳುನಾಡಿನಲ್ಲೇ ಇರುವಂತಹ ಅನುಭವವನ್ನು ಪಡೆದಿದ್ದಾರೆ. ಅದೇ ರೀತಿ ಗೋವಾದಲ್ಲೂ ತುಂಬಾ ಜನ ತುಳುವರಿದ್ದಾರೆ. ಅವರನ್ನು ಸಂಘಟಿಸುವ ಅವಕಾಶವಿರಲಿಲ್ಲ. ಯಾರಾದರೂ ತುಳುವಿನಲ್ಲಿ ಮಾತನಾಡುವುದನ್ನು ಕೇಳಿದರೆ ಯಾವ ಊರು? ಎಂದು ಕೇಳುವಷ್ಟು ಮಾತುಕತೆ ಮಾತ್ರ ನಡೆಯುತ್ತಿತ್ತು. ಅದಕ್ಕಿಂತ ಮುಂದೆ ಹೋಗುತ್ತಿರಲಿಲ್ಲ. ಹೀಗಾಗಿ ತುಳುವರನ್ನು…















