Author: admin

ಪ್ರಪಂಚದಾದ್ಯಂತ ತನ್ನ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ಪ್ರಸಿದ್ದಿ ಪಡೆದ ದೇಶವೆಂದರೆ ಅದು ನಮ್ಮ ಭಾರತ. ಭಾರತೀಯರಾಗಿ ನಮಗೆಲ್ಲರಿಗೂ ಬಹಳಷ್ಟು ಹೆಮ್ಮೆತರುವ ವಿಷಯವಿದು. ಭಾರತ ಎಂದ ಕೂಡಲೇ ವಿದೇಶಿಯರ ಮನದಲ್ಲಿ ಮೂಡುವುದು ಇಂದಿಗೂ ಆಚರಿಸಿಕೊಂಡು ಬರುತ್ತಿರುವ ಸಂಪ್ರದಾಯ, ಸಂಸ್ಕೃತಿ, ವಿವಿಧ ಹಬ್ಬಗಳು, ಮನ ಸೆಳೆಯುವ ಮೆರವಣಿಗೆಗಳು. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮದು. ವಿವಿಧ ಧರ್ಮದ ಜನರು ತಮ್ಮದೇ ಆದ ಸಂಸ್ಕೃತಿ ಮತ್ತು ಸಂಪ್ರದಾಯದೊಂದಿಗೆ ಶಾಂತಿಯುತವಾಗಿ ವಾಸಿಸುತ್ತಾರೆ. ವಿವಿಧ ಭಾಷೆ, ಸಂಸ್ಕೃತಿ, ಆಹಾರ ಪದ್ಧತಿ, ಆಚಾರ-ವಿಚಾರ, ಉಡುಪು ಇತ್ಯಾದಿಗಳನ್ನು ಹೊಂದಿದ್ದಾರೆ. “ಅತಿಥಿ ದೇವೋ ಭವ” ಎಂಬ ಮಾತಿನಂತೆ ನಮ್ಮ ಮನೆಗೆ, ನಮ್ಮಲ್ಲಿಗೆ ಬಂದವರು ನಮ್ಮ ಪಾಲಿಗೆ ದೇವರಂತೆ, ದೇವರಿಗೆ ಸಲ್ಲುವ ಮರ್ಯಾದಿ, ಗೌರವ ಅವರಿಗೂ ಸಿಗುತ್ತದೆ. ಇನ್ನು ನಮ್ಮ ಪಾಲಿಗೆ ಹಿರಿಯರ ಆಶೀರ್ವಾದ ಎಂದರೆ ದೇವರ ವರಕ್ಕೆ ಸಮಾನ. ಯಾವುದೇ ಶುಭಕಾರ್ಯ ಪ್ರಾರಂಭಗೊಳ್ಳುವ ಮೊದಲು ದೇವರ ಬಳಿಕ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆಯುತ್ತಾರೆ. ಪರರನ್ನೂ ತನ್ನಂತೆಯೇ ಗೌರವದಿಂದ ಕಾಣುವುದು ಪ್ರತೀ…

Read More

ಉಡುಪಿಯಲ್ಲಿ ನಡೆದ 22 ನೇ ರಾಜ್ಯ ಶಾಟ್ ಕೋರ್ಸ್ ಚಾಂಪಿಯನ್ ಶಿಪ್ -2023 ಈಜು ಸ್ಪರ್ಧೆಯಲ್ಲಿ ಅತಿವೇಗದ ಈಜುಗಾರ ಎಂಬ ಗರಿಮೆ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ದಕ್ಷಿಣ ವಲಯ ಈಜು ಸ್ಪರ್ಧೆಗೆ ರಿಲೇ ಸಹಿತ 8 ವಿಭಾಗಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಚಿಂತನ್ ಶೆಟ್ಟಿಯವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಸನ್ಮಾನಿಸಿ ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಚಿರಾಗ್ ಶೆಟ್ಟಿಯವರ ತಾಯಿ, ಒಕ್ಕೂಟದ ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಮುಂಬಯಿ:- ಮುಂಬಯಿ:- ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ, ನಾಡೋಜ ಪ್ರೊ.ಕಮಲಾ ಹಂಪನಾ ಪ್ರತಿಷ್ಠಾನ, ಬೆಂಗಳೂರು ಹಾಗೂ ಸಪ್ನ ಬುಕ್ ಹೌಸ್, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಸಂಭ್ರಮ, ರಾಷ್ಟೀಯ ವಿಚಾರ ಸಂಕಿರಣ ಹಾಗೂ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವು ಸೆಪ್ಟೆಂಬರ್ 24ರಂದು ಶನಿವಾರ ಮುಂಬಯಿ ವಿಶ್ವವಿದ್ಯಾಲಯ, ಕಲಿನಾ ಕ್ಯಾಂಪಸ್ಸಿನ ಕವಿ ಕುಸುಮಾಗ್ರಜ ಮರಾಠಿ ಭಾಷಾ ಭವನದಲ್ಲಿ ಆಯೋಜಿಸಲಾಗಿತ್ತು. ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ಜಿ.ಎನ್.ಉಪಾಧ್ಯ ಅವರು ಕನ್ನಡ ವಿಭಾಗದ ಮೂರು ಪ್ರಕಟಣೆಗಳು ಬಿಡುಗಡೆಗೊಳ್ಳುತ್ತಿರುವುದು ಸಂತೋಷವನ್ನು ತಂದಿದೆ. ಕನ್ನಡ ವಿಭಾಗ ಕನ್ನಡ, ಇಂಗ್ಲಿಷ್, ಮರಾಠಿ, ತುಳು ಹೀಗೆ ಬೇರೆ ಬೇರೆ ಭಾಷೆಗಳ ಇದುವರೆಗೆ 90 ಕೃತಿಗಳನ್ನು ಪ್ರಕಟಿಸಿದೆ. ಬಹುಭಾಷಾ ನೆಲೆಯಲ್ಲಿ ನಾವು ಕೆಲಸ ಮಾಡಬೇಕಾಗುತ್ತದೆ. ಪೂರ್ಣಿಮಾ ಶೆಟ್ಟಿ ಅವರ ಎರಡು ಕೃತಿಗಳು ಪುತ್ತೂರು, ಕತಾರ್ ಹಾಗೂ ಇಂದು ಮುಂಬಯಿ ವಿಶ್ವವಿದ್ಯಾಲಯದಲ್ಲಿ ಬಿಡುಗಡೆಗೊಳ್ಳುತಿದೆ. ಈ ರವಿತೇಜ ಕೃತಿಯನ್ನು ಇಂಗ್ಲಿಷ್ ಜಾಯಮಾನಕ್ಕೆ ಒಗ್ಗುವಂತೆ ಮಿಥಾಲಿ…

Read More

ಬೆಂಗಳೂರು ವಿಶ್ವವಿದ್ಯಾನಿಲಯವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಸ್ನಾತಕ ‌ಪದವಿ ತರಗತಿಗಳಿಗೆ ಭಾಷಾ ಪಠ್ಯಪುಸ್ತಕಗಳನ್ನು ಅಧ್ಯಯನ ಕೇಂದ್ರದ ನಿರ್ದೇಶಕರ ನೇತೃತ್ವದಲ್ಲಿ ಪಠ್ಯಪುಸ್ತಕ ಸಿದ್ದಪಡಿಸಿದ್ದು ಅದರಲ್ಲಿ ಬಿ.ಎಸ್. ಡಬ್ಲ್ಯೂ (ಬ್ಯಾಚುಲರ್ ಓಫ್ ಸೋಶಿಯಲ್ ವರ್ಕ್) ವಿದ್ಯಾರ್ಥಿಗಳ ನಾಲ್ಕನೇ ಸೆಮಿಸ್ಟರ್ ಗೆ ಸಮಾಜ ಕಾರ್ಯ ಕನ್ನಡ ಭಾಷಾ ಪಠ್ಯದಲ್ಲಿ ಲತಾ ಸಂತೋಷ್ ಶೆಟ್ಟಿ ಮುದ್ದುಮನೆ ಬರೆದ ಕುಂದಾಪುರದ ಕಂಪು ಶಿರ್ಷಿಕೆಯ ಲೇಖನ ಪಠ್ಯರೂಪದಲ್ಲಿ ಪಾಠ ಪುಸ್ತಕದಲ್ಲಿ ಸೇರ್ಪಡೆಗೊಂಡಿದೆ. ಕನ್ನಡ ಅಧ್ಯಯನ ಕೇಂದ್ರ, ಸ್ನಾತಕ ಅಧ್ಯಯನ ಮಂಡಳಿ ಮತ್ತು ಬೆಂಗಳೂರು ವಿಶ್ವವಿದ್ಯಾಲಯಗಳು ರಾಜ್ಯ ಪಠ್ಯ ಕ್ರಮಗಳ ಸಮಿತಿಯ ನಿರ್ದೇಶನಗಳ ಅನುಸಾರ ಈ ಪಠ್ಯ ಪುಸ್ತಕದ ಸಿದ್ದತೆ ನಡೆದಿದೆ. ಸಾಹಿತ್ಯ, ಸಂಸ್ಕ್ರತಿ ಮತ್ತು ರಾಷ್ಟ್ರೀಯ ಮನೋಭಾವವನ್ನು ಇಂದಿನ ಶಿಕ್ಷಣ ವ್ಯವಸ್ಥೆಯು ಕಟ್ಟಿಕೊಡಬೇಕೆಂಬ ‌ನಿಟ್ಟಿನಲ್ಲಿ ವಿಷಯಾದಾರಿತ ಪಠ್ಯ ಪುಸ್ತಕಗಳನ್ನು ತಯಾರಿಸಿದೆ. ಈ ಪಠ್ಯ ಪುಸ್ತಕದಲ್ಲಿ 1)ಮಾಧ್ಯಮ ವಿಭಾಗ, 2)ಪ್ರಾದೇಶಿಕತೆ ವಿಭಾಗ, 3) ಜೀವನ ಚರಿತ್ರೆ ವಿಭಾಗ, 4) ಸಂಕೀರ್ಣ ವಿಭಾಗ ಎಂಬ ಈ ನಾಲ್ಕು ವಿಭಾಗಗಳಿವೆ. ಪ್ರಾದೇಶಿಕತೆ…

Read More

ಮುಂಬಯಿಯ ಜನಪ್ರಿಯ ಸಂಘಟಕ, ಸಮಾಜ ಸೇವಕ ಶ್ರೀ ಗಿರೀಶ್ ಶೆಟ್ಟಿ ಇನ್ನ ಕಾಚೂರು ಬಂಟರ ಸಂಘ ಮುಂಬಯಿಯ ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವುದು ಹೆಮ್ಮೆಯ ವಿಷಯ ಹಾಗೂ ಇದೊಂದು ಅತ್ಯಂತ ಅರ್ಹ ಆಯ್ಕೆಯೂ ಹೌದು. ಇತ್ತೀಚಿನ ವರ್ಷಗಳಲ್ಲಿ ಉನ್ನತ ಶಿಕ್ಷಣ ಪಡೆದ ಯುವಕರು ತಮ್ಮ ಸ್ವಜಾತಿ ಬಾಂಧವರ ಸಾಮಾಜಿಕ ಕಾಳಜಿಯ ಬಂಟರ ಸಂಘ ಮುಂಬಯಿ ಇದರ ಸದಸ್ಯತ್ವ ಪಡೆದು ಕ್ರಮೇಣ ತಮ್ಮ ಸಂಘಟನಾ ಸಾಮರ್ಥ್ಯ, ಪ್ರತಿಭಾ ವಿಶೇಷತೆಗಳನ್ನು ಮೆರೆಯುತ್ತಿರುವುದು ನಿಜಕ್ಕೂ ಆರೋಗ್ಯಕರ ಬೆಳವಣಿಗೆ ಎನ್ನಬಹುದು. ಶ್ರೀ ಯುತ ಗಿರೀಶ್ ಶೆಟ್ಟರು ಬಿಕಾಂ ಜಿಡಿಸಿಎ ಎಲ್.ಎಲ್.ಬಿ ಪದವಿ ವಿಭೂಷಿತರು. ದಿವಂಗತ ರಾಘು ಕೆ ಶೆಟ್ಟಿ ಪಡುಕುಡೂರು ಹಾಗೂ ಶ್ರೀಮತಿ ಶಾರದಾ ರಾಘು ಶೆಟ್ಟಿ ದಂಪತಿಯ ಸುಪುತ್ರ ಗಿರೀಶ್ ವಿದ್ಯಾರ್ಥಿ ದೆಸೆಯಿಂದಲೇ ಪ್ರತಿಭಾವಂತ ಹಾಗೂ ಕ್ರಿಯಾಶೀಲ ಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದರು. ಆಟ ಪಾಠಗಳಲ್ಲಿ, ಇನ್ನಿತರ ಚಟುವಟಿಕೆಗಳಲ್ಲಿ ಮುಂದಿದ್ದು ತನ್ನ ಅಭ್ಯಾಸವನ್ನೂ ಸಮಾಂತರವಾಗಿ ಕಾಯ್ದುಕೊಂಡು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿ ಉನ್ನತ ಶಿಕ್ಷಣ ಪಡೆದು ಪ್ರತಿಷ್ಠಿತ…

Read More

“ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪೋಟಿ ಬೇಡ”. “ನನ್ನ ಜೀವನದ ಪ್ರತಿಯೊಂದು ಘಟ್ಟದಲ್ಲೂ ಪತ್ರಕರ್ತ ಮಿತ್ರರು ನನ್ನ ಜೊತೆ ನಿಂತು ಪ್ರೋತ್ಸಾಹ ಮಾಡಿರುವ ಕಾರಣ ದೇಶ ವಿದೇಶಗಳಲ್ಲಿ ಸರ್ಕಸ್ ಸಿನಿಮಾ ಜನರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ. ಚಿತ್ರದ ನಿರ್ಮಾಪಕರು ಹಾಕಿರುವ ಬಂಡವಾಳ ವಾಪಾಸ್ ಬಂದಿದೆ. ಇದಕ್ಕಾಗಿ ಪ್ರತಿಯೊಬ್ಬ ಪ್ರೇಕ್ಷಕನಿಗೂ ಧನ್ಯವಾದಗಳು. ಗಿರಿಗಿಟ್, ಗಮ್ಜಾಲ್, ಸರ್ಕಸ್ ಮೂರೂ ಚಿತ್ರಗಳಿಗೆ ಸಂಭಾಷಣೆ ಬರೆದಿರುವ ಪ್ರಸನ್ನ ಶೆಟ್ಟಿ ಬೈಲೂರು ಅವರು ನನ್ನ ಬೆನ್ನೆಲುಬು. ಅವರಿಗೆ ನಾನು ಥ್ಯಾಂಕ್ಸ್ ಹೇಳಬೇಕು” ಎಂದು ಸರ್ಕಸ್ ಚಿತ್ರ ನಿರ್ದೇಶಕ ರೂಪೇಶ್ ಶೆಟ್ಟಿ ಹೇಳಿದರು. ಅವರು ತಮ್ಮ ನಿರ್ದೇಶನ ಮತ್ತು ಅಭಿನಯದ “ಸರ್ಕಸ್” ತುಳು ಸಿನಿಮಾ ಜೂನ್ 23ರಂದು ವಿಶ್ವದಾದ್ಯಂತ…

Read More

ಮೂಡುಬಿದಿರೆ: ಆಳ್ವಾಸ್  ಸೆಂಟ್ರಲ್ ಸ್ಕೂಲ್‍ನ  9ನೇ ತರಗತಿಯ ವಿದ್ಯಾರ್ಥಿ ಮಾಸ್ಟರ್ ಅಮೋಘ್ ಎ  ಹೆಬ್ಬಾರ್ 2024ರ ಮಾರ್ಚ್  ತಿಂಗಳ ಕೊನೆಯಲ್ಲಿ ಉತ್ತರ ಆಫ್ರಿಕಾದ  ಟ್ಯುನೀಶಿಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ವಾರ್ಷಿಕ ಮೆಗಾ ಸೈನ್ಸ್ ಫೆಸ್ಟಿವಲ್, IFESTನಲ್ಲಿ “ಕೀಟ ಮತ್ತು ಕಳೆಗಳನ್ನು ನಿಯಂತ್ರಿಸಲು ನೈಸರ್ಗಿಕ ವಿಧಾನ”ಎಂಬ ಶೀರ್ಷಿಕೆಯ ಸಂಶೋಧನಾ ಯೋಜನೆಯನ್ನು ಪ್ರಸ್ತುತಪಡಿಸಲು ಅರ್ಹತೆ ಪಡೆದಿದ್ದಾರೆ. ಗುಜರಾತ್‍ನ ರಾಜಕೋಟ್‍ನಲ್ಲಿ ಜನವರಿ 26, 2024 ರಂದು ನಡೆದ ರಾಷ್ಟೀಯ ಮಟ್ಟದ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್  ಮೇಳದಲ್ಲಿ ಬೆಳ್ಳಿ ಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾದೇಶಿಕ ಮಟ್ಟದಲ್ಲಿ ಚಿನ್ನದ ಪದಕ ಗಳಿಸಿದ್ದ ಅಮೋಘ್, ಇತ್ತೀಚಿಗೆ ಕಲ್ಬುರ್ಗಿಯಲ್ಲಿ ನಡೆದ  ರಾಜ್ಯ ಮಟ್ಟದ  ರಾಷ್ಟೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್ ಮೇಳದಲ್ಲಿ ತಮ್ಮ ಸಂಶೋಧನಾ ಯೋಜನೆಯನ್ನು ಪ್ರದರ್ಶಿಸಿದ್ದರು. ಆಳ್ವಾಸ್ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಎಚ್ ಅಜಿತ್ ಹೆಬ್ಬಾರ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಯ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್…

Read More

ಒಂದು ಮನೆಯಲ್ಲಿನ ನಾಯಿ ಮತ್ತು ಬೆಕ್ಕು ಸ್ನೇಹದಲ್ಲಿರುವುದನ್ನು ನಾವು ನೋಡಿದ್ದೇವೆ. ಒಂದು ಕೊಟ್ಟಿಗೆಯಲ್ಲಿನ ಹಸುಗಳು ಮತ್ತು ಮೇಕೆಗಳು ಸಹಬಾಳ್ವೆಯಿಂದ ಬದುಕುವುದನ್ನು ಗಮನಿಸಿದ್ದೇವೆ. ಆನೆ, ಕುದುರೆ ಮುಂತಾದ ಪ್ರಾಣಿಗಳು ತನ್ನ ಮಾಲಕನ ಜತೆಗೆ ಸಹಕಾರದಿಂದ ಇರುವುದನ್ನು ನಾವು ಕಾಣುತ್ತೇವೆ. ಆಲದ ಮರವು ನೂರಾರು ಪ್ರಾಣಿಗಳಿಗೆ ನೆರಳನ್ನು ನೀಡುತ್ತದೆ. ಮರದಲ್ಲಿ ಹತ್ತಾರು ಪಕ್ಷಿಗಳು ಆಶ್ರಯ ಪಡೆಯುತ್ತವೆ. ಸಸ್ಯಗಳು ಪ್ರಾಣಿಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಕಾರ ನೀಡುತ್ತಾ ಬಂದಿವೆ. ಉಸಿರಾಡಲು ಆಮ್ಲಜನಕ, ತಿನ್ನಲು ಆಹಾರ ನೀಡುತ್ತಾ ಬಂದಿವೆ. ಇಲ್ಲೆಲ್ಲೂ ಸ್ವಾರ್ಥವೆಂಬುದಿಲ್ಲ. ಆದರೆ ಬುದ್ಧಿಜೀವಿಯಾದ ಮನುಷ್ಯ ಮನುಷ್ಯರ ನಡುವೆ ಸಹಕಾರದ ಕೊರತೆ ಏಕೆ ಎದ್ದು ಕಾಣುತ್ತಿದೆ? ಹಾಗಾದರೆ ಸಹಬಾಳ್ವೆಯಿಂದ ಜೀವನ ನಡೆಸಲು ಮನುಷ್ಯರಿಗೆ ಸಾಧ್ಯವಿಲ್ಲವೇ?… ಖಂಡಿತ ಸಾಧ್ಯವಿದೆ. ನಾನು, ನನ್ನದು ಎಂಬ ಸ್ವಾರ್ಥ ಮನೋಭಾವ, ನಾನೇ ಎಲ್ಲ, ನನ್ನಿಂದಲೇ ಎಲ್ಲ, ನಾನು ಎಣಿಸಿದಂತೆ ನಡೆಯಬೇಕು ಎಂಬ ದುರಹಂಕಾರವು ಮನುಷ್ಯನ ಬುದ್ಧಿಯನ್ನು ವಿಕಾರಗೊಳಿಸುತ್ತದೆ. ಕೂಡಿ ಬಾಳಿದರೆ ಸ್ವರ್ಗ ಸುಖ ಎಂಬ ಮಾತಿನಂತೆ ಮನೆ ಮಂದಿಯೆಲ್ಲ ಒಗ್ಗಟ್ಟಿನಿಂದ ಬಾಳಿದರೆ ಖಂಡಿತ…

Read More

ಸಂಘಟಕ, ಸಮಾಜ ಸೇವಕ, ಯುವ ಉದ್ಯಮಿ ರಾಕೇಶ್ ಶೆಟ್ಟಿ ಬೆಳ್ಳಾರೆ ಅವರು ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿರುವ ರಾಕೇಶ್ ಶೆಟ್ಟಿ ಅವರು ಅತಿಥಿ ಎಂಬ ಸಸ್ಯಾಹಾರಿ ಹೋಟೆಲ್ ನ ಮಾಲಕರಾಗಿದ್ದಾರೆ. ತನ್ನ ಸರಳ ಶಿಸ್ತಿನ ಗುಣ ನಡತೆಯಿಂದ ಎಲ್ಲರೊಂದಿಗೆ ಬೆರೆತು ಸುಖ ದುಃಖ ಗಳಿಗೆ ಸದಾ ಬೆರೆಯುವ ಶ್ರೀಯುತರ ಸಾಧನೆ, ಸಮಾಜಸೇವೆಗೆ ಧರ್ಮಪತ್ನಿ ಪೆಲತ್ತೂರು ಸುನೀತಾ ಶೆಟ್ಟಿ ಹಾಗೂ ಪುತ್ರಿ ಶ್ರೀಖಾ, ಪುತ್ರ ಕವಿನ್ ರವರು ಪ್ರೋತ್ಸಾಹಿಸುತ್ತಾ ಬರುತ್ತಿದ್ದಾರೆ.

Read More

ಕರ್ಮ ಕಾರ್ಯ ಮಾಡುವಾಗ ನಾನಲ್ಲ, ಸಮಾಜಕ್ಕಾಗಿ ಮಾಡುವವನು ಎಂಬ ಆತ್ಮ ಸ್ಮರಣೆ ನಮ್ಮಲ್ಲಿರಬೇಕು. ಕರ್ಮಫಲವನ್ನು ಅನುಭವಿಸುವವನು ಕೂಡಾ ನಾನಲ್ಲ. ಸಮಾಜಕ್ಕಾಗಿ ಮಾಡಿದೆ ಎಂಬ ಹೆಮ್ಮೆ ನಮ್ಮಲ್ಲಿರಲಿ. ಯಾವುದೇ ಕಾರ್ಯ ಇರಲಿ ಧನಾತ್ಮಕವಾಗಿ ನಡೆದಾಗ ಅದಕ್ಕೆ ಫಲ ಸಿಗುವುದು ಅದು ಸೃಷ್ಠಿಯ ನಿಯಮ. ಒಳ್ಳೆಯ ಕಾರ್ಯಕ್ಕೆ ಉತ್ತಮ ಫಲ ಸಿಕ್ಕಿಯೇ ಸಿಗುತ್ತದೆ. ನಮ್ಮ ಶ್ರೀಮಂತ ಸಂಸ್ಕ್ರತಿಗೆ ತಕ್ಕಂತೆ ಕೈಗೊಂಡ ಕಾರ್ಯ ಪರಿಪೂರ್ಣಗೊಳ್ಳುವ ತನಕ ವಿರಮಿಸದೆ ಸಮಾಜಕ್ಕಾಗಿ ಅರ್ಪಣೆ ಮಾಡುವ ಛಲವೊಂದಿದ್ದರೆ ಅದು ಬಂಟರಲ್ಲಿ ಕಾಣಬಹುದು. ನಿರ್ಮಲ ಮನಸ್ಸಿನ ಸೇವೆಯಿಂದ ಚಿತ್ತ ಶುದ್ದಿಯನ್ನು ಪಡೆಯಲು ಸಾದ್ಯ. ನಮ್ಮಲ್ಲಿರುವ ವಿವೇಕ ಚಿಂತನೆಯಿಂದ ಯಾವುದೇ ಪ್ರತ್ಯಾಪೇಕ್ಷೆ ಇಲ್ಲದೇ ಮಾಡುವ ಕಾರ್ಯವೇ ಶ್ರೇಷ್ಠವಾದುದು ಎಂದು ಮಣಿಪಾಲ್ ಹಾಸ್ಪಿಟಲ್ ನ ಕಾರ್ಯಾಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ನುಡಿದರು. ಬಂಟರ ಸಂಘ ಪುಣೆ ಇದರ ವಾರ್ಷಿಕೊತ್ಸವ ಸ್ನೇಹ ಸಮ್ಮಿಲನ ಸಮಾರಂಭವು ಜ 26ರಂದು ಬಾಣೇರ್ ನಲ್ಲಿರುವ ಪುಣೆ ಬಂಟರ ಭವನದ ಓಣಿಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದ ಲತಾ ಸುಧೀರ್ ಶೆಟ್ಟಿ…

Read More