Author: admin

ಪುಣೆಯ ಕಂಟಾನ್ಮೆಂಟ್ ಪುಸ್ತಕ್ ಪೇಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪುಣೆಯ ಖ್ಯಾತ ಮಕ್ಕಳ ತಜ್ಞ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೂಡುಬಿದಿರೆ ಮೂಲದ ಡಾ. ಸುಧಾಕರ ಶೆಟ್ಟಿಯವರಿಗೆ ‘ಸಮಾಜ ಭೂಷಣ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪುಣೆಯ ಮುನ್ಸಿಪಲ್ ಕಾರ್ಪೊರೇಶನ್ ನ ಮಹಾತ್ಮ ಪುಲೆ ಆಡಿಟೋರಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸರಕಾರದ ಮಾಜಿ ಸಚಿವ ಬಾಲಾಸಾಹೇಬ್ ಶಿವಾರ್ಕರ್, ಹೈಕೋರ್ಟ್ ಹಿರಿಯ ನ್ಯಾಯವಾದಿ ಗಿರೀಶ್ ಡಾಂಗೆ, ಕಂಟಾನ್ಮೆಂಟ್ ನ ಮಾಜಿ ಉಪಾಧ್ಯಕ್ಷರಾದ ಅರ್ಜುನ್ ಕುರ್ಪೆ, ಬಾಪು ಗಾನ್ಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು, ಸಂಸ್ಥೆಯಲ್ಲಿ 29 ವರ್ಷಗಳ ಅಮೂಲ್ಯ ಸೇವೆಯನ್ನು ಸಲ್ಲಿಸಿ 30.06.2025 ರಂದು ನಿವೃತ್ತರಾದ ಸಹಾಯಕ ಮಹಾಪ್ರಬಂಧಕ ಶ್ರೀ ಮೋಹನ್‍ದಾಸ್ ಶೆಟ್ಟಿಯವರನ್ನ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ಸಂಘದ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈಯವರು, ನಿವೃತ್ತರು ಸಂಘಕ್ಕೆ ನೀಡಿರುವ ಸೇವೆಯನ್ನು ಅಭಿಮಾನಪೂರ್ವಕವಾಗಿ ಸ್ಮರಿಸಿ ನಿವೃತ್ತ ಜೀವನವು ಶುಭಕರವಾಗಲೆಂದು ಹಾರೈಸಿದರು.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಡಾ. ಸುಭಾಶ್ಚಂದ್ರ ಶೆಟ್ಟಿ, ಸಿ.ಎ. ಎಚ್. ಆರ್. ಶೆಟ್ಟಿ, ಶ್ರೀ ಯಂ. ರಾಮಯ ಶೆಟ್ಟಿ, ಶ್ರೀ ಪಿ. ಬಿ. ದಿವಾಕರ ರೈ, ಶ್ರೀ ರವೀಂದ್ರನಾಥ ಜಿ. ಹೆಗ್ಡೆ, ಶ್ರೀ ಕುಂಬ್ರ ದಯಾಕರ್ ಆಳ್ವ, ಶ್ರೀ ಅರಿಯಡ್ಕ ಚಿಕ್ಕಪ್ಪ ನಾೈಕ್, ಡಾ. ಬಿ. ಸಂಜೀವ ರೈ, ಮಹಾಪ್ರಬಂಧಕರಾದ ಶ್ರೀ ಗಣೇಶ್ ಜಿ. ಕೆ. ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕಳೆದ ವರ್ಷ ಬಿಡುಗಡೆಯಾಗಿ ಸಂಚಲನ ಮೂಡಿಸಿದ್ದ ‘ಧರ್ಮ ದೈವ’ ಚಿತ್ರದ ಸಂಪುಲ್ಲ ಜಾಗೆಡ್ ಹಾಡು ಹೊಸ ದಾಖಲೆಯನ್ನೇ ಬರೆದಿತ್ತು. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಹಾಡಿದ ಈ ಹಾಡಿಗೆ ಕೆ.ಕೆ ಪೇಜಾವರ ಸಾಹಿತ್ಯ ಬರೆದಿದ್ದು, ನಿಶಾನ್ ರೈ ಸಂಗೀತ ನೀಡಿದ್ದರು. ಈ ಹಾಡು ಅದೆಷ್ಟು ಜನಪ್ರಿಯತೆ ಪಡೆದಿತ್ತು ಎಂದರೆ ಕೋಸ್ಟಲ್ ಫಿಲಂ ಅವಾರ್ಡ್ ನಲ್ಲಿ ಉತ್ತಮ ಗಾಯಕ, ಸಂಗೀತ ಮತ್ತು ಸಾಹಿತ್ಯ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದ ಧರ್ಮ ದೈವ ಚಿತ್ರದ ಸಂಪುಲ್ಲ ಜಾಗೆಡ್ ಹಾಡು ಇತಿಹಾಸವಾದರೆ ಇದೀಗ ಅವರದೇ ನಿರ್ದೇಶನದ ಎರಡನೇ ತುಳು ಚಿತ್ರ ‘ಧರ್ಮ ಚಾವಡಿ’ಗೆ ಪಟ್ಲ ಸತೀಶ್ ಶೆಟ್ಟಿ ಹಾಡಿರುವ ಹಾಡಿನ ಬಿಡುಗಡೆಗೆ ತುಳುನಾಡೇ ಕಾತುರತೆಯಿಂದ ಕಾಯುತ್ತಿದೆ. ಈ ಹಾಡಿಗೆ ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದು, ಸಾಹಿತ್ಯ ಕೆ.ಕೆ ಪೇಜಾವರ ಬರೆದಿದ್ದಾರೆ. ಈ ಹಾಡು ಜುಲೈ 1ರಂದು ಸಂಜೆ 6ಗಂಟೆಗೆ ಎಂ.ಆರ್.ಟಿ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ‘ಧರ್ಮ ಚಾವಡಿ’ ಚಿತ್ರದ…

Read More

ಜೂನ್ 27 ರಂದು ಶುಕ್ರವಾರ ಸಂಜೆ ಕುಂದಾಪುರ ಫ್ರೆಂಡ್ಸ್ ವತಿಯಿಂದ ಉಡುಪಿ ಜಿಲ್ಲಾ ಉಪ ನಿರ್ದೇಶಕರಾದ ಲೋಕೇಶ ಸಿ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟೀಚರ್ಸ್ ಕೋ ಓಪರೇಟಿವ್ ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷರಾದ ವಿ ಸಂತೋಷ್ ಕುಮಾರ್ ಶೆಟ್ಟಿ, ಎ.ಪಿ.ಟಿ ಪೆರ್ಡೂರು ಶಾಲೆಯ ಮುಖ್ಯ ಶಿಕ್ಷಕರಾದ ಸತೀಶ್ ಶೆಟ್ಟಿ, ಕುಂದಾಪುರ ವಲಯದ ಅನುದಾನಿತ ಪ್ರಾಥಮಿಕ ಶಾಲಾ ಸಂಘದ ವಲಯ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಭಂಡಾರಿ, ವೀರೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೆಂಜೂರು ಇಲ್ಲಿನ ಮುಖ್ಯ ಶಿಕ್ಷಕರಾದ ನವೀನ್ ಚಂದ್ರ ಶೆಟ್ಟಿ, ಪಿ.ಎಂ.ಶ್ರೀ ಕುವೆಂಪು ಶಾಲೆಯ ಶಿಕ್ಷಕರಾದ ಸದಾನಂದ ಶೆಟ್ಟಿ ಮತ್ತು ವಂಡ್ಸೆ ಸಮೂಹ ಸಂಪನ್ಮೂಲ ವ್ಯಕ್ತಿ ಎಂ ನಾಗರಾಜ್ ಶೆಟ್ಟಿಯವರು ಉಪಸ್ಥಿತರಿದ್ದರು.

Read More

ಮಾನವನ ವ್ಯಕ್ತಿತ್ವ ಹಲವಾರು ವಿಚಾರಗಳ ಮಿಶ್ರಣ : ವೀರೇಶಾನಂದ ಸರಸ್ವತಿ ಸ್ವಾಮೀಜಿ ತಿಂಗಳ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ದಲ್ಲಿ ಅಭಿಮತ ಗಣಿತನಗರ: ಜೀವನದಲ್ಲಿ ಯಶಸ್ಸಿಗಿಂತ ಮೌಲ್ಯಗಳಿಗೆ ಬೆಲೆಕೊಡಬೇಕು ಹಾಗೂ ಗೌರವಿಸ ಬೇಕು, ನಾವು ಬುದ್ದಿವಂತರಾದರೆ ಸಾಲದು, ಪ್ರಜ್ಞಾವಂತರಾಗಬೇಕು ಎಂದು ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ “ಮೌಲ್ಯಸುಧಾ”-37ರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತುಮಕೂರಿನ ರಾಮಕೃಷ್ಣ ನಗರದ ರಾಮಕೃಷ್ಣ – ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪೂಜ್ಯ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ‘ಸ್ವನಿಯಂತ್ರಣ : ಬಂಧನವೋ? ಸ್ವಾತಂತ್ರ್ಯವೋ?’ ಎಂಬ ವಿಷಯದ ಕುರಿತು ಉಪನ್ಯಾಸದಲ್ಲಿ ಮಾತನಾಡಿದರು. ಬುದ್ಧಿವಂತಿಕೆ ವೃದ್ಧಿಯಾಗದೆ ಜ್ಞಾನವು ವೃದ್ಧಿಯಾದರೆ ದುಃಖವು ಹೆಚ್ಚಾಗುತ್ತದೆ. ಮಾನವನ ವ್ಯಕ್ತಿತ್ವ ಹಲವಾರು ವಿಚಾರಗಳ ಮಿಶ್ರಣ. ನಕಾರಾತ್ಮಕ ಚಿಂತನೆಯನ್ನು ನಿಯಂತ್ರಿಸಬೇಕು. ಸ್ವನಿಯಂತ್ರಣ ಮಾನವನ ಕರ್ತವ್ಯವಾಗಬೇಕು. ಆತ್ಮಹತ್ಯೆ ಎಂಬುದು ತಾತ್ಕಾ ಲಿಕ ಸಮಸ್ಯೆಗೆ ಶಾಶ್ವತ ಪರಿಹಾರವೆಂದು ಇಂದಿನ…

Read More

ಪುಣೆ ಬಂಟರ ಸಂಘದ ಶಕುಂತಲಾ ಜಗನ್ನಾಥ್ ಶೆಟ್ಟಿ ಕಲ್ಪವೃಕ್ಷ ಸಮಾಜ ಕಲ್ಯಾಣ ಯೋಜನೆ ವತಿಯಿಂದ ವಿದ್ಯಾರ್ಥಿಗಳಿಗೆ ಅರ್ಥಿಕ ಸಹಾಯ ವಿತರಣಾ ಸಮಾರಂಭ, ಪ್ರತಿಭಾನ್ವಿತ ವಿಧ್ಯಾರ್ಥಿಗಳ ಸತ್ಕಾರ ಮತ್ತು ಆಟೀಡ್ ಒಂಜಿ ದಿನ ಆಚರಣೆಯು ಅಗಸ್ಟ್ 3 ರಂದು ನಡೆಯಲಿದೆ. ಸಂಘದ ಮಹತ್ವದ ಯೋಜನೆಯಾದ ಕಲ್ಪವೃಕ್ಷ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಥಿಕ ಸಹಾಯ ನಡೆಯಲಿದೆ. ಎಂ.ಅರ್.ಜಿ ಗ್ರೂಪ್ ಸಿ.ಎಂ.ಡಿ ಡಾ| ಕೆ ಪ್ರಕಾಶ್ ಶೆಟ್ಟಿ ಪ್ರಾಯೋಜಿತ ವಿದ್ಯಾದಾತ ಯೋಜನೆಯಡಿಯಲ್ಲಿ ಬಂಟರ ಸಂಘದ ವತಿಯಿಂದ ಪ್ರತಿವರ್ಷ ವಿಧ್ಯಾರ್ಥಿಗಳಿಗೆ ಸುಮಾರು 20 ಲಕ್ಷಗಳಿಗಿಂತ ಮೇಲ್ಪಟ್ಟು ನೆರವನ್ನು ನೀಡುತ್ತಾ ಬರುತ್ತಿದೆ. ಈ ಬಾರಿ ಆಗಸ್ಟ್ 3ರಂದು ನಡೆಯಲಿರುವ ಈ ಮಹತ್ವಾಕಾಂಕ್ಷೆಯ ಸಮಾಜಮುಖಿ ಕಾರ್ಯಕ್ರಮವು ಸಂಘದ ಗೌರವಾಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಗೌರವ ಉಪಸ್ಥಿತಿಯಲ್ಲಿ, ಅಧ್ಯಕ್ಷರಾದ ಅಜಿತ್ ಹೆಗ್ಡೆ ಕೆಂಜಾರು ಗುತ್ತುರವರ ಅಧ್ಯಕ್ಷತೆಯಲ್ಲಿ, ಕಲ್ಪವೃಕ್ಷ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರುರವರ ಆಯೋಜನೆಯಲ್ಲಿ ಅತಿಥಿ ಆಭ್ಯಾಗತರ ಗಣ ಉಪಸ್ಥಿತಿಯೊಂದಿಗೆ ನಡೆಯಲಿದೆ. ಸಂಘದ…

Read More

ಸಂತ ಜ್ಞಾನೇಶ್ವರ ಮಹಾರಾಜ್ ಸಂತ ತುಕಾರಂ ಮಹರಾಜ್ ಪಲ್ಲಕ್ಕಿಯು ಪುಣೆಯಲ್ಲಿ ಎರಡು ದಿನದ ದರ್ಶನದ ನಂತರ ಪಂಡರಾಪುರಕ್ಕೆ ಹಡಪ್ಸರ್ ಮಾರ್ಗವಾಗಿ ಜೂನ್ 22ರಂದು ಬೆಳಿಗ್ಗೆ ಹೊರಟಿದ್ದು, ಈ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯ ವಾರ್ಕರಿಗಳಿಗೆ ಪುಣೆ ಬಂಟ್ಸ್ ಅಸೋಸಿಯೇಷನ್ ವತಿಯಿಂದ ವಾರ್ಕರಿಗಳಿಗೆ ಉಚಿತ, ಬಿಸ್ಕೆಟ್, ಹಣ್ಣು ಹಂಪಲು ವಿವಿಧ ಆಹಾರ ವಸ್ತುಗಳ ವಿತರಣೆಯು ಹಡಪ್ಸರ್ ನಲ್ಲಿ ಹಾಕಿದ ಬಂಟ್ಸ್ ಅಸೋಸಿಯೇಷನ್ ವಿತರಣಾ ಕೌಂಟರ್ ನಲ್ಲಿ ಬೆಳಿಗ್ಗೆ ಗಂಟೆ 6.00 ರಿಂದ ನಡೆಯಿತು. ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿಗುತ್ತು ಹಾಗೂ ಪದಾಧಿಕಾರಿಗಳ ಹಾಗೂ ದಾನಿಗಳ ನೇತೃತ್ವದಲ್ಲಿ ನಡೆದ ಈ ಆಹಾರ ವಿತರಣೆಯಲ್ಲಿ ಸಮಿತಿಯ ಸದಸ್ಯರು ತಮ್ಮ ಪ್ರಾಯೋಜಕತ್ವದ ವಿವಿಧ ಬಗೆಯ ಆಹಾರ ವಸ್ತುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬಂಟ್ಸ್ ಅಸೋಸಿಯೇಷನ್ ನ ಉಪಾಧ್ಯಕ್ಷ ಸತೀಶ್ ರೈ ಕಲ್ಲಂಗಳ ಗುತ್ತು, ಮಹಿಳಾ ಕಾರ್ಯಾಧ್ಯಕ್ಷೆ ರೇಷ್ಮಾ ಆರ್ ರೈ, ಯುವ ವಿಭಾಗದ ಕಾರ್ಯಾಧ್ಯಕ್ಷ ಅದೀಪ್ ಶೆಟ್ಟಿ, ಪ್ರಮುಖರಾದ ರವೀಂದ್ರ ಶೆಟ್ಟಿ, ತಾರಾನಾಥ್ ರೈ…

Read More

ಪುಸ್ತಕಗಳನ್ನು ಓದಿ ಮೋಟಿವೇಟ್ ಆಗಬಹುದು. ಭಾಷಣಗಳನ್ನು ಕೇಳಿ ಮೋಟಿವೇಟ್ ಆಗಬಹುದು. ಗೆದ್ದವರ ಕತೆಗಳನ್ನು ಕೇಳಿಯೂ ಮೋಟಿವೇಟ್ ಆಗಬಹುದು ಅಥವಾ ನಾನೀಗ ಬರೆಯುತ್ತಿರುವಂತಹ ಬರಹಗಳನ್ನು ನೋಡಿಯೂ ಮೋಟಿವೇಟ್ ಆಗಬಹುದು. ಆದ್ರೆ ಅವೆಲ್ಲವೂ ತಾತ್ಕಾಲಿಕ. ಶಾಶ್ವತ ಯಾವುದು ಗೊತ್ತಾ? ಸೆಲ್ಫ್ ಮೋಟಿವೇಶನ್!! ಅದೊಂದು ಮಾತ್ರ ನಮ್ಮನ್ನು ಕಾಪಾಡಬಲ್ಲದು. ಸೆಲ್ಫ್ ಮೋಟಿವೇಶನ್ ಇದ್ದವನು ಹೇಗಿರ್ತಾನೆ ಅಂದರೆ, ಭೂಮಿಯ ಗುರುತ್ವಾಕರ್ಷಣೆಯಿಂದ ತಪ್ಪಿಸಿಕೊಳ್ಳಲು ಆಕಾಶಕ್ಕೆ ಚಿಮ್ಮುವ ರಾಕೆಟ್ಟಿನಂತಿರುತ್ತಾನೆ. ಅವನೊಳಗಿನ ಉತ್ಸಾಹದ ವೇಗಕ್ಕೆ ಸಾಟಿಯೇ ಇರುವುದಿಲ್ಲ! ಗೂಗಲ್ ಮ್ಯಾಪಿನಂತಿರುತ್ತೆ ಅವನ ಸ್ಪಷ್ಟತೆ. ಒಂದು ದಾರಿ ಮುಚ್ಚಿದರೂ ಇನ್ನೊಂದು ಹುಡುಕಿಕೊಂಡು ಹೊರಟುಬಿಡುತ್ತಾನೆ. ರೈಲಿನ ಹಳಿಯಂತಿರುತ್ತೆ ಅವನೊಳಗಿನ ಗುರಿ. ಯಾವುದೇ ಕಾರಣಕ್ಕೂ ಅವನು ಟ್ರ್ಯಾಕು ತಪ್ಪುವುದಿಲ್ಲ! ಮುಖ್ಯವಾಗಿ ರೇಸ್ ಕಾರಿನಷ್ಟು ಫಿಟ್ ಅಂಡ್ ಫೈನಾಗಿರ್ತಾನೆ ಅವನು. ಯಾವಾಗ ಆನ್ ಮಾಡಿದ್ರೂ ಸೌಂಡೇ ಸೌಂಡು! ಹಾಗಿದ್ದರೆ ಮಾತ್ರ ನಮ್ಮ ಬದುಕೆನ್ನೋದು ಯಾರೇ ಕೂಗಾಡಲಿ, ಊರೇ ಹೋರಾಡಲಿ ಅನ್ನೋ ತರ ನಡೆದು ಹೋಗುತ್ತೆ! ಇಲ್ಲವಾದ್ರೆ ಇದು ಯಾರು ಬರೆದ ಕತೆಯೋ, ನನಗಾಗಿ ಬಂದ ವ್ಯಥೆಯೋ.

Read More

ಪ್ರತಿಷ್ಠಿತ ಸೇನಾ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಪ್ರತಿ ವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗಳ ತರಬೇತಿಯನ್ನು ನೀಡುತ್ತಿದ್ದು, ಪ್ರಸ್ತುತ ವರ್ಷದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಶ್ರೀ ಈಶ್ವರ ಭಟ್ ರವರು ಶುಭವನ್ನು ಹಾರೈಸಿದರು.ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಭವಿಷ್ಯದ ಸೇನಾ ಯೋಧರಾಗುವ ನಿಟ್ಟಿನಲ್ಲಿ ಪ್ರಾರ್ಥಿಸಿ ಪ್ರಸಾದ ನೀಡಲಾಯಿತು.ಈ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಶ್ರೀ ಭಾಗ್ಯೇಶ್ ರೈ ಹಾಗೂ ಅವರ ಧರ್ಮಪತ್ನಿ, ತರಬೇತುದಾರೆ ಶ್ರೀಮತಿ ರಮ್ಯಾ ಭಾಗ್ಯೇಶ್ ರೈ ರವರು ಉಪಸ್ಥಿತರಿದ್ದು, ಪಂಜಿಗುಡ್ಡೆ ಈಶ್ವರ ಭಟ್ ರವರು ವಿದ್ಯಾಮಾತಾ ಅಕಾಡೆಮಿಯ ಎಲ್ಲಾ ಸಮಾಜಮುಖಿ ಚಿಂತನೆಗಳ ಅತ್ಯುತ್ತಮ ಕೆಲಸಗಳಿಗೆ ಹಾಗೂ ಮುಖ್ಯವಾಗಿ ದೇಶ ಕಾಯುವ ಸೇನಾ ಯೋಧರನ್ನು ತಯಾರು ಮಾಡುವ ಒಳ್ಳೆಯ ಕೆಲಸಕ್ಕೆ ಸದಾ ಕ್ಷೇತ್ರದ ಹಾಗೂ ನಮ್ಮ ವೈಯಕ್ತಿಕ ನೆಲೆಯಲ್ಲಿ…

Read More

ಜೂನ್ ೨೭ರಂದು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಹಾಗೂ ಹೈಸ್ಕೂಲ್ ಇದರ ಆಶ್ರಯದಲ್ಲಿ ಕಾನೂನು ಅರಿವು ಮತ್ತು ನಶಾ ಮುಕ್ತ ಭಾರತ ಎನ್ನುವ ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈಗಿನ ಯುವ ಪೀಳಿಗೆಯು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎನ್ನುವ ನಿಟ್ಟಿನಲ್ಲಿ ಕೋಟ ಪೋಲಿಸ್ ಠಾಣೆಯ ಸಬ್ ಇನ್ಸಪೆಕ್ಟರ್ ಆಗಿರುವ ರಾಘವೇಂದ್ರ ಸಿ ಅವರು ಅತಿಥಿಯಾಗಿ ಆಗಮಿಸಿ ಈ ವಿಚಾರವಾಗಿ ಪ್ರಸ್ತಾಪಿಸಿ, ಇಂದಿನ ಯುವಜನತೆ ಮಾದಕ ವಸ್ತುಗಳ ದಾಸರಾಗುತ್ತಿರುವುದು ಅಪಾಯಕಾರಿಯ ಅಂಶವಾಗಿದೆ. ಮಾದಕ ವ್ಯಸನ ಮಾಡಿದ ವ್ಯಕ್ತಿಗೆ ಮಾತ್ರವಲ್ಲದೆ ಕುಟುಂಬವೂ ಸಹ ಅದರ ಪರಿಣಾಮಕ್ಕೆ ಕರಣರಾಗುತ್ತಾರೆ ಎಂದು ಹಲವರು ನಿದರ್ಶನಗಳ ಮೂಲಕ ತಮ್ಮ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಮನದಟ್ಟಾಗಿಸಿದರು. ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ ಯವರು ಈ ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯರ‍್ಥಿಗಳು ಮಾದಕ ದ್ರವ್ಯ ವ್ಯಸನದ ವಿರುದ್ಧ ಪ್ರತಿಜ್ಞಾವಿಧಿಯನ್ನ ಸ್ವೀಕರಿಸಿದರು. ಎಕ್ಸಲೆಂಟ್ ಪದವಿ ಪರ‍್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಪ್ರಾಸ್ತವಿಕವಾಗಿ ಮಾತನಾಡಿದರು. ಹೈಸ್ಕೂಲ್ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ…

Read More