Author: admin
ನಿರ್ದೇಶಕ ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಚಿತ್ರಕ್ಕೆ ಮುಹೂರ್ತವಾಗಿದ್ದು, ಈ ಚಿತ್ರದ ಮೂಲಕ ಉದ್ಯಮಿ, ರಾಜಕೀಯ ಮುಖಂಡ, ಸಮಾಜಸೇವಕ ಅನಿಲ್ ಶೆಟ್ಟಿ ನಾಯಕ ನಟನಾಗಿ ಹಾಗೂ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ. ಬಾಲಿವುಡ್ ನಟಿ ಸಾಚಿ ಬಿಂದ್ರಾ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಬರುತ್ತಿದ್ದಾರೆ. ಅನಿಲ್ ಶೆಟ್ಟಿ ಹಾಗೂ ಅಭಿಜಿತ್ ಮಹೇಶ್ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈ ತಿಂಗಳ ಕೊನೆಯಲ್ಲಿ ಚಿತ್ರಿಕರಣ ಆರಂಭವಾಗುವ ನೀರಿಕ್ಷೆ ಇದ್ದು ನಿರ್ದೇಶಕ ಸಿಂಪಲ್ ಸುನಿ ತಮ್ಮ ತಂಡದೊಂದಿಗೆ ಪ್ರೀ ಪ್ರೊಡಕ್ಷನ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರವು ಎಐ, ಯುವಜನತೆ, ವೇಗವಾಗಿ ರೂಪಾಂತರಗೊಳ್ಳುತ್ತಿರುವ ಡಿಜಿಟಲ್ ಜಗತ್ತು ಸೇರಿದಂತೆ ಸಮಕಾಲೀನ ವಿಷಯಗಳ ಸುತ್ತ ಮೂಡಿ ಬರುತ್ತಿರುವ ಲಂಬೋದರ 2.0 ಸಾಮಾಜಿಕ ಥ್ರಿಲ್ಲರ್ ಜಾನರ್ ಸಿನಿಮಾ. ಅನಿಲ್ ಶೆಟ್ಟಿ ಮಾತನಾಡಿ, ಈ ಚಿತ್ರ ನಾವು ಇಂದು ಬದುಕುತ್ತಿರುವ ಜಗತ್ತನ್ನು ಸ್ಪಷ್ಟವಾಗಿ ತೋರಿಸುತ್ತದೆ. ತಂತ್ರಜ್ಞಾನವು ನಮ್ಮ ಭಾವನೆಗಳು ಮತ್ತು ನಿರ್ಧಾರಗಳನ್ನು ಹೇಗೆ ರೂಪಿಸುತ್ತದೆ ಎಂಬುದನ್ನು ಚಿತ್ರದಲ್ಲಿ ನೋಡಬಹುದು. ಸಿಂಪಲ್…
ಚೈತನ್ಯ ಕಲಾವಿದೆರ್ ಬೈಲೂರು ಇವರ ‘ರಾಘು ಮಾಸ್ಟ್ರ್’ ನಾಟಕವನ್ನು ವಿಟ್ಲ ಜಾತ್ರೋತ್ಸವ ಪ್ರಯುಕ್ತ ಸಮರ್ಪಣ್ ಎಂಬ ತಂಡ ಅಯೋಜನೆ ಮಾಡಿತ್ತು. ರಂಗಭೂಮಿಯಲ್ಲಿ ಭಾರೀ ಸದ್ದು ಮಾಡುತ್ತಿರುವ ಈ ನಾಟಕ ನೋಡಲೇ ಬೇಕೆನ್ನುವ ಇರಾದೇ ನನ್ನದಾಗಿತ್ತು. ಸುಮಾರು ಎರಡು ಗಂಟೆ ಇಪ್ಪತ್ತು ನಿಮಿಷಗಳ ಈ ನಾಟಕ ಪ್ರತಿ ಪ್ರೇಕ್ಷಕರನ್ನು ಕುಳಿತಲ್ಲಿಂದ ಕದಲದಂತೆ ಮಾಡಿದ್ದು ನಿಜ. ಪ್ರಸ್ತುತ ಸಮಾಜದಲ್ಲಿ ತ್ಯಾಗ, ನೋವು, ಕಷ್ಟ, ತ್ಯಾಗ ಎಲ್ಲವೂ ಹೆಣ್ಣಿಗೆ ಮಾತ್ರ ಎಂಬ ದೊಡ್ಡ ಹಣೆಪಟ್ಟಿ ಇರುವ ಈ ಕಾಲದಲ್ಲಿ ಗಂಡಿಗೂ ಒಂದು ಬದುಕಿದೆ ಅವನಿಗೂ ನೋವು ನಲಿವಿದೆ ತ್ಯಾಗದ ರೂಪವಿದೆ ಎಂಬುದನ್ನು ಅರ್ಥಪೂರ್ಣವಾಗಿ ತಿಳಿಸಿದ್ದಾರೆ. ಗಂಡು ಮಗನಾಗಿ ಜನಿಸಿ, ಕುಟುಂಬದ ಜೊತೆಗಿನ ಸಂಬಂಧ ಜವಾಬ್ದಾರಿಯ ನಂತರ ಮದುವೆಯ ಅನುಬಂಧ ಪ್ರತಿ ಹಂತ ಉದ್ಯೋಗದ ಜೊತೆ ಅವನ ಪ್ರತಿ ಹಂತದಲ್ಲಿಯೂ ಅವನ ಕಷ್ಟ ಅವನಿಗೆ ಮಾತ್ರ ತಿಳಿದಿರುತ್ತದೆ ಎಂಬುದನ್ನು ಜನರಿಗೆ ತಿಳಿಸಿದ ರೀತಿ ಅರ್ಥಪೂರ್ಣವಾಗಿದೆ. ಆರಂಭದಿಂದ ಅಂತ್ಯದ ತನಕ ಇಲ್ಲಿ ಯಾರೂ ಕೂಡ ಜಾನರ್ ನಟರಿಲ್ಲ. ಬದಲಾಗಿ…
ದಿ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಜನವರಿ ಆವೃತ್ತಿಯಲ್ಲಿ ನಡೆದ ಕಂಪೆನಿ ಸೆಕ್ರಟರೀಸ್ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪ್ರೀತಂ ಬಸವರಾಜ್ ಪಟ್ಟಣ ಶೆಟ್ಟಿ (121), ದೀಕ್ಷಿತ್ ಕುಮಾರ್ (120), ಸುಜೀತ್ ರಾಘವೇಂದ್ರ ಎ (120), ಯಶವಂತ ರೆಡ್ಡಿ ಎಸ್ (111), ರುಜುಲಾ ಕೆ (110), ದಿಯಾ ಎಸ್ ಶೆಟ್ಟಿ (107), ನಂದನ್ ಗೌಡ ಆರ್ (100), ನಂದಿಕಾ ಶ್ರೀ ಡಿ. ವಿ (100), ಮನೀಶ್ ಗೌಡ ಆರ್ (100), ಶರಣ್ಯ ಯು ಶೆಟ್ಟಿ (100), ಬಸವಪ್ರಸಾದ್ ಎಸ್ ಮಳಗಲಿ (100), ಸುಪ್ರಿಯಾ ಎಂ (100), ಶ್ರೇಯಾ ದಿನೇಶ್ ಕಟಾರಿಯಾ (100) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು. ವಿದ್ಯಾರ್ಥಿಗಳ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರವರು ಅಭಿನಂದಿಸಿದ್ದಾರೆ.
ಕುಂದಾಪುರ: ಸಿಎ, ಸಿಎಸ್ಇಇಟಿ ವೃತ್ತಿ ಪರ ಕೋರ್ಸ್ಗಳಿಗೆ 14 ವರ್ಷಗಳಿಂದ ತರಬೇತಿ ನೀಡುತ್ತಿರುವ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು iಟಿsಣiಣuಣe oಜಿ ಛಿomಠಿಚಿಟಿಥಿ seಛಿಡಿeಣಚಿಡಿies oಜಿ Iಟಿಜiಚಿ ಸಂಸ್ಥೆ ನಡೆಸಿದ ಸಿಎಸ್ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 24 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಜಯಸೂರ್ಯ (176), ಆಕಾಶ್ (173, ಅಂಶಿಕ್ (170), ನೇಹಾ (167), ಶೆಟ್ಟಿ ಶ್ರೇಯಸ್ (166), ಸ್ಪೂರ್ತಿ ಶೆಟ್ಟಿಗಾರ್ (164), ಆರ್ಯ (163), ಸುಮೀತ್ ಮರಾಠಿ (163), ನೀಶಾಲ್ (162), ಸಮೃದ್ದ್ ಶೆಟ್ಟಿ (161), ರಾಹುಲ್ ಪೂಜಾರಿ (160), ಶ್ರೇಯಸ್ ಟಿ (159), ರಶ್ವೀತ್ (156) ಪ್ರಥಮೇಶ್ ದೇವಾಡಿಗ (151), ನೀಶಾಂತ್ (151), ಆಯ್ಯಷ್ (146), ಚರಣ್ (140), ಸಂಚಿತ್ (136), ಯಶಸ್ವಿ ಪಿ ಶೆಟ್ಟಿ (128) ಪ್ರಾಪ್ತಿ ಶೆಟ್ಟಿ (126), ಶ್ರೀಶ್ ಕುಮಾರ್ ಶೆಟ್ಟಿ (122) ಅಂಕಗಳನ್ನು ಪಡೆದು ಉತ್ತೀರ್ಣರಾಗುವ ಮೂಲಕ ಮುಂದಿನ…
ತುಳುನಾಡಿನ ತಿಂಡಿ ತಿನಿಸುಗಳಿಗೆ ಫಿದಾ ಆಗದವರೇ ಇಲ್ಲ. ಮಂಗಳೂರು, ಉಡುಪಿಯ ಪಾಕ ಚಂದ್ರಲೋಕದಲ್ಲೂ ಫೇಮಸ್ಸು ಅನ್ನುವಷ್ಟರ ಮಟ್ಟಿಗೆ ಇಲ್ಲಿಯ ತಿಂಡಿ ತಿನಿಸುಗಳ ವೈಶಿಷ್ಟತೆ ಪಡೆದುಕೊಂಡಿದೆ. ವೈವಿದ್ಯಮಯ ತಿಂಡಿ ತಿನಿಸುಗಳು ಕರಾವಳಿ ಮಾತ್ರವಲ್ಲದೇ ರಾಜ್ಯ, ದೇಶ, ವಿದೇಶದಲ್ಲೂ ಫೇಮಸ್. ಕರಾವಳಿಯ ತಿಂಡಿ ತಿನಿಸುಗಳಲ್ಲಿ ವೈವಿಧ್ಯತೆಯಲ್ಲಿ ಸಸ್ಯಹಾರದ್ದೇ ಪಾರಮ್ಯ. ಇಂತಹ ನೂರಾರು ಬಗೆಯ ತಿಂಡಿ ತಿನಿಸುಗಳನ್ನು ಒಂದೇ ವೇದಿಕೆಯಲ್ಲಿ ಪ್ರದರ್ಶನ ನೀಡುವ ಮೂಲಕ ವಿಕ ಕರುನಾಡ ಸ್ವಾದ ಮಾದರಿಯಾಗಿದೆ. ಮಂಗಳೂರಿನ ಸುರತ್ಕಲ್ ಬಂಟರ ಭವನದಲ್ಲಿ ನಡೆದ ವಿಕ ಕರುನಾಡ ಸ್ವಾದ ಸ್ಪರ್ಧೆಯ ವೈವಿಧ್ಯತೆ ಇದು. ವಿಜಯ ಕರ್ನಾಟಕ ಸಾರಥ್ಯದಲ್ಲಿ ಬಂಟರ ಸಂಘ ಸುರತ್ಕಲ್ ಸಹಯೋಗದೊಂದಿಗೆ ಫ್ರೀಡಂ ಹೆಲ್ದಿ ಕುಕಿಂಗ್ ಆಯಿಲ್ ಮತ್ತು ಎಕ್ಸೋ ಪ್ರಾಯೋಜಕತ್ವದಲ್ಲಿ ವಿಕ ಕರುನಾಡ ಸ್ವಾದ ಅಡುಗೆ ಸವಿರುಚಿ ಸ್ಪರ್ಧೆ ಆಯೋಜಿಸಲಾಗಿತ್ತು. ನೂರಾರು ಬಗೆಯ ತಿಂಡಿ ತಿನಿಸುಗಳು ಒಂದೇ ತಿಂಡಿಯಲ್ಲಿ ಹತ್ತಾರು ಬಗೆ, ಹತ್ತಾರು ಬಗೆಯ ಚಟ್ನಿಗಳಿದ್ದವು. ಎಲ್ಲವನ್ನೂ ಒಂದಕ್ಕಿಂತ ಒಂದು ವಿಭಿನ್ನ ವಿನ್ಯಾಸ ಅಲಂಕಾರದೊಂದಿಗೆ ಜೋಡಿಸಿಡಲಾಗಿತ್ತು. ತುಳುನಾಡಿನ ತಿಂಡಿಯ ಜೊತೆ…
ಬಂಟ ಸಮುದಾಯವು ಎಲ್ಲರೊಂದಿಗೆ ಬೆರೆತು ಬದುಕುವ ಸಮುದಾಯವಾಗಿದ್ದು, ಎಲ್ಲಾ ಜಾತಿ ಧರ್ಮಗಳನ್ನು ಗೌರವಿಸುತ್ತದೆ. ಬಂಟ ಸಂಘಟನೆಯು ಕೇವಲ ಜಾತಿಗೆ ಸೀಮಿತವಾಗದೆ ಸಮಾಜಕ್ಕೆ ಪೂರಕವಾಗಿ ಕೆಲಸ ಮಾಡುತ್ತದೆ ಎಂದು ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದರು. ಬಂಟರ ಸಂಘ ಹಿರೇಬಂಡಾಡಿ ವತಿಯಿಂದ ಮಂಗಳೂರಿನ ಎಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ಸಹಸಹಯೋಗದಲ್ಲಿ ಹಿರೇಬಂಡಾಡಿಯ ಅಂಬೇಡ್ಕರ್ ಭವನದಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘಟನೆಗಳು ಸಮಾಜದ ಸ್ವಾಸ್ಥ್ಯ ಕಾಪಾಡಬೇಕು. ಈ ನಿಟ್ಟಿನಲ್ಲಿ ಹಿರೇಬಂಡಾಡಿಯಂತಹ ಗ್ರಾಮಾಂತರ ಪ್ರದೇಶದಲ್ಲಿ ಸಮಾಜದ ಎಲ್ಲರಿಗಾಗಿ ಇಂತಹ ಕಾರ್ಯಕ್ರಮವನ್ನು ಆಯೋಜನೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ಇಂತಹ ಕಾರ್ಯಕ್ರಮಗಳು ಇನ್ನಷ್ಟು ಮೂಡಿ ಬರಬೇಕು. ಸಮಾಜದ ಎಲ್ಲರಿಗೂ ಅವುಗಳಿಂದ ಪ್ರಯೋಜನ ಸಿಗಬೇಕು ಎಂದರು. ದಂತ ವೈದ್ಯದ ರಾಜಾರಾಮ್ ಕೆ ಬಿ ಮಾತನಾಡಿ, ಆರೋಗ್ಯವಿದ್ದರೆ ಎಲ್ಲಾ ಇದೆ. ಆದ್ದರಿಂದ ಮೊದಲನೆಯದಾಗಿ ನಾವು ಆರೋಗ್ಯದ ಬಗ್ಗೆ ಗಮನ ನೀಡಬೇಕು.…
ಖ್ಯಾತ ಚುಟುಕು ಸಾಹಿತಿ, ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರ ನೇನೋ ಕತೆಗಳ ಸಂಕಲನ ‘ಕೋಲ್ಮಿಂಚು’ ಜನವರಿ 25 ರಂದು ಭಾನುವಾರ ಕದ್ರಿ ದೇವಾಲಯದ ಅಭಿಷೇಕ ಕಲಾಮಂದಿರದಲ್ಲಿ ನಡೆಯುವ ಸಾಹಿತ್ಯ ವೈಭವ – 2026 ಕಾರ್ಯಕ್ರಮದಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ದಿವ್ಯಹಸ್ತದಿಂದ ಬಿಡುಗಡೆಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಚು.ಸಾ.ಪ ಗೌರವಾಧ್ಯಕ್ಷರಾದ ಇರಾ ನೇಮು ಪೂಜಾರಿಯವರ ಚುಟುಕು ಕಾಮಿನಿ ಕಾವ್ಯಸಂಕಲನವನ್ನು ಡಾ| ಎ ಜನಾರ್ಧನ ಶೆಟ್ಟಿಯವರು ಬಿಡುಗಡೆಗೊಳಿಸಲಿರುವರು. ಕಾರ್ಯಕ್ರಮವನ್ನು ಎಸ್ ಗಣೇಶ್ ರಾವ್ ಉದ್ಘಾಟಿಸಲಿರುವರು. ಕಾರ್ಯಕ್ರಮದಲ್ಲಿ ಸದಾಶಿವ ಉಳ್ಳಾಲ್ ಮತ್ತು ಗೋಪಾಲಕೃಷ್ಣ ಶೆಟ್ಟಿ, ಡಾ| ಎಂ ಜಗದೀಶ್ ಶೆಟ್ಟಿ, ಶ್ರೀಮತಿ ಪುಷ್ಪಲತಾ ಮತ್ತು ನಾರಾಯಣಯ್ಯ ಮೂಳೂರು ಅತಿಥಿಗಳಾಗಿ ಆಗಮಿಸಲಿದ್ದು, ಚು.ಸಾ.ಪ ಸಂಚಾಲಕರಾದ ಡಾ| ಎಂ.ಜಿ.ಆರ್ ಅರಸ್ ಅವರು ಅಧ್ಯಕ್ಷತೆ ವಹಿಸಲಿರುವರು.
ಸಮರ್ಪಣಾ ಮನೋಭಾವದ ಶಿಕ್ಷಕರು ಹಾಗೂ ಊರ ಶಾಲಾಭಿಮಾನಿ ದಾನಿಗಳ ಸಹಕಾರದಿಂದ ಒಂದು ಶಾಲೆಯು ಉತ್ತಮ ಶಾಲೆಯಾಗಿ ಮೂಡಿಬರಲು ಸಾಧ್ಯ ಎನ್ನುವುದಕ್ಕೆ ನಮ್ಮೂರ ಶಾಲೆಯೇ ಸಾಕ್ಷಿ. ಈ ಶಾಲೆ ಬಗ್ಗೆ ತುಂಬಾ ಹೆಮ್ಮೆಯಾಗುತ್ತದೆ ಎಂದು ಕಲ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಮಾರಿ ಪೂಜಾ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾ ಇದರ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶಂಕರ್ ಆಚಾರ್ಯ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಸಂಸ್ಕಾರಯುತ ಜೀವನ ನಡೆಸಿ, ದೇಶದ ಉತ್ತಮ ನಾಗರೀಕರಾಗಿ ತಮ್ಮ ಹೆಸರು ಉಳಿಯುವಂತೆ ಬಾಳಿ ಎಂದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪ್ರೇಮಾ, ಜಗದೀಶ್ ಆಚಾರ್ಯ, ಸಂಜೀವ ಶೆಟ್ಟಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಭಾಶ್ಚಂದ್ರ ಶೆಟ್ಟಿಗಾರ್, ಶಾಲಾ ಹಳೆ ವಿದ್ಯಾರ್ಥಿ…
ಕಾರ್ಕಳ : ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ – ಜನವರಿ 2026) ನಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 48 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಸಂಸ್ಥೆಯ ಗ್ಯಾನ್ ಹೆಗ್ಡೆ ಅವರು 200ರಲ್ಲಿ 145 ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಯಾಗಿದ್ದು, ಜೊತೆಗೆ ಕಾರ್ತಿಕ್ ಶೆಟ್ಟಿ (142 ಅಂಕ), ಶ್ರೀಕರ ಎಸ್ ಉಪಾಧ್ಯಾಯ (141 ಅಂಕ), ವಿಭೂಷಿತ್ ಶೆಟ್ಟಿ (134 ಅಂಕ), ಪ್ರತುಲ್ ಡಿ’ಸೋಜ (132 ಅಂಕ) ಹಾಗೂ ರಕ್ಷಿತ್ ಶೆಟ್ಟಿ (132 ಅಂಕ) ಪಡೆದಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹಾಗೂ ಜ್ಞಾನಸುಧಾ ಪರಿವಾರವು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ಗಮ್ಮತ್ ಕಲಾವಿದರ್ ಯುಎಇ 2011ರಲ್ಲಿ ಸ್ಥಾಪನೆಗೊಂಡು ತುಳು ರಂಗಭೂಮಿಯನ್ನು ಸಕ್ರಿಯವಾಗಿ ಮರಳುನಾಡಿನಲ್ಲಿ ಬೆಳೆಸಿಕೊಂಡು ಬರುತ್ತಿದ್ದು, ಗುಣಮಟ್ಟದ ನಾಟಕ ಪ್ರದರ್ಶನಗಳು, ಪರಿಪಕ್ವವಾದ ಅಭಿನಯಗಳ ಮೂಲಕ ಕೊಲ್ಲಿ ರಾಷ್ಟ್ರದಲ್ಲಿ ಮಾತ್ರವಲ್ಲದೆ ತಾಯ್ನಾಡಿನ ತುಳು ರಂಗಭೂಮಿಯಲ್ಲಿ ತನ್ನದೇ ಆದ ಗೌರವಾನ್ವಿತ ಸ್ಥಾನವನ್ನು ಗಳಿಸಿದೆ. ರಂಗಭೂಮಿಯ ಚಟುವಟಿಕೆಗಳಷ್ಟೇ ಅಲ್ಲದೆ, ಗಮ್ಮತ್ ಕಲಾವಿದರ್ ಯುಎಇ ಕಳೆದ ಒಂದು ದಶಕಕ್ಕಿಂತ ಹೆಚ್ಚು ಕಾಲ ಸ್ವದೇಶದಲ್ಲಿನ ವಿವಿಧ ಸಮಾಜಮುಖಿ ಕಾರ್ಯಗಳಿಗೆ ಸಹಾಯ ಹಸ್ತ ನೀಡುತ್ತಾ ಸಾಂಸ್ಕೃತಿಕ ಪ್ರಚಾರದ ಜೊತೆಗೆ ಅರ್ಥಪೂರ್ಣ ಸಾಮಾಜಿಕ ಸೇವೆಯನ್ನು ಸಮತೋಲನದಿಂದ ಮುಂದುವರೆಸುತ್ತಿರುವುದು ಗಮನಾರ್ಹ ಅಂಶ. ಗಮ್ಮತ್ ಕಲಾವಿದರ್ ಯುಎಇ ತಮ್ಮ ಮುಂದಿನ ಕಾರ್ಯಕ್ರಮಗಳು ಮತ್ತು ಯೋಜನೆಗಳಿಗೆ ಬಲ ತುಂಬುವ ಉದ್ದೇಶದಿಂದ 2026–27 ಅವಧಿಯ ನೂತನ ಕಾರ್ಯಕಾರಿ ಸಮಿತಿಯನ್ನು 18 ಜನವರಿ 2026ರಂದು ದುಬೈಯ ಬರ್ ದುಬೈಯಲ್ಲಿರುವ ಗ್ರ್ಯಾಂಡ್ ಎಕ್ಸೆಲ್ಸಿಯರ್ ಹೋಟೆಲ್ನ ಘಜಲ್ ರೆಸ್ಟೋರೆಂಟ್ನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ರಚಿಸಲಾಯಿತು. ವಾರ್ಷಿಕ ಸಭೆಯು ಸಂಸ್ಥೆಯ ಗೌರವ ಪೋಷಕರು ಹಾಗೂ ಕನ್ನಡ ಚಿತ್ರ…















