Author: admin

ಈ ಜಗತ್ತಿನ ಭರವಸೆಯು ಯುವಜನರ ಮೇಲಿದೆ. ದೇಶವೊಂದರ ಯುವಶಕ್ತಿ ಸರಿಯಾದ ಮಾರ್ಗದಲ್ಲಿ ಸಾಗಿದರೆ ಮಾತ್ರ ಆ ದೇಶ ಪ್ರಗತಿಯತ್ತ ಸಾಗಲು ಸಾಧ್ಯಎಂದು ನಂಬಿದ್ದ ವಿವೇಕಾನಂದರ ಮಾತು ನೆನಪಿಗೆ ಬರುತ್ತದೆ. ಈ ನಿಟ್ಟಿನಲ್ಲಿ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ. ಎಂದು ಯುವ ಜನತೆಯನ್ನು ಬಡಿದೆಬ್ಬಿಸಿದ ಮಹಾನ್‌ ಚೇತನ ವಿಶ್ವಸಂತ ವಿವೇಕಾನಂದರು. ಆದರೆ ಪ್ರಸ್ತುತ ಈ ಮಾತು ಏಳಿ, ಎದ್ದೇಳಿ ಮೊಬೈಲ್‌ ಗೀಳಿನಲ್ಲಿ ಮುಳುಗಿದ ಯುವಜನತೆಯೇ ವ್ಯಸನಗಳ ತೊಟ್ಟಿಲಲ್ಲಿ ಮಲಗಿರುವ ಯುವ ಜನತೆಯೇ ಏಳಿ, ಎದ್ದೇಳಿ ಎಂದು ಸಾರುವಂತಾಗಿದೆ. ಯುವ ಜನತೆ ಸಾಮಾಜಿಕ ಜಾಲತಾಣದಲ್ಲಿ ತಮಗೆ ಎಷ್ಟು ಲೈಕ್‌ ಬಂದಿದೆ ಎಂದು ನೋಡುತ್ತಾ ಮೈಮರೆಯುತ್ತಿದೆ ತನ್ನ ಸಾಧನೆ ಏನು ಎಷ್ಟು ಎಂದು ಗಮನಿಸುತ್ತಿಲ್ಲ. ಜನ ಹೊರ ಜಗತ್ತಿನಲ್ಲಿ ನಿಜವಾಗಿಯೂ ತನ್ನನ್ನು ಎಷ್ಟು ಲೈಕ್‌ ಮಾಡುತ್ತಿದ್ದಾರೆ ಎಂಬುದನ್ನು ಗಮನಿಸುತ್ತಿಲ್ಲ. ತಮ್ಮ ಫೇಸ್‌ಬುಕ್‌ನಲ್ಲಿ ಎಷ್ಟು ಜನ ಸ್ನೇಹಿತರಿದ್ದಾರೆ ಇ ನ್ಸ್ಟಾಗ್ರಾಮ್‌ನಲ್ಲಿ ಎಷ್ಟು ಜನ ಫಾಲೋವರ್ಸ್‌ ಇದ್ದಾರೆ ಎಂಬುದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿದೆ ಹೊರತು ನಿಜ ಜೀವನದಲ್ಲಿ…

Read More

ಬಹು ರತ್ನಾನೀ ವಸುಂಧರಾ ಎಂಬ ಆರ್ಯೊಕ್ತಿ ಒಂದಿದೆ. ಅರ್ಥಾತ್ ನಮ್ಮ ಪುಣ್ಯ ಭೂಮಿಯ ಪುಣ್ಯ ಗರ್ಭದಲ್ಲಿ ಅದೆಷ್ಟೋ ಅನರ್ಘ್ಯ ರತ್ನಗಳು ಅಡಕವಾಗಿದ್ದು ಕಾಲ ಕಾಲಕ್ಕೆ ಅವಕಾಶ ಸಾಧಿಸಿ ಪ್ರಕಟವಾಗುತ್ತವೆಯಂತೆ. ನಮ್ಮ ತುಳುನಾಡಿಗಂತೂ ಈ ಮಾತು ಹೆಚ್ಚು ಅನ್ವಯವಾಗುತ್ತದೆ. ಇದೀಗ ಬಂಟರ ಸಂಘ ಮುಂಬಯಿಯ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಸೂರಜ್ ಶೆಟ್ಟಿ ಅವರು ಬಾಲ್ಯದ ದಿನಗಳಿಂದಲೇ ಧಾರ್ಮಿಕ ಪ್ರವೃತ್ತಿಯವರು. ಕ್ರೀಡೆ ಮತ್ತು ಸಮಾಜ ಸೇವೆಯ ಕ್ಷೇತ್ರದಲ್ಲಿ ವಿಶೇಷ ಅಭಿರುಚಿ ಹೊಂದಿದ್ದರು. ಬೆಳೆಯುತ್ತಲೇ ಅವರ ಒಂದೊಂದೇ ಗುಣ ವಿಶೇಷಗಳು ಪ್ರಕಟವಾಗತೊಡಗಿದವು. ಬಾಲ್ಯದ ದಿನಗಳಿಂದಲೂ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿ ಪ್ರತಿಭಾವಂತರಾಗಿದ್ದ ಸೂರಜ್ ಅವರು ಹಲವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸುತ್ತಲೇ ಹೇಗಾದರೂ ವಿದ್ಯಾವಂತನಾಗಬೇಕೆಂಬ ಹಂಬಲದಿಂದ ರಾತ್ರಿ ಹಗಲು ಅಭ್ಯಸಿಸಿ ತನ್ನ ಹೈಸ್ಕೂಲು ಶಿಕ್ಷಣ ಮುಗಿಸಿ ಮುಂದೆ ಏನಾದರೂ ಉದ್ಯೋಗ ಮಾಡುತ್ತಾ ಆರ್ಥಿಕ ಸ್ವಾವಲಂಬಿಯಾಗಬೇಕೆನ್ನುವ ಛಲದಿಂದ ರಾಷ್ಟ್ರದ ವಾಣಿಜ್ಯ ನಗರಿ ಮುಂಬಯಿ ಸೇರಿಕೊಂಡು ಪದವಿ ಪೂರ್ವ ಶಿಕ್ಷಣ ಪೂರೈಸಿದರು. ಮುಂದೆ ತನ್ನ ಉದ್ಯಮಕ್ಕೆ ಅನುಕೂಲವಾಗುವ…

Read More

ಲಯನ್ ಪ್ರಥಮ ಉಪ ಜಿಲ್ಲಾ ಗವರ್ನರ್‌ ಗೌರವಾನ್ವಿತ ಲಯನ್ ನೇರಿ ಕರ್ನೇಲಿಯೋ MJF  ಇವರು ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಗೆ ಅಧೀಕೃತ ಭೇಟಿ ನೀಡಿದರು. ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾ ಭವನ ದಲ್ಲಿ ಜರುಗಿದ ಕಾರ್ಯಕ್ರಮಕ್ಕೆ, ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಅಧ್ಯಕ್ಷರಾದ ಲಯನ್ ರಾಜಾರಾಮ್ ಶೆಟ್ಟಿ ಕಲ್ಕಟ್ಟೆ, ಕಾರ್ಯದರ್ಶಿ ಲಯನ್ ಅಜಿತ್ ಕುಮಾರ್ ಶೆಟ್ಟಿ ಕೊತ್ತಾಡಿ, ಕೋಶಾಧಿಕಾರಿ ಲಯನ್ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ & ಪದಾಧಿಕಾರಿಗಳು ಹಾಗೂ ಸದಸ್ಯರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿಕೊಂಡರು. ಲಯನ್ ಬನ್ನಾಡಿ ಪ್ರಭಾಕರ ಶೆಟ್ಟಿ ಯವರ ಪ್ರಾರ್ಥನೆ ಮೂಲಕ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕ್ಲಬ್ ನ ಕಾರ್ಯದರ್ಶಿ ಲಯನ್ ಅಜಿತ್ ಶೆಟ್ಟಿ ಕೊತ್ತಾಡಿ ಇವರು ಕ್ಲಬ್ ನ ಸೇವಾ ಚಟುವಟಿಕೆಗಳ ವರದಿ ಯನ್ನು ವಾಚಿಸಿದರು. ಲಯನ್ ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ಕೆ ಇವರು ಲಯನ್ ಫ್ಲಾಗ್ ಸೆಲ್ಯುಟೇಷನ್ ಹಾಗೂ ಲಯನ್ ಸುಭಾಸ್ ಶೆಟ್ಟಿ ಮಧುವನ ಇವರು ಲಯನ್ ಕೋಡ್ ಆಫ್ ಕಂಡಕ್ಟ್ ವಾಚಿಸಿದರು. ಸಭಾ…

Read More

ಯುವ ಯಕ್ಷಗಾನ ಕಲಾವಿದ, ಸಂಘಟಕ, ಯಕ್ಷಗಾನ ಆಸಕ್ತರಿಗೆ ಯಕ್ಷ ಗುರುವಾಗಿ ನಗರದಲ್ಲಿ ಗುರುತಿಸಿಕೊಂಡಿರುವ ನಾಗೇಶ್ ಪೊಳಲಿ ಸ್ಥಾಪಿಸಿರುವ ಯಕ್ಷ ಪ್ರಿಯ ಬಳಗ ಮೀರಾ ಭಾಯಂದರ್ ಇದರ ವತಿಯಿಂದ ಅಯೋಧ್ಯ ರಾಮ ಮಂದಿರ ಉದ್ಘಾಟನಾ ಪ್ರಯುಕ್ತ ಯಕ್ಷ ಪ್ರಿಯ ಬಳಗ ತಂಡದ ಕಲಾವಿದರಿಂದ ‘ಶ್ರೀ ರಾಮ’ ಎನ್ನುವ ಯಕ್ಷಗಾನ ಕಥಾ ಭಾಗವನ್ನು ಜನವರಿ 22 ರಂದು ಬಾಲಾಜಿ ಇಂಟರ್ನ್ಯಾಷನಲ್ ಹಾಲ್ ಭಾರತಿ ಪಾರ್ಕ್, ಮೀರಾ ರೋಡ್ ಇಲ್ಲಿ ನಡೆಯಿತು. ಯಕ್ಷಗಾನದ ಮಧ್ಯಾಂತರದಲ್ಲಿ ಬಿಜೆಪಿ ಪಕ್ಷದ ಮೀರಾ-ಭಾಯಂದರ್ ನ ದಕ್ಷಿಣ ಭಾರತೀಯ ಘಟಕದ ಅಧ್ಯಕ್ಷ, ಮುಂಬಯಿ ಬಂಟರ ಸಂಘದ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಬಳ್ಕುಂಜೆ ಗುತ್ತು ಗುತ್ತಿನಾರ್ ರವೀಂದ್ರ ದೇಜು ಶೆಟ್ಟಿ ಕೊಟ್ರಪಾಡಿ ಗುತ್ತು ಮತ್ತು ಬಂಟರ ಸಂಘದ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾದ ವಸಂತಿ ಶಿವ ಶೆಟ್ಟಿ ಇವರನ್ನು ಯಕ್ಷ ಪ್ರಿಯ ಬಳಗದ ವತಿಯಿಂದ ಯಕ್ಷ ರತ್ನ ಪ್ರಶಸ್ತಿಯನ್ನು ಕೊಟ್ಟು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಯಕ್ಷಗಾನದ…

Read More

ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ 2023-26 ರ ಸಾಲಿನ ಮಹಿಳಾ ವಿಭಾಗದ ಪದಾಧಿಕಾರಿಗಳ ಆಯ್ಕೆಯು ಕುರ್ಲಾ ಬಂಟರ ಭವನದಲ್ಲಿ ಡಿ.11 ರಂದು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ನೇತೃತ್ವದಲ್ಲಿ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಸಂಘದ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ಚಿತ್ರಾ ರವಿರಾಜ್ ಶೆಟ್ಟಿ, ಉಪ ಕಾರ್ಯಧ್ಯಕ್ಷೆಯಾಗಿ ಕವಿತಾ ಐ. ಆರ್. ಶೆಟ್ಟಿ, ಕಾರ್ಯದರ್ಶಿಯಾಗಿ ಆಶಾ ಸುಧೀರ್ ಶೆಟ್ಟಿ, ಕೋಶಾಧಿಕಾರಿಯಾಗಿ ಸುಚಿತಾ ಕುಸುಮಾಕರ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ವನಿತಾ ಯೋಗೇಶ್ ನೋಂಡ, ಜೊತೆ ಕೋಶಾಧಿಕಾರಿಯಾಗಿ ಸರೋಜ ಬಾಲಕೃಷ್ಣ ಶೆಟ್ಟಿ ಮುಂಡ್ಕೂರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರಲ್ಲದೆ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿ, ಗೌ. ಪ್ರ. ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಕೋಶಾಧಿಕಾರಿ ಸಿಎ ರಮೇಶ್ ಬಿ. ಶೆಟ್ಟಿ ಇನ್ನ, ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಜೊತೆ ಕೋಶಾಧಿಕಾರಿ ಶಶಿಧರ ಶೆಟ್ಟಿ ಇನ್ನಂಜೆ…

Read More

ಯಕ್ಷಗಾನವು ಒಂದು ಜನಪದ ಕಲೆಯಾಗಿದೆ. ಇದರಲ್ಲಿ ಹಿಮ್ಮೇಳ ಮುಮ್ಮೇಳ ಕಲಾವಿದರೆಂಬ ೨ ವಿಧಗಳಿವೆ. ಹಿಮ್ಮೇಳದಲ್ಲಿ ಭಾಗವತರು, ಮದ್ದಳೆಗಾರ, ಚೆಂಡೆವಾದಕ, ಚಕ್ರತಾಳ ಮತ್ತು ಶೃತಿ ನುಡಿಸುವವ (ಹಾರ್ಮೋನಿಯಂ) ಕಲಾವಿದರಿದ್ದರೆ, ಮುಮ್ಮೇಳದಲ್ಲಿ ಪಕಡಿ ವೇಷ, ಬಣ್ಣದ ವೇಷ, ಸ್ತ್ರೀ ವೇಷಗಳ ಪಾತ್ರಧಾರಿಗಳಿದ್ದಾರೆ. ಹೀಗೆ ಸಾಹಿತ್ಯ, ಸಂಗೀತ, ನೃತ್ಯ, ವಾದ್ಯ, ಅಭಿನಯ ಚಿತ್ರ ಮತ್ತಿತರ ಹಲವು ಬಗೆಯ ಉಪಾಂಗಗಳಿಂದ ಕೂಡಿದ ಯಕ್ಷಗಾನ ಒಂದು ಸಂಕೀರ್ಣ ಕಲೆ. ಈ ಶ್ರೀಮಂತ ಕಲೆಯಲ್ಲಿ ತಮ್ಮ ಗಾನ ಸುಧೆಯನ್ನು ಹರಿಸುತ್ತಿರುವ ಭಾಗವತರಾದ ದೇವಿಪ್ರಸಾದ್ ಆಳ್ವ ತಲಪಾಡಿಯವರು 20.07.1982 ರಂದು ಶ್ರೀಮತಿ ದೇವಕಿ ಆಳ್ವ ಹಾಗೂ ಆನಂದ ಆಳ್ವ ದಂಪತಿಯರ ಮಗನಾಗಿ ಜನನರಾದರು. ಎಸ್.ಎಸ್.ಎಲ್.ಸಿ ವರೆಗೆ ವಿದ್ಯಾಭ್ಯಾಸ. ಮನೆಯಲ್ಲಿ ಯಕ್ಷಗಾನದ ಬಗ್ಗೆ ಇದ್ದ ಒಲುಮೆ ಆಳ್ವರು ಯಕ್ಷಗಾನಕ್ಕೆ ಬರಲು ಪ್ರೇರಣೆಯಾಯಿತು. ಯಕ್ಷಗಾನದ ಗುರುಗಳು:- ಮಾಂಬಾಡಿ ಸುಬ್ರಹ್ಮಣ್ಯ ಭಟ್, ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ. ನಾಟ್ಯ ಗುರುಗಳು:- ದಯಾನಂದ ಗಟ್ಟಿ ಪಿಲಿಕೂರು, ಹರಿಶ್ಚಂದ್ರ ನಾಯ್ಗ ಮಾಡೂರು. ನೆಚ್ಚಿನ ಭಾಗವತರು:- ಪುರುಷೋತ್ತಮ ಪೂಂಜ,…

Read More

ಪ್ರಾಚೀನ ಮತ್ತು ಆದುನಿಕತೆಯ ಸಂಗಮ ಕಾಲದಲ್ಲಿರುವ ನಾವು ಭವ್ಯ ಇತಿಹಾಸ ಪರಂಪರೆ ಮತ್ತು ವೈವಿದ್ಯಮಯ ಹಿನ್ನೆಲೆ ಹೊಂದಿರುವ ತುಳು ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕೀಳರಿಮೆ ಹೊಂದದೆ ಅಭಿಮಾನ ಗೌರವದೊಂದಿಗೆ ಉಳಿಸಿಕೊಳ್ಳುವವರು ತುಳು ನಾಡಿನ ನಂಬಿಕೆ – ನಡುವಳಿಕೆಗಳು ಆಚಾರ, ವಿಚಾರಗಳು ಸಂದಿ, ಪಡ್ಡಾನಗಳು, ತಾಳಮದ್ದಳೆ, ಯಕ್ಷಗಾನ, ಜಾನಪದ ಕಲೆಗಳು, ಬಲಿಂದ್ರ ಪೂಜೆ, ಭೂತಾರಾಧನೆ, ನಾಗಾರಾಧನೆ, ಕೃಷಿ ಸಂಸ್ಕೃತಿ ನಮ್ಮ ಸಾರ್ಥಕ ಬದುಕಿಗೆ ಸಾಮರಸ್ಯದ ಮಾರ್ಗದರ್ಶಕವಾಗಿ ಭಾರತೀಯ ಸಂಸ್ಕೃತಿ ನಮ್ಮ ನಾಡಿನ ಜನ ಜೀವನ ದಿನ ನಿತ್ಯದ ನಡೆ ನುಡಿಗಳಲ್ಲಿ ಜಾಗ್ರತವಾಗಿದೆ. ದಕ್ಷಿಣ ಪತದ ಅಂಗವಾದ ಕರ್ನಾಟಕ ಅದರಲ್ಲಿಯೂ ತುಳುನಾಡು ಘನವಾದ ಐತಿಹಾಸಿಕ ಪರಂಪರೆಯನ್ನು ಪಡೆದಿದೆ. ಭಾರತೀಯ ಸಂಸ್ಕೃತಿಯ ಜೀವ ಸತ್ವವಾದ ಭಕ್ತಿ ಹುಟ್ಟಿ ಬೆಳೆದದ್ದೇ ಕನ್ನಡ ನಾಡಿನಲ್ಲಿ ಎಂದು ಪದ್ಮ ಪುರಾಣ ತಿಳಿಸುತ್ತದೆ. ನಮಗೆ ಜನ್ಮ ನೀಡಿದ ತಂದೆ ತಾಯಿಯಂತೆ ನಮ್ಮ ಮಾತೃ ಭಾಷೆ ನಮ್ಮ ಸಂಸ್ಕೃತಿ ರಕ್ಷಿಸುವ ನಮ್ಮ ಕರ್ತವ್ಯ ನಮ್ಮದಾಗಿದೆ. ಇನ್ನೊಬ್ಬರ ಯಶಸ್ಸಿನ ಬಗ್ಗೆ ಚಿಂತಿಸುತ್ತಾ ಅವರಿಗೆ…

Read More

ಉಡುಪಿಯ ಕನ್ನರ್ಪಾಡಿಯ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಮಾಣಿಕ್ಯ ಮಹೋತ್ಸವದ ಪ್ರಯುಕ್ತ ಆಯೋಜಿಸಲಾದ “ಸೇಂಟ್ ಮೇರಿಸ್ ರೂಬಿ ರನ್ 2023” ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಂದ ಅಪಾರ ಭಾಗವಹಿಸುವಿಕೆಗೆ ಪಾತ್ರವಾಯಿತು. ಕಿರಿಯರಿಂದ ಹಿಡಿದು ಹಿರಿಯ ನಾಗರೀಕರವರೆಗೂ ಬಹಳಷ್ಟು ಮಂದಿ ಕ್ರೀಡಾ ಸ್ಪೂರ್ತಿಯೊಂದಿಗೆ ಮ್ಯಾರಥಾನ್‌ನಲ್ಲಿ ಪಾಲ್ಗೊಂಡರು. ಮ್ಯಾರಥಾನ್ ಮುಗಿದ ಮೇಲೆ ಬಹುಮಾನ ವಿತರಣಾ ಸಮಾರಂಭವೂ ನಡೆಯಿತು. ವಿಜೇತರಿಗೆ ಗಣ್ಯರು ನಗದು ಬಹುಮಾನ, ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ ಟ್ರೋಫಿ ನೀಡಿ ಗೌರವಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಕುಂದಾಪುರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಿಜೇತರಿಗೆ ಟ್ರೋಫಿಗಳನ್ನು ಗೌತಮ್ ಶೆಟ್ಟಿ ಅವರಿಂದ ಪ್ರಾಯೋಜಿಸಲಾಯಿತು. ಗೌತಮ್ ಶೆಟ್ಟಿಯವರು ತನ್ನ ವೃತ್ತಿಪರ ಕ್ಯಾರಿಯರ್ ಅನ್ನು ಸೇಂಟ್ ಮೇರಿಸ್ ಉಡುಪಿಯಿಂದ ಪ್ರಾರಂಭಿಸಿದ್ದರು. ಮೊದಲ ಕೆಲಸವನ್ನು ಸೇಂಟ್ ಮೇರಿಸ್ ನಲ್ಲಿ 1997 ಜೂನ್ ನಿಂದ ಆಗಸ್ಟ್ 1998 ರವರೆಗೆ ಮಾಡಿದ್ದರು. 1 ವರ್ಷ 2 ತಿಂಗಳ ಕಾಲ ಕೆಲಸ…

Read More

ಯುವ ಬಂಟರ ಸಂಘ ಮೂಡಬಿದರೆ ಇದರ ಯುವ ಬಂಟರ ಸಂಘ ಗ್ರಾಮ ಸಮಿತಿ ದರೆಗುಡ್ಡೆ ರಚನೆಯಾಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಧರೆಗುಡ್ಡೆ ನರನ್ಗೊಟ್ಟು ಗುತ್ತು ಗೋಪಾಲ್ ಶೆಟ್ಟಿಯವರ ಮನೆಯಲ್ಲಿ ಗ್ರಾಮ ಸಮಿತಿಯ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಮ್. ಮೋಹನ್ ಆಳ್ವ, ಯುವ ಮುಖಂಡರಾದ ಮಿಥುನ್ ರೈ, ಕೆಪಿ ಸುಚರಿತ ಶೆಟ್ಟಿ, ಯುವ ಬಂಟರ ಸಂಘ ಮೂಡಬಿದ್ರೆ ಇದರ ಅಧ್ಯಕ್ಷರಾದ ಜಯಕುಮಾರ್ ಶೆಟ್ಟಿ, ಗ್ರಾಮ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ಶೆಟ್ಟಿ, ಅಶೋಕ್ ಶೆಟ್ಟಿ ಬೇಲೋಟ್ಟು, ಆನಂದ ಶೆಟ್ಟಿ, ಗೋಪಾಲ ಶೆಟ್ಟಿ, ರವೀಂದ್ರ ಶೆಟ್ಟಿ ಹಾಗೂ ಯುವ ಬಂಟರ ಸಂಘ ಮೂಡಬಿದ್ರೆ ಇದರ ಪದಾಧಿಕಾರಿಗಳಾದ ಮನೋಜ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಸಂದೀಪ್ ಶೆಟ್ಟಿ ಬೆಳುವಾಯಿ, ಶ್ರೀನಿತ್ ಶೆಟ್ಟಿ, ಭರತ್ ಶೆಟ್ಟಿ ಬೆಳುವಾಯಿ, ಆದರ್ಶ ಶೆಟ್ಟಿ, ದೀಪಕ್ ಶೆಟ್ಟಿ, ಸುಕುಮಾರ್ ಶೆಟ್ಟಿ, ಶೃತಿ…

Read More

ಪೆರ್ಡೂರು ಬಂಟರ ಸಂಘದ ವ್ಯಾಪ್ತಿಯ ಸಮಾಜ ಬಾಂಧವರ ಸಹಕಾರ, ದಾನಿಗಳ ನೆರವಿನೊಂದಿಗೆ ಗ್ರಾಮೀಣ ಪ್ರದೇಶ ಪೆರ್ಡೂರಿನಲ್ಲಿ ನಗರ ಪ್ರದೇಶದ ಸೌಲಭ್ಯ ಹೊಂದಿರುವ ಅತ್ಯಾಕರ್ಷಕ ವಿನ್ಯಾಸದ ಅತ್ಯಾಧುನಿಕ ಸೌಲಭ್ಯದ ಬಂಟರ ಸಮುದಾಯ ಭವನ ಫೆ. 11ರಂದು ಲೋಕಾರ್ಪಣೆಗೊಳ್ಳಲಿದ್ದು ಎಲ್ಲರೂ ಪಾಲ್ಗೊಳ್ಳಿ ಎಂದು ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಶಾಂತಾರಾಮ ಸೂಡ ಕೆ. ಹೇಳಿದರು. ಅವರು ಪೆರ್ಡೂರು ಬಂಟರ ಸಂಘದ ಸಭಾಂಗಣದಲ್ಲಿ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫೆ. 11ರಂದು ಗಣ್ಯರ ಉಪಸ್ಥಿತಿಯಲ್ಲಿ ದಿನವಿಡೀ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಮುದಾಯ ಭವನ ಲೋಕಾರ್ಪಣೆಗೊಳ್ಳಲಿದೆ. ಸಭಾಂಗಣವು ಸಹಸ್ರಾರು ಸಂಖ್ಯೆಯ ಜನರನ್ನು ಸೇರಿಸಿ ಸಮಾರಂಭ ಆಚರಿಸಲು ಯೋಗ್ಯವಾಗಿದೆ. ಜತೆಗೆ ವಾಹನ ನಿಲುಗಡೆಗೆ ವಿಶಾಲ ವ್ಯವಸ್ಥೆ ಇದೆ ಎಂದರು. ಸಂಘದ ಕೋಶಾಧಿಕಾರಿ ಪ್ರಮೋದ್‌ ರೈ ಪಳಜೆ, ಉಪಾಧ್ಯಕ್ಷ ಮಹೇಶ್‌ ಶೆಟ್ಟಿ ಪೈಬೆಟ್ಟು, ಸುಧಾಕರ ಶೆಟ್ಟಿ ಸಾಯಿಷಾ, ಸುರೇಶ್‌ ಹೆಗ್ಡೆ ಪಳಜೆ ಕಟ್ಟ,…

Read More