Author: admin
ಪಾವೂರು ಬಂಟರ ಸಂಘದ ಆಶ್ರಯದಲ್ಲಿ ನಡೆದ ಹಗ್ಗ ಜಗ್ಗಾಟ ಸ್ಫರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳೆಯರ ತಂಡ 490 ಕೆ.ಜಿ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಪ್ರಶಸ್ತಿ ಹಾಗೂ ಮುಕ್ತ ವಿಭಾಗದಲ್ಲೂ ಪ್ರಥಮ ಮತ್ತು ದ್ವಿತೀಯ ಪ್ರಶಸ್ತಿ ಪಡೆದುಕೊಂಡಿದೆ. ಕೆ.ಜಿ ವಿಭಾಗದಲ್ಲಿ ಬೆಸ್ಟ್ ಲಾಕರ್ ಪ್ರಶಸ್ತಿಯನ್ನು ಚಂದ್ರಕಲಾ ಶೆಟ್ಟಿ, ಮುಕ್ತ ವಿಭಾಗದಲ್ಲಿ ಬೆಸ್ಟ್ ಲಾಕರ್ ಪ್ರಶಸ್ತಿಯನ್ನು ಪ್ರವ್ಯ ಹೆಗ್ಡೆ ಹಾಗೂ ಬೆಸ್ಟ್ ಓಲ್ಡರ್ ಪ್ರಶಸ್ತಿಯನ್ನು ತಂಡದ ನಾಯಕಿ ಬಬಿತಾ ಶೆಟ್ಟಿ ಪಡೆದರು. ತರಬೇತುದಾರರಾದ ಆದರ್ಶ್ ಶೆಟ್ಟಿ, ನವೀಶ್ ಶೆಟ್ಟಿ ಪಡ್ರೆ, ನಿನಾದ್ ಜಯರಾಮ ಶೆಟ್ಟಿ, ರೋಹಿತ್ ಶೆಟ್ಟಿ ಉಪಸ್ಥಿತರಿದ್ದರು.
ಭಾರತೀಯ ಮಾಸ್ಟರ್ಸ್ ವೇಟ್ಲಿಫ್ಟಿಂಗ್ ತಂಡವು ಉದಯ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಜನವರಿ 30 ರಿಂದ ಫೆಬ್ರವರಿ 1ರವರೆಗೆ ಜರ್ಮನಿಯಲ್ಲಿ ನಡೆದ ಓಪನ್ ವರ್ಲ್ಡ್ ಚಾಂಪಿಯನ್ ಶಿಪ್ನಲ್ಲಿ ಭಾಗವಹಿಸಿ 3 ಚಿನ್ನ, 4 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ತನ್ನದಾಗಿಸಿ ದ್ವಿತೀಯ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ತಂಡವು ಹೆಚ್ಚಿನ ಆತ್ಮವಿಶ್ವಾಸದಿಂದ ಚಾಂಪಿಯನ್ ಶಿಪ್ಗೆ ಪ್ರವೇಶಿಸಿತ್ತು. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಇಂಡಿಯನ್ ಮಾಸ್ಟರ್ಸ್ ಫೆಡರೇಶನ್ನ ಅಧ್ಯಕ್ಷ, ಮಾಜಿ ರಾಷ್ಟ್ರೀಯ ಚಾಂಪಿಯನ್, ಅಂತರರಾಷ್ಟ್ರೀಯ ರೆಫರಿ, ಶಿವ ಛತ್ರಪತಿ ಪ್ರಶಸ್ತಿ ಪುರಸ್ಕೃತ ಮತ್ತು ಇಂಡಿಯನ್ ಮಾಸ್ಟರ್ಸ್ ಫೆಡರೇಷನ್ ನ ಪ್ರಧಾನ ಕಾರ್ಯದರ್ಶಿಯಾದ ಉದಯ್ ಎಸ್ ಶೆಟ್ಟಿ ನೇತೃತ್ವದಲ್ಲಿ ಭಾಗವಹಿಸಿದ್ದ 9 ಸದಸ್ಯರೂ ಕೂಡಾ ಪದಕ ಗೆದ್ದದ್ದು ವಿಶೇಷ. ಕ್ರೀಡಾ ಮಂತ್ರಿ ಡಾ. ಮನ್ಸುಖ್ ಲಕ್ಷ್ಮಣಭಾಯ್ ಮಾಂಡವಿಯಾ ಗೆದ್ದ ಎಲ್ಲಾ ಸದಸ್ಯರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಕರಿಕಾಡ ಸಿನಿಮಾವನ್ನು ಫೆಬ್ರವರಿ 6 ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕ ನಟನಾಗಿ ನಾನೇ ಅಭಿನಯಿಸಿದ್ದು. ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ. ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರು ಎಂದು ಮಾಹಿತಿ ನೀಡಿದರು. ಚಿತ್ರದ ನಿರ್ಮಾಪಕಿ ದೀಪ್ತಿ ದಾಮೋದರ್ ಮಾತಾಡಿ, ಸಿನಿಮಾದಲ್ಲಿ ಎಲ್ಲರೂ ಕಷ್ಟಪಟ್ಟು ನಟಿಸಿದ್ದಾರೆ. ನಾವೆಲ್ಲರೂ ಸಿನಿಮಾ ನೋಡಲು ಉತ್ಸುಕರಾಗಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು. ಚಿತ್ರಕ್ಕೆ ಸಂಭಾಷಣೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಕೆ. ವೆಂಕಟೇಶ್ ಮಾತಾಡಿ, ಸಿನಿಮಾದಲ್ಲಿ ಒಟ್ಟು 7 ಹಾಡುಗಳಿದ್ದು, 6 ಹಾಡುಗಳನ್ನು ನಾನೇ ಬರೆದಿದ್ದೇನೆ. ಎಲ್ಲಾ ಹಾಡುಗಳು ಕೂಡ ಚೆನ್ನಾಗಿ…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್ಸಿಸಿ ಸಾಧಕರನ್ನು ಗೌರವಿಸುವ ಸಮಾರಂಭವು ಸೋಮವಾರ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್ಸಿಸಿಯ ಸೇನಾ, ನೌಕಾ ಹಾಗೂ ವಾಯುಪಡೆ ಘಟಕಗಳು ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದ್ದವು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ವಲಯದ ಸೇನಾ ನೇಮಕಾತಿ ಎಡಿಜಿ ಮೇಜರ್ ಜನರಲ್ ಬ್ರೂಸ್ ಫರ್ನಾಂಡಿಸ್, ಎನ್ಸಿಸಿ ಯುವ ಜನತೆಯನ್ನು ಶಿಸ್ತು, ಸೇವಾ ಮನೋಭಾವ ಮತ್ತು ರಾಷ್ಟ್ರಪ್ರೇಮದೊಂದಿಗೆ ರೂಪಿಸುವ ಮಹತ್ವದ ಸಂಘಟನೆಯಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ತಂಡ ಭಾವನೆ ಮತ್ತು ಜವಾಬ್ದಾರಿಯುತ ನಾಗರೀಕತ್ವವನ್ನು ಬೆಳೆಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ತಮ್ಮದೇ ಎನ್ಸಿಸಿ ಅನುಭವಗಳನ್ನು ನೆನಪಿಸಿಕೊಂಡ ಅವರು, ತರಬೇತಿ ಜೀವನದ ಸವಾಲುಗಳನ್ನು ಎದುರಿಸಲು ಧೈರ್ಯ ಮತ್ತು ಹೋರಾಟದ ಮನೋಭಾವವನ್ನು ಹೊಂದಿರಬೇಕು ಎಂದು ಹೇಳಿದರು. ವ್ಯಕ್ತಿಯ ಯಶಸ್ಸು, ಸಮಾಜದ ಶಾಂತಿ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಶಿಸ್ತು ಅಗತ್ಯವಾದ ಅಡಿಪಾಯವಾಗಿದೆ. ಆದ್ದರಿಂದ ಶಿಸ್ತು ಪ್ರತಿಯೊಬ್ಬ ನಾಗರಿಕನ ಜೀವನಶೈಲಿಯಾಗಬೇಕು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಒಂದೇ ಕ್ಯಾಂಪಸ್ನಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿರುವುದನ್ನು…
ಬ್ರಹ್ಮಾವರ : ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಅದ್ಧೂರಿಯ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶಿರೂರು ಮಠದ ದಿವಾನರು ಹಾಗೂ ಖ್ಯಾತ ಸಂಸ್ಕೃತ ಪಂಡಿತರು ಮತ್ತು ಪ್ರಸ್ತುತ ಪರ್ಯಾಯ ಸ್ವಾಮೀಜಿಯವರ ತಂದೆ ಡಾ| ಉದಯಕುಮಾರ್ ಸರಳತ್ತಾಯರವರು ಆಗಮಿಸಿ ಮಾತನಾಡಿ ದೀಪದಿಂದ ದೀಪವನ್ನು ಹಚ್ಚಿದಾಗ ಆ ಬೆಳಕು ನಿರಂತರವಾಗಿ ಪ್ರಜ್ವಲಿಸಿ ಕತ್ತಲಿಗೆ ಹೇಗೆ ಅವಕಾಶ ನೀಡುವುದಿಲ್ಲವೋ ಹಾಗೆಯೇ ವಿದ್ಯಾರ್ಥಿಗಳಾದ ನಿಮಗೆ ಈ ಜಿ ಎಮ್ ಸಂಸ್ಥೆ ನಿರಂತರವಾಗಿ ಪ್ರಜ್ವಲಿಸಲು ಬೇಕಾದಂತಹ ಜ್ಞಾನವನ್ನು, ಸಂಸ್ಕಾರವನ್ನು, ಜೀವನ ಮೌಲ್ಯಗಳನ್ನು ನೀಡಿದೆ. ಈ ಮೌಲ್ಯಯುತ ಜ್ಞಾನವನ್ನು ಬಳಸಿಕೊಂಡು ಸ್ವಸ್ಥ ರಾಷ್ಟ್ರವನ್ನು ನಿರ್ಮಿಸುವಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಬೇಕೆಂಬ ಸಂದೇಶವನ್ನು ನೀಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿ ಎಲ್ಲರೂ ತಮ್ಮ ಪೆÇೀಷಕರ ಮುಖದಲ್ಲಿ ನಗುವನ್ನು, ಅವರು ಹೆಮ್ಮೆ ಪಡುವಂತಹ ಕೆಲಸವನ್ನು ಮಾಡಬೇಕು. ಹಾಗೆಯೇ ಭವಿಷ್ಯದಲ್ಲಿ ನಿಮ್ಮ ಸಾಧನೆಗಳನ್ನು ನಮ್ಮೊಂದಿಗೆ ಹಂಚಿಕೊಂಡಾಗ ಸಾರ್ಥಕತೆಯ ಭಾವನೆ…
ಕುವೈಟ್ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಶೋಧನ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಮ್ಮ ನೇತೃತ್ವದಲ್ಲಿ ಸಂಘವು ಇನ್ನಷ್ಟು ಬೆಳೆಯಲಿ, ಸಮಾಜ ಸೇವೆಯಲ್ಲಿ ಹೊಸ ಮೈಲುಗಲ್ಲುಗಳನ್ನು ಸಾಧಿಸಲಿ ಎಂಬುದು ನಮ್ಮ ಹಾರೈಕೆ. ನಿಮ್ಮ ಮುಂದಿನ ಕಾರ್ಯಯಾತ್ರೆಗೆ ಹಾರ್ದಿಕ ಶುಭಾಶಯಗಳು.
ಒಬ್ಬ ಕಾಫಿ ಘಮಲಿನಲ್ಲಿ ಜಗತ್ತನ್ನೇ ಗೆದ್ದಿದ್ದ ‘ಕಾಫಿ ಕಿಂಗ್’ ಸಿದ್ದಾರ್ಥ್. ಇನ್ನೊಬ್ಬ ಸಿಮೆಂಟ್ ಕಾಂಕ್ರೀಟ್ ಕಾಡಿನಲ್ಲಿ ಸಾಮ್ರಾಜ್ಯ ಕಟ್ಟಿದ್ದ ‘ರಿಯಲ್ ಎಸ್ಟೇಟ್ ಸುಲ್ತಾನ’ ಸಿಜೆ ರಾಯ್. ಇಬ್ಬರದ್ದು ಬೇರೆ ಬೇರೆ ದಾರಿ, ಆದ್ರೆ ಸೇರಿದ್ದು ಮಾತ್ರ ಒಂದೇ ಸ್ಮಶಾನವನ್ನು. ಕೇರಳದವರಾದ್ರೂ ರಾಯ್ ಗೆ ಕನ್ನಡ ಅಂದ್ರೆ ಪ್ರಾಣ. ಸುಮ್ನೆ ದುಡ್ಡು ಮಾಡಿ ಕೇರಳಕ್ಕೆ ಹೋಗ್ಲಿಲ್ಲ. ಗಾಂಧಿನಗರದ ಕಷ್ಟದ ಕಾಲದಲ್ಲಿ ಹೆಗಲು ಕೊಟ್ರು. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ‘ಕ್ರೇಜಿ ಲೋಕ’ ಸಿನಿಮಾ ನಿರ್ಮಾಣ ಮಾಡಿದ್ದು ಯಾರು? ಇದೇ ರಾಯ್!ರಮೇಶ್ ಅರವಿಂದ್ ಅವರ ‘ಪ್ರೀತಿಯಿಂದ ರಮೇಶ್’ ಮತ್ತು ‘ರಂಗಪ್ಪ ಹೋಗ್ಬಿಟ್ನ’ ಸಿನಿಮಾಗೆ ದುಡ್ಡು ಹಾಕಿದ್ರು. ಕೋಮಲ್ ಅವರ ‘ರಾಧಾನ ಗಂಡ’ ಸಿನಿಮಾಕ್ಕೂ ಇವರೇ ಬೆನ್ನೆಲುಬು. ಹೀಗೆ ಬಿದ್ದವರನ್ನು ಮೇಲೆತ್ತೋ ಜಾಯಮಾನ ಇವರದ್ದು. ನೀವು ಟಿವಿಯಲ್ಲಿ ಕಿಚ್ಚ ಸುದೀಪ್ ಅವರ ‘ಬಿಗ್ ಬಾಸ್’ ನೋಡಿರ್ತೀರ. ಆದ್ರೆ ಅದರ ಆರಂಭದ ಸೀಸನ್ ಗಳಲ್ಲಿ ಬರೀ ಸ್ಪಾನ್ಸರ್ ಆಗಿ ದುಡ್ಡು ಕೊಡದೆ, ಆ ಶೋನ ಅದ್ದೂರಿಯಾಗಿ ನಡೆಸೋಕೆ ಬೆನ್ನೆಲುಬಾಗಿ…
ಕರಾವಳಿಯ ವಾಯುಸೇನೆ ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿ ಅವರು 77ನೇ ಗಣರಾಜ್ಯೋತ್ಸವದ ಸಂದರ್ಭ ರಾಷ್ಟ್ರಪತಿಗಳು ನೀಡುವ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಭಾರತೀಯ ಸೇನೆಯು ಪಾಕಿಸ್ತಾನದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ 2025ರ ಮೇ ತಿಂಗಳಲ್ಲಿ ಭಾರತದ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿಯಾಗಿ ನಡೆಸಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಇವರು ಭಾಗಿಯಾಗಿದ್ದರು. ಇವರು ಸದಾಶಿವ ಶೆಟ್ಟಿ ಕೊಂಡಾಡಿ ಮತ್ತು ದೇವಕಿ ಶೆಟ್ಟಿ ಶಾನ್ಕಟ್ಟು ಅವರ ಪುತ್ರ. ಸಂದೀಪ್ ಶೆಟ್ಟಿ ಕಳೆದ 20 ವರ್ಷಗಳಿಂದ ಭಾರತೀಯ ವಾಯು ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಕಳೆದ 2 ವರ್ಷಗಳಿಂದ ಕಾಶ್ಮೀರದ ಶ್ರೀನಗರದ ವಾಯುನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಸ್ವದೇಶಿ ದೃಷ್ಟಿಕೋನದಲ್ಲಿ ವಿಕಸಿತ ಭಾರತ ನಿರ್ಮಾಣವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ಪರಂಪರೆಯ ನಿಜ ದರ್ಶನ ನೀಡುವ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕೆಂದು ಎಂದು ಮೈಸೂರು ಹಾಗೂ ಕೊಡಗು ಸಂಸದ ಯದುವೀರ್ ಅಭಿಪ್ರಾಯ ಪಟ್ಟರು. ಬೆಂಗಳೂರಿನ ರಾಮೋಹಳ್ಳಿಯ ಯೂನಿವರ್ಸಲ್ ಸಮೂಹ ಸಂಸ್ಥೆಯ ಸಂಸ್ಥಾಪನ ದಿನಾಚರಣೆ ಹಾಗೂ ರಜತ ಮಹೋತ್ಸವದಲ್ಲಿ ಅವರು ಮಾತನಾಡಿದರು. ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರ ದೂರ ದೃಷ್ಟಿಯೊಡನೆ ಭಾರತವು ಎಲ್ಲಾ ರಂಗಗಳಲ್ಲೂ ಉನ್ನತಿ ಸಾಧಿಸುತ್ತಿದೆ. ಈ ವಿಕಾಸ ಪರ್ವವು ದೇಶದ ಭವ್ಯ ಪರಂಪರೆ ಸಂಸ್ಕೃತಿಯನ್ನು ಇಮ್ಮಡಿಗೋಳಿಸುವಂತೆ ಇರಬೇಕು. ಸ್ವಂತಿಕೆ, ಸ್ವಾಭಿಮಾನ ಉದ್ದೀಪನಗೊಳಿಸುವಂತಿರಬೇಕು. ಹಾಗಾಗಿ ಸ್ವತಂತ್ರ ಪೂರ್ವದ ಮೆಕಾಲೆ ಶಿಕ್ಷಣ ನೀತಿ ಪರಿಷ್ಕರಿಸುವ ಅಗತ್ಯತೆ ಇದೆ ಎಂದರು. ಕಾನೂನು ರೂಪಿಸುವುದು ಶಾಸಕಾಂಗದ ಕಾರ್ಯ. ಅದರ ಯಶಸ್ಸು ಹಾಗೂ ಸೋಲು ಅಧಿಕಾರಿ ವರ್ಗದ ಮೇಲೆ ನಿಂತಿದೆ. ನಿಷ್ಠಾವಂತ ಅಧಿಕಾರಿಗಳಿಂದಲೇ ಮೈಸೂರು ಸಂಸ್ಥಾನ ಇಂದಿಗೂ ಜನಮನ್ನಣೆ ಗಳಿಸಿದೆ ಎಂದರು. ಇದೆ ವೇಳೆ ರಾಜಕಾರಣಿಗಳು ಹಾಗೂ ಅಧಿಕಾರಿಗಳನ್ನು ಹೀರೋಗಳಂತೆ ಮೆರೆಸುವ ಮನಸ್ಥಿತಿಯೂ ಮಾರಕ ಎಂದು…
ಯುವಕರು ಸಂಘಟಿತರಾಗಿ ಕ್ರೀಡೆ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಮೂಲಕ ಅಶಕ್ತರ ಬಾಳಿಗೆ ನೆರವಾಗಬೇಕು. ಕ್ರೀಡೆ ಮತ್ತು ವಿದ್ಯೆ ಸಮ್ಮಿಲನವಾದರೆ ಸಂಸ್ಕೃತಿ ಸಂಸ್ಕಾರ ಬೆಳೆಯುತ್ತದೆ ಎಂದು ಭೂ ನ್ಯಾಯ ಮಂಡಳಿ ಕುಂದಾಪುರದ ಮಾಜಿ ಸದಸ್ಯ ಚಿತ್ತರಂಜನ್ ಶೆಟ್ಟಿ ಹರ್ಕೂರು ಹೇಳಿದರು. ಅಂಬಾ ಕ್ರಿಕೆಟರ್ಸ್ ಮುಳ್ಳಿಕಟ್ಟಿ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಪ್ರೊ. ಸುರೇಂದ್ರ ಶೆಟ್ಟಿ ಕಮ್ಮಾರಕೋಡ್ಲು, ವಿಶ್ವನಾಥ ಶೆಟ್ಟಿ, ರಾಘವೇಂದ್ರ ಶೆಟ್ಟಿ, ರಕ್ಷಿತ್ ಶೆಟ್ಟಿ, ಮಹೇಶ್ ದೇವಾಡಿಗ, ಪ್ರಮೋದ್ ಆಚಾರ್ಯ, ನರಸಿಂಹ ಶೆಟ್ಟಿ, ಮಂಜುನಾಥ ಶೆಟ್ಟಿ, ಸತೀಶ್ ಶೆಟ್ಟಿ, ನಿತಿನ್ ಶೆಟ್ಟಿ, ಪ್ರವೀಣ್ ಪೂಜಾರಿ, ಪ್ರಣಯ್ ಶೆಟ್ಟಿ, ಗುರುಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.















